Shorts

ನವದೆಹಲಿ: ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ವಿಚಾರವು ಲಿಂಗ ತಾರತಮ್ಯದ ವಿಷಯವಲ್ಲ; ಅದು ಧಾರ್ಮಿಕ ಸಂಪ್ರದಾಯ ಮತ್ತು ನಂಬಿಕೆಗೆ ಸಂಬಂಧಿಸಿದ್ದು ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.ಶಬರಿಮಲೆ ದೇವಸ್ಥಾನಕ್ಕೆ ಎಲ್ಲಾ ವಯಸ್ಸಿನ ಮಹಿಳೆಯರಿಗೆ ಪ್ರವೇಶವನ್ನು ಅನುಮತಿಸಿದ್ದ 2018ರ ತೀರ್ಪಿನ ವಿರುದ್ಧ ಸಲ್ಲಿಸಿದ ದೀರ್ಘಕಾಲದಿಂದ ಬಾಕಿ ಇರುವ ಪರಿಶೀಲನಾ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆಗೆ ಕೈಗೆತ್ತಿಕೊಳ್ಳಲಿರುವ ಹಿನ್ನೆಲೆಯಲ್ಲಿ ಕೇಂದ್ರವು ತನ್ನ ನಿಲುವನ್ನು ಸ್ಪಷ್ಟಪಡಿಸಿದೆ.ಶಬರಿಮಲೆಯಲ್ಲಿ 10ರಿಂದ 50 ವರ್ಷದೊಳಗಿನ ಮಹಿಳೆಯರ ಪ್ರವೇಶದ ಮೇಲಿನ ನಿರ್ಬಂಧವು ಅಯ್ಯಪ್ಪ ಸ್ವಾಮಿಯ ನೈಷ್ಠಿಕ ಬ್ರಹ್ಮಚಾರಿ (ಜೀವನಪೂರ್ತಿ ಬ್ರಹ್ಮಚರ್ಯಕ್ಕೆ ಕಟ್ಟಿಬದ್ಧನಾದವನು) ಸ್ವಭಾವದಿಂದ ಉಗಮಿಸಿದ್ದು, ಅದು ಅಶುದ್ಧತೆ ಅಥವಾ ಕೀಳರಿಮೆ ಆಧಾರಿತವಲ್ಲ ಎಂದು ಕೇಂದ್ರವು ವಿಚಾರಣೆಗೆ ಮುನ್ನ ಸಲ್ಲಿಸಿದ ಲಿಖಿತ ಅರ್ಜಿಯಲ್ಲಿ ತಿಳಿಸಿದೆ.

ದಿಬ್ರುಗಢ್: ಚುನಾವಣೆ ನಡೆಯಲಿರುವ ಅಸ್ಸಾಂನಲ್ಲಿ ನೆಹರೂ-ಗಾಂಧಿ ಕುಟುಂಬದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಸೋಮವಾರ ತೀವ್ರ ವಾಗ್ದಾಳಿ ನಡೆಸಿರು.ಕಾಂಗ್ರೆಸ್‌ನ ಮೊದಲ ಕುಟುಂಬವು ದೇಶದ ಅತ್ಯಂತ ಭ್ರಷ್ಟ ಕುಟುಂಬವಾಗಿದ್ದು, ಅಂತವರು ಅಸ್ಸಾಂಗೆ ಬಂದು ಇತರರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆಂದು ಆಕ್ರೋಶ ಹೊರಹಾಕಿದರು. ಕಾಂಗ್ರೆಸ್ ಭ್ರಷ್ಟ ಮಾತ್ರವಲ್ಲ, ಕೆಲಸ ಮಾಡಲು ಸಿದ್ಧರಿಲ್ಲ. ಪರಿಣಾಮವಾಗಿ, ಅಸ್ಸಾಂನಲ್ಲಿ ತಲೆಮಾರುಗಳು ನಿರುದ್ಯೋಗದಿಂದ ಹೋರಾಡುತ್ತಿವೆ. ಇದಕ್ಕೆ ವ್ಯತಿರಿಕ್ತವಾಗಿ, ಬಿಜೆಪಿ-ಎನ್‌ಡಿಎ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಸಮಗ್ರತೆಯಿಂದ ಕೆಲಸ ಮಾಡುತ್ತಿದೆ. ಅಸ್ಸಾಂ ಅನ್ನು ಪ್ರಮುಖ ರಾಜಧಾನಿಯನ್ನಾಗಿ ಪರಿವರ್ತಿಸಲು ನಾವು ಬದ್ಧರಾಗಿದ್ದೇವೆ. "ಕಾಂಗ್ರೆಸ್ ಆಡಳಿತದಲ್ಲಿ

ನವದೆಹಲಿ: ಅರುಣಾಚಲ ಪ್ರದೇಶ ಸಿಎಂ ಪೆಮಾ ಖಂಡು ಅವರಿಗೆ ಸುಪ್ರೀಂಕೋರ್ಟ್ ಬಿಗ್ ಶಾಕ್ ನೀಡಿದೆ. ವಿವಿಧ ಸಾರ್ವಜನಿಕ ಕಾಮಗಾರಿಗಳ ಗುತ್ತಿಗೆಗಳನ್ನು ಕುಟುಂಬಸ್ಥರ ಕಂಪನಿಗಳಿಗೆ ನೀಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖೆ ನಡೆಸುವಂತೆ ಸಿಬಿಐಗೆ ನಿರ್ದೇಶನ ನೀಡಿದೆ. ಸರ್ಕಾರಿ ಗುತ್ತಿಗೆಗಳನ್ನು ಸಿಎಂ ಮತ್ತು ಅವರ ಆಪ್ತ ಕುಟುಂಬ ಸದಸ್ಯರಿಗೆ ಕಾನೂನುಬಾಹಿರವಾಗಿ ನೀಡಲಾಗಿದೆ ಎಂದು ಆರೋಪಿಸಿ ಎನ್‌ಜಿಒಗಳು, ಸೇವ್ ಮಾನ್ ರೀಜನ್ ಫೆಡರೇಶನ್ ಹಾಗೂ ವಾಲಂಟರಿ ಅರುಣಾಚಲ ಸೇನಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ನ ನ್ಯಾ. ವಿಕ್ರಮ್ ನಾಥ್ ನೇತೃತ್ವದ ಪೀಠ ಈ ಆದೇಶವನ್ನು ನೀಡಿದೆ.ಈ ಆರೋಪದ ಕುರಿತು ನಾವು ಸಿಬಿಐಗೆ ಪ್ರಾಥಮಿಕ ತನಿಖೆ ನಡೆಸುವಂತೆ ಆದೇಶಿಸುತ್ತೇವೆ.

ಬೆಂಗಳೂರು: ಬಾರ್‌ನಲ್ಲಿ ನಡೆದ ಗಲಾಟೆಯಲ್ಲಿ ಬಿಯರ್ ‌ಬಾಟಲಿಯಿಂದ ಚಿತ್ರನಟರೊಬ್ಬರ ಮೇಲೆ ಹಲ್ಲೆ ನಡೆಸಲಾಗಿದೆ‌. ಈ ಸಂಬಂಧ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಒಡೆಯ ಚಿತ್ರದಲ್ಲಿ ನಟ ದರ್ಶನ್ ಅವರ ತಮ್ಮನ ಪಾತ್ರದಲ್ಲಿ ನಟಿಸಿದ್ದ ನಿರಂಜನ್ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಬಾರ್‌ನಲ್ಲಿ ನಡೆದ ಗಲಾಟೆಯಲ್ಲಿ ಬಿಯರ್ ‌ಬಾಟಲಿಯಿಂದ ಹಲ್ಲೆ ನಡೆಸಲಾಗಿದೆ‌ ಎಂದು ದೂರಲಾಗಿದೆ.ಮಾರ್ಚ್ 28ರಂದು ಸ್ನೇಹಿತ ಯಶಸ್ ಸೂರ್ಯ ಅವರ ಮನೆಯಿಂದ ಉತ್ತರಹಳ್ಳಿ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದೆ. ಮಂತ್ರಿ ಆಲೈನ್ ಬಳಿ ಬಂದಾಗ ನೀರು ಕುಡಿಯಬೇಕು ಅನಿಸಿದ್ದರಿಂದ ಪಕ್ಕದಲ್ಲಿ ಇದ್ದ ಬಾರ್ ಆ್ಯಂಡ್ ಕಿಚನ್ ಬಳಿ ಹೋಗಿ ನೀರನ್ನು ತೆಗೆದುಕೊಳ್ಳುತ್ತಿರಬೇಕಾದರೆ, ಯಾರೋ ಒಬ್ಬ ವ್ಯಕ್ತಿ ಬಂದು ತನ್ನನ್ನು ತಳ್ಳಿದ. ಆಗ ನಾನು ಆತನಿಗೆ ಯಾಕೆ ನನ್ನನ್ನು ತಳ್ಳುತ್ತೀಯಾ ಎಂದು ಕೇಳಿದ್ದೆ.