ಕಣ್ಣೂರು (ಕೇರಳಂ): ಮುಂಬರುವ 2026 ರ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪೆರವೂರಿನಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಬಿಜೆಪಿಯೊಂದಿಗೆ ಆಡಳಿತಾರೂಢ ಎಲ್ಡಿಎಫ್ ರಹಸ್ಯ ಒಪ್ಪಂದವನ್ನು ಮಾಡಿಕೊಂಡಿದೆ ಎಂದು ಆರೋಪ ಮಾಡಿದರು. ಚುನಾವಣೆ ಸಮೀಪಿಸುತ್ತಿರುವಂತೆಯೇ ಎಲ್ಡಿಎಫ್ ಮತ್ತು ಬಿಜೆಪಿ ನಡುವೆ ರಹಸ್ಯ ಒಪ್ಪಂದ ನಡೆದಿದೆ. ಶಬರಿಮಲೆಯಲ್ಲಿ ಭಾರೀ ಕಳ್ಳತನವನ್ನು ನೋಡಿದ್ದೇವೆ, ಆದರೆ ಪ್ರಧಾನಿಯಿಂದ ಒಂದೇ ಒಂದು ಮಾತಿಲ್ಲ ಎಂದು ಪ್ರಿಯಾಂಕಾ ಗಾಂಧಿ ಹೇಳಿದರು.ನಾನು ಈಗ ಕಳೆದ ಒಂದು ವರ್ಷದಿಂದ ಸ್ವಲ್ಪ ಹೆಚ್ಚು ವರ್ಷ ವಯನಾಡ್ ಸಂಸದನಾಗಿದ್ದೇನೆ, ಮತ್ತು ನೀವು ಎದುರಿಸುತ್ತಿರುವ
ಆರು ವರ್ಷಗಳ ಹಿಂದೆ ರಾಷ್ಟ್ರವ್ಯಾಪಿ ಆಕ್ರೋಶಕ್ಕೆ ಕಾರಣವಾದ ತೂತುಕುಡಿ ಜಿಲ್ಲೆಯಲ್ಲಿ ವ್ಯಾಪಾರಿ ಪಿ ಜಯರಾಜ್ ಮತ್ತು ಅವರ ಪುತ್ರ ಜೆ ಬೆನಿಕ್ಸ್ ಕಸ್ಟಡಿ ಸಾವಿನ ಪ್ರಕರಣದಲ್ಲಿ ತಮಿಳುನಾಡಿನ ಮಧುರೈ ಜಿಲ್ಲೆಯ ನ್ಯಾಯಾಲಯವು ಒಂಬತ್ತು ಪೊಲೀಸರಿಗೆ ಸೋಮವಾರ ಮರಣದಂಡನೆ ವಿಧಿಸಿದೆ.ಒಂಬತ್ತು ಪೊಲೀಸರು ಇನ್ಸ್ಪೆಕ್ಸರ್ನಲ್ಲಿ ಶ್ರೀಧರ್, ಸಬ್ ಇನ್ಸ್ಪೆಕ್ಟರ್ಗಳಾದ ಬಾಲಕೃಷ್ಣನ್ ಮತ್ತು ರಘು ಗಣೇಶ್ ಮತ್ತು ಪೊಲೀಸ್ ಸಿಬ್ಬಂದಿಗಳಾದ ಮುರುಗನ್, ಸಮದುರೈ, ಮುತ್ತುರಾಜ, ಚೆಲ್ಲದುರೈ, ಥಾಮಸ್ ಫ್ರಾನ್ಸಿಸ್ ಮತ್ತು ವೇಲುಮುತ್ತು.ಇದು "ಅಧಿಕಾರದ ದುರುಪಯೋಗದ ಪ್ರಕರಣ" ಎಂದು ಒತ್ತಿಹೇಳಿರುವ ನ್ಯಾಯಾಲಯ, ತಮಿಳುನಾಡಿನಲ್ಲಿ ಅನೇಕ ಪ್ರಾಮಾಣಿಕ
ದಿಬ್ರುಗಢ್: ಚುನಾವಣೆ ನಡೆಯಲಿರುವ ಅಸ್ಸಾಂನಲ್ಲಿ ನೆಹರೂ-ಗಾಂಧಿ ಕುಟುಂಬದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಸೋಮವಾರ ತೀವ್ರ ವಾಗ್ದಾಳಿ ನಡೆಸಿರು.ಕಾಂಗ್ರೆಸ್ನ ಮೊದಲ ಕುಟುಂಬವು ದೇಶದ ಅತ್ಯಂತ ಭ್ರಷ್ಟ ಕುಟುಂಬವಾಗಿದ್ದು, ಅಂತವರು ಅಸ್ಸಾಂಗೆ ಬಂದು ಇತರರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆಂದು ಆಕ್ರೋಶ ಹೊರಹಾಕಿದರು. ಕಾಂಗ್ರೆಸ್ ಭ್ರಷ್ಟ ಮಾತ್ರವಲ್ಲ, ಕೆಲಸ ಮಾಡಲು ಸಿದ್ಧರಿಲ್ಲ. ಪರಿಣಾಮವಾಗಿ, ಅಸ್ಸಾಂನಲ್ಲಿ ತಲೆಮಾರುಗಳು ನಿರುದ್ಯೋಗದಿಂದ ಹೋರಾಡುತ್ತಿವೆ. ಇದಕ್ಕೆ ವ್ಯತಿರಿಕ್ತವಾಗಿ, ಬಿಜೆಪಿ-ಎನ್ಡಿಎ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಸಮಗ್ರತೆಯಿಂದ ಕೆಲಸ ಮಾಡುತ್ತಿದೆ. ಅಸ್ಸಾಂ ಅನ್ನು ಪ್ರಮುಖ ರಾಜಧಾನಿಯನ್ನಾಗಿ ಪರಿವರ್ತಿಸಲು ನಾವು ಬದ್ಧರಾಗಿದ್ದೇವೆ. "ಕಾಂಗ್ರೆಸ್ ಆಡಳಿತದಲ್ಲಿ
ದಾವಣಗೆರೆ: ಪೆಟ್ರೋಲ್ ಸದಾಕಾಲ ಲಭ್ಯವಿರುವ ಇಂಧನ. ಈಗೀನ ಸ್ಥಿತಿಗೆ ಎಲ್ಪಿಜಿ ಬದಲು ಪೆಟ್ರೋಲ್ ಬಳಸುವುದು ಸೂಕ್ತ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಲಹೆಯನ್ನು ನೀಡಿದರು. ಈ ವಿಚಾರವಾಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಸುಮಾರು 70 ದಿನಗಳಿಗೆ ಸಾಕಾಗುವಷ್ಟು ಕಚ್ಚಾ ತೈಲದ ಸಂಗ್ರಹವಿದೆ. ಇದೀಗ ನಿರಂತರ ತೈಲ ಪೂರೈಕೆ ಆಗುತ್ತಿದೆ. ಸದ್ಯದ ಮಟ್ಟಿಗೆ ಜನರು ಆತಂಕಪಡುವ ಅವಶ್ಯಕ್ತೆಯಿಲ್ಲ. ವಾಣಿಜ್ಯ ಸಿಲಿಂಡರ್ಗಳ ವಿತರಣೆಯನ್ನು ಶೇ 70ಕ್ಕೆ ಹೆಚ್ಚಿಸಲಾಗಿದೆ ಎಂದು ಪ್ರತಿಕ್ರಿಯಿಸಿದರು. ಶೇ 60ರಷ್ಟು ಎಲ್ಪಿಜಿಯನ್ನು ದೇಶದಲ್ಲೇ ಉತ್ಪಾದಿಸಲಾಗುತ್ತಿದೆ. ಶೇ 40ರಷ್ಟು ಆಮದು ಮಾಡಿಕೊಳ್ಳುತ್ತಿದ್ದೇವೆ. ಜಾಗತಿಕ
ಪಾಲಕ್ಕಾಡ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸೋಮವಾರ ಪಾಲಕ್ಕಾಡ್ನಲ್ಲಿ ನಡೆದ ರ್ಯಾಲಿಯಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ವಿರುದ್ಧ ಮುಖಾಮುಖಿ ವಾಗ್ದಾಳಿ ನಡೆಸಿದ್ದು, ಆಡಳಿತಾರೂಢ ಎಡ ಪ್ರಜಾಸತ್ತಾತ್ಮಕ ರಂಗ (ಎಲ್ಡಿಎಫ್) ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) ನಡುವೆ ರಾಜಕೀಯ ಪಾಲುದಾರಿಕೆ ಇದೆ ಎಂದು ಆರೋಪಿಸಿದರು. ಸಚಿವ ನರೇಂದ್ರ ಮೋದಿ ಅವರಿಗಿಂತ ಭಾರತವನ್ನು ಮುನ್ನಡೆಸುವವರು ಯಾರೂ ಇಲ್ಲ ಎಂದು ಭಾವಿಸುತ್ತಾರೆ ಮತ್ತು ರಾಜ್ಯದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕೇರಳವನ್ನು ಅವರಿಗಿಂತ ಉತ್ತಮವಾಗಿ ಮುನ್ನಡೆಸಲು ಸಾಧ್ಯವಿಲ್ಲ ಎಂದು ಭಾವಿಸಿದ್ದಾರೆ.
ಬೆಂಗಳೂರು: ಶಾಸಕರು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯದ ಟಿಕೆಟ್ಗಳನ್ನು ದುರುಪಯೋಗಪಡಿಸಿಕೊಂಡಿದ್ದಾರೆಂಬ ಆರೋಪವನ್ನು ಗೃಹಸಚಿವ ಜಿ ಪರಮೇಶ್ವರ್ ಅವರು ತಳ್ಳಿ ಹಾಕಿದರು. ಈ ಸಂಬಂಧ ಪ್ರತಿಕ್ರಿಯಿಸಿದ ಅವರು, ಟಿಕೆಟ್ಗಳನ್ನು ಆನ್ಲೈನ್ನಲ್ಲಿ ಬುಕ್ ಮಾಡಲಾಗುತ್ತದೆ. ಟಿಕೆಟ್ ಖರೀದಿ ಮಾಡಿದವರು ಪಂದ್ಯಾಟ ನೋಡಲಬಹುದು ಎಂದು ಹೇಳಿದರು. ಇನ್ನೂ ಶಾಸಕರಿಗೆ ನೀಡಿದ ಟಿಕೆಟ್ನಲ್ಲಿ ಅವರ ಕುಟುಂಬ ಸದಸ್ಯರು ಬಿಟ್ಟರೆ ಬೇರಾರಿಗೂ ವರ್ಗಾಯಿಸುವಂತಿಲ್ಲ ಎಂದು
ನಟ ದರ್ಶನ್ ಅವರ ಜೀವನದ ಘಟನೆಗಳಿಗೆ ಸಾಮ್ಯತೆ ಹೊಂದಿದೆ ಎನ್ನುವ ಆರೋಪವಿರುವ ಬಾಸ್ ಚಿತ್ರಕ್ಕೆ ಏಪ್ರಿಲ್ನಲ್ಲಿ ರಾಜ್ಯಾದ್ಯಂತ ಬಿಡುಗಡೆಯಾಗುವ ನಿರೀಕ್ಷೆಯಿದ್ದ ಸಿನಿಮಾಗೆ ಇದೀಗ ಕೋರ್ಟ್ಗೆ ತಡೆಯಾಜ್ಞೆ ನೀಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆಧರಿತ ಚಲನಚಿತ್ರ ಬಾಸ್ ಸಿನಿಮಾ ಬಿಡುಗಡೆಗೆ ಮಾಡದಂತೆ ಕೋರ್ಟ್ ತಡೆಯಾಜ್ಞೆಯನ್ನು ನೀಡಿದೆ.ಬಾಸ್ ಎಂಬ ಚಿತ್ರ ನಿರ್ಮಾಣ ಮಾಡಿದ್ದು, ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ಟೀಸರ್ ಅನ್ನು ಚಲನಚಿತ್ರ ತಂಡ ಬಿಡುಗಡೆ
ಐಪಿಎಲ್ 2026 ರ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ನಡುವಿನ ಪಂದ್ಯದ ವೇಳೆ ವಿಕೆಟ್ ಕೀಪರ್-ಬ್ಯಾಟರ್ ಸಂಜು ಸ್ಯಾಮ್ಸನ್ ಔಟಾದ ಕುರಿತು ವಿರಾಟ್ ಕೊಹ್ಲಿ ಬೇಸರವನ್ನು ತೋರ್ಪಡಿಸಿದರು. ಇದು ಕ್ಯಾಮಾರದಲ್ಲಿ ಸೆರೆಯಾಗಿದೆ. ಸ್ಯಾಮ್ಸನ್ ಔಟಾದ ಕುರಿತು ಕೊಹ್ಲಿಯ ಪ್ರತಿಕ್ರಿಯೆಯು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ತ್ವರಿತವಾಗಿ ವೈರಲ್ ಆಗಿದೆ.ಭಾನುವಾರ, ಏಪ್ರಿಲ್ 5 ರಂದು M ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಆರ್ಸಿಬಿ 43ರನ್ಗಳ ಆಮೋಘ ಜಯ ಸಾಧಿಸಿತು. ಇನ್ನೂ ಸ್ಯಾಮ್ಸನ್ ಮತ್ತೊಂದು ಏಕ-ಅಂಕಿಯ ಸ್ಕೋರ್ ಅನ್ನು ದಾಖಲಿಸುವ ಮೂಲಕ, 2026 ರ
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭೆಯ ಆವರಣದಲ್ಲಿ ಸೋಮವಾರ ಭಾರಿ ಭದ್ರತಾ ಲೋಪ ಕಂಡುಬಂದಿದೆ. ಅಪಚರಿತ ಚಾಲಕನೊಬ್ಬ ಗೇಟ್ ಮೂಲಕ ಕಾರನ್ನು ಸ್ಪೀಕರ್ ಕಚೇರಿಯತ್ತ ಚಲಾಯಿಸಿ ಆತಂಕ ಸೃಷ್ಟಿಸಿದೆ. ಸೋಮವಾರ ಮಧ್ಯಾಹ್ನ ದೆಹಲಿ ವಿಧಾನಸಭೆಯಲ್ಲಿ ಅಪರಿಚಿತ ವಾಹನವೊಂದು ಭದ್ರತಾ ತಡೆಗೋಡೆಯಿಂದ ಢಿಕ್ಕಿ ಹೊಡೆದು ಹೆಚ್ಚಿನ ಭದ್ರತೆಯ ಆವರಣವನ್ನು ಪ್ರವೇಶಿಸಿದ ನಂತರ ಭಾರೀ ಭದ್ರತಾ ಉಲ್ಲಂಘನೆ ವರದಿಯಾಗಿದೆ.ಘಟನೆಯ ಸಂದರ್ಭದಲ್ಲಿ ದೆಹಲಿ ಅಸೆಂಬ್ಲಿ ಸ್ಪೀಕರ್ ಅವರ ವಾಹನಕ್ಕೆ ಮಸಿ ಎರಚಲಾಗಿದೆ ಎಂದು ಆರೋಪಿಸಲಾಗಿದೆ.
ಮೈಸೂರು: ಇನ್ನೆರಡು ವರ್ಷ ಸಿಎಂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿರುತ್ತಾರೆಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.ಇಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘2013ರಲ್ಲಿ ಸಿದ್ದರಾಮಯ್ಯ ಅವರೇ ಐದು ವರ್ಷ ಮುಖ್ಯಮಂತ್ರಿ ಎಂದು ಹೈಕಮಾಂಡ್ ಘೋಷಿಸಿರಲಿಲ್ಲ. ಆದರೂ ಅವರೇ ಆ ಅವಧಿಯನ್ನು ಸಿಎಂ ಆಗಿ ಪೂರ್ಣಗೊಳಿಸಿದರು. 2023ರಲ್ಲೂ ಸಿದ್ದರಾಮಯ್ಯ ಮುಖ್ಯಮಂತ್ರಿ ಎಂದು ಹೈಕಮಾಂಡ್ ಹೇಳಿತ್ತು. ಅಧಿಕಾರದ ಅವಧಿ 2028ರವರೆಗೆ ಇದೆ. ಅದನ್ನು ಪೂರ್ಣಗೊಳಿಸಬೇಕು ತಾನೆ? ನೀವೇ 5 ವರ್ಷವೂ ಸಿಎಂ ಎಂದು ಹೈಕಮಾಂಡ್ ಪ್ರತ್ಯೇಕವಾಗಿ ಸ್ಪಷ್ಟೀಕರಣ ನೀಡುವ ಅಗತ್ಯವಿಲ್ಲ ಎಂದು ಹೇಳಿದರು.
ಹುಬ್ಬಳ್ಳಿ: ಜಿಮ್ ಟ್ರೈನರ್ ಸಮೀರ್ ಅತ್ಯಾಚಾರ ಆರೋಪ ಪ್ರಕರಣದ ಸಂಬಂಧ ಇದೀಗ ಆರೋಪಿ ಬೆದರಿಕೆಯೊಡ್ಡಿ ₹70ಸಾವಿರ ಅಧಿಕ ಹಣ ಪಡೆದಿರುವುದಾಗಿ ಬೆಳಕಿಗೆ ಬಂದಿದೆ.ಈ ಪ್ರಕರಣ ಸಂಬಂಧ ತನಿಖೆ ಚುರುಕುಗೊಂಡಿದ್ದು, ಇದೀಗ ಪ್ರಕರಣದಲ್ಲಿ ಮಹತ್ವದ ಅಂಶ ಬೆಳಕಿಗೆ ಬಂದಿದೆ. ಸಂತ್ರಸ್ತೆಗೆ ಬೆದರಿಕೆಯೊಡ್ಡಿ ಅತ್ಯಾಚಾರ ಮಾಡಿದ ಬಳಿಕ ಹಣಕ್ಕಾಗಿ ಬೇಡಿಕೆಯಿಡುತ್ತಿದ್ದ ಎನ್ನುವುದು ಗೊತ್ತಾಗಿದೆ. ಹಲವು ಬಾರಿ ಅತ್ಯಾಚಾರದ ಬಳಿಕ ಹಣವನ್ನು ಪಡೆದಿದ್ದಾನೆ. ₹5,000 ₹20,000 ₹25,000 ₹70,000 ಸಾವಿರಕ್ಕೂ ಅಧಿಕ ಹಣವನ್ನು ಸಂತ್ರಸ್ತೆ ಸಮೀರ್ಗೆ ಕಳುಹಿಸಿರುವ ಬಗ್ಗೆ ಸ್ಟ್ರೀನ್ಶಾಟ್ನಲ್ಲಿ ಪತ್ತೆಯಾಗಿದೆ.
ಬೆಂಗಳೂರು: ಅಮೆರಿಕ ಇಸ್ರೇಲ್ ದಾಳಿಯಲ್ಲಿ ಇರಾನ್ನ ಗುಪ್ತಚರ ಮುಖ್ಯಸ್ಥ ಮಜೀದ್ ಖಾದೇಮಿಯನ್ನು ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. IRGC ಈ ಘಟನೆಯನ್ನು "ಅಮೆರಿಕ-ಜಿಯೋನಿಸ್ಟ್ ಶತ್ರುಗಳ ಕ್ರಿಮಿನಲ್ ಭಯೋತ್ಪಾದಕ ದಾಳಿ" ಎಂದು ವಿವರಿಸಿದೆ ಮತ್ತು ಇರಾನ್ ರಾಜ್ಯ ಮಾಧ್ಯಮವು ನಡೆಸಿದ ಹೇಳಿಕೆಯಲ್ಲಿ ಖಾದೇಮಿಯ ಸಾವನ್ನು ದೃಢಪಡಿಸಿದೆ.ದಾಳಿ ನಡೆಸಿದ ಸ್ಥಳದ ಬಗ್ಗೆ ವಿವರಗಳನ್ನು ಒದಗಿಸಲಾಗಿಲ್ಲ. ಮತ್ತೊಬ್ಬ ಹಿರಿಯ ಐಆರ್ಜಿಸಿ ಅಧಿಕಾರಿಯೊಂದಿಗೆ ಖದೇಮಿಯನ್ನು ಗುರಿಯಾಗಿಸುವ ಮತ್ತು ನಿರ್ಮೂಲನೆ ಮಾಡುವ ಜವಾಬ್ದಾರಿಯನ್ನು ಇಸ್ರೇಲ್ ವಹಿಸಿಕೊಂಡಿದೆ.
ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕುಟುಂಬ ರಾಜಕಾರಣವೇ ಮುಖ್ಯವಾಗಿದೆ. ಇದರಿಂದ ಪ್ರಜಾಪ್ರಭುತ್ವ ನಿರ್ನಾಮವಾಗಲಿದೆ. ಒಂದೇ ಕುಟುಂಬಕ್ಕೆ ಯಾಕೆ ಮನ್ನಣೆ ಕೊಡಬೇಕು ಎಂದು ಈ ಬಾರಿ ಚಿಂತಿಸಿರುವ ಮತದಾರರು ಬಿಜೆಪಿಗೆ ಮತ ಹಾಕುತ್ತಾರೆ ಎಂಬ ವಿಶ್ವಾಸವಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಹೇಳಿದ್ದಾರೆ.ಇಂದು ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮನೆಯಲ್ಲಿ ತಾತ ಇದ್ದಾಗ ಅವರು ಶಾಸಕರು ಹಾಗೂ ಮಂತ್ರಿಯಾಗಿದ್ದರು. ಈಗ ಮಗ ಶಾಸಕರು ಹಾಗೂ ಮಂತ್ರಿಯಾಗಿದ್ದಾರೆ. ಅವರ ಪತ್ನಿ ಸಂಸದರು. ಇದರ ಜೊತೆಗೆ ಅವರ ಮಗನೂ ಶಾಸಕನಾಗಬೇಕು ಎಂದು ಟಿಕೆಟ್ ನೀಡಿದ್ದಾರೆ. ಹೀಗೆ ಅವರ ಕುಟುಂಬಕ್ಕೇ ಟಿಕೆಟ್ ನೀಡಿ ದಾವಣಗೆರೆ ಕಬ್ಜಾ ಮಾಡಲು ಮುಂದಾಗಿದ್ದಾರೆ.
ದಾವಣಗೆರೆ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನ ಬಯಸಿ ರಾಜಕಾರಣದಲ್ಲಿರುವುದು ತಪ್ಪಲ್ಲ. ಆದರೆ ಜನ ತಿರಸ್ಕರಿಸಿದರೂ ಕುಟುಂಬ ರಾಜಕಾರಣ ಸಮರ್ಥನೆ ಮಾಡಿಕೊಳ್ಳುವುದು ಸರಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಸೋಮವಾರ ಸುದ್ದಿಗಾರರೊಂದಿಗೆ ಈ ಸಂಬಂಧ ಮಾತನಾಡಿದ ಅವರು, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರ ಇಬ್ಬರು ಮಕ್ಕಳು, ಸೊಸೆಯಂದಿರು, ನಾಲ್ವರು ಮೊಮ್ಮಕ್ಕಳು ರಾಜಕಾರಣದಲ್ಲಿದ್ದಾರೆ. ಚನ್ನಪಟ್ಟಣ ಉಪಚುನಾವಣೆಗೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಯನ್ನು ಯಾರೂ ಬಯಸಿರಲಿಲ್ಲ. ಮತದಾರರು ತಿರಸ್ಕಾರಿಸಿದ ಬಳಿಕವೂ ಪಾಠ ಕಲಿತಿಲ್ಲ ಎಂದು ತಮ್ಮ ಅಭಿಪ್ರಾಯ ಹೊರಹಾಕಿದರು.
ಬೆಂಗಳೂರು: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆಯಲ್ಲಿ ಬಿಜೆಪಿಗೆ ದೊಡ್ಡ ಅಂತರದ ಗೆಲುವು ಸಿಗಲಿದೆ. ಕಾಂಗ್ರೆಸ್ಗೆ ಎರಡೂ ಕಡೆ ಸಮಸ್ಯೆಗಳಿವೆ. ದಾವಣಗೆರೆಯಲ್ಲಿ ಮುಸ್ಲಿಮರು ಓಟ್ ಹಾಕಲ್ಲ ಅಂತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಹೇಳಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಸೋಲುವ ಸುಳಿವು ಸಿಕ್ಕ ಕೂಡಲೇ ಕೇರಳಕ್ಕೆ ಹೋದ ಮುಖ್ಯಮಂತ್ರಿ ಬಾಗಲಕೋಟೆಗೆ ದೌಡಾಯಿಸಿದ್ದಾರೆ ಎಂದರು.ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಭವೃದ್ಧಿ ಮಾಡಿದ್ದರೆ, ಗ್ಯಾರಂಟಿಗಳನ್ನು ಸರಿಯಾಗಿ ಕೊಟ್ಟಿದ್ದರೆ ಇಷ್ಟು ಕಷ್ಟ ಯಾಕೆ ಪಡಬೇಕಿತ್ತು.
ನವದೆಹಲಿ: ಅರುಣಾಚಲ ಪ್ರದೇಶ ಸಿಎಂ ಪೆಮಾ ಖಂಡು ಅವರಿಗೆ ಸುಪ್ರೀಂಕೋರ್ಟ್ ಬಿಗ್ ಶಾಕ್ ನೀಡಿದೆ. ವಿವಿಧ ಸಾರ್ವಜನಿಕ ಕಾಮಗಾರಿಗಳ ಗುತ್ತಿಗೆಗಳನ್ನು ಕುಟುಂಬಸ್ಥರ ಕಂಪನಿಗಳಿಗೆ ನೀಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖೆ ನಡೆಸುವಂತೆ ಸಿಬಿಐಗೆ ನಿರ್ದೇಶನ ನೀಡಿದೆ. ಸರ್ಕಾರಿ ಗುತ್ತಿಗೆಗಳನ್ನು ಸಿಎಂ ಮತ್ತು ಅವರ ಆಪ್ತ ಕುಟುಂಬ ಸದಸ್ಯರಿಗೆ ಕಾನೂನುಬಾಹಿರವಾಗಿ ನೀಡಲಾಗಿದೆ ಎಂದು ಆರೋಪಿಸಿ ಎನ್ಜಿಒಗಳು, ಸೇವ್ ಮಾನ್ ರೀಜನ್ ಫೆಡರೇಶನ್ ಹಾಗೂ ವಾಲಂಟರಿ ಅರುಣಾಚಲ ಸೇನಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ನ ನ್ಯಾ. ವಿಕ್ರಮ್ ನಾಥ್ ನೇತೃತ್ವದ ಪೀಠ ಈ ಆದೇಶವನ್ನು ನೀಡಿದೆ.ಈ ಆರೋಪದ ಕುರಿತು ನಾವು ಸಿಬಿಐಗೆ ಪ್ರಾಥಮಿಕ ತನಿಖೆ ನಡೆಸುವಂತೆ ಆದೇಶಿಸುತ್ತೇವೆ.
ಬೆಂಗಳೂರು: ಬಾರ್ನಲ್ಲಿ ನಡೆದ ಗಲಾಟೆಯಲ್ಲಿ ಬಿಯರ್ ಬಾಟಲಿಯಿಂದ ಚಿತ್ರನಟರೊಬ್ಬರ ಮೇಲೆ ಹಲ್ಲೆ ನಡೆಸಲಾಗಿದೆ. ಈ ಸಂಬಂಧ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಒಡೆಯ ಚಿತ್ರದಲ್ಲಿ ನಟ ದರ್ಶನ್ ಅವರ ತಮ್ಮನ ಪಾತ್ರದಲ್ಲಿ ನಟಿಸಿದ್ದ ನಿರಂಜನ್ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಬಾರ್ನಲ್ಲಿ ನಡೆದ ಗಲಾಟೆಯಲ್ಲಿ ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಲಾಗಿದೆ ಎಂದು ದೂರಲಾಗಿದೆ.ಮಾರ್ಚ್ 28ರಂದು ಸ್ನೇಹಿತ ಯಶಸ್ ಸೂರ್ಯ ಅವರ ಮನೆಯಿಂದ ಉತ್ತರಹಳ್ಳಿ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದೆ. ಮಂತ್ರಿ ಆಲೈನ್ ಬಳಿ ಬಂದಾಗ ನೀರು ಕುಡಿಯಬೇಕು ಅನಿಸಿದ್ದರಿಂದ ಪಕ್ಕದಲ್ಲಿ ಇದ್ದ ಬಾರ್ ಆ್ಯಂಡ್ ಕಿಚನ್ ಬಳಿ ಹೋಗಿ ನೀರನ್ನು ತೆಗೆದುಕೊಳ್ಳುತ್ತಿರಬೇಕಾದರೆ, ಯಾರೋ ಒಬ್ಬ ವ್ಯಕ್ತಿ ಬಂದು ತನ್ನನ್ನು ತಳ್ಳಿದ. ಆಗ ನಾನು ಆತನಿಗೆ ಯಾಕೆ ನನ್ನನ್ನು ತಳ್ಳುತ್ತೀಯಾ ಎಂದು ಕೇಳಿದ್ದೆ.
ಬೆಂಗಳೂರು: ಸಿದ್ದರಾಮಯ್ಯ ಅವರು 2028ರ ವಿಧಾನಸಭೆ ಚುನಾವಣೆವರೆಗೆ ಮುಖ್ಯಮಂತ್ರಿಯಾಗಿ ಇರುತ್ತಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.2023ರಲ್ಲಿ ಸಿದ್ದರಾಮಯ್ಯ ಅವರನ್ನು ಸಿಎಂ ಎಂದು ಪಕ್ಷದ ಹೈಕಮಾಂಡ್ ಘೋಷಣೆ ಮಾಡಿತ್ತು. ಅದರ ಅವಧಿ 2028ರ ವರೆಗೆ ಇದೆ. ಹೈಕಮಾಂಡ್ ನೀವೇ 5 ವರ್ಷ ಸಿಎಂ ಎಂದು ಪ್ರತ್ಯೇಕವಾಗಿ ಸ್ಪಷ್ಟೀಕರಣ ಕೊಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದರು.2013ರಲ್ಲಿ ಸಿದ್ದರಾಮಯ್ಯ 5 ವರ್ಷ ಸಿಎಂ ಎಂದು ಹೈಕಮಾಂಡ್ ಘೋಷಣೆ ಮಾಡಿರಲಿಲ್ಲ. ಆದರೂ ಅವರು ಐದು ವರ್ಷ ಸಿಎಂ ಆಗಿದ್ದರು. ಈ ಬಾರಿಯೂ ಪೂರ್ಣಾವಧಿ ಮುಗಿಸಬೇಕು ತಾನೇ ಎಂದು ಮೈಸೂರಿನಲ್ಲಿ ಹೇಳಿದರು.
ಬಾಗಲಕೋಟೆ: ಬೂತ್ ಮಟ್ಟದಲ್ಲಿ ನಾವು ಜನರ ಕಣ್ಣೀರನ್ನು ಒರೆಸುವ ಕೆಲಸ ಮಾಡಬೇಕು. ಜನರಿಗೆ ಸರಕಾರದ ಯೋಜನೆಗಳನ್ನು ತಲುಪಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದ್ದಾರೆ.ಇಂದು ಇಲ್ಲಿನ ಜಿಲ್ಲಾ ಕಾರ್ಯಾಲಯದಲ್ಲಿ ಏರ್ಪಡಿಸಿದ ಬಿಜೆಪಿ ಸಂಸ್ಥಾಪನಾ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಹಿರಿಯರ ಅನುಭವದ ಜೊತೆ ಯುವಕರ ಉತ್ಸಾಹ ಸೇರಿದರೆ ಸಂಘಟನೆ ಬಲಿಷ್ಠವಾಗಲು ಸಾಧ್ಯ ಎಂದು ಅವರು ವಿಶ್ಲೇಷಿಸಿದರು. ನಮ್ಮದು ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷ ಎಂದು ಅವರು ನುಡಿದರು.
ಬೆಂಗಳೂರು: ಅನ್ಯ ರಾಜ್ಯದಿಂದ ಬೆಂಗಳೂರಿಗೆ ನಸುಕಿನ ಜಾವ ಬಂದಿಳಿದಿದ್ದ ಈ ಯುವತಿಗೆ ಆದ ಅನುಭವ ಕೇಳಿದರೆ ರಾಪಿಡೊ ಚಾಲಕರು ಮತ್ತು ಬಿಎಂಟಿಸಿ ಬಸ್ ನೌಕರರ ಬಗ್ಗೆ ಹೆಮ್ಮೆಯಾಗುತ್ತದೆ. ಯುವತಿಯೊಬ್ಬಳು ಬೆಂಗಳೂರು ಏರ್ ಪೋರ್ಟ್ ನಲ್ಲಿ ಬೆಳ್ಳಂ ಬೆಳಿಗ್ಗೆ ಬಂದು ಇಳಿದ ಬಳಿಕ ಕಾಡುಗೋಡಿ ಬಸ್ ಹತ್ತಿದ್ದಳು. ಕಾಡುಗೋಡಿ ಬಸ್ ಇಳಿದಾಗ ಬೆಳಿಗ್ಗಿನ ಜಾವ 3 ಗಂಟೆಯಷ್ಟೇ. ಆ ಸಂದರ್ಭದಲ್ಲಿ ಆಕೆ ಹೋಗಬೇಕಾದ ಸ್ಥಳಕ್ಕೆ ಯಾವುದೇ ಕ್ಯಾಬ್ ಸಿಗುತ್ತಿರಲಿಲ್ಲ. ಹೀಗಾಗಿ ಬಿಎಂಟಿಸಿ ಬಸ್ ಕಂಡಕ್ಟರ್ ಮತ್ತು ಡ್ರೈವರ್ ಆಕೆಗೆ ಕ್ಯಾಬ್ ಸಿಗುವವರೆಗೂ ಅಲ್ಲಿಯೇ ನಿಂತಿದ್ದರು. ಕೊನೆಗೂ ಯುವತಿಗೆ ರಾಪಿಡೋ ಬೈಕ್ ಒಂದು ಸಿಕ್ಕಿದೆ.
ದಾವಣಗೆರೆ: ಈ ಉಪ ಚುನಾವಣೆಗಳು ಕಾಂಗ್ರೆಸ್ ಸರಕಾರ, ಮುಖ್ಯಮಂತ್ರಿಗಳಿಗೆ ಕಬ್ಬಿಣದ ಕಡಲೆ ಆಗಿ ಪರಿವರ್ತನೆ ಆಗಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.ಇಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಗ್ಯಾರಂಟಿಯ ಮುಖವಾಡ ಧರಿಸಿ ಜನರ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡುತ್ತಿದ್ದರು. ಈ ಉಪ ಚುನಾವಣೆಗಳು ಕಾಂಗ್ರೆಸ್ ಸರಕಾರ, ಮುಖ್ಯಮಂತ್ರಿಗಳಿಗೆ ಕಬ್ಬಿಣದ ಕಡಲೆ ಆಗಿ ಪರಿವರ್ತನೆ ಆಗಿವೆ. ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ- ಇವೆರಡರ ಪೈಕಿ ಯಾವ ಕ್ಷೇತ್ರ ಉಳಿಸಿಕೊಳ್ಳಬೇಕೆಂದು ಮುಖ್ಯಮಂತ್ರಿಗಳು ಅವರ ಸಚಿವಸಂಪುಟದ ಸದಸ್ಯರು ಗಲಿಬಿಲಿಗೊಂಡಿದ್ದಾರೆ ಎಂದು ವಿಶ್ಲೇಷಿಸಿದರು.
ಇಸ್ಲಾಮಾಬಾದ್: ಶೀಘ್ರದಲ್ಲೇ ಪಾಕಿಸ್ತಾನ ಕ್ರಿಕೆಟ್ ಲೀಗ್ ವಿಶ್ವದ ನಂ1 ಶ್ರೀಮಂತ ಕ್ರಿಕೆಟ್ ಲೀಗ್ ಆಗಲಿದೆ ಎಂದು ಪಿಸಿಬಿ ಮುಖ್ಯಸ್ಥ ಮೊಹ್ಸಿನ್ ನಖ್ವಿ ಹೇಳಿದ್ದು ಇದು ವರ್ಷದ ಜೋಕ್ ಎಂದು ಭಾರತೀಯರು ಕಾಲೆಳೆದಿದ್ದಾರೆ. ಪಾಕಿಸ್ತಾನಕ್ಕೆ ತಿನ್ನಲು ಗತಿಯಿಲ್ಲದಿದ್ದರೂ ಭಾರತವನ್ನು ಮೀರಿಸುವ ಧಾವಂತ. ಕ್ರಿಕೆಟ್ ನಲ್ಲೂ ಅಷ್ಟೇ. ಭಾರತದ ಐಪಿಎಲ್ ಗೆ ಪರ್ಯಾಯವಾಗಿ ಪಿಎಸ್ಎಲ್ ಎಂಬ ಕ್ರಿಕೆಟ್ ಲೀಗ್ ಕಟ್ಟಿಕೊಂಡು ಸಾಕಷ್ಟು ಬಾರಿ ಟ್ರೋಲ್ ಗೊಳಗಾಗಿದೆ. ಇದೀಗ ಮೊಹ್ಸಿನ್ ನಖ್ವಿ ಶೀಘ್ರದಲ್ಲೇ ನಮ್ಮ ಪಿಎಸ್ಎಲ್ ವಿಶ್ವದ ನಂ.1 ಕ್ರಿಕೆಟ್ ಲೀಗ್ ಆಗುತ್ತದೆ ಎಂದಿದ್ದಾರೆ. ಅವರ ಹೇಳಿಕೆಗೆ ನೆಟ್ಟಿಗರು ಇದಪ್ಪಾ ಜೋಕ್ ಎಂದರೆ ಎಂದು ತಮಾಷೆ ಮಾಡಿದ್ದಾರೆ.
ಬೆಂಗಳೂರು: ಅಡಿಕೆ ಬೆಲೆ ಕಳೆದ ವಾರ ಏರಿಕೆ-ಇಳಿಕೆಯಾಗಿತ್ತು. ಕಳೆದ ವಾರದಂತೆ ಈ ವಾರವೂ ಅದೇ ಟ್ರೆಂಡ್ ಮುಂದುವರಿದಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ. ಕಳೆದ ವಾರ ಅಡಿಕೆ ಬೆಲೆಯಲ್ಲಿ ಕೊಂಚ ಏರಿಳಿಕೆಯಾಗುತ್ತಲೇ ಇತ್ತು. ಕಳೆದ ವಾರ ಎರಡು ದಿನ ಸತತವಾಗಿ ಬೆಲೆ ಏರಿಕೆ ಕಂಡುಬರುತ್ತಿತ್ತು. ಅಡಿಕೆ ಬೆಲೆಯಲ್ಲಿ ನಿನ್ನೆ ಕೊಂಚ ಏರಿಕೆಯಾಗಿತ್ತು. ಆದರೆ ಇಂದು ಯಥಾಸ್ಥಿತಿಯಲ್ಲಿದೆ ಹೊಸ ಅಡಿಕೆ ಬೆಲೆ 500 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ 555 ರೂ. ಗಳಾಗಿದೆ. ಡಬಲ್ ಚೋಲ್ ಬೆಲೆಯೂ 555 ರೂ.ಗಳಷ್ಟಾಗಿದೆ.
ನ್ಯೂಯಾರ್ಕ್: ತನ್ನ ಬೆದರಿಕೆಗೆಲ್ಲಾ ಜಗ್ಗದೇ ಹೊರ್ಮುಜ್ ಜಲಸಂಧಿ ತೆರೆಯದೇ ಕೂತಿರುವ ಇರಾನ್ ಗೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೈನಲ್ ವಾರ್ನಿಂಗ್ ಕೊಟ್ಟಿದ್ದಾರೆ.ಇರಾನ್ ನ್ನು ಇತರೆ ರಾಷ್ಟ್ರಗಳಂತೆ ಸುಲಭವಾಗಿ ಬಗ್ಗಿಸಬಹುದು ಎಂದುಕೊಂಡಿದ್ದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ಈಗ ಅದು ಅಷ್ಟು ಸುಲಭವಲ್ಲ ಎಂದು ಗೊತ್ತಾಗಿದೆ. ಹೊರ್ಮುಜ್ ಜಲಸಂಧಿ ತೆರೆಯಲು ಟ್ರಂಪ್ ಏನೇನೋ ಪ್ರಯತ್ನ ಮಾಡಿದರೂ ಸಾಧ್ಯವಾಗುತ್ತಿಲ್ಲ. ಹೊರ್ಮುಜ್ ಜಲಸಂಧಿಯನ್ನು ಇರಾನ್ ತೆರೆಯದೇ ಇರುವುದು ಅಮೆರಿಕಾಗೆ ಪ್ರತಿಷ್ಠೆಯ ವಿಚಾರವಾಗಿದೆ. ತನ್ನ ಬೆದರಿಕೆಗೆ ಮಣಿಯದ ಇರಾನ್ ಮುಂದೆ ಸೋತರೆ ವಿಶ್ವದ ಮುಂದೆ ತನ್ನ ಪ್ರತಿಷ್ಠೆ ಮಣ್ಣುಪಾಲಾಗುತ್ತದೆ.
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಏರಿಕೆಯಾಗಿದೆ ಮತ್ತುಇತರೆ ಚಿನ್ನದ ದರ ಇಳಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತವಾಗಿ ಬೆಲೆ ಏರಿಳಿಕೆಯಾಗುತ್ತಲೇ ಇತ್ತು. ಆದರೆ ವಾರಂತ್ಯಕ್ಕೆ ಪರಿಶುದ್ಧ ಚಿನ್ನದ ದರದಲ್ಲಿ ಕೊಂಚ ಇಳಿಕೆಯಾಗಿತ್ತು. ಪರಿಶುದ್ಧ ಚಿನ್ನದ ದರ ವಾರಂತ್ಯಕ್ಕೆ 1,51,650.00 ರೂ.ಗಳಿತ್ತು. ಆದರೆ ಇಂದು ಏರಿಕೆಯಾಗಿದ್ದು 1,53,675.00 ರೂ.ಗಳಷ್ಟಿದೆ.
ಸದಾ ಶಿಸ್ತಿನಲ್ಲೇ ಇರುವ ಸೇನಾ ನಾಯಿಯೊಂದಕ್ಕೆ 30 ಸೆಕೆಂಡ್ ಫ್ರೀ ಟೈಂ ಕೊಟ್ಟಾಗ ಅದು ಹೇಗೆ ಕುಣಿದು ಕುಪ್ಪಳಿಸಿತು ಗೊತ್ತಾ? ಇಂತಹದ್ದೊಂದು ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ನಮ್ಮ ಸೇನೆಯಲ್ಲಿ ಕೇವಲ ಮನುಷ್ಯರು ಮಾತ್ರವಲ್ಲ, ನಾಯಿಗಳೂ ಶಿಸ್ತಿನ ಸಿಪಾಯಿಗಳಂತೆ ಕೆಲಸ ಮಾಡುತ್ತವೆ. ಸೇನೆ, ಪೊಲೀಸ್ ಇಲಾಖೆಯಲ್ಲಿ ಶ್ವಾನ ದಳಗಳೂ ಪ್ರಮುಖ ಅಂಗಗಳು. ಅವುಗಳು ಮನುಷ್ಯರಂತೇ ಶಿಸ್ತಿನಲ್ಲಿರುತ್ತವೆ. ಅಧಿಕಾರಿಗಳು ಕೊಡುವ ನಿರ್ದೇಶನಗಳನ್ನು ಪಾಲಿಸಲು ಅವರಿಗೆ ತರಬೇತಿ ನೀಡಲಾಗಿರುತ್ತದೆ. ಆದರೆ ಎಷ್ಟೇ ಆದರೂ ಅವುಗಳೂ ಪ್ರಾಣಿಗಳು. ಅತಿಯಾದ ಕಟ್ಟು ನಿಟ್ಟು ಬಹುಶಃ ಅವರಿಗೂ ಕೆಲವೊಮ್ಮೆ ಉಸಿರುಗಟ್ಟಿಸಬಹುದು.
ಸೀಬೆಕಾಯಿ ಕದ್ದು ತಿಂದ ತಪ್ಪಿಗೆ ಚಿಕ್ಕ ಹುಡುಗಿಯನ್ನು ಕಂಬಕ್ಕೆ ಅಮಾನವೀಯವಾಗಿ ಕಟ್ಟಿ ಹಾಕಿ ಕ್ರೌರ್ಯವೆಸಗಿದ ವಿಡಿಯೋವೊಂದು ಈಗ ವೈರಲ್ ಆಗಿದೆ. ಹಿಮಾಚಲ ಪ್ರದೇಶದಲ್ಲಿ ಉನಾದಲ್ಲಿ ಈ ಘಟನೆ ನಡೆದಿದೆ. ಚಿಕ್ಕವರಿದ್ದಾಗ ನಾವು ಅಕ್ಕಪಕ್ಕದ ಮನೆಯ ಮರದಿಂದ ಹಣ್ಣು, ಕಾಯಿ ಕಿತ್ತು ತಿನ್ನುವುದು ಸಾಮಾನ್ಯ. ಇದು ಮಕ್ಕಳ ತುಂಟಾಟವೂ ಹೌದು. ಆದರೆ ಅದಕ್ಕೆ ಮನೆಯಲ್ಲಿ ಏಟು ತಿಂದಿದ್ದೂ ಇದೆ. ಆದರೆ ಇಲ್ಲಿ ಇದು ಇನ್ನೊಂದು ಹಂತಕ್ಕೆ ಹೋಗಿದೆ. ಓರ್ವ ಪುಟಾಣಿ ಬಾಲಕಿ ಪಕ್ಕದ ಮನೆಯ ನಿವೃತ್ತ ಸೇನಾಧಿಕಾರಿಯೊಬ್ಬರ ಮನೆಯ ಮರದಿಂದ ಸೀಬೆಕಾಯಿ ಕಿತ್ತು ತಿಂದಿದ್ದಕ್ಕೆ ಆಕೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ್ದಾರೆ.
ನಾಗ್ಪುರ: ಹೆಲ್ಮೆಟ್ ಹಾಕದೇ ಬೈಕ್ ಚಲಾಯಿಸಿದ್ದಲ್ಲದೇ ನಾಗರಿಕರೊಬ್ಬರು ಪ್ರಶ್ನೆ ಮಾಡಿದ್ದಕ್ಕೆ ಪೊಲೀಸ್ ಅಧಿಕಾರಿಯೊಬ್ಬರು ದರ್ಪ ಮೆರೆದ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಘಟನೆ ನಡೆದಿರುವುದು ನಾಗ್ಪುರದಲ್ಲಿ. ಸಂಚಾರ ನಿಯಮದ ಬಗ್ಗೆ ಅಧಿಕಾರಿಗಳು ಜನರಲ್ಲಿ ಅರಿವು ಮೂಡಿಸಬೇಕು. ಆದರೆ ಕೆಲವೊಮ್ಮೆ ನಾಗರಿಕರಿಗೆ ಬುದ್ಧಿ ಹೇಳಬೇಕಾದ ಪೊಲೀಸರೇ ನಿಯಮಗಳನ್ನು ಪಾಲಿಸುವುದಿಲ್ಲ. ಅದಕ್ಕೆ ಸರಿಯಾದ ಉದಾಹರಣೆ ಈ ಘಟನೆ. ಓರ್ವ ಪೊಲೀಸ್ ಅಧಿಕಾರಿ ಸಮವಸ್ತ್ರದಲ್ಲಿರುವಾಗಲೇ ಹೆಲ್ಮೆಟ್ ಇಲ್ಲದೇ ಬೈಕ್ ಚಲಾಯಿಸುತ್ತಾ ಸಾಗುತ್ತಿರುತ್ತಾರೆ.
ನವದೆಹಲಿ: ಕೇರಳ ಚುನಾವಣೆ ಪ್ರಚಾರದ ವೇಳೆ ಗುಜರಾತಿಗಳು ಅನಕ್ಷರಸ್ಥರು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವಮಾನ ಮಾಡಿದ್ದಾರೆ. ಕೇರಳವನ್ನು ಹೊಗಳುವ ಭರದಲ್ಲಿ ಮಲ್ಲಿಕಾರ್ಜುನ ಖರ್ಗೆ ಗುಜರಾತಿಗಳನ್ನು ಅವಮಾನ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ. ಕೇರಳ ಚುನಾವಣೆ ಪ್ರಚಾರದ ವೇಳೆ ಮಲ್ಲಿಕಾರ್ಜುನ ಖರ್ಗೆ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದರು. ಈ ವೇಳೆ ಎಡವಟ್ಟು ಮಾಡಿಕೊಂಡಿದ್ದಾರೆ. ‘ಮೋದಿ ನೀವು ಅನಕ್ಷರಸ್ಥ ಗುಜರಾತಿಗಳನ್ನು ಮೂರ್ಖರನ್ನಾಗಿಸಬಹುದು, ಆದರೆ ಸುಶಿಕ್ಷಿತ ಕೇರಳೀಯರನ್ನು ಯಾವತ್ತೂ ಮೂರ್ಖರಾಗಿಸಲು ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ. ಅವರ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.
ಬೆಂಗಳೂರು: ಐಪಿಎಲ್ 2026 ರಲ್ಲಿ ನಿನ್ನೆ ಸಿಎಸ್ ಕೆ ವಿರುದ್ಧ ಟಿಮ್ ಡೇವಿಡ್ ಮೈದಾನದಾಚೆ ಹೊಡೆದ ಬಾಲ್ ಹುಡುಕಿ ಪಡೆದ ಫ್ಯಾನ್ಸ್ ಯಾರು ವಿಡಿಯೋ ನೋಡಿ. ಸಿಎಸ್ ಕೆ ವಿರುದ್ಧ ಮೊದಲು ಬ್ಯಾಟಿಂಗ್ ಮಾಡಿದ್ದ ಆರ್ ಸಿಬಿ 250 ರನ್ ಗಳಿಸಿತ್ತು. ಅದರಲ್ಲೂ ಡೆತ್ ಓವರ್ ಗಳಲ್ಲಿ ಟಿಮ್ ಡೇವಿಡ್ ಅಬ್ಬರಕ್ಕೆ ಮೈದಾನದಲ್ಲಿದ್ದ ಪ್ರೇಕ್ಷಕರು ಹುಚ್ಚೆದ್ದು ಕುಣಿದಿದ್ದರು. ಎದುರಾಳಿ ಬೌಲರ್ ಗಳು ಸುಸ್ತಾಗಿ ಹೋಗಿದ್ದರು. ಅದರಲ್ಲೂ ಒಂದು ಎಸೆತವನ್ನಂತೂ ಟಿಮ್ ಡೇವಿಡ್ ಬೀಸಿ ಹೊಡೆದ ರಭಸಕ್ಕೆ ಬಾಲ್ ಮೈದಾನದ ಛಾವಣಿಯನ್ನೂ ದಾಟಿ ಹೊರಗೆ ಹಾರಿತ್ತು.
ಚಂದ್ರ ದೋಷವಿದ್ದಾಗ ಪರಿಣಾಮ ಕಡಿಮೆ ಮಾಡಲು ನಾವು ಯಾವ ಬಣ್ಣದ ಬಟ್ಟೆ ಧರಿಸಬೇಕು ಮತ್ತು ಯಾವ ಬಟ್ಟೆಯನ್ನು ಅವಾಯ್ಡ್ ಮಾಡಬೇಕು ಎಂಬ ವಿವರ ಇಲ್ಲಿದೆ ನೋಡಿ. ಜಾತಕದಲ್ಲಿ ಚಂದ್ರ ಗ್ರಹ ದೋಷವಿದ್ದಾಗ ಬಿಳಿ ಬಣ್ಣದ ಬಟ್ಟೆ ಧರಿಸುವುದು ಸೂಕ್ತ. ಯಾಕೆಂದರೆ ಚಂದ್ರ ಬಿಳಿ ಬಣ್ಣವನ್ನು ಪ್ರತಿನಿಧಿಸುತ್ತಾನೆ. ಈ ಬಣ್ಣದ ಬಟ್ಟೆಗಳನ್ನು ವಿಶೇಷವಾಗಿ ಸೋಮವಾರಗಳಂದು ತೊಟ್ಟುಕೊಳ್ಳುವುದರಿಂದ ಪ್ರಭಾವ ಕಡಿಮೆಯಾಗುತ್ತದೆ. ಬಿಳಿ ಮತ್ತು ರಜತ ಬಣ್ಣದ ಶೇಡ್ ಇರುವ ಬಟ್ಟೆ ಧರಿಸಬೇಕು. ಬಿಳಿ ಬಣ್ಣದ ಜೊತೆಗೆ ತೆಳು ನೀಲಿ ಅಥವಾ ತೆಳು ಬೂದು ಬಣ್ಣವಿದ್ದರೂ ಸಮಸ್ಯೆಯಿಲ್ಲ. ಈ ಬಣ್ಣದ ಬಟ್ಟೆಗಳನ್ನು ಧರಿಸುವುದರಿಂದ ಮಾನಸಿಕವಾಗಿ ಶಾಂತಿ, ಸುಖ, ನೆಮ್ಮದಿ ಸಿಗುತ್ತದೆ.
ಬೆಂಗಳೂರು: ಐಪಿಎಲ್ 2026 ರ ನಿನ್ನೆಯ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 43 ರನ್ ಗಳಿಂದ ಸೋಲಿಸಿದ ಆರ್ ಸಿಬಿ ಹಲವು ದಾಖಲೆಗಳನ್ನೇ ಮಾಡಿದೆ.ಆ ದಾಖಲೆಗಳ ಪಟ್ಟಿ ಇಲ್ಲಿದೆ ನೋಡಿ. ಮೊದಲು ಬ್ಯಾಟಿಂಗ್ ಮಾಡಿದ್ದ ಆರ್ ಸಿಬಿ ಟಿಮ್ ಡೇವಿಡ್, ರಜತ್ ಪಾಟೀದಾರ್ ಅಬ್ಬರದ ಬ್ಯಾಟಿಂಗ್ ನಿಂದಾಗಿ 20 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 250 ರನ್ ಕಲೆ ಹಾಕಿತ್ತು. ಇದಕ್ಕೆ ಉತ್ತರವಾಗಿ ಸಿಎಸ್ ಕೆ 19.4 ಓವರ್ ಗಳಲ್ಲಿ 207 ರನ್ ಗಳಿಗೆ ಆಲೌಟ್ ಆಗಿ ಸೋಲೊಪ್ಪಿಕೊಂಡಿತ್ತು.
ಬೆಂಗಳೂರು: ಕರ್ನಾಟಕದಲ್ಲಿ ಕಳೆದ ವಾರ ಅಲ್ಲಲ್ಲಿ ಮಳೆಯಾಗಿತ್ತು. ಈ ವಾರವೂ ಮಳೆಯ ಸಾಧ್ಯತೆಯಿದೆಯಾ, ಇಲ್ಲಿದೆ ವಾರದ ಹವಾಮಾನ ವರದಿ. ಬಿರು ಬೇಸಿಗೆಯ ನಡುವೆ ಕರಾವಳಿ, ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಕಳೆದ ವಾರ ಗುಡುಗು ಸಹಿತ ಮಳೆಯಾಗಿತ್ತು. ಇದರಿಂದ ವಾತಾವರಣ ಕೊಂಚ ತಂಪಾಗಿತ್ತು. ವಾರಂತ್ಯದಲ್ಲೂ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ಆದರೆ ಈ ವಾರ ಮಳೆಯ ಸೂಚನೆಯಿಲ್ಲ. ಈ ವಾರಂತ್ಯಕ್ಕೆ ಕೆಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಬಿಟ್ಟರೆ ಉಳಿದ ದಿನಗಳಲ್ಲಿ ಮಳೆಯ ಸೂಚನೆಯಿಲ್ಲ. ಕರ್ನಾಟಕದಲ್ಲಿ ಈ ವಾರ ಗರಿಷ್ಠ ತಾಪಮಾನ 34 ಡಿಗ್ರಿಯಷ್ಟು ಕಂಡುಬರಲಿದೆ.
ಇಂದು ಸೋಮವಾರವಾಗಿದ್ದು ಶಿವನ ಆರಾಧನೆಗೆ ಸೂಕ್ತವಾದ ದಿನ. ಇಂದು ಆಯಸ್ಸು, ಆರೋಗ್ಯ, ದೋಷ ನಿವಾರಣೆಗಾಗಿ ಶಿವನ ಕುರಿತು ಶಿವ ಭುಜಂಗ ಪ್ರಯಾತ ಸ್ತೋತ್ರವನ್ನು ಓದಿ. ಕನ್ನಡದಲ್ಲಿ ಇಲ್ಲಿದೆ.ಕೃಪಾಸಾಗರಾಯಾಶುಕಾವ್ಯಪ್ರದಾಯಪ್ರಣಮ್ರಾಖಿಲಾಭೀಷ್ಟಸಂದಾಯಕಾಯ ।ಯತೀಂದ್ರೈರುಪಾಸ್ಯಾಂಘ್ರಿಪಾಥೋರುಹಾಯಪ್ರಬೋಧಪ್ರದಾತ್ರೇ ನಮಃ ಶಂಕರಾಯ ॥1॥ ಚಿದಾನಂದರೂಪಾಯ ಚಿನ್ಮುದ್ರಿಕೋದ್ಯ-ತ್ಕರಾಯೇಶಪರ್ಯಾಯರೂಪಾಯ ತುಭ್ಯಮ್ ।ಮುದಾ ಗೀಯಮಾನಾಯ ವೇದೋತ್ತಮಾಂಗೈಃಶ್ರಿತಾನಂದದಾತ್ರೇ ನಮಃ ಶಂಕರಾಯ ॥2॥ ಜಟಾಜೂಟಮಧ್ಯೇ ಪುರಾ ಯಾ ಸುರಾಣಾಂಧುನೀ ಸಾದ್ಯ ಕರ್ಮಂದಿರೂಪಸ್ಯ ಶಂಭೋಃಗಲೇ ಮಲ್ಲಿಕಾಮಾಲಿಕಾವ್ಯಾಜತಸ್ತೇವಿಭಾತೀತಿ ಮನ್ಯೇ ಗುರೋ ಕಿಂ ತಥೈವ ॥3॥ ನಖೇಂದುಪ್ರಭಾಧೂತನಮ್ರಾಲಿಹಾರ್ದಾ-ಂಧಕಾರವ್ರಜಾಯಾಬ್ಜಮಂದಸ್ಮಿತಾಯ ।ಮಹಾಮೋಹಪಾಥೋನಿಧೇರ್ಬಾಡಬಾಯಪ್ರಶಾಂತಾಯ ಕುರ್ಮೋ ನಮಃ ಶಂಕರಾಯ ॥4॥
ಬೆಂಗಳೂರು: ತವರು ನೆಲದಲ್ಲಿ ಸಿಎಸ್ಕೆ ವಿರುದ್ಧ ನಡೆದ ಪಂದ್ಯಾಟದಲ್ಲಿ ಆರ್ಸಿಬಿ 43ರನ್ಗಳ ಅಮೋಘ ಜಯ ಗಳಿಸಿದೆ. ಈ ಮೂಲಕ ಪಾಯಿಂಟ್ಸ್ ಟೇಬಲ್ನಲ್ಲಿ ಆರ್ಸಿಬಿ ಅಗ್ರಸ್ಥಾನಕ್ಕೇರಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ ತಂಡಕ್ಕೆ ವಿರಾಟ್ ಕೊಹ್ಲಿ ಹಾಗೂ ಫಿಲಿಪ್ ಸಾಲ್ಟ್ ಉತ್ತಮ ಆರಂಭ ನೀಡಿದರು. ಬಳಿಕ ಬಂದ ದೇವದತ್ತ ಪಡಿಕ್ 51ರನ್, ಟಿಮ್ ಡೇವಿಡ್ 70ರನ್ ಹಾಗೂ ಕ್ಯಾಪ್ಟನ್ ರಜತ್ ಪಾಟಿದಾರ್48 ರನ್ ಗಳಿಸುವ ಮೂಲಕ ಆರ್ಸಿಬಿ 20ಓವರ್ಗಳಲ್ಲಿ ಮೂರು ವಿಕೆಟ್ ಕಳೆದುಕೊಂಡು 250ರನ್ ಗಳಿಸಿತು.
ನವದೆಹಲಿ: ರಾಜ್ಯಸಭಾ ಸದಸ್ಯ, ಆಮ್ ಆದ್ಮಿ ಪಕ್ಷ ನಾಯಕ ರಾಘವ್ ಚಡ್ಡಾ ಮತ್ತೆ ತಮ್ಮ ಸ್ವಪಕ್ಷದ ವಿರುದ್ಧ ಸಿಡಿದೆದ್ದಿದ್ದಾರೆ. ಪಂಜಾಬ್ನ ಸಮಸ್ಯೆಗಳನ್ನು ಸಂಸತ್ತಿನಲ್ಲಿ ಪ್ರಸ್ತಾವಿಸಲಿಲ್ಲ ಎಂಬ ತಮ್ಮ ಪಕ್ಷದ ಸಹೋದ್ಯೋಗಿಗಳ ಆರೋಪಕ್ಕೆ ವಿಡಿಯೊ ಮೂಲಕ ತಿರುಗೇಟು ನೀಡಿದ್ದಾರೆ. ಅವರು ಪಂಜಾಬ್ಗೆ ಸಂಬಂಧಿಸಿದ ವಿಷಯಗಳನ್ನು ಮೇಲ್ಮನೆಯಲ್ಲಿ ಪ್ರಸ್ತಾವಿಸುವ ವಿಡಿಯೊ ಬಿಡುಗಡೆ ಮಾಡಿ ತಮ್ಮ ಪಕ್ಷದವರಿಗೆ ಖಡಕ್ ಉತ್ತರ ನೀಡಿದ್ದಾರೆ.ಈ ವಿಡಿಯೊವು ಚಡ್ಡಾ ಅವರ ರಾಜ್ಯಸಭೆಯ ಭಾಷಣಗಳ ವಿವಿಧ ಕ್ಲಿಪ್ಗಳ ಸಂಗ್ರಹವಾಗಿದ್ದು, ಇದರಲ್ಲಿ ನಂಕಾನಾ ಸಾಹಿಬ್ ಕಾರಿಡಾರ್ಗಾಗಿ ಒತ್ತಾಯಿಸುವುದು, ರೈತರಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಆಗ್ರಹಿಸುವುದು, ಭಗತ್ ಸಿಂಗ್ಗೆ ಭಾರತ ರತ್ನವನ್ನು ಶಿಫಾರಸು ಮಾಡುವುದು ಹಾಗೂ ಮಹಾರಾಜ ರಂಜಿತ್ ಸಿಂಗ್ ಅವರ ರಾಜ ಸಿಂಹಾಸನವನ್ನು ಹಿಂದಿರುಗಿಸಲು ಆಗ್ರಹಿಸುವುದು ಸೇರಿ ಹಲವು ವಿಚಾರಗಳು ಸೇರಿವೆ.
ಭಾರತೀಯ ಕುಟುಂಬವೊಂದು ಮದುವೆಯ ಪ್ರವಾಸಕ್ಕಾಗಿ ಇಡೀ ರೈಲ್ವೇ ಕೋಚ್ ಅನ್ನು ಕಾಯ್ದಿರಿಸುವ ವೀಡಿಯೊ ವೈರಲ್ ಆಗಿದೆ. ಟ್ರೈನ್ಗೆ ಮದುವೆಯ ನಾಮಫಲಕವನ್ನು ಕಟ್ಟುವ ಮೂಲಕ ಸಂಭ್ರಮ ಶುರುವಾಗುತ್ತದೆ. ಕುಟುಂಬದ ಸದಸ್ಯರು ಹಾರವನ್ನು ಹಾಕುವ ಮೂಲಕ ಮತ್ತು ಅತಿಥಿಗಳನ್ನು ಸ್ವಾಗತಿಸುವ ಪೋಸ್ಟರ್ನೊಂದಿಗೆ ವೀಡಿಯೊ ಪ್ರಾರಂಭವಾಗುತ್ತದೆ.ಕುಟುಂಬವು ಶಕ್ತಿಯುತವಾದ ಬೀಟ್ಗಳಿಗೆ ನೃತ್ಯ ಮಾಡುವುದನ್ನು ಕಾಣಬಹುದು, ಮಕ್ಕಳಿಂದ ಅಜ್ಜಿಯರವರೆಗೆ ಎಲ್ಲರೂ ಭಾಗವಹಿಸುತ್ತಾರೆ.
ಆಂಧ್ರಪ್ರದೇಶದಲ್ಲಿ 22 ವರ್ಷದ ಯುವತಿಯೊಬ್ಬಳು ತನ್ನ ಪ್ರಿಯಕರನನ್ನು ಮದುವೆಯಾಗಿದ್ದಕ್ಕಾಗಿ ಹತ್ಯೆ ಮಾಡಿ, ಅದನ್ನು ಆತ್ಮಹತ್ಯೆ ಎಂದು ಬಿಂಬಿಸಲು ಸಹಾಯ ಮಾಡಿದ್ದ ಪೊಲೀಸ್ ಅಧಿಕಾರಿ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದು ಇದೀಗ ಸಸ್ಪೆಂಡ್ ಆದ ಘಟನೆ ಆಂಧ್ರಪ್ರದೇಶದಲ್ಲಿ ವರದಿಯಾಗಿದೆ. ಕಳೆದ ತಿಂಗಳು ಆಂಧ್ರಪ್ರದೇಶದ ಮಚೆರ್ಲಾ ಪಟ್ಟಣದಲ್ಲಿ ಈ ಘಟನೆ ನಡೆದಿತ್ತು.ಚೌಡೇಶ್ವರಿ ಎಂಬ ಯುವತಿ ಒಬ್ಬನನ್ನು ಪ್ರೀತಿಸಿದ್ದಳು. ಮಾರ್ಚ್ 4 ರಂದು ತನ್ನ ಮನೆಯನ್ನು ತೊರೆದು ತನ್ನ ಪೋಷಕರ ಇಚ್ಛೆಗೆ
ಬಾಗಲಕೋಟೆ: ಇಲ್ಲಿನ ಜಿಲ್ಲಾಡಳಿತ, ತಾಲ್ಲೂಕು ಆಡಳಿತ ಮತ್ತು ಪೊಲೀಸ್ ಅಧಿಕಾರಿಗಳು ಕಾಂಗ್ರೆಸ್ ಸರಕಾರದ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಅವರು ಆಕ್ಷೇಪಿಸಿದ್ದಾರೆ.ಮಾಧ್ಯಮಗಳೊಂದಿಗೆ ಇಂದು ಮಾತನಾಡಿದ ಅವರು, ನಿನ್ನೆ ಕಾಲೇಜು ಕ್ಯಾಂಪಸ್ಸಿಗೆ ಹೋಗಿ ನೀವು ಬಿಜೆಪಿಗೆ ಮತ ಕೊಟ್ಟರೆ ಜೈಲಿಗೆ ಹಾಕುತ್ತೇವೆ ಎಂಬ ಮಾಹಿತಿಯುಳ್ಳ ಒಂದು ಕರಪತ್ರವನ್ನು ಹಂಚಿ ವೈದ್ಯಕೀಯ ವಿದ್ಯಾರ್ಥಿಗಳಿಗೆ ಧಮ್ಕಿ ಹಾಕಿದ್ದಾರೆ ಎಂದು ಆರೋಪಿಸಿದರು. ಮಾಜಿ ಡಿಸಿಎಂ ಮತ್ತು ಸಂಸದ ಗೋವಿಂದ ಕಾರಜೋಳ ಅವರು ಪೊಲೀಸರಿಗೆ ದೂರು ನೀಡಿದ್ದು, ಅವರನ್ನು ಬಂಧಿಸಿದ್ದಾರೆ ಎಂದು ವಿವರಿಸಿದರು.
ಕೆಲಸ ಮಾಡಕ್ಕಾಗದೆ ಮೈಗಳ್ಳರು ಸುಲಭದಲ್ಲಿ ಹಣ ಪಡೆಯುವ ಸಲುವಾಗಿ ಕಳ್ಳತನದ ದಾರಿ ಹಿಡಿಯುತ್ತಾರೆ. ಖತರ್ನಾಕ್ ಖದೀಮರು ಮನೆಯ ಸುತ್ತಮುತ್ತವಿರುವ ವಸ್ತುಗಳನ್ನು ಯಾವುದನ್ನು ಬಿಡಲ್ಲ. ಅಂತಹದ್ದೇ ಘಟನೆ ಇದೀಗ ಬೆಂಗಳೂರಿನಲ್ಲಿ ನಡೆದಿದೆ. ಖತರ್ನಾಕ್ ಕಳ್ಳರ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಂಗಳೂರಿನ ಕೆ.ಜಿ.ಹಳ್ಳಿಯಲ್ಲಿ ಇಬ್ಬರು ಯುವಕರು ಕಟ್ಟಡದ ಹೊರಗೆ ಹಾಕಿದ್ದ ಬಲ್ಬ್ ಅನ್ನು ಕಳ್ಳತನ ಮಾಡಿದ್ದಾರೆ. ಇನ್ನು ಜನರಿಗೆ
ಹುಬ್ಬಳ್ಳಿ: ಇಲ್ಲಿನ ಲವ್ ಜಿಹಾದ್ ಪ್ರಕರಣ ಭಾರೀ ಸದ್ದು ಬೆನ್ನಲ್ಲೇ ಇದೀಗ ಅಂತಹುದ್ದೇ ಒಂದು ಪ್ರಕರಣ ಬೆಳಕಿಗೆ ಬಂದಿದೆ. ಪ್ರೀತಿಯ ನಾಟಕವಾಡಿ ಯುವತಿ ಮೇಲೆ ನಿರಂತರ ಅತ್ಯಾಚಾರ ಎಸಗಿ ಬ್ಲ್ಯಾಕ್ಮೇಲೆ ಮಾಡಿ ನಿರಂತರ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ. ಮುಫೀಸ್ ಮಿಯಾನ್ನವರ್ ಎಂಬಾತನ ವಿರುದ್ಧ ಆರೋಪ ಕೇಳಿಬಂದಿದೆ. ಳೆದ 5 ವರ್ಷಗಳ ಹಿಂದೆ ಕಾಲೇಜು ವಿದ್ಯಾರ್ಥಿನಿಯಾಗಿದ್ದ ಸಂತ್ರಸ್ತ ಯುವತಿಗೆ ಮತ್ತೊಂದು ಕಾಲೇಜಿನ ಸ್ಟೂಡೆಂಟ್ ಆಗಿದ್ದ ಕಮರಿಪೇಟೆಯ ಗವಿ ಓಣಿ ನಿವಾಸಿ ಮುಫೀಸ್ ಮಿಯಾನ್ನವರ್ ಪರಿಚಯ ಕಾರ್ಯಕ್ರಮವೊಂದರಲ್ಲಿ ಆಗಿತ್ತು.
ಬೆಂಗಳೂರು: ಕನ್ನಡ ಚಿತ್ರರಂಗದ ಭರವಸೆಯ ನಟ ಸುಮುಖ ತಮ್ಮ ಬಹುಕಾಲದ ಗೆಳತಿ ಮೈತ್ರಿ ಉಕಾ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಉತ್ತರಾಖಂಡದ ರಿಷಿಕೇಶದ ಸುಂದರ ಪರಿಸರದಲ್ಲಿ, ಗಂಗಾ ನದಿಯ ತಟದಲ್ಲಿ ಈ ಜೋಡಿಯ ವಿವಾಹ ಮಹೋತ್ಸವ ಸುಂದರವಾಗಿ ನೆರವೇರಿದೆ. ಯೋಗರಾಜ್ ಭಟ್ ನಿರ್ದೇಶನದ ಮನದ ಕಡಲು ಸಿನಿಮಾದಲ್ಲಿ ನಟಿಸಿ ಫೇಮಸ್ ಆಗಿದ್ದ ಸುಮುಖ ಈಗ ದಾಂಪತ್ಯ ಬದುಕಿಗೆ ಕಾಲಿಟ್ಟಿದ್ದಾರೆ. ಯಾವುದೇ ಅಬ್ಬರವಿಲ್ಲದೆ, ಕೇವಲ ಆಪ್ತರು ಮತ್ತು ಕುಟುಂಬದ ಸದಸ್ಯರ ಸಮ್ಮುಖದಲ್ಲಿ ಹಸೆಮಣೆ ಏರಿದ್ದಾರೆ. ರಿಷಿಕೇಶದ ಶಾಂತಿಯುತ ಪರಿಸರದಲ್ಲಿ ವಿವಾಹದಲ್ಲಿ ಬಹುಕಾಲದ ಗೆಳತಿ ಮೈತ್ರಿ ಉಕಾ ಜೊತೆಗೆ ಸುಮುಖ ಸಪ್ತಪದಿ ತುಳಿದಿದ್ದು, ಮದುವೆಯ ಸುಂದರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಈಗ ವೈರಲ್ ಆಗುತ್ತಿವೆ.
ಬೆಂಗಳೂರು: ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಹಾಲಿ ಐಪಿಎಲ್ ಆವೃತ್ತಿಯಲ್ಲಿ ಶುಭಾರಂಭ ಮಾಡಿದೆ. ಮೊದಲ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡವನ್ನು ಮಣಿಸಿದೆ.ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಕಳೆದ ಒಂದು ವಾರದಿಂದ ಚಿನ್ನಸ್ವಾಮಿ ಕ್ರೀಡಾಂಗಣ ಮತ್ತು ನಗರದ ಹೊರವಲಯದಲ್ಲಿರುವ ಕ್ರಿಕೆಟ್ ಮೈದಾನದಲ್ಲಿ ಅಭ್ಯಾಸ ಮಾಡುವುದರಲ್ಲಿ ಮಗ್ನರಾಗಿದ್ದರು.ಭಾನುವಾರ ಆರ್ಸಿಬಿ ತಂಡವು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಮೊದಲ ಪಂದ್ಯ ಮತ್ತು ಎರಡನೇ ಪಂದ್ಯಗಳ ನಡುವೆ ಎಂಟು ದಿನಗಳ ಬಿಡುವು ಇದ್ದುದರಿಂದ ಆರ್ಸಿಬಿ ತಂಡದ ನಾಯಕ ಈ ಮಧ್ಯೆ ತಿರುಪತಿ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದು ಬಂದಿದ್ದಾರೆ.
ಬೆಂಗಳೂರು: ಬೀದಿ ನಾಯಿಯೊಂದು ರಸ್ತೆಬದಿಯ ತಿಂಡಿ ವ್ಯಾಪಾರಿಯಿಂದ ಬೋಂಡಾ ಪಡೆಯಲು ಅಂಗವಿಕಲನಂತೆ ನಟಿಸಿ ತಿಂಡಿ ಗಿಟ್ಟಿಸಿಕೊಂಡ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಸ್ತೆಬದಿಯಲ್ಲಿ ತಳ್ಳುವ ಗಾಡಿಯಲ್ಲಿ ವ್ಯಕ್ತಿಯೊಬ್ಬರು ತಿಂಡಿಯನ್ನು ಮಾರಾಟ ಮಾಡುತ್ತಿರುತ್ತಾರೆ. ಅಂಗವಿಕಲ ನಾಯಿಯೊಂದು ತೇವಲುತ್ತಾ ಬಂದು ಆತನ ಬಳಿ ಬಂದು ತಿಂಡಿಗಾಗಿ ಕಾದು ಕುಳಿತುಕೊಳ್ಳುತ್ತದೆ. ಇದನ್ನು ನೋಡಿದ ಅಂಗಡಿಯವರು ಕರುಣೆಯಲ್ಲಿ ನಾಯಿಗೆ ತಿಂಡಿಯನ್ನು ನೀಡುತ್ತಾರೆ.
ಬೆಂಗಳೂರು: ಎಂ ಎಸ್ ಧೋನಿ ಇಂದು ಏನಾದರೂ ಆರ್ಸಿಬಿ ವಿರುದ್ಧ ಬ್ಯಾಟಿಂಗ್ಗೆ ಇಳಿದರೆ, ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇದೇ ಅವರ ಕೊನೆಯ ಪಂದ್ಯಾಟವಾಗಲಿದೆ ಎನ್ನಲಾಗಿದೆ. ಕಳೆದ ಕೆಲ ವರ್ಷಗಳಿಂದ ಎಂಎಸ್ ಧೋನಿ ಅವರು ಐಪಿಎಲ್ಗೆ ನಿವೃತ್ತಿ ಘೋಷಿಸುತ್ತಾರೆಂಬ ಸುದ್ದಿಯಾಗುತ್ತಲೇ ಇದೆ. ಕಳೆದ ಬಾರಿಯೇ ದೋನಿ ನಿವೃತ್ತಿಯನ್ನು ಘೋಷಣೆ ಮಾಡುತ್ತಾರೆಂದು ಊಹಿಸಲಾಗಿತ್ತು. ಆದರೆ ಈ ಬಾರಿ ಮತ್ತೇ ಐಪಿಎಲ್ನಲ್ಲಿ ಬ್ಯಾಟಿಂಗ್ ಪ್ರದರ್ಶನ ನೀಡುವುದಾಗಿ ತಂಡವು ಘೋಷಣೆ ಮಾಡಿತ್ತು.ಆದರೆ ಮುಂದಿನ ವರ್ಷಕ್ಕೆ ನಿವೃತ್ತಿ ಘೋಷಿಸುವ ಸಾಧ್ಯತೆಯಿದೆ ಎನ್ನಲಾಗಿದೆ.
ದಾವಣಗೆರೆ: 5 ಗ್ಯಾರಂಟಿಗಳ ಬಂಡವಾಳ ಹೊರತುಪಡಿಸಿ ಕಳೆದ ಸುಮಾರು 3 ವರ್ಷದಲ್ಲಿ ಯಾವುದೇ ಸಾಧನೆ ಆಗಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಆಕ್ಷೇಪಿಸಿದ್ದಾರೆ.ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪತ್ರಿಕೆ ಗಮನಿಸಿದರೆ, ದೃಶ್ಯ ಮಾಧ್ಯಮಗಳನ್ನು ಗಮನಿಸುತ್ತ ಸಾಗಿದರೆ ಗ್ಯಾರಂಟಿ ಬಿಟ್ಟು ಬೇರೆ ಸಾಧನೆಯನ್ನು ಹುಡುಕಲು ಸಾಧ್ಯವಿಲ್ಲ ಎಂದು ನುಡಿದರು. ರಾಜ್ಯದ ಮುಖ್ಯಮಂತ್ರಿಗಳೂ ಬಿಜೆಪಿ ಬಗ್ಗೆ ಮುಖ್ಯಮಂತ್ರಿ ಪದವಿಯ ಘನತೆಗೆ ಮೀರಿ ಪದ ಬಳಸುವುದನ್ನು ನಾವು ಗಮನಿಸಿದ್ದೇನೆ ಎಂದು ತಿಳಿಸಿದರು.ಮುಖ್ಯಮಂತ್ರಿ ಕುರ್ಚಿಗೆ ಪ್ರಾಮುಖ್ಯತೆ ಕೊಟ್ಟದ್ದನ್ನು ಹೊರತುಪಡಿಸಿದರೆ, ಭ್ರಷ್ಟಾಚಾರಕ್ಕೆ ಪ್ರೇರಣೆ ಕೊಟ್ಟ ಘಟನೆಗಳನ್ನು ನಾವು
ಬೆಂಗಳೂರು: ರಾಜಧಾನಿ ಬೆಂಗಳೂರು ಮತ್ತು ಸುತ್ತಲಿನ ಭಾಗಗಳಲ್ಲಿ ಇಂದಿನಿಂದ ಏ.7ರವರೆಗೆಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಕರ್ನಾಟಕದ ಹಲವೆಡೆ, ವಿಶೇಷವಾಗಿ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 21ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಬೆಂಗಳೂರಿನಲ್ಲಿ ಸಂಜೆಯ ನಂತರ ಮಳೆಯಾಗುವ ಮುನ್ಸೂಚನೆ ಇದೆ.ಮಳೆ ಎಚ್ಚರಿಕೆ: ಕರ್ನಾಟಕ ಕರಾವಳಿ, ದಕ್ಷಿಣ ಒಳನಾಡು ಮತ್ತು ಮಲೆನಾಡು ಭಾಗಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು: ಇಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೊನ ಪಂದ್ಯದ ಟಿಕೆಟ್ ಅನ್ನು ಪಡೆಯಲು ಹೋದ ಟೆಕ್ಕಿಯೊಬ್ಬರಿಗೆ ಪಂಗನಾಮ ಹಾಕಲಾಗಿದೆ.ಮಹದೇವಪುರದ ಟೆಕ್ಕಿಯೊಬ್ಬರು ಬರೋಬ್ಬರಿ ₹ 1.46 ಲಕ್ಷ ಕಳೆದುಕೊಂಡಿದ್ದಾರೆ. ಐಪಿಎಲ್ ಟಿಕೆಟ್ಗೆ ಸಂಬಂಧಿಸಿದಂತೆ ಇನ್ಸ್ಟಾಗ್ರಾಮ್ನಲ್ಲಿ ಹಾಕಲಾಗಿದ್ದ ಒಂದು ಪೋಸ್ಟ್ ನೋಡಿದ ಟೆಕ್ಕಿ ಪೋಸ್ಟ್ ಹಾಕಿದ ವಂಚಕನನ್ನು ಸಂಪರ್ಕಿಸಿದ್ದಾರೆ. ವಂಚಕ ಪಂದ್ಯದ ಟಿಕೆಟ್ಗಳು, ಊಟದ ಕೂಪನ್ಗಳು ಮತ್ತು ವಿಐಪಿ ಸೌಲಭ್ಯಗಳನ್ನು ಹೊಂದಿರುವ ಟಿಕೆಟ್ಗಳನ್ನು ನೀಡುವುದಾಗಿ ಆಮಿಷ ಒಡ್ಡಿದ್ದಾನೆ. ಇದನ್ನು ನಂಬಿದ ಟೆಕ್ಕಿ, ತಾನು ಮತ್ತು ತನ್ನ ತಾಯಿಯ ಬ್ಯಾಂಕ್ ಖಾತೆಗಳಿಂದ ಹಣವನ್ನು ವರ್ಗಾಯಿಸಿದ್ದಾರೆ.
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಹಾಲಿ ಚಾಂಪಿಯನ್ ಆರ್ಸಿಬಿ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ. ಈ ಹಿನ್ನಲೆಯಲ್ಲಿ ಬೆಂಗಳೂರು ಮೆಟ್ರೋ ಮತ್ತು ಬಿಎಂಟಿಸಿ ವಿಶೇಷ ಬಸ್ ಸೇವೆಗಳನ್ನು ಕಲ್ಪಿಸಿದೆ. ಪ್ರಯಾಣಿಕರಿಗೆ ಸುಲಭ ಮತ್ತು ಸುರಕ್ಷಿತ ಪ್ರಯಾಣಕ್ಕೆ ಮೆಟ್ರೋ ಸೇವೆಯನ್ನು ಮಧ್ಯರಾತ್ರಿ 2 ಗಂಟೆವರೆಗೆ ವಿಸ್ತರಿಸಿದೆ. ಮಾತ್ರವಲ್ಲದೆ ಕ್ರೀಡಾಂಗಣದ ಸುತ್ತಮುತ್ತಲ ರಸ್ತೆಗಳು, ಜಂಕ್ಷನ್ಗಳಲ್ಲಿ ವಾಹನ ನಿಲುಗಡೆ ನಿಷೇಧ ಮಾಡಲಾಗಿದೆ. ಐಪಿಎಲ್ ಟಿಕೆಟ್ ಹೊಂದಿರುವವರಿಗೆ ಮೆಟ್ರೊ ಸೇವೆ ಉಚಿತವಾಗಿದೆ.ವೈಟ್ಫೀಲ್ಡ್(ಕಾಡುಗೋಡಿ)ಯಿಂದ ರಾತ್ರಿ 12.30ಕ್ಕೆ ಮತ್ತು ಚಲ್ಲಘಟ್ಟದಿಂದ ರಾತ್ರಿ 12.45ಕ್ಕೆ. ರೇಷ್ಮೆ ಸಂಸ್ಥೆ ಹಾಗೂ ಮಾದಾವರದಿಂದ 12.45ಕ್ಕೆ. ಬೊಮ್ಮಸಂದ್ರ ದಿಂದ ರಾತ್ರಿ 1ಕ್ಕೆ ಹಾಗೂ ಆರ್.ವಿ. ರಸ್ತೆಯಿಂದ ರಾತ್ರಿ 2ಕ್ಕೆ. ಕೆಂಪೇಗೌಡ ನಿಲ್ದಾಣ-ಮೆಜೆಸ್ಟಿಕ್ನಿಂದ ನಾಲ್ಕು ದಿಕ್ಕುಗಳಿಗೆ 1.30ಕ್ಕೆ ಕೊನೆಯ ರೈಲು ಹೊರಡಲಿದೆ.
ವಾಷಿಂಗ್ಟನ್: ಹೋರ್ಮುಜ್ ಜಲಸಂಧಿಯನ್ನು ತೆರೆಯುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಇರಾನ್ಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಸಾಮಾಜಿಕ ಮಾಧ್ಯಮ ವೇದಿಕೆ ಟ್ರೂತ್ ಸೋಷಿಯಲ್ನಲ್ಲಿ ಪೋಸ್ಟ್ನಲ್ಲಿ ಟ್ರಂಪ್ ಇರಾನ್ಗೆ ಎಚ್ಚರಿಕೆ ನೀಡಿದ್ದಾರೆ. ಇರಾನ್ಗೆ ನೀಡಿದ್ದ ಗಡುವು 48 ಗಂಟೆಗಳಲ್ಲಿ ಮುಕ್ತಾಯಗೊಳ್ಳುತ್ತದೆ. ಅದರ ನಂತರ ಅಮೆರಿಕ ಇರಾನ್ ವಿರುದ್ಧ ಪ್ರಮುಖ ಮಿಲಿಟರಿ ಕ್ರಮಕೈಗೊಳ್ಳುತ್ತದೆ ಎಂದು ಟ್ರಂಪ್ ವಾರ್ನಿಂಗ್ ನೀಡಿದ್ದಾರೆ.ಇರಾನ್ 48 ಗಂಟೆಯೊಳಗಾಗಿ ಒಪ್ಪಂದಕ್ಕೆ ಬರಬೇಕು. ಇಲ್ಲವಾದಲ್ಲಿ ನರಕ ತೋರಿಸುತ್ತೇವೆ. ಮುಂದಿನ ಎರಡರಿಂದ ಮೂರು ವಾರಗಳವರೆಗೆ ಇರಾನ್ ವಿರುದ್ಧ ಇನ್ನಷ್ಟು ತೀವ್ರ ದಾಳಿಗಳನ್ನು ನಡೆಸಲಿದ್ದೇವೆ. ಆ ಮೂಲಕ ಅವರನ್ನು ಮರಳಿ ಶಿಲಾಯುಗದ ಸ್ಥಿತಿಗೆ ಕಳುಹಿಸಲಿದ್ದೇವೆ ಎಂದು ಟ್ರಂಪ್ ಪುನರುಚ್ಚರಿಸಿದ್ದರು.