ಬೆಂಗಳೂರು: ಕರ್ನಾಟಕದ ಹೆಮ್ಮೆಯ ಬ್ರ್ಯಾಂಡ್ ನಂದಿನಿ ಉತ್ಪನ್ನವನ್ನು ಸೇವಿಸಿದರೆ ಕ್ಯಾನ್ಸರ್ ಬರುತ್ತದೆ ಎಂಬ ಸುದ್ದಿಗಳ ಬಗ್ಗೆ ಇದೀಗ ಕೆಎಂಎಫ್ ಸ್ಪಷ್ಟನೆ ನೀಡಿದೆ. ನಂದಿನಿ ಬ್ರ್ಯಾಂಡ್ ಎಂದರೆ ಕರ್ನಾಟಕಕ್ಕೇ ಹೆಮ್ಮೆ. ಈ ಬ್ರ್ಯಾಂಡ್ ಎಂದರೆ ಜನ ಕಣ್ಣು ಮುಚ್ಚಿಕೊಂಡು ಸುರಕ್ಷಿತ ಎಂದುಕೊಳ್ಳುತ್ತಾರೆ. ಹಾಲಿನಿಂದ ಹಿಡಿದು ಈಗ ವಿವಿಧ ಉತ್ಪನ್ನಗಳು ಬಿಡುಗಡೆಯಾಗುತ್ತಿರುವ ಕಾರಣ ನಂದಿನಿ ಮತ್ತಷ್ಟು ಜನಪ್ರಿಯವಾಗಿದೆ. ಇಂತಹ ಹೊತ್ತಿನಲ್ಲೇ ನಂದಿನಿ ಉತ್ಪನ್ನ ಸೇವಿಸುವುದರಿಂದ ಕ್ಯಾನ್ಸರ್ ಬರಬಹುದು. ಈ ಉತ್ಪನ್ನಗಳಲ್ಲಿ ಬಳಸುವ ವಸ್ತುಗಳಿಂದ ಕ್ಯಾನ್ಸರ್ ಬರಬಹುದು ಎಂದು ಡಾ ಶರಣ್ಯ ಸಂತೋಷ್ ಎಂಬವರು ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡಿದ್ದರು.
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಮುಷ್ಕರಕ್ಕೆ ಕರೆ ನೀಡಿದ್ದ ಕರ್ನಾಟಕ ರಸ್ತೆ ಸಾರಿಗೆ ನಿಗಮದ ನೌಕರರು ಮುಷ್ಕರ ಹಿಂಪಡೆದಿದ್ದಾರೆ. ಇದರಿಂದ ಸಾರಿಗೆ ಬಸ್ ಪ್ರಯಾಣಿಕರು ನೆಮ್ಮದಿಯ ನಿಟ್ಟುಸಿರುವ ಬಿಡುವಂತಾಗಿದೆ. ಇಂದು ಸಂಜೆ ಫ್ರೀಡಂ ಪಾರ್ಕ್ ನಲ್ಲಿ ಬೆಂಗಳೂರು ಚಲೋಗೆ ಕರೆ ಕೊಟ್ಟಿದ್ದ ನೌಕರರ ಸಂಘ ಬಳಿಕ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿಸಿತ್ತು. ಮುಷ್ಕರದಲ್ಲಿ ನಾಲ್ಕೂ ಸಾರಿಗೆ ನಿಗಮದ ನೌಕರರು ಭಾಗಿಯಾಗಲಿದ್ದರು.ಆದರೆ ನಿನ್ನೆ ರಾಜ್ಯ ಸರ್ಕಾರ 26 ತಿಂಗಳ ಹಿಂಬಾಕಿ ಪಾವತಿಸಿತ್ತು.
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ದಲಿತರಿಗೆ ಅನ್ಯಾಯ ಮಾಡುತ್ತಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ ಅವರು ಆಕ್ಷೇಪಿಸಿದರು.ಇಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿಯಲ್ಲಿ ಅಂಗೀಕರಿಸಿದ ಖಂಡನಾ ನಿರ್ಣಯ ಕುರಿತು ಅವರು ಮಾಹಿತಿ ನೀಡಿದರು. ಬಹಳ ಪ್ರಮುಖವಾಗಿ ಅವರು ದಲಿತರಿಗೆ ಮೀಸಲಿಟ್ಟ 39,500 ಕೋಟಿ ರೂಪಾಯಿಯನ್ನು ಗ್ಯಾರಂಟಿ ಮತ್ತು ಅನ್ಯ ಉದ್ದೇಶಕ್ಕೆ ಬಳಸಿಕೊಂಡಿದ್ದಾರೆ ಎಂದು ಟೀಕಿಸಿದರು. ಇದನ್ನು ಕೂಡಲೇ ಎಸ್ಸಿ, ಎಸ್ಟಿ ಸಮುದಾಯದ ಕಲ್ಯಾಣಕ್ಕೆ ಬಳಸಬೇಕು ಎಂದು ಆಗ್ರಹಿಸಿದರು.
ಲಕ್ನೋ: ಕರ್ನಾಟಕ ಕ್ರಿಕೆಟ್ ತಂಡ ರಣಜಿ ಟ್ರೋಫಿ ಫೈನಲ್ ಗೇರಿದ್ದು ಬರೋಬ್ಬರಿ 11 ವರ್ಷಗಳ ಬಳಿಕ ಈ ಸಾಧನೆ ಮಾಡಿದೆ. ಕೊನೆಯ ಬಾರಿಗೆ 2014 ರಲ್ಲಿ ಕರ್ನಾಟಕ ಫೈನಲ್ ಗೇರಿತ್ತು. ಉತ್ತರಾಖಂಡ ವಿರುದ್ಧದ ಸೆಮಿಫೈನಲ್ ಪಂದ್ಯವನ್ನು ಡ್ರಾ ಮಾಡಿಕೊಂಡಿದೆ. ಮೊದಲ ಇನಿಂಗ್ಸ್ ನಲ್ಲಿ ಭರ್ಜರಿ ಮುನ್ನಡೆ ಸಾಧಿಸಿದ್ದ ಕಾರಣಕ್ಕೆ ಕರ್ನಾಟಕ ಫೈನಲ್ ಗೆ ಅರ್ಹತೆ ಪಡೆಯಿತು. ದ್ವಿತೀಯ ಇನಿಂಗ್ಸ್ ನಲ್ಲಿ 727 ರನ್ ಗಳ ಬೃಹತ್ ಮೊತ್ತದ ಗೆಲುವಿನ ಗುರಿ ಪಡೆದಿದ್ದ ಉತ್ತರಾಖಂಡ ಇಂದು ಕೊನೆಯ ದಿನ 6 ವಿಕೆಟ್ ನಷ್ಟಕ್ಕೆ 260 ರನ್ ಗಳಿಸಿತ್ತು.
ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ವಂತ ಶಕ್ತಿಯ ಮೇಲೆ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಹಾಗೂ ಭ್ರಷ್ಟ ಕಾಂಗ್ರೆಸ್ ಸರಕಾರವನ್ನು ಕಿತ್ತೊಗೆಯುವ ಸಂಕಲ್ಪ ಮಾಡಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದ್ದಾರೆ.ನಗರದ ಅರಮನೆ ಮೈದಾನದ ಗೇಟ್ ನಂ.4, ಗಾಯತ್ರಿ ಗ್ರ್ಯಾಂಡ್ ನಲ್ಲಿ ಇಂದು ನಡೆದ ರಾಜ್ಯ ಕಾರ್ಯಕಾರಿಣಿಯ ಸಂದರ್ಭದಲ್ಲಿ 50 ವರ್ಷ ಸಕ್ರಿಯ ರಾಜಕಾರಣದಲ್ಲಿ ನಡೆದು ಬಂದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಅಭಿನಂದಿಸಲಾಯಿತು. ಕಾರ್ಯಕರ್ತರಿಂದ ಗೌರವ ಸಮರ್ಪಿಸಲಾಯಿತು. ಬಳಿಕ ಅಭಿನಂದನೆಗೆ ಉತ್ತರವಾಗಿ ಯಡಿಯೂರಪ್ಪ ಅವರು ಮಾತನಾಡಿದರು.
ಬೆಂಗಳೂರು: ತೆಲಂಗಾಣ, ಹಿಮಾಚಲ ಪ್ರದೇಶ ಮತ್ತು ಕರ್ನಾಟಕದಲ್ಲಿ ಮಾತ್ರ ಕಾಂಗ್ರೆಸ್ ಪಕ್ಷ ಉಸಿರಾಡುತ್ತಿದೆ. ಕರ್ನಾಟಕದಲ್ಲಿ ಅಭಿವೃದ್ಧಿ ಶೂನ್ಯ ಸ್ಥಿತಿ ಇದ್ದು, ಆಡಳಿತ ಪಕ್ಷದ ಶಾಸಕರೇ ಸರಕಾರದ ವಿರುದ್ಧ ದಂಗೆ ಏಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ವಿಶ್ಲೇಷಿಸಿದ್ದಾರೆ.ನಗರದ ಅರಮನೆ ಮೈದಾನದ ಗೇಟ್ ನಂ.4, ಗಾಯತ್ರಿ ಗ್ರ್ಯಾಂಡ್ ನಲ್ಲಿ ಇಂದು ನಡೆದ ರಾಜ್ಯ ಕಾರ್ಯಕಾರಿಣಿಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಕರ್ನಾಟಕದಲ್ಲಿ ಸಿದ್ದರಾಮಯ್ಯರ ನೇತೃತ್ವದ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ಬಳಿಕ ಹಿಂದೂ ಕಾರ್ಯಕರ್ತರ, ದಲಿತರ ಹತ್ಯೆ ಆಗುತ್ತಿದೆ ಎಂದ ಅವರು, ಸುರತ್ಕಲ್, ಯಲ್ಲಾಪುರದಲ್ಲಿ ಆದ ಹತ್ಯೆಯನ್ನು ಉಲ್ಲೇಖಿಸಿದರು.
ನವದೆಹಲಿ: ದೆಹಲಿಯ ಇಂಡಿಯಾ ಎಐ ಇಂಪ್ಯಾಕ್ಟ್ ಸಮ್ಮೇಳನದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಭಾರತ ಕೇವಲ ಎಐ ತಂತ್ರಜ್ಞಾನದ ಭಾಗವಲ್ಲ, ಅದನ್ನು ಮುನ್ನಡೆಸಿಕೊಂಡು ಹೋಗುತ್ತಿದೆ ಎಂದಿದ್ದಾರೆ. ಎಐ ಇಂಪ್ಯಾಕ್ಟ್ ಸಮ್ಮೇಳನದಲ್ಲಿ ಇಂದು ಗೂಗಲ್ ಸಿಇಒ ಸುಂದರ್ ಪಿಚ್ಚೈ ಸೇರಿದಂತೆ ಜಾಗತಿಕ ಐಟಿ ದಿಗ್ಗಜರೊಂದಿಗೆ ವೇದಿಕೆ ಹಂಚಿಕೊಂಡ ಪ್ರಧಾನಿ ಮೋದಿ ಬಳಿಕ ಭಾಷಣ ಮಾಡಿದ್ದಾರೆ. ಕೃತಕ ಬುದ್ಧಿಮತ್ತೆ (ಎಐ) ಎಲ್ಲರಿಗೂ ಲಭ್ಯವಾಗುವಂತಿರಬೇಕು ಎಂದಿದ್ದಾರೆ. ಕೃತಕ ಬುದ್ಧಿಮತ್ತೆ ಮಾನವ ಜೀವನದಲ್ಲಿ ಹೊಸ ಪರಿವರ್ತನೆಯನ್ನೇ ತಂದಿದೆ. ಇಂದು ಭಾರತ ಕೇವಲ ಎಐ ತಂತ್ರಜ್ಞಾನದ ಭಾಗವಾಗಿಲ್ಲ.
ಲಕ್ನೋ: ಉತ್ತರಾಖಂಡ ವಿರುದ್ಧ ಕರ್ನಾಟಕದ ರಣಜಿ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಅದ್ಭುತ ಬ್ಯಾಟಿಂಗ್ ಮಾಡುತ್ತಿದ್ದ ಕೆಎಲ್ ರಾಹುಲ್ ಗೆ ಗೆಳೆಯ ಪ್ರಸಿದ್ಧ ಕೃಷ್ಣರಿಂದ ಅದ್ಭುತ ಅವಕಾಶವೊಂದು ಕೈ ತಪ್ಪಿ ಹೋಗಿದೆ. ರಣಜಿ ಟ್ರೋಫಿ ಸೆಮಿಫೈನಲ್ ನಲ್ಲಿ ಮೊದಲ ಇನಿಂಗ್ಸ್ ನಲ್ಲಿ ಶತಕ ದಾಖಲಿಸಿದ್ದ ಕೆಎಲ್ ರಾಹುಲ್ ದ್ವಿತೀಯ ಇನಿಂಗ್ಸ್ ನಲ್ಲೂ ಶತಕದ ಅಂಚಿನಲ್ಲಿದ್ದರು. ನಿನ್ನೆಯ ದಿನದಂತ್ಯಕ್ಕೆ ಅವರು 70 ರನ್ ಗಳಿಸಿ ಇಂದಿಗೆ ಬ್ಯಾಟಿಂಗ್ ಕಾಯ್ದುಕೊಂಡಿದ್ದರು. ಇಂದೂ ಅವರು ಶತಕ ಗಳಿಸಿಬಹುದು ಎಂದು ಎಲ್ಲರ ನಿರೀಕ್ಷೆಯಾಗಿತ್ತು.
ಪಾಟ್ನಾ: ಬಿಹಾರ ಡಿಸಿಎಂ ಸಾಮ್ರಾಟ್ ಚೌಧರಿ ಸದನದಲ್ಲೇ ಕದ್ದು ಮುಚ್ಚಿ ತಂಬಾಕು ಉತ್ಪನ್ನ ಸೇವಿಸಿದ್ರಾ? ಹೀಗೊಂದು ವಿಡಿಯೋ ಈಗ ವೈರಲ್ ಆಗಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಬಿಹಾರದ ನಿತೀಶ್ ಕುಮಾರ್ ಸಿಎಂ ಆಗಿರುವ ಸರ್ಕಾರದಲ್ಲಿ ಬಿಜೆಪಿ ಸಾಮ್ರಾಟ್ ಚೌಧರಿ ಉಪಮುಖ್ಯಮಂತ್ರಿಯಾಗಿದ್ದಾರೆ. ಇತ್ತೀಚೆಗೆ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಬಿಹಾರದಲ್ಲಿ ಅಭೂತಪೂರ್ವ ಗೆಲುವು ಸಾಧಿಸುತ್ತಿದ್ದಂತೇ ಅವರನ್ನು ಹೈಕಮಾಂಡ್ ನಾಯಕರು ಉಪಮುಖ್ಯಮಂತ್ರಿ ಮತ್ತು ಗೃಹಮಂತ್ರಿಯಾಗಿ ಆಯ್ಕೆ ಮಾಡಿದ್ದಾರೆ. ಇದೀಗ ಬಿಹಾರದಲ್ಲಿ ವಿಧಾನಸಭೆ ಕಲಾಪ ನಡೆಯುತ್ತಿದ್ದು ಸದನದಲ್ಲಿಯೇ ಸಾಮ್ರಾಟ್ ಚೌಧರಿ ಬಾಯಿಗೆ ಕೈ ಅಡ್ಡ ಇಟ್ಟುಕೊಂಡು ತಂಬಾಕು ಉತ್ಪನ್ನವನ್ನು ಕದ್ದು ಮುಚ್ಚಿ ಸೇವಿಸುತ್ತಿರುವ ವಿಡಿಯೋ ವೈರಲ್ ಆಗಿದೆ.
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಇಳಿಕೆಯಾಗಿದೆ ಮತ್ತುಇತರೆ ಚಿನ್ನದ ದರ ಏರಿಕೆಯಾಗಲಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತವಾಗಿ ದಾಖಲೆಯ ಏರಿಕೆ ಕಂಡಿತ್ತು. ಈ ವಾರ ಅದೇ ರೀತಿ ಬೆಲೆ ಏರಿಳಿಕೆಯಾಗುವ ಲಕ್ಷಣವಿದೆ. ಇಂದು ಪರಿಶುದ್ಧ ಚಿನ್ನದ ದರ ಇಂದು ಇಳಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ನಿನ್ನೆ 1,56,655.00 ರೂ.ಗಳಿತ್ತು. ಇಂದೂ 1,56,370.00 ರೂ.ಗಳಷ್ಟಿದೆ.
ಬೆಂಗಳೂರು: ಅಡಿಕೆ ಬೆಲೆ ಕಳೆದ ವಾರ ಏರಿಕೆ-ಇಳಿಕೆಯಾಗಿತ್ತು. ನಿನ್ನೆ ವಾರದ ಆರಂಭದಲ್ಲೇ ಅಡಿಕೆ ಬೆಲೆ ಕೊಂಚ ಏರಿಕೆಯಾಗಿತ್ತು. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ. ಕಳೆದ ವಾರ ಅಡಿಕೆ ಬೆಲೆಯಲ್ಲಿ ಕೊಂಚ ಏರಿಕೆಯಾಗಿತ್ತು. ಇದು ಬೆಳೆಗಾರರಿಗೆ ಸಮಾಧಾನ ತಂದಿತ್ತು. ಮತ್ತೆ ಅಡಿಕೆ ಬೆಲೆಯಲ್ಲಿ ಚೇತರಿಕೆ ಕಂಡುಬರುತ್ತಿದೆ. ಆದರೆ ಇಂದು ಯಥಾ ಸ್ಥಿತಿಯಲ್ಲಿದೆ. ಇಂದು ಹೊಸ ಅಡಿಕೆ ಬೆಲೆ 485 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ 550 ರೂ. ಗಳಾಗಿದೆ. ಡಬಲ್ ಚೋಲ್ ಬೆಲೆಯೂ 550 ರೂ.ಗಳಷ್ಟಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಈಗ ನಾಯಕತ್ವ ಬದಲಾವಣೆ ವಿಚಾರ ಸದ್ದು ಮಾಡುತ್ತಿದೆ. ಇದರ ನಡುವೆ ಯುಗಾದಿ ನಡುವೆ ರಾಜ್ಯದಲ್ಲಿ ಸಿಎಂ ಬದಲಾವಣೆಯಾಗಬಹುದೇ ಎಂಬ ಪ್ರಶ್ನೆಗೆ ಕೋಡಿ ಮಠದ ಶ್ರೀಗಳು ಶಾಕಿಂಗ್ ಭವಿಷ್ಯ ನುಡಿದಿದ್ದಾರೆ. ಈ ಮೊದಲು ಸಂಕ್ರಾಂತಿ ಬಳಿಕ ಕ್ರಾಂತಿಯಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಹೈಕಮಾಂಡ್ ಯಾಕೋ ನಾಯಕತ್ವ ಬದಲಾವಣೆ ವಿಚಾರದಲ್ಲಿ ಇದುವರೆಗೆ ಯಾವುದೇ ನಿರ್ಧಾರ ತೆಗೆದುಕೊಳ್ಳಲು ತಯಾರಾಗಿಲ್ಲ. ಈಗಲೂ ಡಿಕೆ ಶಿವಕುಮಾರ್ ಮತ್ತು ಸಿಎಂ ಸಿದ್ದರಾಮಯ್ಯನವರನ್ನು ಕರೆದು ಮಾತುಕತೆ ನಡೆಸಲು ಮನಸ್ಸು ಮಾಡುತ್ತಿಲ್ಲ.
ಜೈಪುರ: ರೀಲ್ಸ್ ಗಾಗಿ ಪುಟಾಣಿ ಬಾಲಕನಿಗೆ ಸಿಗರೇಟು ಮತ್ತು ಬಿಯರ್ ಕೊಟ್ಟ ಯುವಕನ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಭಾರೀ ಆಕ್ರೋಶ ವ್ಯಕ್ತವಾಗಿದೆ. ಇತ್ತೀಚೆಗಿನ ದಿನಗಳಲ್ಲಿ ಜನ ರೀಲ್ಸ್ ಗಾಗಿ ಏನೇನೋ ಸರ್ಕಸ್ ಮಾಡುತ್ತಾರೆ. ಆದರೆ ಈ ಯುವಕ ಮಾಡಿರುವುದು ಮಾತ್ರ ಅಕ್ಷಮ್ಯ ಅಪರಾಧ. ಚಿಕ್ಕಮಕ್ಕಳಿಗೆ ಇಂತಹ ಪಾಠ ಕಲಿಸಿದರೆ ಅವರ ಭವಿಷ್ಯ ಏನಾಗಬಹುದು ಎಂಬ ಯೋಚನೆಯೂ ಇಲ್ಲದೇ ಈ ಯುವಕ ನಡೆದುಕೊಂಡಿದ್ದಾನೆ. ಈ ಘಟನೆ ರಾಜಸ್ಥಾನದಲ್ಲಿ ನಡೆದಿದೆ ಎನ್ನಲಾಗಿದೆ. ಓರ್ವ ಯುವಕ ಬೈಕ್ ಮೇಲೆ ಕೂತುಕೊಂಡು ಒಂದು ಕೈಯಲ್ಲಿ ಸಿಗರೇಟು ಇನ್ನೊಂದು ಕೈಯಲ್ಲಿ ಬಿಯರ್ ಬಾಟಲಿ ಹಿಡಿದುಕೊಂಡಿದ್ದಾನೆ.
ಬೆಂಗಳೂರು: ಇಂದು ಸಂಜೆ ಕೆಎಸ್ಆರ್ ಟಿಸಿ ನೌಕರರು ನಡೆಸಲು ಉದ್ದೇಶಿಸಿರುವ ಬೆಂಗಳೂರು ಚಲೋ ಪ್ರತಿಭಟನೆಯನ್ನು ತಡೆಯಲು ಸರ್ಕಾರ ಪ್ರಯತ್ನಿಸಿದರೂ ಪ್ರಯೋಜನವಾಗಿಲ್ಲ. ಕೆಎಸ್ಆರ್ ಟಿಸಿ ನೌಕರರು 38 ತಿಂಗಳ ಹಿಂಬಾಕಿಗೆ ಬೇಡಿಕೆಯಿಟ್ಟಿದ್ದರು. ನೌಕರರು ಮುಷ್ಕರಕ್ಕೆ ಕರೆ ನೀಡುತ್ತಿದ್ದಂತೇ ರಾಜ್ಯ ಸರ್ಕಾರ 26 ತಿಂಗಳ ಹಿಂಬಾಕಿ ಪಾವತಿ ಮಾಡಿ ಸದ್ಯಕ್ಕೆ ಉರಿಯುವ ಬೆಂಕಿ ನಂದಿಸುವ ಪ್ರಯತ್ನ ಮಾಡಿದೆ. ಆದರೆ ಸರ್ಕಾರದ ಪ್ರಯತ್ನ ಫಲಕೊಟ್ಟಂತೆ ಕಾಣುತ್ತಿಲ್ಲ. ಸರ್ಕಾರ ಹಿಂಬಾಕಿ ಪಾವತಿ ಮಾಡಿದರೂ ಕೆಎಸ್ಆರ್ ಟಿಸಿ ನೌಕರರು ಇಂದು ಸಂಜೆ ಬೆಂಗಳೂರು ಚಲೋ ಮುಂದುವರಿಸಲು ತೀರ್ಮಾನಿಸಿದ್ದಾರೆ.
ಬೆಂಗಳೂರು: ಬೆಳಗಿನ ತಿಂಡಿಗೆ ಏನು ಮಾಡುವುದು ಎಂದರೆ ಸುಲಭವಾಗಿ ಚಿತ್ರಾನ್ನ ಬಿಟ್ಟರೆ ನಮಗೆ ಹೊಳೆಯುವುದು ಅವಲಕ್ಕಿ ಉಪ್ಪಿಟ್ಟು. ಆದರೆ ಅವಲಕ್ಕಿ ಹೇಗೆ ಪ್ಯಾಕ್ ಮಾಡ್ತಾರೆ ಎಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಈ ವಿಡಿಯೋ ನೋಡಿದರೆ ನೀವು ಗಾಬರಿಯಾಗೋದು ಗ್ಯಾರಂಟಿ. ಇತ್ತೀಚೆಗಿನ ದಿನಗಳಲ್ಲಿ ಪ್ಯಾಕೆಟ್ ನಲ್ಲಿ ಸೀಲ್ ಆಗಿ ಬರುವ ಆಹಾರ ವಸ್ತುಗಳು ತಕ್ಕಮಟ್ಟಿಗೆ ಸೇಫ್ ಎಂದು ನಾವು ಅಂದುಕೊಳ್ಳುತ್ತೇವೆ. ಆದರೆ ಈ ವಿಡಿಯೋ ನೋಡಿದರೆ ಅದು ಸುಳ್ಳೆನಿಸುತ್ತದೆ. ಫ್ಯಾಕ್ಟರಿಯೊಂದರಲ್ಲಿ ಅವಲಕ್ಕಿ ಪ್ಯಾಕ್ ಮಾಡುವ ವಿಡಿಯೋವೊಂದು ನಿಮಗೆ ಶಾಕ್ ಉಂಟು ಮಾಡಬಹುದು.
ಬೆಂಗಳೂರು: ಡಿಕೆ ಶಿವಕುಮಾರ್ ಬೆದರಿಕೆ ಎಲ್ಲಾ ನಮ್ಮ ಜೊತೆ ಬೇಡ. ಅವರ ಗೊಡ್ಡು ಬೆದರಿಕೆಗೆಲ್ಲಾ ಹೆದರುವವರಲ್ಲ ನಾವು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ಬೆಂಗಳೂರಿನ ಕಸವನ್ನು ನಿಯಮಬಾಹಿರವಾಗಿ ದೊಡ್ಡಬಳ್ಳಾಪುರಕ್ಕೆ ಸಾಗಿಸಲಾಗುತ್ತಿದೆ ಎಂದು ಬಿಜೆಪಿ ಅಡ್ಡಿಪಡಿಸುತ್ತಿರುವುದಕ್ಕೆ ಡಿಕೆ ಶಿವಕುಮಾರ್ ಗರಂ ಆಗಿ ಗರಂ ಆಗಿ ಬಿಜೆಪಿ ನಾಯಕರ ಮನೆ ಮುಂದೆಯೇ ಕಸ ಸುರಿಯುತ್ತೇವೆ ಎಂದು ಎಚ್ಚರಿಕೆ ನೀಡಿದ್ದರು. ಇದಕ್ಕೆ ಬಿಜೆಪಿ ನಾಯಕ ವಿಜಯೇಂದ್ರ ತಿರುಗೇಟು ನೀಡಿದ್ದಾರೆ. ‘ಉಪ ಮುಖ್ಯಮಂತ್ರಿಗಳ ಗೊಡ್ಡು ಬೆದರಿಕೆಗೆ ಬಿಜೆಪಿ ಬಗ್ಗುವುದಿಲ್ಲ.
ಮುಂಬೈ: ಟಿ20 ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ಸೂಪರ್ 8 ಕ್ಕೆ ಈಗಾಗಲೇ ಲಗ್ಗೆಯಿಟ್ಟಿದೆ. ಸೂಪರ್ 8 ಹಂತದ ಟೀಂ ಇಂಡಿಯಾ ಪಂದ್ಯಗಳ ವೇಳಾಪಟ್ಟಿ, ಯಾವ ತಂಡಗಳು ಎದುರಾಳಿ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ನಾಲ್ಕು ಗುಂಪುಗಳ ಅಗ್ರ ಎರಡು ತಂಡಗಳು ಸೂಪರ್ 8 ಕ್ಕೆ ಅರ್ಹತೆ ಪಡೆಯುತ್ತದೆ. ಅದರಂತೆ ಎ ಗುಂಪಿನ ಅಗ್ರಸ್ಥಾನಿ ಟೀಂ ಇಂಡಿಯಾ ಈಗಾಗಲೇ ಸೂಪರ್ 8 ಕ್ಕೆ ಅರ್ಹತೆ ಪಡೆದಿತ್ತು. ಇದೀಗ ಸೂಪರ್ 8 ಹಂತದಲ್ಲಿ ಎಲ್ಲಾ ತಂಡಗಳು ಮೂರು ಪಂದ್ಯಗಳನ್ನು ಆಡಬೇಕಾಗುತ್ತದೆ. ಟೀಂ ಇಂಡಿಯಾಗೆ ಮೊದಲ ಪಂದ್ಯ ಯಾವಾಗ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ಬೆಂಗಳೂರು: ರಾಜ್ಯದ ಹವಾಮಾನದಲ್ಲಿ ನಿನ್ನೆಯಿಂದ ಕೊಂಚ ಬದಲಾವಣೆ ಗಮನಿಸಿರಬಹುದು. ಇದೀಗ ಕೇರಳಕ್ಕೆ ಮಳೆಯ ನಿರೀಕ್ಷೆಯಿದ್ದು ಕರ್ನಾಟಕದಲ್ಲಿ ಮಳೆಯಿದೆಯಾ ಇಲ್ಲಿದೆ ಇಂದಿನ ಹವಾಮಾನ ವರದಿ. ರಾಜ್ಯದಲ್ಲಿ ನಿನ್ನೆ ಬೆಂಗಳೂರು, ಕರಾವಳಿ ಜಿಲ್ಲೆಗಳಲ್ಲಿ ಭಾಗಶಃ ಮೋಡಕವಿದ ವಾತಾವರಣ ಕಂಡುಬಂದಿತ್ತು. ಇಂದೂ ಕೂಡಾ ಬೆಳಗಿನ ವೇಳೆ ಚಳಿ ಕಂಡುಬಂದಿದ್ದು ನಿನ್ನೆಗೆ ಹೋಲಿಸಿದರೆ ಬಿಸಿಲಿನ ಝಳ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಕೇರಳದಲ್ಲಿ ನಾಳೆ ಮತ್ತು ನಾಡಿದ್ದು ಮಳೆಯ ಸಾಧ್ಯತೆಯಿದೆ ಎನ್ನಲಾಗಿದೆ. ಮೊನ್ನೆಯಿಂದಲೇ ಬೆಳಗ್ಗಿನ ಹೊತ್ತು ಮೋಡ ಕಂಡುಬರುತ್ತಿದೆ.
ಗುರುವಾರ ಇಂದು ಗುರು ನಾಮಸ್ಮರಣೆ ಮಾಡಿ. ಜೀವನದಲ್ಲಿ ಅಡೆತಡೆಗಳಿಂದ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದರೆ ಇಂದು ತಪ್ಪದೇ ಗುರು ಪಾದುಕಾ ಸ್ತೋತ್ರವನ್ನು ಓದಿ. ಕನ್ನಡದಲ್ಲಿ ಇಲ್ಲಿದೆ.ಅನಂತಸಂಸಾರ-ಸಮುದ್ರತಾರ-ನೌಕಾಯಿತಾಭ್ಯಾಂ ಗುರುಭಕ್ತಿದಾಭ್ಯಾಮ್ ।ವೈರಾಗ್ಯಸಾಮ್ರಾಜ್ಯದ-ಪೂಜನಾಭ್ಯಾಂನಮೋ ನಮಃ ಶ್ರೀಗುರುಪಾದುಕಾಭ್ಯಾಮ್ ॥ 1 ॥ ಕವಿತ್ವವಾರಾಶಿ-ನಿಶಾಕರಾಭ್ಯಾಂದೌರ್ಭಾಗ್ಯ-ದಾವಾಂಬುದ-ಮಾಲಿಕಾಭ್ಯಾಮ್ ।ದೂರೀಕೃತಾನಮ್ರ-ವಿಪತ್ತಿತಾಭ್ಯಾಂನಮೋ ನಮಃ ಶ್ರೀಗುರುಪಾದುಕಾಭ್ಯಾಮ್ ॥ 2 ॥ ನತಾ ಯಯೋಃ ಶ್ರೀಪತಿತಾಂ ಸಮೀಯುಃಕದಾಚಿದಪ್ಯಾಶು ದರಿದ್ರವರ್ಯಾಃ ।ಮೂಕಾಶ್ಚ ವಾಚಸ್ಪತಿತಾಂ ಹಿ ತಾಭ್ಯಾಂನಮೋ ನಮಃ ಶ್ರೀಗುರುಪಾದುಕಾಭ್ಯಾಮ್ ॥ 3 ॥ ನಾಲೀಕನೀಕಾಶ-ಪದಾಹೃತಾಭ್ಯಾಂನಾನಾವಿಮೋಹಾದಿ-ನಿವಾರಿಕಾಭ್ಯಾಮ್ ।ನಮಜ್ಜನಾಭೀಷ್ಟ-ತತಿಪ್ರದಾಭ್ಯಾಂನಮೋ ನಮಃ ಶ್ರೀಗುರುಪಾದುಕಾಭ್ಯಾಮ್ ॥ 4 ॥
ಅಹಮದಾಬಾದ್: ಭಾರತ ಹಾಗೂ ನೆದರ್ಲ್ಯಾಂಡ್ ತಂಡಗಳ ನಡುವೆ ಸಿ ಗುಂಪಿನ ಕೊನೆಯ ಲೀಗ್ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಭಾರತ ತಂಡದ ಸ್ಫೋಟಕ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ ಅನಗತ್ಯ ದಾಖಲೆಯೊಂದನ್ನು ತಮ್ಮ ಹೆಸರಿಗೆ ಸೇರಿಸಿಕೊಂಡಿದ್ದಾರೆ. ವಿಶ್ವನ ನಂಬರ್ ಒನ್ ಬ್ಯಾಟರ್ ಅಭಿಷೇಕ್ ಶರ್ಮಾ ಅವರು, ಟೂರ್ನಿಯಲ್ಲಿ ಲೀಗ್ ಹಂತದ 4 ಪಂದ್ಯಗಳ ಪೈಕಿ ಮೂರು ಪಂದ್ಯಗಳಲ್ಲಿ ಬ್ಯಾಟಿಂಗ್ ಮಾಡಿದ್ದಾರೆ. ಸ್ಫೋಟಕ ಆಟಕ್ಕೆ ಹೆಸರುವಾಸಿಯಾಗಿರುವ ಅವರು, ಆಡಿರುವ ಮೂರು ಪಂದ್ಯಗಳಿಂದ ರನ್ ಖಾತೆಯನ್ನೇ ತೆರೆದಿಲ್ಲ. ಅಮೆರಿಕ ವಿರುದ್ಧ (0), ಪಾಕಿಸ್ತಾನ ವಿರುದ್ಧ (0) ಹಾಗೂ ಇಂದಿನ ಪಂದ್ಯದಲ್ಲಿ ನೆದರ್ಲ್ಯಾಂಡ್ ವಿರುದ್ಧವೂ ಖಾತೆ ತೆರೆಯದೆ ಪೆವಿಲಿಯನ್ ಸೇರಿಕೊಂಡಿದ್ದಾರೆ. ಇಂದಿನ ಪಂದ್ಯದಲ್ಲಿ ಶೂನ್ಯಕ್ಕೆ ಔಟ್ ಆಗುವ ಮೂಲಕ ಅಭಿಷೇಕ್ ಶರ್ಮಾ ಅವರು, ಟಿ20 ವಿಶ್ವಕಪ್ನಲ್ಲಿ ಸತತವಾಗಿ ಅತೀ ಹೆಚ್ಚು ಬಾರಿ ಶೂನ್ಯ ಸುತ್ತಿದ ಆರಂಭಿಕ ಬ್ಯಾಟರ್ ಎಂಬ ಅನಗತ್ಯ ದಾಖಲೆಗೆ ಒಳಗಾದರು ಹಾಗೂ ಈ ಅನಗತ್ಯ ದಾಖಲೆ ಮಾಡಿದ ವಿಶ್ವದ 4ನೇ ಆಟಗಾರ ಎನಿಸಿಕೊಂಡರು.
ಢಾಕಾ: ಬಾಂಗ್ಲಾದೇಶ ರಾಷ್ಟ್ರೀಯವಾದಿ ಪಕ್ಷವು(ಬಿಎನ್ಪಿ) ಅಧಿಕಾರಕ್ಕೆ ಬಂದು ಪಕ್ಷದ ಅಧ್ಯಕ್ಷ ತಾರಿಖ್ ರೆಹಮಾನ್ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದರು. ಹಸೀನಾ ಅವರು ದೇಶಬಿಟ್ಟ ಬಳಿಕ ನಡೆದ ಮೊದಲ ಚುನಾವಣೆಯಲ್ಲಿ ಸಂಸತ್ತಿನ 299 ಕ್ಷೇತ್ರಗಳ ಪೈಕಿ ಬಿಎನ್ಪಿ 212 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.ಫೆಬ್ರುವರಿ 12ರಂದು ಬಾಂಗ್ಲಾದೇಶದಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯೂ ದೇಶದ ರಾಜಕೀಯ ಚಿತ್ರಣವನ್ನೇ ಬದಲಿಸಿತು. ಈ ನಡುವೆ ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಂಸದರ ಪೈಕಿ ಏಕೈಕ ಹಿಂದೂ ನಿತಾಯಿ ರಾಯ್ ಚೌಧುರಿ. ಬಿಎನ್ಪಿಯ ಉಪಾಧ್ಯಕ್ಷರಾಗಿರುವ ಚೌಧರಿ, ಮಗುರಾ–2 ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ.1949ರ ಜನವರಿ 7ರಂದು ಬಾಂಗ್ಲಾದ ಮಗುರಾ ಜಿಲ್ಲೆಯ ಹಟಬಾರಿಯಾ ಎಂಬ ಗ್ರಾಮದಲ್ಲಿ ಜನಿಸಿದ ಚೌಧುರಿ, ಅಲೋಕ್ಡಿಯಾ ಪುಖುರಿಯಾ ಪ್ರೌಢಶಾಲೆಯಲ್ಲಿ ಶಾಲಾ ಶಿಕ್ಷಣ ಮುಗಿಸಿದ್ದರು. ಬಳಿಕ, ಮಗುರಾದ ಸರ್ಕಾರಿ ಕಾಲೇಜಿನಲ್ಲಿ ಪದವಿ ಪಡೆದಿದ್ದರು.
ಕೊಲಂಬೊ: ಪಾಕಿಸ್ತಾನ ತಂಡವು ಟಿ20 ವಿಶ್ವಕಪ್ ಟೂರ್ನಿಯಲ್ಲಿ ಎಂಟನೇ ತಂಡವಾಗಿ ಸೂಪರ್ ಎಂಟರ ಘಟ್ಟಕ್ಕೆ ಲಗ್ಗೆ ಹಾಕಿದೆ. ಬುಧವಾರ ನಡೆದ ಗುಂಪು ಹಂತದ ಕೊನೆಯ ಪಂದ್ಯದಲ್ಲಿ ನಮೀಬಿಯಾ ತಂಡವನ್ನು ಮಣಿಸಿ ಮುಂದಿನ ಸುತ್ತು ಪ್ರವೇಶಿಸಿದೆ.ಸಾಹಿಬ್ಝಾದ ಫರ್ಹಾನ್ ಅವರ ಶತಕ ಹಾಗೂ ಉಸ್ಮಾನ್ ತಾರಿಖ್ ಮತ್ತು ಶದಾಬ್ ಖಾನ್ ಅವರ ಸ್ಪಿನ್ ಮೋಡಿಯ ಸಹಾಯದಿಂದ ಪಾಕಿಸ್ತಾನ ತಂಡ, ನಮೀಬಿಯಾ ತಂಡವನ್ನು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ 102 ರನ್ಗಳಿಂದ ಮಣಿಸಿತು. ಸಲ್ಮಾನ್ ಅಲಿ ಆಘಾ ನಾಯಕತ್ವದ ಪಾಕ್ ತಂಡದ ಸೋಲನ್ನು ಬಯಸುತ್ತಿದ್ದ ಯುಎಸ್ಎ ತಂಡ ಅಧಿಕೃತವಾಗಿ ಚುಟುಕು ವಿಶ್ವಕಪ್ ಟೂರ್ನಿಯಿಂದ ಹೊರ ನಡೆಯಿತು. ನಮೀಬಿಯಾ ತಂಡ ಒಂದೂ ಗೆಲುವು ಕಾಣದೆ ಈ ಟೂರ್ನಿಯಲ್ಲಿನ ತನ್ನ ಅಭಿಯಾನವನ್ನು ಮುಗಿಸಿತು.
ಮುಂಬೈ: ಬಾಲಿವುಡ್ನ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರ ತಂದೆ, ಹಿಂದಿ ಸಿನಿಮಾ ದಂತಕಥೆ ಸಲೀಮ್ ಖಾನ್ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.90 ವರ್ಷದ ಸಲೀಮ್ ಖಾನ್ ಅವರಿಗೆ ಮಂಗಳವಾರ ಸಣ್ಣ ಪ್ರಮಾಣದ ಮಿದುಳಿನ ರಕ್ತಸ್ರಾವದಿಂದ ಬಳಲುತ್ತಿದ್ದು, ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆಗೆ ಒಳಗಾಗಿದ್ದಾರೆ.ಪ್ರಸ್ತುತ ಸಲೀಂ ಖಾನ್ ಅವರಿಗೆ ಪ್ರಸ್ತುತ ವೆಂಟಿಲೇಟರ್ನಲ್ಲಿ ಚಿಕಿತ್ಸೆಗೊಳಪಡಿಸಲಾಗಿದೆ. ಅವರು ಮಿದುಳಿನ ರಕ್ತಸ್ರಾವದಿಂದ ಬಳಲುತ್ತಿದ್ದು ತೀವ್ರ ನಿಗಾ ಘಟಕದಲ್ಲಿ ನಿಕಟ ವೀಕ್ಷಣೆಯಲ್ಲಿದ್ದಾರೆ.ಸಲೀಂ ಖಾನ್ ಅವರಿಗೆ ಸಣ್ಣ ಪ್ರಮಾಣದ ಮಿದುಳಿನ ರಕ್ತಸ್ರಾವವಿತ್ತು. ಬೆಳಿಗ್ಗೆ ಡಿಎಸ್ಎ ಎಂಬ ಶಸ್ತ್ರಚಿಕಿತ್ಸೆ ಮಾಡಲಾಯಿತು. ಅವರು ಇನ್ನೂ ವೆಂಟಿಲೇಟರ್ನಲ್ಲಿದ್ದಾರೆ.
ಅಹಮದಾಬಾದ್: ಹ್ಯಾಟ್ರಿಕ್ ಗೆಲುವು ಸಾಧಿಸಿರುವ ಭಾರತ ಕ್ರಿಕೆಟ್ ತಂಡವು ಟಿ20 ವಿಶ್ವಕಪ್ ಟೂರ್ನಿಯಲ್ಲಿ ಈಗಾಗಲೇ ಸೂಪರ್ ಎಂಟರ ಘಟ್ಟ ಪ್ರವೇಶಿಸಿದೆ. ಆದರೆ, ಗುಂಪು ಹಂತದ ಕೊನೆಯ ಪಂದ್ಯದಲ್ಲಿ ಇದು ನೆದರ್ಲೆಂಡ್ಸ್ ತಂಡವನ್ನು ಎದುರಿಸಲಿದೆ.ಇಂದಿನ ಪಂದ್ಯಕ್ಕೆ ಹೆಚ್ಚಿನ ಮಹತ್ವವಿಲ್ಲ. ನೆದರ್ಲೆಂಡ್ಸ್ ತಂಡ ಈಗಾಗಲೇ ಟೂರ್ನಿಯಿಂದ ಹೊರಬಿದ್ದಿದೆ. ಭಾರತ ತಂಡವು ಈ ಪಂದ್ಯವನ್ನು ಗೆದ್ದು ಅಜೇಯವಾಗಿ ಸೂಪರ್ ಎಂಟರ ಘಟ್ಟ ಪ್ರವೇಶಿಸುವತ್ತ ಗಮನ ಹರಿಸಿದೆ.ಇಂದು ಟಾಸ್ ಗೆದ್ದ ನಾಯಕ ಸೂರ್ಯಕುಮಾರ್ ಯಾದವ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ, ರನ್ ಮಳೆಯಾಗುವ ನಿರೀಕ್ಷೆಯಿದೆ. ಭಾರತದ ಆರಂಭಿಕ ಆಟಗಾರರಾದ ಇಶಾನ್ ಕಿಶನ್, ಅಭಿಷೇಕ್ ಶರ್ಮಾ ಮೇಲೆ ಹೆಚ್ಚಿನ ನಿರೀಕ್ಷೆಯಿದೆ.
ಇಂದೋರ್: 24 ವರ್ಷದ ಎಂಬಿಎ ವಿದ್ಯಾರ್ಥಿನಿ ಸೆಕ್ಸ್ಗೆ ಸಹಕರಿಸಲಿಲ್ಲವೆಂದು ಬಾಯ್ಫ್ರೆಂಡ್ ಆಕೆಯನ್ನು ಹತ್ಯೆ ಮಾಡಿದ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿತು. ಇದೀಗ ಪ್ರಕರಣ ಸಂಬಂಧ ಆರೋಪಿ ಅರೆಸ್ಟ್ ಆಗಿದ್ದಾನೆ. ಈ ಸಂದರ್ಭದಲ್ಲಿ ಮಾಧ್ಯಮದವರು ಆತನನ್ನು ಪ್ರಶ್ನಿಸಿದಾಗ ಯಾವುದೇ ಪಾಪ ಪ್ರಜ್ಞೆಯಿಲ್ಲದೆ ಆತ ನಡೆದುಕೊಂಡಿದ್ದಾನೆ. ಕೊಲೆಯ ಹಿಂದಿನ ಅವನ ಉದ್ದೇಶದ ಬಗ್ಗೆ ಮಾಧ್ಯಮದವರು ಪ್ರಶ್ನಿಸಿದಾಗ ಆತ "ಏನೂ ಆಗಿಲ್ಲ, ಬಿಟ್ಟುಬಿಡಿ" ಎಂದು ಪ್ರಕರಣದ ಬಗ್ಗೆ ಯಾವುದೇ ಪಾಪಪ್ರಜ್ಞೆಯಿಲ್ಲದಂತ್ತೆ ನಡೆದುಕೊಂಡಿದ್ದಾನೆ. "ಮಾಡಿದ್ದು ಮುಗಿಯಿತು. ನನ್ನ ಉತ್ತರವನ್ನು ತಿಳಿದ ನಂತರ ನೀವು ಈಗ ಏನು ಮಾಡಬಹುದು?" ಇನ್ನೂ ಕೊಲೆ ಬಬಗ್ಗೆ
ರಾಜ್ಯ ರಾಜಧಾನಿಯಲ್ಲಿ ಚಳಿಯ ತೀವ್ರತೆ ಕಡಿಮೆಯಾಗುತ್ತಿದ್ದ ಹಾಗೇ ಬಿಸಿಲ ಬೇಗೆ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಲೇ ಇದೆ. ಇನ್ನೂ ಇಂತಹ ಸಮಯದಲ್ಲಿ ನಮ್ಮ ದೇಹವನ್ನು ಆರೋಗ್ಯದಲ್ಲಿಡಲು ಆದಷ್ಟು ಮುತುವರ್ಜಿ ವಹಿಸಬೇಕು. ಬಿಸಿಲಿನ ಬೇಗೆಯಿಂದ ತಪ್ಪಿಸಿಕೊಳ್ಳಲು ಇಲ್ಲಿವೆ ಕೆಲವು ಉಪಯುಕ್ತ ಸಲಹೆಗಳು ಇಲ್ಲಿದೆ. ಹೈಡ್ರೇಶನ್ (ನೀರಿನಾಂಶ) ಅತಿ ಮುಖ್ಯಬಿಸಿಲಿನಲ್ಲಿ ದೇಹದ ನೀರಿನಾಂಶ ಬೇಗನೆ ಕಡಿಮೆಯಾಗುತ್ತದೆ . ಇದನ್ನು ತಡೆಗಟ್ಟಲು: ಹೆಚ್ಚು ನೀರು ಕುಡಿಯಿರಿ: ಬಾಯಾರಿಕೆ ಆಗದಿದ್ದರೂ ದಿನವಿಡೀ ಅಲ್ಪ ಪ್ರಮಾಣದಲ್ಲಿ ನೀರು ಕುಡಿಯುತ್ತಿರಿ.
ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ಸ್ಥಳಾಂತರಗೊಂಡ ದಕ್ಷಿಣ ಆಫ್ರಿಕಾದ ಚೀತಾ ಗಾಮಿನಿ ಮೂರು ಮರಿಗಳಿಗೆ ಜನ್ಮ ನೀಡಿದ್ದು, ಭಾರತದ ಚಿರತೆಯ ಸಂಖ್ಯೆ 38ಕ್ಕೆ ಏರಿಕೆಯಾಗಿದೆ. ಕುನೋ ರಾಷ್ಟ್ರೀಯ ಉದ್ಯಾನವನದ ಹುಲ್ಲುಗಾವಲುಗಳಲ್ಲಿ, ಮೃದುವಾದ ಆರಂಭವು ಪ್ರಬಲ ಸಂದೇಶವನ್ನು ನೀಡಿದೆ. ದಕ್ಷಿಣ ಆಫ್ರಿಕಾದ ಚೀತಾ "ಗಾಮಿನಿ" ಈಗ ಎರಡನೇ ಬಾರಿಗೆ ತಾಯಿಯಾಗಿದೆ. ಮರುಪರಿಚಯ ಕಾರ್ಯಕ್ರಮದ ಅಡಿಯಲ್ಲಿ ಭಾರತದಲ್ಲಿ ಜನಿಸಿದ ಒಂಬತ್ತನೇ ಯಶಸ್ವಿ ಚೀತಾ ಇದಾಗಿದೆ. ತಾಯಿ ಚೀತಾ
ರೋಹ್ಟಕ್: ಜಜ್ಜರ್ ಜಿಲ್ಲೆಯ ಬಹದ್ದೂರ್ಘರ್ ಬಳಿ 27 ವರ್ಷದ ಬ್ಯಾಂಕ್ ಉದ್ಯೋಗಿಯೊಬ್ಬಳ ಕೊಲೆ ಪ್ರಕರಣವನ್ನು 18 ಗಂಟೆಗಳಲ್ಲಿ ಭೇದಿಸಲಾಗಿದ್ದು, ಪೊಲೀಸರು ಪ್ರಮುಖ ಆರೋಪಿ ಹಿಸಾರ್ನ ಚಾರ್ಟರ್ಡ್ ಅಕೌಂಟೆಂಟ್ ಪತಿಯನ್ನು ಬಂಧಿಸಿದ್ದಾರೆ. ಆರೋಪಿಯು ತನ್ನ ಪತ್ನಿಯ ಬಗ್ಗೆ ಪದೇ ಪದೇ ಅನುಮಾನಗೊಂಡು ಕೊಂದು ನಂತರ ಅದನ್ನು ದರೋಡೆ-ಕೊಲೆ ಎಂದು ನಂಬಿಸಲು ಯತ್ನಿಸಿದ್ದಾನೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಸಂತ್ರಸ್ತೆ, ಮಹಾಕ್, ಗುರ್ಗಾಂವ್ನ ಎಚ್ಡಿಎಫ್ಸಿ ಬ್ಯಾಂಕ್ನಲ್ಲಿ ಕೆಲಸ ಮಾಡುತ್ತಿದ್ದರು. ಅವರು ಚಾರ್ಟರ್ಡ್ ಅಕೌಂಟೆಂಟ್ ಮತ್ತು ಹಿಸಾರ್ ಸೆಕ್ಟರ್ 14 ರ ನಿವಾಸಿ ಅನ್ಶುಲ್ ಧವನ್ ಅವರನ್ನು ಸೆಪ್ಟೆಂಬರ್ 25, 2025 ರಂದು ಮದುವೆಯಾದರು.
ಬೆಂಗಳೂರು: ಇಲ್ಲಿನ ತಮ್ಮ ಅಪಾರ್ಟ್ಮೆಂಟ್ನಲ್ಲಿ ಪತ್ನಿಯನ್ನು ಕತ್ತು ಹಿಸುಕಿ ಕೊಂದ ಆರೋಪದ ಮೇಲೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ದ 65 ವರ್ಷದ ನಿವೃತ್ತ ಉದ್ಯೋಗಿಯನ್ನು ಬುಧವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಗ್ಗೆ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.ನಾಗೇಶ್ವರ್ ರಾವ್ ಎಂದು ಗುರುತಿಸಲಾದ ಆರೋಪಿಯು ಬೊಮ್ಮೇಹಳ್ಳಿ ಪ್ರದೇಶದಲ್ಲಿನ ಅವರ ನಿವಾಸದಲ್ಲಿ ಟವೆಲ್ ಬಳಸಿ ಪತ್ನಿ ಸಂದ್ಯಾ ಶ್ರೀ ಅವರ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ರಾವ್ ಅವರನ್ನು ಸ್ಥಳದಿಂದ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರು: ರಶ್ಮಿಕಾ ಮಂದಣ್ಣ ಅವರು ಮದುವೆಗೆ ಆಹ್ವಾನಿಸಿದ್ದರೆ ಹೋಗುತ್ತಿದೆ. ಅವರು ನಮಗೆ ಆಹ್ವಾನ ನೀಡಲ್ಲ ಎಂಬ ವಿಚಾರ ಎಲ್ಲರಿಗೂ ಗೊತ್ತಿರುವುದು. ನನಗೆ ಆಹ್ವಾನ ಬಂದಿಲ್ಲ, ಬಂದಿದ್ರೆ ಹೋಗುತ್ತಿದ್ದೆ ಎಂದು ನಟ ಪ್ರಮೋದ್ ಶೆಟ್ಟಿ ನಗುತ್ತಲೇ ಪ್ರತಿಕ್ರಿಯಿಸಿದರು. ದಾವಣಗೆರೆಯಲ್ಲಿ ಮಾಧ್ಯಮದವರು ರಶ್ಮಿಕಾ ಮದುವೆಗೆ ಆಹ್ವಾನ ಸಿಕ್ಕಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅವರು ಆಹ್ವಾನ ನೀಡಿಲ್ಲ, ಇಲ್ಲದಿದ್ರೆ ಹೋಗುತ್ತಿದ್ದೆ ಎಂದು ನಗುತ್ತಲೇ ಪ್ರತಿಕ್ರಿಯಿಸಿದರು. ಇನ್ನೂ ರಕ್ಷಿತಾ ಶೆಟ್ಟಿ ಅವರು ಎಲ್ಲೂ ಕಾಣಿಸಿಕೊಳ್ಳುತ್ತಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅವರು ಕಥೆಯಲ್ಲಿ
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ವಿಧಾನಸೌಧದ ಒಳಗೆ ಮಾಧ್ಯಮಗಳಿಗೆ ನಿರ್ಬಂಧ ಹೇರಿದ್ದು, ಇದು ಪ್ರಜಾಪ್ರಭುತ್ವ ಮತ್ತು ವಾಕ್ ಸ್ವಾತಂತ್ರ್ಯದ ಮೇಲಿನ ದಾಳಿ ಎಂದು ಶಾಸಕ ಎಸ್.ಆರ್.ವಿಶ್ವನಾಥ್ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.ಅವರು ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಭಾಷಣ ಮಾಡುವಾಗ ಪತ್ರಿಕಾ ರಂಗ ಸಂವಿಧಾನದ ನಾಲ್ಕನೇ ಅಂಗ ಎನ್ನುತ್ತೇವೆ. ಇದನ್ನು ನೋಡಿದರೆ ತುರ್ತು ಪರಿಸ್ಥಿತಿ ಜ್ಞಾಪಕ ಬರುತ್ತಿದೆ. ಅವತ್ತು ಮಾಧ್ಯಮಗಳಿಗೆ ಕಡಿವಾಣ ಹಾಕಿದ್ದರು ಎಂದು ಗಮನ ಸೆಳೆದರು. ನಿಮ್ಮ ಭದ್ರತಾ ಲೋಪ ಸರಿ ಮಾಡಿಕೊಳ್ಳಿ ಎಂದ ಅವರು, ಸರಕಾರವು ಸುತ್ತೋಲೆಯನ್ನು ತಕ್ಷಣ ಹಿಂದಕ್ಕೆ ಪಡೆಯಬೇಕು ಎಂದು ಒತ್ತಾಯಿಸಿದರು.
ಬೆಂಗಳೂರು: ಕಸ ವಿಲೇವಾರಿ ವಿಚಾರದಲ್ಲಿ ಸರ್ಕಾರದ ವಿರುದ್ಧ ಆರೋಪ ಮಾಡಿರುವ ವಿಪಕ್ಷ ನಾಯಕ ಆರ್ ಅಶೋಕ್ ಮತ್ತು ಬಿವೈ ವಿಜಯೇಂದ್ರಗೆ ಮನೆ ಮುಂದೆನೇ ಕಸ ಹಾಕಿಸ್ತೀನಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಾರ್ನಿಂಗ್ ಕೊಟ್ಟಿದ್ದಾರೆ. ಬೆಂಗಳೂರಿನ ಕಸವನ್ನು ನಿಯಮ ಬಾಹಿರವಾಗಿ ದೊಡ್ಡಬಳ್ಳಾಪುರಕ್ಕೆ ಸಾಗಿಸಲಾಗುತ್ತಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಈ ಬಗ್ಗೆ ಇಂದು ಮಾಧ್ಯಮಗಳು ಡಿಸಿಎಂ ಡಿಕೆ ಶಿವಕುಮಾರ್ ಗಮನ ಸೆಳೆದಿವೆ. ಇದಕ್ಕೆ ಉತ್ತರಿಸಿದ ಡಿಕೆಶಿ ವಿಪಕ್ಷ ನಾಯಕರಿಗೆ ಎಚ್ಚರಿಕೆ ಕೊಟ್ಟಿದ್ದಾರೆ. ಎಲ್ಲಾ ಶಾಸಕರೂ ಬ್ಲ್ಯಾಕ್ ಮೇಲ್ ಮಾಡ್ತಿದ್ದಾರೆ. ತಮ್ಮ ಕ್ಷೇತ್ರಕ್ಕೆ ಅನುದಾನ ಬೇಕು ಎಂದು ಆಕ್ಸಿಡೆಂಟ್ ವಿಚಾರ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ.
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ವಿಧಾನಸೌಧದ ಒಳಗೆ ಮಾಧ್ಯಮಗಳಿಗೆ ನಿರ್ಬಂಧ ಹೇರಿದ್ದು, ಇದನ್ನು ಬಿಜೆಪಿ ಬಲವಾಗಿ ಖಂಡಿಸುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.ಅವರು ಇಂದು ಮಾಧ್ಯಮಗಳ ಜೊತೆ ಮಾತನಾಡಿದರು. ರಾಜ್ಯದ ಕಾಂಗ್ರೆಸ್ಸಿನದು ನಾಲಾಯಕ್ ಸರಕಾರ ಎಂದು ಜನರು ಮಾತನಾಡುತ್ತಿದ್ದಾರೆ. ಇದಕ್ಕೆ ಪುಷ್ಟಿ ಕೊಡುವಂತೆ ಮತ್ತೊಂದು ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಆಕ್ಷೇಪಿಸಿದರು. ಇದು ಪ್ರಜಾಪ್ರಭುತ್ವ ವಿರೋಧಿ ನಡೆ ಎಂದು ಟೀಕಿಸಿದರು. ಇಂಥ ತೀರ್ಮಾನಗಳನ್ನು ಯಾಕೆ ತೆಗೆದುಕೊಳ್ಳುತ್ತಾರೆಂದು ನನಗಂತೂ ಅರ್ಥ ಆಗುತ್ತಿಲ್ಲ. ಕಳೆದ ಬೆಳಗಾವಿಯ ಅಧಿವೇಶನದ ಸಂದರ್ಭದಲ್ಲಿ ದ್ವೇಷ ಭಾಷಣ ಸಂಬಂಧ ಕಾಯ್ದೆ ತಂದಿದ್ದರು.
ಬೆಂಗಳೂರು: ಕಸವನ್ನು ಎಲ್ಲಾದರೂ ಒಂದು ಕಡೆ ಹಾಕಲೇ ಬೇಕಾಗುತ್ತದೆ.ಅಲ್ಲೂ ಬೇಡ ಇಲ್ಲೂ ಬೇಡ ಅಂದ್ರೆ, ಆ ಕಸವನ್ನು ಅಶೋಕ್, ವಿಜಯೇಂದ್ರ ಅಥವಾ ಬಿಜೆಪಿ ಕಚೇರಿಗೆ ಹೋಗಬೇಕಾ ಎಂದು ಡಿಸಿಎಂ ಡಿಕೆ ಶಿವಕುಮಾರ್ ಆಕ್ರೋಶ ಹೊರಹಾಕಿದರು. ಎಲ್ಲಾ ಶಾಸಕರು ಅನುದಾನ ಬೇಕೆಂದು ಆಕ್ಸಿಡೆಂಟ್ ವಿಚಾರವನ್ನು ಮುಂದಿಟ್ಟುಕೊಂಡು ಬ್ಲ್ಯಾಕ್ಮೇಲ್ ಮಾಡುತ್ತಿದ್ದಾರೆ. ಗೌರವದಿಂದ ನಡೆದುಕೊಂಡರೆ ಒಳಿತು, ಇಲ್ಲದಿದ್ದರೆ ಎಸ್ಮಾ (ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ) ಅಡಿಯಲ್ಲಿ ಕ್ರಮ ತೆಗೆದುಕೊಳ್ಳಬೇಕಾಗುತ್ತೆ. ಅಶೋಕ್, ವಿಜಯೇಂದ್ರ ಮನೆ ಮುಂದೆನೇ ಕಸ ಹಾಕಿಸಬೇಕಾಗುತ್ತೆ ಅಂತ ಡಿಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದರು.
ಬೆಂಗಳೂರು: ಕರ್ನಾಟಕದಲ್ಲಿ ಮುಖ್ಯಮಂತ್ರಿ ಹುದ್ದೆಗೆ ನಡೆಯುತ್ತಿರುವ ರಾಜಕೀಯ ಜಗಳದ ನಡುವೆಯೇ ರಾಜ್ಯದಲ್ಲಿ ಆಡಳಿತ ಹಿನ್ನಡೆಯಾಗಿದೆ ಎಂದು ಜನತಾದಳ (ಜಾತ್ಯತೀತ) ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಕರ್ನಾಟಕದ ಜನತೆಗೆ ಉತ್ತಮ ಆಡಳಿತ ಬೇಕು, ಆದರೆ ಆಡಳಿತದಲ್ಲಿ ಹಿನ್ನಡೆಯಾಗಿದೆ ಎಂದು ಒತ್ತಿ ಹೇಳಿದರು. "ಕಳೆದ ಲೋಕಸಭಾ ಚುನಾವಣೆಯ ಸಮಯದಲ್ಲಿ ಈ ಮೈತ್ರಿಯನ್ನು ರಚಿಸಲಾಗಿದೆ, ಮತ್ತು ನಾವು ಯಾವುದೇ ಸಮಯದಲ್ಲಿ ಅದರಿಂದ ಹಿಂದೆ ಸರಿಯುವುದಿಲ್ಲ ಎಂದು ನಾವು ಖಚಿತವಾಗಿ ಹೇಳುತ್ತೇವೆ. 2028 ರಲ್ಲಿ ಎನ್ಡಿಎ ಸರ್ಕಾರ ರಚಿಸುತ್ತದೆ ಮತ್ತು ನಾವು 140 ರಿಂದ 150 ಸ್ಥಾನಗಳನ್ನು ಗೆಲ್ಲುತ್ತೇವೆಂದು ವಿಶ್ವಾಸ ವ್ಯಕ್ತಪಡಿಸಿದರು.
ಅಮೃತಸರ: ಪಾನಿಪೂರಿ ಸ್ಟಾಲ್ ಒಂದರಲ್ಲಿ ಪಾನಿಯೊಳಗಿನಿಂದ ಹಾರಿ ಹೋದ ಈ ಜೀವಿಯನ್ನು ನೋಡಿದರೆ ನೀವು ಇನ್ನು ಜೀವನದಲ್ಲಿ ಗೋಲ್ ಗಪ್ಪಾ ಸೇವಿಸಲು ಭಯಪಡ್ತೀರಿ. ಈ ವೈರಲ್ ವಿಡಿಯೋ ನೋಡಿ. ಅಮೃತಸರದ ಪಾನಿಪೂರಿ ಸ್ಟಾಲ್ ನಲ್ಲಿ ಈ ಘಟನೆ ನಡೆದಿದೆ. ಪಾನಿಪೂರಿ ಸೇವಿಸಲು ಹೋದ ವ್ಯಕ್ತಿಯೊಬ್ಬರು ಈ ವಿಡಿಯೋವನ್ನು ಮಾಡಿದ್ದಾರೆ. ಪಾನಿಪೂರಿಗೆ ಬಳಸುತ್ತಿದ್ದ ಪಾನಿಯಲ್ಲಿ ಜೀವಂತ ಇಲಿಯೊಂದು ಸೇರಿಕೊಂಡಿತ್ತು. ಪಾನಿಪೂರಿ ತಿನ್ನಲೆಂದು ಹೋದವರಿಗೆ ಪಾನಿಯೊಳಗಿದ್ದ ಜೀವಂತ ಇಲಿಯನ್ನು ನೋಡಿ ಗಾಬರಿಯಾಗಿತ್ತು. ಇದಕ್ಕಿಂತ ದೊಡ್ಡ ಶಾಕಿಂಗ್ ವಿಚಾರವೆಂದರೆ ಆ ಇಲಿಯನ್ನು ಥಟ್ಟನೆ ಹೊರಗೆ ಹಾಕಿದ ಅಂಗಡಿಯಾತ ಅದೇ ಪಾನಿಯನ್ನು ಚೆನ್ನಾಗಿ ಕಲಸಿ ಮತ್ತೆ ಗ್ರಾಹಕರಿಗೆ ನೀಡುತ್ತಿದ್ದ!
ಜೈಪುರ: ರಾಜಸ್ಥಾನದಲ್ಲಿ ಚಲಿಸುತ್ತಿದ್ದ ಟ್ರಕ್ ಮೇಲೆ ಕೂತಿದ್ದ ವ್ಯಕ್ತಿಗೆ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿದ ಭಯಾನಕ ವಿಡಿಯೋವೊಂದು ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಬೃಹತ್ ಗಾತ್ರದ ಸರಕು ಟ್ರಕ್ ಗಳ ಮೇಲೆ ಹಾಯಾಗಿ ಮಲಗಿಕೊಂಡು ಅಥವಾ ಕುಳಿತುಕೊಂಡು ಸಂಚಾರ ಮಾಡುವವರನ್ನು ನಾವು ಅನೇಕ ಬಾರಿ ನೋಡುತ್ತೇವೆ. ಆದರೆ ಇದು ಎಷ್ಟು ಅಪಾಯಕಾರಿ ಎನ್ನುವುದಕ್ಕೆ ಈ ವಿಡಿಯೋವೇ ಸಾಕ್ಷಿಯಾಗಿದೆ. ರಾಜಸ್ಥಾನದ ಬಿಲ್ವಾರಾದಲ್ಲಿ ಘಟನೆ ನಡೆದಿದೆ. ಬೃಹತ್ ಸರಕು ಸಾಗಣೆ ಟ್ರಕ್ ನ ಮೇಲ್ಛಾವಣಿಯಲ್ಲಿ ಓರ್ವ ವ್ಯಕ್ತಿ ಕೂತಿದ್ದ. ಟ್ರಕ್ ಚಲಿಸುತ್ತಿದ್ದ ಮಾರ್ಗದಲ್ಲಿ ಹೈಟೆನ್ಷನ್ ವಿದ್ಯುತ್ ವೈರ್ ಇತ್ತು. ಮೇಲೆ ಕೂತಿದ್ದ ವ್ಯಕ್ತಿಗೆ ಈ ತಂತಿ ತಗುಲಿದೆ.
ನವದೆಹಲಿ: ಹ್ಯಾಟ್ರಿಕ್ ಗೆಲುವು ಸಾಧಿಸಿದ ಭಾರತ ತಂಡವು ಟಿ20 ವಿಶ್ವಕಪ್ ಟೂರ್ನಿಯಲ್ಲಿ ಈಗಾಗಲೇ ಸೂಪರ್ ಎಂಟರ ಹಂತಕ್ಕೆ ಮುನ್ನಡೆದಿದೆ. ಗುಂಪು ಹಂತದ ಕೊನೆಯ ಪಂದ್ಯದಲ್ಲಿ ಇಂದು ನೆದರ್ಲೆಂಡ್ಸ್ ತಂಡವನ್ನು ಎದುರಿಸಲಿದೆ. ಸೂಪರ್ ಎಂಟರ ಹಂತದ ಚಿತ್ರಣ ಈಗಾಗಲೇ ಗೊತ್ತಾಗಿದೆ. ಮೊದಲ ಗುಂಪಿನಲ್ಲಿ ಭಾರತ, ಜಿಂಬಾಬ್ವೆ, ದಕ್ಷಿಣ ಆಫ್ರಿಕಾ ಮತ್ತು ವೆಸ್ಟ್ ಇಂಡೀಸ್ ತಂಡಗಳು ಸ್ಥಾನ ಪಡೆದಿವೆ.ಮಂಗಳವಾರ ಜಿಂಬಾಬ್ವೆ ಮತ್ತು ಐರ್ಲೆಂಡ್ ನಡುವಿನ 32ನೇ ಪಂದ್ಯ ಮಳೆಯಿಂದ ರದ್ದಾದ ಬಳಿಕ ಜಿಂಬಾಬ್ವೆ ತಂಡವು ಸೂಪರ್ ಎಂಟಕ್ಕೆ ಅರ್ಹತೆ ಪಡೆದಿದೆ. ಇದರೊಂದಿಗೆ ಆಸ್ಟ್ರೇಲಿಯಾ ತಂಡವು ಟಿ20 ವಿಶ್ವಕಪ್ ಪಂದ್ಯಾವಳಿಯಿಂದಲೇ ಹೊರಬಿದ್ದಿದೆ.
ಬೆಂಗಳೂರು: ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ಹೇರಿರುವ ಸರ್ಕಾರದ ಆದೇಶದ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದು ಇದು ಭ್ರಷ್ಟಾಚಾರ ಮುಚ್ಚಿಟ್ಟುಕೊಳ್ಳಲು ಹೊಸ ನಾಟಕ ಎಂದಿದ್ದಾರೆ. ವಿಧಾನಸೌಧದೊಳಗೆ ಮಾಧ್ಯಮಗಳು ಇನ್ನು ಮುಂದೆ ಎಲ್ಲಿ ಬೇಕಾದರೂ ಪ್ರವೇಶಿಸುವಂತಿಲ್ಲ. ನಿಗದಿತ ಸ್ಥಳದಲ್ಲಿ ಮಾತ್ರ ಶಾಸಕರು, ಸಚಿವರ ಸಂದರ್ಶನ, ಪ್ರತಿಕ್ರಿಯೆಗಳನ್ನು ಪಡೆಯಬಹುದಾಗಿದೆ ಎಂದು ಸರ್ಕಾರ ವಿವಾದಿತ ಆದೇಶ ಹೊರಡಿಸಿದೆ. ಇದರ ವಿರುದ್ಧ ಎಲ್ಲಾ ಮಾಧ್ಯಮಗಳೂ ಸಿಡಿದೆದ್ದಿವೆ.ಈ ಬಗ್ಗೆ ಪ್ರತಿಕ್ರಿಯಿಸಿರುವ ಆರ್ ಅಶೋಕ್ ‘ತನ್ನ ವೈಫಲ್ಯಗಳನ್ನ, ಯಡವಟ್ಟುಗಳನ್ನ, ಭ್ರಷ್ಟಾಚಾರವನ್ನ ಮುಚ್ಚಿಟ್ಟುಕೊಳ್ಳುವ ಸಲುವಾಗಿ ಮಾಧ್ಯಮಗಳ ಮೇಲೆ ನಿಯಂತ್ರಣ ಹೇರಲು ಹೊರಟಿರುವ ಕಾಂಗ್ರೆಸ್ ಸರ್ಕಾರ ತನ್ನ ಪ್ರಜಾಪ್ರಭುತ್ವ ವಿರೋಧಿ, ಸರ್ವಾಧಿಕಾರಿ ಧೋರಣೆಯನ್ನು ಮತ್ತೊಮ್ಮೆ ಪ್ರದರ್ಶನ ಮಾಡಿದೆ.
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರು ವಿಚಾರಣೆ ವೇಳೆ ಫುಲ್ ಸೈಲೆಂಟ್ ಆಗಿದ್ದಾರೆಂಬ ಮಾಹಿತಿಯಿದೆ. ಕೊಲೆ ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಭೈರತಿ . ವಿಚಾರಣೆ ವೇಳೆ ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಬೈರತಿ ಫುಲ್ ಸೈಲೆಂಟ್ ಆಗಿರುವುದು ಅಧಿಕಾರಿಗಳಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಇಲ್ಲಿವರೆಗೂ ಇಪ್ಪತ್ತು ಜನ ಆರೋಪಿಗಳು ಬಂಧನವಾಗಿದ್ದಾರೆ. ತನಿಖೆ ವೇಳೆ ಸಿಐಡಿ ಪೊಲೀಸರು
ಮುಖದಲ್ಲಿ ಮೊಡವೆ ಬಂದರೆ ಮುಖವೇ ಅಸಹ್ಯವಾಗಿ ಕಾಣುತ್ತದೆ ಎಂಬ ಚಿಂತೆ ಕಾಡುತ್ತದೆ. ಮುಖದಲ್ಲಿ ಮೊಡವೆ ಕಾಣಬಾರದು ಎಂದರೆ ಇಂಥಾ ಆಹಾರ ಸೇವಿಸಬೇಡಿ. ಬಿಳಿ ಆಹಾರ ವಸ್ತುಗಳುವಿಶೇಷವಾಗಿ ಸಂಸ್ಕರಿತ ಬಿಳಿ ಆಹಾರ ವಸ್ತುಗಳಾದ ಸಕ್ಕರೆ, ಬ್ರೆಡ್, ಕೇಕ್ ಪಾಸ್ತಾದಂತಹ ಆಹಾರ ಸೇವಿಸಬೇಡಿ. ಇದರಿಂದ ರಕ್ತದಲ್ಲಿ ಸಕ್ಕರೆ ಅಂಶ ಇದ್ದಕ್ಕಿದ್ದಂತೆ ಏರಿಕೆಯಾಗುತ್ತದೆ. ಸಹಜವಾಗಿಯೇ ಇನ್ಸುಲಿನ್ ಅಧಿಕ ಉತ್ಪತ್ತಿಯಾಗುತ್ತದೆ. ಇದರಿಂದ ಆಯಿಲ್ ಗ್ರಂಥಿಗಳು ಹೆಚ್ಚು ಜಿಡ್ಡು ಬಿಡುಗಡೆ ಮಾಡುತ್ತವೆ. ಸಹಜವಾಗಿಯೇ ಇದರಿಂದ ಮೊಡವೆ ಹೆಚ್ಚಾಗುತ್ತದೆ.
ಬೆಂಗಳೂರು: ಮೊದಲ ಮಗಳು ಗೌರಿ ಜೊತೆ ತಮ್ಮ ಸಂಬಂಧ ಹೇಗಿದೆ ಎಂಬುದನ್ನು ನಿರ್ದೇಶಕ ಎಸ್ ಮಹೇಂದರ್ ಯೂಟ್ಯೂಬ್ ಸಂದರ್ಶನದಲ್ಲಿ ಬಿಚ್ಚಿಟ್ಟಿದ್ದಾರೆ. ಬಿಯೋಂಡ್ ಲಿಮಿಟ್ಸ್ ಯೂಟ್ಯೂಬ್ ಚಾನೆಲ್ ನಲ್ಲಿ ಖ್ಯಾತ ಸಿನಿ ಪತ್ರಕರ್ತ ಗಣೇಶ್ ಕಾಸರಗೋಡು ಅವರ ಜೊತೆಗಿನ ಸಂದರ್ಶನದಲ್ಲಿ ಎಸ್ ಮಹೇಂದರ್ ತಮ್ಮ ಮೊದಲ ಮಗಳು ಮತ್ತು ಈಗಿನ ಪತ್ನಿ ಜೊತೆಗಿನ ಸಂಬಂಧದ ಬಗ್ಗೆ ಮನದಾಳದ ಮಾತನಾಡಿದ್ದಾರೆ. ‘ನಮ್ಮ ಸಂಬಂಧ ತುಂಬಾ ಚೆನ್ನಾಗಿದೆ. ಅವಳು ಬೇಕೆಂದಾಗಲೆಲ್ಲಾ ಇಲ್ಲಿಗೆ ಬಂದು ಹೋಗುತ್ತಿರುತ್ತಾಳೆ. ಅವಳು ತುಂಬಾ ಸಂಸ್ಕಾರವಂತ ಮಗು.
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತುಇತರೆ ಚಿನ್ನದ ದರ ಯಥಾಸ್ಥಿತಿಯಲ್ಲಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತವಾಗಿ ದಾಖಲೆಯ ಏರಿಕೆ ಕಂಡಿತ್ತು. ಈ ವಾರ ಅದೇ ರೀತಿ ಬೆಲೆ ಏರಿಳಿಕೆಯಾಗುವ ಲಕ್ಷಣವಿದೆ. ಇಂದು ಪರಿಶುದ್ಧ ಚಿನ್ನದ ದರ ಇಂದು ಇಳಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ನಿನ್ನೆ 1,59,310.00 ರೂ.ಗಳಿತ್ತು. ಇಂದೂ 1,56,655.00 ರೂ.ಗಳಷ್ಟಿದೆ.
ಬೆಂಗಳೂರು: ಶಾಸಕರು ವಿದೇಶ ಪ್ರವಾಸ ಹೋಗಿದ್ದು, ಯಾಕೆ ಹೋಗಿದ್ದಾರೋ ನನಗೆ ಗೊತ್ತಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದು ಇದಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಟಾಂಗ್ ಕೊಟ್ಟಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆಯಲ್ಲಿರುವಾಗಲೇ ಬಹುತೇಕ ಸಿದ್ದರಾಮಯ್ಯ ಆಪ್ತ ಬಣದ ಶಾಸಕರು ಆಸ್ಟ್ರೇಲಿಯಾ, ನ್ಯೂಜಿಲೆಂಡ್ ಪ್ರವಾಸ ತೆರಳಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಇದರ ಬಗ್ಗೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಗೆ ಪ್ರಶ್ನೆ ಮಾಡಲಾಗಿದೆ. ಇದಕ್ಕೆ ಉತ್ತರಿಸಿದ್ದ ಅವರು ಶಾಸಕರು ಯಾಕೆ ಹೋಗಿದ್ದಾರೆ, ಅವರಾಗಿಯೇ ಹೋಗಿದ್ದಾರೋ, ಯಾರಾದರೂ ಕಳಿಸಿದ್ದಾರೋ ನನಗೆ ಗೊತ್ತಿಲ್ಲ. ಯಾರಾದರೂ ಸ್ಪಾನ್ಸರ್ ಮಾಡಿ ಕಳುಹಿಸಿರಬಹುದು.
ಮುಂಬೈ: ವಿಶ್ವಕಪ್ ಕ್ರಿಕೆಟ್ ಯಾವುದೇ ಫಾರ್ಮ್ಯಾಟ್ ಆಗಿರಲಿ, ಆಸ್ಟ್ರೇಲಿಯಾ ಪ್ಲೇ ಆಫ್ ಹಂತಕ್ಕೆ ಬರದೇ ಇರಲ್ಲ. ಆದರೆ ಈ ಬಾರಿ ಟಿ20 ವಿಶ್ವಕಪ್ ನಲ್ಲಿ ಲೀಗ್ ಹಂತದಲ್ಲೇ ಆಸ್ಟ್ರೇಲಿಯಾ ಆಘಾತಕಾರಿಯಾಗಿ ಹೊರಬಿದ್ದಿದೆ. ಆಸ್ಟ್ರೇಲಿಯಾಕ್ಕೆ ಬಹುಶಃ ಇಂತಹ ದಯನೀಯ ಅವಸ್ಥೆ ಸದ್ಯಕ್ಕೆ ಎಂದಿಗೂ ಬಂದಿರಲಿಲ್ಲ. ಪ್ರತೀ ಬಾರಿ ಫೈನಲ್ ನಲ್ಲಿ ಒಂದು ತಂಡ ಆಸ್ಟ್ರೇಲಿಯಾವೇ ಇರುತ್ತಿತ್ತು. ಆದರೆ ಕಳೆದ ಎರಡು ವರ್ಷಗಳಿಂದ ಆಸ್ಟ್ರೇಲಿಯಾ ತಂಡ ಐಸಿಸಿ ಟೂರ್ನಿಗಳಲ್ಲಿ ಎಡವುತ್ತಿದೆ. ಭಾರತೀಯ ಫ್ಯಾನ್ಸ್ ಮಾತ್ರ 2024 ರ ಏಕದಿನ ವಿಶ್ವಕಪ್ ಗೆಲುವಿನ ನಂತರ ಮಿಚೆಲ್ ಮಾರ್ಷ್ ಟ್ರೋಫಿ ಮೇಲೆ ಕಾಲಿಟ್ಟು ಕೂತಿದ್ದ ಘಟನೆಯನ್ನೇ ನೆನಪಿಸುತ್ತಿದ್ದಾರೆ.
ಮುಂಬೈ: ಟೀಂ ಇಂಡಿಯಾ ಕೋಚ್ ಹುದ್ದೆಗೆ ಗೌತಮ್ ಗಂಭೀರ್ ವಿಶ್ವಕಪ್ ಬಳಿಕ ಗುಡ್ ಬೈ ಹೇಳುವ ಸಾಧ್ಯತೆಯಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಇದಕ್ಕೆ ಕಾರಣವೂ ಇದೆ. ರಾಹುಲ್ ದ್ರಾವಿಡ್ ಬಳಿಕ ಟೀಂ ಇಂಡಿಯಾ ಕೋಚ್ ಆಗಿ ಗೌತಮ್ ಗಂಭೀರ್ ಆಯ್ಕೆಯಾಗಿದ್ದರು. ಕಳೆದ ಟಿ20 ವಿಶ್ವಕಪ್ ಬಳಿಕ ಅವರು ತಂಡ ಸೇರಿಕೊಂಡಿದ್ದರು. ಆದರೆ ಈಗ ಈ ಟಿ20 ವಿಶ್ವಕಪ್ ಬಳಿಕ ಅವರು ಕೋಚ್ ಹುದ್ದೆಗೆ ಗುಡ್ ಬೈ ಹೇಳಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ರಾಜಸ್ಥಾನ್ ರಾಯಲ್ಸ್ ತಂಡದ ಮೆಂಟರ್ ಕಮ್ ಪಾರ್ಟನರ್ ಆಗಿ ಸೇರಿಕೊಳ್ಳುವಂತೆ ಗಂಭೀರ್ ಗೆ ಭಾರೀ ಮೊತ್ತದ ಆಫರ್ ಬಂದಿದೆ.
ಬೆಂಗಳೂರು: ನಾಳೆ ಕೆಎಸ್ಆರ್ ಟಿಸಿ ಬಸ್ ಗೆ ಕಾದರೆ ನಿಮಗೆ ತೊಂದರೆ ಗ್ಯಾರಂಟಿ. ಯಾಕೆಂದರೆ ನಾಳೆ ಸಾಕಷ್ಟು ಬಸ್ ರಸ್ತೆಗಿಳಿಯುವುದೇ ಅನುಮಾನ. ಇದಕ್ಕೆ ಇಲ್ಲಿದೆ ಕಾರಣ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್ಆರ್ ಟಿಸಿ ನೌಕರರು ನಾಳೆ ಬೆಂಗಳೂರು ಚಲೋ ಧರಣಿ ನಡೆಸಲಿದ್ದಾರೆ. ಈ ಧರಣಿಯಲ್ಲಿ ಸಾಕಷ್ಟು ಕೆಎಸ್ಆರ್ ಟಿಸಿ ನೌಕರರು ಭಾಗಿಯಾಗುವ ಸಾಧ್ಯತೆಯಿದೆ. ಹೀಗಾಗಿ ರಾಜ್ಯದ ಬಹುತೇಕ ಕಡೆ ಕೆಎಸ್ಆರ್ ಟಿಸಿ ಬಸ್ ಸಂಚಾರಕ್ಕೆ ಸಮಸ್ಯೆಯಾಗಬಹುದು. ಮುಷ್ಕರದಲ್ಲಿ ಪಾಲ್ಗೊಳ್ಳದಂತೆ ಕೆಎಸ್ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷಾ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು: ಸಿಎಂ ಬದಲಾವಣೆ ವಿಚಾರ ಚರ್ಚೆಯಲ್ಲಿರುವಾಗಲೇ ತಮ್ಮ ಒಂದು ಹೇಳಿಕೆಯಿಂದಲೇ ಸಿಎಂ ಸಿದ್ದರಾಮಯ್ಯಗೆ ಡಿಕೆ ಶಿವಕುಮಾರ್ ಶಾಕ್ ಕೊಟ್ಟಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಈಗ ಭಾರೀ ಸದ್ದು ಮಾಡುತ್ತಿದೆ. ಇದರ ನಡುವೆ ಕೆಲವು ಶಾಸಕರು ವಿದೇಶ ಪ್ರವಾಸ ಮಾಡಿದ್ದಾರೆ. ಇನ್ನು, ಸಿಎಂ ಆಪ್ತ ಬಳಗದಲ್ಲಿರುವ ಸಚಿವ ಮಹದೇವಪ್ಪ ಬಾಲವೇ ನಾಯಿಯನ್ನು ಅಲ್ಲಾಡಿಸಕ್ಕೆ ಆಗಲ್ಲ. ಎಲ್ಲವೂ ಹೈಕಮಾಂಡ್ ತೀರ್ಮಾನಿಸುತ್ತದೆ ಎಂದಿದ್ದರು. ಮಹದೇವಪ್ಪನಿಗೆ ನಾನು ಉತ್ತರ ಕೊಡಕ್ಕೆ ಹೋಗಲ್ಲ. ಯಾರಿಗೂ ಉತ್ತರ ಕೊಡಲ್ಲ. ನಾಯಕತ್ವ ಕುರಿತಂತೆ ಸಿಎಂ, ನಾನು ಮತ್ತು ಹೈಕಮಾಂಡ್ ಸೇರಿ ನಾವೆಲ್ಲಾ ತೆಗೆದುಕೊಂಡಿರೋ ತೀರ್ಮಾನ.
ಬೆಂಗಳೂರು: ಇಂದು ಬೆಳ್ಳಂ ಬೆಳಿಗ್ಗೆಯೇ ಯೂಟ್ಯೂಬ್ ಕೈ ಕೊಟ್ಟಿದೆ. ಯೂಟ್ಯೂಬ್ ಓಪನ್ ಮಾಡಿದರೆ ಸರ್ವರ್ ಡೌನ್ ಎಂಬ ಸಂದೇಶ ಬರುತ್ತಿದೆ. ಕೇವಲ ಭಾರತದಲ್ಲಿ ಮಾತ್ರವಲ್ಲ ಜಗತ್ತಿನಾದ್ಯಂತ ಇಂದು ಬೆಳಿಗ್ಗೆಯೇ ಯೂಟ್ಯೂಬ್ ಓಪನ್ ಆಗುತ್ತಿಲ್ಲ. ತಾಂತ್ರಿಕ ಸಮಸ್ಯೆಯಾಗಿದೆ ಎಂದು ಸಂದೇಶ ಬರುತ್ತಿದೆ. ಬಹುತೇಕರು ಇದರಿಂದ ಸಾಕಷ್ಟು ಗೊಂದಲಕ್ಕೊಳಗಾಗಿದ್ದಾರೆ. ಆದರೆ ಇದಕ್ಕೆ ನಿಖರ ಕಾರಣವೇನೆಂದು ಯೂಟ್ಯೂಬ್ ಕಡೆಯಿಂದ ಸ್ಪಷ್ಟನೆ ಸಿಕ್ಕಿರಲಿಲ್ಲ. ವ್ಯಾಟ್ಸಪ್, ಫೇಸ್ ಬುಕ್, ಇನ್ ಸ್ಟಾಗ್ರಾಂನಂತೇ ಯೂಟ್ಯೂಬ್ ಹಳೆಯ ಮತ್ತು ಜನಪ್ರಿಯ ಸೋಷಿಯಲ್ ಮೀಡಿಯಾ ಆಪ್.