ಬೆಂಗಳೂರು: ಮಾರಕಾಸ್ತ್ರ ಹಿಡಿದು ಸಾರ್ವಜನಿಕವಾಗಿ ನಡೆದು ಚರ್ಚೆಗೆ ಕಾರಣವಾಗಿದ್ದ ನಟ ವಿನಯ್ ಗೌಡ ಹಾಗೂ ರಜತ್ ಕಿಶನ್ ಅವರನ್ನು ಬಂಧಿಸಿದ್ದಾರೆ. ಈ ಮೂಲಕ ಕೈಯಲ್ಲಿ ಲಾಂಗ್ ಹಿಡಿದು ಪೋಸ್ ಕೊಟ್ಟಿದ್ದ ವಿನಯ್ ಗೌಡ, ರಜತ್ ಕಿಶನ್ಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.ವಿಚಾರಣೆಗೆ ಕರೆದಿದ್ದ ಬಸವೇಶ್ವರ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ ವಿನಯ್ ಗೌಡ ಹಾಗೂ ರಜತ್ ಕಿಶನ್ ಇಬ್ಬರು ಕೈಯಲ್ಲಿ ಲಾಂಗು, ಕಣ್ಣಿಗೆ ಗ್ಲಾಸ್ ಹಾಕಿಕೊಂಡು ಸಖತ್ ಪೋಸ್ ಕೊಟ್ಟಿದ್ದರು. ಕೈಯಲ್ಲಿ ಲಾಂಗ್ ಹಿಡಿದು ವಿಡಿಯೋ ಕೂಡ ಮಾಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡಿತ್ತು.ಇದರ ಬೆನ್ನಲ್ಲೆ ಇಬ್ಬರ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಪೋಲಿಸರು ಎಫ್ಐಆರ್ ದಾಖಲಿಸಿದ್ದು,
ಬೆಳಗಾವಿ: ಮುಂದಿನ ಮಾರ್ಚ್ ತಿಂಗಳಿಗೆ ಪ್ರತಿಯೊಂದು ಜಿಲ್ಲೆಯಲ್ಲೂ ಸಾಮೂಹಿಕ ಸೀಮಂತ ಕಾರ್ಯಕ್ರಮ ಆಯೋಜಿಸಲು ಸರ್ಕಾರದಿಂದ ಆದೇಶ ಹೊರಡಿಸಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಸಿ.ಪಿ.ಎಡ್ ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ 3000 ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮದಲ್ಲಿ ಅವರು ಹೇಳಿದರು.
ಮುಂಬೈ: ಅನೇಕ ಭಾರತೀಯ ಚಿತ್ರಗಳು ಆಸ್ಕರ್ ಪ್ರಶಸ್ತಿಗಳನ್ನು ಗೆಲ್ಲಲು ಅರ್ಹವಾಗಿದ್ದವು ಆದರೆ ಪದೇ ಪದೇ ಕಡೆಗಣಿಸಲ್ಪಟ್ಟವು ಎಂದು ನಟಿ ದೀಪಿಕಾ ಪಡುಕೋಣೆ ಬೇಸರ ವ್ಯಕ್ತಪಡಿಸಿದ್ದಾರೆ.ಪ್ಯಾರಿಸ್ನಲ್ಲಿ ಲೂಯಿ ವಿಟಾನ್ ಪ್ರದರ್ಶನಕ್ಕೆ ಸಿದ್ಧವಾಗುತ್ತಿರುವ ದೀಪಿಕಾ ಪಡುಕೋಣೆ ಅವರು, 2023 ರಲ್ಲಿ 'ನಾತು ನಾತು' ಗಾಗಿ ಆರ್ಆರ್ಆರ್ ಅತ್ಯುತ್ತಮ ಮೂಲ ಗೀತೆ ಪ್ರಶಸ್ತಿ ಕ್ಷಣವನ್ನು ಹಂಚಿಕೊಂಡು ಮಾತನಾಡಿದರು. ಈ ವಿಡಿಯೋ ತುಣುಕನ್ನು ನಟಿ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.ಶ್ರೀಮಂತ ಸಿನಿಮೀಯ ಪರಂಪರೆ ಮತ್ತು ಅಪಾರ ಪ್ರತಿಭೆಯ ಹೊರತಾಗಿಯೂ ಭಾರತದಿಂದ ಹಲವು ಬಾರೀ "ಆಸ್ಕರ್ನಿಂದ ದೋಚಲ್ಪಟ್ಟಿದೆ" ಎಂದು ಹೇಳುವ ಮೂಲಕ ನಟಿ ತಮ್ಮ ನಿರಾಶೆಯನ್ನು ವ್ಯಕ್ತಪಡಿಸಿದರು.
ಬೆಂಗಳೂರು: ಚೆನ್ನೈ ಸೂಪರ್ ಕಿಂಗ್ಸ್ (CSK) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ನಡುವಿನ ಪಂದ್ಯವು ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಬಹುನಿರೀಕ್ಷಿತ ಪಂದ್ಯಗಳಲ್ಲಿ ಒಂದಾಗಿದೆ. ಇದೇ 28ರಂದು CSK ಹಾಗೂ RCB 2025ರ ಆವೃತ್ತಿಯ ಮೊದಲ ಪಂದ್ಯಾಟವನ್ನು ಎದುರಿಸಲಿದೆ.ಈ ಪವರ್ ಪ್ಯಾಕ್ಡ್ ಆಟವನ್ನು ನೇರಪ್ರಸಾರ ವೀಕ್ಷಿಸಲು ಕಾತುರದಿಂದ ಕಾಯುತ್ತಿರುವ ಅಭಿಮಾನಿಗಳಿಗೆ, ಸಮಯಕ್ಕೆ ಮುಂಚಿತವಾಗಿ ಟಿಕೆಟ್ಗಳನ್ನು ಖರೀದಿಸುವುದು ಪ್ರಮುಖ ಆದ್ಯತೆಯಾಗಿದೆ. CSK vs RCB ಪಂದ್ಯಕ್ಕೆ ಟಿಕೆಟ್ಗಳನ್ನು ಹೇಗೆ ಖರೀದಿಸುವುದು ಎಂಬುದರ ಕುರಿತು ವಿವರವಾದ ಮಾಹಿತಿ ಇಲ್ಲಿದೆ.IPL ಟಿಕೆಟ್ಗಳನ್ನು ಖರೀದಿಸಲು ಆನ್ಲೈನ್ ಬುಕಿಂಗ್ ಅತ್ಯಂತ ಅನುಕೂಲಕರ ಮಾರ್ಗವಾಗಿದೆ. IPL
ಬೆಂಗಳೂರು: ಹನಿಟ್ರ್ಯಾಪ್ ಅನ್ನು ಬಯಲಿಗೆ ತಂದ ಸೂತ್ರಧಾರಿ ಸಿಎಂ ಸಿದ್ದರಾಮಯ್ಯ ಎಂದು ವಿಪಕ್ಷ ನಾಯಕ ಆರ್ ಅಶೋಕ್ ನೇರ ಗಂಭೀರ ಆರೋಪ ಮಾಡಿದ್ದಾರೆ.ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭೆಯ ಕಲಾಪದ ವೇಳೆ ಸಚಿವ ಕೆ.ಎನ್.ರಾಜಣ್ಣ ಅವರು ಈ ಪ್ರಕರಣ ಕುರಿತು ಗೋಗರೆದ ಕಾರಣ, ಜವಾಬ್ದಾರಿಯುತ ವಿರೋಧ ಪಕ್ಷವಾಗಿ ನಾವು ಈ ಪ್ರಕರಣವನ್ನು ಪ್ರಸ್ತಾಪಿಸಿದೆವು ಎಂದರು.ಇನ್ನೂ ಈ ವಿಚಾರವನ್ನು ಕೆಎನ್ ರಾಜಣ್ಣ ಹಾಗೂ ಗೃಹ ಸಚಿವ ಜಿ ಪರಮೇಶ್ವರ ಅವರು ಸಿಎಂ ಅವರನ್ನು ಭೇಟಿ ಮಾಡಿ, ಚರ್ಚಿಸಿಯೇ ಸದನಕ್ಕೆ ಬಂದಿದ್ದರು. ಈ ವಿಷಯವನ್ನು ಪ್ರಸ್ತಾಪಿಸಲು ಅವಕಾಶ ನೀಡಬೇಕು ಎಂಬ ಸಂದೇಶವನ್ನು ಸಚಿವರೇ ಸಭಾಧ್ಯಕ್ಷರಿಗೂ ರವಾನಿಸಿದ್ದರು. ಇದು ರಾಜ್ಯದ ಸಿಎಂ
ಮೀರತ್: ದೇಶವನ್ನೇ ಬೆಚ್ಚಿಬೀಳಿಸಿದ ನೌಕಾಪಡೆ ಅಧಿಕಾರಿ ಸೌರಭ್ ರಜಪೂತ್ ಭೀಕರ ಹತ್ಯೆ ಪ್ರಕರಣದಲ್ಲಿ ಪತ್ನಿ ಹಾಗೂ ಆಕೆಯ ಪ್ರಿಯಕರನ ಒಂದೊಂದೆ ಭಯಾನಕ ಕೃತ್ಯಗಳು ಬಯಲಿಗೆ ಬರುತ್ತಿದೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ಹತ್ಯೆ ಆರೋಪಿ ಸಾಹಿಲ್ ಶುಕ್ಲಾನ ರೂಂನ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಆ ವಿಡಿಯೋದಲ್ಲಿ ಕೊಠಡಿಯ ತುಂಬಾ ಪೇಟಿಂಗ್ ಬಿಡಿಸಲಾಗಿದೆ. ಅದರಲ್ಲಿ ನಿಗೂಢ ಬರಹಗಳನ್ನು ಕಾಣಬಹುದು. ಮನೆ ತುಂಬಾ ಸಿಗರೇಟ್, ಸ್ನಾಕ್ಸ್ ಪ್ಯಾಕೇಟ್ ಚೆಲ್ಲಿರುವುದನ್ನು ಕಾಣಬಹುದು.ತನಿಖಾಧಿಕಾರಿಗಳ ಮಾಹಿತಿಯಂತೆ ಶುಕ್ಲಾ ಅವರ ಕೋಣೆಯಲ್ಲಿ ತಾಂತ್ರಿಕ ಚಿಹ್ನೆಗಳು, ಪೈಶಾಚಿಕ
ಚೆನ್ನೈ: ಐಪಿಎಲ್ 2025 ರಲ್ಲಿ ತಾನಾಡಿದ ಮೊದಲ ಪಂದ್ಯದಲ್ಲೇ ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮೋಸದಾಟವಾಡಿತಾ? ಹೀಗೊಂದು ಅನುಮಾನಗಳಿಗೆ ಕಾರಣವಾಗಿದೆ ಈ ವಿಡಿಯೋ. ಮುಂಬೈ ವಿರುದ್ಧದ ಪಂದ್ಯವನ್ನು ಚೆನ್ನೈ 4 ವಿಕೆಟ್ ಗಳಿಂದ ರೋಚಕವಾಗಿ ಗೆದ್ದುಕೊಂಡಿತು. ಆದರೆ ಫೀಲ್ಡಿಂಗ್ ವೇಳೆ ಋತುರಾಜ್ ಗಾಯಕ್ ವಾಡ್ ಪಡೆ ಚೆಂಡು ವಿರೂಪಗೊಳಿಸಿದೆ ಎಂದು ನೆಟ್ಟಿಗರು ಆರೋಪಿಸಿದ್ದಾರೆ. ಇದಕ್ಕೆ ತಕ್ಕ ವಿಡಿಯೋವೊಂದೂ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಚೆನ್ನೈ ತಂಡ ಫೀಲ್ಡಿಂಗ್ ವೇಳೆ ನಾಯಕ ಋತುರಾಜ್ ಗಾಯಕ್ ವಾಡ್ ಬೌಲರ್ ಖಲೀಲ್ ಅಹ್ಮದ್ ಬಳಿ ತೆರಳಿ ಏನೋ ಅನುಮಾನಾಸ್ಪದವಾಗಿ ನಡೆದುಕೊಳ್ಳುತ್ತಾರೆ.
ಬೆಂಗಳೂರು: ಕಾಳಿದಾಸ ಕನ್ನಡ ಮೇಸ್ಟ್ರು, ಶಿವಾಜಿ ಸುರತ್ಕಲ್, ಶುಭಮಂಗಳ, ಛೂ ಮಂತರ್ ಹೀಗೇ ಸಾಲು ಸಾಲು ಹಿಟ್ ಸಿನಿಮಾಗಳಲ್ಲಿ ಅಭಿನಯಿಸಿದ್ದ ಕನ್ನಡದ ಖ್ಯಾತ ನಟಿ ಮೇಘಾನ ಗವ್ಕಾಂರ್ ಅವರು ಇದೀಗ ತಮ್ಮ ಅಭಿಮಾನಿಗಳ ಬಳಿಯೊಂದು ಗುಡ್ನ್ಯೂಸ್ ಹಂಚಿಕೊಂಡಿದ್ದಾರೆ.ಅದೇನೆಂದರೆ ನಟಿ ಡಾಕ್ಟರೇಟ್ ಪದವಿಯನ್ನು ಪಡೆದಿರುವ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂನಲ್ಲಿ ವಿಡಿಯೋ ಹಂಚಿ ಹೇಳಿಕೊಂಡಿದ್ದಾರೆ. ಪದವಿಯನ್ನು ಪಡೆಯುವ ಮೂಲಕ ನನ್ನ ತಂದೆಯ ಕನಸ್ಸನ್ನು ಈಡೇರಿಸಿದ್ದೇನೆ ಎಂದು ಹೇಳಿಕೊಂಡಿದ್ದಾರೆ.ಕಳೆದ 6 ವರ್ಷದಿಂದ ನಾನು ಪಿಎಚ್ಡಿಗಾಗಿ ಅಧ್ಯಯನ ಮಾಡಿದ್ದೆ, ಕಳೆದ ವರ್ಷ ಅಕ್ಟೋಬರ್ನಲ್ಲಿ
ಬೆಂಗಳೂರು: ಸಂವಿಧಾನ ಬದಲಿಸುವ ಮಾತನಾಡಿ ಕಾಂಗ್ರೆಸ್ ಉನ್ನತ ನಾಯಕ ರಾಹುಲ್ ಗಾಂಧಿಗೇ ಡಿಸಿಎಂ ಡಿಕೆ ಶಿವಕುಮಾರ್ ಮುಜುಗರ ತಂದಿಟ್ಟರಾ? ಹೀಗೊಂದು ಚರ್ಚೆ ಇದೀಗ ಶುರುವಾಗಿದೆ. ಸಂವಾದ ಕಾರ್ಯಕ್ರಮವೊಂದರಲ್ಲಿ ಡಿಕೆ ಶಿವಕುಮಾರ್, ಮುಸ್ಲಿಮರಿಗಾಗಿ ಸಂವಿಧಾನವೂ ಬದಲಾಗುತ್ತದೆ ಎಂಬರ್ಥದಲ್ಲಿ ಹೇಳಿಕೆ ನೀಡಿದ್ದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಇದನ್ನೇ ಬಿಜೆಪಿ ಪ್ರಮುಖ ಅಸ್ತ್ರ ಮಾಡಿಕೊಂಡಿದೆ. ಈ ಬಗ್ಗೆ ಲೇವಡಿ ಮಾಡಿರುವ ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ, ಎಲ್ಲೇ ಹೋದ್ರೂ ಸಂವಿಧಾನ ಪುಸ್ತಕ ಹಿಡಿದು ಪ್ರದರ್ಶನ ಮಾಡುವ ರಾಹುಲ್ ಗಾಂಧಿಗೆ ಡಿಕೆ ಶಿವಕುಮಾರ್ ಈ ಮಾತು ಹೇಳಲಿ ಎಂದು ಟಾಂಗ್ ಕೊಟ್ಟಿದ್ದಾರೆ.
ಬೆಂಗಳೂರು: ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಸೋಮವಾರ ಹಿರಿಯ ನಟಿ ಶಬಾನಾ ಅಜ್ಮಿ ಮತ್ತು ಪ್ರಸಿದ್ಧ ಗೀತರಚನೆಕಾರ ಜಾವೇದ್ ಅಖ್ತರ್ ಅವರು ಭೇಟಿಯಾಗಿ ಕೆಲಹೊತ್ತು ಮಾತನಾಡಿದರು.ಬೆಂಗಳೂರಿನಲ್ಲಿ ನಡೆದ 16 ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಜೀವಮಾನ ಸಾಧನೆ ಪ್ರಶಸ್ತಿ ಪಡೆದಿದ್ದಕ್ಕಾಗಿ ಶಬನಾ ಅಜ್ಮಿ ಅವರನ್ನು ಡಿಕೆ ಶಿವಕುಮಾರ್ ಅವರು ಅಭಿನಂದಿಸಿದರು.ಶಿವಕುಮಾರ್ ತಮ್ಮ ಎಕ್ಸ್ ಖಾತೆಯಲ್ಲಿ ಭೇಟಿಯ ಕ್ಷಣಗಳನ್ನು ಎಕ್ಸ್ನಲ್ಲಿ ಪೋಸ್ಟ್ ಹಾಕಿದ್ದಾರೆ.ಖ್ಯಾತ ಗೀತರಚನೆಕಾರ ಜಾವೇದ್ ಅಖ್ತರ್ ಮತ್ತು ಹಿರಿಯ ನಟಿ ಶಬಾನಾ ಅಜ್ಮಿ ಇಂದು ನನ್ನ ಮನೆಯಲ್ಲಿ ನನ್ನನ್ನು ಭೇಟಿಯಾದರು. 16 ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಜೀವಮಾನ ಸಾಧನೆ
ಮುಂಬೈ: ಸಿಕಂದರ್ ಸಿನಿಮಾ ಮೂಲಕ ಮೊದಲ ಬಾರಿ ಜೋಡಿಯಾಗಿ ತೆರೆ ಹಂಚಿಕೊಂಡಿರುವ ನಟ ಸಲ್ಮಾನ್ ಖಾನ್ ಹಾಗೂ ರಶ್ಮಿಕಾ ಮಂದಣ್ಣ ವಯಸ್ಸಿನ ಅಂತರದ ಬಗ್ಗೆ ಚರ್ಚೆಗಳು ನಡೆಯುತ್ತಿದೆ. ಇದೀಗ ಈ ವಿಚಾರವಾಗಿ ನಟ ಸಲ್ಮಾನ್ ಖಾನ್ ಹಾಸ್ಯಸ್ಪದವಾಗಿ ಪ್ರತಿಕ್ರಿಯಿಸಿದ್ದಾರೆ.ಮಾರ್ಚ್ 23 ರಂದು ಮುಂಬೈನಲ್ಲಿ ನಡೆದ ಸಿಕಂದರ್ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ, ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿನಿಮಾದಲ್ಲಿನ ವಯಸ್ಸಿನ ಅಂತರದ ಬಗ್ಗೆ ನಾಯಕಿಗೆ ಸಮಸ್ಯೆಯಿಲ್ಲ, ಅದಲ್ಲದೆ ಈ ವಿಚಾರ ಆಕೆಯ ತಂದೆಗೂ ಸಮಸ್ಯೆಯಿಲ್ಲ. ಹಾಗೀದ್ಮೇಲೆ ನೀವು ಯಾಕೆ ಮಾತನಾಡಬೇಕು ಎಂದು ನಗುತ್ತನೇ ಸಲ್ಮಾನ್ ನೆಟ್ಟಿಗರ ಬಾಯಿ ಮುಚ್ಚಿಸಿದ್ದಾರೆ.
ಕಲ್ಬುರ್ಗಿ: ಸಂವಿಧಾನ ಬದಲಿಸುವ ಕುರಿತ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಯು ಪ್ರಜಾಪ್ರಭುತ್ವ ವಿರೋಧಿ ಹಾಗೂ ಸಂವಿಧಾನ ವಿರೋಧಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ.ಮಾಧ್ಯಮಗಳ ಜೊತೆ ಇಂದು ಇಲ್ಲಿ ಮಾತನಾಡಿದ ಅವರು, ಸಂವಿಧಾನ ಬದಲಿಸಲು ಬಿಜೆಪಿ ಮತ್ತು ನರೇಂದ್ರ ಮೋದಿ ಜೀ ಅವರು ಅವಕಾಶ ಕೊಡುವುದಿಲ್ಲ ಎಂದು ತಿಳಿಸಿದರು. ಡಿ.ಕೆ.ಶಿವಕುಮಾರ್ ಅವರ ಹೇಳಿಕೆಯನ್ನು ಖಂಡಿಸುವುದಾಗಿ ಹೇಳಿದರು.ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ಪಕ್ಷವು ಮುಸ್ಲಿಮರನ್ನು ಮತಬ್ಯಾಂಕ್ ಆಗಿ ಮಾಡಿಕೊಂಡಿದೆ.
ಬೆಂಗಳೂರು: ನಂದಿನಿ ಹಾಲಿನ ದರ ಏರಿಕೆಗೆ ಕೆಎಂಎಫ್ ಈಗಾಗಲೇ ಸರ್ಕಾರಕ್ಕೆ ಮನವಿ ಸಲ್ಲಿಸಿದೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆಯೂ ನಡೆಯಲಿದೆ. ಆದರೆ ನಂದಿನಿ ಹಾಲಿಗೆ ಹೆಚ್ಚಳವಾಗಲಿರುವುದು 5 ರೂ. ಅಲ್ಲ, 3 ರೂಪಾಯಿ ಎನ್ನಲಾಗುತ್ತಿದೆ. ನಂದಿನಿ ಹಾಲಿನ ದರವನ್ನು 5 ರೂ.ಗೆ ಏರಿಕೆ ಮಾಡಲಾಗುತ್ತದೆ ಎಂದು ಸುದ್ದಿಯಾಗಿತ್ತು. ಈಗಾಗಲೇ ಹಾಲು ಒಕ್ಕೂಟಗಳು ಸರ್ಕಾರಕ್ಕೆ ದರ ಹೆಚ್ಚಳಕ್ಕೆ ಮನವಿ ಮಾಡಿತ್ತು. ಆದರೆ ಸರ್ಕಾರ ಇದುವರೆಗೆ ತೀರ್ಮಾನ ತೆಗೆದುಕೊಂಡಿರಲಿಲ್ಲ. ಇಂದು ಸಿಎಂ ಜೊತೆಗಿನ ಸಭೆಯಲ್ಲಿ ತೀರ್ಮಾನವಾಗಲಿದೆ.
ಬೆಂಗಳೂರು: ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣದಲ್ಲಿ ಆತನ ಆಗಿನ ಗೆಳತಿ ರಿಯಾ ಚಕ್ರವರ್ತಿ ಬಳಿ ಮಾಧ್ಯಮಗಳು ಕ್ಷಮೆಯಾಚಿಸಬೇಕೆಂದು ಬಾಲಿವುಡ್ ನಟಿ ದಿಯಾ ಮಿರ್ಜಾ ಆಗ್ರಹಿಸಿದ್ದಾರೆ.ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣದಲ್ಲಿ ಮಾಧ್ಯಮಗಳು ರಿಯಾ ಚಕ್ರವರ್ತಿಗೆ ತೀವ್ರ ನೋವು ಮತ್ತು ಕಿರುಕುಳ ನೀಡಿದೆ ಎಂದು ದಿಯಾ ಮಿರ್ಜಾ ಅವರು ಬರೆದುಕೊಂಡಿದ್ದಾರೆ. ಸುಶಾಂತ್ ಸಾವು ಪ್ರಕರಣದಲ್ಲಿ ರಿಯಾ ಕೈವಾಡವಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಎರಡು ಪ್ರತ್ಯೇಕ ಮುಕ್ತಾಯ ವರದಿಗಳನ್ನು ಸಲ್ಲಿಸಿದೆ. ಆತ್ಮಹತ್ಯೆಗೆ ಪ್ರಚೋದನೆ ನೀಡಲಾಗಿದೆ ಎಂದು ಆರೋಪಿಸಿ ನಟನ ತಂದೆ ಕೆಕೆ ಸಿಂಗ್ ನೀಡಿದ ದೂರು ಮತ್ತು ಸುಶಾಂತ್ ಗೆಳತಿ, ನಟಿ ರಿಯಾ ಚಕ್ರವರ್ತಿ ಅವರು ಸುಶಾಂತ್ ಸಹೋದರಿಯರ ವಿರುದ್ಧ
ಚೆನ್ನೈ: ಇಲ್ಲಿನ ಚೆಪಾಕ್ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ತಂಡ ಸೋಲು ಅನುಭವಿಸಿತು. ಆದರೆ, ಆ ತಂಡವನ್ನು ಪ್ರತಿನಿಧಿಸಿದ್ದ ವಿಘ್ನೇಶ್ ಪುತ್ತೂರು ಎಂಬ ಯುವಕ ಚೊಚ್ಚಲ ಪಂದ್ಯದಲ್ಲೇ ಮೂರು ವಿಕೆಟ್ ಪಡೆದು ಎಲ್ಲರ ಹೃದಯ ಗೆದ್ದಿದ್ದಾರೆ.ಕೇರಳ ಮೂಲದ 24 ವರ್ಷದ ಈ ವಿಘ್ನೇಶ್ ಎಂಬ ಯುವಕ ಸದ್ಯ ಕ್ರಿಕೆಟ್ ಲೋಕದಲ್ಲಿ ಸುದ್ದಿಯಲ್ಲಿದ್ದಾರೆ. ಮಾತ್ರವಲ್ಲ, ಕ್ರಿಕೆಟ್ ದಂತಕತೆ ಮಹೇಂದ್ರ ಸಿಂಗ್ ಧೋನಿ ಅವರಿಂದಲೂ ಭುಜ ತಟ್ಟಿ ಮೆಚ್ಚುಗೆ ಪಡೆದಿರುವ ಈ ಬೌಲರ್ ಭರವಸೆ ಮೂಡಿಸಿದ್ದಾರೆ. ಭಾನುವಾರ ನಡೆದ ಪಂದ್ಯದಲ್ಲಿ ಇಂಪ್ಯಾಕ್ಸ್ ಆಟಗಾರನಾಗಿ ಕಣಕ್ಕೆ ಇಳಿದ ವಿಘ್ನೇಶ್ ಮೂರು ವಿಕೆಟ್ ಪಡೆದು ಮಿಂಚಿದ್ದರು. ರೋಹಿತ್ ಶರ್ಮಾ ಬದಲಿಗೆ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿದಿದ್ದ ವಿಘ್ನೇಶ್ ತಮ್ಮ ಸ್ಪಿನ್ ಮೋಡಿಯಿಂದ ಆಕರ್ಷಿಸಿದರು.
ಬೆಂಗಳೂರು: ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದು, ಪ್ರತೀ ತಿಂಗಳು 12 ರಿಂದ 15 ಲಕ್ಷ ರೂ. ಆಂಬ್ಯುಲೆನ್ಸ್ ಗೆ ದಾನ ಮಾಡ್ತಿದ್ದೇನೆ ಎಂದಿದ್ದಾರೆ. ಚಿಕ್ಕಬಳ್ಳಾಪುರಕ್ಕೆ ಪ್ರದೀಪ್ ಈಶ್ವರ್ ಏನು ಮಾಡ್ತಿದ್ದಾರೆ ಎಂಬ ವಿಪಕ್ಷಗಳ ಟೀಕೆಗೆ ಇಂದು ಪತ್ರಿಕಾಗೋಷ್ಠಿಯಲ್ಲಿ ಉತ್ತರ ಕೊಟ್ಟಿದ್ದಾರೆ. ಎಲ್ಲಾ ಇದ್ದು ದಾನ ಮಾಡೋದು ದಾನ ಅಲ್ಲ, ಏನೂ ಇಲ್ಲದೇ ಇದ್ದರೂ ಅಗತ್ಯವಿದ್ದವರಿಗೆ ದಾನ ಮಾಡುವುದು ದಾನ ಎಂದಿದ್ದಾರೆ. ನನ್ನ ಶಾಸಕರ ವೇತನ, ಪರಿಶ್ರಮ್ ಅಕಾಡಮಿಯ ಗಳಿಕೆ ಎಲ್ಲಾ ಸೇರಿ ತಿಂಗಳಿಗೆ 12-15 ಲಕ್ಷ ರೂ. ಅಮ್ಮ ಆಂಬ್ಯುಲೆನ್ಸ್ ಗೆ ನೀಡುತ್ತಿದ್ದೇನೆ.
ನವದೆಹಲಿ: ರಾಜ್ಯದಲ್ಲಿ ಕೋಲಾಹಲ ಸೃಷ್ಟಿಸಿರುವ ಹನಿಟ್ರ್ಯಾಪ್ ಪ್ರಕರಣ ಈಗ ಸುಪ್ರೀಂ ಕೋರ್ಟ್ ಅಂಗಳ ತಲುಪಿಸಿದೆ. ಸಚಿವರು, ನ್ಯಾಯಾಧೀಶರು ಸೇರಿದಂತೆ ಹಲವರನ್ನು ಹನಿಟ್ರ್ಯಾಪ್ ಮಾಡಿದ್ದಾರೆ ಎನ್ನಲಾದ ಪ್ರಕರಣದ ತನಿಖೆಗೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾದ ಪಿಎಎಲ್ ಅರ್ಜಿಯ ಪರಿಶೀಲನೆಗೆ ಸುಪ್ರೀಂಕೋರ್ಟ್ ಇಂದು ಹಸಿರು ನಿಶಾನೆ ನೀಡಿದೆ.ಮಾಧ್ಯಮ ವರದಿಗಳ ಆಧಾರದ ಮೇಲೆ ಧನ್ಬಾದ್ ನಿವಾಸಿ ವಿನಯ್ ಕುಮಾರ್ ಸಿಂಗ್ ಅವರು ಸುಪ್ರೀಂ ಕೋರ್ಟ್ಗೆ ಅರ್ಜಿಯನ್ನು ಸಲ್ಲಿಸಿದ್ದಾರೆ. ವಿನಯ್ ಪರ ವಕೀಲರಾದ ವರುಣ್ ಕುಮಾರ್ ಸಿಂಗ್ ಅವರು ಅರ್ಜಿಯನ್ನು ತುರ್ತು ವಿಚಾರಣೆ ನಡೆಸುವಂತೆ ಕೋರ್ಟ್ಗೆ ಮನವಿ ಮಾಡಿದ್ದಾರೆ.
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಈಗ ಫೋನ್ ಕದ್ದಾಲಿಕೆ ವಿಚಾರ ಭಾರೀ ಸದ್ದು ಮಾಡ್ತಿದೆ. ಒಂದೆಡೆ ವಿಪಕ್ಷ ನಾಯಕ ಆರ್ ಅಶೋಕ್ ನನ್ನದು, ಕುಮಾರಸ್ವಾಮಿಯವರದ್ದು ಫೋನ್ ಕದ್ದಾಲಿಕೆಯಾಗ್ತಿದೆ ಎಂದು ಆರೋಪಿಸಿದ್ದಾರೆ. ಇನ್ನೊಂದೆಡೆ ಗೃಹಸಚಿವ ಜಿ ಪರಮೇಶ್ವರ್ ನಂಗೆ ಇದರ ಬಗ್ಗೆ ಮಾಹಿತಿಯಿಲ್ಲ ಎಂದಿದ್ದಾರೆ. ಹನಿಟ್ರ್ಯಾಪ್ ಗದ್ದಲದ ನಡುವೆ ಈಗ ರಾಜ್ಯ ರಾಜಕೀಯದಲ್ಲಿ ಫೋನ್ ಟ್ಯಾಪಿಂಗ್ ವಿಚಾರ ಸದ್ದು ಮಾಡುತ್ತಿದೆ. ಸರ್ಕಾರವೇ ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಮಾಡ್ತಿದೆ ಎಂದು ಆರ್ ಅಶೋಕ್ ಆಪಾದಿಸಿದ್ದಾರೆ. ಇದರಲ್ಲಿ ಸಂಶಯವೇ ಬೇಡ, ಇದು ರಾಜ್ಯ ಸರ್ಕಾರದ್ದೇ ಕೆಲಸ ಎಂದಿದ್ದಾರೆ.
ವಿಶಾಖಪಟ್ಟಣ: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಇಂದು ಮತ್ತೊಂದು ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಲಖನೌ ಸೂಪರ್ ಜೈಂಟ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿವೆ. ಉಭಯ ತಂಡಗಳು ಈ ಆವೃತ್ತಿಯಲ್ಲಿ ಶುಭಾರಂಭಕ್ಕೆ ಎದುರುನೋಡುತ್ತಿವೆ.ಈ ಬಾರಿಯ ವಿಶೇಷವೆಂದರೆ ಕಳೆದ ಆವೃತ್ತಿಯಲ್ಲಿ ಲಖನೌ ತಂಡವನ್ನು ಮುನ್ನಡೆಸಿದ್ದ ಕನ್ನಡಿಗ ಕೆ.ಎಲ್. ರಾಹುಲ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರವಾಗಿ ಕಣಕ್ಕಿಳಿಯಲಿದ್ದಾರೆ. ಆದರೆ, ಈ ಬಾರಿ ಅವರು ನಾಯಕನ ಪಾತ್ರವಹಿಸಿಲ್ಲ. ಆಲ್ರೌಂಡರ್ ಅಕ್ಷರ್ ಪಟೇಲ್ ತಂಡವನ್ನು ಮುನ್ನೆಸಲಿದ್ದಾರೆ.ಹೋದ ವರ್ಷ ಡೆಲ್ಲಿ ತಂಡದ ಸಾರಥ್ಯ ವಹಿಸಿದ್ದ ರಿಷಭ್ ಪಂತ್ ಈಗ ಲಖನೌ ಬಳಗವನ್ನು ಮುನ್ನಡೆಸಲಿದ್ದಾರೆ
ಬೆಂಗಳೂರು: ರಾಜ್ಯದಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್ ಸಂವಿಧಾನವೂ ಬದಲಾಗುತ್ತದೆ ಎಂಬ ಹೇಳಿಕೆಗೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಆಂಗ್ಲ ವಾಹಿನಿಯೊಂದಕ್ಕೆ ನೀಡಿದ ಸಂವಾದ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್, ಮುಸ್ಲಿಮರಿಗೆ ಕರ್ನಾಟಕದಲ್ಲಿ ಮೀಸಲಾತಿ ನೀಡಿರುವ ವಿಚಾರದ ಬಗ್ಗೆ ಮಾತನಾಡುತ್ತಾರೆ. ನಿರೂಪಕರು, ಈಗ ಇರುವ ಟೀಕೆ ಏನೆಂದರೆ ನೀವು ಧರ್ಮ ಆಧಾರಿತವಾಗಿ ಮೀಸಲಾತಿ ನೀಡಿರುವುದು. ಧರ್ಮ ಆಧಾರಿತವಾಗಿ ಮೀಸಲಾತಿ ನೀಡುವುದು ಸಂವಿಧಾನದಲ್ಲಿ ಇಲ್ಲ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಉತ್ತರಿಸುವ ಡಿಕೆ ಶಿವಕುಮಾರ್ ‘ಎಲ್ಲವೂ ಬದಲಾಗುತ್ತದೆ ನೋಡ್ತಿರಿ.
ಬೆಂಗಳೂರು: ರಾಜ್ಯ ರಾಜಕಾರಣ ಯಾವ ಮಟ್ಟ ತಲುಪಿದೆ ಎನ್ನುವುದಕ್ಕೆ ಇದೇ ಸಾಕ್ಷಿ. ಹನಿಟ್ರ್ಯಾಪ್ ಆರೋಪದ ಬೆನ್ನಲ್ಲೇ ಈಗ ಫೋನ್ ಟ್ಯಾಪಿಂಗ್ ಆರೋಪ ಕೇಳಿಬಂದಿದೆ. ಸದನದಲ್ಲೇ ಹನಿ ಟ್ರ್ಯಾಪ್ ಪ್ರಕರಣ ಭಾರೀ ಸದ್ದು ಮಾಡಿತ್ತು. ಸಚಿವ ಕೆಎನ್ ರಾಜಣ್ಣ ಅವರೇ ಹನಿಟ್ರ್ಯಾಪ್ ಆರೋಪ ಮಾಡಿದ್ದರು. ನನ್ನನ್ನು ಎರಡು ಬಾರಿ ಹನಿಟ್ರ್ಯಾಪ್ ಮಾಡಲು ಯತ್ನ ನಡೆದಿತ್ತು ಎಂದಿದ್ದರು. ಇದಲ್ಲದೆ, ಆಡಳಿತ, ವಿಪಕ್ಷ ಸೇರಿದಂತೆ 40 ಕ್ಕೂ ಹೆಚ್ಚು ರಾಜಕೀಯ ನಾಯಕರ ಹನಿಟ್ರ್ಯಾಪ್ ಯತ್ನ ನಡೆದಿದೆ ಎಂದಿದ್ದರು. ಈ ಆರೋಪ ಭಾರೀ ಸದ್ದು ಮಾಡುತ್ತಿರುವಾಗಲೇ ಈಗ ಫೋನ್ ಟ್ಯಾಪಿಂಗ್ ಆರೋಪ ಕೇಳಿಬಂದಿದೆ.
ಬೆಂಗಳೂರು: ಅಮಾನತಾದ ಬಿಜೆಪಿ ಶಾಸಕರೆಲ್ಲರೂ ನನ್ನ ಫ್ರೆಂಡ್ಸ್. ಆದರೆ ನೆಪ ಇಟ್ಟುಕೊಂಡು ಕಲಾಪಕ್ಕೆ ಅಡ್ಡಿಪಡಿಸಲು ಯತ್ನಿಸಿದರು ಎಂದು ಸ್ಪೀಕರ್ ಯುಟಿ ಖಾದರ್ ಹೇಳಿದ್ದಾರೆ. ಇಂದು ಮಾಧ್ಯಮಗಳ ಮುಂದೆ ಮಾತನಾಡಿದ ಅವರು ಬಿಜೆಪಿ ಶಾಸಕರ ಅಮಾನತಿನ ಬಗ್ಗೆ ಸಮರ್ಥನೆ ನೀಡಿದ್ದಾರೆ. ಮೊನ್ನೆ ಸದನದಲ್ಲಿ ಗದ್ದಲವೆಬ್ಬಿಸಿದ ಬಿಜೆಪಿಯ 18 ಶಾಸಕರನ್ನು ಸ್ಪೀಕರ್ ಆರು ತಿಂಗಳಿಗೆ ಅಮಾನತು ಮಾಡಿದ್ದರು. ಇದರ ಬಗ್ಗೆ ಇಂದು ಮತ್ತೊಮ್ಮೆ ಮಾಧ್ಯಮಗಳಿಗೆ ಯುಟಿ ಖಾದರ್ ಹೇಳಿದ್ದಾರೆ. ಹನಿಟ್ರ್ಯಾಪ್ ಬಗ್ಗೆ ತನಿಖೆಯಾಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿ ಬಿಜೆಪಿಯವರು ಗಲಾಟೆ ಶುರು ಮಾಡಿದ್ರು.
ಬೆಂಗಳೂರು: ನಗರದ ಆನೇಕಲ್ ತಾಲೂಕು ವ್ಯಾಪ್ತಿಯಲ್ಲಿ ಹುಸ್ಕೂರು ಮದ್ದೂರಮ್ಮ ದೇವಿ ಜಾತ್ರೆಯಲ್ಲಿ ನೋಡು ನೋಡುತ್ತಿದ್ದಂತೇ ಬೃಹತ್ ತೇರು ಬೀಳುವ ದೃಶ್ಯವೊಂದು ವೈರಲ್ ಆಗಿದೆ. ಈ ಘಟನೆಯಲ್ಲಿ ಓರ್ವ ಬಾಲಕಿ ಮತ್ತು ಯುವಕ ಸಾವನ್ನಪ್ಪಿದ್ದು ಹಲವರಿಗೆ ಗಾಯವಾಗಿದೆ. ಮಾರ್ಚ್ 22, 23 ರಂದು ಮದ್ದೂರಮ್ಮ ಜಾತ್ರೆಯಿತ್ತು. ಈ ಜಾತ್ರೆಯಲ್ಲಿ ಪ್ರತೀ ವರ್ಷವೂ ಆಕರ್ಷಕ ತೇರು ಎಲ್ಲರ ಗಮನ ಸೆಳೆಯುತ್ತದೆ. ಈ ಬಾರಿಯೂ ಬಣ್ಣ ಬಣ್ಣದ ಆಕರ್ಷಕ ತೇರು ಎಲ್ಲರ ಗಮನ ಸೆಳೆದಿತ್ತು. ಹಲವರು ಜಾತ್ರೆಯಲ್ಲಿ ಪಾಲ್ಗೊಂಡು ತೇರು ಎಳೆಯುವ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ಬೆಂಗಳೂರು: ಸತತ ಏರುಗತಿಯಲ್ಲಿದ್ದ ಅಡಿಕೆ ಬೆಲೆ ಕಳೆದ ಒಂದು ವಾರದಿಂದ ಸ್ಥಿರವಾಗಿದೆ. ಇದರಿಂದ ಏರಿಕೆಯ ನಿರೀಕ್ಷೆಯಲ್ಲಿದ್ದ ರೈತರಿಗೆ ಕೊಂಚ ನಿರಾಸೆಯಾಗಿದೆ. ಇಂದೂ ಕೂಡಾ ಮಾರುಕಟ್ಟೆಯಲ್ಲಿ ಅಡಿಕೆ, ಕಾಳುಮೆಣಸು ಮತ್ತು ಕೊಬ್ಬರಿ ಬೆಲೆ ಯಥಾ ಸ್ಥಿತಿಯಲ್ಲಿ ಮುಂದುವರಿದಿದೆ. ಇತ್ತೀಚೆಗೆ ಮುಂಗಾರು ಪೂರ್ವ ಮಳೆಯಿಂದಾಗಿ ಅಡಿಕೆ ಬೆಳೆಗಾರರು ಬೆಳೆ ಹಾನಿ ಚಿಂತೆಯಲ್ಲಿದ್ದಾರೆ. ಅದರ ನಡುವೆ ಈಗ ಬೆಲೆ ಏರಿಕೆಯೂ ಕಾಣದೇ ಇರುವುದು ಚಿಂತೆ ಹೆಚ್ಚಿಸಿದೆ. ಆದರೆ ಹಾಗಂತ ಕಡಿಮೆಯೂ ಆಗಿಲ್ಲ ಎನ್ನುವುದು ಗಮನಾರ್ಹ. ಇಂದಿನ ಮಾರುಕಟ್ಟೆ ದರ ಹೇಗಿದೆ ಇಲ್ಲಿದೆ ವಿವರ.
ಬೆಂಗಳೂರು: ಕಳೆದ ಕೆಲವು ದಿನಗಳಿಂದ ದಾಖಲೆಯ ಏರಿಕೆ ಕಾಣುತ್ತಿರುವ ಚಿನ್ನದ ದರ ಇದೀಗ ಇಳಿಕೆಯತ್ತ ಸಾಗಿದೆ. ಕಳೆದ ಎರಡು ದಿನಗಳಿಂದ ಚಿನ್ನದ ಬೆಲೆಯಲ್ಲಿ ಕೊಂಚ ಕೊಂಚವೇ ಇಳಿಕೆಯಾಗುತ್ತಿದೆ. ಇಂದು ಚಿನ್ನ ಮತ್ತು ಬೆಳ್ಳಿ ದರ ಎಷ್ಟಾಗಿದೆ ನೋಡಿ.ಚಿನ್ನದ ದರ ಏರಿಕೆ99.9 ಶುದ್ಧತೆಯ 10 ಗ್ರಾಂ ಚಿನ್ನದ ಬೆಲೆ ಭಾರೀ ಏರಿಕೆ ಕಾಣುತ್ತಲೇ ಇತ್ತು. ಆದರೆ ಇದೀಗ ಎರಡು ದಿನಗಳಿಂದ ಇಳಿಕೆಯಾಗಿದೆ. ಇಂದು ಬೆಂಗಳೂರಿನಲ್ಲಿ 99.9 ಶುದ್ಧತೆಯ ಚಿನ್ನದ ಬೆಲೆ 90,790 ರೂ. ಆಗಿದೆ. ಈ ಮೂಲಕ ಮತ್ತೆ ಕೊಂಚ ಇಳಿಮುಖವಾಗಿ ಗ್ರಾಹಕರಿಗೆ ನೆಮ್ಮದಿ ತಂದಿದೆ.
ಮುಂಬೈ: ಮಹಾರಾಷ್ಟ್ರ ಡಿಸಿಎಂ ಏಕನಾಥ ಶಿಂಧೆ ದೇಶದ್ರೋಹಿ ಎಂದ ಕಾಮೆಡಿಯನ್ ಕಾಮ್ರಾಗೆ ಈಗ ಸಂಕಷ್ಟ ಎದುರಾಗಿದೆ. ಅವರ ವಿರುದ್ಧ ಈಗ ಕೇಸ್ ದಾಖಲಾಗಿದೆ. ಇತ್ತೀಚೆಗೆ ಯೂ ಟ್ಯೂಬರ್ ಗಳು, ಕಾಮೆಡಿಯನ್ ಗಳು ತಮ್ಮ ಕಾಮೆಂಟ್ ಗಳಿಂದಲೇ ವಿವಾದಕ್ಕೊಳಗಾಗುತ್ತಿದ್ದಾರೆ. ಇದೀಗ ಕಾಮೆಡಿಯನ್ ಕಾಮ್ರಾ ಕಾರ್ಯಕ್ರಮವೊಂದರಲ್ಲಿ ಏಕನಾಥ ಶಿಂಧೆ ಬಗ್ಗೆ ಟೀಕೆ ಮಾಡಿದ್ದಾರೆ. ಇದನ್ನು ಅವರು ತಮ್ಮ ಸೋಷಿಯಲ್ ಮೀಡಿಯಾದಲ್ಲೂ ಹಂಚಿಕೊಂಡಿದ್ದರು. ಅದೀಗ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಈ ವಿಡಿಯೋದಲ್ಲಿ ಕಾಮ್ರಾ, ಏಕನಾಥ ಶಿಂಧೆಯವರನ್ನು ಅಪಹಾಸ್ಯ ಮಾಡಿದ್ದಾರೆ.
ಬೆಂಗಳೂರು: ರಾಜ್ಯ ಸರ್ಕಾರ ಜನರಿಗೆ ಮತ್ತೊಂದು ಬೆಲೆ ಏರಿಕೆಯ ಶಾಕ್ ನೀಡಲು ಮುಂದಾಗಿದೆ. ಇಂದು ನಂದಿನಿ ಹಾಲಿನ ದರ ಏರಿಕೆ ಬಗ್ಗೆ ತೀರ್ಮಾನವಾಗಲಿದೆ. ಬಜೆಟ್ ಬಳಿಕ ನಂದಿನಿ ಹಾಲಿನ ದರ ಏರಿಕೆಯಾಗಲಿದೆ ಎಂದು ಈಗಾಗಲೇ ಕೆಎಂಎಫ್ ಸುಳಿವು ನೀಡಿತ್ತು. ಪ್ರತೀ ಲೀಟರ್ ಗೆ 5 ರೂ.ಗಳಷ್ಟು ಏರಿಕೆ ಮಾಡಲು ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ ಬಜೆಟ್ ಬಳಿಕ ತೀರ್ಮಾನ ಕೈಗೊಳ್ಳಲು ಸರ್ಕಾರ ತೀರ್ಮಾನಿಸಿತ್ತು. ಅದರಂತೆ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮೀಟಿಂಗ್ ನಡೆಯಲಿದ್ದು, ಹಾಲು ಒಕ್ಕೂಟಗಳ ಜೊತೆ ದರ ಏರಿಕೆ ಬಗ್ಗೆ ಚರ್ಚೆ ನಡೆಸಲಿದ್ದಾರೆ.
ಮುಂಬೈ: ಐಪಿಎಲ್ 2025 ರಲ್ಲಿ ಮತ್ತೆ ಆರಂಭಿಕ ಪಂದ್ಯವನ್ನು ಮುಂಬೈ ಇಂಡಿಯನ್ಸ್ ಸೋತಿದೆ. ಈ ಮೂಲಕ 13 ವರ್ಷಗಳ ಶಾಪ ಹಾಗೆಯೇ ಉಳಿದುಕೊಂಡಂತಾಗಿದೆ. ಮುಂಬೈ ಇಂಡಿಯನ್ಸ್ ತಂಡ ನಿನ್ನೆ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮೊದಲ ಪಂದ್ಯವನ್ನಾಡಿತ್ತು. ಈ ಪಂದ್ಯದಲ್ಲಿ 4 ವಿಕೆಟ್ ಗಳ ಸೋಲು ಅನುಭವಿಸಿದೆ. ಈ ಕೂಟದಲ್ಲಿ ಆಡಿದ ಮೊದಲ ಪಂದ್ಯವನ್ನೇ ಸೋತಿದೆ. ಈ ಮೂಲಕ ಕೂಟದ ಮೊದಲ ಪಂದ್ಯವನ್ನೇ ಸೋಲುವ ಚಾಳಿಯನ್ನು ಮುಂದುವರಿಸಿತು. ಕಳೆದ 2013 ರಿಂದಲೂ ಮುಂಬೈ ಇಂಡಿಯನ್ಸ್ ಮೊದಲ ಪಂದ್ಯವನ್ನು ಸೋಲುತ್ತಾ ಬಂದಿದೆ. ಈ ಬಾರಿಯೂ ಮೊದಲ ಪಂದ್ಯವನ್ನು ಸೋತಿದೆ. ಈ ಮೂಲಕ ತನ್ನ ಹಳೆಯ ಪರಂಪರೆ ಮುಂದುವರಿಸಿದೆ.
ಮುಂಬೈ: ಐಪಿಎಲ್ 2025 ರಲ್ಲಿ ನಿನ್ನೆ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತೊಮ್ಮೆ ಮಾಜಿ ನಾಯಕ ರೋಹಿತ್ ಶರ್ಮಾರನ್ನು ಕಡೆಗಣಿಸಿತಾ ಎಂಬ ಅನುಮಾನ ಫ್ಯಾನ್ಸ್ ಗೆ ಶುರುವಾಗಿದೆ. ರೋಹಿತ್ ಡ್ರೆಸ್ಸಿಂಗ್ ರೂಂನಲ್ಲಿ ಅಸಮಾಧಾನಗೊಂಡಿರುವ ವಿಡಿಯೋ ವೈರಲ್ ಆಗಿದೆ. ರೋಹಿತ್ ಶರ್ಮಾ ನಿನ್ನೆಯ ಪಂದ್ಯದಲ್ಲಿ ಬ್ಯಾಟಿಂಗ್ ನಲ್ಲೂ ಹೇಳಿಕೊಳ್ಳುವ ಸಾಧನೆ ಮಾಡಲಿಲ್ಲ. ಶೂನ್ಯಕ್ಕೇ ನಿರ್ಗಮಿಸಿ ಬೇಡದ ದಾಖಲೆ ಮೈಮೇಲೆಳೆದುಕೊಂಡರು. ಅವರನ್ನು ನಿನ್ನೆ ಇಂಪ್ಯಾಕ್ಟ್ ಪ್ಲೇಯರ್ ಆಗಿದ್ದರು. ಹೀಗಾಗಿ ಫೀಲ್ಡಿಂಗ್ ಗೆ ಇಳಿದಿರಲಿಲ್ಲ. ಫೀಲ್ಡಿಂಗ್ ವೇಳೆ ಅವರು ಮೈದಾನದಲ್ಲಿದ್ದಿದ್ದರೆ ಅವರ ಅನುಭವ ಉಪಯೋಗಕ್ಕೆ ಬರುತ್ತಿತ್ತು ಎಂದು ಫ್ಯಾನ್ಸ್ ಅಭಿಪ್ರಾಯಪಟ್ಟಿದ್ದಾರೆ.
ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಸೋತ ಬಳಿಕ ಕೆಲವು ದಿನ ತಣ್ಣಗಾಗಿದ್ದ ಮಾಜಿ ಸಿಎಂ, ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಈಗ ಮತ್ತೆ ಪ್ರತ್ಯಕ್ಷರಾಗಿದ್ದಾರೆ. ಬಿಜೆಪಿ ಬ್ರಿಟಿಷರಿಗಿಂತ ಕೀಳು ಎಂದಿದ್ದಾರೆ. ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿ ಅಧಿಕಾರಕ್ಕೇರಿತ್ತು. ಸ್ವತಃ ಕೇಜ್ರಿವಾಲ್ ಹೀನಾಯ ಸೋಲುಂಡಿದ್ದರು. ಇದಾದ ಬಳಿಕ ಅವರು ಕೆಲವು ದಿನಗಳಿಂದ ತಣ್ಣಗಾಗಿದ್ದರು. ಇದೀಗ ಮತ್ತೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುವ ಮೂಲಕ ಕೇಜ್ರಿವಾಲ್ ಸುದ್ದಿಯಲ್ಲಿದ್ದಾರೆ.
ಬೆಂಗಳೂರು: ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಸತತವಾಗಿ ಮಳೆಯಾಗುತ್ತಿದೆ. ಇಂದು ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಇಲ್ಲಿದೆ ವಿವರ. ಕರ್ನಾಟಕದಲ್ಲಿ ಈ ಬಾರಿ ಬೇಸಿಗೆ ಮಳೆ ಚೆನ್ನಾಗಿ ಆಗಲಿದೆ ಎಂದು ಹವಾಮಾನ ವರದಿಗಳು ಸೂಚನೆ ನೀಡಿದ್ದವು. ಅದರಂತೆ ಕಳೆದ ಒಂದು ವಾರದಿಂದ ಅಲ್ಲಲ್ಲಿ ಮಳೆಯಾಗುತ್ತಲೇ ಇದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಶನಿವಾರ ಉತ್ತಮ ಮಳೆಯಾಗಿತ್ತು. ಭಾನುವಾರವೂ ಮೋಡ ಕವಿದ ವಾತಾವರಣವಿತ್ತು. ಇಂದು ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದೆ. ಆದರೆ ಇಂದು ಮಳೆಯ ಸಾಧ್ಯತೆಯಿಲ್ಲ. ಇಂದು ರಾಜ್ಯದಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿಯಷ್ಟಿರಲಿದೆ.
ಗ್ರಹಗತಿಗಳ ಸಮಸ್ಯೆಯಿದ್ದಲ್ಲಿ, ಅದರಲ್ಲೂ ರಾಹುವಿಗೆ ಸಂಬಂಧಿಸಿದ ದೋಷಗಳಿಂದ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ ಪರಿಹಾರ್ಥವಾಗಿ ಶ್ರೀ ರಾಹು ಸ್ತೋತ್ರವನ್ನು ಓದಿ. ಇಲ್ಲಿದೆ ನೋಡಿ.ಓಂ ಅಸ್ಯ ಶ್ರೀ ರಾಹುಸ್ತೋತ್ರಮಹಾಮಂತ್ರಸ್ಯ ವಾಮದೇವ ಋಷಿಃ | ಅನುಷ್ಟುಪ್ಚ್ಛಂದಃ | ರಾಹುರ್ದೇವತಾ | ಶ್ರೀ ರಾಹು ಗ್ರಹ ಪ್ರಸಾದಸಿದ್ಧ್ಯರ್ಥೇ ಜಪೇ ವಿನಿಯೋಗಃ |ಕಾಶ್ಯಪ ಉವಾಚ ಶೃಣ್ವಂತು ಮುನಯಃ ಸರ್ವೇ ರಾಹುಪ್ರೀತಿಕರಂ ಸ್ತವಮ್ |ಸರ್ವರೋಗಪ್ರಶಮನಂ ವಿಷಭೀತಿಹರಂ ಪರಮ್ || ೧ ||ಸರ್ವಸಂಪತ್ಕರಂ ಚೈವ ಗುಹ್ಯಂ ಸ್ತೋತ್ರಮನುತ್ತಮಮ್ |ಆದರೇಣ ಪ್ರವಕ್ಷ್ಯಾಮಿ ಸಾವಧಾನಾಶ್ಚ ಶೃಣ್ವತ || ೨ ||
ಚೆನ್ನೈ: ರಚಿನ್ ರವೀಂದ್ರ ಅವರ ಅಜೇಯ ಅರ್ಧಶತಕದ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಇಂಡಿಯನ್ ಪ್ರೀಮಿಯರ್ ಲೀಗ್ನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ನಾಲ್ಕು ವಿಕೆಟ್ಗಳಿಂದ ಮಣಿಸಿ ಶುಭಾರಂಭ ಮಾಡಿತು.ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮುಂಬೈ ಇಂಡಿಯನ್ಸ್ ತಂಡವು 20 ಓವರ್ಗಳಲ್ಲಿ 9 ವಿಕೆಟ್ಗಳಿಗೆ 155 ರನ್ ಗಳಿಸಿತು.ಈ ಗುರಿ ಬೆನ್ನಟ್ಟಿದ ಚೆನ್ನೈ, ನಾಯಕ ಋತುರಾಜ್ ಗಾಯಕ್ವಾಡ್ (53) ಹಾಗೂ ರಚಿನ್ ರವೀಂದ್ರ (65*) ಆಕರ್ಷಕ ಅರ್ಧಶತಕಗಳ ನೆರವಿನಿಂದ ಐದು ಎಸೆತಗಳು ಬಾಕಿ ಇರುವಂತೆಯೇ ಆರು ವಿಕೆಟ್ ನಷ್ಟಕ್ಕೆ 158 ರನ್ ಗಳಿಸಿ ಜಯಭೇರಿ ಬಾರಿಸಿತು.
ಹೈದರಾಬಾದ್: ಇಶಾನ್ ಕಿಶನ್ ಅವರ ಸಿಡಿಲಬ್ಬರದ ಶತಕದ ನೆರವಿನಿಂದ ಸನ್ರೈಸರ್ಸ್ ಹೈದರಾಬಾದ್ ತಂಡವು ಇಂಡಿಯನ್ ಪ್ರೀಮಿಯರ್ ಲೀಗ್ನ ಪಂದ್ಯದಲ್ಲಿ ರಾಜಸ್ಥಾನ ತಂಡವನ್ನು 44 ರನ್ಗಳಿಂದ ಮಣಿಸಿ ಶುಭಾರಂಭ ಮಾಡಿತು.ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಸನ್ನ್ ರೈಸರ್ಸ್ ತಂಡ ಇಶಾನ್ ಕಿಶನ್ ಸಿಡಿಸಿದ ಶತಕದ (106) ನೆರವಿಂದ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 286 ರನ್ ಗಳನ್ನು ಕಲೆಹಾಕಿತು. 287 ರನ್ಗಳ ಗುರಿ ಬೆನ್ನಟ್ಟಿದ ರಾಜಸ್ಥಾನ ರಾಯಲ್ಸ್ ತಂಡ ನಿಗದಿತ 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು, 242 ರನ್ಗಳನ್ನು ಕಲೆಹಾಕಿ ಸೋಲು ಕಂಡಿತು.
ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಮಾರ್ಚ್ ತಿಂಗಳ ಕಾಣಿಕೆ ಹುಂಡಿ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ₹3.48 ಕೋಟಿ ಕಾಣಿಕೆ ಸಂಗ್ರಹವಾಗಿದೆ ಎಂದು ಮಠದ ಪ್ರಕಟಣೆ ತಿಳಿಸಿದೆ.ಕಳೆದ 30 ದಿನಗಳಲ್ಲಿ ಮಂತ್ರಾಲಯ ಮಠಕ್ಕೆ ಕೋಟ್ಯಂತರ ರೂಪಾಯಿ ಕಾಣಿಕೆ ಹರಿದು ಬಂದಿದ್ದು, ಸಂಗ್ರಹವಾದ ಕಾಣಿಕೆಯಲ್ಲಿ ₹ 3,39,35,121 ನೋಟು, 9,34,500 ರೂಪಾಯಿ ನಾಣ್ಯಗಳು ಸಂಗ್ರಹವಾಗಿವೆ.ಮಾರ್ಚ್ 21ರಂದು ಮಠದ ಅಧಿಕಾರಿಗಳು ಹಾಗೂ ಸಿಬ್ಬಂದಿ ಹುಂಡಿ ತೆರೆದು ಎಣಿಕೆ ಮಾಡಲಾಗಿದೆ. 37.200 ಗ್ರಾಂ ಚಿನ್ನ, 1280 ಗ್ರಾಂ ಬೆಳ್ಳಿ ಕಾಣಿಕೆ ರೂಪದಲ್ಲಿ ಬಂದಿದೆ. ಎರಡು ದಿನಗಳಿಂದ ಮಂತ್ರಾಲಯ ಮಠದಲ್ಲಿ ನಡೆಸಲಾದ ಹುಂಡಿ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಎಣಿಕೆ ಕಾರ್ಯದಲ್ಲಿ ಮಠದ ನೂರಾರು ಸಿಬ್ಬಂದಿ, ಭಜನಾ ಮಂಡಳಿ, ಕರಸೇವಕರು ಭಾಗವಹಿಸಿದ್ದರು.
ಹಾಸನ: ಬೇಲೂರಿನ ಭಾಗದ ಜನರ ನೆಮ್ಮದಿ ಕೆಡಿಸಿದ್ದ ಪುಂಡಾನೆಗಳ ಹಾವಳಿಗೆ ಕೊನೆಗೂ ಬ್ರೇಕ್ ಬಿದ್ದಿದೆ. ಕಳೆದ ಭಾನುವಾರದಿಂದ ಆರಂಭಗೊಂಡಿದ್ದ ಮೂರು ಪುಂಡಾನೆಗಳ ಸೆರೆ ಕಾರ್ಯಾಚರಣೆ ಇಂದು ಮತ್ತೊಂದು ಕಾಡಾನೆಯನ್ನು ಸೆರೆ ಹಿಡಿಯುವ ಮೂಲಕ ಅಂತ್ಯಗೊಂಡಿದೆ.ನಾಲ್ವರು ಕಾಡಾನೆ ದಾಳಿಯಿಂದ ಒಂದು ತಿಂಗಳ ಅಂತರದಲ್ಲಿ ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ಸರ್ಕಾರ ಮೂರು ಪುಂಡಾನೆಗಳ ಸೆರೆ ಹಿಡಿದು ಸ್ಥಳಾಂತರ ಮಾಡಲು ಅನುಮತಿ ನೀಡಿತ್ತು. ಅದರಂತೆ ಏಳು ಸಾಕಾನೆಗಳು, ಇನ್ನೂರಕ್ಕೂ ಹೆಚ್ಚು ಅರಣ್ಯ ಇಲಾಖೆಯ ಸಿಬ್ಬಂದಿ, ವೈದ್ಯರುಗಳೊಂದಿಗೆ ನಡೆಸಿದ ಕಾರ್ಯಾಚರಣೆ ಯಶಸ್ವಿಯಾಗಿದೆ.ಸೆರೆಹಿಡಿದ ಆನೆಗಳಲ್ಲಿ ಒಂದನ್ನು ಚಾಮರಾಜನಗರದ ಮಲೆಮಹದೇಶ್ವರ ಅರಣ್ಯಕ್ಕೆ ಬಿಟ್ಟರೆ, ಉಳಿದ ಎರಡು ಕಾಡಾನೆಗಳನ್ನು ಸಕ್ಕರೆಬೈಲು ಕ್ಯಾಂಪ್ಗೆ ಸ್ಥಳಾಂತರಿಸಲಾಗಿದೆ. ಇದರಿಂದಾಗಿ ಮಲೆನಾಡು ಭಾಗದ ಜನರು ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ.
ಹೈದರಾಬಾದ್: ಹೊಡಿಬಡಿ ಆಟಕ್ಕೆ ಹೆಸರಾಗಿರುವ ಸನ್ರೈಸರ್ಸ್ ಹೈದರಾಬಾದ್ ತಂಡವು ಇಂದು ತವರಿನಲ್ಲಿ ರಾಜಸ್ಥಾನ ತಂಡವನ್ನು ಎದುರಿಸಲಿದೆ. ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಟಾಸ್ ಗೆದ್ದ ರಾಜಸ್ಥಾನ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಹಾಲಿ ಚಾಂಪಿಯನ್ ಹೈದರಾಬಾದ್ ಬ್ಯಾಟಿಂಗ್ ಮಾಡಲಿದೆಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಇಶಾನ್ ಕಿಶನ್ ಮತ್ತು ಹೆನ್ರಿಚ್ ಕ್ಲಾಸೆನ್ ಅವರಂತಹ ಸ್ಫೋಟಕ ಬ್ಯಾಟ್ಸ್ಮನ್ಗಳನ್ನು ಒಳಗೊಂಡ ಆತಿಥೇಯ ತಂಡವು ಬೃಹತ್ ಮೊತ್ತ ಕಲೆಹಾಕುವತ್ತ ಚಿತ್ತ ಹರಿಸಿದೆ. ಗಾಯಾಳಾಗಿದ್ದ ಆಲ್ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಮತ್ತೆ ತಂಡವನ್ನು ಸೇರಿಕೊಂಡಿದ್ದಾರೆ. ಪ್ಯಾಟ್ ಕಮಿನ್ಸ್, ಮೊಹಮ್ಮದ್ ಶಮಿ, ಹರ್ಷಲ್ ಪಟೇಲ್, ಸ್ಪಿನ್ನರ್ ಆ್ಯಡಂ ಜಂಪಾ ಅವರು ಬೌಲಿಂಗ್ ಶಕ್ತಿಯಾಗಿದ್ದಾರೆ.
ಬೆಂಗಳೂರು: ಬಹುಭಾಷಾ ಹಿರಿಯ ನಟ ಶರತ್ ಕುಮಾರ್ ಅವರ ಪುತ್ರಿ, ಕನ್ನಡದ ಮಾಣಿಕ್ಯ ಬೆಡಗಿ ವರಲಕ್ಷ್ಮಿ ಹಲವು ಸಿನಿಮಾಗಳಲ್ಲಿ ಬಣ್ಣ ಹೆಚ್ಚಿದ್ದಾರೆ. ಇದೀಗ ಅವರು ತೆಲುಗಿನ ಡ್ಯಾನ್ಸ್ ಜೋಡಿ ಡ್ಯಾನ್ಸ್ ರಿಯಾಲಿಟಿ ಶೋನಲ್ಲಿ ತೀರ್ಪುಗಾರರಾಗಿ ಪಾಲ್ಗೊಳ್ಳುತ್ತಿದ್ದಾರೆ.ರಿಯಾಲಿಟಿ ಶೋ ಭಾವನಾತ್ಮಕ ಸನ್ನಿವೇಶಕ್ಕೆ ಸಾಕ್ಷಿಯಾಯಿತು. ವರಲಕ್ಷ್ಮಿ ಶರತ್ಕುಮಾರ್ ತಮಗಾದ ಲೈಂಗಿಕ ಕಿರುಕುಳ ನೆನೆದು ಕಾರ್ಯಕ್ರಮವೊಂದರಲ್ಲಿ ಕಣ್ಣೀರಿಟ್ಟಿದ್ದಾರೆ. ನಿಮ್ಮ ಮಕ್ಕಳಿಗೆ ಗುಡ್ ಟಚ್ ಮತ್ತು ಬ್ಯಾಡ್ ಟಚ್ ಬಗ್ಗೆ ಅರಿವು ಮೂಡಿಸಿ ಎಂದು ಪರಿಪರಿಯಾಗಿ ಮನವಿ ಮಾಡಿದ್ದಾರೆ.ಕಳೆದ ವರ್ಷ ಜುಲೈನಲ್ಲಿ ಉದ್ಯಮಿ ನಿಕೋಲಾಯ್ ಜೊತೆ ನಟಿ ವರಲಕ್ಷ್ಮಿ ಹೊಸ ಬಾಳಿಗೆ ಕಾಲಿಟ್ಟರು. ವಿದೇಶದಲ್ಲಿ ಇಬ್ಬರ ಮದುವೆ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತು.
ಕೋಲ್ಕತ್ತ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಬಹಳ ಸಮಯದ ನಂತರ ಉತ್ತಮ ಬೌಲಿಂಗ್ ಪಡೆಯನ್ನು ನೋಡುತ್ತಿದ್ದೇನೆ. ಈ ವರ್ಷ ತಂಡದಲ್ಲಿ ಏನೋ ವಿಶೇಷತೆ ಇದೆ ಎಂದು ಆಸ್ಟ್ರೇಲಿಯಾದ ದಿಗ್ಗಜ ಕ್ರಿಕೆಟಿಗ ಮ್ಯಾಥ್ಯೂ ಹೇಡನ್ ಶ್ಲಾಘಿಸಿದ್ದಾರೆ. ಶನಿವಾರ ನಡೆದ ಐಪಿಎಲ್ನ 18ನೇ ಆವೃತ್ತಿಯ ಆರಂಭಿಕ ಪಂದ್ಯದಲ್ಲಿ ಬೆಂಗಳೂರು ಕೋಲ್ಕತ್ತ ನೈಟ್ ರೈಡರ್ಸ್ನ ತಂಡವನ್ನು ಏಳು ವಿಕೆಟ್ಗಳಿಂದ ಮಣಿಸಿತ್ತು. ಬೌಲಿಂಗ್ ಮತ್ತು ಬ್ಯಾಟಿಂಗ್ ವಿಭಾಗದಲ್ಲಿ ಆರ್ಸಿಬಿ ಸಾಂಘಿಕ ಆಟ ಪ್ರದರ್ಶಿಸಿತ್ತು. 175 ರನ್ಗಳ ಗುರಿಯನ್ನು 22 ಎಸೆತಗಳು ಬಾಕಿ ಇರುವಂತೆ 3 ವಿಕೆಟ್ ಕಳೆದುಕೊಂಡು ಮುಟ್ಟಿತು.ಈ ಪಂದ್ಯದಲ್ಲಿ ಕೃಣಾಲ್ ಪಾಂಡ್ಯ 4 ಓವರ್ಗಳಲ್ಲಿ 29 ರನ್ ನೀಡಿ 3 ವಿಕೆಟ್ ಪಡೆದು, ಕೋಲ್ಕತ್ತ ರನ್ ವೇಗಕ್ಕೆ ಕಡಿವಾಣ ಹಾಕಿದರು. ನಂತರದಲ್ಲಿ ಫಿಲ್ ಸಾಲ್ಟ್ (56), ವಿರಾಟ್ ಕೊಹ್ಲಿ (59) ಮತ್ತು ರಜತ್ ಪಾಟಿದಾರ್ (34) ಉತ್ತಮ ಬ್ಯಾಟಿಂಗ್ ಮೂಲಕ ಗೆಲುವಿಗೆ ನೆರವಾದರು.
ಬೆಂಗಳೂರು: ರಾಜ್ಯದಲ್ಲಿ ಹನಿಟ್ರ್ಯಾಪ್ ಬಿರುಗಾಳಿ ಎದ್ದಿರುವ ಬೆನ್ನಲ್ಲೆ ಮುಖ್ಯಮಂತ್ರಿಗಳ ಕಾವೇರಿ ನಿವಾಸಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರು ಆಗಮಿಸಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿರುವುದು ಭಾರೀ ಕುತೂಹಲ ಕೆರಳಿಸಿದೆ.ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರಿಗೆ ಹನಿಟ್ರ್ಯಾಪ್ ಯತ್ನ ಭಾರೀ ಸದ್ದು ಮಾಡುತ್ತಿದೆ.ಈ ಪ್ರಕರಣ ಕಾಂಗ್ರೆಸ್ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಈ ಬಗ್ಗೆ ಹೈಕಮಾಂಡ್ಗೆ ದೂರು ನೀಡಲು ರಾಜಣ್ಣ ತೀರ್ಮಾನಿಸಿದ್ದಾರೆ. ಅದರ ಬೆನ್ನಲ್ಲೇ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಖುದ್ದಾಗಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದಾರೆ.ಇಂದು ಮಲ್ಲಿಕಾರ್ಜುನ ಖರ್ಗೆ ಅವರು ಮೊಣಕಾಲು ನೋವಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಇದೇ ನೆಪದಲ್ಲಿ ರಾಜಣ್ಣ ಅವರ ಹನಿಟ್ರ್ಯಾಪ್ ಆರೋಪದ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಮುಂಬೈ: 2020ರಲ್ಲಿ ನಡೆದ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣವನ್ನು ತನಿಖೆ ನಡೆಸಿರುವ ಸಿಬಿಐ ಅಧಿಕಾರಿಗಳು ನಾಲ್ಕೂವರೆ ವರ್ಷಗಳ ಬಳಿಕ ಅಂತಿಮ ವರದಿವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.2020ರ ಜೂನ್ 14ರಂದು ಮುಂಬೈನ ಬಾಂದ್ರಾದಲ್ಲಿರುವ ತಮ್ಮ ಫ್ಲಾಟ್ನಲ್ಲಿ 34 ವರ್ಷದ ಸುಶಾಂತ್ ಸಿಂಗ್ ರಜಪೂತ್ ಅವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಪ್ರಕರಣ ದೇಶದಾದ್ಯಂತ ಸಂಚಲನ ಮೂಡಿಸಿತ್ತು. ಬಳಿಕ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿತ್ತು.ಸುಶಾಂತ್ ಆಪ್ತೆಯಾಗಿದ್ದ ನಟಿ ರಿಯಾ ಚಕ್ರವರ್ತಿ ಮತ್ತು ಆಕೆಯ ಕುಟುಂಬದ ಪ್ರಚೋದನೆಯಿಂದ ಸುಶಾಂತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆತನ ತಂದೆ ಆರೋಪಿಸಿ ದೂರು ನೀಡಿದ್ದರು. ರಿಯಾ ಚಕ್ರವರ್ತಿ ಪ್ರತಿದೂರು ದಾಖಲಿಸಿದ್ದರು.
ಬೆಂಗಳೂರು: ಸಿದ್ದರಾಮಯ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯ ಹಣ ಕೆಲ ತಿಂಗಳಿಂದ ಗೃಹಿಣಿಯರ ಖಾತೆಗೆ ಜಮೆಯಾಗಿಲ್ಲ. ಕಾದು ಕಾದು ಸುಸ್ತಾಗಿರುವ ಮಹಿಳೆಯರಿಗೆ ಕೊನೆಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಗುಡ್ನ್ಯೂಸ್ ನೀಡಿದ್ದಾರೆ.ಬೆಳಗಾವಿಯಲ್ಲಿ ಇಂದು ಮಾತನಾಡಿದ ಅವರು, ಮಾರ್ಚ್ 31ರ ನಂತರ ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳ ಹಣ ಬಿಡುಗಡೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ. ಮೂರು ತಿಂಗಳಿನಿಂದ ಗೃಹಲಕ್ಷ್ಮಿ ಹಣ ಜಮೆಯಾದಗಿರುವುದರಿಂದ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು.ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದ್ದಾಗಲೇ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು ಎರಡು ಸಾವಿರ ರೂಪಾಯಿ ಹೆಚ್ಚಿಸಿದ್ದೆವು. ಅದಾದ ನಂತರ ಯಾವುದೇ ಸರ್ಕಾರಗಳೂ ಹೆಚ್ಚಿಸಲಿಲ್ಲ. ಈ ಬಜೆಟ್ನಲ್ಲಿ ಕಾರ್ಯಕರ್ತೆಯರ ಗೌರವಧನವನ್ನು ₹750, ಸಹಾಯಕಿಯರ ಗೌರವಧನವನ್ನು ₹500 ಹೆಚ್ಚಿಸಿ ಘೋಷಿಸಿದ್ದೇವೆ ಎಂದು ಹೇಳಿದರು.
ಬೆಂಗಳೂರು: ಸ್ಯಾಂಡಲ್ವುಡ್ನ ಕಂಚಿನ ಕಂಠದ ನಟ ವಸಿಷ್ಠ ಸಿಂಹ ಮತ್ತು ಟಾಲಿವುಡ್ನ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ನಟನೆಯ ಒಡೆಲಾ 2 ಚಿತ್ರದ ಬಿಡುಗಡೆಗೆ ದಿನಾಂಕ ಫಿಕ್ಸ್ ಆಗಿದೆ.ಟಾಲಿವುಡ್ನಲ್ಲಿ ನಿರ್ಮಾಣಗೊಂಡಿರುವ ಈ ಚಿತ್ರವನ್ನು ಏಪ್ರಿಲ್ 17ರಂದು ಬಿಡುಗಡೆ ಮಾಡುವುದಾಗಿ ಚಿತ್ರತಂಡ ತಿಳಿಸಿದೆ.ಈ ಚಿತ್ರವನ್ನು ಅಶೋಕ ತೇಜ ಅವರು ನಿರ್ದೇಶನ ಮಾಡಿದ್ದಾರೆ.ಬೋಲ್ಡ್ ಪಾತ್ರಗಳಿಗೆ ಜೀವ ತುಂಬುತ್ತಿದ್ದ ತಮನ್ನಾ ಅವರು ಇದೀಗ ವಿಭಿನ್ನ ಗೆಟಪ್ನಲ್ಲಿ ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸಾದ್ವಿ ಪಾತ್ರಕ್ಕೆ ಅವರು ಜೀವ ತುಂಬಿದ್ದು, ಅಭಿಮಾನಿಗಳಲ್ಲಿ ಭಾರೀ ಕುತೂಹಲ ಕೆರಳಿಸಿದೆ.
ಹೈದರಾಬಾದ್: ಇಂಡಿಯನ್ ಪ್ರೀಮಿಯಲ್ ಲೀಗ್ನಲ್ಲಿ ಇಂದು ಮಧ್ಯಾಹ್ನದ ಹೈವೋಲ್ಟೇಜ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್- ಸನ್ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ.ಉತ್ತಮ ಬ್ಯಾಟಿಂಗ್ ಲೈನ್ಅಪ್ ಮತ್ತು ಅನುಭವಿ ಬೌಲರ್ಗಳನ್ನು ಹೊಂದಿರುವ ಹಾಲಿ ರನ್ನರ್ಸ್ ಅಪ್ ಸನ್ರೈಸರ್ಸ್ ಹೈದರಾಬಾದ್ ತಂಡವು ತವರಿನಲ್ಲಿ ಗೆಲುವಿನ ಅಭಿಯಾನ ಆರಂಭಿಸುವ ತವಕದಲ್ಲಿದೆ. ಮತ್ತೊಂದೆಡೆ ರಾಯಲ್ಸ್ ತಂಡವು ಕಳೆದ ಆವೃತ್ತಿಯ ಪ್ಲೇ ಆಫ್ ಪಂದ್ಯದ ಸೋಲಿಗೆ ಮುಯ್ಯಿ ತೀರಿಸಿಕೊಳ್ಳುವ ತವಕದಲ್ಲಿದೆ.ಕಳೆದ ಋತುವಿನಲ್ಲಿ ಸನ್ರೈಸರ್ಸ್ ಮತ್ತು ರಾಯಲ್ಸ್ ತಂಡಗಳು ಎರಡು ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದವು. ಎರಡರಲ್ಲೂ ಸನ್ರೈಸರ್ಸ್ ಪಾರಮ್ಯ ಮೆರೆದಿತ್ತು. ಎರಡನೇ ಕ್ವಾಲಿಫೈಯರ್ನಲ್ಲಿ 36 ರನ್ಗಳಿಂದ ರಾಜಸ್ಥಾನವನ್ನು ಮಣಿಸಿ ಹೈದರಾಬಾದ್ ತಂಡವು ಫೈನಲ್ ಪ್ರವೇಶಿಸಿತ್ತು. ರಾಯಲ್ಸ್ಗೆ ಇದೀಗ ಮುಯ್ಯಿ ತೀರಿಸಲು ಅವಕಾಶವಿದೆ.
ಚೆನ್ನೈ: ಇಂಡಿಯನ್ ಪ್ರೀಮಿಯರ್ ಲೀಗ್ನ 18ನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಶುಭಾರಂಭ ಮಾಡಿದೆ. ಎರಡನೇ ದಿನವಾದ ಇಂದು ರಾತ್ರಿ ನಡೆಯುವ ಪಂದ್ಯದಲ್ಲಿ ಐಪಿಎಲ್ನಲ್ಲಿ ತಲಾ ಐದು ಬಾರಿ ಕಿರೀಟ ಗೆದ್ದಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಸೆಣಸಾಟ ನಡೆಸಲಿವೆ.ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮತ್ತು ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಇಂದಿನ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿದ್ದಾರೆ. 37 ವರ್ಷದ ರೋಹಿತ್ ಶರ್ಮಾ ಅವರು ಕಳೆದ ಆವೃತ್ತಿ ತನಕ ಮುಂಬೈ ತಂಡವನ್ನು ಮುನ್ನಡೆಸಿದ್ದು, ಈಗ ಬ್ಯಾಟರ್ ಆಗಿ ಪಾತ್ರ ನಿರ್ವಹಿಸುವರು. 43 ವರ್ಷದ ಧೋನಿ ಅವರು ಹಿಂದಿನ ಆವೃತ್ತಿತನಕ ಚೆನ್ನೈ ತಂಡವನ್ನು ಮುನ್ನಡೆಸಿದ್ದು, ಈಗ ವಿಕೆಟ್ ಕೀಪರ್ ಮತ್ತು ಫಿನಿಷರ್ ಪಾತ್ರ ನಿರ್ವಹಿಸಲಿದ್ದಾರೆ.
ಕೋಲ್ಕತ್ತಾ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರಾಟ್ ಕೊಹ್ಲಿ ಅವರು ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ 56ನೇ ಅರ್ಧಶತಕವನ್ನು ದಾಖಲಿಸಿದ್ದಾರೆ. ಶನಿವಾರ ಕೋಲ್ಕತ್ತಾ ವಿರುದ್ಧದ ಪಂದ್ಯದಲ್ಲಿ ಅವರು ಈ ಸಾಧನೆ ಮಾಡಿದ್ದಾರೆ.ಈಡನ್ ಗಾರ್ಡನ್ನಲ್ಲಿ ನಡೆದ ಪಂದ್ಯದಲ್ಲಿ ಬೌಂಡರಿ ಬಾರಿಸಿ ಅರ್ಧಶತಕ ಪೂರೈಸಿದ ವಿರಾಟ್ ಕೊಹ್ಲಿ ಅವರು ಬ್ಯಾಟ್ ಎತ್ತುತ್ತಿದ್ದಂತೆ ಅಚ್ಚರಿಯ ಪ್ರಸಂಗ ಎದುರಾಯಿತು. ವಿರಾಟ್ ಅಭಿಮಾನಿಯೊಬ್ಬ ರಕ್ಷಣಾ ಬೇಲಿಯನ್ನು ದಾಟಿ, ಓಡಿ ಬಂದು ಕೊಹ್ಲಿ ಅವರ ಕಾಲಿಗೆ ಸಾಷ್ಟಂಗ ನಮಸ್ಕಾರ ಮಾಡಿದ್ಧಾರೆ. ಈ ವೇಳೆ ವಿರಾಟ್ ಒಂದು ಕ್ಷಣ ಕಕ್ಕಾಬಿಕ್ಕಿಯಾಗಿದ್ದಾರೆ.ಪಾದ ಮುಟ್ಟಿ ನಮಸ್ಕರಿಸಿದ ಅಭಿಮಾನಿಯನ್ನು ವಿರಾಟ್ ಮೇಲೆಳುವಂತೆ ಹೇಳಿದ್ದಾರೆ. ಆಗ ಕೊಹ್ಲಿಯನ್ನು ತಬ್ಬಿಕೊಂಡು ಶುಭಾಶಯ ತಿಳಿಸಿದ್ದಾನೆ.
ಬೆಂಗಳೂರು: ರಾಜ್ಯದಲ್ಲಿ ಪೂರ್ವ ಮುಂಗಾರು ಚುರುಕುಗೊಂಡಿದ್ದು, ಮುಂದಿನ ನಾಲ್ಕೈದು ದಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ದಕ್ಷಿಣ ಕನ್ನಡ ಸೇರಿ ರಾಜ್ಯದ 20 ಜಿಲ್ಲೆಗಳಲ್ಲಿ ಭಾನುವಾರ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆಯಿದೆ. ಮಾ.27ರ ವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಹಗುರ ಮಳೆ ಮುಂದುವರಿಯಲಿದೆ. ಬೆಂಗಳೂರಿನಲ್ಲೂ ಮಧ್ಯಾಹ್ನದ ಬಳಿಕ ಮಳೆಯಾಗುವ ಸಾಧ್ಯತೆ ಇದೆ.ದಕ್ಷಿಣ ಒಳನಾಡು, ಕರಾವಳಿ ಭಾಗದಲ್ಲಿ ಇಂದು ಕೂಡ ಮಳೆಯಾಗುವ ಸಾಧ್ಯತೆ ಇದೆ. ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇಂದು ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ.
ಕೋಲ್ಕತ್ತ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ಶುಭಾರಂಭ ಮಾಡಿದೆ. ವಿರಾಟ್ ಕೊಹ್ಲಿ ಮತ್ತು ಫಿಲ್ ಸಾಲ್ಟ್ ಅವರ ಅರ್ಧಶತಕ ಮತ್ತು ಕೃಣಾಲ್ ಪಾಂಡ್ಯ ಅವರ ಅಮೋಘ ಬೌಲಿಂಗ್ ದಾಳಿಯ ನೆರವಿನಿಂದ ಆರ್ಸಿಬಿ ತಂಡವು ಹಾಲಿ ಚಾಂಪಿಯನ್ ಕೋಲ್ಕತ್ತ ನೈಟ್ ರೈಡರ್ಸ್ ತಂಡವನ್ನು ಏಳು ವಿಕೆಟ್ಗಳಿಂದ ಗೆದ್ದು ಬೀಗಿದೆ.ಕಳೆದ 18 ಆವೃತ್ತಿಗಳಲ್ಲಿ ಬೆಂಗಳೂರು ತಂಡವನ್ನು ಪ್ರತಿನಿಧಿಸುತ್ತಿರುವ ಕಿಂಗ್ ಕೊಹ್ಲಿ ಅವರು ಕೋಲ್ಕತ್ತದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆದ ಉದ್ಘಾಟನಾ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಕೊನೆವರೆಗೂ ಆಡಿದ ಕೊಹ್ಲಿ 36 ಎಸೆತಗಳಲ್ಲಿ 59 ರನ್ ಗಳಿಸಿ ಔಟಾಗದೇ ಉಳಿದರು. ಇದು ಐಪಿಎಲ್ನಲ್ಲಿ 56ನೇ ಅರ್ಧಶತಕವಾಗಿದೆ. ಐಪಿಎಲ್ನಲ್ಲಿ ಗರಿಷ್ಠ ಶತಕದ ದಾಖಲೆಯೂ ಕೊಹ್ಲಿ (8 ಶತಕ) ಹೆಸರಿನಲ್ಲಿದೆ.
ಕೋಲ್ಕತಾ: ಶನಿವಾರ ಈಡನ್ ಗಾರ್ಡನ್ಸ್ನಲ್ಲಿ ನಡೆದ ಐಪಿಎಲ್ 2025 ರ ಆರಂಭಿಕ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೆಕೆಆರ್ ವಿರುದ್ಧ ಆರ್ಸಿಬಿ 5 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಈ ಆವೃತ್ತಿಯನ್ನು ಗೆಲುವಿನ ನಗೆಯ ಮೂಲಕ ಆರ್ಸಿಬಿ ಆರಂಭಿಸಿದೆ.ಟಾಸ್ ಗೆದ್ದ ಆರ್ಸಿಬಿ ಮೊದಲ ಫೀಲ್ಡಿಂಗ್ ಆಯ್ದುಕೊಂಡು ಕೆಕೆಆರ್ ಅನ್ನು ಬ್ಯಾಟಿಂಗ್ಗೆ ಆಹ್ವಾನಿಸಿತು. ಕೆಕೆಆರ್ 8ವಿಕೆಟ್ ಕಳೆದುಕೊಂಡು 174 ರನ್ ಗಳಿಸಿ, ಆರ್ಸಿಬಿಗೆ 175ರನ್ಗಳ ಟಾರ್ಗೆಟ್ ಅನ್ನು ನೀಡಿತು.ಫಿಲ್ ಸಾಲ್ಟ್ ಹಾಗೂ ಕಿಂಗ್ ಕೊಹ್ಲಿಯ ಉತ್ತಮ ಆರಂಭ ಪಡೆಯಿತು. ಸಾಲ್ಟ್ 31ಎಸೆತದಲ್ಲಿ 56
ಕೋಲ್ಕತಾ: ಶನಿವಾರ ಈಡನ್ ಗಾರ್ಡನ್ಸ್ನಲ್ಲಿ ನಡೆದ ಐಪಿಎಲ್ 2025 ರ ಆರಂಭಿಕ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೆಕೆಆರ್ ವಿರುದ್ಧ ಆರ್ಸಿಬಿ ..ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಈ ಆವೃತ್ತಿಯನ್ನು ಗೆಲುವಿನ ನಗೆಯ ಮೂಲಕ ಆರ್ಸಿಬಿ ಆರಂಭಿಸಿದೆ.ಟಾಸ್ ಗೆದ್ದ ಆರ್ಸಿಬಿ ಮೊದಲ ಫೀಲ್ಡಿಂಗ್ ಆಯ್ದುಕೊಂಡು ಕೆಕೆಆರ್ ಅನ್ನು ಬ್ಯಾಟಿಂಗ್ಗೆ ಆಹ್ವಾನಿಸಿತು. ಕೆಕೆಆರ್ 8ವಿಕೆಟ್ ಕಳೆದುಕೊಂಡು 174 ರನ್ ಗಳಿಸಿ, ಆರ್ಸಿಬಿಗೆ 175ರನ್ಗಳ ಟಾರ್ಗೆಟ್ ಅನ್ನು ನೀಡಿತು.ಫಿಲ್ ಸಾಲ್ಟ್ ಹಾಗೂ ಕಿಂಗ್ ಕೊಹ್ಲಿಯ ಉತ್ತಮ ಆರಂಭ ಪಡೆಯಿತು. ಸಾಲ್ಟ್ 31ಎಸೆತದಲ್ಲಿ 56 ರನ್, ದೇವದತ್ ಪಾಡಿಕಲ್ 10ಎಸೆತಗಳಲ್ಲಿ 10ರನ್, ನಾಯಕ ರಜತ್ ಪಾಟಿದಾರ್ 16ಬಾಲ್ಗಳಲ್ಲಿ 34