Shorts

ಪಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ರಾಜ್ಯಪಾಲ ಸೈಯದ್ ಅತಾ ಹಸ್ನೈನ್ ಅವರನ್ನು ಇಂದು ಭೇಟಿ ಮಾಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ನಿತೀಶ್‌ ಕುಮಾರ್ ಅವರು ಈಚೆಗೆ ರಾಜ್ಯಸಭೆ ಸದಸ್ಯರಾಗಿದ್ದರು.ಮಧ್ಯಾಹ್ನ 3.15ನಿಮಿಷದ ಸುಮಾರಿಗೆ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ನಿರ್ಧಾರ ತಿಳಿಸಿ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ. ಅದಕ್ಕೂ ಮುನ್ನ ಇಂದು ಬೆಳಗ್ಗೆ ತಮ್ಮ ಕೊನೆಯ ಸಚಿವ ಸಂಪುಟ ಸಭೆ ನಡೆಸಿರುವ ನಿತೀಶ್ ಕುಮಾರ್, ತಮ್ಮ ಸ್ಥಾನದ ರಾಜೀನಾಮೆ ಮತ್ತು ಸಂಪುಟ ವಿಸರ್ಜನೆಯ ಬಗ್ಗೆ ಸಹೋದ್ಯೋಗಿಗಳಿಗೆ ತಿಳಿಸಿದ್ದಾರೆ.ಬಿಹಾರದ ಸುದೀರ್ಘ ಕಾಲದ ಮುಖ್ಯಮಂತ್ರಿಯಾಗಿರುವ ನಿತೀಶ್ ಕುಮಾರ್ ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸುವ ಮುನ್ನ ಅನುಸರಿಸಬೇಕಾದ ಸಾಂವಿಧಾನಿಕ ವಿಧಾನಗಳ ಭಾಗವಾಗಿ ಸಚಿವ ಸಂಪುಟ ವಿಸರ್ಜಿಸುವ ನಿರ್ಧಾರವನ್ನು ಸಹೋದ್ಯೋಗಿಗಳಿಗೆ ತಿಳಿಸಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿರುತ್ತಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ಸದಾಶಿವನಗರದ ತಮ್ಮ ನಿವಾಸ ಹಾಗೂ ಕೆಪಿಸಿಸಿ ಕಚೇರಿ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು.ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ನಸೀರ್ ಅಹ್ಮದ್ ಬಿಡುಗಡೆ ಮಾಡಿ ಮುಖ್ಯಮಂತ್ರಿಗಳು ಆದೇಶ ಹೊರಡಿಸಿರುವ ಬಗ್ಗೆ ಕೇಳಿದಾಗ, “ನಜೀರ್ ಅವರಿಗೆ ದಾವಣಗೆರೆ ದಕ್ಷಿಣ ವಿಧಾನಸಭೆ ಕ್ಷೇತ್ರಕ್ಕೆ ಹೋಗಿ ಬಂಡಾಯ ಅಭ್ಯರ್ಥಿ ಹಿಂದೆ ಸರಿಯುವಂತೆ ಮಾಡಲು ಪಕ್ಷ ಸೂಚಿಸಿತ್ತು. ಅವರು ಈ ಜವಾಬ್ದಾರಿ ನಿಭಾಯಿಸುವಲ್ಲಿ ವಿಫಲರಾಗಿದ್ದಾರೆ.

ಬೆಂಗಳೂರು: ಭ್ರಷ್ಟಾಚಾರ ನಿಯಂತ್ರಣ ಮತ್ತು ಪಾರದರ್ಶಕತೆ ತರಲು ಉದ್ಯೋಗ ಖಾತ್ರಿ ಯೋಜನೆಗೆ ಒಂದಿಷ್ಟು ಪರಿಷ್ಕರಣೆ ಮಾಡುವ ಕೆಲಸವನ್ನು ನರೇಂದ್ರ ಮೋದಿಯವರ ಸರಕಾರ ಮಾಡಿದೆ. ಇದರ ಕುರಿತು ಜನಸಾಮಾನ್ಯರಲ್ಲಿ ತಪ್ಪು ಗ್ರಹಿಕೆ ಬರುವಂತೆ ರಾಜ್ಯ ಸರಕಾರದ ಗ್ರಾಮೀಣಾಭಿವೃದ್ಧಿ ಇಲಾಖೆ ಮಾಡುತ್ತಿರುವುದು ದುರದೃಷ್ಟಕರ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದ್ದಾರೆ.ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ರಾಜ್ಯ ಸರಕಾರವು ಬಜೆಟ್‍ನಡಿ ಕೇಂದ್ರಕ್ಕೆ ಪೂರಕವಾದ ನಿಮ್ಮ ಪಾಲಿನ ಅನುದಾನ ಕಾದಿರಿಸಿ ಯೋಜನೆಯನ್ನು ಯಶಸ್ವಿ ಮಾಡಿದರೆ ಜನಸಾಮಾನ್ಯರಿಗೆ ಅನುಕೂಲ ಆಗಲಿದೆ. ಕಾರ್ಮಿಕರಿಗೆ ಹೆಚ್ಚು ವೇತನ ಬೇಗನೆ ಸಿಗಲಿದೆ. ಅಪಪ್ರಚಾರ ಕೈಬಿಟ್ಟು ಕೇಂದ್ರ ಸರಕಾರದ ಜೊತೆ ಸಹಭಾಗಿತ್ವದಿಂದ ಕೆಲಸ ಮಾಡಬೇಕೆಂದು ಆಗ್ರಹಿಸಿದರು.

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಧ್ರುವ ಸರ್ಜಾ ಆಟೋ ಚಾಲಕರ ಸಹಾಯಕ್ಕೆ ಬಂದಿದ್ದಾರೆ. ಆಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅವರು ಆಟೋ ಚಾಲಕರು ಎದುರಿಸುತ್ತಿರುವ ಎಲ್‌ಪಿಜಿ ಗ್ಯಾಸ್‌ ಸಮಸ್ಯೆಯ ಬಗ್ಗೆ ಧ್ವನಿ ಎತ್ತಿದ್ದಾರೆ. ಸದ್ಯ ಆಟೋಗಳಿಗೆ ಎಲ್‌ಪಿಜಿ ಗ್ಯಾಸ್‌ ಸಿಗದೇ ಆಟೋ ನಂಬಿ ಜೀವನ ನಡೆಸುತ್ತಿರುವವರು ಕಷ್ಟಪಡುತ್ತಿದ್ದಾರೆ. ಇವರ ಕಷ್ಟಕ್ಕೆ ಮರುಗಿರುವ ಧ್ರುವ ಆಟೋ ಚಾಲಕರ ಕುಟುಂಬಗಳಿಗೆ ಸಹಾಯವಾಗುವಂತೆ 25 ಲಕ್ಷ ರೂಪಾಯಿಯನ್ನು ನೀಡಿದ್ದಾರೆ. ಜೊತೆಗೆ ಈ ಸಮಸ್ಯೆಯನ್ನು ಬೇಗ ಬಗೆಹರಿಸುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರವನ್ನು ಮನವಿ ಮಾಡಿದ್ದಾರೆ.ಆಟೋ ಚಾಲಕರು ನಮ್ಮ ದೇಶದ ಬೆನ್ನೆಲುಬು. ಸಾಕಷ್ಟು ಒಳ್ಳೆಯ ಕೆಲಸಗಳನ್ನು ಮಾಡಿಕೊಂಡು ಬಂದಿದ್ದಾರೆ. ಆದರೆ, ಅವರೇ ಈಗ ಕಷ್ಟದಲ್ಲಿದ್ದಾರೆ. ಎಲ್ಲಿಯೂ ಎಲ್‌ಪಿಜಿ ಗ್ಯಾಸ್‌ ಸಿಗುತ್ತಿಲ್ಲ.