ಅಹ್ಮದಾಬಾದ್: ನ್ಯೂಜಿಲೆಂಡ್ ತಂಡವನ್ನು ಸೋಲಿಸಿ ಟೀಂ ಇಂಡಿಯಾ ಸತತ 2 ನೇ ಬಾರಿಗೆ ವಿಶ್ವಚಾಂಪಿಯನ್ ಆಗಿ ಹೊರಹೊಮ್ಮಿದೆ. ಫೈನಲ್ ಪಂದ್ಯವನ್ನು ಟೀಂ ಇಂಡಿಯಾ 96 ರನ್ ಗಳಿಂದ ಗೆದ್ದುಕೊಂಡಿದೆ. ಇಂದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 255 ರನ್ ಗಳ ದಾಖಲೆಯ ಮೊತ್ತ ಪೇರಿಸಿತು. ಟಿ20 ವಿಶ್ವಕಪ್ ಫೈನಲ್ ನಲ್ಲಿ ಇದು ಗರಿಷ್ಠ ಸ್ಕೋರ್ ಆಗಿತ್ತು. ಸಂಜು ಸ್ಯಾಮ್ಸಮ್, ಅಭಿಷೇಕ್ ಶರ್ಮಾ, ಇಶಾನ್ ಕಿಶನ್ ಅರ್ಧಶತಕ ಮತ್ತು ಶಿವಂ ದುಬೆ ಬಿರುಸಿನ 26 ರನ್ ಗಳಿಂದ ಟೀಂ ಇಂಡಿಯಾ ಬೃಹತ್ ಮೊತ್ತ ಕಲೆ ಹಾಕಿತು.
ಅಹ್ಮದಾಬಾದ್: ಟಿ20 ವಿಶ್ವಕಪ್ ಫೈನಲ್ ಪಂದ್ಯ ಗೆಲ್ಲಲು ನ್ಯೂಜಿಲೆಂಡ್ ಗೆ ಟೀಂ ಇಂಡಿಯಾ 256 ರನ್ ಗಳ ಗೆಲುವಿನ ಗುರಿ ನೀಡಿದೆ. ಮತ್ತೆ ಮಿಂಚಿದ ಸಂಜು ಸ್ಯಾಮ್ಸನ್ ಟೀಂ ಇಂಡಿಯಾ ಬೃಹತ್ ಮೊತ್ತ ಪೇರಿಸಲು ನೆರವಾದರು. ಇಂದು ಟಾಸ್ ಗೆದ್ದು ನ್ಯೂಜಿಲೆಂಡ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು. ಆರಂಭಿಕ ಎರಡು ಓವರ್ ಗಳಲ್ಲಿ ಎಚ್ಚರಿಕೆಯ ಆಟವಾಡಿದ ಟೀಂ ಇಂಡಿಯಾ ಆರಂಭಿಕರು ಬಳಿಕ ಹೊಡೆತಕ್ಕೆ ಕೈಹಾಕಿದರು. ವಿಶೇಷವೆಂದರೆ ಇಷ್ಟು ದಿನ ಔಟ್ ಆಫ್ ಫಾರ್ಮ್ ನಲ್ಲಿದ್ದ ಅಭಿಷೇಕ್ ಶರ್ಮಾ ಇಂದು ಫಾರ್ಮ್ ಗೆ ಮರಳಿದರು. ಇಂದು 21 ಎಸೆತ ಎದುರಿಸಿದ ಅವರು 52 ರನ್ ಗಳಿಸಿ ಔಟಾದರು.
ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ನಲ್ಲಿ ನ್ಯೂಜಿಲೆಂಡ್ ನಾಯಕ ಮಿಚೆಲ್ ಸ್ಯಾಂಟ್ನರ್ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು.ವಾಂಖೆಡೆ ಸ್ಟೇಡಿಯಂನಲ್ಲಿ ಮೆನ್ ಇನ್ ಬ್ಲೂ 253 ರನ್ಗಳನ್ನು ಸಿಡಿಸಿದ ನಂತರ ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್ ಕೇವಲ ಏಳು ರನ್ಗಳಿಂದ ಗೆದ್ದು ಪ್ರವೇಶಿಸಿತು.ಮತ್ತೊಂದೆಡೆ, ಆ ಹಂತದಲ್ಲಿ ಈವೆಂಟ್ನಲ್ಲಿ ಅಜೇಯ ತಂಡವಾಗಿದ್ದ ದಕ್ಷಿಣ ಆಫ್ರಿಕಾದ ಮೇಲೆ ಸೆಮಿಸ್ನಲ್ಲಿ ನಾಕೌಟ್ ಪಂಚ್
ಚಿತ್ತಾಪುರ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸರ್ವಾಧಿಕಾರಿಯಾಗಿದ್ದು, ಎಫ್ಸ್ಟೀನ್ ಫೈಲ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಹೆಸರು ಬಂದಿರುವುದರಿಂದ ಟ್ರಂಪ್ ತಾಳಕ್ಕೆ ತಕ್ಕಂತೆ ಕುಣಿಯುವ ಗುಲಾಮರಾಗಿದ್ದಾರೆಂದು ಎಐಸಿಸಿ ಅಧ್ಯಕ್ಷ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಹೊರಹಾಕಿದರು. ಚಿತ್ತಾಪುರ ಪಟ್ಟಣದಲ್ಲಿ ಭಾನುವಾರ ಆಯೋಜನೆ ಮಾಡಿದ್ದ ₹ 1069 ಕೋಟಿ ಮೊತ್ತದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಟ್ರಂಪ್ ಜೊತೆ ಸ್ನೇಹ ಮಾಡಿಕೊಂಡು ನಮ್ಮ ದೇಶವನ್ನು ಗಿರವಿ ಇಟ್ಟಿದ್ದಾರೆ’ ಎಂದು ಎಐಸಿಸಿ ಅಧ್ಯಕ್ಷ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದರು.
ಅಹಮದಾಬಾದ್: ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಹೈ-ವೋಲ್ಟೇಜ್ ಪಂದ್ಯಕ್ಕಾಗಿ ಎಲ್ಲರೂ ಕಾತರದಿಂದ ಕಾಯುತ್ತಿದ್ದಾರೆ. ಹಾಲಿ ಚಾಂಪಿಯನ್ ಭಾರತ ತಂಡವು ಟಿ20 ವಿಶ್ವಕಪ್ ಅನ್ನು ಉಳಿಸಿಕೊಳ್ಳಲು ಹೋರಾಟ ನಡೆಸಲಿದೆ. ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಸೆಮಿಫೈನಲ್ನಲ್ಲಿ ಇಂಗ್ಲೆಂಡ್ ವಿರುದ್ಧ 253 ಗಳಿಸಿದ್ದ ಭಾರತ ಸದೃಢ ತಂಡವಾಗಿ ಫೈನಲ್ಗೆ ಪ್ರವೇಶಿಸಲಿದೆ. ನ್ಯೂಜಿಲೆಂಡ್ ತಂಡವು ಹಾಲಿ ರನ್ನರ್ ಅಪ್ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿ ಪ್ರಶಸ್ತಿ ಸುತ್ತು ಪ್ರವೇಶಿಸಿದೆ.ಅಹಮದಾಬಾದ್ ಕ್ರೀಡಾಂಗಣದಲ್ಲಿ ಭಾರತೀಯ ಅಭಿಮಾನಿಗಳನ್ನು ಸ್ತಬ್ಧಗೊಳಿಸುತ್ತೇವೆ ಎಂದ ನ್ಯೂಜಿಲೆಂಡ್ ನಾಯಕ ಮಿಚೆಲ್ ಸ್ಯಾಂಟ್ನರ್ ಹೇಳಿಕೆಗೆ ಭಾರತೀಯ ನಾಯಕ ಸೂರ್ಯಕುಮಾರ್ ಯಾದವ್ ಕೌಂಟರ್ ಕೊಟ್ಟಿದ್ದಾರೆ.
ಪಟ್ನಾ: ಬಿಹಾರ ರಾಜಕಾರಣದಲ್ಲಿ ಮಿಂಚಿನ ಸಂಚಲನ ನಡೆಯುತ್ತಿದೆ. ಕಳೆದ 20 ವರ್ಷಗಳಿಂದ ಮುಖ್ಯಮಂತ್ರಿಯಾಗಿದ್ದ ನಿತೀಶ್ ಕುಮಾರ್ ಅವರು ರಾಜ್ಯಸಭೆಗೆ ಪ್ರವೇಶಿಸಲು ಸಜ್ಜಾಗಿದ್ದಾರೆ. ಈ ಮಧ್ಯೆ ಅವರ ಪುತ್ರ ಜೆಡಿಯು ಪಕ್ಷ ಸೇರುವ ಮೂಲಕ ಹೊಸ ಅಲೆಯನ್ನು ಸೃಷ್ಟಿಸಿದ್ದಾರೆ. ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಕುಮಾರ್ ಇಂದು ಜನತಾದಳ ಯುನೈಟೆಡ್ ಸೇರುವ ಮೂಲಕ ತಮ್ಮ ರಾಜಕೀಯ ಜೀವನವನ್ನು ಆರಂಭಿಸಿದ್ದಾರೆ. ಪಾಟ್ನಾದ ಜೆಡಿಯು ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ನಿಶಾಂತ್ ಸದಸ್ಯತ್ವವನ್ನು ಸ್ವೀಕರಿಸಿದರು. ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷ ಸಂಜಯ್ ಕುಮಾರ್ ಝಾ ಮತ್ತು ಕೇಂದ್ರ ಸಚಿವ ಲಲ್ಲನ್ ಸಿಂಗ್ ಸದಸ್ಯತ್ವವನ್ನು ನೀಡಿದರು. ಈ ಮೂಲಕ ನಿತೀಶ್ ಕುಮಾರ್ ಪುತ್ರನಿಗೆ ಪಟ್ಟಾಭಿಷೇಕ ಮಾಡಲು ವೇದಿಕೆ ಸಜ್ಜು ಮಾಡಿದ್ದಾರೆ.
ಅಹಮದಾಬಾದ್: ಟಿ20 ವಿಶ್ವಕಪ್ ಫೈನಲ್ ಹಣಾಹಣಿಗೆ ಕ್ಷಣಗಣನೆ ಆರಂಭವಾಗಲಿದೆ. ಇಂದು ಸಂಜೆ 7 ಗಂಟೆಗೆ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಈ ಮಧ್ಯೆ ಭಾರತೀಯರ ನೋಟ ಅಭಿಷೇಕ್ ಶರ್ಮಾ ಮೇಲಿದೆ. ವಿಶ್ವದ ನಂಬರ್ ಒನ್ ಬ್ಯಾಟರ್ ಆಗಿದ್ದ ಅಭಿಷೇಕ್ ಶರ್ಮಾ ಅವರು ಈ ಪಂದ್ಯದಲ್ಲಿ ಆಡುತ್ತಾರೋ? ಇಲ್ವೋ ಎನ್ನುವುದು ಈಗ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಇದಕ್ಕೆ ಕಾರಣ ಆರಂಭಿಕ ಆಟಗಾರನಾಗಿ ಅಭಿಷೇಕ್ ಶರ್ಮಾ ಕಳಪೆ ಪ್ರದರ್ಶನ ನೀಡುತ್ತಿರುವುದು. ಫೈನಲ್ ಪಂದ್ಯಕ್ಕೆ ಟೀಂ ಇಂಡಿಯಾ ಅಭಿಷೇಕ್ ಶರ್ಮಾ ಜಾಗಕ್ಕೆ ರಿಂಕು ಸಿಂಗ್ ಅವರನ್ನು ಆಡಿಸುತ್ತಾ ಎಂಬ ಪ್ರಶ್ನೆ ಎದ್ದಿದೆ.ಟಿ20 ವಿಶ್ವಕಪ್ ಟೂರ್ನಿಯಲ್ಲಿ 7 ಪಂದ್ಯಗಳಲ್ಲಿ ಕೇವಲ 89 ರನ್ ಹೊಡೆದಿದ್ದಾರೆ. ಈ ಪೈಕಿ ಅಮೆರಿಕ, ಪಾಕಿಸ್ತಾನ, ನೆದರ್ಲ್ಯಾಂಡ್ಸ್ ವಿರುದ್ಧ ಸೊನ್ನೆಗೆ ಔಟಾದರೆ ದಕ್ಷಿಣ ಆಫ್ರಿಕಾ ವಿರುದ್ಧ 15 ರನ್, ವೆಸ್ಟ್ ಇಂಡೀಸ್ ವಿರುದ್ಧ 10 ರನ್, ಸೆಮಿಫೈನಲ್ನಲ್ಲಿ ಇಂಗ್ಲೆಂಡ್ ವಿರುದ್ಧ 9 ರನ್ ಗಳಿಸಿ ಔಟಾಗಿದ್ದಾರೆ
ವಾಷಿಂಗ್ಟನ್: ಅಮೆರಿಕಾ ಮತ್ತು ಇರಾನ್ ನಡುವೆ ಸಂಘರ್ಷ ತಣ್ಣಾಗಾಗುವ ಲಕ್ಷಣಗಳು ಗೋಚರಿಸುತ್ತಿಲ್ಲ. ಇದೀಗ ಇರಾನ್ ವಿರುದ್ಧ ಸಿಡಿದೆದ್ದಿರುವ ಅಮೆರಿಕಾ ಗಂಭೀರ ಸಂದೇಶವನ್ನು ರವಾನಿಸಿದೆ.ಅಮೆರಿಕದ ರಕ್ಷಣಾ ಇಲಾಖೆಯ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಸಾಮಾಜಿಕ ಮಾಧ್ಯಮ ಪೋಸ್ಟ್ ಮೂಲಕ ಹೊಸ ಬೆದರಿಕೆ ಹಾಕಿದ್ದಾರೆ. ಅಮೆರಿಕ ನಾಗರಿಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಯಾವುದೇ ದೇಶ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ವಾರ್ನಿಂಗ್ ನೀಡಿದ್ದಾರೆ. ತಮ್ಮ ನಾಗರಿಕರ ಭದ್ರತೆಯಲ್ಲಿ ಯಾವುದೇ ರಾಜಿ ಇಲ್ಲ ಎಂದಿದ್ದಾರೆ. ಭೂಮಿಯ ಮೇಲೆ ಎಲ್ಲಿಯಾದರೂ ಅಮೆರಿಕನ್ನರನ್ನು ಕೊಂದರೆ, ಬೆದರಿಕೆ ಹಾಕಿದರೆ, ನಾವು ಕ್ಷಮೆಗೆ ಅವಕಾಶ ನೀಡದೆ ಬೇಟೆಯಾಡುತ್ತೇವೆ. ನಿಮ್ಮನ್ನು ಕೊಲ್ಲುತ್ತೇವೆಎಂದು ಹೇಳಿದ್ದಾರೆ.
ಚೆನ್ನೈ: ಕಾಲಿವುಡ್ ಸೂಪರ್ ಸ್ಟಾರ್ ದಳಪತಿ ವಿಜಯ್ ಅವರು ವಿಚ್ಛೇದನ ಕುರಿತು ಮೌನ ಮುರಿದಿದ್ದಾರೆ. ಈ ಮಧ್ಯೆ ಅಭಿಮಾನಿಗಳ ಮುಂದೆ ವಿಜಯ್ ಮನಬಿಚ್ಚಿದ್ದಾರೆ. ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಸಂಸ್ಥಾಪಕ ವಿಜಯ್ ಅವರ ಪತ್ನಿ ಸಂಗೀತಾ ಅವರು ವಿಚ್ಛೇದನ ಕೋರಿ ಇತ್ತೀಚೆಗೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇದರ ಬೆನ್ನಲ್ಲೇ ವಿಜಯ್ ಅವರು ಪ್ರತಿಕ್ರಿಯಿಸಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ವಿಚ್ಛೇದನ ಕುರಿತು ಮೌನ ಮುರಿದಿದ್ದಾರೆ. ನೀವು ಇದರ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ, ಈ ಸಮಸ್ಯೆಯನ್ನು ನಾನು ನೋಡಿಕೊಳ್ಳುತ್ತೇನೆ ಎಂದು ಕಾರ್ಯಕರ್ತರು ಹಾಗೂ ಅಭಿಮಾನಿಗಳಿಗೆ ಹೇಳಿದ್ದಾರೆ.
ಬೆಂಗಳೂರು: ಟಾಲಿವುಡ್ನ ಸೂಪರ್ ಸ್ಟಾರ್ ಜೂನಿಯರ್ ಎನ್ಟಿಆರ್ ಅವರು ಖಾಸಗಿ ಕಾರ್ಯಕ್ರಮಕ್ಕೆ ಸಿಲಿಕಾನ್ ಸಿಟಿಗೆ ಬಂದಿದ್ದು, ಈ ವೇಳೆ ಭಾರೀ ನೂಕುನುಗ್ಗಲು ಉಂಟಾಗಿದೆ.ಬೆಂಗಳೂರು ನಗರಕ್ಕೆ ಬಂದಿದ್ದ ನಟ ಜ್ಯೂ.ಎನ್ಟಿಆರ್ ನೋಡಲು ಫ್ಯಾನ್ಸ್ ಮುಗಿಬಿದ್ದಿದ್ದಾರೆ. ಈ ವೇಳೆ ಪೊಲೀಸರು ಜನರನ್ನು ನಿಯಂತ್ರಿಸಲು ಲಘು ಲಾಠಿಚಾರ್ಜ್ ಮಾಡಿದ್ದಾರೆ.ಮಹದೇವಪುರದ ನೂತನ ಕಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆಗೆ ಜ್ಯೂ.ಎನ್ಟಿಆರ್ ಆಗಮಿಸಿದ್ದರು. ಈ ವೇಳೆ ತಮ್ಮ ನೆಚ್ಚಿನ ನಟನನ್ನು ನೋಡಲು ಫ್ಯಾನ್ಸ್ ಆಸ್ಪತ್ರೆ ಒಳಗಡೆ ನುಗ್ಗಿದ್ದಾರೆ. ಈ ವೇಳೆ ನೂಕುನುಗ್ಗಲು ಉಂಟಾಗಿದೆ. ಇದರಿಂದ ಎಸ್ಕಲೇಟರ್ ಮುರಿದು ಹೋಗಿದೆ.
ಅಹಮದಾಬಾದ್: ಹಾಲಿ ಚಾಂಪಿಯನ್ ಭಾರತ ತಂಡವು ಟಿ20 ವಿಶ್ವಕಪ್ ಫೈನಲ್ನಲ್ಲಿ ಇಂದು ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಉಭಯ ತಂಡಗಳು ಈತನಕ ಒಟ್ಟು 30 ಬಾರಿ ಟಿ20 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಅದರ ಫಲಿತಾಂಶ ಇಲ್ಲಿದೆ. ಟಿ20 ವಿಶ್ವಕಪ್ನ ಫೈನಲ್ ಮ್ಯಾಚ್ಗೆ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ವೇದಿಕೆ ಸಿದ್ಧವಾಗಿದೆ. ಅಹಮದಾಬಾದ್ನಲ್ಲಿ ಬ್ಯಾಟಿಂಗ್ಗೆ ಪೂರಕವಾಗಿರುವ ಪಿಚ್ ನಿರ್ಮಿಸಿರುವುದು ಬಹಿರಂಗವಾಗಿದೆ. ಹೀಗಾಗಿ ಈ ಮ್ಯಾಚ್ನಲ್ಲಿ ಭರ್ಜರಿ ಬ್ಯಾಟಿಂಗ್ ನಿರೀಕ್ಷಿಸಬಹುದು.ಟಿ20 ಕ್ರಿಕೆಟ್ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡವು ಒಟ್ಟು 30 ಬಾರಿ ಮುಖಾಮುಖಿಯಾಗಿವೆ. ಅದರಲ್ಲಿ ಭಾರತ 18 ಬಾರಿ ಜಯ ಸಾಧಿಸಿದೆ. ನ್ಯೂಜಿಲೆಂಡ್ ತಂಡವು 11 ಬಾರಿ ಗೆಲುವು ಸಾಧಿಸಿದೆ. ಒಂದು ಬಾರಿ ಪಂದ್ಯ ಟೈ ಆಗಿದೆ.
ಅಹಮದಾಬಾದ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಬ್ಲಾಕ್ಬಸ್ಟರ್ ಹಣಾಹಣಿಗೆ ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣ ಸಜ್ಜಾಗಿದೆ. ಈ ಮಧ್ಯೆ ಐಸಿಸಿ ಪುರುಷರ ಟಿ20 ವಿಶ್ವಕಪ್ 2026 ಫೈನಲ್ ಪಂದ್ಯದ ಟಿಕೆಟ್ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದ್ದಕ್ಕಾಗಿ ಇಬ್ಬರನ್ನು ಬಂಧಿಸಲಾಗಿದೆ.ಸೂರ್ಯಕುಮಾರ್ ಯಾದವ್ ನೇತೃತ್ವದ ತಂಡವು ತವರು ನೆಲದಲ್ಲಿ ಟಿ20 ವಿಶ್ವಕಪ್ ಗೆದ್ದ ಮೊದಲ ತಂಡವಾಗುವ ಮತ್ತು ಸತತ ಎರಡು ಬಾರಿ ಪ್ರಶಸ್ತಿಯನ್ನು ಯಶಸ್ವಿಯಾಗಿ ಉಳಿಸಿಕೊಳ್ಳುವ ಮೊದಲ ತಂಡವಾಗುವ ಅವಕಾಶವನ್ನು ಹೊಂದಿದೆ.ಅಹಮದಾಬಾದ್ ನಗರ ಅಪರಾಧ ಶಾಖೆ ಅಧಿಕಾರಿಗಳು ಉಸ್ಮಾನಪುರ ಗುಜರಾತ್ ವಿದ್ಯಾಪೀಠ ಎಸ್.ಟಿ. ಬಸ್ ನಿಲ್ದಾಣದ ಬಳಿ ಬಲೆ ಬೀಸಿತು. ಅಲ್ಲಿ ಇಬ್ಬರು ವ್ಯಕ್ತಿಗಳನ್ನು ತಡೆದು ತಪಾಸಣೆ ನಡೆಸಲಾಯಿತು. ಅವರಿಂದ ಪಂದ್ಯದ ಎಂಟು ಟಿಕೆಟ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪ್ರಸ್ತುತ ರಾಜ್ಯದಲ್ಲಿರುವ ಬಿಸಿಲ ತಾಪಕ್ಕೆ ಶಾಲೆಗೆ ಹೋಗುವ ಮಕ್ಕಳಿಂದ ಹಿಡಿದು ಹಿರಿಯರವರೆಗೂ ನಿರ್ಜಲೀಕರಣವಾಗಿ ನಾನಾ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಇನ್ನೂ ಇದನ್ನು ನಿರ್ಲಕ್ಷಿಸುವುದು ಕೂಡಾ ಆರೋಗ್ಯಕ್ಕೆ ತುಂಬಾನೇ ದೊಡ್ಡ ಹೊಡೆತವನ್ನು ನೀಡುವ ಸಾಧ್ಯತೆಯಿದೆ
ಟೆಹ್ರಾನ್: ಇರಾನ್ ಮಧ್ಯಪ್ರಾಚ್ಯದಲ್ಲಿರುವ ತನ್ನ ನೆರೆಹೊರೆಯವರಿಗೆ ಕ್ಷಮೆಯಾಚಿಸಿದೆ. ಅದರ ಬೆನ್ನಲ್ಲೇ ಇರಾನ್ಗೆ ಅಮೆರಿಕಾ ಮತ್ತು ಇಸ್ರೇಲ್ ಬಿಗ್ ಶಾಕ್ ಕೊಟ್ಟಿವೆ. ಇರಾನ್ನ ಇಂಧನ ಸಂಗ್ರಹಣಾ ಸೌಲಭ್ಯಗಳ ಮೇಲೆಯೇ ದಾಳಿ ನಡೆಸಿವೆ.ಅಮೆರಿಕಾ ಮತ್ತು ಇಸ್ರೇಲ್ ಸೇನೆಗಳು ದಕ್ಷಿಣ ಟೆಹ್ರಾನ್ನಲ್ಲಿರುವ ತೈಲ ಸಂಗ್ರಹಣಾ ವ್ಯವಸ್ಥೆ ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ. ಆದರೆ, ಹತ್ತಿರದ ಸಂಸ್ಕರಣಾಗಾರಕ್ಕೆ ಯಾವುದೇ ಹಾನಿಯಾಗಿಲ್ಲ. ದಾಳಯ ವೇಳೆ ನಗರದಾದ್ಯಂತ ಬೆಂಕಿ ಮತ್ತು ಹೊಗೆಯನ್ನು ಹರಡಿದೆ. ಅಲ್ಬೋರ್ಜ್ ಪ್ರಾಂತ್ಯದ ಕರಾಜ್ ನಗರದಲ್ಲಿಯೂ ಸ್ಫೋಟಗಳ ಶಬ್ದ ಕೇಳಿಬಂದಿದೆ. ದಾಳಿಯನ್ನು ಇಸ್ರೇಲ್ ಸೇನೆ ಖಚಿತಪಡಿಸಿದೆ.
ಮನೆಯ ದೇವರ ಕೋಣೆಗಳಲ್ಲಿ ಎರಡು ದೀಪಗಳನ್ನು ಹಚ್ಚುವುದು ಶ್ರೇಷ್ಠ ಎಂದು ಹೇಳಲಾಗುತ್ತದೆ. ಕೆಲವೊಂದು ಮನೆಯಲ್ಲಿ ಒಂದೇ ದೀಪವನ್ನು ಹಚ್ಚಲಾಗುತ್ತದೆ. ಹಾಗಂತ ಅದು ಕೇಡು ಅಂತಾ ಅರ್ಥವಲ್ಲ, ಆದರೆ ಜೋಡಿ ದೀಪ ಹಚ್ಚಿದರೆ ಮನೆಗೆ ತುಂಬಾನೇ ಶ್ರೇಷ್ಠ ಎಂಬ ನಂಬಿಕೆಯಿದೆ. ಈ ಲೇಖನದಲ್ಲಿ ಎರಡು ದೀಪಗಳನ್ನು ಹಚ್ಚಿದರೆ ಏನೂ ಪ್ರಯೋಜನ ಎಂಬ ಅಂಶಗಳನ್ನು ಉಲ್ಲೇಖಿಸಲಾಗಿದೆ.
ಬೆಂಗಳೂರು: ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಬಿಸಿಲ ತಾಪಮಾನ ಏರುತ್ತಲೇ ಇದ್ದು, ಉರಿಬಿಸಿಲ ಶಾಖಕ್ಕೆ ಜನರು ಸುಸ್ತಾಗಿದ್ದಾರೆ. ಇಂದು ರಾಜ್ಯದಲ್ಲಿ ಹವಾಮಾನ ಮುನ್ಸೂಚನೆ ಪ್ರಕಾರ ಕಳೆದ 24 ಗಂಟೆಗಳಲ್ಲಿ ಹವಾಮಾನ ವೈಪರೀತ್ಯ ಕಂಡುಬರಲಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಸಂಪೂರ್ಣ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನೂ ಈಗ ಇರುವಂತೆಯೇ ಇಂದು ಕೂಡಾ ಕರಾವಳಿ ಭಾಗಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಿಂದ ಹಿಡಿದು ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗ, ಮೈಸೂರು ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡದವರೆಗೂ ಬಿಸಿಲಿನ ತಾಪ ಹಾಗೆಯೇ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನವದೆಹಲಿ: ಕೆಲವೇ ತಿಂಗಳಿನಲ್ಲಿ ಪಶ್ಚಿಮ ಬಂಗಾಳ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಲಿದೆ. ಎಲ್ಲಾ ಪಕ್ಷಗಳು ಭರ್ಜರಿ ತಾಲೀಮು ನಡೆಸುತ್ತಿದೆ. ಈ ಹೊತ್ತಿನಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ನರೇಂದ್ರ ಮೋದಿ ಕೆಂಡ ಕಾರಿದ್ದಾರೆ.ರಾಷ್ಟ್ರಪತಿ ದ್ರೌಪದಿ ಮುರ್ಮು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ್ದರು. ಅವರು ಭಾಗವಹಿಸಿದ್ದ ಕಾರ್ಯಕ್ರಮಕ್ಕೆ ಕೊನೆಯ ಕ್ಷಣದಲ್ಲಿ ಸ್ಥಳ ಬದಲಾವಣೆ ಮಾಡಿದ ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು, ರಾಜ್ಯ ಆಡಳಿತವು ಎಲ್ಲಾ ಮಿತಿಗಳನ್ನು ಮೀರಿದೆ ಎಂದು ಆರೋಪಿಸಿದರು. ರಾಷ್ಟ್ರಪತಿಗಳಿಗೆ ಮಾಡಿದ ಅವಮಾನಕ್ಕೆ ರಾಜ್ಯ ಸರ್ಕಾರವೇ ಕಾರಣ ಎಂದು ಕಿಡಿಕಾರಿದರು.
ಅಹಮದಾಬಾದ್: ಭಾನುವಾರ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ 2026 ರ T20 ವಿಶ್ವಕಪ್ ಫೈನಲ್ ಟ್ರೋಫಿಗಾಗಿ ಮುಖಾಮುಖಿಯಾಗಲಿದೆ. ಹೈವೋಲ್ಟೇಜ್ ಪಂದ್ಯದ ಹಿನ್ನೆಲೆ ಕ್ರಿಕೆಟ್ ಅಭಿಮಾನಿಗಳಿಗೆ ಇಂದಿನ ಪಂದ್ಯಾಟದ ಪ್ರತಿಯೊಂದು ಕ್ಷಣವೂ ಮುಖ್ಯ. ಕ್ರಿಕೆಟ್ ಅಭಿಮಾನಿಗಳಿಗೆ ಇಂದಿನ ಪಂದ್ಯಾಟಕ್ಕೆ ಮಳೆಯ ಅಡಚಣೆಯಾಗುತ್ತದೆಯಾ ಎಂಬ ಅನುಮಾನವಿದೆ. ಆದರೆ ಅಹಮದಾಬಾದ್ ಹವಾಮಾನ ವರದಿ ಪ್ರಕಾರ ಇಂದು ಮಳೆಯ ನಿರೀಕ್ಷೆಯಿಲ್ಲ ಎಂದು ಹೇಳಿದೆ. ಅದರಂತೆ ಕ್ರಿಕೆಟ್ ಅಭಿಮಾನಿಗಳು ಸ್ಪಷ್ಟವಾದ ಆಕಾಶದಲ್ಲಿ ಅಡೆತಡೆಯಿಲ್ಲದ ಕ್ರಿಕೆಟ್ ಅನ್ನು ನಿರೀಕ್ಷಿಸಬಹುದು. ಇತ್ತೀಚಿನ ಮುನ್ಸೂಚನೆಯ ಪ್ರಕಾರ, ರಾತ್ರಿಯ ಪಂದ್ಯದ ಪರಿಸ್ಥಿತಿಗಳು ಸ್ಪಷ್ಟ ಮತ್ತು ಬೆಚ್ಚಗಿರುತ್ತದೆ, ತಾಪಮಾನವು ಸುಮಾರು 23cಗೆ ಇಳಿಯುತ್ತದೆ, ಇದು ನಿಜವಾದ ತಾಪಮಾನಕ್ಕೆ ಹತ್ತಿರದಲ್ಲಿದೆ.
ಅಹಮದಾಬಾದ್: ಹಾಲಿ ಚಾಂಪಿಯನ್ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಟಿ20 ವಿಶ್ವಕಪ್ ಫೈನಲ್ನಲ್ಲಿ ಭಾನುವಾರ ಮುಖಾಮುಖಿಯಾಗುತ್ತಿದೆ. ಭಾರತವು ಪ್ರಶಸ್ತಿ ಉಳಿಸಿಕೊಳ್ಳುವ ಛಲದಲ್ಲಿದ್ದರೆ. ನ್ಯೂಜಿಲೆಂಡ್ ತಂಡವು ಮೊದಲ ಬಾರಿ ಪ್ರಶಸ್ತಿ ಗೆಲ್ಲುವ ಪ್ರಯತ್ನದಲ್ಲಿದೆ.ಭಾರತ ತಂಡ ಸತತ ಎರಡನೇ ಬಾರಿಗೆ ಟಿ20 ವಿಶ್ವಕಪ್ನ ಫೈನಲ್ ತಲುಪಿದ್ದು, ಇದೇ ಭಾನುವಾರ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಅಂತಿಮ ಕಾಳಗ ನಡೆಯಲಿದೆ. ನಾಳಿನ ಪಂದ್ಯಕ್ಕೂ ಮುನ್ನ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ ನ್ಯೂಜಿಲೆಂಡ್ ನಾಯಕ ಮಿಚೆಲ್ ಸ್ಯಾಟ್ನರ್ ಭಾರತಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
ನಟ-ರಾಜಕಾರಣಿ ದಳಪತಿ ವಿಜಯ್ ಅವರ ಪತ್ನಿ ಸಂಗೀತಾ ಸೊರ್ನಲಿಂಗಂ ಅವರ ವಿಚ್ಛೇದನ ಪ್ರಕ್ರಿಯೆಗಳು ನಡೆಯುತ್ತಿರುವ ನಡುವೆಯೇ, ಅವರು ಹೊಸ ಅರ್ಜಿಯನ್ನು ಸಲ್ಲಿಸಿದ್ದಾರೆ. ಅರ್ಜಿಯಲ್ಲಿ, 51 ವರ್ಷದ ಸಂಗೀತಾ ವಸತಿ ರಕ್ಷಣೆ ಮತ್ತು ಆರ್ಥಿಕ ಪರಿಹಾರವನ್ನು ಕೋರಿದ್ದಾರೆ.ಭಾರತದಲ್ಲಿ ತನಗೆ ಸ್ವಂತ ನಿವಾಸವಿಲ್ಲ ಎಂದು ಹೇಳುವ ಯುನೈಟೆಡ್ ಕಿಂಗ್ಡಮ್ ಪ್ರಜೆಯಾಗಿರುವ ಸಂಗೀತಾ ತಮ್ಮ ವೈವಾಹಿಕ ಮನೆಯಲ್ಲಿ ವಾಸಿಸುವ ಅಥವಾ ಪರ್ಯಾಯ ವಸತಿಯನ್ನು ಪಡೆಯುವ ಹಕ್ಕನ್ನು ಕೋರಿದ್ದಾರೆ. ಅರ್ಜಿಯಲ್ಲಿ "ನ್ಯಾಯಯುತ ಮತ್ತು ಸಮಂಜಸವಾದ ಶಾಶ್ವತ ಜೀವನಾಂಶ ಪಾವತಿ" ಯನ್ನೂ ಕೇಳಲಾಗಿದೆ.51 ವರ್ಷದ ವಿಜಯ್ ನ್ಯಾಯಾಲಯವನ್ನು ಸಂಪರ್ಕಿಸುವ ಬಗ್ಗೆ ಎಚ್ಚರಿಸಿದ್ದರು ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.
ಅಹಮದಾಬಾದ್: ಟಿ20 ವಿಶ್ವಕಪ್ನ ಫೈನಲ್ ಕದನ ಅಹಮದಾಬಾದ್ನಲ್ಲಿ ಭಾನುವಾರ ನಡೆಯಲಿದೆ. ಹಾಲಿ ಚಾಂಪಿಯನ್ ಭಾರತ ತಂಡವು ಪ್ರಶಸ್ತಿ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹೋರಾಟ ನಡೆಸಲಿದೆ.ನಿರೀಕ್ಷೆಯಂತೆ ಆತಿಥೇಯ ಭಾರತ ಈ ಬಾರಿಯೂ ಫೈನಲ್ ಪ್ರವೇಶಿಸಿದೆ. ಒಟ್ಟಾರೆ ದಾಖಲೆಯ ನಾಲ್ಕನೇ ಬಾರಿ ಪ್ರಶಸ್ತಿ ಸುತ್ತು ಪ್ರವೇಶಿಸಿದೆ. ಫೈನಲ್ ಪಂದ್ಯದಲ್ಲಿ ಭಾರತ, ನ್ಯೂಜಿಲೆಂಡ್ ಸವಾಲು ಎದುರಿಸಲಿದೆ. ಟಿ20 ವಿಶ್ವಕಪ್ ಫೈನಲ್ ಅಹಮದಾಬಾದ್ನಲ್ಲಿ ನಡೆಯಲಿದ್ದು, ಎಲ್ಲರ ಗಮನ ಸೆಳೆದಿದೆ.ಫೈನಲ್ ವಿಜೇತರು ಮತ್ತು ರನ್ನರ್-ಅಪ್ ಮತ್ತು ಸೆಮಿಫೈನಲಿಸ್ಟ್ಗಳಿಗೆ ನೀಡಲಾಗುವ ಹಣದ ಮೊತ್ತದ ಬಗ್ಗೆ ಮಾಹಿತಿ ಇಲ್ಲಿದೆ.
ಬೆಂಗಳೂರು: ಎಲ್ಪಿಜಿ ದರ ಏರಿಸಿದ್ದರಿಂದ ನೆಲಕ್ಕೆ ಬಿದ್ದವನಿಗೆ ಒದ್ದ ಹಾಗೇ ಆಗಿದೆ. ಈ ಮೂಲಕ ವಿಶ್ವಮಟ್ಟದಲ್ಲಿ ದೇಶದ ಮಾನ ಕಳೆಯುತ್ತಿರುವ ಪ್ರಧಾನಿ ಮೋದಿ ರಾಜೀನಾಮೆ ನೀಡಲಿ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದರು. ಈ ವಿಚಾರದ ಸಲುವಾಗಿ ಸಿದ್ದರಾಮಯ್ಯನವರು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಎಲ್ಪಿಜಿ ದರ ಏರಿಕೆ ಮಧ್ಯಮ ವರ್ಗದ ಕುಟುಂಬಗಳಿಗೆ ವೆಚ್ಚ ದುಬಾರಿಯಾಗಲಿದೆ. ಈ ಏರಿಕೆ ಅನಿವಾರ್ಯ ಕ್ರಮವೇನಲ್ಲ. ಭಾರತದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಹಣದುಬ್ಬರ ಮತ್ತು ಬೆಲೆ ಏರಿಕೆಯಿಂದ ತತ್ತರಿಸಿಹೋಗಿವೆ. ಈ ಸಮಯದಲ್ಲಿಯೇ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಎಲ್ಪಿಜಿ ಸಿಲಿಂಡರ್ ದರ ಹೆಚ್ಚಿಸಿರುವುದು ನೆಲಕ್ಕೆ ಬಿದ್ದವನಿಗೆ ಒದ್ದಂತಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ನಮಗೆ ಯಾರ ಅಪ್ಪಣೆಯೂ ಬೇಕಿಲ್ಲ: ರಷ್ಯಾ ತೈಲ ಖರೀದಿಗೆ ಅಮೆರಿಕ ವಿನಾಯಿತಿ ಬಗ್ಗೆ ಭಾರತ ಖಡಕ್ ಮಾತು
ಮಂಗಳೂರು: ಇರಾನ್ ಮತ್ತು ಇಸ್ರೇಲ್ ನಡುವಿನ ಹೆಚ್ಚುತ್ತಿರುವ ಸಂಘರ್ಷಕ್ಕೆ ಸಂಬಂಧಿಸಿದಂತೆ ಪಶ್ಚಿಮ ಏಷ್ಯಾದ ವಾಯುಪ್ರದೇಶದಲ್ಲಿ ನಡೆಯುತ್ತಿರುವ ಅಡೆತಡೆಗಳನ್ನು ಉಲ್ಲೇಖಿಸಿ, ಮಾರ್ಚ್ 7 ರಂದು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ತನ್ನ ಎಲ್ಲಾ ನಿಗದಿತ ಅಂತರರಾಷ್ಟ್ರೀಯ ವಿಮಾನಗಳನ್ನು ರದ್ದುಗೊಳಿಸುವುದಾಗಿ ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಿಸಿದೆ.ಇರಾನ್-ಇಸ್ರೇಲ್ ಬಿಕ್ಕಟ್ಟಿನಿಂದ ಉಂಟಾದ ವ್ಯಾಪಕ ವಿಮಾನ ಅಡಚಣೆಗಳೊಂದಿಗೆ ವಿಶ್ವದಾದ್ಯಂತ ವಿಮಾನಯಾನ ಸಂಸ್ಥೆಗಳು ಹೋರಾಡುತ್ತಿರುವಾಗ ಈ ರದ್ದತಿಗಳು ಬಂದಿವೆ, ಇದು ಮಧ್ಯಪ್ರಾಚ್ಯದ ಪ್ರಮುಖ ಕಾರಿಡಾರ್ಗಳಲ್ಲಿ ವಾಯುಪ್ರದೇಶ ಮುಚ್ಚುವಿಕೆ ಮತ್ತು ನಿರ್ಬಂಧಗಳಿಗೆ ಕಾರಣವಾಗಿದೆ.
ನವದೆಹಲಿ: ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ವೇಗವಾಗಿ ಹೆಚ್ಚುತ್ತಿರುವ ಸಂಘರ್ಷದ ನಡುವೆ ಹಿಂದೂ ಮಹಾಸಾಗರದಲ್ಲಿ ಮತ್ತೊಂದು ಇರಾನಿನ ನೌಕಾ IRIS ದೇನಾ ಒಳಗೊಂಡ ಘಟನೆಯ ನಂತರ ತಾಂತ್ರಿಕ ಮತ್ತು ಲಾಜಿಸ್ಟಿಕ್ ವ್ಯವಸ್ಥೆಗಳನ್ನು ಕೈಗೊಳ್ಳಲು ಕೊಚ್ಚಿ ಬಂದರಿನಲ್ಲಿ ಬಂದರಿನಲ್ಲಿರುವ ತನ್ನ ನೌಕಾ ನೌಕೆ IRIS ಲವನ್ಗೆ ಸುರಕ್ಷಿತ ಬಂದರನ್ನು ಒದಗಿಸಿದ್ದಕ್ಕಾಗಿ ಇರಾನ್ ಭಾರತಕ್ಕೆ ಔಪಚಾರಿಕವಾಗಿ ಕೃತಜ್ಞತೆಗಳನ್ನು ವ್ಯಕ್ತಪಡಿಸಿದೆ. ANI ಗೆ ನೀಡಿದ ವಿಶೇಷ ಸಂದರ್ಶನದಲ್ಲಿ, ಭಾರತದಲ್ಲಿನ ಇರಾನ್ ರಾಯಭಾರಿ ಮೊಹಮ್ಮದ್ ಫಥಾಲಿ, IRIS ದೇನಾ ಒಳಗೊಂಡ ದುರಂತ ಘಟನೆಯ ನಂತರ ಇಸ್ಲಾಮಿಕ್ ಗಣರಾಜ್ಯ ಇರಾನ್ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ಸಂದರ್ಭಗಳನ್ನು
ನವದೆಹಲಿ: ಮಾರ್ಚ್ 8 ರಂದು ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ 2026 ರ ಫೈನಲ್ನಲ್ಲಿ ಭಾರತವು ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಈ ಪಂದ್ಯಾಟವನ್ನೂ ವೀಕಿಸಲು ಬಯಸುವ ಕ್ರಿಕೆಟ್ ಅಭಿಮಾನಿಗಳಿಗೆ ರೈಲ್ವೆ ಇಲಾಖೆ ವಿಶೇ ರೈಲನ್ನು ಘೋಷಿಸಿದೆ. ಉತ್ತರ ರೈಲ್ವೆ ದೆಹಲಿಯಿಂದ ಸಬರಮತಿಗೆ ವಿಶೇಷ ರೈಲನ್ನು ಘೋಷಿಸಿದೆ. ಟಿಕೆಟ್ಗಳು ತಡವಾಗಿ ಬಿಡುಗಡೆಯಾಗಿದ್ದರಿಂದ, ಅನೇಕ ಅಭಿಮಾನಿಗಳು ಪ್ರಯಾಣ ವ್ಯವಸ್ಥೆಗಳನ್ನು ಬುಕ್ ಮಾಡಲು ವಿಫಲರಾದರು. ವಿಮಾನ ಬೆಲೆ ಏರಿಕೆಯಾಗಿದ್ದು, ಅವರನ್ನು ದಿಗ್ಭ್ರಮೆಗೊಳಿಸಿತು ಮತ್ತು ಆಗ ಉತ್ತರ ರೈಲ್ವೆ ಈ ವ್ಯವಸ್ಥೆಯನ್ನು ಕ್ರಿಕೆಟ್ ಅಭಿಮಾನಿಗಳಿಗೆ ಘೋಷಣೆ ಮಾಡಿದೆ.
ಸೂರತ್: ಸೂರತ್ನ ಸ್ವಾಮಿನಾರಾಯಣ ದೇವಸ್ಥಾನ ಸಂಕೀರ್ಣದ ಸ್ನಾನಗೃಹದೊಳಗೆ ಇಬ್ಬರು ಕಾಲೇಜು ವಿದ್ಯಾರ್ಥಿಗಳ ಶವಗಳು ಪತ್ತೆಯಾಗಿದ್ದು, ಪ್ರಾಥಮಿಕ ತನಿಖೆಯಲ್ಲಿ ವಿಷಕಾರಿ ಔಷಧಗಳನ್ನು ಇಂಜೆಕ್ಟ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.ಇಬ್ಬರು ಹುಡುಗಿಯರು ಶುಕ್ರವಾರ ಬೆಳಿಗ್ಗೆ ಕಾಲೇಜಿಗೆ ಮನೆಯಿಂದ ಹೊರಟಿದ್ದರು, ಆದರೆ ಮಧ್ಯಾಹ್ನದ ವೇಳೆಗೆ ಹಿಂತಿರುಗಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರಿಗೆ ಮಾಹಿತಿ ನೀಡಿದ ನಂತರ ಹುಡುಕಾಟ ಆರಂಭಿಸಲಾಯಿತು. ಪೊಲೀಸರು ಅವರ ಮೊಬೈಲ್ ಫೋನ್ಗಳು ದೇವಾಲಯ ಸಂಕೀರ್ಣದಲ್ಲಿ ಇರುವುದನ್ನು ಪತ್ತೆಹಚ್ಚಿದ್ದಾರೆ. ಶನಿವಾರವೂ ಹುಡುಕಾಟ ಮುಂದುವರಿದಂತೆ ಅವರ ಸ್ಕೂಟರ್ಗಳು ಆವರಣದೊಳಗೆ ನಿಂತಿರುವುದು ಕಂಡುಬಂದಿದೆ.
ಅಹಮದಾಬಾದ್:ಕ್ವಾರ್ಟರ್ ಫೈನಲ್ ಮತ್ತು ಸೆಮಿಫೈನಲ್ ಪಂದ್ಯಗಳ ಗೆಲುವಿನ ರುವಾರಿ ಸಂಜು ಸ್ಯಾಮ್ಸನ್ನತ್ತ ಎಲ್ಲರ ಚಿತ್ತ ನೆಟ್ಟಿದೆ. ಉತ್ತಮ ಲಯದಲ್ಲಿರುವ ಅವರು 25ಕ್ಕೂ ಅಧಿಕ ರನ್ ಗಳಿಸಿದರೆ ಭಾರತ ಈ ಬಾರಿ ಟಿ20 ವಿಶ್ವಕಪ್ ಗೆಲ್ಲುವುದು ಪಕ್ಕಾ ಎಂಬುದು ಅಭಿಮಾನಿಗಳ ಲೆಕ್ಕಾಚಾರ. ಭಾರತ ಮತ್ತು ಶ್ರೀಲಂಕಾದ ಅತಿಥ್ಯದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ನ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು, ಅಹಮದಾಬಾದ್ನ ನರೇಂದ್ರ ಮೋದಿ ಮೈದಾನದಲ್ಲಿ ಎದುರಾಗಲಿದೆ.ವೆಸ್ಟ್ ಇಂಡೀಸ್ ವಿರುದ್ಧದ ಸೂಪರ್ 8ರ ಕೊನೆಯ ಪಂದ್ಯದಲ್ಲಿ ಅಜೇಯ 97 ರನ್ ಗಳಿಸಿ ಭಾರತದ ಗೆಲುವಿಗೆ ಕಾರಣವಾಗಿದ್ದ
ಬೆಂಗಳೂರು: ಸಿಎಂ ಕುರ್ಚಿ ಗುದ್ದಾಟದ ನಡುವೆ ಸಿಎಂ ಸಿದ್ದರಾಮಯ್ಯ ಅವರು ದಾಖಲೆಯ ಬಜೆಟ್ ಮಂಡನೆ ಮಾಡಿದ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಅವರು ನವದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆಂಬ ಸುದ್ದಿ ಇದೀಗ ಹರಿದಾಡುತ್ತಿದೆ. ಡಿಸಿಎಂ ಹೈಕಮಾಂಡ್ ಭೇಟಿ ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲವನ್ನು ಮೂಡಿಸಿದೆ. ಡಿಕೆ ಶಿವಕುಮಾರ್ ಅವರು ನಾಳೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆಂಬ ಮಾಹಿತಿ ಇದೀಗ ಹೊರಬಿದ್ದಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜೊತೆ ಕಲಬುರಗಿಯಿಂದ ದೆಹಲಿಗೆ ಜೊತೆಯಾಗಿ ಪ್ರಯಾಣಿಸಲಿದ್ದಾರೆ. ಡಿಸಿಎಂ ಈ ಭೇಟಿ ನೀರಾವಳಿ ಇಲಾಖೆ ಸಂಬಂಧ ಪಟ್ಟದ್ದು ಎನ್ನಲಾಗಿದೆ. ಆದರೆ ಸಿದ್ದರಾಮಯ್ಯ ಅವರ ಬಜೆಟ್ ಬೆನ್ನಲ್ಲೇ ಡಿಕೆಶಿ ನವದೆಹಲಿಗೆ
ಬೆಂಗಳೂರು: ನಿನ್ನೆ ಮಂಡಿಸಿದ ರಾಜ್ಯ ಬಜೆಟ್ ನ ಮೂಲಕ ಇಡೀ ರಾಜ್ಯದ ಜನರಿಗೆ ಮೂಗಿಗೆ ತುಪ್ಪ ಸವರುವುದು ಉಚಿತ, ಎಲ್ಲರ ತಲೆ ಮೇಲೆ ಸಾಲ ಖಚಿತ, ರಾಜ್ಯದ ಜನರಿಗೆ ಸಂಕಷ್ಟ ನಿಶ್ಚಿತ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದ್ದಾರೆ.ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಅವರು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯ ಸರಕಾರದ 2026-27ರ ಆಯವ್ಯಯ ಪತ್ರವನ್ನು ನಿನ್ನೆ ಮುಖ್ಯಮಂತ್ರಿಗಳು ಮತ್ತು ಹಣಕಾಸು ಸಚಿವ ಸಿದ್ದರಾಮಯ್ಯನವರು ಮಂಡಿಸಿದ್ದಾರೆ ಎಂದ ಅವರು, ರಾಜ್ಯ ಸರಕಾರವು ಉಚಿತ, ಖಚಿತ, ನಿಶ್ಚಿತ ಎಂಬ ಘೋಷವಾಕ್ಯದಡಿ ಅಧಿಕಾರಕ್ಕೆ ಬಂದಿತ್ತು ಎಂದು ಗಮನ ಸೆಳೆದರು.
ಬೆಂಗಳೂರು: ಈಚೆಗೆ ಬಿಗ್ಬಾಸ್ ಮಾಜಿ ಸ್ಪರ್ಧಿ ಡಾಗ್ ಸತೀಶ್ ವಿರುದ್ಧ ಠಾಣೆ ಮೆಟ್ಟಿಲೇರಿದ್ದ ಬಿಗ್ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ಕೇಸ್ ಒಂದು ದಾಖಲಾಗಿದೆ. ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಸತೀಶ್ ಅವರು ರಜತ್ ವಿರುದ್ಧ ಕೊಲೆ ಬೆದರಿಕೆ ಹಾಕಿರುವ ಕೇಸ್ ಅನ್ನು ದಾಖಲಿಸಿದ್ದಾರೆ.ಪೊಲೀಸರು ಬಿಎನ್ಎಸ್ ಸೆಕ್ಷನ್ 351 , 352 ರ ಆಡಿ ರಜತ್ ಮತ್ತು ಧನರಾಜ್ ಮೇಲೆ ಕೇಸ್ ದಾಖಲು ಮಾಡಿದ್ದಾರೆ.
ಇದೀಗ ಪೇರಳೆ ಹಣ್ಣು ಮಾರುಕಟ್ಟೆಗಳಲ್ಲಿ ಹಾಗೂ ನಮ್ಮ ಮನೆ ಅಂಗಳದಲ್ಲಿ ಸಿಗುವ ಹೆಚ್ಚಾಗಿ ಸಿಗುವ ಸಮಯ. ಇನ್ನೂ ನಮ್ಮ ಹಿತ್ತಲಲ್ಲಿ ಬೆಳೆಯುವ ಈ ಹಣ್ಣನ್ನು ಬಡವರ ಸೇಬು ಎಂದು ಕರೆಯುತ್ತಾರೆ. ಈನ್ನೂ ಈ ಹಣ್ಣನು ಸೇವನೆ ಮಾಡುವುದರಿಂದ ಆರೋಗ್ಯಕ್ಕೆ ಭಾರೀ ಪ್ರಯೋಜನವನ್ನು ಪಡೆಯಬಹುದು. ಕಡಿಮೆ ಬೆಲೆಯಲ್ಲಿ ಸಿಗುವ ಈ ಹಣ್ಣಿನಲ್ಲಿ ಸೇಬಿಗಿಂತಲೂ ಹೆಚ್ಚು ಪೌಷ್ಟಿಕಾಂಶಗಳನ್ನು ಇದೆ.ಪೆರಳೆ ಹಣ್ಣಿನ ಪ್ರಮುಖ ಆರೋಗ್ಯ ಪ್ರಯೋಜನಗಳು ಈ ಕೆಳಗಿನಂತಿದೆ.೧. ರೋಗನಿರೋಧಕ ಶಕ್ತಿ ಹೆಚ್ಚಳಪೆರಳೆ ಹಣ್ಣಿನಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಇದು ಕಿತ್ತಳೆ ಹಣ್ಣಿಗಿಂತ ನಾಲ್ಕು ಪಟ್ಟು ಹೆಚ್ಚು ವಿಟಮಿನ್ ಸಿ ಹೊಂದಿದ್ದು,
ಅಹ್ಮದಾಬಾದ್: 2023 ರ ಏಕದಿನ ವಿಶ್ವಕಪ್ ಫೈನಲ್ ದುರಾದೃಷ್ಟ ಮರುಕಳಿಸುವುದು ಬೇಡವೆಂದು ಟೀಂ ಇಂಡಿಯಾ ಕೈಗೊಂಡಿರುವ ನಿರ್ಧಾರ ಶಾಕಿಂಗ್ ಆಗಿದೆ. 2023 ರಲ್ಲಿ ಅಹ್ಮದಾಬಾದ್ ನಲ್ಲಿ ಏಕದಿನ ವಿಶ್ವಕಪ್ ಫೈನಲ್ ಪಂದ್ಯ ನಡೆದಿತ್ತು. ಆ ಕೂಟದಲ್ಲಿ ಅದುವರೆಗೂ ಗೆಲ್ಲುತ್ತಲೇ ಬಂದಿದ್ದ ಟೀಂ ಇಂಡಿಯಾ ಫೈನಲ್ ನಲ್ಲಿ ಎಡವಿತ್ತು. ಇದಾದ ಬಳಿಕ ಅಹ್ಮದಾಬಾದ್ ಮೈದಾನದಲ್ಲಿ ಮತ್ತೆ ಗೆಲ್ಲಬೇಕು ಎಂಬುದು ಟೀಂ ಇಂಡಿಯಾ ಕನಸಾಗಿದೆ. ಈ ಹಿಂದೆ ಸೂರ್ಯಕುಮಾರ್ ಯಾದವ್ ಕೂಡಾ ಇದೇ ಮಾತು ಹೇಳಿದ್ದರು. ಅದೇ ಅಹ್ಮದಾಬಾದ್ ಮೈದಾನದಲ್ಲಿ ವಿಶ್ವಕಪ್ ಟ್ರೋಫಿ ಎತ್ತಿ ಹಿಡಿಯಬೇಕು ಎಂಬುದು ನಮ್ಮ ಗುರಿ ಎಂದಿದ್ದರು.
ದುಬೈ: ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ತಣ್ಣಗಾಗುವ ಲಕ್ಷಣಗಳು ಕಾಣಿಸುತ್ತಿಲ್ಲ. ಅಮೆರಿಕದ ಮೇಲೆ ಕೋಪಗೊಂಡಿರುವ ಇರಾನ್ ತಮ್ಮ ಸುತ್ತಮುತ್ತಲಿನ ದೇಶಗಳಲ್ಲಿರುವ ಅಮೆರಿಕದ ನೆಲೆಗಳ ಮೇಲೆ ದಾಳಿ ಮುಂದುವರಿಸಿದೆ. ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿರುವ ವಿಶ್ವದ ಎರಡನೇ ಅತ್ಯಂತ ಜನನಿಬಿಡ ದುಬೈ ವಿಮಾನ ನಿಲ್ದಾಣದ ಮೇಲೆಯೇ ಇರಾನ್ ಡ್ರೋನ್ ದಾಳಿ ನಡೆಸಿದೆ. ಡ್ರೋನ್ ದಾಳಿಯ ಬೆನ್ನಲ್ಲೇ ದುಬೈ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಾಟವನ್ನು ಸಂಪೂರ್ಣ ಸ್ಥಗಿತಗೊಳಿಸಲಾಗಿದೆ. ಇರಾನಿಗೆ ಅಮೆರಿಕದ ಮೇಲೆ ನೇರವಾಗಿ ದಾಳಿ ನಡೆಸಲು ಸಾಧ್ಯವಿಲ್ಲ. ಹೀಗಾಗಿ ಮಧ್ಯಪ್ರಾಚ್ಯದಲ್ಲಿರುವ ಅಮೆರಿಕದ ನೆಲೆಗಳಿರುವ ದೇಶಗಳ ಮೇಲೆ ಇರಾನ್ ದಾಳಿ ನಡೆಸುತ್ತಿದೆ. ನಿಮ್ಮ ನೆಲೆಗಳನ್ನು ಬಳಸಿ ನಮ್ಮ ಮೇಲೆ ಅಮೆರಿಕ ದಾಳಿ ನಡೆಸುತ್ತಿದೆ.
ಅಹಮದಾಬಾದ್: ಟಿ20 ವಿಶ್ವಕಪ್ನಲ್ಲಿ ನಾಳೆ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಭಾರತ ತಂಡವು ದಾಖಲೆಯ ನಾಲ್ಕನೇ ಬಾರಿ ಪ್ರಶಸ್ತಿ ಸುತ್ತಿಗೆ ಲಗ್ಗೆ ಹಾಕಿದ್ದು, ಮೂರನೇ ಬಾರಿ ಪ್ರಶಸ್ತಿ ಜಯಸುವ ಉತ್ಸಾಹದಲ್ಲಿದೆ. ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುವ ಈ ಪಂದ್ಯಕ್ಕೆ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಪಂದ್ಯದ ಅಧಿಕಾರಿಗಳನ್ನು ದೃಢಪಡಿಸಿದೆ. ಮಾರ್ಚ್ 8ರಂದು ಫೈನಲ್ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಆನ್-ಫೀಲ್ಡ್ ಅಂಪೈರ್ಗಳಾಗಿ ರಿಚರ್ಡ್ ಇಲ್ಲಿಂಗ್ವರ್ತ್ ಮತ್ತು ಅಲೆಕ್ಸ್ ವಾರ್ಫ್ ಅವರು ಹೈ-ಆಕ್ಟೇನ್ ಸೇವೆ ಸಲ್ಲಿಸಲಿದ್ದಾರೆ.ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 2024 ರ ಆವೃತ್ತಿಯ ಫೈನಲ್ನಲ್ಲಿ ಕ್ರಿಸ್ ಗಫಾನಿ ಅವರೊಂದಿಗೆ ಕಾರ್ಯನಿರ್ವಹಿಸಿದ್ದ ಇಲ್ಲಿಂಗ್ವರ್ತ್ಗೆ ಇದು ಸತತ ಎರಡನೇ ಟಿ20 ವಿಶ್ವಕಪ್ ಫೈನಲ್ ಆಗಿದೆ.
ಟೆಹ್ರಾನ್: ಅಮೆರಿಕಾ ಮತ್ತು ಇಸ್ರೇಲ್ ಮೇಲಿನ ಕೋಪಕ್ಕೆ ನೆರೆ ರಾಷ್ಟ್ರಗಳ ಮೇಲೆ ದಾಳಿ ನಡೆಸಿದ್ದ ಇರಾನ್ ಈಗ ಉಲ್ಟಾ ಹೊಡೆದಿದೆ. ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ನೆರೆಯ ರಾಷ್ಟ್ರಗಳ ಮುಂದೆ ಮಂಡಿಯೂರಿದ್ದಾರೆ.ಇರಾನ್- ಇಸ್ರೇಲ್, ಅಮೆರಿಕ ಸಂಘರ್ಷ ಮುಂದುವರೆದಿರುವಂತೆಯೇ ಅಚ್ಚರಿ ಬೆಳವಣಿಗೆ ನಡೆದಿದೆ. ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ನೆರೆಯ ರಾಷ್ಟ್ರಗಳಿಗೆ ಕ್ಷಮೆಯಾಚಿಸಿದ್ದಾರೆ.ತಮ್ಮ ಮೇಲಿನ ದಾಳಿ ಮತ್ತು ತಮ್ಮ ಸರ್ವೋಚ್ಛ ನಾಯಕ ಆಯತೊಲ್ಲ ಅಲಿ ಖಮೇನಿ ವಿಚಾರವಾಗಿ ಕೆಂಡಾಮಂಡಲವಾಗಿರುವ ಇರಾನ್, ಇದೀಗಅಚ್ಚರಿ ಬೆಳವಣಿಗೆಯಲ್ಲಿ ತನ್ನ ನೆರೆಹೊರೆ ರಾಷ್ಟ್ರಗಳ ಕ್ಷಮೆಕೋರಿದೆ.ನೆರೆಹೊರೆಯ ರಾಷ್ಟ್ರಗಳಿಗೆ ಸಂದೇಶ ಕಳುಹಿಸಿ, ಕ್ಷಮಿಸಿ ಎಂದು ಮಸೌದ್ ಪೆಜೆಶ್ಕಿಯಾನ್ ಹೇಳಿದ್ದು,ಆ ಮೂಲಕ ಅಮೆರಿಕ-ಇಸ್ರೇಲ್ ಜೊತೆಗಿನ ಯುದ್ಧದ ಮಧ್ಯೆ ಉದ್ವಿಗ್ನತೆಯನ್ನು ಶಮನಗೊಳಿಸಲು ಮೊದಲ ಪ್ರಮುಖ ಹೆಜ್ಜೆ ಇಟ್ಟಿದೆ.
ಬೆಂಗಳೂರು: ದೇಶದಾದ್ಯಂತ ಗೃಹ ಬಳಕೆ ಸಿಲಿಂಡರ್ ಬೆಲೆ 60 ರೂ. ಏರಿಕೆಯಾಗುತ್ತಿದ್ದಂತೇ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ಘಟಕ ಇಂದು ವಿಶಿಷ್ಟ ಪ್ರತಿಭಟನೆ ಮಾಡಿದೆ. ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಯುದ್ಧದ ಬಿಸಿ ಭಾರತಕ್ಕೂ ತಟ್ಟಿದೆ. ಸಹಜವಾಗಿಯೇ ಭಾರತದಲ್ಲಿ ಈಗ ಎಲ್ ಪಿಜಿ ದರ ಏರಿಕೆಯಾಗಿದೆ. ಇಂದು ವಾಣಿಜ್ಯ ಮತ್ತು ಗೃಹ ಬಳಕೆ ಸಿಲಿಂಡರ್ ಬೆಲೆ ಏರಿಕೆಯಾಗಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಸಿಲಿಂಡರ್ ಹೊತ್ತು ಪ್ರತಿಭಟನೆ ಮಾಡಿದೆ. ಈಗಾಗಲೇ ದುಬಾರಿ ಬೆಲೆಯಿಂದ ಸಂಕಷ್ಟದಲ್ಲಿರುವ ಸಾಮಾನ್ಯ ಜನತೆಗೆ ಈ ನಿರ್ಧಾರ ದೊಡ್ಡ ಹೊಡೆತವಾಗಿದೆ.
ಮೈಸೂರು: ದಾಖಲೆಯ 17 ನೇ ಬಜೆಟ್ ಮಂಡನೆ ಬೆನ್ನಲ್ಲೇ ಸಿಎಂ ಬದಲಾವಣೆ ಬಗ್ಗೆ ಸಿದ್ದರಾಮಯ್ಯ ಮಹತ್ವದ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ನಿನ್ನೆ 17 ನೇ ಬಜೆಟ್ ಮಂಡಿಸಿದ್ದರು. ಈ ಸಾಲಿನ ಬಜೆಟ್ ಮಂಡಿಸಿದ ಬೆನ್ನಲ್ಲೇ ಇಂದು ಮೈಸೂರಿಗೆ ಭೇಟಿ ನೀಡಿದ್ದರು. ಈ ವೇಳೆ ಪತ್ರಕರ್ತರು ಸಿಎಂ ಆಗಿ ಮುಂದುವರಿಯುವ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಉತ್ತರಿಸಿದ ಅವರು ಎಲ್ಲವೂ ಹೈಕಮಾಂಡ್ ತೀರ್ಮಾನ ಎಂದಿದ್ದಾರೆ. ‘ನನಗೆ ಹೈಕಮಾಂಡ್ ಮೇಲೆ ಸಂಪೂರ್ಣ ವಿಶ್ವಾಸವಿದೆ. ಸಿಎಂ ಆಗಿ ಮುಂದುವರಿಯಿರಿ ಎಂದರೆ ಮುಂದುವರಿಯುತ್ತೇನೆ. ಎಲ್ಲವೂ ಹೈಕಮಾಂಡ್ ಗೆ ಬಿಟ್ಟ ವಿಚಾರ.
ಬೆನ್ನು ನೋವಿನ ಸಮಸ್ಯೆ ಇರುವವರು ಬೆಡ್ ಬಿಟ್ಟು ನೆಲದ ಮೇಲೆ ಮಲಗಬಹುದೇ? ಹೀಗೊಂದು ಅನುಮಾನ ಅನೇಕರಲ್ಲಿರುತ್ತದೆ. ಅದಕ್ಕೆ ಇಲ್ಲಿದೆ ಉತ್ತರ. ಬೆನ್ನು ನೋವು ಎನ್ನುವುದು ಇತ್ತೀಚೆಗೆ ಪ್ರತಿಯೊಬ್ಬರ ಸಮಸ್ಯೆಯಾಗಿದೆ. ಬಹುತೇಕ ಜೀವನ ಶೈಲಿ, ನಾವು ಮಾಡುವ ಕೆಲಸಗಳೇ ಇದಕ್ಕೆ ಕಾರಣವಾಗುತ್ತಿದೆ. ಅತಿಯಾದ ಬೆನ್ನು ನೋವಿದ್ದಾಗ ನಾವು ಮಲಗುವ ಭಂಗಿಯನ್ನೂ ಬದಲಾಯಿಸಿಕೊಳ್ಳಬೇಕಾಗುತ್ತದೆ. ವಿಶೇಷವಾಗಿ ಬೆನ್ನು ನೋವು ಇರುವವರು ಮಂಚದ ಮೇಲೆ ಮಲಗುವ ಬದಲು ನೆಲದ ಮೇಲೆ ಚಾಪೆ ಹಾಸಿಕೊಂಡು ಮಲಗಬಹುದು. ಗಟ್ಟಿ ನೆಲ ಬೆನ್ನಿಗೆ ಮತ್ತಷ್ಟು ಬಲ ನೀಡುತ್ತದೆ. ಅಲ್ಲದೆ, ಫ್ಲ್ಯಾಟ್ ನೆಲದಲ್ಲಿ ಮಲಗುವುದರಿಂದ ಬೆನ್ನು ಬಾಗುವ ಪ್ರಸಂಗವೂ ಇಲ್ಲ.
ಬೆಂಗಳೂರು: ಅಡಿಕೆ ಬೆಲೆ ಕಳೆದ ವಾರ ಏರಿಕೆ-ಇಳಿಕೆಯಾಗಿತ್ತು. ವಾರದ ಆರಂಭದಲ್ಲೇ ಅಡಿಕೆ ಬೆಲೆ ಕೊಂಚ ಇಳಿಕೆಯಾಗಿತ್ತು. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ. ಕಳೆದ ವಾರ ಅಡಿಕೆ ಬೆಲೆಯಲ್ಲಿ ಕೊಂಚ ಏರಿಕೆಯಾಗಿತ್ತು. ಇದು ಬೆಳೆಗಾರರಿಗೆ ಸಮಾಧಾನ ತಂದಿತ್ತು. ಆದರೆ ಕಳೆದ ಕೆಲವು ದಿನಗಳಿಂದ ಸತತವಾಗಿ ಬೆಲೆ ಇಳಿಕೆ ಕಂಡುಬರುತ್ತಿದೆ. ನಿನ್ನೆ ಕೆಲವು ವರ್ಗದ ಅಡಿಕೆ ಬೆಲೆಯಲ್ಲಿ ಇಳಿಕೆಯಾಗಿದ್ದರೆ ಮತ್ತೆ ಇಂದು ಯಥಾಸ್ಥಿತಿಯಲ್ಲಿದೆ. ಇಂದು ಹೊಸ ಅಡಿಕೆ ಬೆಲೆ ಯಥಾಸ್ಥಿತಿಯ್ಲಿದ್ದು 470 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ ಯಥಾಸ್ಥಿತಿಯಲ್ಲಿದ್ದು 530 ರೂ. ಗಳಾಗಿದೆ. ಡಬಲ್ ಚೋಲ್ ಬೆಲೆಯೂ ಯಥಾಸ್ಥಿತಿಯಲ್ಲಿದ್ದು 530 ರೂ.ಗಳಷ್ಟಾಗಿದೆ.
ರಾಂಚಿ: ಟೀಂ ಇಂಡಿಯಾ ಕ್ರಿಕೆಟಿಗರು ಹೆಸರು ಕೀರ್ತಿ ಬಂದ ಮೇಲೆ ತಮ್ಮ ತವರು ಬಿಟ್ಟು ಮುಂಬೈಯಲ್ಲಿ ಸೆಟಲ್ ಆಗುತ್ತಾರೆ. ಆದರೆ ಮಹೇಂದ್ರ ಸಿಂಗ್ ಧೋನಿ ಮಾತ್ರ ಅಂದೂ ಇಂದೂ ಯಾವತ್ತೂ ರಾಂಚಿಯಲ್ಲೇ ಇದ್ದಾರೆ. ಇದಕ್ಕೆ ಕಾರಣವೇನು ಎಂದು ಅವರು ಸಂದರ್ಶನವೊಂದರಲ್ಲಿ ಹೇಳಿದ್ದು, ಮಹಿ ನೋಡಿ ಕಲಿಯಿರಿ ಎಂದು ಕೆಲವರು ವಿರಾಟ್ ಕೊಹ್ಲಿಗೆ ಟಾಂಗ್ ಕೊಟ್ಟಿದ್ದಾರೆ. ಸಂದರ್ಶನವೊಂದರಲ್ಲಿ ಧೋನಿಗೆ ನೀವು ಯಾಕೆ ರಾಂಚಿಯಿಂದ ಬೇರೆ ಊರಿಗೆ ಶಿಫ್ಟ್ ಆಗಿಲ್ಲ ಎಂದು ಪ್ರಶ್ನೆ ಕೇಳಲಾಯಿತು. ಇದಕ್ಕೆ ಉತ್ತರಿಸಿದ ಅವರು ‘ನನಗೆ ರಾಂಚಿ ತುಂಬಾ ಇಷ್ಟ. ನನಗೆ ಇಲ್ಲಿ ಬಾಲ್ಯದಿಂದ ಸಾಕಷ್ಟು ನೆನಪುಗಳಿವೆ. ನನಗೆ ಈ ನಗರ ತುಂಬಾ ಪರಿಚಯ.
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಇಳಿಕೆಯಾಗಿದ್ದರೆ ಮತ್ತುಇತರೆ ಚಿನ್ನದ ದರ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತವಾಗಿ ಬೆಲೆ ಏರಿಳಿಕೆಯಾಗುತ್ತಲೇ ಇತ್ತು. ಆದರೆ ಈ ವಾರದ ಆರಂಭದಲ್ಲೇ ಪರಿಶುದ್ಧ ಚಿನ್ನದ ದರ ಭಾರೀ ಏರಿಕೆಯಾಗಿತ್ತು. ಪರಿಶುದ್ಧ ಚಿನ್ನದ ದರ ನಿನ್ನೆ 1,65,620.00 ರೂ.ಗಳಿತ್ತು. ಆದರೆ ಇಂದು ಇಳಿಕೆಯಾಗಿದ್ದು 1,63,955.00 ರೂ.ಗಳಷ್ಟಿದೆ.
ಎಲ್ಲಾ ಸರಿ ಹೋಗಿದ್ದರೆ ಇದು ಬೆಂಗಳೂರಿನ ಎರಡನೇ ಲಾಲ್ ಭಾಗ್ ಆಗಬೇಕಿತ್ತು. ಆದರೆ ಸರಿಯಾದ ನಿರ್ವಹಣೆಯಿಲ್ಲದೇ ಮತ್ತಿಕೆರೆ ಬಳಿ ಜೆಪಿ ಪಾರ್ಕ್ ಪಾಳುಬಿದ್ದಂತಾಗಿದೆ. ಬೆಂಗಳೂರಿನಲ್ಲಿ ಜನ ವೀಕೆಂಡ್ ನಲ್ಲಿ ಫ್ಯಾಮಿಲಿ ಸಮೇತ ಸ್ವಲ್ಪ ಹೊತ್ತು ಪರಿಸರದ ಮಧ್ಯೆ ಕಳೆಯೋಣವೆಂದರೆ ಲಾಲ್ ಭಾಗ್ ಅಥವಾ ಕಬ್ಬನ್ ಪಾರ್ಕ್ ಕಡೆ ಹೋಗುತ್ತಾರೆ. ಆದರೆ ಬೆಂಗಳೂರು ಉತ್ತರ ಭಾಗದ ಜನರಿಗೆ ಈ ಎರಡು ಜಾಗಗಳು ಸ್ವಲ್ಪ ದೂರವೇ. ಆದರೆ ಮತ್ತಿಕೆರೆ ಬಳಿಕ ಜಯಪ್ರಕಾಶ ನಾರಾಯಣ ಪಾರ್ಕ್ ಸಾಕಷ್ಟು ವಿಶಾಲವಾಗಿದ್ದು ಲಾಲ್ ಭಾಗ್ ಗೇ ಪೈಪೋಟಿ ನೀಡುವಂತಿದೆ.
ಅಹ್ಮದಾಬಾದ್: ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ನಾಳೆ ಅಹ್ಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಫೈನಲ್ ಗೆಲ್ಲಲು ಭಾರತ ಅಥವಾ ನ್ಯೂಜಿಲೆಂಡ್ ಗೆ ಇದೊಂದು ವಿಚಾರ ಪ್ರಮುಖವಾಗಿದೆ. ಸೆಮಿಫೈನಲ್ ನಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸಿ ನ್ಯೂಜಿಲೆಂಡ್ ಮೊದಲ ತಂಡವಾಗಿ ಫೈನಲ್ ಪ್ರವೇಶಿಸಿತ್ತು. ಎರಡನೇ ಸೆಮಿಫೈನಲ್ ನಲ್ಲಿ ಇಂಗ್ಲೆಂಡ್ ಸೋಲಿಸಿ ಟೀಂ ಇಂಡಿಯಾ ಫೈನಲ್ ಗೆ ಪ್ರವೇಶ ಪಡೆದಿದೆ. ಸತತ ಎರಡನೇ ಬಾರಿಗೆ ಟಿ20 ವಿಶ್ವಕಪ್ ಫೈನಲ್ ಗೇರಿರುವುದು ಭಾರತದ ಹೆಗ್ಗಳಿಕೆ.
ಬೆಂಗಳೂರು: ಯೋಗ ಮಾಡುವ ಸ್ಥಳಕ್ಕೆ ಸಾಕು ನಾಯಿ ಕರೆತಂದು ನಿವಾಸಿಯೊಬ್ಬ ಮಲ ಮೂತ್ರ ಮಾಡಿಸಿದ್ದಕ್ಕೆ ಸಿಟ್ಟಿಗೆದ್ದ ಹಿರಿಯ ನಾಗರಿಕರು ಸಿನಿಮಾ ಸ್ಟೈಲ್ ನಲ್ಲಿ ಹೊಡೆದಾಡಿಕೊಂಡ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಬೆಂಗಳೂರಿನಲ್ಲಿ ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯ ಅಪಾರ್ಟ್ ಮೆಂಟ್ ಒಂದರಲ್ಲಿ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ನಾಯಿ ವಿಚಾರಕ್ಕೆ ಹೊಡೆದಾಟ-ಬಡಿದಾಟವಾಗುವುದು ಇತ್ತೀಚೆಗಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಇದೇ ರೀತಿ ವರ್ತೂರಿನ ಬ್ರಿಗೇಡ್ ಯುಟೋಪಿಯಾದಲ್ಲಿ ಯೋಗ ಮಾಡುವ ಸ್ಥಳಕ್ಕೆ ವ್ಯಕ್ತಿಯೊಬ್ಬ ತನ್ನ ಸಾಕು ನಾಯಿಯನ್ನು ಕರೆತಂದು ಮಲ ಮೂತ್ರ ಮಾಡಿಸುತ್ತಿದ್ದ.
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಜೊತೆಗೆ ಈಗ ರಾಧಿಕಾ ಪಂಡಿತ್ ಕೂಡಾ ಈಗ ಸಖತ್ ಸ್ಟೈಲಿಶ್ ಆಗಿದ್ದಾರೆ. ಇಂದು ರಾಧಿಕಾ ಜನ್ಮದಿನವಾಗಿದ್ದು ಪತ್ನಿ ಜನ್ಮದಿನಕ್ಕೆ ರಾಕಿಂಗ್ ಜೋಡಿ ಎಲ್ಲಿದ್ದಾರೆ ಇಲ್ಲಿದೆ ವಿವರ. ಟಾಕ್ಸಿಕ್ ಸಿನಿಮಾ ರಿಲೀಸ್ ಮುಂದೂಡಿಕೆ ಆದ ಬಳಿಕ ಯಶ್ ಇದೇ ಮೊದಲ ಬಾರಿಗೆ ರಾಧಿಕಾ ಜೊತೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಅವರ ಉದ್ದ ಕೂದಲಿಗೆ ಈಗ ಕತ್ತರಿಬಿದ್ದಿದೆ. ದಾಡಿಗೂ ಚಿಕ್ಕದಾಗಿ ಸ್ಮಾರ್ಟ್ ಆಗಿದ್ದಾರೆ. ಪತ್ನಿ ರಾಧಿಕಾ ಪಂಡಿತ್ ಕೈ ಹಿಡಿದುಕೊಂಡು ಯಶ್ ಮುಂಬೈನಲ್ಲಿ ಕಾಣಿಸಿಕೊಂಡಿದ್ದಾರೆ. ವಿಶೇಷವೆಂದರೆ ರಾಧಿಕಾ ಕೂಡಾ ಸಖತ್ ಸ್ಟೈಲಿಶ್ ಆಗಿದ್ದಾರೆ.
ನವದೆಹಲಿ: ಯುದ್ಧದ ಪರಿಣಾಮ ನಿಮ್ಮ ಅಡುಗೆ ಮನೆಗೂ ಬಂತು. ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ನಡುವಿನ ಯುದ್ಧದ ಪರಿಣಾಮ ಈಗ ಭಾರತಕ್ಕೂ ತಗುಲಿದೆ. ಎಲ್ ಪಿಜಿ ಸಿಲಿಂಡರ್ ಬೆಲೆ ಏರಿಕೆಯಾಗಿದೆ. ಇಸ್ರೇಲ್-ಅಮೆರಿಕಾ ಬೆಂಬಲಿಸುತ್ತಿರುವ ಗಲ್ಫ್ ರಾಷ್ಟ್ರಗಳ ಮೇಲೂ ಇರಾನ್ ದಾಳಿ ನಡೆಸುತ್ತಿದೆ. ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಈ ಉದ್ವಿಗ್ನ ಪರಿಸ್ಥಿತಿಯಿಂದ 14.2 ಕಿ.ಗ್ರಾಂ ತೂಕದ ಗೃಹ ಬಳಕೆಯ ಸಿಲಿಂಡರ್ ಬೆಲೆ 60 ರೂ.ಗಳಷ್ಟು ಏರಿಕೆಯಾಗಿದೆ. ದೆಹಲಿಯಲ್ಲಿ ಸಿಲಿಂಡರ್ ಬೆಲೆ 853 ರೂ.ಗಳಿಂದ 913 ರೂ.ಗೆ ಏರಿಕೆಯಾಗಿದೆ.
ಕೊಲ್ಲಂ: ಕೇರಳದಲ್ಲಿ ಶಿವಗಿರಿ ಮಠದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ದೀಪ ಬೆಳಗಲು ಹೊರಟಾಗ ಕೆಸಿ ವೇಣುಗೋಪಾಲ್ ಚಪ್ಪಲಿ ತೆಗೆಯಲು ಸೂಚಿಸಿದ ವಿಡಿಯೋ ವೈರಲ್ ಆಗಿದೆ. ಕೇರಳದಲ್ಲಿ ನಿನ್ನೆ ಶಿವಗಿರಿ ಮಠಕ್ಕೆ ಮಹಾತ್ಮಾ ಗಾಂಧೀಜಿ ಭೇಟಿ ನೀಡಿ 100 ವರ್ಷಗಳಾದ ಹಿನ್ನಲೆಯಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ ಮುಖ್ಯ ಅತಿಥಿಯಾಗಿ ಹೋಗಿದ್ದರು. ವೇದಿಕೆಯಲ್ಲಿ ಸಾಕಷ್ಟು ಸ್ವಾಮೀಜಿಗಳು, ಗಣ್ಯರೂ ಇದ್ದರು. ಕಾರ್ಯಕ್ರಮದ ಉದ್ಘಾಟನೆ ವೇಳೆ ದೀಪ ಬೆಳಗುವ ಕಾರ್ಯಕ್ರಮವಿತ್ತು. ರಾಹುಲ್ ಗಾಂಧಿಗೆ ದೀಪ ಬೆಳಗಲು ಕ್ಯಾಂಡಲ್ ನೀಡಿದಾಗ ಅವರು ಚಪ್ಪಲಿ ಧರಿಸಿದ್ದರು.
ಬೆಂಗಳೂರು: ರಾಜ್ಯದಲ್ಲಿ ಈಗ ಬಿರು ಬಿಸಿಲು ಜನರನ್ನು ಹೈರಾಣಾಗಿಸಿದೆ. ಈ ವಾರಂತ್ಯಕ್ಕೆ ರಾಜ್ಯದಲ್ಲಿ ಮಳೆ ಸೂಚನೆಯಿದೆಯೇ, ಹೇಗಿರಲಿದೆ ಹವಾಮಾನ ಇಲ್ಲಿದೆ ವರದಿ. ರಾಜ್ಯದಲ್ಲಿ ಪ್ರಸ್ತುತ ತಾಪಮಾನ ದಿನೇ ದಿನೇ ಏರಿಕೆಯಾಗುತ್ತಿದ್ದು ಹೊರಗೆ ಕಾಲಿಡಲಾಗದಷ್ಟು ಬಿಸಿಲಿನ ವಾತಾವರಣವಿದೆ. ಬೆಳಿಗ್ಗೆ 10 ರಿಂದ ಸಂಜೆ 3 ರವರೆಗೆ ಹೊರಗೆ ಕಾಲಿಡದಿರುವುದೇ ಸೂಕ್ತ ಎನ್ನುವಂತಹ ವಾತಾವರಣವಿದೆ. ಈ ವಾರ ಎಲ್ಲೂ ಮಳೆಯಾಗಿರಲಿಲ್ಲ. ವಾರಂತ್ಯದಲ್ಲೂ ಯಾವುದೇ ಜಿಲ್ಲೆಗೆ ಮಳೆಯ ಸೂಚನೆಯಿಲ್ಲ. ಬದಲಾಗಿ ಈ ವಾರಂತ್ಯಕ್ಕೆ ಮತ್ತಷ್ಟು ಬಿಸಿಲು ಕಂಡುಬರಲಿದೆ.
ವಿವಾಹ, ಸಂತಾನ, ನಾಗದೋಷ ಸಮಸ್ಯೆಯಿದ್ದಲ್ಲಿ ಸುಬ್ರಹ್ಮಣ್ಯನ ಪೂಜೆ ಮಾಡುವುದು ಅವಶ್ಯಕ. ಸುಬ್ರಹ್ಮಣ್ಯನ ಅನುಗ್ರಹಕ್ಕಾಗಿ ಕಾರ್ತಿಕೇಯ ಕರಾವಲಂಬ ಸ್ತೋತ್ರವನ್ನು ಓದಿ. ಕನ್ನಡದಲ್ಲಿ ಇಲ್ಲಿದೆ.ಸಿಂಗಾರ ವೇಲ ಸಕಲೇಶ್ವರ ದೀನಬಂಧೋ ।ಸಂತಾಪನಾಶನ ಸನಾತನ ಶಕ್ತಿಹಸ್ತಶ್ರೀಕಾರ್ತಿಕೇಯ ಮಮ ದೇಹಿ ಕರಾವಲಂಬಮ್ ॥ 1 ಪಂಚಾದ್ರಿವಾಸ ಸಹಜಾ ಸುರಸೈನ್ಯನಾಥಪಂಚಾಮೃತಪ್ರಿಯ ಗುಹ ಸಕಲಾಧಿವಾಸ ।ಗಂಗೇಂದು ಮೌಳಿ ತನಯ ಮಯಿಲ್ವಾಹನಸ್ಥಶ್ರೀಕಾರ್ತಿಕೇಯ ಮಮ ದೇಹಿ ಕರಾವಲಂಬಮ್ ॥ 2 ಆಪದ್ವಿನಾಶಕ ಕುಮಾರಕ ಚಾರುಮೂರ್ತೇತಾಪತ್ರಯಾಂತಕ ದಾಯಾಪರ ತಾರಕಾರೇ ।ಆರ್ತಾಽಭಯಪ್ರದ ಗುಣತ್ರಯ ಭವ್ಯರಾಶೇಶ್ರೀಕಾರ್ತಿಕೇಯ ಮಮ ದೇಹಿ ಕರಾವಲಂಬಮ್ ॥ 3 ವಲ್ಲೀಪತೇ ಸುಕೃತದಾಯಕ ಪುಣ್ಯಮೂರ್ತೇಸ್ವರ್ಲೋಕನಾಥ ಪರಿಸೇವಿತ ಶಂಭು ಸೂನೋ ।ತ್ರೈಲೋಕ್ಯನಾಯಕ ಷಡಾನನ ಭೂತಪಾದಶ್ರೀಕಾರ್ತಿಕೇಯ ಮಮ ದೇಹಿ ಕರಾವಲಂಬಮ್ ॥ 4
ಮುಂಬೈ: ಟಿ20 ವಿಶ್ವಕಪ್ ಟೂರ್ನಿಯಲ್ಲಿ ಫೈನಲ್ ತಲುಪುವ ಮೂಲಕ ಭಾರತ ಕ್ರಿಕೆಟ್ ತಂಡವು ಐಸಿಸಿ ಟೂರ್ನಿಗಳಲ್ಲಿ ಹಲವು ಮೈಲಿಗಲ್ಲುಗಳನ್ನು ಸ್ಥಾಪಿಸಿದೆ.ಟಿ20 ವಿಶ್ವಕಪ್ ಟೂರ್ನಿಯಲ್ಲಿ ನಾಲ್ಕನೇ ಬಾರಿ ಪ್ರಶಸ್ತಿ ಸುತ್ತಿಗೆ ಲಗ್ಗೆ ಇಟ್ಟಿರುವ ಭಾರತ ತಂಡವು ಭಾನುವಾರ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ.ಭಾರತ ತಂಡವು ಈ ಹಿಂದೆ 2007, 2014 ಹಾಗೂ 2024ರಲ್ಲಿ ಫೈನಲ್ಗೆ ತಲುಪಿತ್ತು. ಈ ತನಕ ಯಾವ ತಂಡ ಕೂಡ ಈ