ಕೋಲ್ಕತ್ತಾ: ಆರ್ ಜಿ ಕರ್ ರೇಪ್ ಆಂಡ್ ಮರ್ಡರ್ ಕೇಸ್ ನಲ್ಲಿ ಸಂತ್ರಸ್ತ ಯುವತಿಯ ತಾಯಿ ವೇದಿಕೆಯಲ್ಲಿ ಕಾಲಿಗೆ ಬೀಳಲು ಬಂದಾಗ ಪ್ರಧಾನಿ ಮೋದಿ ಮಾಡಿದ್ದೇನು ಈ ವಿಡಿಯೋ ನೋಡಿ. ಕೋಲ್ಕತ್ತಾದ ಆರ್ ಜಿ ಕರ್ ಆಸ್ಪತ್ರೆಯಲ್ಲಿ ಎರಡು ವರ್ಷಗಳ ಹಿಂದೆ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿತ್ತು. ಟ್ರೈನಿ ವೈದ್ಯೆಯ ತಾಯಿ ರತ್ನ ದೇಬಾಂತ್ ಈ ಬಾರಿ ವಿಧಾನಸಭೆ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಇಂದು ಪ್ರಧಾನಿ ಮೋದಿ ಪಶ್ಚಿಮ ಬಂಗಾಲದಲ್ಲಿ ಚುನಾವಣಾ ಪ್ರಚಾರ ನಡೆಸಿದ್ದು ಈ ವೇಳೆ ರತ್ನ ಕೂಡಾ ವೇದಿಕೆಯಲ್ಲಿದ್ದರು.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಿಜೆಪಿ ಮುಖಂಡನ ಪುತ್ರ ಕೃಷ್ಣ ಜೆ ರಾವ್ ಪ್ರಕರಣಕ್ಕೆ ಹೈಕೋರ್ಟ್ ಬಿಗ್ ಟ್ವಿಸ್ಟ್ ನೀಡಿದೆ. ಮದುವೆಯಾಗುವುದಾಗಿ ನಂಬಿಸಿ ಕೃಷ್ಣ ಜೆ ರಾವ್ ಯುವತಿಯ ಜೊತೆ ಲೈಂಗಿಕ ಸಂಪರ್ಕ ಬೆಳೆಸಿ ಪರಿಣಾಮ ಆಕೆ ಮಗುವಿಗೆ ಜನ್ಮ ನೀಡಿದ್ದಾಳೆ. ಯುವತಿ ಗರ್ಭಿಣಿ ಎಂದು ತಿಳಿದ ಮೇಲೆ ಕೃಷ್ಣ ಜೆ ರಾವ್ ನಂತರ ತನಗೂ ಆಕೆಗೂ ಸಂಬಂಧವಿಲ್ಲ ಎಂದು ಕೈ ಎತ್ತಿದ್ದ. ಪ್ರಕರಣ ಸಂಬಂಧ ಯುವತಿಗೆ ವಿಶ್ವಕರ್ಮ ಸಮಾಜ ಬೆಂಬಲಕ್ಕೆ ನಿಂತಿತ್ತು. ಸಾಕಷ್ಟು ಬಾರಿ ಕೃಷ್ಣ ಜೆ ರಾವ್ ಮನವೊಲಿಸಲು ಪ್ರಯತ್ನ ನಡೆಸಲಾಯಿತು. ಆದರೂ ಪ್ರಯೋಜನವಾಗಿರಲಿಲ್ಲ. ಕೊನೆಗೆ ಯುವತಿ ಕುಟುಂಬಸ್ಥರು ಕೋರ್ಟ್ ಮೊರೆ ಹೋಗಿದ್ದಾರೆ.
ಬೆಂಗಳೂರು: ಐಪಿಎಲ್ 2026 ರಲ್ಲಿ ಇಂದು ಗುಜರಾತ್ ಟೈಟನ್ಸ್ ವಿರುದ್ಧ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ. ಕಳೆದ ಪಂದ್ಯದಲ್ಲಿ ತವರಿನಲ್ಲಿ ಸೋತಿದ್ದ ಆರ್ ಸಿಬಿ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಜಾರಿತ್ತು. ಇದೀಗ ಮತ್ತೆ ಗೆಲುವಿನ ಹಳಿಗೆ ಮರಳಲು ಆರ್ ಸಿಬಿಗೆ ಅವಕಾಶ ಎದುರಾಗಿದೆ. ಇಂದು ಗೆದ್ದರೆ ಮತ್ತೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಏರಬಹುದಾಗಿದೆ. ಇಂದಿನ ಪಂದ್ಯಕ್ಕೆ ಆರ್ ಸಿಬಿ ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ. ಫಿಲ್ ಸಾಲ್ಟ್ ಗಾಯಗೊಂಡಿದ್ದು ಅವರ ಸ್ಥಾನಕ್ಕೆ ಬೆತೆಲ್ ಕಣಕ್ಕಳಿಯುತ್ತಿದ್ದಾರೆ.
ಕೋಲ್ಕತ್ತಾ: ಪಶ್ಚಿಮ ಬಂಗಾಲ ಚುನಾವಣೆ ಪ್ರಚಾರದ ವೇಳೆ ಪ್ರಧಾನಿ ಮೋದಿ ಪವಿತ್ರ ಹೂಗ್ಲಿ ನದಿಯಲ್ಲಿ ದೋಣಿ ವಿಹಾರ ನಡೆಸಿದ್ದಾರೆ. ಪಶ್ಚಿಮ ಬಂಗಾಲದ ವಿವಿಧ ಭಾಗಗಳಲ್ಲಿ ನಿನ್ನೆಯಿಂದ ಪ್ರಧಾನಿ ಮೋದಿ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ರೋಡ್ ಶೋ, ಸಾರ್ವಜನಿಕ ಸಮಾವೇಶಗಳ ಮೂಲಕ ಮತದಾರರನ್ನು ಸೆಳೆಯುವ ಪ್ರಯತ್ನ ನಡೆಸುತ್ತಿದ್ದಾರೆ. ಇಂದು ಬೆಳಿಗ್ಗೆ ಹೂಗ್ಲಿ ನದಿಯಲ್ಲಿ ಮೋದಿ ದೋಣಿ ವಿಹಾರ ನಡೆಸಿದ್ದಾರೆ. ಈ ವೇಳೆ ಕ್ಯಾಮರಾ ಹಿಡಿದು ಸುಂದರ ಚಿತ್ರಗಳನ್ನು ಸೆರೆ ಹಿಡಿದಿದ್ದಾರೆ. ಪಶ್ಚಿಮ ಬಂಗಾಲ ಜನತೆಗೆ ಹೂಗ್ಲಿ ನದಿಯೊಂದಿಗೆ ವಿಶೇಷ ಅನುಬಂಧವಿದೆ. ಇದು ವಿಶೇಷ ಗಳಿಗೆಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ನಡು ರಸ್ತೆಯಲ್ಲೇ ಪಬ್ಲಿಕ್ ಆಗಿ ಯುವ ಜೋಡಿಯೊಂದು ರೊಮ್ಯಾನ್ಸ್ ಮಾಡುತ್ತಿರುವ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಭಾರೀ ಟೀಕೆ ವ್ಯಕ್ತವಾಗಿದೆ. ಕರ್ನಾಟಕದ ಮಣಿಪಾಲದಲ್ಲಿ ಈ ಘಟನೆ ನಡೆದಿದೆ. ಇತ್ತೀಚೆಗೆ ಯುವ ಜನತೆ ವಿದೇಶೀ ಸಂಸ್ಕೃತಿಗೆ ಮಾರು ಹೋಗಿ ಅದನ್ನೇ ಅನುಕರಿಸುತ್ತಿದ್ದಾರೆ. ಇದೇ ರೀತಿ ಯುವ ಜೋಡಿಯೊಂದು ಮಣಿಪಾಲದ ನಡು ರಸ್ತೆಯಲ್ಲಿ ಮಾಡಿದ ಕೆಲಸಕ್ಕೆ ಜನ ಛೀಮಾರಿ ಹಾಕಿದ್ದಾರೆ. ಮಣಿಪಾಲದಲ್ಲಿ ಯುವ ಜೋಡಿಯೊಂದು ರಾತ್ರಿ ವೇಳೆ ಜನನಿಬಿಡ ರಸ್ತೆಯಲ್ಲಿ ನಿಂತು ಪರಸ್ಪರ ಆಲಂಗಿಸಿಕೊಂಡು ಅಸಭ್ಯವಾಗಿ ವರ್ತನೆ ಮಾಡುತ್ತಿದ್ದರು.
ನವದೆಹಲಿ: ನಿರೀಕ್ಷೆಯಂತೇ ಎಎಪಿ ತೊರೆದು ರಾಜ್ಯ ಸಭಾ ಸಂಸದ ರಾಘವ್ ಚಡ್ಡಾ ಬಿಜೆಪಿ ಸೇರಿಕೊಂಡಿದ್ದಾರೆ. ಈ ಮೊದಲು ಎಎಪಿ ಅವರನ್ನು ಸಂಸತ್ ನಲ್ಲಿ ಪಕ್ಷದ ಉಪ ನಾಯಕ ಸ್ಥಾನದಿಂದ ಕಿತ್ತು ಹಾಕಿತ್ತು. ರಾಘವ್ ಚಡ್ಡಾ ಸಂಸತ್ ನಲ್ಲಿ ಸದಾ ಜನಪರ ಪ್ರಶ್ನೆಗಳನ್ನು ಕೇಳುವುದರ ಮೂಲಕ ಜನಪ್ರಿಯರಾಗಿದ್ದರು. ಆದರೆ ಇತ್ತೀಚೆಗೆ ಅವರನ್ನು ಆಮ್ ಆದ್ಮಿ ಪಕ್ಷ ಪಕ್ಷದ ಉಪನಾಯಕನ ಸ್ಥಾನದಿಂದ ಕಿತ್ತು ಹಾಕಿತ್ತು. ಕೇಂದ್ರ ಸರ್ಕಾರದ ವಿರುದ್ಧ ಧ್ವನಿಯೆತ್ತಲ್ಲ ಎಂದು ಎಎಪಿ ಆಪಾದಿಸಿತ್ತು. ಇದರ ಬೆನ್ನಲ್ಲೇ ಅವರು ಬಿಜೆಪಿ ಸೇರಿಕೊಳ್ಳಬಹುದು ಎಂದು ಊಹಾಪೋಹಗಳಿತ್ತು. ಅದೀಗ ನಿಜವಾಗಿದೆ.
ಬೆಂಗಳೂರು: ಕರ್ನಾಟಕದಲ್ಲಿ ಮತ್ತೆ ಸಿಇಟಿ ಪರೀಕ್ಷೆ ವೇಳೆ ಜನಿವಾರ ವಿವಾದವಾಗಿದೆ. ಪರೀಕ್ಷಾ ಪ್ರಾಧಿಕಾರದ ಸ್ಪಷ್ಟ ಸೂಚನೆಯಿದ್ದರೂ ವಿದ್ಯಾರ್ಥಿಯ ಜನಿವಾರ ತೆಗೆಸಿದ್ದು ವಿವಾದಕ್ಕೆ ಕಾರಣವಾಗಿದ್ದು ಮೂವರು ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ. ಬೆಂಗಳೂರಿನ ಮಡಿವಾಳದಲ್ಲಿರುವ ಕೃಪಾನಿಧಿ ಕಾಲೇಜಿನಲ್ಲಿ ಘಟನೆ ನಡೆದಿದೆ. ಈ ಸಂಬಂಧ ಓರ್ವ ಪುರುಷ ಮತ್ತು ಇಬ್ಬರು ಮಹಿಳಾ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ. ಈ ಸಿಬ್ಬಂದಿಗಳು ಬಲವಂತವಾಗಿ ವಿದ್ಯಾರ್ಥಿಯ ಜನಿವಾರ ತೆಗೆಸಿದ್ದಾರೆ ಎನ್ನಲಾಗಿದೆ. ಸಿಇಟಿ ಪರೀಕ್ಷೆ ವೇಳೆ ವಸ್ತ್ರಸಂಹಿತೆ ಬಗ್ಗೆ ಕೆಇಎ ಸ್ಪಷ್ಟ ನಿರ್ದೇಶನ ನೀಡಿದೆ. ಇದರಲ್ಲಿ ಜನಿವಾರ ತೆಗೆಸಬಾರದು ಎಂಬ ಸ್ಪಷ್ಟ ಸಂದೇಶವಿದೆ.
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತುಇತರೆ ಚಿನ್ನದ ದರ ಇಳಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತವಾಗಿ ಬೆಲೆ ಏರಿಳಿಕೆಯಾಗುತ್ತಲೇ ಇತ್ತು. ಆದರೆ ವಾರಂತ್ಯಕ್ಕೆ ಪರಿಶುದ್ಧ ಚಿನ್ನದ ದರದಲ್ಲಿ ಕೊಂಚ ಇಳಿಕೆಯಾಗಿತ್ತು. ಪರಿಶುದ್ಧ ಚಿನ್ನದ ದರ ವಾರಂತ್ಯಕ್ಕೆ 1,56,605.00 ರೂ.ಗಳಿತ್ತು. ಆದರೆ ಇಂದು ಇಳಿಕೆಯಾಗಿದ್ದು 1,55,135.00 ರೂ.ಗಳಷ್ಟಿದೆ.
ಬೇಸಿಗೆಯ ಬೇಗೆಗೆ ಶೆಖೆಯಾಗುತ್ತದೆಂದು ಟೆರೇಸ್ ಮೇಲೆ ಮಲಗುವುದು ಎಷ್ಟು ಅಪಾಯಕಾರಿ ಎಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಈ ವಿಡಿಯೋನೇ ಸಾಕ್ಷಿ. ಬೇಸಿಗೆ ಬಂದಾಗ ಮನೆಯೊಳಗೆ ಮಲಗಲು ಶೆಖೆಯಾಗುತ್ತದೆಂದು ಕೆಲವರು ಹೊರಗೆ ಅಥವಾ ಟೆರೇಸ್ ಮೇಲೆ ಮಲಗುತ್ತಾರೆ. ಕೆಲವರು ಬಾಗಿಲು ತೆರೆದು ಮಲಗಿ ಕಳ್ಳತನವಾದ ಘಟನೆಗಳೂ ಸಾಕಷ್ಟು ನಡೆದಿವೆ. ಇಂತಹದ್ದೇ ಒಂದು ಅಪಾಯಕಾರೀ ವಿಡಿಯೋ ಇದಾಗಿದೆ. ಓರ್ವ ವ್ಯಕ್ತಿ ಬೇಸಿಗೆಯ ಬೇಗೆ ಎಂದು ಟೆರೇಸ್ ಮಲಗಿ ಹಾಯಾಗಿ ನಿದ್ರೆ ಮಾಡುತ್ತಿರುತ್ತಾರೆ. ಆದರೆ ಈ ವೇಳೆ ಬೃಹತ್ ಗಾತ್ರದ ಹಾವೊಂದು ಮೈಮೇಲೆ ಬರುತ್ತದೆ.
ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ದಲಿತರಿಗೆ ಒಳಮೀಸಲಾತಿ ನೀಡುವ ಬದಲು ಗೊಂದಲ ಸೃಷ್ಟಿಸಿ ವಿಷಬೀಜ ಬಿತ್ತಿ ಬೀದಿಯಲ್ಲಿ ನಿಂತು ಬಡಿದಾಡುವಂತೆ ಮಾಡಿದೆ. ನಾಡಿನ ಜನ ಇವರನ್ನು ಕ್ಷಮಿಸುವುದಿಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ ಅವರು ಆರೋಪಿಸಿದ್ದಾರೆ.ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಅಹಿಂದ ನಾಯಕ ಎನಿಸಿಕೊಳ್ಳಲು ಯೋಗ್ಯತೆ ಇಲ್ಲ. ದಲಿತ ಸಮುದಾಯಗಳಿಗೆ ಅವರು ದೊಡ್ಡ ಮೋಸ ಮಾಡಿದ್ದಾರೆ. 30 ವರ್ಷಗಳಿಂದ ರಾಜ್ಯದಲ್ಲಿ ಒಳಮೀಸಲಾತಿಗೆ ಹೋರಾಟ ನಡೆಯುತ್ತಿದೆ. ಜನಸಂಖ್ಯೆಗೆ ಅನುಗುಣವಾಗಿ ಎಸ್ಸಿ ಮತ್ತು ಎಸ್ಟಿ ಮೀಸಲಾತಿ ಹೆಚ್ಚಳ ಆಗಬೇಕು ಎಂಬ ಬೇಡಿಕೆ ಇದೆ.
ಅಮೆರಿಕಾದಲ್ಲಿ ಅಣ್ಣಾವ್ರು ಹಾಡಿದ ಸುಪ್ರಸಿದ್ಧ ಕನ್ನಡ ಹಾಡನ್ನು ಹಾಡಿ ಮಲಯಾಳಂ ನಟ ಮೋಹನ್ ಲಾಲ್ ಕನ್ನಡದ ಮೇಲಿನ ಅಭಿಮಾನ ಮೆರೆದಿದ್ದಾರೆ. ಮಲಯಾಳಂನ ಕಂಪ್ಲೀಟ್ ಆಕ್ಟರ್ ಎಂದೇ ಖ್ಯಾತರಾಗಿರುವ, ದಾದಾ ಸಾಹೇಬ್ ಫಾಲ್ಕೆ ಪುರಸ್ಕೃತ ನಟ ಮೋಹನ್ ಲಾಲ್ ಇತ್ತೀಚೆಗೆ ಅಮೆರಿಕಾದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದರು. ಈ ವೇಳೆ ಅವರು ಡಾ ರಾಜ್ ಕುಮಾರ್ ಹಾಡಿದ್ದ ಎಂದೆಂದೂ ನಿನ್ನನು ಮರೆತು ಹಾಡನ್ನು ಹಾಡಿದ್ದಾರೆ. ಸಹ ಗಾಯಕಿಯೊಂದಿಗೆ ಸುಶ್ರಾವ್ಯವಾಗಿ, ಅಕ್ಷರ ಕೊಂಚವೂ ತಪ್ಪಿಲ್ಲದೇ ಮೋಹನ್ ಲಾಲ್ ಹಾಡಿದಾಗ ಪ್ರೇಕ್ಷಕರು ಭಾರೀ ಚಪ್ಪಾಳೆ ತಟ್ಟಿದ್ದಾರೆ. wh
ಪ್ರತೀ ಬಾರಿ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬಂದಾಗ ಕಲಬುರಗಿ ಜಿಲ್ಲೆ ಕೊನೆಯ ಸ್ಥಾನಗಳಲ್ಲೇ ಇರುತ್ತದೆ. ಕಲಬುರಗಿ ಜಿಲ್ಲೆಗೆ ಕೊನೆಯ ಸ್ಥಾನ ಬರಲು ಯಾವುದೆಲ್ಲಾ ಕಾರಣಗಳಿರಬಹುದು ಇಲ್ಲಿದೆ ಒಂದು ವಿಶ್ಲೇಷಣೆ. . ಶಿಕ್ಷಕರ ಕೊರತೆ ಮತ್ತು ಶೈಕ್ಷಣಿಕ ಗುಣಮಟ್ಟಕಲಬುರಗಿ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ ವ್ಯವಸ್ಥೆಯು ಎದುರಿಸುತ್ತಿರುವ ಅತಿದೊಡ್ಡ ಸಮಸ್ಯೆ ಶಿಕ್ಷಕರ ಅಭಾವ. ಖಾಲಿ ಹುದ್ದೆಗಳು: ಸರ್ಕಾರಿ ಶಾಲೆ ಮತ್ತು ಕಾಲೇಜುಗಳಲ್ಲಿ ಗಣಿತ, ವಿಜ್ಞಾನ ಮತ್ತು ಇಂಗ್ಲಿಷ್ನಂತಹ ಪ್ರಮುಖ ವಿಷಯಗಳ ಶಿಕ್ಷಕರ ನೂರಾರು ಹುದ್ದೆಗಳು ಹಲವು ವರ್ಷಗಳಿಂದ ಖಾಲಿ ಇವೆ.
'ಮಿಲ್ಕಿ ಬ್ಯೂಟಿ' ಮೈಮಾಟ ಕುರಿತು ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗಿದ್ದ ಬಾಲಿವುಡ್ ಹಿರಿಯ ನಟ ಅನ್ನು ಕಪೂರ್ ಇದೀಗ ನೆಟ್ಟಿಗರ ಆಕ್ರೋಶಕ್ಕೆ ಮಣಿದು ಕೊನೆಗೂ ನಟಿ ಬಳಿ ಕ್ಷಮೆಯಾಚನೆ ಮಾಡಿದ್ದಾರೆ. ಕಳೆದ ವರ್ಷ ತಮನ್ನಾ ಭಾಟಿಯಾ ಬಗ್ಗೆ ನಟ ನೀಡಿದ ಹೇಳಿಕೆಗೆ ಇದೀಗ ಕ್ಷಮೆಯನ್ನು ಕೋರಿದ್ದಾರೆ. ಶುಭಂಕರ್ ಮಿಶ್ರಾ ಅವರೊಂದಿಗಿನ ಹಿಂದಿನ ಸಂವಾದದ ಸಮಯದಲ್ಲಿ ವಿವಾದವು ಪ್ರಾರಂಭವಾಯಿತು, ಅಲ್ಲಿ ಆಜ್ ಕಿ ರಾತ್ನಲ್ಲಿ ತಮನ್ನಾ ಅವರ ಅಭಿನಯಕ್ಕೆ ಅಣ್ಣು ಪ್ರತಿಕ್ರಿಯಿಸಿದರು, "ಮಾಶಲ್ಲಾ ಕ್ಯಾ ದುಧಿಯಾ ಬದನ್ ಹೈ (ಓ ಮೈ ಗಾಡ್, ಅವಳು ಎಂತಹ ಹಾಲಿನ ದೇಹವನ್ನು ಹೊಂದಿದ್ದಾಳೆ)" ಎಂದು ಹೇಳುವ ಮೂಲಕ ಆನ್ಲೈನ್ನಲ್ಲಿ ವಿವಾದ ಸೃಷ್ಟಿಸಿದ್ದರು.
ಬೆಂಗಳೂರು: ಐಪಿಎಲ್ 2026 ರಲ್ಲಿ ಇಂದು ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ತಂಡ ಗುಜರಾತ್ ಟೈಟನ್ಸ್ ವಿರುದ್ಧ ಆಡಲಿದ್ದು, ಅಂಕಪಟ್ಟಿಯಲ್ಲಿ ರಾಜಸ್ಥಾನ್ ಹಿಂದಿಕ್ಕಲು ಉತ್ತಮ ಅವಕಾಶ ಎದುರಾಗಿದೆ. ಕಳೆದ ಪಂದ್ಯವನ್ನು ಸೋತಿರುವ ಆರ್ ಸಿಬಿ ಇದೀಗ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಕಳೆದ ಪಂದ್ಯದಲ್ಲಿ ಗೆಲುವು ಕಂಡಿದ್ದ ರಾಜಸ್ಥಾನ್ ಎರಡನೇ ಸ್ಥಾನದಲ್ಲಿದೆ. ಇಂದು ಏಳನೇ ಪಂದ್ಯವಾಡಲಿರುವ ಆರ್ ಸಿಬಿ ಗೆದ್ದರೆ ಎರಡನೇ ಸ್ಥಾನಕ್ಕೇರುವ ಅವಕಾಶವಿದೆ. ಎಲ್ಲಾ ಪಂದ್ಯಗಳಲ್ಲೂ ಟಾಸ್ ಪ್ರಮುಖ ಪಾತ್ರ ವಹಿಸುತ್ತಿದೆ. ಇಂದು ಕೂಡಾ ಆರ್ ಸಿಬಿ ಟಾಸ್ ಗೆಲ್ಲುವುದು ತುಂಬಾ ಮುಖ್ಯವಾಗಲಿದೆ.
ಈಚೆಗೆ ಸಾಮಾಜಿ ಜಾಲತಾಣದಲ್ಲಿ ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಭೋಸ್ಲೆ ಮತ್ತು ನಟ ಫರ್ಮಾನ್ ಖಾನ್ ಅವರು ವಿವಾಹವು ಭಾರೀ ಚರ್ಚೆಗೆ ಕಾರಣವಾಗಿತ್ತು. ಈ ಪ್ರಕರಣ ಪೊಲೀಸ್ ಠಾಣಾ ಮೆಟ್ಟಿಲೇರಿತ್ತು. ಮೊನಾಲಿಸಾ "ಲವ್ ಜಿಹಾದ್" ಗೆ ಬಲಿಯಾಗಬಹುದು ಎಂದು ಸಾಮಾಜಿಕ ಮಾಧ್ಯಮದಲ್ಲಿ ಹಲವಾರು ಜನರು ಆರೋಪಿಸಿದ್ದಾರೆ. ಆಕೆ ಅಪ್ರಾಪ್ತ ವಯಸ್ಸಿನವಳು ಮತ್ತು ಫರ್ಮಾನ್ ತನ್ನನ್ನು ಮದುವೆಯಾಗುವಂತೆ ಆಮಿಷ ಒಡ್ಡಿದ ಎಂದು ಆಕೆಯ ಕುಟುಂಬ ವರದಿ ಮಾಡಿದೆ. ಈ ಹಕ್ಕುಗಳ ನಂತರ, ಮದುವೆಯ ಸಮಯದಲ್ಲಿ ಮೊನಾಲಿಸಾ ಅಪ್ರಾಪ್ತ ವಯಸ್ಕಳಾಗಿದ್ದಳು ಎಂದು ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ಆಯೋಗ ತೀರ್ಮಾನಿಸಿದ ನಂತರ ಫರ್ಮಾನ್ ಖಾನ್ ವಿರುದ್ಧ POCSO ಪ್ರಕರಣವನ್ನು ದಾಖಲಿಸಲಾಯಿತು.
ಹುಬ್ಬಳ್ಳಿ: ಆನ್ಲೈನ್ ಗೇಮ್ಗೆ ದಾಸನಾಗಿದ್ದ ಪುತ್ರನಿಂದ ತಾಯಿ ಮೊಬೈಲ್ ಕಿತ್ತುಕೊಂಡಲೆಂದು ಮನನೊಂದು ಬಾಲಕ ನೇಣಿಗೆ ಶರಣಾಗಿರುವ ಆಘಾತಕಾರಿ ಘಟನೆ ಹುಬ್ಬಳ್ಳಿಯ ಉದಯನಗರದಲ್ಲಿ ವರದಿಯಾಗಿದೆ. 14 ವರ್ಷದ ಸಮರ್ಥ್ ಆತ್ಮಹತ್ಯೆ ಮಾಡಿಕೊಂಡ ಬಾಲಕ. ಉದಯನಗರದ ನಿವಾಸಿಯಾದ ಸಮರ್ಥ್ ಕಳೆದ ಕೆಲವು ದಿನಗಳಿಂದ ‘ಫ್ರೀಫೈರ್’ ನಂತಹ ಆನ್ಲೈನ್ ಗೇಮ್ಗಳಿಗೆ ವಿಪರೀತ ಅಡಿಕ್ಟ್ ಆಗಿದ್ದ. ಗುರುವಾರ ರಾತ್ರಿ ಮೊಬೈಲ್ ಗೇಮ್ನಲ್ಲಿ ನಿರತವಾಗಿರುವುದನ್ನು ನೋಡಿದ ತಾಯಿ ಬುದ್ದಿ ಮಾತು ಹೇಳಿ, ಮೊಬೈಲ್ ಅನ್ನು ಕಿತ್ತುಕೊಂಡಿದ್ದಾಳೆ.
ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬಿಜೆಪಿಯಲ್ಲಿ ಹೊರಗಿನವರು ಎಂದು ಗೇಳಿ ಮಾಡಿದ ಬಗ್ಗೆ ಕೌಂಟರ್ ಕೊಟ್ಟ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ರಾಜ್ಯದ ಮುಂದಿನ ಮುಖ್ಯಮಂತ್ರಿ ಬಂಗಾಳದಲ್ಲಿ ಹುಟ್ಟಿ ಬೆಳೆದ ಬಿಜೆಪಿ ಕಾರ್ಯಕರ್ತ ಎಂದು ಪ್ರತಿಪಾದಿಸಿದರು. ಸಿಎಂ ಮಮತಾ ಅವರ ಸೋದರಳಿಯ ಹಾಗೂ ಟಿಎಂಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರು ಫಲಿತಾಂಶ ಪ್ರಕಟವಾದ ಬಳಿಕ ಅಧಿಕಾರದಲ್ಲಿ ಇರುವುದಿಲ್ಲ ಎಂದು ಅಮಿತ್ ಶಾ ವಾಗ್ದಾಳಿ ನಡೆಸಿದರು.ಕೋಲ್ಕತ್ತಾದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಶಾ, ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ
ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದಲ್ಲಿ ಜಲ್ಮುರಿ ರಾಜಕೀಯ ಇನ್ನೂ ಕೊನೆಗೊಂಡಿಲ್ಲ. ಸಿಎಂ ಮಮತಾ ಬ್ಯಾನರ್ಜಿ ಅವರು ಇದೇ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಯನ್ನ ಟೀಕೆ ಮಡಿದರು. ಚುನಾವಣಾ ರ್ಯಾಲಿಯಲ್ಲಿ ಜಾರ್ಗ್ರಾಮ್ನಲ್ಲಿ "ಝಲ್ ಮುರಿ" ತಿಂದ ಬಗ್ಗೆ ಟೀಕೆ ಮಾಡಿದ ಮಮತಾ ಅಂಗಡಿಯಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ. ಭದ್ರತೆಯೊಂದಿಗೆ ಮೊದಲು ಟಿವಿ ಕ್ಯಾಮೆರಾಗಳು ಮತ್ತು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದರು. ಅವರು ಭದ್ರತೆಗಾಗಿ ಮನೆಯಿಂದಲೇ ಜಲ್ ಮುರಿ ತಯಾರಿಸಿ ಅಂಗಡಿಯವರಿಗೆ ₹ 10 ನೀಡಿದ್ದರು. ವಾಸ್ತವವಾಗಿ ನಾನು ಯಾವುದೇ ನೋಟುಗಳನ್ನು ತೆಗೆದುಕೊಂಡು ಹೋಗುವುದಿಲ್ಲ ಎಂದು ಅವರು ಹೇಳಿದರು.
ನವದೆಹಲಿ: ಪ್ರಯಾಣಿಕರ ದಟ್ಟಣೆಯ ನಿರೀಕ್ಷಿತ ಉಲ್ಬಣವನ್ನು ನಿರ್ವಹಿಸಲು ಮತ್ತು ಹೆಚ್ಚಿನ ಬೇಡಿಕೆಯ ಮಾರ್ಗಗಳಲ್ಲಿ ಸುಗಮ ಸಂಪರ್ಕವನ್ನು ಖಚಿತಪಡಿಸಿಕೊಳ್ಳಲು ಭಾರತೀಯ ರೈಲ್ವೇಯು ಬೇಸಿಗೆಯ ಗರಿಷ್ಠ ಪ್ರಯಾಣದ ಅವಧಿಯಲ್ಲಿ 18,262 ವಿಶೇಷ ರೈಲು ಟ್ರಿಪ್ಗಳನ್ನು ನಿರ್ವಹಿಸಲು ಸಿದ್ಧವಾಗಿದೆ ಎಂದು ರೈಲ್ವೆ ಸಚಿವಾಲಯ ಶುಕ್ರವಾರ ತಿಳಿಸಿದೆ.ಎಂಆರ್ ಅಶ್ವಿನಿ ವೈಷ್ಣವ್ ಅವರು ನವದೆಹಲಿಯಲ್ಲಿ ಬೇಸಿಗೆ ವಿಶೇಷ ರೈಲುಗಳ ಕಾರ್ಯಾಚರಣೆಯನ್ನು ಪರಿಶೀಲಿಸಿದ್ದಾರೆ, ಏಕೆಂದರೆ ಭಾರತೀಯ ರೈಲ್ವೇಯು ಗರಿಷ್ಠ ಬೇಸಿಗೆ ಪ್ರಯಾಣದ ಅವಧಿಯಲ್ಲಿ ಪ್ರಯಾಣಿಕರ ಚಲನೆಯನ್ನು ಸರಾಗಗೊಳಿಸುವ ಮತ್ತು ಹೆಚ್ಚಿನ ಬೇಡಿಕೆಯ ಮಾರ್ಗಗಳಲ್ಲಿ ಸಂಪರ್ಕವನ್ನು ಬಲಪಡಿಸಲು 18,262 ವಿಶೇಷ ರೈಲು ಪ್ರಯಾಣಗಳನ್ನು ಯೋಜಿಸಿದೆ ಎಂದು ರೈಲ್ವೇ ಸಚಿವಾಲಯವು ಎಕ್ಸ್ನಲ್ಲಿ ಬರೆದಿದೆ.
ಬೀದರ್: ಸಿಡಿಲು ಬಡಿದು ಇಬ್ಬರು ಯುವ ರೈತರು ದಾರುಣವಾಗಿ ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ನಾವದಗಿ ಗ್ರಾಮದಲ್ಲಿ ವರದಿಯಾಗಿದೆ. ಮೃತ ಯುವಕರನ್ನು ನಾವದಗಿ ಗ್ರಾಮದ ರೇವಣಸಿದ್ದ (28) ಮತ್ತು ಜೇವರ್ಗಿಯ ಯಲ್ಲಾಲಿಂಗ (28)ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ (ಏ.23) ಜಮೀನಿನಲ್ಲಿ ಕೃಷಿ ಕೆಲಸ ಮಾಡುತ್ತಿದ್ದಾಗ ಮಳೆ ಶುರುವಾಗಿದೆ. ಹೀಗಾಗಿ ಇಬ್ಬರು ರೈತರು ಜಮೀನಿನಲ್ಲಿದ್ದ ಮಾವಿನ ಮರದ ಕಳಗಡೆ ನಿಂತಿದ್ದರು. ಈ ವೇಳೆ ಮಾವಿನ ಮರಕ್ಕೆ ಸಿಡಿಲು ಅಪ್ಪಳಿಸಿದ್ದು, ಇಬ್ಬರು ಸ್ಥಳದಲ್ಲೇ
ಟೆಹರಾನ್: ಅಮೆರಿಕ-ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಿಂದ ಇರಾನ್ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಗಾಯಗೊಂಡಿರುವ ಅವರು ಪ್ಲಾಸ್ಟಿಕ್ ಸರ್ಜರಿ ಅಗತ್ಯವಿದೆ ಎಂದು ವರದಿಯಲ್ಲಿ ತಿಳಿದುಬಂದಿದೆ.ಗಾಯಗೊಂಡಿರುವ ಮೊಜ್ತಾಬಾ ಅವರ ಮುಖ ಮತ್ತು ತುಟಿಗಳು ತೀವ್ರವಾಗಿ ಸುಟ್ಟುಹೋಗಿವೆ. ಈ ಗಾಯಗಳಿಂದ ಅವರು ಮಾತನಾಡಲು ಕಷ್ಟವಾಗುತ್ತಿದ್ದು, ಮುಖದ ಪುನರ್ರಚನೆಗಾಗಿ ಶೀಘ್ರದಲ್ಲೇ ಪ್ಲಾಸ್ಟಿಕ್ ಸರ್ಜರಿ ಮಾಡಲು ಇರಾನ್ ಆಡಳಿತ ಮುಂದಾಗಿದೆ ಎಂದು ತಿಳಿದುಬಂದಿದೆ.
ಮಲಯಾಳಂ ಚಿತ್ರರಂಗದ ಖ್ಯಾತ ನಟ ಮೋಹನ್ಲಾಲ್ ಅವರು ಯುಎಸ್ನಲ್ಲಿ ಕನ್ನಡ ಹಾಡನ್ನು ಹಾಡುವ ಮೂಲಕ ಎಲ್ಲರ ಮನಗೆದ್ದಿದ್ದಾರೆ. ಕನ್ನಡ ಹಾಡಿನ ಬಗ್ಗೆ ವಿಶೇಷ ಒಲವಿರುವ ಮೋಹನ್ ಲಾಲ್ ಅವರು ಈ ಹಿಂದೆ ಎಂದೆಂದೂ ನಿನ್ನನು ಮರೆತು ಬದುಕಿರಲಾರೆ ಹಾಡನ್ನು ನೋಡುತ್ತಾ ಆನಂದಿಸಿದ ವಿಡಿಯೋ ವೈರಲ್ ಆಗಿತ್ತು. ಇದೀಗ ಅದೇ ಹಾಡಿಗೆ ಯುಎಸ್ನ ವೇದಿಕೆಯಲ್ಲಿ ಗಾಯಕಿಯೊಂದಿಗೆ ಧ್ವನಿಯಾಗಿದ್ದಾರೆ. ಬಗ್ಗೆ ಒಲವು ಇದೆ. ಅದರಲ್ಲೂ ಡಾ. ರಾಜ್ಕುಮಾರ್ ಸಿನಿಮಾಗಳ ಬಗ್ಗೆ ವಿಶೇಷ ಪ್ರೀತಿ ಇದೆ. ಇತ್ತೀಚೆಗೆ ಅಮೆರಿಕದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮೋಹನ್ಲಾಲ್ ಅವರು ಭಾಗಿ ಆಗಿದ್ದಾರೆ. ವೇದಿಕೆಯಲ್ಲಿ ಅವರು ಲೈವ್
ಸಿಎಂ ಸಿದ್ದರಾಮಯ್ಯನವರು ಗುರುವಾರ ರಾತ್ರಿ ಆಪ್ತರ ಜತೆ ಔತಣಕೂಟದಲ್ಲಿ ಭಾಗಿಯಾಗಿ, ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆಂಬ ಚರ್ಚೆ ರಾಜಕೀಯ ವಲಯದಲ್ಲಿದೆ. ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ಪ್ರಭಾವಿ ಸಚಿವರೊಬ್ಬರಿಗೆ ಸೇರಿದ ವಸತಿಸಂಕೀರ್ಣದಲ್ಲಿ ಸಭೆ ನಡೆಸಿರುವ ಸಿದ್ದರಾಮಯ್ಯ ಅವರು ಮುಂದಿನ ಕಾರ್ಯತಂತ್ರಗಳ ಕುರಿತು ಬಗ್ಗೆ ಚರ್ಚೆ ನಡೆಸಿದ್ದಾರೆ.ಇನ್ನೂ ಈ ಔತಣಕೂಟದಲ್ಲಿ ಸಚಿವರಾದ ಜಿ. ಪರಮೇಶ್ವರ, ಎಚ್.ಸಿ. ಮಹದೇವಪ್ಪ, ಸತೀಶ ಜಾರಕಿಹೊಳಿ, ಬಿ.ಝೆಡ್. ಜಮೀರ್
ರಾಜಕಾರಣಿ ನಟ ಕಮಲ್ ಹಾಸನ್ ಮತ್ತು ಶ್ರುತಿ ಹಾಸನ್ ಅವರು ತಮಿಳುನಾಡು ಚುನಾವಣೆಯಲ್ಲಿ ಮತದಾನ ಮಾಡುವ ಮೂಲಕ ಚೆನ್ನೈನ ಮತದಾನ ಕೇಂದ್ರದಲ್ಲಿ ಕಾಣಿಸಿಕೊಂಡರು. ಈ ವೇಳೆಯ ನಟನ ನಡೆ ಇದೀಗ ಭಾರೀ ಟೀಕೆಗೆ ಕಾರಣವಾಗಿದೆ. ಸರತಿ ಸಾಲನ್ನು ಬಿಟ್ಟು ಕಮಲ್ ಹಾಸನ್ ಅವರು ಮುಂದೆ ಹೋಗಿ ಮತ ಚಲಾಯಿಸಿರುವ ನಟನ ವಿರುದ್ಧ ಜನಸಾಮಾನ್ಯರು ಗರಂ ಆಗಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅದರಲ್ಲಿ ನಟನಿಗೆ ಉಪದೇಶ ನೀಡಲು ಮಾತ್ರ ಗೊತ್ತಿರುವುದು, ಅದನ್ನು ಅನುಸರಿಸಲು ತಿಳಿದಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.
ಶುಕ್ರವಾರ ಲಕ್ಷ್ಮಿ ದೇವಿಯ ಕೃಪೆಗೆ ಪಾತ್ರರಾಗಲು ಒಳ್ಳೆಯ ದಿನ. ಈ ದಿನ ಮುತ್ತೈದೆಯರಿಗೆ ಅರಿಶಿನ-ಕುಂಕುಮ ನೀಡುವುದು ಅಥವಾ ಬಡವರಿಗೆ ಅನ್ನದಾನ ಮಾಡುವುದು ಶ್ರೇಷ್ಠ. ಈ ದಿನ ನಾವು ಮಾಡುವ ಕೆಲ ಕ್ರಮಗಳು ನಮಗೆ ಲಕ್ಷ್ಮಿ ಕೃಪೆಯನ್ನು ನೀಡುತ್ತದೆ. ಇನ್ನೂ ನಿತ್ಯವು ನಾವು ಅನುಸರಿಸುವ ಕೆಲ ಕ್ರಮಗಳು ಲಕ್ಷ್ಮಿ ಕೃಪೆಗೆ ಪಾತ್ರರಾಗುವಂತೆ ಮಾಡುತ್ತದೆ. ಇಲ್ಲಿದೆ ಅದರ ಬಗ್ಗೆ ಮಾಹಿತಿ. ಮನೆಯ ಶುಚಿತ್ವ: ಲಕ್ಷ್ಮಿಯು ಸ್ವಚ್ಛತೆ ಇರುವಲ್ಲಿ ನೆಲೆಸುತ್ತಾಳೆ. ವಿಶೇಷವಾಗಿ ಸಂಜೆ ಸಮಯದಲ್ಲಿ ಮನೆ
ಮಹಾರಾಷ್ಟ್ರದ ಚಂದ್ರಾಪುರದಲ್ಲಿ ಆಘಾತಕಾರಿ ಘಟನೆ ವರದಿಯಾಗಿದ್ದು, ಬಿ.ಎ. ಸಿವಿಲ್ ಸರ್ವೀಸ್ ವಿದ್ಯಾರ್ಥಿಗಳು ಮೊಬೈಲ್ ಫೋನ್ ಬಳಸಿ ಪರೀಕ್ಷೆಯಲ್ಲಿ ನಕಲು ಮಾಡುತ್ತಿರುವುದು ಕಂಡುಬಂದಿದೆ.ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಅಧಿಕಾರಿಗಳ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಕವಿಕುಲಗುರು ಕಾಳಿದಾಸ ಸಂಸ್ಕೃತ ವಿಶ್ವವಿದ್ಯಾಲಯಕ್ಕೆ ಸಂಯೋಜಿತವಾಗಿರುವ ಮುಲ್ನಲ್ಲಿರುವ ಸರ್ವೋದಯ ಕಾಲೇಜಿನಲ್ಲಿ ಏಪ್ರಿಲ್ 22 ರಂದು ಈ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ.ಮೊಬೈಲ್ ಬಳಸಿ ವಿದ್ಯಾರ್ಥಿಗಳಿಗೆ ನಕಲು ಮಾಡಲು ₹300 ಪಡೆಯಲಾಗಿದೆ ಎಂಬ ಆರೋಪ ಕೇಳಿಬಂದಿದೆ. ವೈರಲ್
ನವದೆಹಲಿ: ಸಂಜು ಸ್ಯಾಮ್ಸನ್ 54 ಎಸೆತಗಳಲ್ಲಿ 101ರನ್ ಗಳಿಸುವ ಮೂಲಕ ಮುಂಬೈ ವಿರುದ್ಧದ ಪಂದ್ಯಾಟದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಜಯಶಾಲಿಯಾಗಲು ಪ್ರಮುಖ ಕಾರಣರಾದರು. ಈ ಮೂಲಕ ಮತ್ತೇ ಸಂಜು ಸ್ಯಾಮ್ಸನ್ ಲಯಕ್ಕೆ ಬಂದರು. ಸಂಜು ಸ್ಯಾಮ್ಸನ್ ಅದ್ಭುತ ಬ್ಯಾಟಿಂಗ್ ಪ್ರದರ್ಶನಕ್ಕೆ ಎದುರಾಳಿಗಳೆಂದು ನೋಡದೆ ಮುಂಬೈ ಇಂಡಿಯನ್ಸ್ ಆಟಗಾರರಾದ ಹಾರ್ದಿಕ್ ಪಾಂಡ್ಯ, ಜಸ್ಪ್ರೀತ್ ಬುಮ್ರಾ ಮತ್ತು ಸೂರ್ಯಕುಮಾರ್ ಯಾದವ್ ಅವರು ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ನಾಟ್ ಔಟ್ ಆಗದೆ ಉಳಿದ ಸಂಜು ಸ್ಯಾಮ್ಸನ್ ಅವರು ಇನ್ನಿಂಗ್ಸ್ ಮುಗಿಯುತ್ತಿದ್ದ ಹಾಗೇ ಹೊರನಡೆದರು. ಇನ್ನೂ ಸಂಜು
ರಾಜ್ಯದ ಜನತೆ ಈಗಾಗಲೇ ಬಿಸಿಲ ಬೇಗೆಗೆ ತತ್ತರಿಸಿ ಹೋಗಿದ್ದು, ಮುಂದಿನ ಒಂದು ವಾರದಲ್ಲಿ ರಾಜ್ಯದಲ್ಲಿ ಬಿಸಿಲು, ಬಿರುಗಾಳಿ ಮತ್ತು ಮಳೆಯಿಂದ ಕೂಡಿರಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಮಧ್ಯಾಹ್ನದವರೆಗೆ ಸುಡುಬಿಸಿಲಿನ ವಾತಾವರಣ, ಸಂಜೆ ವೇಳೆ ಜಿಟಿಜಿಟಿ ಮಳೆ ಹಾಗೂ ರಾತ್ರಿ ಸಮಯದಲ್ಲಿ ಸೆಕೆಯಿಂದ ಕೂಡಿದೆ.ಈಗಾಗಲೇ ಈ ವಾತಾವರಣಕ್ಕೆ ಸುಸ್ತಾಗಿ ಹೋಗಿರುವ ಮಂದಿಗೆ ಮುಂದಿನ ಒಂದು ವಾರದವರೆಗೆ ಮಿಶ್ರ ವಾತಾವರಣದ ಎಪೆಕ್ಟ್ ಮುಂದುವರೆಯಲಿದೆ.
ಬೆಂಗಳೂರು: ಪದವಿ ಮುಗಿಸಿ ಕೆಲಸಕ್ಕಾಗಿ ಕಾಯುತ್ತಿರುವ ಯುವ ಸಮೂಹಕ್ಕೆ ಆರ್ಥಿಕ ಶಕ್ತಿ ನೀಡುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಯುವನಿಧಿ’ ಯೋಜನೆ ಯಶಸ್ವಿಯಾಗಿ ಮೂರು ವರ್ಷ ಪೂರೈಸಿದೆ. ಈ ಹಿನ್ನೆಲೆಯಲ್ಲಿ 2025-26ನೇ ಸಾಲಿನಲ್ಲಿ ತೇರ್ಗಡೆಯಾದ ಹೊಸ ಪದವೀಧರರು ತಡಮಾಡದೆ ಯೋಜನೆಯಡಿ ನೋಂದಾಯಿಸಿಕೊಂಡು ಭತ್ಯೆ ಪಡೆಯುವಂತೆ ಶಾಸಕ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ಅವರು ಕರೆ ನೀಡಿದ್ದಾರೆ.ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ದಿನೇಶ್ ಗೂಳಿಗೌಡ, ಕಾಂಗ್ರೆಸ್ ಪಕ್ಷವು ಸದಾ ಜನಪರ ಚಿಂತನೆಯುಳ್ಳದ್ದು ಎಂಬುದು ಪದೇ ಪದೆ ಸಾಬೀತಾಗುತ್ತಲೇ ಬಂದಿದೆ.
ಬೆಂಗಳೂರು: ಕಾನೂನುಬಾಹಿರವಾಗಿ ರಾಜ್ಯದ ವಿವಿಧೆಡೆ ಕಾಂಗ್ರೆಸ್ ಭವನಗಳಿಗೆ ಸಿ.ಎ.ನಿವೇಶನ ನೀಡಲಾಗಿದ್ದು, ಈ ಸಂಬಂಧ ಹೈಕೋರ್ಟ್ ಛೀಮಾರಿ ಹಾಕಿದೆ. ಸಿ.ಎ.ನಿವೇಶನ ನೀಡಿದ್ದರ ವಿರುದ್ಧ ಭಾರತೀಯ ಜನತಾ ಪಾರ್ಟಿ ವತಿಯಿಂದ ಹೋರಾಟ ನಡೆಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಹೇಳಿದ್ದಾರೆ. ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಕೀಯ ಪಕ್ಷಗಳಿಗೆ ಸಿಎ ನಿವೇಶನ ನೀಡುವಂತಿಲ್ಲ ಎಂಬ ಕಾನೂನು ಇದೆ. ಆದರೆ ಅದನ್ನು ಬದಿಗೊತ್ತಿ ನಿವೇಶನ ನೀಡಲಾಗಿದೆ. ಈ ಬಗ್ಗೆ ವಿಧಾನ ಮಂಡಲ ಕಲಾಪದಲ್ಲಿ ಪ್ರಶ್ನೆ ಮಾಡಿದ್ದ ವೇಳೆ ನಗರಾಭಿವೃದ್ಧಿ ಸಚಿವರು ಹಾರಿಕೆ ಉತ್ತರ ನೀಡಿದ್ದರು. ಇದೀಗ ಸರ್ಕಾರಕ್ಕೆ ಹೈಕೋರ್ಟ್ ಛೀಮಾರಿ ಹಾಕಿದೆ ಎಂದರು.
ಬೆಂಗಳೂರು: ಯಡಿಯೂರಪ್ಪನವರ ಅಭಿಮಾನೋತ್ಸವ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಏಪ್ರಿಲ್ 26ರಂದು ಬೆಳಿಗ್ಗೆ 10 ಗಂಟೆಗೆ ಭೂಮಿಪೂಜೆ ನೆರವೇರಿಸಲಾಗುವುದು ಎಂದು ಮಾಜಿ ಉಪ ಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ ಅವರು ತಿಳಿಸಿದ್ದಾರೆ. ಕಾರ್ಯಕ್ರಮದ ಸ್ಥಳಗಳಲ್ಲಿ ಪೆಂಡಾಲ್, ಸ್ಟೇಜ್ ಮುಂತಾದ ವ್ಯವಸ್ಥೆಗಳನ್ನು ಪ್ರಾರಂಭಿಸಲು ಭೂಮಿಪೂಜೆ ನಡೆಯಲಿದೆ ಎಂದರು.ಬಿಜೆಪಿ ರಾಜ್ಯ ಕಾರ್ಯಾಲಯ "ಜಗನ್ನಾಥ ಭವನ" ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭೂಮಿಪೂಜೆಗೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರನ್ನು ಆಹ್ವಾನಿಸಿದ್ದೇವೆ. ಅವರು, ಸಂಸದರು, ಮಾಜಿ ಸಂಸದರು, ಶಾಸಕರು, ಮಾಜಿ ಶಾಸಕರು, ವಿಧಾನಪರಿಷತ್ ಸದಸ್ಯರು, ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ ಸೇರಿ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.
ಕೋಲ್ಕತ್ತ: ನಾನು ಜಲ್ಮುರಿ ತಿಂದಿದ್ರು, ಅದರ ಮೆಣಸಿಕಾಯಿ ಖಾರ ತಟ್ಟಿದ್ದು ಮಾತ್ರ ಟಿಎಂಸಿ ನಾಯಕರಿಗೆ ಎಂದು ಪ್ರಧಾನಿ ನರೇಂದ್ರ ಮೋದಿ ವ್ಯಂಗ್ಯ ಮಾಡಿದ್ದಾರೆ. ಇಂದು (ಗುರುವಾರ) ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದ ಚುನಾವಣೆ ನಡೆಯುತ್ತಿದ್ದು, ಮತದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.ಈ ನಡುವೆ ಕೃಷ್ಣನಗರದಲ್ಲಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಜಲ್ಮುರಿ ವಿಷಯವನ್ನು ಮುಂದಿಟ್ಟು ಟಿಎಂಸಿಯನ್ನು ತರಾಟೆಗೆ ತೆಗೆದುಕೊಂಡರು.
ಬೆಂಗಳೂರು: 2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ- 1ರ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ದಾಖಲೆಯ ಫಲಿತಾಂಶ ಪ್ರಕಟವಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ. ಈ ಸಲ ಪರೀಕ್ಷೆಯಲ್ಲಿ ಏಳು ವಿದ್ಯಾರ್ಥಿಗಳು 625 ಕ್ಕೆ 625 ಅಂಕ ಗಳಿಸಿದ್ದಾರೆ. ದಾವಣಗೆರೆಯ ಭರತ್, ರಾಯಚೂರಿನ ಸುಖದೇವ್, ಚಿಕ್ಕೋಡಿಯ ಪ್ರಾರ್ಥನಾ, ಚಿಕ್ಕಮಗಳೂರಿನ ಬೃಂದಾ, ಉಡುಪಿ ಪ್ರೀತಂ, ವಿಜಯಪುರದ ಸೌಜನ್ಯ, ಬೆಂಗಳೂರು ಉತ್ತರ ಧನುಷ್ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ.ಅನುತ್ತೀರ್ಣಗೊಂಡ ಮಕ್ಕಳಿಗೆ ಎರಡನೇ ಬಾರಿ ಪರೀಕ್ಷೆ ಬರೆಯಲು ಅವಕಾಶವಿದ್ದು, ಮೇ 18ರಿಂದ ಪರೀಕ್ಷೆ ಆರಂಭ ಆಗಲಿದೆ. ಈ ಬಾರಿ ಫೇಲಾದ ಮಕ್ಕಳಿಗೆ ಮೂರನೇ ಬಾರಿ ಪರೀಕ್ಷೆ ಇರುವುದಿಲ್ಲ.
ಬೆಂಗಳೂರು: ಈ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಕಲಬುರಗಿ ಕೊನೆಯ ಸ್ಥಾನದಲ್ಲಿದ್ದು, ಇದಕ್ಕೆ ಬಿಜೆಪಿ ತನ್ನ ಸೋಷಿಯಲ್ ಮೀಡಿಯಾದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಕಾಲೆಳೆದಿದೆ. ಪ್ರಿಯಾಂಕ್ ಖರ್ಗೆ ಕಲಬುರಗಿಯವರು. ಇತ್ತೀಚೆಗೆ ದಕ್ಷಿಣ ಕನ್ನಡ ಮತ್ತು ಕರಾವಳಿ ಭಾಗದವರು ಕೋಮುವಾದದಿಂದಾಗಿ ಅಭಿವೃದ್ಧಿಯಾಗುತ್ತಿಲ್ಲ. ಅಲ್ಲಿ ಐಟಿ ಕಂಪನಿಗಳು ಸ್ಥಾಪನೆಯಾಗುತ್ತಿಲ್ಲ ಎಂದು ಟ್ರೋಲ್ ಗೊಳಗಾಗಿದ್ದರು. ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲೂ ಕಲಬುರಗಿ ಕೊನೆಯಲ್ಲಿ ಸ್ಥಾನದಲ್ಲಿತ್ತು. ಇದೀಗ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲೂ ಕೊನೆಯ ಸ್ಥಾನದಲ್ಲಿದೆ. ಕಲಬುರಗಿ ಸಾಮಾನ್ಯವಾಗಿ ಪ್ರತೀ ವರ್ಷವೂ ದ್ವಿತೀಯ ಪಿಯುಸಿ, ಎಸ್ಎಸ್ಎಲ್ ಸಿ ಪರಿಕ್ಷೆಗಳಲ್ಲಿ ಕೊನೆಯ ಸ್ಥಾನದಲ್ಲೇ ಇರುತ್ತದೆ.
ಚೆನ್ನೈ:ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮಧ್ಯೆ ಚೆನ್ನೈ ಸೂಪರ್ ಕಿಂಗ್ಸ್ ಸ್ಟಾರ್ ಬೌಲರ್ ಮುಖೇಶ್ ಚೌಧರಿ ಅವರಿಗೆ ದೊಡ್ಡ ಆಘಾತ ಎದುರಾಗಿದೆ. ಅವರ ತಾಯಿ ಮಂಗಳವಾರ ನಿಧನರಾಗಿದ್ದಾರೆ.ಅನಾರೋಗ್ಯದ ಬಳಲುತ್ತಿದ್ದ ತಾಯಿ ಪ್ರೇಮ್ ದೇವಿ ಅವರು ಮುಂಬೈನ ಟಾಟಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಈ ಆವೃತ್ತಿಯಲ್ಲಿ ಈವರೆಗೆ ಮುಖೇಶ್ ಚೌಧರಿ ಒಂದೇ ಒಂದು ಪಂದ್ಯವನ್ನು ಆಡಿದ್ದು, ಗುರುವಾರ ಮುಂಬೈ ವಿರುದ್ಧದ ಪಂದ್ಯದ ಬಳಿಕ ತಂಡಕ್ಕೆ ಮರಳುವ ಸಾಧ್ಯತೆಯಿದೆ ಎನ್ನಲಾಗಿದೆ.ಶನಿವಾರ ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಸಿಎಸ್ಕೆ ಪಂದ್ಯದ ನಂತರ ಮುಖೇಶ್ ಚೌಧರಿ ಅವರು ರಾಜಸ್ಥಾನದ ಭಿಲ್ವಾರಾದ ತಮ್ಮ ಊರಿಗೆ ತೆರಳಿದರು. ಬಳಿಕ ಅಣ್ಣ ಡಾ. ರಾಜೇಶ್ ಚೌಧರಿ ಅವರೊಂದಿಗೆ ಸೇರಿ ಬುಧವಾರ ತಾಯಿಯ ಅಂತ್ಯಕ್ರಿಯೆಯನ್ನು ನೆರವೇರಿಸಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು: ಅಡಿಕೆ ಬೆಲೆ ಕಳೆದ ವಾರ ಏರಿಕೆ-ಇಳಿಕೆಯಾಗಿತ್ತು. ಕಳೆದ ವಾರದಂತೆ ಈ ವಾರವೂ ಅದೇ ಟ್ರೆಂಡ್ ಮುಂದುವರಿದಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ. ಕಳೆದ ವಾರ ಅಡಿಕೆ ಬೆಲೆಯಲ್ಲಿ ಕೊಂಚ ಏರಿಳಿಕೆಯಾಗುತ್ತಲೇ ಇತ್ತು. ಕಳೆದ ವಾರ ಎರಡು ದಿನ ಸತತವಾಗಿ ಬೆಲೆ ಏರಿಕೆ ಕಂಡುಬರುತ್ತಿತ್ತು. ಅಡಿಕೆ ಬೆಲೆಯಲ್ಲಿ ಇಂದು ಯಥಾಸ್ಥಿತಿಯಲ್ಲಿದೆ. ಹೊಸ ಅಡಿಕೆ ಬೆಲೆ ಯಥಾಸ್ಥಿತಿಯಲ್ಲಿದ್ದು 475 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ ಯಥಾಸ್ಥಿತಿಯಲ್ಲಿದ್ದು 550 ರೂ. ಗಳಾಗಿದೆ. ಡಬಲ್ ಚೋಲ್ ಬೆಲೆಯೂ 550 ರೂ.ಗಳಷ್ಟಾಗಿದೆ.
ದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ ಆಡುವ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಆನೆಬಲ ಬಂದಿದೆ. ವಿಶ್ವದ ಪ್ರಮುಖ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ಡೆಲ್ಲಿ ತಂಡವನ್ನು ಸೇರಿಕೊಳ್ಳಲು ಸಜ್ಜಾಗಿದ್ದಾರೆ. ಸ್ಟಾರ್ಕ್ ಅವರು ಭುಜ ಮತ್ತು ಮೊಣಕೈ ಗಾಯದಿಂದಾಗಿ 2026ರ ಐಪಿಎಲ್ ಆವೃತಿಯ ಆರಂಭಿಕ ಕೆಲ ಪಂದ್ಯಗಳಿಗೆ ಅಲಭ್ಯರಾಗಿದ್ದರು. ಇದೀಗ ಮೇ 1ರ ವೇಳೆಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.ಆಸ್ಟ್ರೇಲಿಯಾದ ಪ್ರಮುಖ ಎಡಗೈ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ಮಾರಕ ಇನ್ಸ್ವಿಂಗಿಂಗ್ ಯಾರ್ಕರ್ಗಳಿಗೆ ಹೆಸರುವಾಸಿ. ಟೆಸ್ಟ್ ಮತ್ತು ಏಕದಿನ ಕ್ರಿಕೆಟ್ನಲ್ಲಿ ಆಸ್ಟ್ರೇಲಿಯಾದ ಅಗ್ರ ವಿಕೆಟ್ ಟೇಕರ್ಗಳಲ್ಲಿ ಒಬ್ಬರು. 2024ರ ಐಪಿಎಲ್ನಲ್ಲಿ ದಾಖಲೆ ಬೆಲೆಗೆ (₹24.75 ಕೋಟಿ) ಕೆಕೆಆರ್ ತಂಡಕ್ಕೆ ಸೇರಿದ್ದರು. ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿದ್ದಾರೆ.
ಇರಾನ್ ಜೊತೆಗಿನ ರಾಜತಾಂತ್ರಿಕ ಸೋಲಿನ ನಂತರ ಅಮೆರಿಕ ಹೇಗೆ "ಮಾನಸಿಕ ಕಾರ್ಯಾಚರಣೆ" (ಸೈ-ಆಪ್ಸ್) ನಡೆಸುತ್ತಿದೆ ಎಂಬುದನ್ನು ತಿಳಿಯಿರಿ. ಸೋರಿಕೆಯಾದ ವರ್ಗೀಕೃತ ಮಾರ್ಕೊ ರುಬಿಯೊ ಕೇಬಲ್ಗಳು ಪ್ರಮುಖ ಬಹಿರಂಗಪಡಿಸುವಿಕೆಯನ್ನು ಬಹಿರಂಗಪಡಿಸುತ್ತವೆ. ನೀವು ಸಾಮಾಜಿಕ ಮಾಧ್ಯಮದಲ್ಲಿ ನೋಡುವುದು ಅಥವಾ ರೂಪಿಸುವ ಅಭಿಪ್ರಾಯಗಳು ನಿಮ್ಮ ಸ್ವಂತದ್ದೆಂದು ನೀವು ಭಾವಿಸುತ್ತೀರಾ? ಬಹುಶಃ ಅಲ್ಲ. ಒಂದು ಕಾಲದಲ್ಲಿ ಕ್ಷಿಪಣಿಗಳು ಮತ್ತು ನಿರ್ಬಂಧಗಳಿಂದ ಜಗತ್ತನ್ನು ನಿಯಂತ್ರಿಸುತ್ತಿದ್ದ ವಿಶ್ವದ ಶ್ರೇಷ್ಠ ಸೂಪರ್ ಪವರ್ ಈಗ ಅಪಾಯಕಾರಿ ಆಟವನ್ನು ಆಡುತ್ತಿದೆ. ಈ ಆಟವನ್ನು ಸೈಕಲಾಜಿಕಲ್ ಆಪರೇಷನ್ಸ್ ಎಂದು ಕರೆಯಲಾಗುತ್ತದೆ.
ಬೆಂಗಳೂರು: ಇಡೀ ವಿಶ್ವವೇ ನರೇಂದ್ರ ಮೋದಿಜೀ ಅವರ ನಾಯಕತ್ವವನ್ನು ಒಪ್ಪಿಕೊಳ್ಳುವ ಸಂದರ್ಭದಲ್ಲಿ ಎ.ಐ.ಸಿ.ಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮೋದಿಜೀ ಅವರನ್ನು ಭಯೋತ್ಪಾದಕರೆಂದು ಹೇಳಿದ್ದು ಬಿಜೆಪಿ ಮಾತ್ರವಲ್ಲದೇ ಇಡೀ ದೇಶ ಇದನ್ನು ಬಲವಾಗಿ ಖಂಡಿಸುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.ದೇಶದ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರನ್ನು ಉಗ್ರವಾದಿ ಎಂದು ಹೇಳಿದ ಎ.ಐ.ಸಿ.ಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯನ್ನು ಖಂಡಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಇಂದು ಏರ್ಪಡಿಸಿದ್ದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಖರ್ಗೆಯವರು ಮತ್ತು ಕಾಂಗ್ರೆಸ್ಸಿಗೆ ಪ್ರಧಾನಿಯವರ ಜನಪ್ರಿಯತೆ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ತಿಳಿಸಿದರು.
ಬೆಂಗಳೂರು: ಕೇಂದ್ರ ಸರಕಾರದ ಸಂಸ್ಕøತಿ ಸಚಿವಾಲಯವು ಇದೇ 11ರಿಂದ 2028ರ ಏಪ್ರಿಲ್ 11ರವರೆಗೆ ಎರಡು ವರ್ಷಗಳ ಕಾಲ ಮಹಾತ್ಮ ಜ್ಯೋತಿಬಾ ಫುಲೆ ಅವರ 200ನೇ ಜನ್ಮದಿನೋತ್ಸªದ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಸಂಘಟಿಸಲಿದೆ.ಈ ಕುರಿತು ಕೇಂದ್ರ ಸರಕಾರದ ಸಂಸ್ಕøತಿ ಸಚಿವಾಲಯವು ಉನ್ನತ ಮಟ್ಟದ ಸಮಿತಿ ರಚಿಸಿದ್ದು, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯದ ವಿಧಾನಪರಿಷತ್ ಸದಸ್ಯ ಕೇಶವ ಪ್ರಸಾದ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರನ್ನು ಸಮಿತಿಗೆ ನೇಮಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತುಇತರೆ ಚಿನ್ನದ ದರ ಇಳಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತವಾಗಿ ಬೆಲೆ ಏರಿಳಿಕೆಯಾಗುತ್ತಲೇ ಇತ್ತು. ಆದರೆ ವಾರಂತ್ಯಕ್ಕೆ ಪರಿಶುದ್ಧ ಚಿನ್ನದ ದರದಲ್ಲಿ ಕೊಂಚ ಇಳಿಕೆಯಾಗಿತ್ತು. ಪರಿಶುದ್ಧ ಚಿನ್ನದ ದರ ವಾರಂತ್ಯಕ್ಕೆ 1,57,110.00 ರೂ.ಗಳಿತ್ತು. ಆದರೆ ಇಂದು ಇಳಿಕೆಯಾಗಿದ್ದು 1,56,605.00 ರೂ.ಗಳಷ್ಟಿದೆ.
ಬೆಂಗಳೂರು: ಈ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಶೇ. ರಷ್ಟು ಫಲಿತಾಂಶ ಬಂದಿದೆ. ಇನ್ನು ಅನುತ್ತೀರ್ಣರಾದವರಿಗೆ ಇನ್ನು ಎರಡು ಅವಕಾಶವಿದ್ದು ಭಯ ಬೇಡ. ನೇರವಾಗಿ ವೆಬ್ ಸೈಟ್ ಮುಖಾಂತರವೇ ಪರೀಕ್ಷಾ ಮಂಡಳಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ ಒಟ್ಟು ಮೂವರಿಗೆ 625 ಕ್ಕೆ 625 ಅಂಕಗಳು ಬಂದಿವೆ. ಹಾಸನದ ಜಾನವಿ, ಉತ್ಸವ ಪಾಟೀಲ್, ಬೆಳಗಾವಿ ರೂಪಾ ಚನಗೌಡ ಪಾಟೀಲ 625 ಅಂಕ ಪಡೆದ ವಿದ್ಯಾರ್ಥಿಗಳು. ಪತ್ರಿಕಾಗೋಷ್ಠಿಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಫಲಿತಾಂಶ ಘೋಷಣೆ ಮಾಡಿದ್ದಾರೆ. ‘ಈ ಬಾರಿ ದಾಖಲೆಯ 94.1 ಶೇ. ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.
ಚೆನ್ನೈ: ಸಿನಿಮಾ ಸ್ಟಾರ್ಗಳ ಅಧಿಪತ್ಯಕ್ಕೆ ಹೆಸರಾದ ತಮಿಳುನಾಡಿನ ರಾಜಕೀಯ ರಂಗದಲ್ಲಿ ಈಗ ಮತ್ತೊಬ್ಬ ತಾರೆಯ ಅಬ್ಬರ ಜೋರಾಗಿದೆ. ತಮಿಳು ಚಿತ್ರರಂಗದ ‘ದಳಪತಿ’ ಎಂದು ಕರೆಯಲ್ಪಡುವ ನಟ ವಿಜಯ್ ‘ತಮಿಳಗ ವೆಟ್ರಿ ಕಳಗಂ’ TVK ಎಂಬ ಹೆಸರಿನೊಂದಿಗೆ ಹೊಸ ರಾಜಕೀಯ ಪಕ್ಷವನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ಇದರೊಂದಿಗೆ 2026ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಇವರ ಪಕ್ಷ ಎಷ್ಟರಮಟ್ಟಿಗೆ ಯಶಸ್ಸು ಗಳಿಸಬಹುದು ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ತೀವ್ರಗೊಂಡಿವೆ. ವಿಜಯ್ ಅವರ ಟಿವಿಕೆ ಪಕ್ಷವು ತಮಿಳುನಾಡು ಚುನಾವಣೆಯಲ್ಲಿ ಯಶಸ್ವಿಯಾಗಲು ಇರುವ ಪ್ರಮುಖ ಕಾರಣಗಳು ಮತ್ತು ಸವಾಲುಗಳನ್ನು ಈ ಲೇಖನದಲ್ಲಿ ವಿಶ್ಲೇಷಿಸಲಾಗಿದೆ:
ಬೆಂಗಳೂರು: ಕರ್ನಾಟಕ ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟವಾಗಲಿದ್ದು, ಪರೀಕ್ಷಿಸುವುದು ಎಲ್ಲಿ ಮತ್ತು ಹೇಗೆ ಎಂಬ ಬಗ್ಗೆ ಇಲ್ಲಿದೆ ವಿವರ. ಈ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ ಇಂದು 12 ಗಂಟೆಗೆ ಪ್ರಕಟವಾಗಲಿದೆ. ಈ ಬಾರಿ 9 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಎಸ್ಎಸ್ಎಲ್ ಸಿ ಪರೀಕ್ಷೆ ಬರೆದಿದ್ದು, ಫಲಿತಾಂಶಕ್ಕಾಗಿ ಎದಿರು ನೋಡುತ್ತಿದ್ದಾರೆ. ಹಿಂದಿ ಭಾಷೆಗೆ ಕೋರ್ಟ್ ಆದೇಶದಂತೆ ಅಂಕವನ್ನೇ ನೀಡಲಾಗುತ್ತಿದೆ. ಮೊದಲು ಶಿಕ್ಷಣ ಸಚಿವರು ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಲಿದ್ದು ನಂತರ ವೆಬ್ ಸೈಟ್ ಗಳಲ್ಲಿ ಫಲಿತಾಂಶ ಲಭ್ಯವಿರಲಿದೆ.
ಮೂಕ ಪ್ರಾಣಿಯೇ ಆದರೂ ಸುಖಾ ಸುಮ್ಮನೇ ಹಿಂಸೆ ಮಾಡಲು ಯತ್ನಿಸಿದರೆ ಅದು ತಿರುಗಿ ಬೀಳೋದು ಖಚಿತ ಎನ್ನುವುದಕ್ಕೆ ಈ ಗೋವು ಸಾಕ್ಷಿಯಾಗಿದೆ. ದನವನ್ನು ಗೋಮಾತೆ ಎಂದು ಪೂಜಿಸುವ ಪರಂಪರೆ ನಮ್ಮದು. ಆಕಾರದಲ್ಲಿ ದೈತ್ಯವಾಗಿದ್ದರೂ ದನಗಳು ಇನ್ನೊಬ್ಬರಿಗೆ ತೊಂದರೆ ಮಾಡುವುದು ತೀರಾ ವಿರಳ. ಬೀಡಾಡಿ ದನಗಳು ಮಾತ್ರ ಕೆಲವೊಮ್ಮೆ ಆಹಾರ ಸಿಗದೇ ಕೆರಳುವುದು ಇದೆ. ಆದರೆ ಸಾಮಾನ್ಯವಾಗಿ ದನಗಳು ಮನುಷ್ಯರಿಗೆ ತೊಂದರೆ ಮಾಡಲ್ಲ. ಆದರೆ ಇಲ್ಲಿ ತನ್ನ ಪಾಡಿಗೆ ತಾನು ಬೀದಿಯಲ್ಲಿ ಓಡಾಡುತ್ತಿದ್ದ ದನವನ್ನು ನೋಡಿ ವ್ಯಕ್ತಿಯೊಬ್ಬರು ಕಲ್ಲಿನಿಂದ ಹೊಡೆದಿದ್ದಾರೆ.
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಸೂಪರ್ ಸ್ಟಾರ್ ರಜನೀಕಾಂತ್ ಮತ ಚಲಾಯಿಸಿದ್ದು ಅವರು ಮತದಾನ ಮಾಡುವಾಗ ಹಿಂದೆ, ಮುಂದೆಯೇ ಜನರಿದ್ದರು. ಇಂದು ತಮಿಳುನಾಡು ವಿಧಾನಸಭೆ ಮತದಾನ ಪ್ರಕ್ರಿಯೆ ಜಾರಿಯಲ್ಲಿದೆ. ಚೆನ್ನೈನಲ್ಲಿ ಇಂದು ಬೆಳಿಗ್ಗೆಯೇ ಸೂಪರ್ ಸ್ಟಾರ್ ರಜನೀಕಾಂತ್ ತಮ್ಮ ಮತಗಟ್ಟೆಗೆ ಬಂದು ಮತ ಚಲಾಯಿಸಿದ್ದಾರೆ. ರಜನೀಕಾಂತ್ ಮತ ಚಲಾಯಿಸುತ್ತಾರೆ ಎಂದು ತಿಳಿದು ಸಾಕಷ್ಟು ಮಾಧ್ಯಮ ಪ್ರತಿನಿಧಿಗಳೂ ಕ್ಯಾಮರಾ ಸಮೇತ ಅಲ್ಲಿದ್ದರು. ಇನ್ನು, ಮತಗಟ್ಟೆಯ ಸಿಬ್ಬಂದಿಗಳು, ಭದ್ರತಾ ಸಿಬ್ಬಂದಿಗಳೂ ನೆರೆದಿದ್ದರು. ರಜನೀಕಾಂತ್ ಮತ ಯಂತ್ರದ ಮುಂದೆ ನಿಂತು ಮತ ಚಲಾಯಿಸುವಾಗ ಮಾಧ್ಯಮಗಳು ಪಕ್ಕದಲ್ಲೇ ನಿಂತು ಫೋಟೋ, ವಿಡಿಯೋ ತೆಗೆಯಲು ನೂಕುನುಗ್ಗಲು ನಡೆಸಿದ್ದರು.
ಕೋಲ್ಕತ್ತಾ: ಪಶ್ಚಿಮ ಬಂಗಾಲದಲ್ಲಿ ಮೊದಲ ಹಂತದ ಮತದಾನ ಪ್ರಕ್ರಿಯೆ ವೇಳೆ ಮತಗಟ್ಟೆಗೆ ಬಂದ ಅತಿಥಿಯೊಬ್ಬರನ್ನು ನೋಡಿ ಜನ ಬೆಚ್ಚಿಬಿದ್ದಿದ್ದಾರೆ. ಪಶ್ಚಿಮ ಬಂಗಾಲದಲ್ಲಿ ಇಂದು ಮೊದಲ ಹಂತದ ಚುನಾವಣೆ ನಡೆಯುತ್ತಿದೆ. ಇಂದು ಬೆಳಿಗ್ಗೆಯೇ ಸಾಕಷ್ಟು ಜನ ಮತಗಟ್ಟೆಗೆ ಬಂದು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಅದೇ ರೀತಿ ಜಾರಗ್ರಾಮದಲ್ಲೂ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಆದರೆ ಇಲ್ಲಿನ ಮತಗಟ್ಟೆಯೊಂದರಲ್ಲಿ ಜನ ಮತ ಚಲಾಯಿಸಲು ಕ್ಯೂ ನಿಂತಿದ್ದಾಗ ಆನೆಯೊಂದು ಪ್ರತ್ಯಕ್ಷವಾಗಿದೆ. ಮತಗಟ್ಟೆಗೆ ಆನೆಯೊಂದು ಬಂದಿದ್ದು ನೋಡಿ ಕ್ಯೂ ನಿಂತಿದ್ದ ಜನ ಬೆಚ್ಚಿ ಬಿದ್ದಿದ್ದಾರೆ. ಮತಗಟ್ಟೆಯ ಬಳಿಯೆಲ್ಲಾ ಸುತ್ತಾಡಿದ ಆನೆ ವಾಪಸ್ ಆಗಿದೆ.
ಗುವಾಹಟಿ: ಅಭಿಮಾನಿಗಳು ಕರೆದರೂ ಕೇಳದಂತೆ ಬಸ್ ನಲ್ಲಿ ಕುಳಿತಿದ್ದ ರಾಜಸ್ಥಾನ್ ರಾಯಲ್ಸ್ ಕ್ರಿಕೆಟಿಗ ವೈಭವ್ ಸೂರ್ಯವಂಶಿ ವರ್ತನೆ ಬಗ್ಗೆ ಅಸಮಾಧಾನ ವ್ಯಕ್ತವಾಗಿದೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ರಾಜಸ್ಥಾನ್ ರಾಯಲ್ಸ್ ಪರ ಐಪಿಎಲ್ ಆಡುವ ವೈಭವ್ ಸೂರ್ಯವಂಶಿ ತಮ್ಮ ಹೊಡೆಬಡಿಯ ಆಟದಿಂದ ಈಗಲೇ ಸಾಕಷ್ಟು ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಇನ್ನೂ 15 ವರ್ಷದ ಕ್ರಿಕೆಟಿಗ. ಆದರೆ ಹೋದಲ್ಲೆಲ್ಲಾ ಅಭಿಮಾನಿಗಳು ಅವರನ್ನು ಮುತ್ತಿಕೊಳ್ಳುತ್ತಾರೆ. ವೈಭವ್ ಅನೇಕ ಬಾರಿ ಅಭಿಮಾನಿಗಳಿಗೆ ಖುಷಿಯಿಂದಲೇ ಆಟೋಗ್ರಾಫ್ ನೀಡಿದ್ದು ಇದೆ.
ಹೇರ್ ಸ್ಟೈಲಿಂಗ್ ಮಾಡಲು ಬ್ಯೂಟಿ ಪಾರ್ಲರ್ ನಲ್ಲಿ ಕೂತಿದ್ದ ಮಹಿಳೆಗೆ ಶಾಕ್ ತಗುಲಿದ ಭಯಾನಕ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಮಹಿಳೆಯರು ಎಚ್ಚರವಾಗಿರುವುದು ಮುಖ್ಯ. ಇತ್ತೀಚೆಗೆ ಬ್ಯೂಟಿ ಪಾರ್ಲರ್, ಹೇರ್ ಸಲೂನ್ ಗಳಲ್ಲಿ ನಿಮ್ಮ ಅಂದ ಹೆಚ್ಚಿಸಲು ಅನೇಕ ಇಲೆಕ್ಟ್ರಾನಿಕ್ ಸಾಧನಗಳೂ ಬಂದಿವೆ. ಆದರೆ ಇಲೆಕ್ಟ್ರಾನಿಕ್ ಸಾಧನಗಳಿಂದ ಎಷ್ಟು ಅನುಕೂಲವಿದೆಯೋ ಅಷ್ಟೇ ಅಪಾಯಕಾರಿ ಕೂಡಾ ಎಂಬುದಕ್ಕೆ ಈ ವಿಡಿಯೋ ಸಾಕ್ಷಿಯಾಗಿದೆ. ಈ ಘಟನೆ ನಡೆದಿರುವುದು ಚೀನಾದಲ್ಲಿ. ಮಹಿಳೆಯೊಬ್ಬರು ಹೇರ್ ಸಲೂನ್ ನಲ್ಲಿ ಸ್ಟೈಲಿಂಗ್ ಮಾಡಲು ಕೂತಿರುತ್ತಾರೆ. ಅವರ ತಲೆ ಕೂದಲಿಗೆ ಇಲೆಕ್ಟ್ರಾನಿಕ್ ಸಾಧನಗಳನ್ನು ಕನೆಕ್ಟ್ ಮಾಡಲಾಗಿರುತ್ತದೆ.
ಲಕ್ನೋ: ತಮ್ಮ ತಂಡ ಸೋತಾಗಲೆಲ್ಲಾ ಕ್ಯಾಪ್ಟನ್ ಜೊತೆ ಕೋಪ, ತಾಪ ಪ್ರದರ್ಶಿಸುವ ಲಕ್ನೋ ಸೂಪರ್ ಜೈಂಟ್ಸ್ ನಾಯಕ ಸಂಜೀವ್ ಗೊಯೆಂಕಾ ನಿನ್ನೆಯ ವರ್ತನೆ ಶಾಕಿಂಗ್ ಅಗಿದೆ. ನಿನ್ನೆ ರಾಜಸ್ಥಾನ್ ರಾಯಲ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ 40 ರನ್ ಗಳಿಂದ ಪಂದ್ಯ ಸೋತಿದೆ. ಈ ಪಂದ್ಯ ಸೋತ ಬಳಿಕ ಲಕ್ನೋ ಮಾಲಿಕ ಸಂಜೀವ್ ಗೊಯೆಂಕಾ ಮತ್ತು ಕ್ಯಾಪ್ಟನ್ ರಿಷಭ್ ಪಂತ್ ಮೈದಾನದಲ್ಲಿ ಮಾತನಾಡಿದ್ದಾರೆ. ಸಾಮಾನ್ಯವಾಗಿ ಪಂದ್ಯ ಸೋತಾಗ ಸಂಜೀವ್ ಗೊಯೆಂಕಾ ಮೈದಾನವೆಂದೂ ನೋಡದೇ ನಾಯಕನ ಬಳಿ ಸಿಟ್ಟಿನಿಂದಲೇ ತರಾಟೆಗೆ ತೆಗೆದುಕೊಳ್ಳುತ್ತಾರೆ.