ಮಂಗಳೂರು: ಮೂಡುಬಿದಿರೆ ಸರ್ಕಲ್ ಇನ್ಸ್ಪೆಕ್ಟರ್ ಬಿ.ಜಿ. ಸಂದೇಶ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಶಿಕ್ಷಕಿಯೊಬ್ಬರು ಸಂದೇಶ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ. ಮಹಿಳೆಯರಿಗೆ ಲೈಂಗಿಕ ಕಿರುಕುಳ ಆರೋಪ ಸುಳ್ಳು ಎಂದು ಪೊಲೀಸ್ ವರದಿ ಹೇಳಿದ್ದ ನಡುವೆಯೇ ದಕ್ಷಿಣ ಕನ್ನಡ ಜಿಲ್ಲೆಯ ವೇಣೂರು ಠಾಣೆಯಲ್ಲಿ ಸಂದೇಶ್ ವಿರುದ್ಧ ಸಂತ್ರಸ್ತೆ ಶಿಕ್ಷಕಿ ದೂರು ನೀಡಿದ್ದಾರೆ. ಆ ದೂರಿನ ಮೇರೆಗೆ ಅತ್ಯಾಚಾರ ಆರೋಪದಡಿ ಎಫ್ಐಆರ್ ದಾಖಲಾಗಿದೆ. 2018 ರಿಂದ 2023ರವರೆಗೆ ಶಿಕ್ಷಕಿ ಮನೆಗೆ ಹೋಗಿ ಬೆದರಿಸಿ ಅತ್ಯಾಚಾರ ಮಾಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.2020ರಲ್ಲಿ ಸಂದೇಶ್ ಬೆಳ್ತಂಗಡಿ ಸರ್ಕಲ್ ವ್ಯಾಪ್ತಿಯಲ್ಲಿರುವ ವೇಣೂರು ಪೊಲೀಸ್ ಠಾಣೆ ಸರ್ಕಲ್ ಇನ್ಸ್ಪೆಕ್ಟರ್ ಆಗಿದ್ದರು. ಹೀಗಾಗಿ, ವೇಣೂರು ಠಾಣಾ ವ್ಯಾಪ್ತಿಯಲ್ಲೇ ಅತ್ಯಾಚಾರ ಆರೋಪದಡಿ ಸೆಕ್ಷನ್ 376(2)(a)(1), 376(2)(n), 384, 506ರಡಿ ಕೇಸ್ ದಾಖಲಾಗಿದೆ.
ಮುಂಬೈ: ರಣವೀರ್ ಸಿಂಗ್ ಅಭಿನಯದ ಧುರಂಧರ್ ರಿವೆಂಜ್ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಭಾರೀ ಸದ್ದು ಮಾಡುತ್ತಿದೆ. ಮೊದಲ ಮೂರು ದಿನಗಳ ಕಲೆಕ್ಷನ್ನಲ್ಲಿ ಹೊಸ ದಾಖಲೆ ಬರೆದಿದೆ. ರಣವೀರ್ ಸಿಂಗ್, ಸಂಜಯ್ ದತ್, ಅರ್ಜುನ್ ರಾಮ್ಪಾಲ್, ರಾಕೇಶ್ ಬೇಡಿ, ಸಾರಾ ಅರ್ಜುನ್ ಮುಂತಾದವರು ‘ಧುರಂಧರ್ 2’ ಸಿನಿಮಾದಲ್ಲಿ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ನಿರ್ದೇಶಕ ಆದಿತ್ಯ ಧಾರ್ ಅವರು ಈ ಸಿನಿಮಾದಿಂದ ಖ್ಯಾತಿ ಹೆಚ್ಚಿಸಿಕೊಂಡಿದ್ದಾರೆ. ಮಾರ್ಚ್ 19ರಂದು ಎಲ್ಲ ಕಡೆಗಳಲ್ಲಿ ಧುರಂಧರ್ 2 ಸಿನಿಮಾ ಅದ್ದೂರಿಯಾಗಿ ಬಿಡುಗಡೆ ಆಯಿತು. ಈ ಸಿನಿಮಾ ಆರಂಭದಿಂದಲೇ ಎಲ್ಲೆಡೆ ಚರ್ಚೆಗೆ ಗ್ರಾಸವಾಗಿತ್ತು. ರಣವೀರ್ ಸಿಂಗ್ ಅಭಿನಯದ ಈ ಸ್ಪೈ ಥ್ರಿಲ್ಲರ್ ಸಿನಿಮಾ ಪ್ರೇಕ್ಷಕರ ನಿರೀಕ್ಷೆಗಳನ್ನು ಪೂರೈಸಿದೆ.
ವಾಷಿಂಗ್ಟನ್: ಹಾರ್ಮುಜ್ ಜಲಸಂಧಿಯ ಮೇಲೆ ಹಿಡಿತ ಸಾಧಿಸಿರುವ ಇರಾನ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಖಡಕ್ ವಾರ್ನಿಂಗ್ ನೀಡಿದ್ದಾರೆ. ಈ ಜಲಸಂಧಿಯನ್ನು 48 ಗಂಟೆಯೊಳಗೆ ಸಂಪೂರ್ಣ ಓಪನ್ ಮಾಡುವಂತೆ ದೊಡ್ಡಣ್ಣ ಡೆಡ್ಲೈನ್ ಫಿಕ್ಸ್ ಮಾಡಿದ್ದಾರೆ.ಹಾರ್ಮುಜ್ ಜಲಸಂಧಿಯು ಪರ್ಷಿಯನ್ ಕೊಲ್ಲಿಯನ್ನು ಓಮನ್ ಕೊಲ್ಲಿ ಮತ್ತು ಅರೇಬಿಯನ್ ಸಮುದ್ರದೊಂದಿಗೆ ಸಂಪರ್ಕಿಸುವ ಅತ್ಯಂತ ಪ್ರಮುಖವಾದ ಜಾಗತಿಕ ತೈಲ ಸಾಗಣೆ ಮಾರ್ಗವಾಗಿದೆ. ಇರಾನ್ ಮತ್ತು ಒಮಾನ್/ಯುಎಇ ನಡುವೆ ಇರುವ ಈ ಕಿರಿದಾದ ಜಲಮಾರ್ಗವು ವಿಶ್ವದ ತೈಲ ಮತ್ತು ಅನಿಲದ ಸಾಗಣೆಗೆ ದಾರಿಯಗಿದೆ. ಇದು ಜಾಗತಿಕ ಇಂಧನ ಭದ್ರತೆಗೆ ನಿರ್ಣಾಯಕವಾಗಿದೆ.ಟ್ರಂಪ್ ಅವರ ಎಚ್ಚರಿಕೆಗೆ ತೀಷ್ಣವಾಗಿ ಪ್ರತಿಕ್ರಿಯಿಸಿರುವ ಇರಾನ್ ಸೇನೆಯು, ಈ ಪ್ರದೇಶದಲ್ಲಿ ಅಮೆರಿಕಕ್ಕೆ ಸೇರಿದ ಎಲ್ಲಾ ಇಂಧನ, ತಂತ್ರಜ್ಞಾನ ಮತ್ತು ಉಪ್ಪುನೀರಿನ ನಿರ್ಮೂಲನ ಮೂಲಸೌಕರ್ಯಗಳನ್ನು ಟಾರ್ಗೆಟ್ ಮಾಡಿ ಹೊಡೆಯುವುದಾಗಿ ಬೆದರಿಕೆ ಹಾಕಿದೆ.
ಬೆಂಗಳೂರು: ಇದೇ 28ರಂದು ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭವಾಗಲಿದೆ. ಮೊದಲ ಪಂದ್ಯ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ.ಈ ಪ್ರಯುಕ್ತ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಕೇಂದ್ರ ವಿಭಾಗದ ಉಪ ಪೊಲೀಸ್ ಆಯುಕ್ತರು ಶನಿವಾರ ತೆರಳಿ, ಬಂದೋಬಸ್ತ್ ವ್ಯವಸ್ಥೆಗಳ ಕುರಿತು ಪರಿಶೀಲಿಸಿದರು. ಸ್ಟ್ಯಾಂಡ್ಗಳು, ಹೋಲ್ಡಿಂಗ್ ಏರಿಯಾ ಮತ್ತಿತರ ಇತರ ಸ್ಥಳಗಳಲ್ಲಿ ಭದ್ರತೆ ಕುರಿತು ಸಮಾಲೋಚನೆ ನಡೆಸಿದರು.ಈ ಮಧ್ಯೆ ಟಿಕೆಟ್ ಖರೀದಿ ಸಂದರ್ಭದಲ್ಲಿ ವಂಚನೆಗಳು ನಡೆಯುವ ಸಾಧ್ಯತೆಯಿದ್ದು, ನಕಲಿ ಲಿಂಕ್ ಗಳು ಅಥವಾ ಕೊನೆ ಕ್ಷಣದ ವ್ಯವಹಾರದ ವಂಚನೆಗಳ ಜಾಲಕ್ಕೆ ಬೀಳದಿರಿ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಚೈತ್ರ ನವರಾತ್ರಿಯ ಪ್ರಯುಕ್ತ ಕನ್ನಡದ ಭಕ್ತಿಗೀತೆಯೊಂದನ್ನು ತಮ್ಮ ಸಾಮಾಜಿಕ ತಾಣ ಎಕ್ಸ್ನಲ್ಲಿ ಹಂಚಿಕೊಂಡಿದ್ದಾರೆ. ಡಾ. ರಾಜಕುಮಾರ್ ಅಭಿನಯದ ಕನ್ನಡದ ಪ್ರಸಿದ್ಧ ‘ಶ್ರೀ ಕೃಷ್ಣದೇವರಾಯ’ ಸಿನಿಮಾದಲ್ಲಿನ ‘ಶ್ರೀ ಚಾಮುಂಡೇಶ್ವರಿ, ಅಮ್ಮ ಶ್ರೀ ಚಾಮುಂಡೇಶ್ವರಿ’ ಎಂಬ ವಿಡಿಯೊ ಭಕ್ತಿಗೀತೆಯ ಯೂಟ್ಯೂಬ್ ಲಿಂಕ್ನ್ನು ಪ್ರಧಾನಿ ಅವರು ಹಂಚಿಕೊಂಡಿದ್ದು ಗಮನ ಸೆಳೆದಿದೆ.ಇನ್ನೂ ಈ ಹಾಡನ್ನು ಹಂಚಿಕೊಂಡು ವಿಶ್ವಮಾತೆಯ ಮೇಲಿನ ಅಚಲ ನಂಬಿಕೆಯು ಆಕೆಯ ಭಕ್ತರಲ್ಲಿ ಹೊಸ ಪ್ರಜ್ಞೆ ಮತ್ತು ಚೈತನ್ಯವನ್ನು ತುಂಬುತ್ತದೆ ಎಂದು ಮೋದಿ ಅವರು ಚೈತ್ರ ನವರಾತ್ರಿಯ ಶುಭಾಶಯಗಳನ್ನು ಜನತೆಗೆ ತಿಳಿಸಿದ್ದಾರೆ.
IPL 2026 ರ 19 ನೇ ಆವೃತ್ತಿಯು ಮಾರ್ಚ್ 28 ರಂದು ಪ್ರಾರಂಭವಾಗಲಿದೆ, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) M ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಬೀಗುತ್ತಿದೆ. ಸ್ಟಾರ್ ಇಂಡಿಯಾ ಬ್ಯಾಟರ್ ವಿರಾಟ್ ಕೊಹ್ಲಿ ಅವರು ಸೀಸನ್ ಓಪನರ್ಗೆ ಮುಂಚಿತವಾಗಿ ತಮ್ಮ ಸಿದ್ಧತೆಗಳನ್ನು ಪ್ರಾರಂಭಿಸಿದ್ದಾರೆ, ತರಬೇತಿಯಲ್ಲಿ ಅವರ ಸ್ಫೋಟಕ ಹಿಟ್ಗಳ ತುಣುಕುಗಳು ಅಭಿಮಾನಿಗಳಲ್ಲಿ ಸಂಚಲನವನ್ನು ಸೃಷ್ಟಿಸಿವೆ.600 ಪ್ಲಸ್ ರನ್ಗಳೊಂದಿಗೆ ಸತತ ಮೂರು ಸೀಸನ್ಗಳಿಂದ ಹೊರಬರುತ್ತಿರುವ ಕೊಹ್ಲಿ, ಹೆಚ್ಚಿನ ದಾಖಲೆಗಳು ಮತ್ತು
ಬೆಳಗಾವಿ: ದಾರಿ ವಿಚಾರವಾಗಿ ನಡೆದ ಸಣ್ಣ ಗಲಾಟೆಯಲ್ಲಿ ಸಂಬಂಧಿಯನ್ನು ಕೊಂದ ಆರೋಪದ ಮೇಲೆ 36 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.ಮೃತರನ್ನು ದೊಡವಾಡದ ಕೊಪ್ಪ ಅಗಸಿ ನಿವಾಸಿ ಮಹೇಶ ಬಸಯ್ಯ ಉಪ್ಪಿನಮಠ ಎಂದು ಗುರುತಿಸಲಾಗಿದೆ. ಪ್ರಕರಣ ಸಂಬಂಧ ಆರೋಪಿ ರುದ್ರಯ್ಯ ಬಸಯ್ಯ ಉಪ್ಪಿನಮಠ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ.
ಬೆಂಗಳೂರು: ಆರ್ಸಿಬಿ ಕ್ಯಾಪ್ಟನ್ ರಜತ್ ಪಾಟಿದಾರ್ ಅವರು ಗಂಡು ಮಗುವಿನ ತಂದೆಯಾಗಿದ್ದಾರೆ. ಪಾಟಿದಾರ್ ಕುಟುಂಬಕ್ಕೆ ಹೊಸ ಸದಸ್ಯರ ಆಗಮನವನ್ನು ಸಂಭ್ರಮಿಸುತ್ತಿರುವ ಅಭಿಮಾನಿಗಳು ಮತ್ತು ಕ್ರಿಕೆಟ್ ಬಂಧುಗಳಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.ಪಾಟಿದಾರ್ ತನ್ನ ವೃತ್ತಿಪರ ವೃತ್ತಿಜೀವನದಲ್ಲಿ ಗಮನಾರ್ಹ ಹಂತವನ್ನು ಅನುಭವಿಸುತ್ತಿರುವ ಸಮಯದಲ್ಲಿ ಈ ಬೆಳವಣಿಗೆಯಾಗಿದೆ.
ನವದೆಹಲಿ: ನಿರ್ದೇಶಕ ಆದಿತ್ಯ ಧರ್ ಅವರ ಧುರಂಧರ ದಿ ರಿವೆಂಜ್ ಸಿನಿಮಾಗೆ ದಕ್ಷಿಣ ಭಾರತದ ಪ್ರಮುಖ ತಾರೆಗಳು ಮೆಚ್ಚುಗೆ ವ್ಯಕ್ತ ಪಡಿಸಿದ್ದಕ್ಕೆ ಬಹುಭಾಷಾ ಹಿರಿಯ ನಟ ಪ್ರಕಾಶ್ ರಾಜ್ ಅವರು ಪ್ರಶ್ನೆ ಮಾಡಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರಕಾಶ್ ರಾಜ್ ಬರೆದುಕೊಂಡು ಪ್ರಶ್ನೆ ಮಾಡಿದ್ದಾರೆ. ನಟರಾದ ಅಲ್ಲು ಅರ್ಜುನ್, ವಿಜಯ್ ದೇವರಕೊಂಡ, ಜೂನಿಯರ್ ಎನ್ಟಿಆರ್ ಮತ್ತು ಮಹೇಶ್ ಬಾಬು ಎಲ್ಲರೂ ಚಲನಚಿತ್ರವನ್ನು ಹೊಗಳಿದ್ದಾರೆ, ಯಾವುದೇ ಬಾಲಿವುಡ್ ತಾರೆಯರು ಅದೇ ರೀತಿ ಮಾಡಿದ್ದಾರೆಯೇ ಎಂದು ಪ್ರಶ್ನೆ ಮಾಡಿದರು.
ಕೇರಳದ ಕೊಲ್ಲಂನಲ್ಲಿ ಆಸ್ಪತ್ರೆಯೊಂದರಲ್ಲಿ ನಡೆದ ಡಾ.ವಂದನಾ ದಾಸ್ ಕೊಲೆ ಪ್ರಕರಣ ಸಂಬಂದ ಇದೀಗ ಆರೋಪಿ ಜಿ ಸಂದೀಪ್ಗೆ ಜೀವಾವಧಿ ಶಿಕ್ಷೆ ವಿಧಿಸಲಾಯಿತು. ಆರೋಪಿಗೆ ಮರಣದಂಡನೆ ವಿಧಿಸುವಂತೆ ಮೇಲ್ಮನವಿ ಸಲ್ಲಿಸುವುದಾಗಿ ಪ್ರಾಸಿಕ್ಯೂಷನ್ ಹೇಳಿದೆ. ಸಂತ್ರಸ್ತೆಯ ಕುಟುಂಬ ಕೂಡ "ಆರೋಪಿಗೆ ಘೋರ ಶಿಕ್ಷೆಗಾಗಿ ಒತ್ತಾಯಿಸಿದೆ. 2023ರ ಮೇ ತಿಂಗಳಲ್ಲಿ ಸಂದೀಪ್ನಿಂದ ತಾಲೂಕು ಆಸ್ಪತ್ರೆಯೊಂದರಲ್ಲಿ ವಂದನಾ ದಾಸ್ನನ್ನು ಬರ್ಬರವಾಗಿ ಹತ್ಯೆ ಮಾಡಿದ್ದರು.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರೊಂದಿಗೆ ಮಾತನಾಡಿದ್ದಾರೆ ಮತ್ತು ಈದ್ ಮತ್ತು ನೌರುಜ್ ಸಂದರ್ಭದಲ್ಲಿ ಶುಭಾಶಯಗಳನ್ನು ಕೋರಿದರು.ನಡೆಯುತ್ತಿರುವ ಸಂಘರ್ಷದ ನಡುವೆ ಪ್ರಾದೇಶಿಕ ಸ್ಥಿರತೆಯ ಮೇಲೆ ಪರಿಣಾಮ ಬೀರುವ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ."ಅಧ್ಯಕ್ಷ ಡಾ. ಮಸೂದ್ ಪೆಜೆಶ್ಕಿಯಾನ್ ಅವರೊಂದಿಗೆ ಮಾತನಾಡಿ ಈದ್ ಮತ್ತು ನೌರುಜ್ ಶುಭಾಶಯಗಳನ್ನು ತಿಳಿಸಿದರು. ಈ
ಮಥುರಾ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ಮಥುರಾದ ದಂಘಾಟಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು ಮತ್ತು ಪವಿತ್ರ ಗೋವರ್ಧನ ಪರಿಕ್ರಮವನ್ನು ಕೈಗೊಂಡರು. ಮುರ್ಮು ಅವರು ಮಾನಸಿ ಗಂಗಾ ಸರೋವರಕ್ಕೆ ಪೂಜೆ ಸಲ್ಲಿಸಿ, ಅಂತಾರಾಷ್ಟ್ರೀಯ ಅರಣ್ಯ ದಿನದ ಅಂಗವಾಗಿ ಸಸಿ ನೆಟ್ಟರು.ಶುಕ್ರವಾರದಂದು, ಅಧ್ಯಕ್ಷರಾದ ದ್ರೌಪದಿ ಮುರ್ಮು ಅವರು ಪೂಜ್ಯ ಸಂತ ಪ್ರೇಮಾನಂದ ಮಹಾರಾಜ್ ಅವರನ್ನು ಉತ್ತರ ಪ್ರದೇಶದ ವೃಂದಾವನದಲ್ಲಿರುವ ಅವರ ಶ್ರೀ ಹಿಟ್ ರಾಧಾ ಕೇಲಿ ಕುಂಜ್ ಆಶ್ರಮದಲ್ಲಿ ಭೇಟಿ ಮಾಡಿದರು.
ದಾವಣಗೆರೆ : ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯುತ್ತಿದ್ದ ವೇಳೆ ಹೆಜ್ಜೇನುಗಳು ದಾಳಿ ನಡೆಸಿದ ಪತಿಣಾಮ 60ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಆನಗೋಡು ಗ್ರಾಮದಲ್ಲಿ ಈ ಘಟನೆ ವರದಿಯಾಗಿದೆ. ಆಸೀಫ್ ಅಲಿ (28), ಶಫೀವುಲ್ಲಾ (50), ಗಂಗಜ್ಜಿ (65), ಸನಾವುಲ್ಲಾ ಸಾಬ್ (65), ಸಿರಾಜ್ (46), ಇಸಾದ್ (42), ಹನೀಫ್ ಅಲಿ (30), ಯೂಸೀಪ್ ಅಲಿ (30) ಸೇರಿದಂತೆ ಅನೇಕರು ಗಾಯಗೊಂಡಿದ್ದಾರೆ.
ನಟ ಅಲ್ಲು ಸಿರಿಶ್ ಅವರು ಈಚೆಗೆ ನಯನಿಕಾ ರೆಡ್ಡಿ ಅವರನ್ನು ಅದ್ದೂರಿ ಸಮಾರಂಭದಲ್ಲಿ ಮದುವೆಯಾದರು. ಮದುವೆಯಾದ ಎರಡನೇ ವಾರಗಳಲ್ಲಿ ಅಲ್ಲು ಸಿರಿಶ್ ಅವರ ಪತ್ನಿ ಟ್ರೋಲ್ಗೆ ಒಳಗಾಗಿದ್ದಾರೆ. ಲಕ್ಮೆ ಫ್ಯಾಶನ್ ವೀಕ್ 2026 ಮುಂಬೈನಲ್ಲಿ, ಡಿಸೈನರ್ ಅನಾಮಿಕಾ ಖನ್ನಾ ಅವರ ಪ್ರದರ್ಶನದಲ್ಲಿ ದಂಪತಿಗಳು ತಮ್ಮ ಮೊದಲ ಸಾರ್ವಜನಿಕವಾಗಿ ಕಾಣಿಸಿಕೊಂಡರು. ಮೊದಮೊದಲು ಎಲ್ಲವೂ ಸಾಮಾನ್ಯವೆನಿಸಿತು. ಅವರು ಮುಂದಿನ ಸಾಲಿನಲ್ಲಿ ಕುಳಿತು ಇತರ ಅತಿಥಿಗಳಂತೆ ರಾಂಪ್ ಅನ್ನು ವೀಕ್ಷಿಸಿದರು. ಆದರೆ ನಂತರ ಬಂದ ಒಂದು ಸಣ್ಣ ಕ್ಷಣ ಎಲ್ಲರ ಗಮನ ಸೆಳೆಯಿತು. ನಯನಿಕಾ ಅವರು ಕಾರ್ಯಕ್ರಮವನ್ನು ತುಂಬಾ ತೀವ್ರವಾಗಿ
ಕಳೆದ ಆಗಸ್ಟ್ನಲ್ಲಿ ಹೆಣ್ಣು ಮಗುವನ್ನು ಸ್ವಾಗತಿಸಿದ್ದ ಕನ್ನಡದ ನಟಿ ಭಾವನಾ ರಾಮಣ್ಣ ಅವರು ಇದೀಗ ಮುದ್ದಿನ ಮಗಳಿಗೆ ನಾಮಕರಣ ನೆರವೇರಿಸಿದ್ದಾರೆ. ಐವಿಎಫ್ ಮೂಲಕ ಕಳೆದ ಆಗಸ್ಟ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಮಗಳಿಗೆ ನಾಮಕರಣ ಮಾಡಿದ್ದು, ಅದರ ಕೆಲವೊಂದು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆಪ್ತರ ಸಮ್ಮುಖದಲ್ಲಿ ನಡೆದ ನಾಮಕರಣದಲ್ಲಿ ಮಗಳಿಗೆ ತಮ್ಮ ಅಜ್ಜಿಯ ಹೆಸರು ರುಕ್ಮಿಣಿ ಎಂದು ನಾಮಕರಣ ಮಾಡಿದ್ದಾರೆ. ಣ ಶಾಸ್ತ್ರ ನಡೆಯಿತು. ಮಗಳಿಗೆ ತಮ್ಮ ಅಜ್ಜಿಯ ಹೆಸರು ರುಕ್ಮಿಣಿ ಎಂದು ನಾಮಕರಣ ಮಾಡಿದ್ದಾರೆ.
ಟೆಹರಾನ್: ಪಶ್ಚಿಮ ಏಷ್ಯಾ ಮತ್ತು ಗಲ್ಫ್ ಪ್ರದೇಶದಲ್ಲಿ ಭದ್ರತಾ ಪರಿಸ್ಥಿತಿ ಉದ್ವಿಗ್ನ ಸ್ಥಿತಿಯಲ್ಲಿರುವಾಗಲೇ ಇರಾನ್ ವಿರುದ್ಧ ಯಾವುದೇ ಭೂ ದಾಳಿ ನಡೆಸಿದರೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ಗೆ ಅಚ್ಚರಿ ಕಾದಿದೆ ಎಂದು ತಸ್ನಿಮ್ ಸುದ್ದಿ ಸಂಸ್ಥೆ ಶನಿವಾರ ವರದಿ ಮಾಡಿದೆ. ಇರಾನ್ನಲ್ಲಿ ಸಂಭವನೀಯ ನೆಲದ ಕಾರ್ಯಾಚರಣೆಗಳ ಬಗ್ಗೆ ಯುಎಸ್ ಸುಳಿವು ನೀಡಿದೆ. ಇರಾನ್ನಲ್ಲಿ ಸಂಭವನೀಯ ಭೂ ಕಾರ್ಯಾಚರಣೆಗಳ ಬಗ್ಗೆ ಅಮೆರಿಕ ಸುಳಿವು ನೀಡಿರುವ ಇತ್ತೀಚಿನ ವರದಿಗಳಿಗೆ
ರೋಗಿಯನ್ನು ಹೊತ್ತುಕೊಂಡು ಆಸ್ಪತ್ರೆಗೆ ಸಾಗುತ್ತಿದ್ದ ಆಂಬ್ಯುಲೆನ್ಸ್ಗೆ ಬೈಕ್ನಲ್ಲಿದ್ದ ಯುವಕ ರೋಡ್ ಕ್ಲಿಯರ್ ಮಾಡಿ ದಾರಿಮಾಡಿಕೊಟ್ಟ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಟ್ರಾಫಿಕ್ನಲ್ಲಿದ್ದ ವ್ಯಕ್ತಿ ಆಂಬ್ಯುಲೆನ್ಸ್ ಬರುತ್ತಿರುವುದನ್ನು ಕಂಡು ರೋಡ್ ಕ್ಲಿಯರ್ ಮಾಡಿ ದಾರಿಮಾಡಿಕೊಟ್ಟಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಯುವಕನ ಮಾನವೀಯ ಗುಣಕ್ಕೆ ಭಾರೀ ಮೆಚ್ಚುಗೆಯಾಗಿದೆ. ಮಾರ್ಗದಲ್ಲಿ ಚಲಿಸುತ್ತಿದ್ದ ಕಾರುಗಳಿಗೆ ಬೈಕ್ ಸವಾರ ಬಂದು, ಹಿಂದೆಯಲ್ಲಿ ಆಂಬ್ಯುಲೆನ್ಸ್ ಬರುತ್ತಿದೆ ಎಂದು ಮಾಹಿತಿಯನ್ನು
ಮುಂಬೈ: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ತಮ್ಮ ಪತಿ ರಣವೀರ್ ಸಿಂಗ್ ನಾಯಕರಾಗಿರುವ ಧುರಂಧರ್ ಸಿನಿಮಾ ಬಗ್ಗೆ ಯಾಕೆ ಒಂದೇ ಒಂದು ಮಾತನಾಡ್ತಿಲ್ಲ ಎಂದು ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ. ರಣವೀರ್ ಸಿಂಗ್ ನಾಯಕರಾಗಿರುವ ಧುರಂಧರ್ ಪಾರ್ಟ್ 2 ಸಿನಿಮಾ ಬಿಡುಗಡೆಯಾಗಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಅನೇಕ ಸೆಲೆಬ್ರಿಟಿಗಳಿಗೂ ಸಿನಿಮಾ ಬಗ್ಗೆ ಹೊಗಳಿ ಟ್ವೀಟ್ ಮಾಡುತ್ತಿದ್ದಾರೆ. ಇನ್ನೊಂದೆಡೆ ಎಡಪಂಥೀಯರು ಸಿನಿಮಾ ಬಗ್ಗೆ ಟೀಕೆಯನ್ನೂ ಮಾಡಿದ್ದಾರೆ. ಆದರೆ ದೀಪಿಕಾ ಇದುವರೆಗೆ ತಮ್ಮ ಪತಿ ಸಿನಿಮಾ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಆಗಲೀ ಮಾಧ್ಯಮಗಳ ಮುಂದೆಯಾಗಲೀ ಒಂದೇ ಒಂದು ಹೇಳಿಕೆ ನೀಡಿಲ್ಲ. ಅಲ್ಲದೆ ಸಿನಿಮಾ ನೋಡಿರುವ ಬಗ್ಗೆಯೂ ಯಾವುದೇ ಮಾಹಿತಿ ಬಂದಿಲ್ಲ.
ಖಾರ್ಗೋನ್: ಈಚೆಗೆ ಭಾರೀ ಸದ್ದು ಮಾಡಿದ ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಬೋಂಸ್ಲೆ ಮದುವೆಯನ್ನು ಲವ್ ಜೊಹಾದ್ ಎಂದು ಆಕೆಯ ಸಿನಿಮಾ ನಿರ್ದೇಶನ ಸನೋಜ್ ಮಿಶ್ರಾ ಆರೋಪ ಮಾಡಿದ್ದಾರೆ. ಇವರಲ್ಲದೆ ಇದನ್ನು ಕೆಲವು ಬಲಪಂಥೀಯ ಗುಂಪುಗಳು ಮುಸ್ಲಿಂ ಪುರುಷರು ಮತ್ತು ಹಿಂದೂ ಮಹಿಳೆಯರನ್ನು ಒಳಗೊಂಡ ಪಿತೂರಿ ಎಂದು ಹೇಳಲು ಬಳಸಿದ್ದಾರೆ.ಭಾನುವಾರ ಮಹೇಶ್ವರದಲ್ಲಿ ಭೋಂಸ್ಲೆ ಅವರ ಕುಟುಂಬವನ್ನು ಭೇಟಿ ಬಳಿಕ ಸನೋಜ್ ಮಿಶ್ರಾ ಅವರು ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಅವರೊಂದಿಗೆ ವಿಷಯವನ್ನು ಪ್ರಸ್ತಾಪಿಸಲು ಯೋಜಿಸಿದ್ದಾರೆ ಎನ್ನಲಾಗಿದೆ
ಬೆಂಗಳೂರು: ಬೇಸಿಗೆಯಲ್ಲಿ ಗ್ರಾಮೀಣ ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕೈಗೊಂಡಿರುವ ಕ್ರಮಗಳ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ. ಮುಂದಿನ ಮೂರು ತಿಂಗಳು ಪ್ರತಿ ತಿಂಗಳಿನ 2ನೇ ಹಾಗೂ 4ನೇ ಸೋಮವಾರದಂದು ಪಂಚಾಯತ್ ಅಭಿವೃದ್ಧಿ ಅಧಿಕಾರಗಳ ಕುಡಿಯುವ ನೀರಿನ ಸಮಸ್ಯೆ ಕುರಿತ ವಸ್ತು ಸ್ಥಿತಿಯ ಬಗ್ಗೆ ಸಭೆ ನಡೆಸಬೇಕು ಹಾಗೂ ಆಯಾ ಜಿಲ್ಲೆಗಳಲ್ಲಿನ ಕುಡಿಯುವ ನೀರಿನ ಸಮಸ್ಯೆಯನ್ನು ನಿವಾರಿಸಲು ಕೈಗೊಂಡ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿಯನ್ನು ನೀಡಲು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಕೋಲ್ಕತ್ತ: 2026ನೇ ಋತುವಿನ ಐಪಿಎಲ್ ಟೂರ್ನಿ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಟೂರ್ನಿಯಲ್ಲಿ ಸ್ಪರ್ಧಿಸುವ ತಂಡವುಗಳು ಈಗಾಗಲೇ ತಾಲೀಮು ಆರಂಭಿಸಿವೆ. ಈ ಮಧ್ಯೆ ಕೋಲ್ಕತ್ತ ನೈಟ್ ರೈಡರ್ಸ್ ತಂಡಕ್ಕೆ ಆಘಾತವಾಗಿದೆ. ಮಾರ್ಚ್ 28 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್ರೈಸರ್ಸ್ ಹೈದರಾಬಾದ್ ತಂಡಗಳು ಕಾದಾಟ ನಡೆಸುವ ಮೂಲಕ ಐಪಿಎಲ್ ಟೂರ್ನಿ ಆರಂಭವಾಗಲಿದೆ.ಟೂರ್ನಿಯ ಆರಂಭಕ್ಕೆ ಕೆಲವು ದಿನಗಳು ಮಾತ್ರ ಬಾಕಿ ಇರುವಂತೆಯೇ ಕೋಲ್ಕತ್ತ ತಂಡ ತನ್ನ ಪ್ರಮುಖ ವೇಗಿ ಹರ್ಷಿತ್ ರಾಣಾ ಅವರನ್ನು ಟೂರ್ನಿಯಿಂದಲೇ ಕಳೆದುಕೊಂಡಿದೆ. ಈ ಹಿಂದೆ ಸ್ನಾಯುರಜ್ಜುವಿನ ಸಮಸ್ಯೆಗೆ ತುತ್ತಾಗಿದ್ದ ತಂಡದ ಸ್ಟಾರ್ ವೇಗಿ ರಾಣಾ, ಇದೀಗ ಇಡೀ ಟೂರ್ನಿಯಿಂದ ಹೊರಗುಳಿಸಿದ್ದಾರೆ.
ಬೆಂಗಳೂರು: ಇಂದು ಮುಸ್ಲಿಮರ ಪವಿತ್ರ ರಂಜಾನ್ ಹಬ್ಬದಲ್ಲಿ ಭಾಗಿಯಾದ ಸಿಎಂ ಸಿದ್ದರಾಮಯ್ಯ ಎಲ್ಲಾ ಧರ್ಮವನ್ನೂ ಪ್ರೀತಿಸಬೇಕು ಎಂದು ಸಲಹೆ ನೀಡಿದ್ದಾರೆ. ಬೆಂಗಳೂರಿನ ಮಿಲ್ಲರ್ಸ್ ರಸ್ತೆಯ ಮುಸ್ಮಿದ್ ಈ ಖಾದ್ರಿಯಲ್ಲಿ ನಡೆದ ರಂಜಾನ್ ಸಾಮೂಹಿಕ ಪ್ರಾರ್ಥನೆಯಲ್ಲಿ ಅವರು ಪಾಲ್ಗೊಂಡಿದ್ದಾರೆ. ಈ ವೇಳೆ ಶಾಸಕ ರಿಜ್ವಾನ್ ಅರ್ಷದ್ ಅವರಿಗೆ ಸಾಥ್ ನೀಡಿದ್ದರು. ಮುಸ್ಲಿಮರ ಟೋಪಿ ಧರಿಸಿ ಪ್ರಾರ್ಥನೆಯಲ್ಲಿ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು ‘ಮಾನವಕುಲದ ಒಳಿತಿಗಾಗಿ ಸರ್ವರೂ ಪ್ರಾರ್ಥಿಸುವುದು ಅತ್ಯಂತ ಅವಶ್ಯ. ಮಾನವೀಯತೆಯಿಂದ ಪರಸ್ಪರ ಪ್ರೀತಿ - ವಿಶ್ವಾಸದಿಂದ ಬಾಳುವುದು ಮುಖ್ಯ.
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಏರಿಕೆಯಾಗಿದೆ ಮತ್ತುಇತರೆ ಚಿನ್ನದ ದರ ಇಳಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತವಾಗಿ ಬೆಲೆ ಏರಿಳಿಕೆಯಾಗುತ್ತಲೇ ಇತ್ತು. ಆದರೆ ಈ ವಾರದ ಆರಂಭದಲ್ಲೇ ಪರಿಶುದ್ಧ ಚಿನ್ನದ ದರ ಸತತವಾಗಿ ಇಳಿಕೆಯಾಗುತ್ತಿದೆ. ಆದರೆ ಇಂದು ಕೊಂಚ ಏರಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ನಿನ್ನೆ 1,49,675.00 ರೂ.ಗಳಿತ್ತು. ಆದರೆ ಇಂದು ಏರಿಕೆಯಾಗಿದ್ದು 1,52,285.00 ರೂ.ಗಳಷ್ಟಿದೆ.
ಬೆಂಗಳೂರು: ಅಡಿಕೆ ಬೆಲೆ ಕಳೆದ ವಾರ ಏರಿಕೆ-ಇಳಿಕೆಯಾಗಿತ್ತು. ವಾರದ ಆರಂಭದಲ್ಲೇ ಅಡಿಕೆ ಬೆಲೆ ಕೊಂಚ ಇಳಿಕೆಯಾಗಿತ್ತು. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ. ಕಳೆದ ವಾರ ಅಡಿಕೆ ಬೆಲೆಯಲ್ಲಿ ಕೊಂಚ ಏರಿಕೆಯಾಗಿತ್ತು. ಇದು ಬೆಳೆಗಾರರಿಗೆ ಸಮಾಧಾನ ತಂದಿತ್ತು. ಆದರೆ ಕಳೆದ ಕೆಲವು ದಿನಗಳಿಂದ ಸತತವಾಗಿ ಬೆಲೆ ಇಳಿಕೆ ಕಂಡುಬರುತ್ತಿದೆ. ಕೆಲವು ವರ್ಗದ ಅಡಿಕೆ ಬೆಲೆಯಲ್ಲಿ ಇಂದು ಮತ್ತೆ ಇಳಿಕೆ ಕಂಡುಬರುತ್ತಿದೆ. ಇಂದು ಹೊಸ ಅಡಿಕೆ ಬೆಲೆ 460 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ ಯಥಾಸ್ಥಿತಿಯಲ್ಲಿದ್ದು 530 ರೂ. ಗಳಾಗಿದೆ. ಡಬಲ್ ಚೋಲ್ ಬೆಲೆಯೂ ಯಥಾಸ್ಥಿತಿಯಲ್ಲಿದ್ದು 530 ರೂ.ಗಳಷ್ಟಾಗಿದೆ.
ಹಸಿದವನ ಹೊಟ್ಟೆಗೆ ಹೊಡೆದು ಪಡೆದ ದುಡ್ಡು ಯಾವತ್ತೂ ದಕ್ಕಲ್ಲ ಎನ್ನುತ್ತಾರೆ. ಇಲ್ಲಿ ಆಗಿದ್ದೂ ಇದೆ. ಬಸ್ ನಲ್ಲಿ ಕೂತಿದ್ದ ವ್ಯಕ್ತಿಯಿಂದ ದುಡ್ಡು ಪಡೆದ ವ್ಯಾಪಾರಿ ಊಟ ಕೊಡದೇ ವಂಚಿಸಿದ್ದಾನೆ. ಇಂತಹದ್ದೊಂದು ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಬಸ್ ನಲ್ಲಿ ಪ್ರಯಾಣ ಮಾಡುವಾಗ ವ್ಯಾಪಾರಿಗಳು ಸೌತೆಕಾಯಿ, ತಿಂಡಿ ಪೊಟ್ಟಣ ಹಿಡಿದು ಮಾರಾಟ ಮಾಡಲು ಬರುತ್ತಾರೆ. ಅದೇ ರೀತಿ ಇಲ್ಲಿ ಬಸ್ ಬಳಿ ಮಾರಾಟ ಮಾಡುತ್ತಿದ್ದ ವ್ಯಕ್ತಿ ಮೋಸ ಮಾಡಿ ದುಡ್ಡು ಪಡೆದುಕೊಂಡಿದ್ದಾನೆ.
ಬೆಂಗಳೂರು: ತೆಂಕುತಿಟ್ಟು ಯಕ್ಷಗಾನ ರಂಗದ ಮೇರು ಕಲಾವಿದ, ಕಲಾತಪಸ್ವಿ- ಯಕ್ಷರಂಗದ ಭೀಷ್ಮ ಸೂರಿಕುಮೇರು ಕೆ.ಗೋವಿಂದ ಭಟ್ ಅವರ ನಿಧನದ ಸುದ್ದಿ ನೋವುಂಟು ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಸಂತಾಪ ಸೂಚಿಸಿದ್ದಾರೆ. ಯಕ್ಷಗಾನ ಕ್ಷೇತ್ರದ ‘ನಡೆದಾಡುವ ವಿಶ್ವಕೋಶ’, ‘ದಶಾವತಾರಿ’ ಎಂದೇ ಖ್ಯಾತರಾಗಿದ್ದ ಗೋವಿಂದ ಭಟ್ ತೆಂಕುತಿಟ್ಟು ಯಕ್ಷಗಾನ ಇದುವರೆಗೆ ಕಂಡ ಸರ್ವಶ್ರೇಷ್ಠ ಕಲಾವಿದರು ಎನಿಸಿಕೊಂಡಿದ್ದರು.ಯಕ್ಷಗಾನದಲ್ಲಿ ಅನೇಕ ಶಿಷ್ಯರನ್ನು ಅವರು ಹುಟ್ಟುಹಾಕಿದ್ದಾರೆ. ಧರ್ಮಸ್ಥಳ ಯಕ್ಷಗಾನ ಮೇಳದ ಪ್ರಮುಖ ಕಲಾವಿದರಾಗಿ, ಒಂದೇ ಮೇಳದಲ್ಲಿ 54 ವರ್ಷಗಳಿಗೂ ಹೆಚ್ಚು ಕಾಲ ತಿರುಗಾಟ ನಡೆಸಿ ದಾಖಲೆ ಮೆರೆದವರು.
ನವದೆಹಲಿ: ಅಮೆರಿಕಾ-ಇಸ್ರೇಲ್ ಪಡೆಗಳ ಜೊತೆ ಯುದ್ಧದ ನಡುವೆಯೂ ಭಾರತಕ್ಕೆ ಇರಾನ್ ಗುಡ್ ನ್ಯೂಸ್ ಕೊಟ್ಟಿದೆ. ಭಾರತದ ಹಡಗುಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟಿದೆ. ಇಸ್ರೇಲ್ ಜೊತೆಗಿನ ಯುದ್ಧದ ನಂತರ ಹೊರ್ಮುಜ್ ಜಲಸಂಧಿ ಮೂಲಕ ಸಂಚರಿಸುವ ಹಡಗುಗಳಿಗೆ ಇರಾನ್ ನಿರ್ಬಂಧ ಹೇರಿದೆ. ಅಮೆರಿಕಾ ಬೆಂಬಲಿತ ರಾಷ್ಟ್ರಗಳ ಹಡಗುಗಳ ಸಂಚಾರಕ್ಕೆ ಅನುವು ಮಾಡಿಕೊಡುತ್ತಿಲ್ಲ. ಇನ್ನು ಇತರೆ ರಾಷ್ಟ್ರಗಳ ಹಡಗುಗೂ ಅಲ್ಲಿಯೇ ಬಾಕಿಯಾಗಿವೆ. ಭಾರತದ 22 ಹಡಗುಗಳು ಹೊರ್ಮುಜ್ ಜಲಸಂಧಿ ದಾಟಲಾಗದೇ ಬಾಕಿಯಾಗಿವೆ ಎನ್ನಲಾಗಿತ್ತು. ಮೊನ್ನೆ ಭಾರತ ಎರಡು ಹಡಗುಗಳು ಹೊರ್ಮುಜ್ ಜಲಸಂಧಿ ದಾಟಲು ಇರಾನ್ ಅವಕಾಶ ಮಾಡಿಕೊಟ್ಟಿತ್ತು.
ಮದ್ಯಪಾನ ಮಾಡಿ ಮೈಮರೆತಿದ್ದ ಮಾಲಿಕನನ್ನು ಸಾಕಿದ ಎತ್ತು ತಾನೇ ಮನೆಗೆ ಕರೆದೊಯ್ದ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಎಲ್ಲರ ಗಮನ ಸೆಳೆಯುತ್ತಿದೆ. ಇದು ನಡೆದಿರುವುದು ದೂರದ ಬ್ರೆಜಿಲ್ ದೇಶದಲ್ಲಿ. ಯಾವ ದೇಶವಾದರೇನು? ಮೂಕ ಪ್ರಾಣಿಗಳಿಗೆ ಅದರಲ್ಲೂ ವಿಶೇಷವಾಗಿ ಸಾಕು ಪ್ರಾಣಿಗಳು ತಮ್ಮ ಮಾಲಿಕನ ಮೇಲಿನ ವಿಧೇಯತೆಯನ್ನು ಮರೆಯುವುದಿಲ್ಲ ಎಂಬುದಕ್ಕೆ ಇದೇ ಸಾಕ್ಷಿ. ಬ್ರೆಜಿಲ್ ನಲ್ಲಿ ಮಧ್ಯವಯಸ್ಸಿನ ಈ ವ್ಯಕ್ತಿ ಬಾರ್ ಗೆ ಹೋಗಿ ಚೆನ್ನಾಗಿ ಮದ್ಯಪಾನ ಮಾಡಿದ್ದ. ಎಷ್ಟರಮಟ್ಟಿಗೆ ಟೈಟ್ ಆಗಿದ್ದ ಎಂದರೆ ಆತನಿಗೆ ಮನೆಗೆ ಮರಳುವ ದಾರಿಯೂ ಗೊತ್ತಾಗುತ್ತಿರಲಿಲ್ಲ. ಬಳಿಕ ಆತ ಸಾಕು ಎತ್ತು ಆತನನ್ನು ಹುಡುಕಿಕೊಂಡು ಬೀದಿಗೆ ಬಂದಿದೆ.
ವಾರಣಾಸಿ: ಉತ್ತರ ಪ್ರದೇಶದ ವಾರಣಾಸಿಯಲ್ಲಿ ಕಾಲೇಜು ಕ್ಯಾಂಪಸ್ ಒಂದರಲ್ಲಿ ಸಾಕಷ್ಟು ಜನ ನೋಡುತ್ತಿರುವಾಗಲೇ ತನ್ನ ಸಹಪಾಠಿಯ ಮೇಲೇ ಗುಂಡಿನ ದಾಳಿ ನಡೆಸಿ ವಿದ್ಯಾರ್ಥಿಯೊಬ್ಬ ಕೊಲೆ ಮಾಡಿದ್ದಾನೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸೂರ್ಯ ಪ್ರತಾಪ್ ಸಿಂಗ್ ಎಂಬಾತ ಮೃತ ವಿದ್ಯಾರ್ಥಿ. ಈತನ ಮೇಲೆ ಸಹಪಾಠಿ ಮನ್ಜೀತ್ ಚೌಹಾಣ್ ಗುಂಡಿನ ದಾಳಿ ನಡೆಸಿ ಕೊಲೆ ಮಾಡಿದ್ದಾನೆ. ವಾರಣಾಸಿಯ ಉದಯ ಪ್ರತಾಪ್ ಕಾಲೇಜಿನಲ್ಲಿ ಘಟನೆ ನಡೆದಿದೆ. ಮೃತ ಸೂರ್ಯ ಪ್ರತಾಪ್ ಸಿಂಗ್ ಬಿಎ ನಾಲ್ಕನೇ ಸೆಮಿಸ್ಟರ್ ವಿದ್ಯಾರ್ಥಿಯಾಗಿದ್ದ. ಇಬ್ಬರ ನಡುವೆ ವೈಯಕ್ತಿಕ ಕಾರಣಕ್ಕೆ ಜಗಳ ಶುರುವಾಗಿತ್ತು.
ಮುಂಬೈ: ದುಡ್ಡು ಕೊಟ್ರೆ ಈತ ನಿಮ್ಮ ಸಮಸ್ಯೆಗಳನ್ನು ಕೇಳಿಸಿಕೊಳ್ಳುತ್ತಾನೆ. ಅದಕ್ಕೆ ಸಮಾಧಾನವನ್ನೂ ಹೇಳುತ್ತಾನೆ. ಇಂತಹದ್ದೊಂದು ಭರ್ಜರಿ ಆಫರ್ ಇರೋದು ಎಲ್ಲಿ ಈ ವಿಡಿಯೋ ನೋಡಿ.ದುಡ್ಡು ಕೊಟ್ರೆ ನೆಮ್ಮದಿ ಸಿಗುತ್ತಾ ಎಂದು ಕೆಲವರು ಕೇಳುತ್ತಾರೆ. ಆದರೆ ಈಗ ನೆಮ್ಮದಿಯನ್ನೂ ದುಡ್ಡು ಕೊಟ್ಟು ಕೊಳ್ಳಬಹುದು ಎಂದು ಈತ ತೋರಿಸಿಕೊಟ್ಟಿದ್ದಾನೆ. ಯಾರಿಗೂ ಹೇಳಲಾಗದೇ ಒದ್ದಾಡುವ ಸಮಸ್ಯೆ, ಕಷ್ಟಗಳಿದ್ದರೆ ಅದನ್ನು ಯಾರೊಂದಿಗಾದರೂ ಹಂಚಿಕೊಳ್ಳಬೇಕು ಎನಿಸುತ್ತದೆ. ಅದನ್ನು ಹಂಚಿಕೊಳ್ಳಲು ಸೂಕ್ತ ವ್ಯಕ್ತಿ ಇಲ್ಲ ಎನಿಸಿದರೆ ಈತನ ಬಳಿ ಹೇಳಬಹುದು. ಮುಂಬೈ ಬೀಚ್ ನಲ್ಲಿ ವ್ಯಕ್ತಿಯೊಬ್ಬ ಕಡ್ಲೆಕಾಯಿ ಮಾರಾಟಕ್ಕೆ ಕೂತ ಹಾಗೆ ಸಮಸ್ಯೆ ಕೇಳಲು ಬೋರ್ಡ್ ಹಾಕಿಕೊಂಡು ಕೂತಿದ್ದಾನೆ. ಈತನ ಬಳಿ ಕಷ್ಟ ಹೇಳಿಕೊಳ್ಳುವುದಕ್ಕೆ ಚಾರ್ಜ್ ಆಗುತ್ತದೆ.
ನ್ಯೂಯಾರ್ಕ್: ಯುದ್ಧ ಸಾಕಾಯ್ತಾ... ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ವಿರುದ್ಧದ ಯುದ್ಧದ ಬಗ್ಗೆ ಶಾಕಿಂಗ್ ಹೇಳಿಕೆಯೊಂದನ್ನು ನೀಡಿದ್ದಾರೆ. ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಆರಂಭವಾಗಿ ಹೆಚ್ಚು ಕಡಿಮೆ ಮೂರು ವಾರವಾಗುತ್ತಿದೆ. ಇದುವರೆಗೆ ಎರಡೂ ಕಡೆ ಸಾಕಷ್ಟು ಹಾನಿಗಳಾಗಿವೆ. ಎಲ್ಲಕ್ಕಿಂತ ಹೆಚ್ಚಾಗಿ ಯುದ್ಧದಿಂದ ಹೆಚ್ಚು ನಷ್ಟ ಅನುಭವಿಸುತ್ತಿರುವುದು ಜಗತ್ತಿನ ಬೇರೆ ದೇಶಗಳು. ಅನಿಲ, ಕಚ್ಚಾ ತೈಲ, ವ್ಯಾಪಾರ ವ್ಯವಹಾರಕ್ಕೆ ತೊಂದರೆಯಾಗಿದೆ. ಇದೀಗ ಟ್ರಂಪ್ ತಮ್ಮ ಸೋಷಿಯಲ್ ಮೀಡಿಯಾ ಆಪ್ ಟ್ರೂಥ್ ನಲ್ಲಿ ಯುದ್ಧ ನಿಲ್ಲಿಸುವ ಸುಳಿವು ನೀಡಿದ್ದಾರೆ. ಇರಾನ್ ವಿರುದ್ಧ ಆಪರೇಷನ್ ಫ್ಯೂರಿ ಶೀಘ್ರದಲ್ಲೇ ಕೊನೆಯಾಗಬಹುದು ಎಂದಿದ್ದಾರೆ.
ಜ್ಯೋತಿಷ್ಯ ಪ್ರಕಾರ ಸಿಂಹ ರಾಶಿಯವರು ಯಾವ ರೀತಿಯ ಆಹಾರ ಸೇವಿಸಬೇಕು, ಯಾವ ಆಹಾರವನ್ನು ಅವಾಯ್ಡ್ ಮಾಡಬೇಕು ಇಲ್ಲಿದೆ ವಿವರ. ಸಿಂಹ ರಾಶಿ ಆಳುವ ಗ್ರಹ ಸೂರ್ಯ. ಸೂರ್ಯನು ಹೃದಯ ಮತ್ತು ಬೆನ್ನುಮೂಳೆಯನ್ನು ಆಳುವುದರಿಂದ, ಸಿಂಹ ರಾಶಿಯ ವ್ಯಕ್ತಿಗಳು ಹೃದಯರಕ್ತನಾಳದ ಆರೋಗ್ಯವನ್ನು ಬೆಂಬಲಿಸುವ ಮತ್ತು ಅವರ ಹೆಚ್ಚಿನ ನೈಸರ್ಗಿಕ ಶಕ್ತಿಯನ್ನು ಕಾಪಾಡಿಕೊಳ್ಳುವ ಆಹಾರವನ್ನು ಹೆಚ್ಚಾಗಿ ಬಯಸುತ್ತಾರೆ. ಈ ರಾಶಿಯವರು ಯಾವ ತರಕಾರಿ, ಯಾವ ಹಣ್ಣು, ಧಾನ್ಯ, ಮಸಾಲೆ ಪದಾರ್ಥ ಸೇವಿಸಬೇಕು ಇಲ್ಲಿದೆ ನೋಡಿ ವಿವರ. ತರಕಾರಿ: ಬೆಂಡೆಕಾಯಿ, ಬಸಳೆ, ಪಾಲಕ್ ಸೊಪ್ಪು, ಬ್ರಾಕೊಲಿ, ಸೌತೆಕಾಯಿಹಣ್ಣು: ಕಿತ್ತಳೆ, ಆಪಲ್, ಪೀಚ್, ಸೂರ್ಯಕಾಂತಿ ಬೀಜಗಳು.
ಬೆಂಗಳೂರು: ಕಳೆದ ನಾಲ್ಕೈದು ದಿನಗಳಿಂದ ರಾಜ್ಯದಲ್ಲಿ ಅಲ್ಲಲ್ಲಿ ಮಳೆಯಾಗುತ್ತಿದೆ. ವಾರಂತ್ಯಕ್ಕೆ ರಾಜ್ಯದಲ್ಲಿ ಮಳೆಯಾಗಲಿದೆಯಾ ಇಲ್ಲಿದೆ ಹವಾಮಾನ ವರದಿ. ದಕ್ಷಿಣ ಕನ್ನಡ, ಬೆಂಗಳೂರು, ಕರ್ನಾಟಕದ ಉತ್ತರ ಭಾಗಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗಿತ್ತು. ಬೇಸಿಗೆಯ ಈ ಮಳೆ ರೈತರಿಗೆ ಸಂಕಷ್ಟ ತಂದಿತ್ತರೆ ಬಿಸಿಲ ಬೇಗೆಯಿಂದ ತತ್ತರಿಸಿದವರಿಗೆ ತಂಪೆರಚಿತ್ತು. ಹವಾಮಾನ ವರದಿಗಳ ಪ್ರಕಾರ ಈ ವಾರಂತ್ಯದಲ್ಲೂ ಮಳೆಯಾಗುವ ಸಾಧ್ಯತೆಯಿದೆ. ಅದರಲ್ಲೂ ನಾಳೆ ರಾಜ್ಯದ ಈ ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ. ಬೆಂಗಳೂರು, ರಾಮನಗರ ಜಿಲ್ಲೆಗಳಲ್ಲಿ ನಾಳೆ ಮಳೆಯಾಗುವ ಸಾಧ್ಯತೆಯಿದೆ.
ಶನಿ ಸೇರಿದಂತೆ ನವಗ್ರಹಗಳ ದೋಷ ನಿವಾರಣೆಗೆ ಇಂದು ತಪ್ಪದೇ ನವಗ್ರಹಗಳ ಕುರಿತು ಮಂತ್ರವನ್ನು ಪಠಿಸಿ. ಇದಕ್ಕಾಗಿ ಇಲ್ಲಿದೆ ನವಗ್ರಹ ಪೀಡಾಹರ ಮಂತ್ರ.ಗ್ರಹಾಣಾಮಾದಿರಾದಿತ್ಯೋ ಲೋಕರಕ್ಷಣಕಾರಕಃ ।ವಿಷಮಸ್ಥಾನಸಂಭೂತಾಂ ಪೀಡಾಂ ಹರತು ಮೇ ರವಿಃ ॥ 1 ॥ ರೋಹಿಣೀಶಃ ಸುಧಾಮೂರ್ತಿಃ ಸುಧಾಗಾತ್ರಃ ಸುಧಾಶನಃ ।ವಿಷಮಸ್ಥಾನಸಂಭೂತಾಂ ಪೀಡಾಂ ಹರತು ಮೇ ವಿಧುಃ ॥ 2 ॥ ಭೂಮಿಪುತ್ರೋ ಮಹಾತೇಜಾ ಜಗತಾಂ ಭಯಕೃತ್ ಸದಾ ।ವೃಷ್ಟಿಕೃದ್ವೃಷ್ಟಿಹರ್ತಾ ಚ ಪೀಡಾಂ ಹರತು ಮೇ ಕುಜಃ ॥ 3 ॥
ಆಕ್ಸಿಡೆಂಟ್ ಆದ ವೇಳೆ ವಾಹನದಲ್ಲಿದ್ದ ವ್ಯಕ್ತಿಗಳಿಗೆ ಏನಾಯ್ತು ಅನ್ನೋದನ್ನು ಬಿಟ್ಟು ರೋಡ್ನಲ್ಲಿ ಬಿದ್ದಿದ್ದ ಜ್ಯೂಸ್ ಅನ್ನೇ ಆರಿಸಿಕೊಂಡ ಘಟನೆ ಆಂಧ್ರದಲ್ಲಿ ವರದಿಯಾಗಿದೆ. ಇದರ ವಿಡಿಯೋ ಕೂಡಾ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.ಆಂಧ್ರಪ್ರದೇಶದಲ್ಲಿ ರಸ್ತೆ ಅಪಘಾತದ ನಂತರದ ಗೊಂದಲದ ಘಟನೆಯು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಗಾಯಗೊಂಡ ಚಾಲಕ ಮತ್ತು ಕ್ಲೀನರ್ ಗಮನಿಸದೆ ಟ್ರಕ್ನಿಂದ ಬಿದ್ದಿದ್ದ ತಂಪು ಪಾನೀಯದ ಪೆಟ್ಟಿಗೆಗಳನ್ನು ಲೂಟಿ ಮಾಡಿದ್ದಾರೆ.ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಈ ಘಟನೆಯು ತುರ್ತು ಸಂದರ್ಭಗಳಲ್ಲಿ ನಾಗರಿಕ ಪ್ರಜ್ಞೆ ಮತ್ತು ಸಾರ್ವಜನಿಕ
ಬರುತ್ತಿದ್ದ ವಾಹನವನ್ನು ನಿಲ್ಲಿಸಿ ತಮಗೆ ರಸ್ತೆ ದಾಟಲು ಅನುವು ಮಾಡಿಕೊಟ್ಟ ವ್ಯಕ್ತಿಯೊಬ್ಬನಿಗೆ ಹಿಂಡಿನಲ್ಲಿದ್ದ ತಾಯಿ ಆನೆಗಳು ನಮಸ್ಕರಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ವಿಡಿಯೋದಲ್ಲಿ ರಸ್ತೆಯ ಒಂದು ಬದಿಯಲ್ಲಿ ಆನೆಗಳ ಹಿಂಡು ಕಾದು ಕುಳಿತಿತ್ತು. ಇದನ್ನು ನೋಡಿದ ವ್ಯಕ್ತಿ ಬರುತ್ತಿದ್ದ ವಾಹನವನ್ನು ನಿಲ್ಲಿಸಿದ್ದಾನೆ. ಅದಲ್ಲದೆ ಆನೆಗಳು ರಸ್ತೆ ದಾಟುವವರೆಗೆ ಕಾದು ನಿಂತಿದ್ದಾನೆ. ಹಿಂಡಿನಲ್ಲಿದ್ದ ತಾಯಿ ಆನೆಗಳು ವ್ಯಕ್ತಿಯ ಸಹಕಾರಕ್ಕೆ ನಮಸ್ಕರಿಸಿ ಮುಂದೆ ಸಾಗಿದೆ. ವ್ಯಕ್ತಿಯ ಸಹಕಾರ ಮನೋಭಾವ, ಆನೆಗಳ
ಕೊಲಂಬೋ: ಅಮೆರಿಕವು ತನ್ನ ಎರಡು ಯುದ್ಧ ವಿಮಾನಗಳನ್ನು ನಾಗರಿಕ ನಿಲ್ದಾಣದಲ್ಲಿ ಲ್ಯಾಂಡ್ ಮಾಡಲು ಶ್ರೀಲಂಕಾದ ಬಳಿ ಅಮೆರಿಕ ಅನುಮತಿ ಕೇಳಿದ್ದ ವಿಚಾರ ಇದೀಗ ಬೆಳಕಿಗೆ ಬಂದಿದೆ.ಸಂಸತ್ತಿನಲ್ಲಿ ಈ ವಿಚಾರ ತಿಳಿದು ಬಂದಿದ್ದು, ಅಧ್ಯಕ್ಷ ಅನುರ ಕುಮಾರ ದಿಸಾನಾಯಕ ಅವರು, ಎರಡು ಯುದ್ಧ ವಿಮಾನಗಳನ್ನು ನಿಲ್ಲಿಸಲು ಅನುಮತಿ ನೀಡುವಂತೆ ಅಮೆರಿಕ ಮನವಿ ಮಾಡಿದೆ. ಆದರೆ ನಮ್ಮ ತಟಸ್ಥ ನೀತಿಯನ್ನು ಕಾಪಾಡಿಕೊಳ್ಳಲು ನಾವು ಅನುಮತಿ ನೀಡಲಿಲ್ಲ ಎಂದು ಹೇಳಿದರು.ಜಿಬೌಟಿಯ ನೆಲೆಯಿಂದ ಹೊರಟ ಎಂಟು ಹಡಗು ವಿರೋಧಿ ಕ್ಷಿಪಣಿಗಳಿದ್ದ ಎರಡು ಯುದ್ಧ ವಿಮಾನಗಳನ್ನು ಮಾರ್ಚ್ 4 ರಿಂದ 8
ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಿರುವ ₹2,929 ಕೋಟಿ ವಂಚನೆ ಪ್ರಕರಣ ಸಂಬಂಧ ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ ತನಿಖಾ ದಳ (ಸಿಬಿಐ) ಸುಮಾರು 8 ಗಂಟೆಗಳ ಕಾಲ ವಿಚಾರಣೆ ನಡೆಸಿದೆ.ಸಿಬಿಐನ ಪ್ರಕರಣದ ವಿವರಗಳ ಪ್ರಕಾರ, ಬ್ಯಾಂಕ್ ಆಫ್ ಇಂಡಿಯಾ, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಯುಕೋ ಬ್ಯಾಂಕ್ ಆಫ್ ಇಂಡಿಯಾ, ಯುಕೋ ಬ್ಯಾಂಕ್, ಯುಕೋ ಬ್ಯಾಂಕ್, ಯೂನಿಯನ್-ಸಿ ಬ್ಯಾಂಕ್ ಆಫ್ ಇಂಡಿಯಾ, ಯೂನಿಯನ್ ಬ್ಯಾಂಕ್, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ನಿಂದ ಸ್ವೀಕರಿಸಿದ ದೂರಿನ ಮೇರೆಗೆ
ಸೇಲಂ-ಕೊಯಮತ್ತೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಹು-ವಾಹನ ಡಿಕ್ಕಿಯಾಗಿ ಗರ್ಭಿಣಿ ಸೇರಿದಂತೆ, 11ತಿಂಗಳ ಮಗು ಸೇರಿ 8ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಇಂದು ವರದಿಯಾಗಿದೆ. ದುರ್ಘಟನೆಯಲ್ಲಿ ಇತರ ನಾಲ್ವರು ಗಮಭೀರವಾಗಿ ಗಾಯಗೊಂಡಿದ್ದಾರೆ. 30ಕ್ಕೂ ಹೆಚ್ಚು ಪ್ರಯಾಣಿಕರೊಂದಿಗೆ ಸೇಲಂಗೆ ತೆರಳುತ್ತಿದ್ದ ಸರಕಾರಿ ಬಸ್ ಉತಮಸೋಲಪುರಂ ಬಳಿ ನಿಯಂತ್ರಣ ತಪ್ಪಿದೆ. ಸೇಲಂ ಜಿಲ್ಲೆಯ ಪೆರಿಯಾ ವನವಾಸಿಯ ಅಯ್ಯಂದೂರೈ (49) ಅವರು ಚಲಾಯಿಸುತ್ತಿದ್ದ ಬಸ್ ಬ್ರೇಕ್ ವೈಫಲ್ಯದಿಂದ ಚಾಲಕನ ನಿಯಂತ್ರಣ ತಪ್ಪಿ ಬಿದ್ದಿದೆ.ಹೆದ್ದಾರಿಯ ಎದುರು ಬದಿಗೆ ಪಲ್ಟಿಯಾದ ಬಸ್ ದ್ವಿಚಕ್ರ ವಾಹನ ಮತ್ತು ಪಿಕಪ್ ವ್ಯಾನ್ಗೆ ಡಿಕ್ಕಿ ಹೊಡೆದಿದೆ. ದೇವಸ್ಥಾನದ
ತೆಲಂಗಾಣ ರಾಜ್ಯ ಗದ್ದರ್ ಪ್ರಶಸ್ತಿ ಸಮಾರಂಭದಲ್ಲಿ ನಟಿ ರಶ್ಮಿಕಾ ಮಂದಣ್ಣ ಅವರು ದಿ ಗರ್ಲ್ಫ್ರೆಂಡ್ ಚಿತ್ರದಲ್ಲಿನ ಅಭಿನಯಕ್ಕಾಗಿ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಪಡೆದರು. ಈ ಸಂದರ್ಭದಲ್ಲಿ ರಶ್ಮಿಕಾ ಅವರ ಅತ್ತೆ ಮಾಧವಿ ಕೂಡಾ ಸಮಾರಂಭದಲ್ಲಿ ಹಾಜರಿದ್ದರು. ವೇದಿಕೆಯಲ್ಲಿ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಮತ್ತು ರಾಮ್ ಚರಣ್ ಅವರಿಗೆ ಪ್ರಶಸ್ತಿ ಮತ್ತು ₹ 10 ಲಕ್ಷ ನಗದು ಬಹುಮಾನವನ್ನು ನೀಡಿದಾಗ ರಶ್ಮಿಕಾ ಉತ್ಸುಕಳಾಗಿ ಕಾಣಿಸಿಕೊಂಡರು. ನಂತರ ಅವರು ನಿರ್ದೇಶಕ ರಾಹುಲ್ ರವೀಂದ್ರನ್ ಮತ್ತು ಅವರ ಸಹನಟ ದೀಕ್ಷಿತ್ ಶೆಟ್ಟಿಗೆ ಧನ್ಯವಾದ ಹೇಳಿದರು. "ನನ್ನ ಅಭಿನಯಕ್ಕಾಗಿ ನಾನು ಟ್ರೋಲ್ ಆಗುವ ಸಮಯವಿತ್ತು. ಆದರೆ ಈಗ, ನನ್ನ ಅಭಿನಯಕ್ಕಾಗಿ ನನಗೆ ರಾಜ್ಯದಿಂದ ಪ್ರಶಸ್ತಿ
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ, ಇರಾನ್, ಇರಾಕ್, ಇಸ್ರೇಲ್ ಮತ್ತು ನೆರೆಯ ಪ್ರದೇಶಗಳು ಸೇರಿದಂತೆ ಹೆಚ್ಚಿನ ಅಪಾಯದ ವಾಯುಪ್ರದೇಶಗಳಲ್ಲಿ ಕಾರ್ಯನಿರ್ವಹಿಸದಂತೆ ಭಾರತದ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಎಲ್ಲಾ ಭಾರತೀಯ ವಿಮಾನಯಾನ ಕಂಪನಿಗಳಿಗೆ ಸಲಹೆ ನೀಡಿದೆ. ಭೌಗೋಳಿಕ ರಾಜಕೀಯ ಅಪಾಯಗಳು ತೀವ್ರಗೊಳ್ಳುತ್ತಿದ್ದಂತೆ ಈ ಕ್ರಮವು ಬಂದಿದೆ. ವಿಮಾನಯಾನ ಸಂಸ್ಥೆಗಳು ಮಾರ್ಗಗಳನ್ನು ಮರು ಮೌಲ್ಯಮಾಪನ ಮಾಡಲು ಮತ್ತು ಪ್ರಯಾಣಿಕರ ಮತ್ತು ಸಿಬ್ಬಂದಿ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಆಕಸ್ಮಿಕ ಕ್ರಮಗಳನ್ನು ಬಲಪಡಿಸಲು ಪ್ರೇರೇಪಿಸುತ್ತದೆ.
ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷದ ನಡುವೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ನಾಪತ್ತೆಯಾಗಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಶುಕ್ರವಾರ ಹೇಳಿದ್ದಾರೆ. ಸಹಾಯ ಮತ್ತು ವಾಪಸಾತಿಗಾಗಿ ಭಾರತೀಯ ಮಿಷನ್ಗಳು ಸ್ಥಳೀಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುತ್ತಿವೆ. ಅಂತರ ಸಚಿವಾಲಯದ ಬ್ರೀಫಿಂಗ್ ಅನ್ನು ಉದ್ದೇಶಿಸಿ ಮಾತನಾಡಿದ ಎಂಇಎ ಹೆಚ್ಚುವರಿ ಕಾರ್ಯದರ್ಶಿ (ಗಲ್ಫ್) ಅಸೀಮ್ ಆರ್ ಮಹಾಜನ್, ನಾಪತ್ತೆಯಾದ ವ್ಯಕ್ತಿಯನ್ನು ಪತ್ತೆಹಚ್ಚಲು ಮತ್ತು ಮೃತರನ್ನು ಭಾರತಕ್ಕೆ ಹಿಂದಿರುಗಿಸಲು ಹಲವಾರು ದೇಶಗಳಲ್ಲಿನ ಭಾರತೀಯ ಮಿಷನ್ಗಳು ಅಧಿಕಾರಿಗಳೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿವೆ ಎಂದು ಹೇಳಿದರು.
ವೃಂದಾವನ: ರಾಷ್ಟ್ರಪತಿ ದ್ರೌಪದಿ ಮುರ್ಮು ಶುಕ್ರವಾರ ವೃಂದಾವನದಲ್ಲಿರುವ ಬಾಬಾ ನೀಮ್ ಕರೋಲಿ ಜಿ ಅವರ ಪವಿತ್ರ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಉತ್ತರ ಪ್ರದೇಶ ರಾಜ್ಯಪಾಲ ಆನಂದಿ ಬೆನ್ ಪಟೇಲ್ ಅವರು ರಾಷ್ಟ್ರಪತಿಗಳೊಂದಿಗೆ ಉಪಸ್ಥಿತರಿದ್ದರು. ಇದಕ್ಕೂ ಮುನ್ನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶುಕ್ರವಾರ ಪೂಜ್ಯ ಸಂತ ಪ್ರೇಮಾನಂದ ಮಹಾರಾಜ್ ಅವರನ್ನು ಅವರ ಶ್ರೀ ಹಿಟ್ ರಾಧಾ ಕೇಲಿ ಕುಂಜ್ ಆಶ್ರಮದಲ್ಲಿ ಭೇಟಿಯಾದರು ಮತ್ತು ಗುರುವಾರ ವೃಂದಾವನದ ಶ್ರೀ ರಾಮಂಯೋಧ್ಯಾ ಮನ್ಯೋ ಆಶ್ರಮಕ್ಕೆ ಭೇಟಿ ನೀಡಿದ್ದರು.
ಕಲಬುರಗಿ: ರಾಜ್ಯ ಸಚಿವ ಪ್ರಿಯಾಂಕ್ ಖರ್ಗೆ ಅವರು ಮನಸ್ಸು ಮಾಡಿದರೆ ಕಲಬುರಗಿಯಲ್ಲಿ ಏರ್ಪೋರ್ಟ್ ಆರಂಭವಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಲೇವಡಿ ಮಾಡಿದರು. ಕಲಬುರಗಿಯಲ್ಲಿ ಸುದ್ದಿಗೋಷ್ಠಿ ಮಾತನಾಡಿದ ಅವರು, ಬಜೆಟ್ಗೆ ಆಡಳಿತ ಪಕ್ಷದಲ್ಲಿ ವಿರೋಧ ವ್ಯಕ್ತವಾಗಿದೆ. ಇನ್ನೂ ರಾಜ್ಯದ ಜನರ ಭರವಸೆ ನುಚ್ಚು ನೂರಾಗಿದ್ದು, ರಾಜ್ಯದಲ್ಲಿ ಅಭಿವೃದ್ಧಿ ಇಲ್ಲವಾಗಿದೆ. ಇನ್ನೂ ಸಿದ್ದರಾಮಯ್ಯನವರ ಬಜೆಟ್ ದೂರದೃಷ್ಟಿ ಇಲ್ಲದ ಬಜೆಟ್ ಆಗಿದೆ ಎಂದು ಟೀಕೆ ಮಾಡಿದರು.ಕಲ್ಯಾಣ ಕರ್ನಾಟಕ ಅಭಿವೃದ್ಧಿಯಾಗಿಲ್ಲ. ಇನ್ನೂ ಮೋದಿ ಬಗ್ಗೆ ಸಚಿವ ಖರ್ಗೆ ಅವರು ಟೀಕೆ ಮಾಡುತ್ತಾರೆ. ಆದರೆ ಅವರ
ವಾರಣಾಸಿ: ಇಲ್ಲಿನ ಗಂಗಾ ನದಿಯಲ್ಲಿ ದೋಣಿಯಲ್ಲಿ ಆಯೋಜಿಸಿದ್ದ ಇಫ್ತಾರ್ ಕೂಟದ ವೇಳೆ ಚಿಕನ್ ಬಿರಿಯಾನಿ ತಿನ್ನುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದ್ದು. ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ ಆರೋಪದ ಮೇಲೆ 14 ಮಂದಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಮುಖ್ಯಸ್ಥ ರಜತ್ ಜೈಸ್ವಾಲ್ ಸೋಮವಾರ ಸಲ್ಲಿಸಿದ ಲಿಖಿತ ದೂರಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಗಂಗಾನದಿಯಲ್ಲಿ ದೋಣಿಯಲ್ಲಿ ಇಫ್ತಾರ್ ಕೂಟ ಆಯೋಜಿಸಲಾಗಿದ್ದು, ಈ ವೇಳೆ ಚಿಕನ್ ಬಿರಿಯಾನಿ ಸೇವಿಸಲಾಗಿದೆ ಎಂದು ಜೈಸ್ವಾಲ್ ಆರೋಪಿಸಿದ್ದಾರೆ.
ಬೆಂಗಳೂರು: ಧುರಂದರ್1ನಲ್ಲಿ ಎನರ್ಜಿ ಇತ್ತು, ಜನ ಎಂಜಾಯ್ ಮಾಡುತ್ತಿದ್ದರು. ಆದರೆ ಧುರಂದರ್2 ಯಾಕಮಾಡಬೇಕಿತ್ತು ಎಂಬ ಪ್ರಶ್ನೆ ಹುಟ್ಟುತ್ತದೆ ಎಂದು ಸಿನಿಮಾ ವೀಕ್ಷಿಸಿದ ಖ್ಯಾತ ನಟ ರಮ್ಯಾ ಅಸಮಾಧಾನ ಹೊರಹಾಕಿದ್ದಾರೆ. ಈ ಸಂಬಂಧ ಅವರು ಸಾಮಾಜಿಕ ಜಾಲತಾನ ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ. ಇದು ಅಂತ್ಯವಿಲ್ಲದ ಅಧ್ಯಾಯಗಳನ್ನು ಹೊಂದಿರುವ ತುಂಬಾ ನೀರಸ ವಿಷಯದ ಪಠ್ಯಪುಸ್ತಕವನ್ನು ಓದಿದ ಅನುಭವ ನೀಡುತ್ತದೆ. ಒಂದು ಹಂತಕ್ಕೆ ನಿಮ್ಮ ಮೆದುಳು ಕೈಕೊಟ್ಟು, ಮುಂದೆ ನಡೆಯುತ್ತಿರುವ ಈ ದುರಂತ ನೋಡಿ ನಗೋಕೆ ಶುರುಮಾಡುತ್ತದೆ" ಎಂದಿದ್ದಾರೆ.ನೀವು ನಿಜವಾಗಿಯೂ ಈ ಸಿನಿಮಾ ನೋಡಲು ಬಯಸಿದರೆ, ದಯವಿಟ್ಟು ಥಿಯೇಟರ್ನಲ್ಲಿ ನಿಮ್ಮ ಸಮಯ ಮತ್ತು ಹಣವನ್ನು
ವಾಣಿಜ್ಯ ಸಿಲಿಂಡರ್ಗಳ ಕೊರತೆ ಹಿನ್ನೆಲೆ ಸಿಎಂ ಸಿದ್ದರಾಮಯ್ಯನವರು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಅವರಿಗೆ ಪತ್ರ ಬರೆದಿದ್ದಾರೆ. ಎಲ್ ಪಿಜಿ ಬಿಕ್ಕಟ್ಟು ಕರ್ನಾಟಕದಾದ್ಯಂತ ಪೂರೈಕೆ ಮತ್ತು ಜೀವನೋಪಾಯದ ಮೇಲೆ ಪರಿಣಾಮ ಬೀರುತ್ತಿದೆ. ಈ ಹಿನ್ನೆಲೆ ಬೆಂಗಳೂರಿನಲ್ಲಿ ವಾಣಿಜ್ಯ ಸಿಲಿಂಡರ್ ಗಳ ಕೊರತೆಯನ್ನು ನೀಗಿಸಲು ತುರ್ತು ಕ್ರಮ ಕೈಗೊಳ್ಳಬೇಕೆಂದು ಹರ್ದೀಪ್ ಎಸ್ಪುರಿಗೆ ಪತ್ರವನ್ನು ಬರೆದು ಹೇಳಿದ್ದಾರೆ. ರಾಜ್ಯ ಸರ್ಕಾರವು ಈಗಾಗಲೇ ಅಗತ್ಯ ವಲಯಗಳಿಗೆ ಪೂರೈಕೆಯನ್ನು ನಿಯಂತ್ರಿಸಲು ಮತ್ತು ಆದ್ಯತೆ ನೀಡಲು ಕ್ರಮಗಳನ್ನು
ಕಲಬುರ್ಗಿ: ಉಪ ಚುನಾವಣೆ ನಡೆಯುವ ರಾಜ್ಯದ ಎರಡೂ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ದೊಡ್ಡ ಅಂತರದಲ್ಲಿ ಗೆಲುವು ಸಾಧಿಸಲಿದೆ ಎಂದು ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು ಪ್ರಶ್ನೆಗೆ ಉತ್ತರ ನೀಡಿದರು. ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಗಳಿಗೆ ಸಂಬಂಧಿಸಿ ನಮ್ಮ ಪಕ್ಷದ ವರಿಷ್ಠರು ಅಭ್ಯರ್ಥಿಗಳನ್ನು ಘೋಷಿಸಿದ್ದಾರೆ. ಬಾಗಲಕೋಟೆಗೆ ಮಾಜಿ ಶಾಸಕ ವೀರಣ್ಣ ಚರಂತಿಮಠ್, ದಾವಣಗೆರೆ ದಕ್ಷಿಣಕ್ಕೆ ಶ್ರೀನಿವಾಸ ದಾಸ್ ಕರಿಯಪ್ಪ ಅವರ ಹೆಸರನ್ನು ಘೋಷಿಸಲಾಗಿದೆ ಎಂದು ತಿಳಿಸಿದರು.
ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಜೋರಾಗಿ ಹಾಡು ಹೇಳಿ ಸಹ ಪ್ರಯಾಣಿಕರಿಗೆ ಕಿರಿಕಿರಿ ಉಂಟು ಮಾಡಿದ್ದ ಆರೋಪದ ಮೇರೆಗೆ ಹನ್ನೊಂದು ಯುವತಿಯರ ಗುಂಪಿನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.ಈ ಘಟನೆಯು ಮಾರ್ಚ್ 15 ರ ರಾತ್ರಿ ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರದಿಂದ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸುತ್ತಿದ್ದಾಗ ನಡೆದಿದೆ. ಸಂಗೀತ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮರಳುತ್ತಿದ್ದ ಯುವತಿಯರ ಗುಂಪೊಂದು ಮೆಟ್ರೋದಲ್ಲಿ ಜೋರಾಗಿ ಹಾಡು ಹಾಡಿ ನೃತ್ಯ ಮಾಡಿ ಸಂಭ್ರಮಿಸಿದೆ. ಇದು ಅಲ್ಲೇ ಇದ್ದ ಸಹಪ್ರಯಾಣಿಕರಿಗೆ ತೊಂದರೆಯಾಗಿದೆ.
ಶಿವಮೊಗ್ಗ:ನೀರಾನೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ವನ್ಯಜೀವಿ ವೈದ್ಯೆ ಡಾ.ಸಮೀಕ್ಷಾ ರೆಡ್ಡಿ ಅವರು ಇದೀಗ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ತಿಂಗಳ ಹಿಂದೆಯಷ್ಟೇ ಇಲ್ಲಿನ ತಾವರೆಕೊಪ್ಪ ಹುಲಿ ಸಿಂಹ ಧಾಮಕ್ಕೆ ತರಭೇತಿಗೆಂದು ನೇಮಗೊಂಡಿದ್ದರು. ಗುರುವಾರ ತಡರಾತ್ರಿ ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿಯಿಂದ ತೀವ್ರ ಗಾಯಗೊಂಡಿದ್ದ ಸಮೀಕ್ಷಾ ಅವರು ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟ ನಿವಾಸಿಯಾಗಿರುವ ಸಮೀಕ್ಷಾ ಅವರಿಗೆ 26 ವರ್ಷವಾಗಿತ್ತು. ಹೆಬ್ಬಾಳದ ಪಶುವೈದ್ಯಕೀಯ