ಮುಂಬೈ: ಯುವ ಬ್ಯಾಟರ್‌ ಸರ್ಫರಾಜ್ ಖಾನ್ ಅವರು ಇಂದು ಮೈದಾದದಲ್ಲಿ ಅಬ್ಬರಿಸಿ ಬೊಬ್ಬಿರಿದಿದ್ದಾರೆ. ಅವರ ಈ ಆರ್ಭಟ ಬಿಸಿಸಿಐ ಆಯ್ಕೆ ಸಮಿತಿಗೆ ಹೊಸ ಸವಾಲನ್ನು ತಂದೊಡ್ಡಿದೆ.ಬುಧವಾರ ಗೋವಾ ವಿರುದ್ಧ ಮುಂಬೈನ ವಿಜಯ್ ಹಜಾರೆ ಟ್ರೋಫಿ ಪಂದ್ಯದಲ್ಲಿ ಕೇವಲ 75 ಎಸೆತಗಳಲ್ಲಿ 157 ರನ್ ಗಳಿಸಿದ್ದಾರೆ. 28 ವರ್ಷದ ಸರ್ಫರಾಜ್ ಅದ್ಭುತ ಫಾರ್ಮ್‌ನಲ್ಲಿದ್ದು, 14 ಸಿಕ್ಸರ್‌ಗಳು ಮತ್ತು 9 ಬೌಂಡರಿಗಳನ್ನು ಬಾರಿಸಿದ್ಧಾರೆ. ಈ ಮೂಲಕ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೂ ಮುನ್ನ ಆಯ್ಕೆದಾರರಿಗೆ ಸರ್ಫರಾಜ್ ಖಾನ್ ಭರ್ಜರಿ ಸಂದೇಶವನ್ನು ಕಳುಹಿಸಿದ್ದಾರೆ. ದೇಶೀಯ ಕ್ರಿಕೆಟ್‌ನಲ್ಲಿ ಉತ್ತರ ಪ್ರದರ್ಶನ ನೀಡಿರುವ ಸರ್ಫರಾಜ್ ಖಾನ್ ಅವರ ಈ ಇನಿಂಗ್ಸ್ ಜನವರಿ 11 ರಂದು ಪ್ರಾರಂಭವಾಗುವ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೂ ಮುನ್ನ ಆಯ್ಕೆದಾರರಿಗೆ ನೀಡಿರುವ ಸಂದೇಶ ಎಂದೇ ಭಾವಿಸಲಾಗುತ್ತಿದೆ.

ಲಕ್ನೋ: ಬಾಲಿವುಡ್‌ ನಟಿ, ನೀಲಿಚಿತ್ರಗಳ ಮಾಜಿ ತಾರೆ ಸನ್ನಿ ಲಿಯೋನ್‌ ಅವರ ಕಾರ್ಯಕ್ರಮಕ್ಕೆ ಕಾಯುತ್ತಿದ್ದ ಅಭಿಮಾನಿಗಳಿಗೆ ಭಾರೀ ನಿರಾಸೆಯಾಗಿದೆ. ಹೊಸ ವರ್ಷಕ್ಕೆ ನಿಗದಿಯಾಗಿದ್ದ ಕಾರ್ಯಕ್ರಮ ದಿಢೀರ್‌ ರದ್ದಾಗಿದೆ.ಉತ್ತರ ಪ್ರದೇಶದ ಮಥುರಾದಲ್ಲಿ ಹೊಸ ವರ್ಷಾಚರಣೆ ಪ್ರಯುಕ್ತ ಆಯೋಜಿಸಲಾಗಿದ್ದ ಬಾಲಿವುಡ್‌ ನಟಿ ಸನ್ನಿ ಲಿಯೋನ್‌ ಅವರ ಕಾರ್ಯಕ್ರಮ ರದ್ದುಗೊಳಿಸಲಾಗಿದೆ. ಈ ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತವಾಗಿತ್ತು.ಸ್ಥಳೀಯ ಮಠಾಧೀಶರು, ಧಾರ್ಮಿಕ ಸಂಘಟನೆಗಳು ಹಾಗೂ ಸಂತರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆ ಕಾರ್ಯಕ್ರಮವನ್ನ ರದ್ದುಗೊಳಿಸಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ. ಇದು ಶ್ರೀಕೃಷ್ಣನ ಜನ್ಮಸ್ಥಳವಾಗಿದೆ. ಇಂತಹ ಸ್ಥಳದಲ್ಲಿ ಸನ್ನಿ ಲಿಯೋನ್ ಅವರನ್ನು ಕರೆಸಿ ಡಿಜೆ ಕಾರ್ಯಕ್ರಮ ಆಯೋಜಿಸಿರೋದು ಅಸಮಾಧಾನಕ್ಕೆ ಕಾರಣವಾಗಿತ್ತು.

‌ಇಂದೋರ್: ಮಧ್ಯಪ್ರದೇಶ ರಾಜ್ಯದಲ್ಲಿ ಇಂದೋರ್‌ನಲ್ಲಿ ಭೀಕರ ದುರ್ಘಟನೆ ಸಂಭವಿಸಿದೆ. ಕಲುಷಿತ ನೀರು ಸೇವನೆಯಿಂದ ಉಂಟಾದ ಅತಿಸಾರ ಮತ್ತು ವಾಂತಿಯಿಂದ ಈವರೆಗೆ ಎಂಟು ಮಂದಿ ಮೃತಪಟ್ಟಿದ್ದಾರೆ.ದೇಶದಲ್ಲಿಯೇ ಸತತ ಎಂಟು ಬಾರಿ ಅತ್ಯಂತ ಸ್ವಚ್ಛ ನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಇಂದೋರ್‌ನಲ್ಲಿ ಭಾರಿ ದುರಂತವೊಂದು ಸಂಭವಿಸಿದೆ. ನೂರಾರು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಿದೆ.ಡಿಸೆಂಬರ್ 25 ರಂದು ಭಗೀರಥಪುರ ಪ್ರದೇಶಕ್ಕೆ ಸರಬರಾಜಾದ ಕುಡಿಯುವ ನೀರಿನಲ್ಲಿ ಅಸಾಮಾನ್ಯ ವಾಸನೆ ಮತ್ತು ರುಚಿ ಕಂಡುಬಂದಿತ್ತು. ಈ ನೀರನ್ನು ಸೇವಿಸಿದ ನಂತರ ಸ್ಥಳೀಯ ನಿವಾಸಿಗಳಲ್ಲಿ ವಾಂತಿ, ಭೇದಿ ಮತ್ತು ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದೆ.

ಮುಂಬೈ: ಯುವ ಬ್ಯಾಟರ್‌ ಸರ್ಫರಾಜ್ ಖಾನ್ ಅವರು ಇಂದು ಮೈದಾದದಲ್ಲಿ ಅಬ್ಬರಿಸಿ ಬೊಬ್ಬಿರಿದಿದ್ದಾರೆ. ಅವರ ಈ ಆರ್ಭಟ ಬಿಸಿಸಿಐ ಆಯ್ಕೆ ಸಮಿತಿಗೆ ಹೊಸ ಸವಾಲನ್ನು ತಂದೊಡ್ಡಿದೆ.ಬುಧವಾರ ಗೋವಾ ವಿರುದ್ಧ ಮುಂಬೈನ ವಿಜಯ್ ಹಜಾರೆ ಟ್ರೋಫಿ ಪಂದ್ಯದಲ್ಲಿ ಕೇವಲ 75 ಎಸೆತಗಳಲ್ಲಿ 157 ರನ್ ಗಳಿಸಿದ್ದಾರೆ. 28 ವರ್ಷದ ಸರ್ಫರಾಜ್ ಅದ್ಭುತ ಫಾರ್ಮ್‌ನಲ್ಲಿದ್ದು, 14 ಸಿಕ್ಸರ್‌ಗಳು ಮತ್ತು 9 ಬೌಂಡರಿಗಳನ್ನು ಬಾರಿಸಿದ್ಧಾರೆ. ಈ ಮೂಲಕ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೂ ಮುನ್ನ ಆಯ್ಕೆದಾರರಿಗೆ ಸರ್ಫರಾಜ್ ಖಾನ್ ಭರ್ಜರಿ ಸಂದೇಶವನ್ನು ಕಳುಹಿಸಿದ್ದಾರೆ. ದೇಶೀಯ ಕ್ರಿಕೆಟ್‌ನಲ್ಲಿ ಉತ್ತರ ಪ್ರದರ್ಶನ ನೀಡಿರುವ ಸರ್ಫರಾಜ್ ಖಾನ್ ಅವರ ಈ ಇನಿಂಗ್ಸ್ ಜನವರಿ 11 ರಂದು ಪ್ರಾರಂಭವಾಗುವ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೂ ಮುನ್ನ ಆಯ್ಕೆದಾರರಿಗೆ ನೀಡಿರುವ ಸಂದೇಶ ಎಂದೇ ಭಾವಿಸಲಾಗುತ್ತಿದೆ.

ಬೆಂಗಳೂರು: ಸಿಲಿಕಾನ್ ಸಿಟಿಯ ಮಂದಿ ಹೊಸ ವರ್ಷ ಸ್ವಾಗತಕ್ಕೆ ಸಜ್ಜಾಗಿದ್ದಾರೆ. ಇಂದು ಬೆಂಗಳೂರು ಬಹುತೇಕ ರಸ್ತೆಗಳು ಜನದಟ್ಟಣೆಯಿಂದ ಕೂಡಿರಲಿದೆ. ಹೀಗಾಗಿ, ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ, ಪಾರ್ಕಿಂಗ್‌ ನಿಷೇಧಿಸಲಾಗಿದೆ.ನಗರದಲ್ಲಿ ಅಹಿತಕರ ಘಟನೆಗಳು ಸಂಭವಿಸದಂತೆ ತಡೆಯಲು ಹಲವು ಮುಂಜಾಗ್ರತಾ ಕ್ರಮಗಳನ್ನು ಪೊಲೀಸ್ ಇಲಾಖೆ ತೆಗೆದುಕೊಂಡಿದೆ. ಹೀಗಾಗಿ, ಹಲವು ರಸ್ತೆಗಳಲ್ಲಿ ಸಂಚಾರಕ್ಕೆ ನಿರ್ಬಂಧಿಸಲಾಗಿದೆ. ಪ್ರಮುಖ ರಸ್ತೆಗಳಲ್ಲಿ ಬಣ್ಣದ ವಿದ್ಯುತ್‌ ದೀಪಗಳ ಅಲಂಕಾರದಿಂದ ಕಂಗೊಳಿಸುತ್ತಿವೆ. ಪಬ್‌, ಕ್ಲಬ್‌, ರೆಸ್ಟೊರೆಂಟ್‌ಗಳು ಬುಧವಾರ ರಾತ್ರಿ ಪಾರ್ಟಿ ಆಯೋಜಿಸಲು ಸಿದ್ಧತೆಗೊಂಡಿವೆ.ಮಹಾತ್ಮ ಗಾಂಧಿ ರಸ್ತೆ, ಚರ್ಚ್‌ ಸ್ಟ್ರೀಟ್‌, ಬ್ರಿಗೇಡ್ ರಸ್ತೆ, ಕೋರಮಂಗಲ, ಒಪೆರಾ ಜಂಕ್ಷನ್‌, ರೆಸ್ಟ್‌ಹೌಸ್ ರಸ್ತೆ, ಸೇಂಟ್‌ ಮಾರ್ಕ್‌ ರಸ್ತೆ, ರಿಚ್ಮಂಡ್‌ ರಸ್ತೆ, ರೆಸಿಡೆನ್ಸಿ ರಸ್ತೆಗೆ ದೊಡ್ಡ ಸಂಖ್ಯೆಯಲ್ಲಿ ಯುವ ಸಮೂಹ ಬರುವ ನಿರೀಕ್ಷೆಯಿದೆ.

ಬೆಂಗಳೂರು: ಹೊಸ ವರ್ಷವನ್ನು ಅದ್ಧೂರಿಯಾಗಿ ಸ್ವಾಗತಿಸಲು ಪ್ಲಾನ್‌ ಮಾಡಿರುವ ಸಿಲಿಕಾನ್‌ ಸಿಟಿ ಮಂದಿಗೆ ಮೆಟ್ರೊ ಮತ್ತು ಬಿಎಂಟಿಸಿ ಗುಡ್‌ನ್ಯೂಸ್‌ ನೀಡಿದೆ. ಇಂದು ತಡರಾತ್ರಿವರೆಗೆ ಸಾರಿಗೆ ಸೇವೆಯನ್ನು ವಿಸ್ತರಿಸಿದೆ. ಮಧ್ಯರಾತ್ರಿವರೆಗೂ ಸಂಭ್ರಮಿಸುವ ಬೆಂಗಳೂರಿಗರ ಸುರಕ್ಷತೆ ಸಂಚಾರಕ್ಕಾಗಿ ಮೆಟ್ರೊ, ಬಿಎಂಟಿಸಿ ತನ್ನ ಸೇವೆ ಸಮಯ ಮತ್ತು ಮಾರ್ಗಗಳನ್ನ ವಿಸ್ತರಿಸಿದೆ. ತಡರಾತ್ರಿವರೆಗೂ ಜನರ ಅನೂಕೂಲಕ್ಕಾಗಿ ಸಂಚಾರ ನಾಡಿಗಳು ಸೇವೆ ನೀಡಲಿವೆ.ಇಂದು ರಾತ್ರಿ ಹಾಗೂ ಜನವರಿ 1ರಂದು ಮೆಟ್ರೋ ವಿಶೇಷ ವೇಳಾಪಟ್ಟಿ ಜಾರಿಯಲ್ಲಿರಲಿದೆ. ನೇರಳೆ, ಹಸಿರು ಮತ್ತು ಹಳದಿ ಮಾರ್ಗಗಳಲ್ಲಿ ಸೇವಾ ಸಮಯವನ್ನ ತಡರಾತ್ರಿವರೆಗೆ ವಿಸ್ತರಣೆ ಮಾಡಲಾಗಿದೆ. ಹೊಸ ವರ್ಷದ ಸಂಭ್ರಮದಲ್ಲಿ ಜನಸಂದಣಿ ಹೆಚ್ಚಾಗುವ ಹಿನ್ನೆಲೆ, ಪ್ರಯಾಣಿಕರ ಅನುಕೂಲಕ್ಕಾಗಿ ಮೆಟ್ರೋ ಕೊನೆಯ ರೈಲು ಸಮಯವನ್ನು ವಿಸ್ತರಿಸಲಾಗಿದೆ.

ಬೆಂಗಳೂರು: ಲೇಡಿ ಸೂಪರ್‌ ಸ್ಟಾರ್‌, ಬಹುಭಾಷಾ ತಾರೆ ನಯನಾತಾರಾ ಅಭಿಮಾನಿಗಳಿಗೆ ಟಾಕ್ಸಿಕ್‌ ಚಿತ್ರತಂಡ ಗುಡ್‌ನ್ಯೂಸ್‌ ನೀಡಿದೆ. ಚಿತ್ರದಲ್ಲಿನ ಫಸ್ಟ್‌ಲುಕ್‌ ಬಿಡುಗಡೆ ಮಾಡಿದ್ದು, ಖಡಕ್‌ ಲುಕ್‌ನಲ್ಲಿ ನಯನಾತಾರಾ ಕಾಣಿಸಿಕೊಂಡಿದ್ದಾರೆ. ಕೆಜಿಎಫ್‌ ಖ್ಯಾತಿಯ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್ ಸಿನಿಮಾವು ಮಾರ್ಚ್ 19ರಂದು ತೆರೆಗೆ ಬರಲಿದೆ.ಬಿಗ್‌ಬಜೆಟ್‌ನ ಈ ಚಿತ್ರದ ಮೇಲಿನ ಕುತೂಹಲ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಚಿತ್ರದ ಒಂದೊಂದೇ ಪಾತ್ರಗಳನ್ನು ಪರಿಚಯಿಸುತ್ತಿರುವ ಚಿತ್ರತಂಡ, ಇದೀಗ ನಟಿ ನಯನತಾರಾ ಅವರ ಗಂಗಾ ಪಾತ್ರದ ಪೋಸ್ಟರ್ ಅನ್ನು ರಿಲೀಸ್ ಮಾಡಿದೆ. ಈ ಪೋಸ್ಟರ್‌ಗೆ ಅಭಿಮಾನಿಗಳು ಫುಲ್‌ ಫಿದಾ ಆಗಿದ್ದಾರೆ.

ಬೆಂಗಳೂರು: ಕುಡಿದು ಟೈಟ್ ಆದವರನ್ನು ಮನೆಗೆ ಬಿಡ್ತೀವಿ ಎಂದಿದ್ದಕ್ಕೆ ಟ್ರೋಲ್ ಆದ ಬಳಿಕ ಗೃಹಸಚಿವ ಡಾ ಜಿ ಪರಮೇಶ್ವರ್ ಮಾಧ್ಯಮಗಳಿಗೆ ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕುಡಿದು ಮತ್ತಿನಲ್ಲಿರುವ ಎಲ್ಲರನ್ನೂ ಮನೆಗೆ ಬಿಡ್ತೀವಿ ಎಂದು ಅರ್ಥವಲ್ಲ. ಕೆಲವರು ಕುಡಿದು ಪ್ರಜ್ಞೆಯೇ ಇಲ್ಲದ ಸ್ಥಿತಿಯಲ್ಲಿರುತ್ತಾರೆ. ವಿಶೇಷವಾಗಿ ಮಹಿಳೆಯರು ಈ ಸ್ಥಿತಿಯಲ್ಲಿದ್ದಾಗ ಅವರ ಜೊತೆ ದುರ್ವರ್ತನೆ ತೋರುವ ಸಾಧ್ಯತೆಯಿರುತ್ತದೆ. ಹೀಗಾಗಿ ಅವರ ಸುರಕ್ಷತೆ ದೃಷ್ಟಿಯಿಂದ ಈ ರೀತಿ ವ್ಯವಸ್ಥೆ ಮಾಡಿದ್ದೇವೆ. ತೀರಾ ಆಗದವರನ್ನು ಕೆಲವು ಕಡೆ ಪೊಲೀಸರೇ ಕೇಂದ್ರಗಳನ್ನು ಮಾಡಿದ್ದಾರೆ. ಅಲ್ಲಿಗೆ ಕರೆದುಕೊಂಡು ಹೋಗಿ ಸ್ವಲ್ಪ ಸುಧಾರಿಸಿದ ಮೇಲೆ ಮನೆಗೆ ಬಿಡಲಾಗುತ್ತದೆ.

ಜಕಾರ್ತ: ಇಂಡೋನೇಷ್ಯಾದ ಉತ್ತರ ಸುಲವೇಸಿ ಪ್ರಾಂತ್ಯದ ವೃದ್ಧಾಶ್ರಮವೊಂದರಲ್ಲಿ ಸಂಭವಿಸಿದ ಭೀಕರ ಬೆಂಕಿಯಲ್ಲಿ 16 ಮಂದಿ ವೃದ್ಧರು ಸಾವನ್ನಪ್ಪಿದ್ದಾರೆ. ಮನಾಡೋ ಪ್ರದೇಶದಲ್ಲಿ ಭಾನುವಾರ ಸಂಜೆ ಈ ದುರಂತ ಘಟನೆ ನಡೆದಿದೆ. ಒಂದೇ ಅಂತಸ್ತಿನ ಕಟ್ಟಡದಲ್ಲಿ ಎಲ್ಲಾ ವಯಸ್ಸಾದ ನಿವಾಸಿಗಳು ಮಲಗಿದ್ದರು ಎಂದು ವರದಿಯಾಗಿದೆ, ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಆವರಣದಾದ್ಯಂತ ಹರಡಿತು.15 ಮಂದಿ ಸುಟ್ಟಗಾಯಗಳಿಂದ, ಒಬ್ಬರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆಘಟನೆಯಲ್ಲಿ ಒಟ್ಟು 16 ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹದಿನೈದು ಹಿರಿಯ ನಿವಾಸಿಗಳು ಸುಟ್ಟಗಾಯಗಳಿಂದ ಸಾವನ್ನಪ್ಪಿದರೆ, ಒಬ್ಬ ವ್ಯಕ್ತಿ ಉಸಿರುಗಟ್ಟುವಿಕೆಯಿಂದ ಸಾವನ್ನಪ್ಪಿದರು. ಬೆಂಕಿ ಎಷ್ಟು ವೇಗವಾಗಿ ಹರಡಿತು