Shorts

ನವದೆಹಲಿ: ಕೊನೆಯ ಎಸೆತದವರೆಗೆ ಕುತೂಹಲ ಮೂಡಿಸಿದ್ದ ಐಪಿಎಲ್‌ ಪಂದ್ಯದಲ್ಲಿ ಗುಜರಾತ್‌ ಟೈಟನ್ಸ್ ತಂಡವು 1 ರನ್‌ಗಳ ರೋಚಕ ಜಯ ದಾಖಲಿಸಿತು. ಕನ್ನಡಿಗ ಕೆ.ಎಲ್‌ ರಾಹುಲ್‌ ಹಾಗೂ ಡೇವಿಡ್‌ ಮಿಲ್ಲರ್‌ ಬ್ಯಾಟಿಂಗ್‌ ಸಾಹಸದ ಹೊರತಾಗಿಯೂ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ಸೋಲು ಅನುಭವಿಸಿತು.ರೋಚಕ ಗೆಲುವು ಸಾಧಿಸಿದ ಗುಜರಾತ್‌ ಟೈಟಾನ್ಸ್‌ ಹಾಲಿ ಆವೃತ್ತಿಯ ಐಪಿಎಲ್‌ ಟೂರ್ನಿಯಲ್ಲಿ ಗೆಲುವಿನ ಖಾತೆ ತೆರೆಯಿತು. ಹ್ಯಾಟ್ರಿಕ್‌ ಗೆಲುವಿನ ವಿಶ್ವಾಸದಲ್ಲಿದ್ದ ಡೆಲ್ಲಿ ಕ್ಯಾಪಿಟಲ್ಸ್‌ ಮೊದಲ ಸೋಲಿಗೆ ತುತ್ತಾಯಿತು.ಟಾಸ್‌ ಗೆದ್ದ ಡೆಲ್ಲಿ ಬೌಲಿಂಗ್‌ ಆಯ್ದುಕೊಂಡಿತು. ಮೊದಲು ಬ್ಯಾಟಿಂಗ್‌ ನಡೆಸಿದ ಗುಜರಾತ್‌ ಟೈಟಾನ್ಸ್‌, ಬಿರುಸಿನ ಬ್ಯಾಟಿಂಗ್‌ ನಡೆಸಿ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್‌ಗೆ 210 ರನ್‌ ಬಾರಿಸಿತು. ಡೆಲ್ಲಿ ತಂಡ ಕೊನೆಯ ಎಸೆತದ ತನಕ ಹೋರಾಡಿ 8 ವಿಕೆಟ್‌ಗೆ 209 ರನ್‌ ಗಳಿಸಿ ವಿರೋಚಿತ ಸೋಲು ಕಂಡಿತು.

ಬೆಂಗಳೂರು: ರಣವೀರ್ ಸಿಂಗ್ ಅವರ ಧುರಂಧರ ಸಿನಿಮಾ ಬಗ್ಗೆ ಮೌನವಾಗಿದ್ದಕ್ಕೆ ಟ್ರೋಲ್ ಮಾಡಿದವರಿಗೆ ಕೊನೆಗೂ ದೀಪಿಕಾ ಪಡುಕೋಣೆ ಪ್ರತಿಕ್ರಿಯೆ ನೀಡಿದ್ದಾರೆ. ರಣವೀರ್‌ ಸಿಂಗ್‌ ನಟನೆಯ ʻಧುರಂಧರ್‌ 2ʼ ಸಿನಿಮಾವು ಬಾಕ್ಸ್‌ ಆಫೀಸ್‌ನಲ್ಲಿ ದೊಡ್ಡ ದಾಖಲೆಗಳನ್ನು ಮಾಡಿದೆ. ಅನೇಕ ಸೆಲೆಬ್ರಿಟಿಗಳು, ರಾಜಕೀಯ ನಾಯಕರು ಈ ಸಿನಿಮಾವನ್ನು ಹೊಗಳಿದ್ದಾರೆ. ನೆಟ್ಟಿಗರೊಬ್ಬರು ಇನ್‌ಸ್ಟಾಗ್ರಾಮ್‌ನಲ್ಲಿ ಒಂದು ಪೋಸ್ಟ್‌ ಹಾಕಿದ್ದರು. ದೀಪಿಕಾ ಪಡುಕೋಣೆ 500 ಕೋಟಿ ಬಜೆಟ್‌ನ ಚಿತ್ರಕ್ಕೆ ಸೈಲೆಂಟ್ ಟ್ರೀಟ್ಮೆಂಟ್ ನೀಡಿದ್ದಾರೆ. ಧುರಂಧರ್: ದಿ ರಿವೆಂಜ್ ಜಾಗತಿಕ ದಾಖಲೆಗಳನ್ನು ಮುರಿಯುತ್ತಿದ್ದರೆ, ಚಿತ್ರದ ಪ್ರೀಮಿಯರ್ ಹೋಗುವುದು ಬಿಟ್ಟು, ದೀಪಿಕಾ ತಮ್ಮ ಅತ್ತೆ-ಮಾವಂದಿರ ಜೊತೆ ಸಿತಾರ್ ಕಚೇರಿಗೆ ಹೋಗಿದ್ದರು. ಯಾವುದೇ ಪೋಸ್ಟ್ ಇಲ್ಲ, ಹೊಗಳಿಕೆಯೂ ಇಲ್ಲ, ಕೇವಲ ಮೌನ..

ಬೆಂಗಳೂರು: ರಾಜ್ಯದಾದ್ಯಂತ ಸಂಚಲನ ಮೂಡಿಸಿದ್ದ ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡಕೊಲೆ ಪ್ರಕರಣದ ತೀರ್ಪನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಾಳೆ ಪ್ರಕಟಿಸಲಿದೆ.ರಾಜಕೀಯ ವೈಷಮ್ಯದಿಂದ ಧಾರವಾಡದಲ್ಲಿ 2016ರ ಜೂ.16ರಂದು ಯೋಗೇಶ್ ಗೌಡ ಅವರನ್ನು ಹತ್ಯೆ ಮಾಡಲಾಗಿತ್ತು. ಶಾಸಕ ವಿನಯ್ ಕುಲಕರ್ಣಿ ಮೇಲೆ ಅಪರಾಧಿಕ ಒಳಸಂಚು ಮಾಡಿದ ಆರೋಪವಿದೆ. 2019ರಲ್ಲಿ ರಾಜ್ಯ ಸರ್ಕಾರವು ಈ ಪ್ರಕರಣವನ್ನು ಸಿಬಿಐಗೆ ವರ್ಗಾವಣೆ ಮಾಡಿತ್ತು. ಈ ಬಗ್ಗೆ ತನಿಖೆ ಕೈಗೊಂಡ ಸಿಬಿಐ 2020ರಲ್ಲಿ ವಿನಯ್ ಕುಲಕರ್ಣಿ ಅವರನ್ನು ಬಂಧಿಸಿತ್ತು.2017ರಲ್ಲಿ ಶಾಸಕ ವಿನಯ್ ಕುಲಕರ್ಣಿ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದಿದ್ದರು. ನಂತರ ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಕಳೆದ ವರ್ಷ ಜೂನ್‌ನಲ್ಲಿ ಸುಪ್ರೀಂ ಕೋರ್ಟ್ ಅವರ ಜಾಮೀನು ರದ್ದು ಮಾಡಿತ್ತು.

ನವದೆಹಲಿ: ಅಮೆರಿಕ ಮತ್ತು ಇರಾನ್ ನಡುವೆ ಎರಡು ವಾರಗಳ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ, ಇರಾನ್‌ನಲ್ಲಿ ನೆಲೆಸಿರುವ ಭಾರತೀಯ ಪ್ರಜೆಗಳಿಗೆ ಭಾರತೀಯ ರಾಯಭಾರ ಕಚೇರಿಯು ಬುಧವಾರ ಮಹತ್ವದ ಸೂಚನೆ ನೀಡಲಾಗಿದೆ.ಇರಾನ್‌ನಲ್ಲಿರುವ ಎಲ್ಲ ಭಾರತೀಯರು ಕೂಡಲೇ ದೇಶವನ್ನು ತೊರೆಯುವಂತೆ ಈ ಮೂಲಕ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ತುರ್ತು ಸಂದರ್ಭಗಳಲ್ಲಿ ಸಮನ್ವಯ ಸಾಧಿಸಲು ರಾಯಭಾರ ಕಚೇರಿಯು ಕೆಲವು ಸಹಾಯವಾಣಿ ಸಂಖ್ಯೆಗಳನ್ನು ಸಹ ಪ್ರಕಟಿಸಿದೆ.ಏಪ್ರಿಲ್ 7ರಂದು ನೀಡಿದ್ದ ಸೂಚನೆಯ ಮುಂದುವರಿದ ಭಾಗವಾಗಿ, ಇತ್ತೀಚಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಇರಾನ್‌ನಲ್ಲಿರುವ ಭಾರತೀಯರು ರಾಯಭಾರ ಕಚೇರಿಯ ಮಾರ್ಗದರ್ಶನದೊಂದಿಗೆ ಶೀಘ್ರವಾಗಿ ದೇಶದಿಂದ ನಿರ್ಗಮಿಸಲು ಸೂಚಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಬೆಂಗಳೂರು: 2028ಕ್ಕೆ ಕಾಂಗ್ರೆಸ್‌ಗೆ ಸೋಲು ಕಟ್ಟಿಟ್ಟ ಬುತ್ತಿ. ಕಾಂಗ್ರೆಸ್ ಸೋಲು ತಪ್ಪಿಸೋಕೆ ಯಾರಿಂದಲೂ ಸಾಧ್ಯವಿಲ್ಲ ಎಂದು ವಿಧಾನ ಪರಿಷತ್‌ ಸದಸ್ಯ, ಬಿಜೆಪಿ ನಾಯಕ ಸಿಟಿ ರವಿ ಭವಿಷ್ಯ ನುಡಿದಿದ್ದಾರೆ.ಕೆಟ್ಟ ಆಡಳಿತದಿಂದಾಗಿ ಕಾಂಗ್ರೆಸ್ ಸೋಲಿಸಬೇಕು ಅಂತ ಜನ ತೀರ್ಮಾನ ಮಾಡಿದ್ದಾರೆ. ಉಪಚುನಾವಣೆಯಲ್ಲೇ ಪಲ್ಟಿ ಹೊಡೆಯುತ್ತಿದ್ದಾರೆ. ಉಪಚುನಾವಣೆಯಲ್ಲಿ ಕಾಂಗ್ರೆಸ್‌ನವರು ಶಿರ್ಷಾಸನ ಮಾಡ್ತಾ ಇದ್ದಾರೆ. ಉಪಚುನಾವಣೆಯಲ್ಲಿ ಹೀಗೆ ಮಾಡ್ತಾ ಇರೋರು ಜನರಲ್ ಎಲೆಕ್ಷನ್‌ನಲ್ಲಿ ಗೆಲ್ತಾರಾ? ಬೈ ಎಲೆಕ್ಷನ್‌ನಲ್ಲೂ ಸೋಲ್ತಾರೆ, ಜನರಲ್ ಎಲೆಕ್ಷನ್‌ನಲ್ಲಿಯೂ ಸೋಲ್ತಾರೆ ಎಂದು ಹೇಳಿದ್ದಾರೆ.2028ರವರೆಗೂ ಜನ ನಿಮಗೆ ಬಹುಮತ ಕೊಟ್ಟಿದ್ದಾರೆ. ಜನ ಪ್ರಜಾಪ್ರಭುತ್ವದಲ್ಲಿ ಅಧಿಕಾರ ಕೊಟ್ಟಿದ್ದಾರೆ. 2028ರ ನಂತರ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ. ಸೋಲುತ್ತೆ. ಇನ್ನೂ ಯಾವ ಪಾರ್ಟಿಯಲ್ಲಿ ಸಿದ್ದರಾಮಯ್ಯ ಸಿಎಂ ಆಗ್ತಾರೆ ಎಂದು ಪ್ರಶ್ನಿಸಿದ್ದಾರೆ.

ಇಂದು ಬುಧವಾರವಾಗಿದ್ದು ಗಣೇಶನಿಗೆ ವಿಶೇಷವಾದ ದಿನವಾಗಿದೆ. ಸಕಲ ವಿಘ್ನ ನಿವಾರಣೆಗೆ, ಗಣಪತಿ ದೇವರ ಅನುಗ್ರಹಕ್ಕಾಗಿ ಇಂದು ಗಣೇಶನ ಮೂಲಮಂತ್ರವನ್ನು ಓದಿ. ಕನ್ನಡದಲ್ಲಿ ಇಲ್ಲಿದೆ.॥ ಮೂಲಮಂತ್ರಮ್ ॥॥ ಓಂ ಹ್ರೀಂ ಶ್ರೀಂ ಕ್ಲೀಂ ಗ್ಲೌಂ ಗಂ ಗಣಪತಯೇ ವರವರದಸರ್ವಜನಂ ಮೇ ವಶಮಾನಯ ಸ್ವಾಹಾ ॥ ॥ ಅಥ ಸ್ತೋತ್ರಂ॥ಓಂ ಇತ್ಯೇತದಜಸ್ಯ ಕಂಠವಿವರಂ ಭಿತ್ವಾ ಬಹಿರ್ನಿರ್ಗತಂಹ್ಯೋಮಿತ್ಯೇವ ಸಮಸ್ತಕರ್ಮ ಋಷಿಭಿಃ ಪ್ರಾರಭ್ಯತೇ ಮಾನುಷೈಃ ।ಓಮಿತ್ಯೇವ ಸದಾ ಜಪಂತಿ ಯತಯಃ ಸ್ವಾತಮೈಕನಿಷ್ಠಾಃ ಪರಂಹ್ಯೋಂಕಾರಾಕೃತಿವಕ್ತ್ರಮಿಂದುನಿಟಿಲಂ ವಿಘ್ನೇಶ್ವರಂ ಭವಾಯೇ ॥ 1॥ ಶ್ರೀಂಬೀಜಂ ಶ್ರಮದುಃಖಜನ್ಮಮರಣವ್ಯಾಧ್ಯಾಧಿಭೀನಾಶಕಂಮೃತ್ಯುಕ್ರೋಧನಶಾಂತಿಬಿಂದುವಿಲಸದ್ವರ್ಣಾಕೃತಿಶ್ರೀಪ್ರದಮ್ ।ಸ್ವಾಂತಃಸ್ವಾತ್ಮಶರಸ್ಯ ಲಕ್ಷ್ಯಮಜರಸ್ವಾತ್ಮಾವಬೋಧಪ್ರದಂಶ್ರೀಶ್ರೀನಾಯಕಸೇವಿತೇ ಭವದನಪ್ರೇಮಾಸ್ಪದಂ ಭಾವಯೇ ॥ 2॥

ಬೆಂಗಳೂರು: ಅಸ್ಸಾಂ ಚುನಾವಣಾ ಪ್ರಚಾರದಲ್ಲಿ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಕುರಿತು ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಚೋದನಾಕಾರಿ ಭಾಷಣ ಮಾಡಿದ್ದು, ಅವರನ್ನು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿ ಪೊಲೀಸ್‌ ಮಹಾನಿರ್ದೇಶಕ ಎಂ.ಎ.ಸಲೀಂ ಅವರಿಗೆ ಇಂದು ಬಿಜೆಪಿ ನಿಯೋಗದಿಂದ ಮನವಿ ಸಲ್ಲಿಸಲಾಗಿದೆ.ನಿಯೋಗದಲ್ಲಿ ಶಾಸಕರಾದ ಎಸ್.‌ ಮುನಿರಾಜು, ಸಿ. ಕೆ. ರಾಮಮೂರ್ತಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷರಾದ ಎಸ್.‌ ಹರೀಶ್‌, ರಾಜ್ಯ ವಕ್ತಾರರಾದ ಪ್ರಕಾಶ್‌ ಎಸ್.‌ ಮತ್ತು ಪ್ರಮುಖರು ಇದ್ದರು.ಈ ವೇಳೆ ಮಾತನಾಡಿದ ಶಾಸಕ ಎಸ್.ಮುನಿರಾಜು ಅವರು, ಬಿಜೆಪಿ ಮತ್ತು ಆರೆಸ್ಸೆಸ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ವಿರುದ್ಧ ಮೊಕದ್ದಮೆ ದಾಖಲಿಸಿ ಅವರನ್ನು ಬಂಧಿಸಲು ಒತ್ತಾಯಿಸಲಾಗಿದೆ.

ಗುವಾಹಟಿ: ಇಂಡಿಯನ್ ಪ್ರೀಮಿಯರ್ ಲೀಗ್​ನ 13ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ‌ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಗುವಾಹಟಿಯ ಬರ್ಸಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಮಳೆಯಾಗುತ್ತಿರುವುದರಿಂದ ಟಾಸ್‌ ವಿಳಂಬವಾಗಿದೆ. ಮಳೆ ಸ್ಥಗಿತವಾಗದಿದ್ದಲ್ಲಿ ಪಂದ್ಯ ರದ್ದಾಗುವ ಸಾಧ್ಯತೆ ಇದೆ.ಸೋಮವಾರ ಪಂಜಾಬ್‌ ಕಿಂಗ್ಸ್‌ ಮತ್ತು ಕೋಲ್ಕತ್ತ ನೈಟ್‌ ರೈಡರ್ಸ್‌ ನಡುವಿನ ಪಂದ್ಯವೂ ಮಳೆಗೆ ಆಹುತಿಯಾಗಿತ್ತು. ಈಡನ್‌ ಗಾರ್ಡನ್‌ ನಲ್ಲಿ ನಡೆಯಬೇಕಿದ್ದ ಪಂದ್ಯ ರದ್ದಾಗಿ ಉಭಯ ತಂಡಗಳಿಗೆ ತಲಾ ಒಂದು ಅಂಕ ಹಂಚಲಾಗಿತ್ತು. ರಾಜಸ್ಥಾನ್ ರಾಯಲ್ಸ್ ತಂಡವು ಕಳೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ರೋಚಕ ಜಯ ಸಾಧಿಸಿದ್ದು, ಈ ಗೆಲುವಿನ ಮೂಲಕ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ರಾಮಧಾನ್ಯ, ಅಬ್ಬರ, ಮಿ. ಬ್ಯಾಚುಲರ್‌, ಫ್ಲರ್ಟ್‌ ಇನ್ನಿತರ ಸಿನಿಮಾಗಳಲ್ಲಿ ನಟಿಸಿರುವ ನಿಮಿಕಾ ರತ್ನಾಕರ್‌ ಅವರು ಸದ್ದಿಲ್ಲದೆ ಹಸೆಮಣೆಯೇರಿದ್ದಾರೆ.2018ರಲ್ಲಿ ನಟಿಯಾಗಿ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ನಿಮಿಕಾ ರತ್ನಾಕರ್.‌ ರಾಮಧಾನ್ಯ ಚಿತ್ರದಲ್ಲಿ ಬಣ್ಣ ಹಚ್ಚಿದ್ದರು. ಆನಂತರ ಹೆಚ್ಚು ಜನಪ್ರಿಯತೆ ಗಳಿಸಿದ್ದು ಕ್ರಾಂತಿ ಚಿತ್ರದ ʻಶೇಕ್‌ ಇಟ್‌ ಪುಷ್ಪವತಿʼ ಹಾಡಿನಿಂದ. ಸದ್ಯ ನಿಮಿಕಾ ರತ್ನಾಕರ್‌ ಬಗ್ಗೆ ಮಾತನಾಡಲು ಕಾರಣ, ಅವರೀಗ ಸಪ್ತಪದಿ ತುಳಿದಿದ್ದಾರೆ. ನಿಮಿಕಾ ರತ್ನಾಕರ್‌ ಅವರು ನಾಯಕಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟರೂ, ಅವರಿಗೆ ಹೆಚ್ಚು ಜನಪ್ರಿಯತೆ ತಂದುಕೊಟ್ಟಿದ್ದು ದರ್ಶನ್‌ ತೂಗುದೀಪ ಅವರ ಕ್ರಾಂತಿ ಸಿನಿಮಾದ ಶೇಕ್‌ ಇಟ್‌ ಪುಷ್ಪವತಿ ಹಾಡು. ಈ ಒಂದು ಹಾಡಿನಲ್ಲಿ ಹೆಜ್ಜೆ ಹಾಕಿದ್ದರಿಂದ ಅವರನ್ನು ಸ್ಯಾಂಡಲ್‌ವುಡ್‌ ಪುಷ್ಪವತಿ ಎಂದೇ ಅಭಿಮಾನಿಗಳು ಕರೆಯುತ್ತಾರೆ.