Shorts

ರಾಮನಗರ: ಇನ್ನೇನು ವಾರದೊಳಗೆ ಬಿಗ್‌ಬಾಸ್ ಸೀಸನ್ 12 ಮುಕ್ತಾಯವಾಗಲಿದ್ದು, ಇದೀಗ ವಾರದ ಹಿಂದೆ ಕಿಚ್ಚ ಸುದೀಪ್ ಅವರು ವೀಕೆಂಡ್ ಎಪಿಸೋಡ್‌ನಲ್ಲಿ ಆಡಿದ ಮಾತು ದೂರು ನೀಡುವ ಮಟ್ಟಿಗೆ ಹೋಗಿದೆ. ಹೌದು ರಣಹದ್ದು ವಿಚಾರವಾಗಿ ತಪ್ಪಾದ ಹೇಳಿಕೆ ನೀಡಿರುವ ಆರೋಪದಡಿ ಬಿಗ್‌ಬಾಸ್ ಹಾಗೂ ಕಿಚ್ಚ ಸುದೀಪ್ ವಿರುದ್ಧ ಪರಿಸರ ಪ್ರಿಯರು ದೂರನ್ನು ನೀಡಿದ್ದಾರೆ. ರಾಮನಗರದ ಅರಣ್ಯಾಧಿಕಾರಿಗಳಿಗೆ ಕರ್ನಾಟಕ ರಣಹದ್ದು ಸಂರಕ್ಷಣಾ ಟ್ರಸ್ಟ್ ವತಿಯಿಂದ ದೂರು ನೀಡಲಾಗಿದ್ದು, ವಾರದ ಕಥೆ ಕಿಚ್ಚನ ಜೊತೆ ಕಾರ್ಯಕ್ರಮದಲ್ಲಿ ರಣಹದ್ದು ಬಗ್ಗೆ ಕಿಚ್ಚ ಸುದೀಪ್ ತಪ್ಪಾದ ಮಾಹಿತಿ ಹರಡಿದ್ದಾರೆ ಎಂದು ಆರೋಪ ಮಾಡಿದ್ದಾರೆ. ವೀಕೆಂಡ್ ಎಪಿಸೋಡ್‌ನಲ್ಲಿ ಸ್ಪರ್ಧಿಯೊಬ್ಬರ ಕುತ್ತಿಗೆಗೆ ರಣಹದ್ದು ಫೋಟೋವೊಂದನ್ನ ಹಾಕಿಸಿ ʻಹೊಂಚುಹಾಕಿ ಸಂಚು ಮಾಡಿ

ಬೆಂಗಳೂರು: ಕೊನೆಗೂ ಗ್ರೇಟರ್‌ ಬೆಂಗಳೂರು ಪ್ರಾಧಿಕಾರಕ್ಕೆ ಚುನಾವಣೆ ಮುಹೂರ್ತ ಫಿಕ್ಸ್‌ ಆಗಿದೆ. ಇಂತಿಷ್ಟು ದಿನದೊಳಗೆ ಚುನಾವಣೆ ನಡೆಸುವಂತೆ ಸುಪ್ರೀಂಕೋರ್ಟ್ ಗಡುವು ನೀಡಿದೆ. ಜೂನ್ 30 ರೊಳಗೆ ಜಿಬಿಎ ವ್ಯಾಪ್ತಿಯಲ್ಲಿರುವ 5 ಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. ಈ ಸಂಬಂಧ ಇಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ನಡೆಯಿತು. ಸರ್ಕಾರದ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಅಡ್ವೊಕೇಟ್‌ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದರು.ಅಂತಿಮವಾಗಿ ಚುನಾವಣಾ ಪ್ರಕ್ರಿಯೆ ಮುಗಿಸಲು ಎಷ್ಟು ಸಮಯ ಬೇಕು ಎಂದು ಕೋರ್ಟ್‌ ಪ್ರಶ್ನಿಸಿತು. ಇದಕ್ಕೆ ಜೂನ್‌ವರೆಗೂ ಸಮಯ ಬೇಕಾಗಬಹುದು ಎಂದು ಆಯೋಗ ಉತ್ತರಿಸಿತು. ಅಂತಿಮವಾಗಿ ಸುಪ್ರೀಂಕೋರ್ಟ್ ಜೂನ್ 30 ರೊಳಗೆ ಜಿಬಿಎ ಚುನಾವಣೆ ನಡೆಸಲು ನಿರ್ದೇಶನ ನೀಡಿತು.

ಕೋಲ್ಕತ್ತಾ: ನಟ-ಗಾಯಕ ಮತ್ತು 2007 ರಲ್ಲಿ ಇಂಡಿಯನ್ ಐಡಲ್ ಸೀಸನ್ 3 ವಿಜೇತ ಪ್ರಶಾಂತ್ ತಮಂಗ್ ಭಾನುವಾರ ತಮ್ಮ 43 ನೇ ವಯಸ್ಸಿನಲ್ಲಿ ನಿಧನರಾದರು. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ, "'ಇಂಡಿಯನ್ ಐಡಲ್' ಖ್ಯಾತಿಯ ಜನಪ್ರಿಯ ಗಾಯಕ ಮತ್ತು ರಾಷ್ಟ್ರೀಯ ಖ್ಯಾತಿಯ ಕಲಾವಿದ ಪ್ರಶಾಂತ್ ತಮಂಗ್ ಅವರ ಇಂದು ಹಠಾತ್ ಮತ್ತು ಅಕಾಲಿಕ ನಿಧನದಿಂದ ದುಃಖಿತನಾಗಿದ್ದೇನೆ. ನಮ್ಮ ಡಾರ್ಜಿಲಿಂಗ್ ಬೆಟ್ಟಗಳಲ್ಲಿ ಅವರ ಬೇರುಗಳು ಮತ್ತು ಒಂದು ಕಾಲದಲ್ಲಿ ಕೋಲ್ಕತ್ತಾ ಪೊಲೀಸರೊಂದಿಗಿನ ಸಂಬಂಧವು ಅವರನ್ನು ಬಂಗಾಳದಲ್ಲಿ ನಮಗೆ ವಿಶೇಷವಾಗಿ ಪ್ರಿಯರನ್ನಾಗಿ ಮಾಡಿತು. ಅವರ ಕುಟುಂಬ, ಸ್ನೇಹಿತರು ಮತ್ತು ಅಸಂಖ್ಯಾತ ಅನುಯಾಯಿಗಳಿಗೆ ನನ್ನ ಸಂತಾಪಗಳನ್ನು ವ್ಯಕ್ತಪಡಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ರಿಷಭ್ ಪಂತ್ ಬದಲಿಗೆ ಧ್ರುವ್ ಜುರೆಲ್ ಅವರನ್ನು ಆಯ್ಕೆ ಮಾಡಲಾಗಿದೆ. ವಡೋದರಾದಲ್ಲಿ ನಡೆದ ನೆಟ್ ಸೆಷನ್‌ನಲ್ಲಿ ಎಸೆತವೊಂದು ಪಕ್ಕೆಲುಬಿನ ಮೇಲೆ ಬಡಿದು ಪಕ್ಕೆಲುಬಿನ ನೋವು ಕಾಣಿಸಿಕೊಂಡ ಕಾರಣ ಪಂತ್ ಅವರನ್ನು ಏಕದಿನ ಸರಣಿಯಿಂದ ಹೊರಗಿಡಲಾಯಿತು. ಭಾನುವಾರ ನಡೆದ ಮೊದಲ ಏಕದಿನ ಪಂದ್ಯಕ್ಕೂ ಮುನ್ನ ಪಂತ್ ತೀವ್ರ ನೋವಿನಿಂದ ಬಳಲುತ್ತಿದ್ದರು ಮತ್ತು ಅವರು ಏಕದಿನ ಸರಣಿಯಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ. ನಡೆಯುತ್ತಿರುವ ವಿಜಯ್ ಹಜಾರೆ ಟ್ರೋಫಿಯಲ್ಲಿ ಉತ್ತರ ಪ್ರದೇಶ ಪರ ಜುರೆಲ್ ಅದ್ಭುತ ಫಾರ್ಮ್‌ನಲ್ಲಿದ್ದಾರೆ ಮತ್ತು ಬಿಸಿಸಿಐ ಅಧಿಕೃತ ಪತ್ರಿಕಾ ಪ್ರಕಟಣೆಯಲ್ಲಿ ಅವರು ಈಗಾಗಲೇ ತಂಡದೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ತಿಳಿಸಲಾಗಿದೆ.