ಚೆನ್ನೈ: ತಮಿಳುನಾಡು ಚುನಾವಣೆ ಪ್ರಚಾರ ಸಂದರ್ಭದಲ್ಲಿ ಪ್ರಧಾನಿ ಮೋದಿಯನ್ನು ಭಯೋತ್ಪಾದಕ ಎಂದು ಕರೆಯುವ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿವಾದಕ್ಕೀಡಾಗಿದ್ದಾರೆ. ಇತ್ತೀಚೆಗಷ್ಟೇ ಬಿಜೆಪಿಯನ್ನು ವಿಷ ಸರ್ಪಕ್ಕೆ ಹೋಲಿಸಿದ್ದ ಮಲ್ಲಿಕಾರ್ಜುನ ಖರ್ಗೆ ಇದೀಗ ಪ್ರಧಾನಿ ಮೋದಿಯನ್ನು ಭಯೋತ್ಪಾದಕ ಎಂದು ಕರೆದಿದ್ದಾರೆ. ಅವರ ಹೇಳಿಕೆಗೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಎಐಡಿಎಂಕೆ ಜೊತೆಗಿನ ಬಿಜೆಪಿ ಮೈತ್ರಿ ಬಗ್ಗೆ ಟೀಕಿಸುವ ಭರದಲ್ಲಿ ಖರ್ಗೆ ಈ ರೀತಿ ನಾಲಿಗೆ ಹರಿಬಿಟ್ಟಿದ್ದಾರೆ. ‘ಈ ಎಐಡಿಎಂಕೆಯ ಅಣ್ಣಾದುರೈ ಫೋಟೋ ಹಾಕಿಕೊಳ್ಳುವ ಜನ ಮೋದಿ ಜೊತೆ ಸಖ್ಯ ಹೇಗೆ ಬೆಳೆಸುತ್ತಾರೆ? ಮೋದಿ ಒಬ್ಬ ಭಯೋತ್ಪಾದಕ.
ಬೆಂಗಳೂರು: ಮೇಕೆ ದಾಟು ಯೋಜನೆಗೆ ತಡೆ ಮಾಡ್ತೀವಿ ಎನ್ನುವ ಪ್ರಣಾಳಿಕೆ ಬಿಡುಗಡೆ ಮಾಡಿರುವ ಡಿಎಂಕೆ ಪರವಾಗಿ ತಮಿಳುನಾಡಿನಲ್ಲಿ ನಮ್ಮ ರಾಜ್ಯದ ಕಾಂಗ್ರೆಸ್ ನಾಯಕರು ಪ್ರಚಾರ ಮಾಡುತ್ತಿರುವುದಕ್ಕೆ ನಾಚಿಕೆಯಾಗಬೇಕು ಎಂದು ಜೆಡಿಎಸ್ ವಾಗ್ದಾಳಿ ನಡೆಸಿದೆ. ತಮಿಳುನಾಡು ಚುನಾವಣೆಯಲ್ಲಿ ಮಿತ್ರ ಪಕ್ಷ ಡಿಎಂಕೆ ಪರವಾಗಿ ರಾಜ್ಯ ಕಾಂಗ್ರೆಸ್ ನಾಯಕರು ಪ್ರಚಾರ ನಡೆಸುತ್ತಿದ್ದಾರೆ. ಈ ವಿಚಾರವಾಗಿ ಜೆಡಿಎಸ್ ಟೀಕಾ ಪ್ರಹಾರ ನಡೆಸಿದೆ. ‘"ನಮ್ಮ ನೀರು, ನಮ್ಮ ಹಕ್ಕು" ಎಂದು ಮೇಕೆದಾಟು ಅಣೆಕಟ್ಟೆ ವಿಚಾರವಾಗಿ ಬೃಹನ್ ನಾಟಕ ಮಾಡಿದ ಕಾಂಗ್ರೆಸ್ ನಾಯಕರೇ ನಿಮಗೆ ನಾಚಿಕೆಯಾಗಬೇಕು.
ಬೆಂಗಳೂರು: ಬಾಲಿವುಡ್ನ ಖ್ಯಾತ ನಟ ಅಕ್ಷಯ್ ಕುಮಾರ್ ಅವರ ಭೂತ್ ಬಂಗ್ಲ ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸಿದೆ. ಬಿಡುಗಡೆಯಾದ ಮೂರನೇ ದಿನಕ್ಕೆ ನೂರು ಕೋಟಿ ಕ್ಲಬ್ ಸೇರಿದೆ. ಹಾರರ್-ಕಾಮಿಡಿ ಕಥಾಹಂದರದ ಭೂತ್ ಬಂಗ್ಲ ಸಿನಿಮಾ ಈಚೆಗೆ ಬಿಡುಗಡೆಯಾಗಿದೆ. ಬಾಕ್ಸ್ ಆಫೀಸ್ನಲ್ಲಿ ಈ ಸಿನಿಮಾ ಕೇವಲ ಮೂರು ದಿನದಲ್ಲಿ 100 ಕೋಟಿ ರೂಪಾಯಿ ಗಳಿಸಿದೆ. ಮುಂದಿನ ದಿನಗಳಲ್ಲಿ ಕಲೆಕ್ಷನ್ ಇನ್ನಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ಹಿರಿಯ ನಿರ್ದೇಶಕ ಪ್ರಿಯದರ್ಶನ್ ನಿರ್ದೇಶದನ ಭೂತ್ ಬಂಗ್ಲ ಸಿನಿಮಾ ಬಿಡುಗಡೆಯಾದ ಮೊದಲ ವಾರಾಂತ್ಯದಲ್ಲೇ ಈ ಚಿತ್ರವು ವಿಶ್ವಾದ್ಯಂತ 100 ಕೋಟಿ ರೂಪಾಯಿಗಳ ಗಡಿಯನ್ನು ದಾಟುವ ಮೂಲಕ ಗಮನ ಸೆಳೆದಿದೆ.
ಬೆಂಗಳೂರು: ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಗ್ರೇಡ್ ಬದಲು ಅಂಕಗಳನ್ನೇ ನೀಡುವ ರಾಜ್ಯ ಸರ್ಕಾರ ನಿರ್ಧಾರಕ್ಕೆ ಮತ್ತೆ ಹಿನ್ನಡೆಯಾಗಿದೆ. ರಾಜ್ಯ ಸರ್ಕಾರ ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.ಈ ಸಾಲಿನಿಂದಲೇ ಎಸ್ಎಸ್ಎಲ್ಸಿ ಮೂರನೇ ಭಾಷಾ ಪರೀಕ್ಷೆಯ ಉತ್ತರಪತ್ರಿಕೆಗಳನ್ನು ಮೌಲ್ಯಮಾಪನ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಏಪ್ರಿಲ್ 15ರಂದು ನೀಡಿದ್ದ ಆದೇಶದಲ್ಲಿ ಹಸ್ತಕ್ಷೇಪ ಮಾಡಲು ಹೈಕೋರ್ಟ್ ಮಂಗಳವಾರ ನಿರಾಕರಿಸಿದೆ. ರಾಜ್ಯ ಸರ್ಕಾರ ಪ್ರಸ್ತಾಪಿಸಿದ್ದ ಗ್ರೇಡಿಂಗ್ ಪದ್ಧತಿಗೆ ಬದಲಾವಣೆ ಮಾಡುವ ಬೇಡಿಕೆಯನ್ನು ನ್ಯಾಯಾಲಯ ತಳ್ಳಿ ಹಾಕಿದೆ.ನ್ಯಾಯಮೂರ್ತಿ ಇ.ಎಸ್. ಇಂಡಿರೇಶ್ ಅವರು, ಏಪ್ರಿಲ್ 15ರ ಆದೇಶವನ್ನು ಮರುಪರಿಶೀಲಿಸಲು ರಾಜ್ಯ ಸರ್ಕಾರ ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿಯನ್ನು ವಜಾಗೊಳಿಸುವ ಮೂಲಕ ಈ ಆದೇಶ ನೀಡಿದ್ದಾರೆ.
ಬೆಂಗಳೂರು: ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿಮಾನಿಗಳಿಗೆ ಗುಡ್ನ್ಯೂಸ್. ಪ್ರೇಮ್ ನಿರ್ದೇಶನದ ಧ್ರುವ ಸರ್ಜ ನಟನೆಯ ಬಹುನಿರೀಕ್ಷಿತ ಕೆಡಿ ಚಿತ್ರ ಟ್ರೇಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಚಿತ್ರದ ಟ್ರೈಲನ್ ನಾಳೆ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡು, ಪ್ರತಿ ಕಾಲದಲ್ಲೂ ಒಂದು ಹೆಸರು ಇರುತ್ತೆ, ಅದನ್ನ ಯಾರೂ ಮರೆಯಲ್ಲ ಎಂಬ ಅಡಿಬರಹ ನೀಡಲಾಗಿದೆ.ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣ ಮಾಡಿರುವ ಈ ಸಿನಿಮಾವು ಏಪ್ರಿಲ್ 30ಕ್ಕೆ ಚಿತ್ರ ತೆರೆಗೆ ಬರಲಿದೆ. ಚಿತ್ರಕ್ಕೆ ವಿಲಿಯಂ ಡೇವಿಡ್ ಅವರ ಛಾಯಾಚಿತ್ರಗ್ರಹಣ, ಸಂಕೇತ್ ಆಚಾರ್ ಸಂಕಲನವಿದೆ.
ಮುಂಬೈ: ಕನ್ನಡಕ ಬ್ರ್ಯಾಂಡ್ ಲೆನ್ಸ್ ಕಾರ್ಟ್ ನಲ್ಲಿ ಹಿಂದೂ ನೌಕರರಿಗೆ ತಿಲಕ, ಮಾಂಗಲ್ಯ ಸರ ಧರಿಸಲು ನಿಷೇಧ ಹೇರಲಾಗಿದೆ ಎಂಬ ಆರೋಪದ ಹಿನ್ನಲೆಯಲ್ಲಿ ಮುಂಬೈನ ಶಾಖೆಯೊಂದಕ್ಕೆ ಭೇಟಿ ನೀಡಿದ ಬಿಜೆಪಿ ನಾಯಕಿ ನಾಜಿಯಾ ಇಲಾಹಿ ಖಾನ್ ಅವರು ನಮಾಜ್ ಮಾಡುವುದನ್ನು ಬಿಡ್ತಾರಾ ಎಂದು ಪ್ರಶ್ನೆ ಮಾಡಿದ್ದಾರೆ. ಜೈ ಶ್ರೀರಾಮ್ ಎನ್ನುತ್ತಲೇ ಲೆನ್ಸ್ ಕಾರ್ಟ್ ಮಳೆಗೆಯೊಳಗೆ ತಮ್ಮ ಸಂಗಡಿಗರೊಂದಿಗೆ ಬಂದ ನಾಜಿಯಾ ಇಲ್ಲಿನ ಮ್ಯಾನೇಜರ್ ಯಾರು ಎಂದು ಕರೆಯುತ್ತಾರೆ. ಆತನ ಹೆಸರು ಕೇಳಿದಾಗ ಆತ ಮೊಹ್ಸಿನ್ ಖಾನ್ ಎನ್ನುತ್ತಾನೆ. ನಿಮ್ಮ ಹೆಸರು ಮೊಹ್ಸಿನ್ ಖಾನ್ ಆಗಿರುವುದರಿಂದ ಹೀಗೆಲ್ಲಾ ರೂಲ್ಸ್ ಮಾಡುತ್ತಿದ್ದೀರಾ ಎಂದು ಪ್ರಶ್ನೆ ಮಾಡಿದ್ದಾರೆ.
ಜೈಪುರ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉದ್ಘಾಟನೆ ಮಾಡಬೇಕಿದ್ದ ಪೆಟ್ರೋಲಿಯಂ ಉತ್ಪನ್ನ ಸಂಸ್ಕರಣ ಘಟಕ ಬೆಂಕಿಗೆ ಆಹುತಿಯಾಗಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಸುಮಾರು ₹ 79,000 ಕೋಟಿ ಮೌಲ್ಯದ ರಿಫೈನರಿ ಘಟಕದ ಉದ್ಘಾಟನೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಜಸ್ಥಾನ ಸಿಎಂ ಬಜನ್ ಲಾಲ್ ಶರ್ಮಾ ಸೇರಿದಂತೆ ಪ್ರಮುಖ ನಾಯಕರು ಪಾಲ್ಗೊಳ್ಳಬೇಕಿತ್ತು. ಸದ್ಯ ಅಗ್ನಿ ಅವಘಡದಲ್ಲಿ ರಿಫೈನರಿ ಘಟಕಕ್ಕೆ ಭಾರಿ ಹಾನಿಯಾಗಿದೆ. ಸದ್ಯ ಘಟಕಕ್ಕೆ ಬೆಂಕಿ ಬಿದ್ದಿರುವ ಪರಿಣಾಮ ನಾಳೆ ಮೋದಿ ಉದ್ಘಾಟನಾ ಕಾರ್ಯಕ್ರಮ ಮುಂದೂಡಲಾಗಿದೆ. ರಿಪೇರಿ ಕಾಮಗಾರಿಗಳು ಪೂರ್ಣಗೊಂಡ ಬಳಿಕ ಉದ್ಘಾಟನೆ ಮಾಡಲಾಗುತ್ತದೆ. ರಾಜಸ್ಥಾನದ ಬಲೋತ್ರದಲ್ಲಿ ಅಭಿವೃದ್ಧಿಪಡಿಸಿದ್ದ ಅತ್ಯಾಧುನಿಕ ತಂತ್ರಜ್ಞಾನದ ಹಾಗೂ ಸುಸಜ್ಜಿತ ರಿಫೈನರಿ ಘಟಕ ಇದಾಗಿದೆ.
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಎಂದರೆ ಟಗರು.. ಟಗರು ಎಂದು ಸಚಿವ ಜಮೀರ್ ಅಹ್ಮದ್ ಮಾಧ್ಯಮಗಳ ಮುಂದೆ ಹಾಡಿ ಹೊಗಳಿದ್ದಾರೆ. ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಜಮೀರ್ ಅಹ್ಮದ್ ಇತ್ತೀಚೆಗೆ ಸಿಎಂ ಸಿದ್ದರಾಮಯ್ಯನವರು ಮುಸ್ಲಿಂ ನಾಯಕರನ್ನು ಕಿತ್ತು ಹಾಕುವಾಗಲೂ ಮೌನಕ್ಕೆ ಶರಣಾಗಿದ್ದಾರೆ ಎಂಬ ಟೀಕೆಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಹಿರಿಯ ಶಾಸಕ ಎನ್ ರಾಜಣ್ಣ ಯಾಕೋ ಸಿದ್ದರಾಮಯ್ಯ ಇತ್ತೀಚೆಗೆ ಮೊದಲಿನಂತಿಲ್ಲ. ಶರಣಾಗತಿಯಾಗಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಇದರ ಬಗ್ಗೆ ಮಾಧ್ಯಮಗಳು ಗಮನ ಸೆಳೆದಾಗ ‘ಹೇ.. ಸಿದ್ದರಾಮಯ್ಯನವರು ಟಗರು.. ಮೊದಲೂ ಟಗರು, ಈಗಲೂ ಟಗರು ಹಾಗೇ ಇದ್ದಾರೆ.
ಬೆಂಗಳೂರು: ಅಡಿಕೆ ಬೆಲೆ ಕಳೆದ ವಾರ ಏರಿಕೆ-ಇಳಿಕೆಯಾಗಿತ್ತು. ಕಳೆದ ವಾರದಂತೆ ಈ ವಾರವೂ ಅದೇ ಟ್ರೆಂಡ್ ಮುಂದುವರಿದಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ. ಕಳೆದ ವಾರ ಅಡಿಕೆ ಬೆಲೆಯಲ್ಲಿ ಕೊಂಚ ಏರಿಳಿಕೆಯಾಗುತ್ತಲೇ ಇತ್ತು. ಕಳೆದ ವಾರ ಎರಡು ದಿನ ಸತತವಾಗಿ ಬೆಲೆ ಏರಿಕೆ ಕಂಡುಬರುತ್ತಿತ್ತು. ಅಡಿಕೆ ಬೆಲೆಯಲ್ಲಿ ಇಂದು ಕೊಂಚ ವ್ಯತ್ಯಾಸವಾಗಿಲ್ಲ. ಹೊಸ ಅಡಿಕೆ ಬೆಲೆ ಯಥಾಸ್ಥಿತಿಯಲ್ಲಿದ್ದು 480 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ ಯಥಾಸ್ಥಿತಿಯಲ್ಲಿದ್ದು 550 ರೂ. ಗಳಾಗಿದೆ. ಡಬಲ್ ಚೋಲ್ ಬೆಲೆಯೂ 550 ರೂ.ಗಳಷ್ಟಾಗಿದೆ.
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಇಳಿಕೆಯಾಗಿದ್ದರೆ ಮತ್ತುಇತರೆ ಚಿನ್ನದ ದರ ಯಥಾಸ್ಥಿತಿಯಲ್ಲಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತವಾಗಿ ಬೆಲೆ ಏರಿಳಿಕೆಯಾಗುತ್ತಲೇ ಇತ್ತು. ಆದರೆ ವಾರಂತ್ಯಕ್ಕೆ ಪರಿಶುದ್ಧ ಚಿನ್ನದ ದರದಲ್ಲಿ ಕೊಂಚ ಇಳಿಕೆಯಾಗಿತ್ತು. ಪರಿಶುದ್ಧ ಚಿನ್ನದ ದರ ವಾರಂತ್ಯಕ್ಕೆ 1,57,600.00 ರೂ.ಗಳಿತ್ತು. ಆದರೆ ಇಂದು ಇಳಿಕೆಯಾಗಿದ್ದು 1,57,210.00 ರೂ.ಗಳಷ್ಟಿದೆ.
ಚಿನ್ನದ ಅಂಗಡಿಯೊಂದಕ್ಕೆ ಕದಿಯಲು ಬಂದಿದ್ದ ಖತರ್ನಾಕ್ ಗಂಡ, ಹೆಂಡತಿ ಕೊನೆಗೆ ಸಿಕ್ಕಿ ಹಾಕಿಕೊಂಡ ರೋಚಕ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕಳ್ಳರು, ಖದೀಮರು ಎಂದರೆ ಕೊಳಕು ಬಟ್ಟೆ ಹಾಕಿಕೊಂಡಿರುತ್ತಾರೆ ಎಂದು ಎಲ್ಲರ ಕಲ್ಪನೆಯಿರುತ್ತದೆ. ಆದರೆ ಇಲ್ಲಿ ಗಂಡ, ಹೆಂಡತಿ ಸೂಟು-ಬೂಟು ಹಾಕಿಕೊಂಡು ಮಾಡರ್ನ್ ಡ್ರೆಸ್ ನಲ್ಲಿ ಶ್ರೀಮಂತ ದಂಪತಿಯಂತೆ ಚಿನ್ನದ ಮಳಿಗೆಯೊಂದಕ್ಕೆ ಎಂಟ್ರಿ ಕೊಟ್ಟಿದ್ದರು. ಗ್ರಾಹಕರ ಸೋಗಿನಲ್ಲಿ ಚಿನ್ನದ ಮಳಿಗೆಗೆ ಬರುವ ದಂಪತಿ ಮೊದಲು ಉಂಗುರ ತೋರಿಸಲು ಹೇಳುತ್ತಾರೆ.
ಚೆನ್ನೈ: ತಮಿಳುನಾಡು ಚುನಾವಣಾ ಪ್ರಚಾರದ ವೇಳೆ ಮಿತ್ರ ಪಕ್ಷ ಡಿಎಂಕೆಯನ್ನು ಹೊಗಳುವ ಬದಲು ವಿರೋಧಿ ಎಐಡಿಎಂಕೆಯನ್ನು ಭರಪೂರ ಹೊಗಳಿದ ರಾಹುಲ್ ಗಾಂಧಿ ಜನರನ್ನೇ ಕನ್ ಫ್ಯೂಸ್ ಮಾಡಿದ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ರಾಹುಲ್ ಗಾಂಧಿ ತಮ್ಮ ಭಾಷಣದ ವೇಳೆ ಮಾಡುವ ಎಡವಟ್ಟುಗಳು ಹಲವು ಬಾರಿ ಟ್ರೋಲ್ ಗೊಳಗಾಗಿದ್ದು ಇದೆ. ನಿನ್ನೆ ತಮಿಳುನಾಡಿನಲ್ಲಿ ಚುನಾವಣಾ ಪ್ರಚಾರದ ವೇಳೆಯೂ ತಮ್ಮ ಮಿತ್ರ ಪಕ್ಷವನ್ನು ಹೊಗಳುವ ಬದಲು ವಿರೋಧೀ ಪಕ್ಷವನ್ನು ಹೊಗಳಿದ್ದಾರೆ. ಡಿಎಂಕೆ ಎನ್ನುವ ಬದಲು ಎಐಡಿಎಂಕೆ ತಮಿಳುನಾಡಿನ ಬೆಳವಣಿಗೆಯಲ್ಲಿ ಪ್ರಧಾನ ಪಾತ್ರ ವಹಿಸಿದೆ.
ಬೈಕ್ ನಲ್ಲಿ ಕುಳಿತುಕೊಂಡು ರಸ್ತೆಯಲ್ಲಿ ನಡೆದಾಡುತ್ತಿದ್ದ ಕಾಲೇಜು ವಿದ್ಯಾರ್ಥನಿಯರನ್ನು ಚುಡಾಯಿಸುತ್ತಿದ್ದ ಇಬ್ಬರು ಯುವಕರ ಕತೆ ಕೊನೆಗೆ ಏನಾಯ್ತು ಎಂದು ತಿಳಿಯಲು ಈ ವಿಡಿಯೋ ನೋಡಿ. ಇತ್ತೀಚೆಗೆ ಈ ರೀತಿಯ ರೋಡ್ ರೋಮಿಯೋಗಳ ಹಾವಳಿ ಹೆಚ್ಚಾಗುತ್ತಿದೆ. ಸಿನಿಮಾ ಸ್ಟೈಲ್ ನಲ್ಲಿ ಬೈಕ್ ನಲ್ಲಿ ಬಂದು ಹೋಗೋ, ಬರೋ ಹುಡುಗಿಯರನ್ನು ಚುಡಾಯಿಸುವುದನ್ನೇ ಹೀರೋಯಿಸಂ ಎಂದು ತಿಳಿದುಕೊಂಡಂತಿದೆ ಈ ಯುವಕರು. ಈ ಘಟನೆ ನಡೆದಿರುವುದು ಉತ್ತರ ಪ್ರದೇಶದಲ್ಲಿ. ಇಬ್ಬರು ಯುವಕರು ಬೈಕ್ ನಲ್ಲಿ ಕುಳಿತುಕೊಂಡು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರ ಕೂದಲು ಎಳೆಯುವುದು, ಮೈ ಮುಟ್ಟುವುದು ಇತ್ಯಾದಿ ಮಾಡಿ ಚುಡಾಯಿಸುತ್ತಿದ್ದರು.
ಕನ್ನಡ ಮಾತನಾಡು ಎಂದಿದ್ದಕ್ಕೆ ಹಿಂದಿ ಭಾಷಿಕ ಬ್ಯಾಂಕ್ ನೌಕರ ಗ್ರಾಹಕನಿಗೆ ಹೋಗಿ ನಿರ್ಮಲಾ ಸೀತಾರಾಮನ್ ಗೆ ದೂರು ಕೊಡು ಎಂದು ಉದ್ಧಟತನ ಮೆರೆದ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇತ್ತೀಚೆಗೆ ಕರ್ನಾಟಕದಲ್ಲಿದ್ದುಕೊಂಡೇ ಕನ್ನಡಕ್ಕೆ ಅಗೌರವ ತೋರುವ ಘಟನೆಗಳು ಸಾಕಷ್ಟು ನಡೆಯುತ್ತಿವೆ. ಅದರಲ್ಲೂ ಪರಭಾಷಿಕರು ಕನ್ನಡ ಮಾತಾಡಲ್ಲ ಎಂದು ದಬ್ಬಾಳಿಕೆ ನಡೆಸುವ ಸಾಕಷ್ಟು ಉದಾಹರಣೆಗಳು ನಡೆಯುತ್ತಲೇ ಇವೆ. ಅಂತಹದ್ದೇ ಘಟನೆ ಇದಾಗಿದೆ. ಕರ್ನಾಟಕದ ಬ್ಯಾಂಕ್ ಶಾಖೆಯೊಂದರಲ್ಲಿ ಗ್ರಾಹಕರೊಬ್ಬರು ಕನ್ನಡದಲ್ಲೇ ಮಾತನಾಡಿದಾಗ ನೌಕರ ಹಿಂದಿಯಲ್ಲಿ ಮಾತನಾಡುತ್ತಾರೆ.
ಮುಂಬೈ: ದೂರ ದೂರ ಎಂದವರು ಯಾರು ಎನ್ನುವ ಹಾಗೆ ವಿವಾಹ ವಾರ್ಷಿಕೋತ್ಸವಕ್ಕೆ ಫೋಟೋ ಹಂಚಿಕೊಂಡಿದ್ದಾರೆ ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್. ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ನಿನ್ನೆ ತಮ್ಮ 19 ನೇ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದರು. ಬಾಲಿವುಡ್ ಬಿಗ್ ಬಿ ಕುಟಂಬದ ಸೊಸೆಯಾಗಿರುವ ಐಶ್ವರ್ಯಾ ತಮ್ಮ ಇನ್ ಸ್ಟಾಗ್ರಾಂ ಪುಟದಲ್ಲಿ ಪತಿ ಅಭಿಷೇಕ್ ಮತ್ತು ಮಗಳು ಆರಾಧ್ಯ ಜೊತೆಗಿರುವ ಕ್ಯೂಟ್ ಫೋಟೋ ಹಂಚಿಕೊಂಡಿದ್ದಾರೆ. ಬಹುಶಃ ಇದು ಆನಿವರ್ಸರಿ ಸೆಲೆಬ್ರೇಷನ್ ಪಾರ್ಟಿಯಲ್ಲಿ ತೆಗೆದ ಫೋಟೋ ಇರಬೇಕು.
ಅಹ್ಮದಾಬಾದ್: ಐಪಿಎಲ್ 2026 ರಲ್ಲಿ ನಿನ್ನೆ ಗುಜರಾತ್ ಟೈಟನ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಆಟಗಾರ ತಿಲಕ್ ವರ್ಮ ಭರ್ಜರಿ ಶತಕ ಸಿಡಿಸಿದರೆ ನಾಯಕ ಹಾರ್ದಿಕ್ ಪಾಂಡ್ಯ ಕುಣಿದು ಕುಣಿದು ಬಾರೇ ಸ್ಟೈಲ್ ನಲ್ಲಿ ಸ್ಟೆಪ್ ಹಾಕಿ ಸಂಭ್ರಮಿಸಿದ್ದಾರೆ. ಮುಂಬೈ ಇಂಡಿಯನ್ಸ್ ಟೂರ್ನಿಯಿಂದಲೇ ಹೊರಹೋಗುವ ಭೀತಿಯಲ್ಲಿತ್ತು. ಆದರೆ ತಕ್ಕ ಸಮಯದಲ್ಲಿ ಶತಕ ಸಿಡಿಸಿದ ತಿಲಕ್ ವರ್ಮ ತಂಡದ ಮೊತ್ತ 200 ರ ಗಡಿ ತಲುಪುವಂತೆ ಮಾಡಿದ್ದರು. ಮುಂಬೈ ಇನಿಂಗ್ಸ್ ನ ಕೊನೆಯ ಎಸೆತದಲ್ಲಿ ಬೌಂಡರಿ ಹೊಡೆದು ತಿಲಕ್ ವರ್ಮ ಶತಕ ಪೂರ್ತಿ ಮಾಡಿದ್ದರು.
ಕೋಲ್ಕತ್ತಾ: ಪ್ರಧಾನಿ ಮೋದಿ ಜಲ್ ಮುರಿ ಖರೀದಿಸಿದ ಪಶ್ಚಿಮ ಬಂಗಾಲದ ಜಾರಗ್ರಾಮದ ಅಂಗಡಿಯಾತನಿಗೆ ಕಾಡುತ್ತಿದೆ ಈಗ ಇದೊಂದು ಕೊರಗು. ಪಶ್ಚಿಮ ಬಂಗಾಲದಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಪ್ರಧಾನಿ ಮೋದಿ ಭಾನುವಾರ ಜಾರಗ್ರಾಮದ ಪುಟ್ಟ ಚ್ಯಾಟ್ ಅಂಗಡಿಯೊಂದಕ್ಕೆ ದಿಡೀರ್ ಭೇಟಿ ನೀಡಿದ್ದರು. ಇಲ್ಲಿ ಜಲ್ ಮುರಿ ಖರೀದಿಸಿ ಸ್ಥಳೀಯರೊಂದಿಗೆ ಹಂಚಿ ತಿಂದಿದ್ದರು. ಆ ಅಂಗಡಿಯಾತನೊಂದಿಗೂ ಆತ್ಮೀಯವಾಗಿ ಮಾತನಾಡಿಸಿದ್ದರು. ಇದಾದ ಬಳಿಕ ಈಗ ಆ ಅಂಗಡಿಯಾತನ ವ್ಯಾಪಾರವೂ ಜೋರಾಗಿದೆ. ಪ್ರಧಾನಿ ಭೇಟಿ ಕೊಟ್ಟ ಅಂಗಡಿ ಎಂದು ಸಾಕಷ್ಟು ಜನ ಇಲ್ಲಿಗೆ ಬಂದು ಜಲ್ ಮುರಿ ಖರೀದಿ ಮಾಡುತ್ತಿದ್ದಾರೆ.
ಟೆಹ್ರಾನ್: ಇರಾನ್ ಮತ್ತು ಅಮೆರಿಕಾ ನಡುವೆ ನಡೆದಿದ್ದ 15 ದಿನಗಳ ಕದನ ವಿರಾಮ ನಾಳೆಗೆ ಮುಗಿಯಲಿದೆ. ಇದೀಗ ಮತ್ತೆ ಉಭಯ ದೇಶಗಳ ನಡುವೆ ಯುದ್ಧದ ಭೀತಿ ಎದುರಾಗಿದೆ. ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಮತ್ತೊಂದು ಸುತ್ತಿನ ಮಾತುಕತೆಗೆ ಅಸ್ತು ಎನ್ನುತ್ತಲೇ ಅಮೆರಿಕಾ ಮತ್ತೊಂದೆಡೆ ಬೆದರಿಕೆ ಹಾಕುತ್ತಿರುವುದು ಇರಾನ್ ಅಸಮಾಧಾನಕ್ಕೆ ಕಾರಣವಾಗಿದೆ. ಹೀಗಾಗಿ ಬೆದರಿಕೆಗಳ ನಡುವೆ ಶಾಂತಿ ಒಪ್ಪಂದ ಸಾಧ್ಯವಿಲ್ಲ ಎಂದು ಇರಾನ್ ಖಡಕ್ ಸಂದೇಶ ರವಾನಿಸಿದೆ. ಕದನ ವಿರಾಮದ ನಡುವೆಯೇ ನಿನ್ನೆ ಹೊರ್ಮುಜ್ ಜಲಸಂಧಿಯಲ್ಲಿ ಇರಾನ್ ಹಡಗುಗಳನ್ನು ಅಮೆರಿಕಾ ವಶಕ್ಕೆ ಪಡೆದಿದ್ದು ಆ ದೇಶದ ಆಕ್ರೋಶ ಹೆಚ್ಚು ಮಾಡಿದೆ.
ಹಾವು ಕಂಡರೆ ಮಾರು ದೂರ ಓಡುವವರ ನಡುವೆ ಈ ವ್ಯಕ್ತಿ ಹಾವನ್ನು ಬರಿಗೈಯಲ್ಲಿ ಹಿಡಿದು ಬಾಯಿಯೊಳಗಿಟ್ಟು ಸರಸವಾಡುವುದನ್ನು ನೋಡಿ ಮೈ ಜುಮ್ ಎನಿಸುತ್ತದೆ. ಇಂತಹದ್ದೊಂದು ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕೆಲವರಿಗೆ ಹಾವು ಹಿಡಿಯುವುದು ಪ್ರವೃತ್ತಿಯಾದರೆ ಮತ್ತೆ ಕೆಲವರಿಗೆ ಅದು ಪರಿಸರದ ಮೇಲಿನ ಕಾಳಜಿ. ಇನ್ನು, ಕೆಲವರು ಇತ್ತೀಚೆಗಿನ ದಿನಗಳಲ್ಲಿ ರೀಲ್ಸ್ ಹುಚ್ಚಿಗಾಗಿ ಹಾವಿನ ಜೊತೆ ಸರಸವಾಡುತ್ತಾರೆ. ಇದೇ ರೀತಿ ಇಲ್ಲೊಬ್ಬ ವ್ಯಕ್ತಿ ಹಾವು ಹಿಡಿಯುವ ವೇಳೆ ಅದರ ಜೊತೆ ದುಸ್ಸಾಹಸವನ್ನೇ ಮಾಡಿದ್ದಾನೆ.
ಬೆಂಗಳೂರು: ಉಷ್ಣಗಾಳಿ ಜೊತೆಗೆ ಇಂದು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸೂಚನೆಯಿದೆ. ಇಂದು ರಾಜ್ಯದ ಹವಾಮಾನ ಹೇಗಿರಲಿದೆ ಇಲ್ಲಿದೆ ವರದಿ. ಕರ್ನಾಟಕದಲ್ಲಿ ಈಗ ವಿಪರೀತ ಬಿಸಿಲು, ತಾಪಮಾನ ಗರಿಷ್ಠ ಮಟ್ಟಕ್ಕೆ ತಲುಪುತ್ತಿದೆ. ಹಗಲು ಮನೆಯಿಂದ ಹೊರಗೆ ಕಾಲಿಡಲೂ ಆಗದಷ್ಟು ಬಿಸಿಲು ಕಂಡುಬರುತ್ತಿದೆ. ಇದರ ನಡುವೆಯೂ ಕೆಲವು ಜಿಲ್ಲೆಗಳಲ್ಲಿ ಮಳೆಯ ಸೂಚನೆ ಕಂಡುಬರುತ್ತಿದೆ. ವಿಶೇಷವಾಗಿ ಇಂದು ಕೊಡಗು, ಉಡುಪಿ, ಉತ್ತರ ಕನ್ನಡ, ಬೆಳಗಾವಿ ಜಿಲ್ಲೆಗಳಲ್ಲಿ ಇಂದು ಬಿಸಿಲಿನ ಜೊತೆಗೆ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಇಂದು ಮಂಗಳವಾರವಾಗಿದ್ದು ಆಂಜನೇಯ ಸ್ವಾಮಿಗೆ ವಿಶೇಷವಾದ ದಿನವಾಗಿದೆ. ಇಂದು ಜೀವನದಲ್ಲಿ ಬರುವ ಸಕಲ ಸಂಕಟಗಳ ನಿವಾರಣೆಗಾಗಿ ಆಂಜನೇಯ ಸ್ವಾಮಿಯ ಹನುಮದಷ್ಟಕಂ ಸ್ತೋತ್ರ ಓದಿ.ಶ್ರೀರಘುರಾಜಪದಾಬ್ಜನಿಕೇತನ ಪಂಕಜಲೋಚನ ಮಂಗಳರಾಶೇಚಂಡಮಹಾಭುಜದಂಡ ಸುರಾರಿವಿಖಂಡನಪಂಡಿತ ಪಾಹಿ ದಯಾಳೋ ।ಪಾತಕಿನಂ ಚ ಸಮುದ್ಧರ ಮಾಂ ಮಹತಾಂ ಹಿ ಸತಾಮಪಿ ಮಾನಮುದಾರಂತ್ವಾಂ ಭಜತೋ ಮಮ ದೇಹಿ ದಯಾಘನ ಹೇ ಹನುಮನ್ ಸ್ವಪದಾಂಬುಜದಾಸ್ಯಮ್ ॥ 1 ॥ ಸಂಸೃತಿತಾಪಮಹಾನಲದಗ್ಧತನೂರುಹಮರ್ಮತನೋರತಿವೇಲಂಪುತ್ರಧನಸ್ವಜನಾತ್ಮಗೃಹಾದಿಷು ಸಕ್ತಮತೇರತಿಕಿಲ್ಬಿಷಮೂರ್ತೇಃ ।ಕೇನಚಿದಪ್ಯಮಲೇನ ಪುರಾಕೃತಪುಣ್ಯಸುಪುಂಜಲವೇನ ವಿಭೋ ವೈತ್ವಾಂ ಭಜತೋ ಮಮ ದೇಹಿ ದಯಾಘನ ಹೇ ಹನುಮನ್ ಸ್ವಪದಾಂಬುಜದಾಸ್ಯಮ್ ॥ 2 ॥
ಅಹ್ಮದಾಬಾದ್: ಇಲ್ಲಿ ನಡೆಯುತ್ತಿರುವ ಐಪಿಎಲ್ 2026 ರ ಇಂದಿನ ಗುಜರಾತ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಪರ ತಿಲಕ್ ವರ್ಮ ಭರ್ಜರಿ ಶತಕ ದಾಖಲಿಸಿ ತಂಡಕ್ಕೆ ಟಾನಿಕ್ ನೀಡಿದ್ದಾರೆ. ರೋಹಿತ್ ಶರ್ಮಾ ಈ ಪಂದ್ಯಕ್ಕೂ ಅಲಭ್ಯರಾಗಿದ್ದಾರೆ. ಆದರೆ ಟಾಪ್ ಆರ್ಡರ್ ಬ್ಯಾಟಿಗರ ಪೈಕಿ ಸೂರ್ಯಕುಮಾರ್ ಯಾದವ್, ದ್ಯಾನಿಶ್, ಹಾರ್ದಿಕ್ ಪಾಂಡ್ಯ ವೈಫಲ್ಯ ಅನುಭವಿಸಿದರು. ಈ ವೇಳೆ ತಂಡಕ್ಕೆ ಆಧಾರವಾಗಿದ್ದು ನಮನ್ ಧೀರ್ ಮತ್ತು ತಿಲಕ್ ವರ್ಮ. ನಮನ್ ಧೀರ್ 45 ರನ್ ಗಳಿಸಿ ಔಟಾದರು. ಜೊತೆಗೆ ಕೊನೆಯ ಹಂತದಲ್ಲಿ ಕಗಿಸೊ ರಬಾಡ ತಂಡದ ರನ್ ವೇಗಕ್ಕೆ ಕಡಿವಾಣ ಹಾಕಿದ್ದರು.
ಬೆಂಗಳೂರು: ಮಹಿಳಾ ಮೀಸಲಾತಿ ಮಸೂದೆ ಜಾರಿಗೆ ತಂದು ಪ್ರಧಾನಿ ಮೋದಿ ಮಾಸ್ಟರ್ ಪ್ಲ್ಯಾನ್ ಏನಿತ್ತು ಎಂಬುದನ್ನು ರಾಜ್ಯ ಬಿಜೆಪಿ ಘಟಕ ರಿವೀಲ್ ಮಾಡಿದೆ. ಮೊನ್ನೆಯಷ್ಟೇ ಲೋಕಸಭೆಯಲ್ಲಿ ಮಹಿಳೆಯರಿಗೆ ಲೋಕಸಭೆ ಮತ್ತು ವಿಧಾನಸಭೆಗೆ ಸ್ಪರ್ಧಿಸಲು ಶೇ.33 ರಷ್ಟು ಮೀಸಲಾತಿ ನೀಡುವ ಮಸೂದೆಯನ್ನು ಮಂಡಿಸಲಾಗಿತ್ತು. ಆದರೆ ವಿಪಕ್ಷಗಳು ಇದನ್ನು ವಿರೋಧಿಸಿ ಮತ ಹಾಕಿದ್ದವು. ಪರಿಣಾಮ ಸಂಸತ್ ನಲ್ಲಿ ಬಹುಮತ ಸಿಗದೇ ಮಸೂದೆ ಬಿದ್ದು ಹೋಗಿತ್ತು. ಆದರೆ ಈ ಮಸೂದೆ ಜಾರಿಗೆ ತರುವ ಮೋದಿ ಮಾಸ್ಟರ್ ಪ್ಲ್ಯಾನ್ ಬೇರೆಯೇ ಇತ್ತು ಎಂದು ಬಿಜೆಪಿ ಹೇಳಿಕೊಂಡಿದೆ.
ಹುಬ್ಬಳ್ಳಿ: Fly91 ಏರ್ ಲೈನ್ಸ್ IC3401( ATRTURBOPROP AT7) ಸಂಖ್ಯೆಯ ಫ್ಲೈಟ್ ನಲ್ಲಿ ನಿಜಕ್ಕೂ ಆಗಿದ್ದೇನು, ದುರಂತ ತಪ್ಪಿದ್ದು ಹೇಗೆ ಇಲ್ಲಿದೆ ವಿವರ. ನಿನ್ನೆ ಮಧ್ಯಾಹ್ನ 3 ಗಂಟೆಗೆ ಹೈದರಾಬಾದ್ ನಿಂದ ಟೇಕ್ ಆಫ್ ಆಗಿದ್ದ ವಿಮಾನ 4.30 ಕ್ಕೆ ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಗಿತ್ತು. ಆದರೆ ನಾಲ್ಕು ಗಂಟೆ ಅಗಸದಲ್ಲೇ ಚಕ್ಕರ್ ಹೊಡೆದು ಪ್ರಯಾಣಿಕರು ಜೀವ ಭಯದಲ್ಲಿ ಕಣ್ಣೀರಿಡುವಂತೆ ಮಾಡಿತ್ತು. ಅನೇಕರು ಸೋಷಿಯಲ್ ಮೀಡಿಯಾ ಮೂಲಕ ತಮ್ಮ ಮನೆಯವರಿಗೆ ಇದು ಕೊನೆಯ ಸಂದೇಶ ಎಂದು ಕಣ್ಣೀರಿಟ್ಟು ಸಂದೇಶ ರವಾನಿಸಿದ್ದರು. ಇದು ತಮ್ಮ ಜೀವನದ ಕೊನೆಯ ಗಳಿಗೆ ಎಂದು ವಿಡಿಯೋ ಹಂಚಿಕೊಂಡಿದ್ದರು.
ಬೆಂಗಳೂರು: ಕ್ಷೇತ್ರ ಮರುವಿಂಗಡನೆಯನ್ನು ಹೊಸ ಜನಗಣತಿಯಾದ ನಂತರ ಮಾಡುವುದು ಸೂಕ್ತ ಎನ್ನುವುದು ನನ್ನ ಅಭಿಪ್ರಾಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು ಕ್ಷೇತ್ರ ಮರುವಿಂಗಡಣೆ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ‘ಕ್ಷೇತ್ರ ಮರುವಿಂಗಡನೆಯನ್ನು ಹೊಸ ಜನಗಣತಿಯಾದ ನಂತರ ಮಾಡುವುದು ಸೂಕ್ತ ಎನ್ನುವುದು ನನ್ನ ಅಭಿಪ್ರಾಯ. ನಾವು ಅದಕ್ಕಾಗಿಯೇ ಕ್ಷೇತ್ರ ಮರು ವಿಂಗಡಣೆಯನ್ನು ವಿರೋಧ ಮಾಡಿದೆವು. ನಾವು ಎಂದಿಗೂ ಮಹಿಳಾ ಮೀಸಲಾತಿಯ ಪರವಾಗಿಯೇ ಇದ್ದೇವೆ. ಸಂವಿಧಾನಕ್ಕೆ 73, 74ನೇ ತಿದ್ದುಪಡಿಯನ್ನು ತಂದಿದ್ದು ಕಾಂಗ್ರೆಸ್ ನೇತೃತ್ವದ ಸರ್ಕಾರ. ಸ್ಥಳೀಯ ಸಂಸ್ಥೆಗಳಲ್ಲಿ 50% ಮಹಿಳಾ ಮೀಸಲಾತಿ ತಂದಿದ್ದು ಕೂಡ ಕಾಂಗ್ರೆಸ್ ಸರ್ಕಾರವೇ.
ಚಂಢೀಘಡ: ಐಪಿಎಲ್ 2026 ರಲ್ಲಿ ನಿನ್ನೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 54 ರನ್ ಗಳ ಗೆಲುವು ಸಾಧಿಸಿದ ಬಳಿಕ ಪಂಜಾಬ್ ಮಾಲಕಿ ಪ್ರೀತಿ ಜಿಂಟಾ ಬೌಲರ್ ಅರ್ಷ್ ದೀಪ್ ಸಿಂಗ್ ರನ್ನು ತಬ್ಬಿಕೊಂಡಿದ್ದಾರೆ. ಈ ವೇಳೆ ಅರ್ಷ್ ದೀಪ್ ರಿಯಾಕ್ಷನ್ ವಿಡಿಯೋ ವೈರಲ್ ಆಗಿದೆ. ಪಂಜಾಬ್ ಕಿಂಗ್ಸ್ ಈ ಸೀಸನ್ ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದೆ. ಶ್ರೇಯಸ್ ಅಯ್ಯರ್ ನೇತೃತ್ವದ ಟೀಂ ಸತತ ಗೆಲುವಿನಿಂದ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಈ ಖುಷಿ ಮಾಲಕಿ ಪ್ರೀತಿ ಜಿಂಟಾ ಮುಖದಲ್ಲಿ ಎದ್ದು ಕಾಣುತ್ತಿದೆ.
ಬೆಂಗಳೂರು: ರಾಜ್ಯದ ಉದ್ಯೋಗಾಂಕ್ಷಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಮಲ್ಲೇಶ್ವರದಲ್ಲಿ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕರಾದ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಹೇಳಿದರು.ಮಲ್ಲೇಶ್ವರದ ಎಸ್.ಎಚ್.ವಿ.ಎನ್.ಎಂ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ 'ಯುವೋತ್ಸವ' ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ಪಡೆಯಲು ಹಾಗೂ ಅವರಿಗೆ ನೆರವಾಗಲು ಇಂತಹ ಮೇಳಗಳು ಸಹಕಾರಿಯಾಗಿವೆ. ವಿದ್ಯಾರ್ಥಿಗಳಿಗೆ ಕರಿಯರ್ ಗೈಡೆನ್ಸ್ ನೀಡಲಾಗುವುದು. ನಮ್ಮ ಈ ಕಾರ್ಯಕ್ರಮಕ್ಕೆ ಹಲವಾರು ಸಂಸ್ಥೆಗಳು ಕೈ ಜೋಡಿಸಿವೆ ಎಂದು ಹೇಳಿದರು.
ಬೆಂಗಳೂರು: ಬಿಟ್ ಕಾಯಿನ್ ಮೂಲಕ ಬೇರೆ ಬೇರೆ ದೇಶಗಳಲ್ಲಿ ರಾಜಕಾರಣಿಗಳು ಹೂಡಿಕೆ ಮಾಡಿದ್ದಾರೆ. ವಿಶೇಷವಾಗಿ ಕಾಂಗ್ರೆಸ್ ರಾಜಕಾರಣಿಗಳು ಹೂಡಿಕೆ ಮಾಡಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಆರೋಪಿಸಿದರು.ಬಿಡಿಎ ಅಧ್ಯಕ್ಷ ಹಾಗೂ ಶಾಸಕ ಎನ್.ಎ. ಹ್ಯಾರಿಸ್ ಅವರ ಮನೆ ಮೇಲೆ ಇಡಿ ದಾಳಿ ಕುರಿತು ಅವರು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಇವರು, ನಿರಂತರವಾಗಿ ಕಾಂಗ್ರೆಸ್ ಆರ್ಥಿಕ ಅಪರಾಧಗಳನ್ನು ಮಾಡುತ್ತಲೇ ಬರುತ್ತಿದೆ. ಇದರಲ್ಲಿ ಬಿಟ್ ಕಾಯಿನ್ ಸಹ ಒಂದು. ಬಿಟ್ ಕಾಯಿನ್ ನಲ್ಲಿ ಹೂಡಿಕೆ ಆಗಿದೆ ಎಂಬ ಮಾಹಿತಿ ಆಧರಿಸಿ ದಾಳಿ ನಡೆದಿದೆ ಎಂದರು.
ಚೆನ್ನೈ: ದಳಪತಿ ವಿಜಯ್ ವಿರುದ್ಧ ಪತ್ನಿ ಸಂಗೀತಾ ಸಲ್ಲಿಸಿದ್ದ ವಿಚ್ಛೇದನ ಅರ್ಜಿಯ ಕೋರ್ಟ್ ವಿಚಾರಣೆ ಇಂದಿನಿಂದ ಶುರುವಾಗಲಿದೆ. ಈ ನಡುವೆ ವಿಜಯ್ ತಮ್ಮ ಪತ್ನಿಗೆ ದೊಡ್ಡ ಮೊತ್ತದ ಜೀವನಾಂಶ ನೀಡಬೇಕು ಎಂದು ವರದಿಯಾಗಿದೆ. ವಿಜಯ್ ವಿರುದ್ಧ ವಿವಾಹೇತರ ಸಂಬಂಧ, ಮಾನಸಿಕ ಹಿಂಸೆ ಇತ್ಯಾದಿ ಆರೋಪಗಳನ್ನು ಮಾಡಿರುವ ಸಂಗೀತಾ ಕೋರ್ಟ್ ನಲ್ಲಿ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದರು. ನಟನಿಗೆ ನಟಿಯೊಬ್ಬರೊಂದಿಗೆ ವಿವಾಹೇತರ ಸಂಬಂಧವಿದೆ ಎಂದು ಪತ್ನಿ ಆರೋಪಿಸಿದ್ದು ದೊಡ್ಡ ಸುದ್ದಿಯಾಗಿತ್ತು. ಈ ಸಂಬಂಧ ಈಗ ಕೋರ್ಟ್ ವಿಚಾರಣೆ ನಡೆಸಲಿದೆ. ಚೆಂಗಲಪಟ್ಟು ಕೌಟುಂಬಿಕ ಕೋರ್ಟ್ ನಲ್ಲಿ ವಿಜಯ್-ಸಂಗೀತಾ ವಿಚ್ಛೇದನ ಅರ್ಜಿ ವಿಚಾರಣೆ ನಡೆಯಲಿದೆ.
ಗುವಾಹಟಿ: ರಾಜಸ್ಥಾನ್ ರಾಯಲ್ಸ್ ತಂಡದ ಹಾಲುಗಲ್ಲದ ಹೊಡೆಬಡಿಯ ಆಟಗಾರ ವೈಭವ್ ಸೂರ್ಯವಂಶಿ ಬ್ಯಾಟಿಂಗ್ ನಲ್ಲಿ ಮಾತ್ರ ರಾಕ್ಷಸ, ಇಲ್ಲವೆಂದರೆ ಅಳುಮುಂಜಿ ಎಂಬುದು ಮತ್ತೆ ಸಾಬೀತಾಗಿದೆ. 15 ರ ಹುಡುಗ ವೈಭವ್ ಸೂರ್ಯವಂಶಿ ರಾಜಸ್ಥಾನ್ ರಾಯಲ್ಸ್ ತಂಡದ ಪರ ಐಪಿಎಲ್ ಆಡುತ್ತಾರೆ. ಪ್ರತೀ ಪಂದ್ಯದಲ್ಲೂ ಸ್ಟಾರ್ ಬೌಲರ್ ಗಳು ಎಂದೂ ನೋಡದೇ ಹಿಗ್ಗಾಮುಗ್ಗಾ ಚಚ್ಚಿ ರನ್ ಗುಡ್ಡೆ ಹಾಕುತ್ತಾರೆ. ಅವರ ಬ್ಯಾಟಿಂಗ್ ನೋಡುತ್ತಿದ್ದರೆ ಅನುಭವಿಗಳೂ ಬೆರಗಾಗುತ್ತಾರೆ. ಆದರೆ ಸೋಲು ಮತ್ತು ವೈಫಲ್ಯವನ್ನು ಅವರಿಗೆ ಅರಗಿಸಿಕೊಳ್ಳಲಾಗುತ್ತಿಲ್ಲ.
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಏರಿಕೆಯಾಗಿದ್ದರೆ ಮತ್ತುಇತರೆ ಚಿನ್ನದ ದರ ಇಳಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತವಾಗಿ ಬೆಲೆ ಏರಿಳಿಕೆಯಾಗುತ್ತಲೇ ಇತ್ತು. ಆದರೆ ವಾರಂತ್ಯಕ್ಕೆ ಪರಿಶುದ್ಧ ಚಿನ್ನದ ದರದಲ್ಲಿ ಕೊಂಚ ಇಳಿಕೆಯಾಗಿತ್ತು. ಪರಿಶುದ್ಧ ಚಿನ್ನದ ದರ ವಾರಂತ್ಯಕ್ಕೆ 1,57,210.00 ರೂ.ಗಳಿತ್ತು. ಆದರೆ ಇಂದು ಏರಿಕೆಯಾಗಿದ್ದು 1,57,600.00 ರೂ.ಗಳಷ್ಟಿದೆ.
ಜಾರಗ್ರಾಮ: ಪಶ್ಚಿಮ ಬಂಗಾಲದಲ್ಲಿ ಚುನಾವಣಾ ಪ್ರಚಾರದ ನಡುವೆ ದಿಡೀರ್ ಆಗಿ ಪ್ರಧಾನಿ ಮೋದಿ ಲೋಕಲ್ ಅಂಗಡಿಯೊಂದಕ್ಕೆ ತೆರಳಿ ಜಲ್ ಮುರಿ ಸೇವಿಸಿದ್ದರು. ಆ ಅಂಗಡಿಯಾತನ ಅದೃಷ್ಟವೇ ಈಗ ಬದಲಾಗಿದೆ. ಪ್ರಧಾನಿ ಮೋದಿ ನಿನ್ನೆ ಚುನಾವಣಾ ಪ್ರಚಾರದ ವೇಳೆ ಕಾರು ನಿಲ್ಲಿಸಿ ರಸ್ತೆ ಬದಿ ಅಂಗಡಿಯೊಂದಕ್ಕೆ ತೆರಳಿ ಜಲ್ ಮುರಿ ಸೇವಿಸಿದ್ದರು. ಅಂಗಡಿಯಾತನೊಂದಿಗೆ ಸಂವಾದ ನಡೆಸಿದ್ದಲ್ಲದೆ, ಸ್ಥಳೀಯರ ಜೊತೆಗೂ ಬೆರೆತಿದ್ದರು. ಮೋದಿಯ ಈ ನಡೆ ಎಲ್ಲ ಗಮನ ಸೆಳೆದಿತ್ತು. ಇದಾದ ಬಳಿಕ ಈಗ ಆ ಅಂಗಡಿಯಾತನ ಅದೃಷ್ಟವೇ ಬದಲಾಗಿದೆ. ದೇಶದ ಪ್ರಧಾನಿಯೇ ಒಂದು ಅಂಗಡಿಗೆ ಹೋಗಿದ್ದಾರೆಂದರೆ ಕುತೂಹಲಕ್ಕಾದರೂ ಕೆಲವರು ಅಲ್ಲಿಗೆ ಹೋಗಿಯೇ ಹೋಗುತ್ತಾರೆ.
ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ 20 ನೇ ಮಹಡಿಯಿಂದ ಇನ್ನೇನು ಹಾರಲಿದ್ದಳು. ಕೊನೆಯ ಕ್ಷಣದಲ್ಲಿ ಏನಾಯ್ತು ಈ ಮೈ ಜುಮ್ ಎನಿಸುವ ವಿಡಿಯೋ ತಪ್ಪದೇ ನೋಡಿ. ಈ ಘಟನೆ ನಡೆದಿರುವುದು ಕೊರಿಯಾದ ಗಂಗ್ನಾಂ ಸ್ಟೇಷನ್ ನಲ್ಲಿ. ಇತ್ತೀಚೆಗಿನ ದಿನಗಳಲ್ಲಿ ಕ್ಷುಲ್ಲುಕ ಕಾರಣಗಳಿಗೆ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಕರಣಗಳು ಹೆಚ್ಚಾಗುತ್ತಿವೆ. ಯುವ ಜನತೆ ಒತ್ತಡ ನಿಭಾಯಿಸಲು ಸೋಲುತ್ತಿದ್ದಾರೆ. ಈ ಯುವತಿಗೂ ಅದೇನು ಕಷ್ಟವಿತ್ತೋ. ಒಟ್ಟಿನಲ್ಲಿ ಕೊರಿಯಾದ ಈ ಯುವತಿ ಬಹುಮಹಡಿ ಕಟ್ಟಡದ 20 ನೇ ಮಹಡಿಯಿಂದ ಜಿಗಿಯಲು ಹೊರಟಿದ್ದಳು.
ಕೋಲ್ಕತ್ತಾ: ಪ್ರಧಾನಿ ಮೋದಿ ನಿನ್ನೆ ಪಶ್ಚಿಮ ಬಂಗಾಲದಲ್ಲಿ ಪ್ರಚಾರದ ನಡುವೆ ದಿಡೀರ್ ಆಗಿ ಅಂಗಡಿಗೆ ಹೋಗಿ ಜಲ್ ಮುರಿ ತಿಂದಿದ್ದಕ್ಕೆ ಜಾರ್ಖಂಡ್ ಸಿಎಂಗೆ ತೊಂದರೆಯಾಗಿದೆಯತೆ. ಟಿಎಂಸಿ ಆರೋಪಕ್ಕೆ ಕಾರಣ ಇಲ್ಲಿದೆ. ಪ್ರಧಾನಿ ಮೋದಿ ನಿನ್ನೆ ಜಾರಗ್ರಾಮದಲ್ಲಿ ಬಿರುಸಿನ ಪ್ರಚಾರ ನಡೆಸಿದ್ದಾರೆ. ಈ ವೇಳೆ ಕೊಂಚ ಬಿಡುವು ಮಾಡಿಕೊಂಡ ಪ್ರಧಾನಿ ಮೋದಿ ಸ್ಥಳೀಯ ಚ್ಯಾಟ್ ಸೆಂಟರ್ ಒಂದಕ್ಕೆ ಹೋಗಿದ್ದಾರೆ. ಅಲ್ಲಿ 10 ರೂ. ಕೊಟ್ಟು ಜಲ್ ಮುರಿ ಖರೀದಿ ಮಾಡಿ ತಾವೂ ಸೇವಿಸಿ ಪಕ್ಕದಲ್ಲಿದ್ದವರಿಗೆ ಹಂಚಿ ಖುಷಿಪಟ್ಟಿದ್ದಾರೆ.
ಚಂಢೀಘಡ: ಐಪಿಎಲ್ 2026 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಪಂಜಾಬ್ ಕ್ರಿಕೆಟಿಗ ಶಶಾಂಕ್ ಸಿಂಗ್ ಬಾಲ್ ಪಕ್ಕದಲ್ಲೇ ಬಿದ್ದರೂ ನೋಡುತ್ತಾ ನಿಂತ ಫನ್ನಿ ವಿಡಿಯೋವೊಂದು ವೈರಲ್ ಆಗಿದೆ. ನಿನ್ನೆ ಲಕ್ನೋ ವಿರುದ್ಧ ಪಂಜಾಬ್ ಕಿಂಗ್ಸ್ 54 ರನ್ ಗಳ ಗೆಲುವು ಸಾಧಿಸಿತು. ಮೊದಲು ಬ್ಯಾಟಿಂಗ್ ಮಾಡಿದ್ದ ಪಂಜಾಬ್ ಕಿಂಗ್ಸ್ 254 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಲಕ್ನೋ 200 ರನ್ ಗಳಿಸಲಷ್ಟೇ ಶಕ್ತವಾಯಿತು. ಇದರೊಂದಿಗೆ ಪಂಜಾಬ್ ಅಗ್ರಸ್ಥಾನ ಭದ್ರಪಡಿಸಿತು.
ನವದೆಹಲಿ: ಮಹಿಳಾ ಮೀಸಲು ಮಸೂದೆ ವಿಫಲಗೊಳಿಸಲು ಕೇಂದ್ರ ಸರ್ಕಾರದ ವಿರುದ್ಧ ವಿಪಕ್ಷಗಳು ಮಾಡಿದ್ದ ಮಾಸ್ಟರ್ ಪ್ಲ್ಯಾನ್ ರಿವೀಲ್ ಆಗಿದೆ. ಲೋಕಸಭೆಯಲ್ಲಿ ಮೊನ್ನೆ ಮಹಿಳಾ ಮೀಸಲಾತಿ ಜಾರಿಗೆ ಸಂಬಂಧಿಸಿದ ಕ್ಷೇತ್ರ ಮರುವಿಂಗಡಣೆ ಮಸೂದೆಯನ್ನು ವಿಪಕ್ಷಗಳು ಒಗ್ಗಟ್ಟಾಗಿ ಸೋಲಿಸಿತ್ತು. ಇದು ಲೋಕಸಭೆ ಕ್ಷೇತ್ರಗಳ ಮರು ವಿಂಗಡಣೆಗೆ ಯೋಜನೆ ಹಾಕಿದ್ದ ಕೇಂದ್ರ ಸರ್ಕಾರಕ್ಕೆ ತೀವ್ರ ಹಿನ್ನಡೆಯುಂಟು ಮಾಡಿತ್ತು. ಕೇಂದ್ರ ಸರ್ಕಾರ ಮಸೂದೆ ಮಂಡನೆ ಮಾಡುತ್ತಿದೆ ಎಂದು ತಿಳಿದ ತಕ್ಷಣವೇ ವಿಪಕ್ಷಗಳು ಮಸೂದೆ ಸೋಲಿಸುವುದಾಗಿ ಘೋಷಿಸಿದ್ದವು.
ಟೆಹ್ರಾನ್: ಒಂದೆಡೆ ಶಾಂತಿ ಮಾತುಕತೆ ಪ್ರಯತ್ನಗಳು ನಡೆಯುತ್ತಿದ್ದರೆ ಇತ್ತ ಇರಾನ್ ಹಡಗನ್ನು ಅಮೆರಿಕಾ ವಶಕ್ಕೆ ಪಡೆದುಕೊಂಡಿದ್ದು ಮತ್ತೆ ಉದ್ವಿಗ್ನ ವಾತಾವರಣ ಸೃಷ್ಟಿಸಿದೆ. ಹೊರ್ಮುಜ್ ಜಲಸಂಧಿಯಲ್ಲಿ ಇರಾನ್ ಹಡುಗಿನ ಮೇಲೆ ದಾಳಿ ನಡೆಸಿದ ಅಮೆರಿಕಾ ವಶಕ್ಕೆ ಪಡೆದುಕೊಂಡಿದೆ. ಉಭಯ ದೇಶಗಳ ನಡುವೆ ಯುದ್ಧ ಆರಂಭವಾದ ಬಳಿಕ ಹೊರ್ಮುಜ್ ಜಲಸಂಧಿಯನ್ನು ಇರಾನ್ ಹಡಗನ್ನು ಅಮೆರಿಕಾ ವಶಕ್ಕೆ ಪಡೆದಿರುವುದು ಇದೇ ಮೊದಲ ಬಾರಿಯಾಗಿದೆ. ಒಂದೆಡೆ ಶಾಂತಿ-ಸಂಧಾನ ಮಾತುಕತೆ, ಕದನ ವಿರಾಮ ಮಾತನಾಡುತ್ತಿರುವಾಗಲೇ ಇನ್ನೊಂದೆಡೆ ತನ್ನ ಹಡಗನ್ನು ಅಮೆರಿಕಾ ವಶಕ್ಕೆ ಪಡೆದಿರುವುದು ಇರಾನ್ ಸಿಟ್ಟಿಗೆ ಕಾರಣವಾಗಿದೆ.
ಬೈಕ್ ಸ್ಟಂಟ್ ಮಾಡಲು ಹೋಗಿ ನೋಡ ನೋಡುತ್ತಲೇ ಮೂವರು ಯುವಕರು ಪ್ರಾಣ ಕಳೆದುಕೊಂಡ ಭೀಕರ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಘಟನೆ ನಡೆದಿರುವುದು ಮಧ್ಯಪ್ರದೇಶದಲ್ಲಿ. ಇತ್ತೀಚೆಗೆ ಯುವಕರು ರೀಲ್ಸ್ ಹುಚ್ಚಿಗೆ ಇಲ್ಲವೇ ವೀಲಿಂಗ್ ಮಾಡುವ ಹುಚ್ಚಿಗೆ ತಮ್ಮ ಪ್ರಾಣವನ್ನೇ ಪಣಕ್ಕಿಡುತ್ತಿದ್ದಾರೆ. ಪೊಲೀಸ್ ಇಲಾಖೆ, ಸರ್ಕಾರ ಎಷ್ಟೇ ಎಚ್ಚರಿಕೆ, ದಂಡ ಹಾಕಿದರೂ ಇಂತಹ ಹುಚ್ಚಾಟಗಳು ನಿಲ್ಲುತ್ತಿಲ್ಲ. ಇದೇ ರೀತಿ ಮಧ್ಯಪ್ರದೇಶದ ಮೂವರು ಯುವಕರು ಹೆಲ್ಮೆಟ್ ಹಾಕದೇ ಒಂದೇ ಬೈಕ್ ನಲ್ಲಿ ಹೆದ್ದಾರಿಯಲ್ಲಿ ವೇಗವಾಗಿ ಬೈಕ್ ಸ್ಟಂಟ್ ಮಾಡಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ವಿಪರೀತ ತಾಪಮಾನದ ಏರಿಕೆಯಾಗುತ್ತಿದೆ. ಇದರ ನಡುವೆಯೂ ಅಲ್ಲಲ್ಲಿ ಮಳೆಯ ಸೂಚನೆಯಿದೆ. ಈ ವಾರದ ಆರಂಭದಲ್ಲೇ ಕೆಲವು ಜಿಲ್ಲೆಗಳಲ್ಲಿ ಮಳೆಯ ಸೂಚನೆಯಿದೆ. ಇಲ್ಲಿದೆ ವಾರದ ಹವಾಮಾನ ವರದಿ. ಒಂದೆಡೆ ವಿಪರೀತ ಬಿಸಿಲು, ಸೆಖೆಯಿಂದ ಜನರು ತತ್ತರಿಸುತ್ತಿದ್ದರೆ ಕೆಲವು ಜಿಲ್ಲೆಗಳಲ್ಲಿ ಮಾತ್ರ ಸಣ್ಣ ಮಳೆಯ ಸೂಚನೆಯೂ ಕಂಡುಬರುತ್ತಿದೆ. ತಾಪಮಾನ ಕಳೆದ ವಾರವೂ 40 ಡಿಗ್ರಿ ದಾಟಿತ್ತು. ಈ ವಾರವೂ ಕೆಲವು ಜಿಲ್ಲೆಗಳಲ್ಲಿ ತಾಪಮಾನ ಗರಿಷ್ಠ ಮಟ್ಟ ತಲುಪಲಿದೆ. ಇದರ ನಡುವೆಯೂ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಬೆಳಗಾವಿ ಜಿಲ್ಲೆಗಳಲ್ಲಿ ವಾರದ ಆರಂಭದಲ್ಲಿ ಸಣ್ಣ ಮಳೆಯಾಗುವ ಸೂಚನೆಯಿದೆ.
ಇಂದು ಸೋಮವಾರವಾಗಿದ್ದು ಶಿವನಿಗೆ ವಿಶೇಷವಾದ ದಿನವಾಗಿದೆ. ಆರೋಗ್ಯ, ಆಯುಷ್ಯ, ಸಂತೋಷ, ನೆಮ್ಮದಿಗಾಗಿ ಶಿವನನ್ನು ಕುರಿತ ಸ್ತೋತ್ರವನ್ನು ಓದಿ. ಅದಕ್ಕಾಗಿ ಇಂದು ಶಿವಾಷ್ಟಕಂ ಸ್ತೋತ್ರವನ್ನು ಪಠಿಸಿ. ಕನ್ನಡದಲ್ಲಿ ಇಲ್ಲಿದೆ.ಪ್ರಭುಂ ಪ್ರಾಣನಾಥಂ ವಿಭುಂ ವಿಶ್ವನಾಥಂ ಜಗನ್ನಾಥ ನಾಥಂ ಸದಾನಂದ ಭಾಜಾಮ್ ।ಭವದ್ಭವ್ಯ ಭೂತೇಶ್ವರಂ ಭೂತನಾಥಂ, ಶಿವಂ ಶಂಕರಂ ಶಂಭು ಮೀಶಾನಮೀಡೇ ॥ 1 ॥ ಗಳೇ ರುಂಡಮಾಲಂ ತನೌ ಸರ್ಪಜಾಲಂ ಮಹಾಕಾಲ ಕಾಲಂ ಗಣೇಶಾದಿ ಪಾಲಮ್ ।ಜಟಾಜೂಟ ಗಂಗೋತ್ತರಂಗೈರ್ವಿಶಾಲಂ, ಶಿವಂ ಶಂಕರಂ ಶಂಭು ಮೀಶಾನಮೀಡೇ ॥ 2॥
ಕೋಲ್ಕತ್ತಾ: ಪಶ್ಚಿಮ ಬಂಗಾಲದಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿದ ಪ್ರಧಾನಿ ಮೋದಿ ಲೋಕಲ್ ಅಂಗಡಿಯೊಂದರಲ್ಲಿ ಝುಲ್ಮುರಿ ಖರೀದಿಸಿ ಸುತ್ತಲಿದ್ದವರಿಗೂ ಹಂಚಿ ಖುಷಿಪಟ್ಟಿದ್ದಾರೆ. ಪಶ್ಚಿಮ ಬಂಗಾಲದಲ್ಲಿ ಚುನಾವಣೆ ಕಾವು ಜೋರಾಗಿದೆ. ಇಂದು ಪಶ್ಚಿಮ ಬಂಗಾಳದಲ್ಲಿ ಬಿರುಸಿನ ಪ್ರಚಾರ ನಡೆಸಿದ ಪ್ರಧಾನಿ ಮೋದಿ ಪುರುಲಿಯಾದಲ್ಲಿ ರೋಡ್ ಶೋ ಕೂಡಾ ನಡೆಸಿದ್ದಾರೆ. ಈ ವೇಳೆ ಸಾಕಷ್ಟು ಜನ ಬಿಸಿಲನ್ನೂ ಲೆಕ್ಕಿಸದೇ ನೆರೆದಿದ್ದರು. ಇನ್ನು, ಚುನಾವಣಾ ಪ್ರಚಾರ ನಡುವೆ ಪ್ರಧಾನಿಯವರು ಜರ್ಗಾಮ್ ನಲ್ಲಿ ಸಾಮಾನ್ಯ ಲಘು ಉಪಹಾರ ಚಾಟ್ಸ್ ಗೆ ಭೇಟಿ ನೀಡಿದರು. ಲೋಕಲ್ ಅಂಗಡಿಗೆ ಭೇಟಿ ಕೊಟ್ಟ ಪ್ರಧಾನಿ ಮೋದಿ ಚುರುಮುರಿ ನೀಡುವಂತೆ ಕೇಳಿದರು.
ಬೆಂಗಳೂರು: ಮಹಿಳಾ ಮೀಸಲಾತಿ ವಿಚಾರದಲ್ಲಿ ಭಾರತೀಯ ಜನತಾ ಪಾರ್ಟಿಯ ನಿಲುವು ಅಂದಿನಿಂದ ಇಂದಿನವರೆಗೆ ಒಂದೇ ಆಗಿದೆ. ಸಂಸತ್ತಿನಲ್ಲಿ ಈ ಹಿಂದೆ ಮಂಡನೆಯಾದಾಗೆಲ್ಲ ಬಿಜೆಪಿ ವಿರೋಧ ಪಕ್ಷದಲ್ಲಿದ್ದರೂ ಬೆಂಬಲ ನೀಡಿದೆ. ಆದರೆ ನರೇಂದ್ರ ಮೋದಿ ಅವರಿಗೆ ಇದರ ಯಶಸ್ಸಿನ ಲಾಭ ಸಿಗುತ್ತದೆ ಎಂಬ ಭಯದಲ್ಲಿ ಕಾಂಗ್ರೆಸ್ ವಿರೋಧ ಮಾಡುತ್ತಿದೆ ಎಂದು ಸಂಸದ ತೇಜಸ್ವಿ ಸೂರ್ಯ ಅವರು ವಿಶ್ಲೇಷಿಸಿದ್ದಾರೆ. ಮಹಿಳಾ ಮೀಸಲು ಮಸೂದೆಗೆ ಲೋಕಸಭೆಯಲ್ಲಿ ವಿರೋಧ ಮಾಡಿದ ಕಾಂಗ್ರೆಸ್ ಧೋರಣೆ ಖಂಡಿಸಿ ಜಯನಗರದ ಆರ್.ವಿ ಡೆಂಟಲ್ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಬಲ ನಾರಿ- ಸಮರ್ಥ ಭಾರತ ಸಂವಾದದಲ್ಲಿ ಅವರು ಮಾತನಾಡಿದರು.
ತಮಿಳುನಾಡಿನಲ್ಲಿ ಕಾಂಗ್ರೆಸ್ನ ಪ್ರಚಾರದಲ್ಲಿ ರಾಹುಲ್ ಗಾಂಧಿ ಹೇಳಿರುವ ಭಾಷಣದ ಅರ್ಥವನ್ನೇ ಟ್ರಾನ್ಸ್ಲೇಟರ್ ಉಲ್ಟಾ ಮಾಡಿ ಹೇಳಿ ಇದೀಗ ಟ್ರೋಲ್ಗೆ ಒಳಗಾಗಿದ್ದಾರೆ. ಮುಂದಿನ ವಾರ 23 ರಂದು ತಮಿಳುನಾಡು ವಿಧಾನಸಭಾ ಚುನಾವಣೆ ನಡೆಯಲಿದ್ದು, ಭಾರತದ ಪ್ರತಿಯೊಂದು ಪಕ್ಷಗಳು ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದೆ. ಡಿಎಂಕೆ - ಕಾಂಗ್ರೆಸ್ ಮೈತ್ರಿಕೂಟದ ಬೆಂಬಲವಾಗಿ ನಿನ್ನೆ ರಾಣಿಪೇಟೆಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾಗವಹಿಸಿ ಜನರನ್ನು ಉದ್ದೇಶಿಸಿ, ಬಿಜೆಪಿಯನ್ನು ಟೀಕಿಸಿ ಮಾತನಾಡಿದರು.
ಆರ್ಸಿಬಿ ವಿರುದ್ಧದ ಪಂದ್ಯಾಟದ ವೇಳೆ ಅಕ್ಷರ್ ಪಟೇಲ್ ವೇಳೆ ಗಾಯಗೊಂಡರು. ಈ ವೇಳೆ ಅವರು ಆಟವಾವನ್ನು ಅಂತ್ಯ ಮಾಡಕ್ಕಾಗದೆ ಗ್ರೌಂಡ್ನಿಂದ ಹೊರನಡೆದರು. ಈ ಸಂದರ್ಭದಲ್ಲಿ ಕೃನಾಲ್ ಪಾಂಡ್ಯ ಅವರು ಕ್ರೀಡಾಮನೋಭಾವಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಗ್ರೌಂಡ್ನಿಂದ ಹೊರನಡೆಯಲು ಕಷ್ಟಪಡುತ್ತಿದ್ದ ಅಕ್ಷರ್ ಪಟೇಲ್ಗೆ ಕೃನಾಲ್ ಅವರು ಹೆಗಲು ಕೊಟ್ಟು ನಡೆಯಲು ಸಹಾಯ ಮಾಡಿದರು. ಇದನ್ನು ನೋಡಿದ ಕ್ರೀಡಾಭಿಮಾನಿಗಳು ಭಾರೀ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.
ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್ಸಿಬಿ ವಿರುದ್ಧ ನಿನ್ನೆ ನಡೆದ ಪಂದ್ಯಾಟ ಕೆಎಲ್ ರಾಹುಲ್ಗೆ ತುಂಬಾನೇ ವಿಶೇಷವಾಗಿತ್ತು. ಕೆಎಲ್ ರಾಹುಲ್ ಅವರು ನಿನ್ನೆ 34ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಇನ್ನೂ ಅದೇ ದಿನವೇ ಕೆಎಲ್ ರಾಹುಲ್ ಅವರು ತಾನು ಆಡಿ ಬೆಳೆದ ಸ್ಟೇಡಿಯಂ ಆದ ಎಂ ಚಿನ್ನಸ್ವಾಮಿಯಲ್ಲಿ ಆರ್ಸಿಬಿಯನ್ನು ಎದುರಿಸಿ, ಗೆದ್ದು ಬೀಗಿದರು. ಇನ್ನೂ ಕೆಎಲ್ ರಾಹುಲ್ ಅವರು ಬ್ಯಾಟಿಂಗ್ಗೆ ಇಳಿದಾಗ ಹುಟ್ಟುಹಬ್ಬದ ಹಿನ್ನೆಲೆ ರಾಜ್ಕುಮಾರ್ ಅವರು ಹಾಡಿರುವ ನಗುತಾ ನಗುತಾ ಬಾಳು ನೀನು ನೂರು ವರುಷ ಹಾಡನ್ನು ಹಾಡಿ ಶುಭಕೋರಿದರು.
ಬೆಂಗಳೂರು: ಕೇಂದ್ರದ ಬಿಜೆಪಿ ಸರ್ಕಾರವು ಮಹಿಳಾ ಸಬಲೀಕರಣದ ಮುಖವಾಡ ಧರಿಸಿ ದಕ್ಷಿಣ ಭಾರತದ ರಾಜಕೀಯ ಅಸ್ಮಿತೆಯನ್ನು ಅಳಿಸಲು ‘ಭೀಕರ ಸಂಚು’ ರೂಪಿಸಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.ಬಿಜೆಪಿ ಜಾರಿಗೆ ತರಲು ಹೊರಟಿರುವ ಮಹಿಳಾ ಮೀಸಲಾತಿ ಮಸೂದೆಯು ಕೇವಲ ಒಂದು ‘ಮಾಯಾಜಾಲ’ವಾಗಿದ್ದು, ಇದು ದಕ್ಷಿಣದ ರಾಜ್ಯಗಳ ಹಕ್ಕುಗಳನ್ನು ಕಸಿದುಕೊಳ್ಳಲು ನಡೆಸುತ್ತಿರುವ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ ಎಂದು ಪ್ರಕಟಣೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೃಗಾಲಯಕ್ಕೆ ಬಂದ ಸಂದರ್ಶಕರ ಮೇಲೆ ಕಲ್ಲು ಎಸೆಯಲು ಯತ್ನಿಸಿದ ಮರಿ ಚಿಂಪಾಂಜಿಗೆ ತಾಯಿ ಚಿಂಪಾಂಜಿಯು ಕೋಲಿನಲ್ಲಿ ಹೊಡೆದಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋ ನೋಡಿ ಮಕ್ಕಳು ತಪ್ಪು ಮಾಡಿದಾಗ ತಾಯಿ ಪೆಟ್ಟು ಕೊಟ್ಟು ಬುದ್ಧಿ ಹೇಳಿದ ಹಾಗೆಯೇ ತಾಯಿ ಚಿಂಪಾಂಜಿ ನಡೆಸಿಕೊಂಡಿದೆ ಎಂದು ನೆಟ್ಟಿಗರು ಹೇಳಿದ್ದಾರೆ. ವೈರಲ್ ವಿಡಿಯೋದಲ್ಲಿ ಏನಿದೆ: ಚಿಂಪಾಂಜಿಯ ಗುಂಪೊಂದು ಕಲ್ಲು ಬಂಡೆಯ ಮೇಲೆ ಕೂತಿತ್ತು. ಈ ಚಿಂಪಾಂಜಿಗಳನ್ನು ನೋಡಿ
ಕೋಲ್ಕತ್ತಾ: ಮುಂಬರುವ ಪಶ್ವಿಮ ಬಂಗಾಳದ ಚುನಾವಣೆ ಹೊಸ ಇತಿಹಾಸ ಸೃಷ್ಟಿಸಲಿದೆ. ಟಿಎಂಸಿ ನಾಯಕರು ಬಳಸುತ್ತಿರುವ ಭಾಷೆಗಳನ್ನ ನೋಡಿದ್ರೆ ಫಲಿತಾಂಶದ ಬಗ್ಗೆ ಅವರಿಗೆ ಇರುವ ಭಯವನ್ನು ತೋರಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟಿಎಂಸಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.ಬಂಕುರಾದಲ್ಲಿ ನಡೆದ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ತೃಣಮೂಲ ಕಾಂಗ್ರೆಸ್ ಪಕ್ಷ, ಕಾಂಗ್ರೆಸ್ ಜೊತೆಗೆ ಸೇರಿ ಪಿತೂರಿ ಮಾಡಿದೆ. ಈ ಮೂಲಕ ಬಂಗಾಳದ ಮಹಿಳೆಯರಿಗೆ ದ್ರೋಹ ಬಗೆದಿದೆ ಎಂದು ಕಿಡಿಕಾಡಿದರು. ನಾನು ಎಲ್ಲಾ ಟಿಎಂಸಿ ಗೂಂಡಾಗಳು, ಸಿಂಡಿಕೇಟ್ಗಳು ಮತ್ತು ಭ್ರಷ್ಟರಿಗೆ ಕೊನೇ ಅವಕಾಶ ನೀಡುತ್ತಿದ್ದೇನೆ. ಏಪ್ರಿಲ್ 29 ಕ್ಕೂ ಮೊದಲು ನಿಮ್ಮ ಹತ್ತಿರದ ಪೊಲೀಸ್ ಠಾಣೆಗಳಲ್ಲಿ ಶರಣಾಗಿ, ಮೇ 4 ರ ನಂತರ ಯಾರಿಗೂ ಉಳಿಗಾಲ ಇರೋದಿಲ್ಲ ಎಂದು ಮೋದಿ ಎಚ್ಚರಿಕೆ ನೀಡಿದರು.
ಬೆಂಗಳೂರು: ಧುರಂಧರ್ ದಿ ರಿವೇಂಜ್ ಚಿತ್ರದ ಸಕ್ಸಸ್ನಲ್ಲಿರುವ ಬಾಲಿವುಡ್ ನಟ ರಣವೀರ್ ಸಿಂಗ್ ಹಾಗೂ ದೀಪಿಕಾ ಪಡುಕೋಣೆ ದಂಪತಿ ಭಾನುವಾರ ಮತ್ತೊಂದು ಗುಡ್ ನ್ಯೂಸ್ ನೀಡಿದ್ದಾರೆ.ತಾರಾ ದಂಪತಿ ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಇನ್ಸ್ಟಾಗ್ರಾಮ್ನಲ್ಲಿ ಜಂಟಿಯಾಗಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ಚಿತ್ರದಲ್ಲಿ ಅವರ ಮಗಳು ದುವಾ ಗರ್ಭಧಾರಣೆಯ ಪಾಸಿಟಿವ್ ಪರೀಕ್ಷಾ ಕಿಟ್ ಅನ್ನು ಹಿಡಿದುಕೊಂಡಿದ್ದಾರೆ. ಈ ಚಿತ್ರಕ್ಕೆ ರಣವೀರ್ ಹಾಗೂ ದೀಪಿಕಾ ಪಡುಕೋಣೆ ಎರಡು ಕಣ್ಣಿನ ಎಮೋಜಿಯ ಶೀರ್ಷಿಕೆ ನೀಡಿದ್ದಾರೆ.ದೀಪಿಕಾ ಮತ್ತು ರಣವೀರ್ ಸಿಂಗ್ 2018ರ ನವೆಂಬರ್ 14ರಂದು ಇಟಲಿಯ ಲೇಕ್ ಕೊಮೊದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ವಿವಾಹವಾಗಿದ್ದರು.