ಬೆಂಗಳೂರು: ಇಂದು ಗೋಲ್ಡನ್ ಸ್ಟಾರ್ ಗಣೇಶ್ ಜನ್ಮದಿನವಾಗಿದ್ದು ತಮ್ಮದೇಶ ಶೈಲಿಯ ಸಿನಿಮಾ ಮೂಲಕ ಫ್ಯಾಮಿಲಿ ಪ್ರೇಕ್ಷಕರಿಗೆ ಹತ್ತಿರವಾಗಿರುವ ನಟ 46 ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ. ಪುನೀತ್ ರಾಜ್ ಕುಮಾರ್ ಮಾಡಿದ ಒಂದು ತ್ಯಾಗದಿಂದ ಗಣೇಶ್ ಸ್ಟಾರ್ ಆಗಿ ಮಿಂಚಲು ಸಾಧ್ಯವಾಯಿತು. ಗೋಲ್ಡನ್ ಸ್ಟಾರ್ ಗಣೇಶ್ ಚಿತ್ರರಂಗದಲ್ಲಿ ಸಣ್ಣ ಪುಟ್ಟ ಪಾತ್ರ ಮಾಡುತ್ತಾ ಅವಕಾಶ ಗಿಟ್ಟಿಸಿಕೊಂಡವರು. ಬಳಿಕ ಚೆಲ್ಲಾಟ ಸಿನಿಮಾ ಅವರ ವೃತ್ತಿ ಜೀವನಕ್ಕೆ ಒಂದು ತಿರುವು ನೀಡಿತು. ಈ ಸಿನಿಮಾ ಕ್ಲಿಕ್ ಆಗುವುದರ ಮೂಲಕ ಗಣೇಶ್ ಒಂದಷ್ಟು ಹೆಸರು ಮಾಡಿದರು.
ಎಜ್ ಬಾಸ್ಟನ್: ಭಾರತ ಮತ್ತು ಇಂಗ್ಲೆಂಡ್ ನಡುವೆ ಇಂದಿನಿಂದ ದ್ವಿತೀಯ ಟೆಸ್ಟ್ ಪಂದ್ಯ ಆರಂಭವಾಗಲಿದ್ದು, ಈ ಪಂದ್ಯ ನಡೆಯಲಿರುವ ಎಜ್ ಬಾಸ್ಟನ್ ಮೈದಾನದ ಪಿಚ್ ಯಾರಿಗೆ ಸಹಕಾರಿಯಾಗಲಿದೆ ಇಲ್ಲಿದೆ ವಿಶ್ಲೇಷಣೆ. ಮೊದಲ ಟೆಸ್ಟ್ ಪಂದ್ಯದಲ್ಲಿ ಗೆಲ್ಲುವ ಎಲ್ಲಾ ಅವಕಾಶಗಳಿದ್ದೂ ಟೀಂ ಇಂಡಿಯಾ ತನ್ನ ಸ್ವಯಂಕೃತ ಅಪರಾಧಗಳಿಂದ ಸೋತಿತು. ಆ ಪಂದ್ಯದಲ್ಲಿ ಟೀಂ ಇಂಡಿಯಾಗೆ ಕಾಡಿದ್ದು ಫೀಲ್ಡಿಂಗ್ ಮತ್ತು ಕೆಳ ಕ್ರಮಾಂಕದ ಬ್ಯಾಟಿಂಗ್ ವೈಫಲ್ಯ. ಈ ಪಂದ್ಯದಲ್ಲಿ ಮತ್ತೆ ಆ ಸಮಸ್ಯೆಯಾಗದಂತೆ ಕೋಚ್ ಗಂಭೀರ್ ಕೆಳ ಕ್ರಮಾಂಕದ ಬ್ಯಾಟಿಗರಿಗೆ ಕಠಿಣ ಅಭ್ಯಾಸ ನಡೆಸಲು ಸೂಚಿಸಿದ್ದರು.
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಮುಂದುವರಿದಿದೆ. ಇಂದಂತೂ ಈ ಎರಡು ಜಿಲ್ಲೆಗಳಿಗೆ ಭಾರೀ ಮಳೆಯಾಗಲಿದೆ. ಯಾವೆಲ್ಲಾ ಜಿಲ್ಲೆಗಳಿಗೆ ಇಂದು ಅಧಿಕ ಮಳೆ, ಎಲ್ಲಿ ಮೋಡ ಕವಿದ ವಾತಾವರಣವಿರಲಿದೆ ಇಲ್ಲಿದೆ ಲೇಟೆಸ್ಟ್ ಹವಾಮಾನ ವರದಿ. ಈ ಬಾರಿ ರಾಜ್ಯದಲ್ಲಿ ಅತೀ ಹೆಚ್ಚು ಮಳೆಯಾಗುತ್ತಿರುವುದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ. ದಕ್ಷಿಣ ಕನ್ನಡ ಜಿಲ್ಲೆಯಲ್ಲಂತೂ ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಲೇ ಇದೆ. ಇಂದೂ ಈ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ಹೇಳಿವೆ.
ಬುಧ ಗ್ರಹನ ಕುರಿತಾಗಿರುವ ಬುಧ ಕವಚಂ ಸ್ತೋತ್ರವನ್ನು ವಿದ್ಯಾರ್ಥಿಗಳು ತಪ್ಪದೇ ಓದಬೇಕು. ಯಾಕೆಂದರೆ ಈ ಸ್ತೋತ್ರವನ್ನು ಓದುವುದರಿಂದ ವಿದ್ಯಾರ್ಥಿಗಳಿಗೆ ಓದಿನಲ್ಲಿ ಏಕಾಗ್ರತೆ ಹೆಚ್ಚುವುದಲ್ಲದೆ ಜ್ಞಾನ ಸಂಪಾದನೆ ಮಾಡಲು, ಕಠಿಣ ಪರಿಶ್ರಮ ಮಾಡಲು ದೇವರ ಅನುಗ್ರಹ ಪ್ರಾಪ್ತಿಯಾಗುತ್ತದೆ. ಬುಧ ಕವಚಂ ಸ್ತೋತ್ರ ಇಲ್ಲಿದೆ ನೋಡಿ.ಅಸ್ಯ ಶ್ರೀಬುಧಕವಚಸ್ತೋತ್ರಮಂತ್ರಸ್ಯ, ಕಶ್ಯಪ ಋಷಿಃ,ಅನುಷ್ಟುಪ್ ಛಂದಃ, ಬುಧೋ ದೇವತಾ, ಬುಧಪ್ರೀತ್ಯರ್ಥಂ ಜಪೇ ವಿನಿಯೋಗಃ |ಅಥ ಬುಧ ಕವಚಂಬುಧಸ್ತು ಪುಸ್ತಕಧರಃ ಕುಂಕುಮಸ್ಯ ಸಮದ್ಯುತಿಃ |ಪೀತಾಂಬರಧರಃ ಪಾತು ಪೀತಮಾಲ್ಯಾನುಲೇಪನಃ ‖ 1 ‖ಕಟಿಂ ಚ ಪಾತು ಮೇ ಸೌಮ್ಯಃ ಶಿರೋದೇಶಂ ಬುಧಸ್ತಥಾ |ನೇತ್ರೇ ಜ್ಞಾನಮಯಃ ಪಾತು ಶ್ರೋತ್ರೇ ಪಾತು ನಿಶಾಪ್ರಿಯಃ ‖ 2 ‖
ಮಂಡ್ಯ: ಸಿದ್ದರಾಮಯ್ಯನವರೇ ನೀವು ಮಾತೃಪಕ್ಷಕ್ಕೆ ಮೋಸ ಮಾಡಿ ಹೋಗಿರುವುದನ್ನು ನೆನಪಿನಲ್ಲಿಡಿ. ಇದು ಹೆತ್ತ ತಾಯಿಗೆ ದ್ರೋಹ ಬಗೆದ ಹಾಗೇ. ನೀವು ಇಲ್ಲಿ ಉಂಡು, ತಿಂದು ಹೋದವರು ಇದೀಗ ನಮ್ಮ ಪಕ್ಷದ ವಿರುದ್ಧ ಮಾತನಾಡುತ್ತೀರಾ. ನಮ್ಮ ಪಕ್ಷದ ಕಾರ್ಯಕರ್ತರೇ ನಮ್ಮ ಶಕ್ತಿಯಾಗಿದ್ದು, ನಾವು ಧೃತಿಗೆಡುವುದಿಲ್ಲ ಎಂದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ‘ಜೆಡಿಎಸ್ ಬೇರೆಯವರ ಹೆಗಲ ಮೇಲೆ ಕೈ ಹಾಕಿಕೊಂಡೇ ಅಧಿಕಾರಕ್ಕೆ ಬರಬೇಕು’ ಎಂದು ಸಿದ್ದರಾಮಯ್ಯ ಅವರು ಕೆಆರ್ಎಸ್ ಬಾಗಿನ ಕಾರ್ಯಕ್ರಮದಲ್ಲಿ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಕೆ.ಆರ್. ಪೇಟೆಯಲ್ಲಿ ಮಂಗಳವಾರ ನಡೆದ ಜೆಡಿಎಸ್ ಡಿಜಿಟಲ್
ಟೆಲ್ ಅವಿವ್ [ಇಸ್ರೇಲ್]: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇತರ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಲು ಮುಂದಿನ ವಾರ ಅಮೆರಿಕಕ್ಕೆ ತೆರಳುವುದಾಗಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮಂಗಳವಾರ ಖಚಿತಪಡಿಸಿದ್ದಾರೆ ಎಂದು ಜೆರುಸಲೆಮ್ ಪೋಸ್ಟ್ ವರದಿ ಮಾಡಿದೆ. ಜೆರುಸಲೆಮ್ ಪೋಸ್ಟ್ ಪ್ರಕಾರ, ನೆತನ್ಯಾಹು ಮುಂದಿನ ಸೋಮವಾರ ವಾಷಿಂಗ್ಟನ್ಗೆ ಆಗಮಿಸುವ ನಿರೀಕ್ಷೆಯಿದೆ. ಭದ್ರತೆ ಮತ್ತು ವ್ಯಾಪಾರ ಕುರಿತು ಚರ್ಚಿಸಲು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಲು ನೆತನ್ಯಾಹು ಮುಂದಿನ ವಾರ ಯುಎಸ್ಗೆ ಭೇಟಿ ನೀಡಲಿದ್ದಾರೆ.
ಬೆಂಗಳೂರು: ನಟ ಮೋಹನ್ ಲಾಲ್ ಅವರ ಪುತ್ರಿ ವಿಸ್ಮಯಾ ಮೋಹನ್ ಲಾಲ್ ಮಲಯಾಳಂ ಚಿತ್ರ ತುಡಕ್ಕಂ ಮೂಲಕ ಬೆಳ್ಳಿತೆರೆಗೆ ಪಾದಾರ್ಪಣೆ ಮಾಡಲು ಸಿದ್ಧರಾಗಿದ್ದಾರೆ. ಈ ಚಿತ್ರವನ್ನು 2018 ರ ಖ್ಯಾತಿಯ ಜೂಡ್ ಆಂಥನಿ ಜೋಸೆಫ್ ನಿರ್ದೇಶಿಸಲಿದ್ದಾರೆ ಮತ್ತು ಆಂಟೋನಿ ಪೆರುಂಬವೂರ್ ಅವರ ಆಶೀರ್ವಾದ್ ಸಿನಿಮಾಸ್ ಈ ಸಿನಿಮಾಗೆ ಬಂಡವಾಳ ಹೂಡಿದ್ದಾರೆ.ಚಲನಚಿತ್ರವನ್ನು ಪ್ರಕಟಿಸುತ್ತಾ, ಮೋಹನ್ಲಾಲ್ ಸಾಮಾಜಿಕ ಮಾಧ್ಯಮಕ್ಕೆ ಕರೆದೊಯ್ದು ಹೀಗೆ ಬರೆದಿದ್ದಾರೆ, “ಪ್ರಿಯ
ನವದೆಹಲಿ: ಮಂಗಳವಾರ (ಜುಲೈ 1, 2025) ರಂದು ಜೆಟ್ ಇಂಧನದ (ಎಟಿಎಫ್) ಬೆಲೆಯನ್ನು 7.5% ರಷ್ಟು ತೀವ್ರವಾಗಿ ಹೆಚ್ಚಿಸಲಾಗಿದೆ, ಆದರೆ ವಾಣಿಜ್ಯ ಸಂಸ್ಥೆಗಳಲ್ಲಿ ಬಳಸುವ ಎಲ್ಪಿಜಿ ದರದಲ್ಲಿ ಪ್ರತಿ ಸಿಲಿಂಡರ್ಗೆ ₹58.50 ರಷ್ಟು ಕಡಿಮೆಯಾಗಿದೆ. ಇದು ಅಂತರರಾಷ್ಟ್ರೀಯ ಮಾನದಂಡದ ದರಗಳಲ್ಲಿನ ಬದಲಾವಣೆಗಳನ್ನು ಪ್ರತಿಬಿಂಬಿಸುತ್ತದೆ.ಮೂರು ಸುತ್ತಿನ ಬೆಲೆ ಕಡಿತದ ನಂತರ, ವಿಮಾನಯಾನ ಟರ್ಬೈನ್ ಇಂಧನ ಬೆಲೆಯನ್ನು ಪ್ರತಿ ಕಿಲೋಲೀಟರ್ಗೆ ₹ 6,271.5 ಅಥವಾ 7.5% ರಷ್ಟು ಹೆಚ್ಚಿಸಲಾಯಿತು.
ಬೆಂಗಳೂರು: ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಕ್ಕೆ ಕೋವಿಡ್ ಲಸಿಕೆ ಕಾರಣವಾಗಿರಬಹುದು ಎಂದು ಶಂಕೆ ವ್ಯಕ್ತಪಡಿಸಿರುವ ಸಿಎಂಗೆ ವಿಪಕ್ಷ ನಾಯಕ ಆರ್ ಅಶೋಕ್ ಪ್ರತಿಕ್ರಿಯಿಸಿ ಬಿಜೆಪಿ ಲಸಿಕೆ ಅಲ್ಲ, ಇದು ಕೋಟ್ಯಂತರ ಭಾರತೀಯರನ್ನು ರಕ್ಷಿಸಿದ ಲಸಿಕೆ ಎಂದಿದ್ದಾರೆ.ಸಿಎಂ ಪೋಸ್ಟ್ಗೆ ಆರ್ ಅಶೋಕ್ ಪ್ರತೀಕ್ರಿಯಿಸಿದ್ದಾರೆ. ಹಾಸನ ಜಿಲ್ಲೆಯಲ್ಲಿ ಈಚೆಗೆ ಸಂಭವಿಸುತ್ತಿರುವ ಹಠಾತ್ ಹೃದಯಾಘಾತಗಳಿಂದ ಇಪ್ಪತ್ತಕ್ಕೂ ಹೆಚ್ಚು ಅಮೂಲ್ಯ ಯುವ ಜೀವಗಳು
ನಟ ಯುವರಾಜ್ಕುಮಾರ್ ನಟನೆಯ ಬ್ಯಾಂಗಲ್ ಬಂಗಾರಿ ಸಿನಿಮಾ ಹಾಡು ಇದೀಗ ಟ್ರೆಂಡಿಗ್ನಲ್ಲಿದೆ. ಈ ಗೀತೆ ಎಲ್ಲೆಡೆ ವೈರಲ್ ಆಗಿದ್ದು, ಅನೇಕ ಸೆಲೆಬ್ರಿಟಿಗಳು ಈ ಹಾಡಿನ ರೀಲ್ಸ್ಗೆ ಸ್ಟೆಪ್ ಹಾಕಿದ್ದಾರೆ. ನಾಯಕ ಯುವರಾಜ್ ಕುಮಾರ್ ಹಾಗೂ ನಾಯಕಿ ಸಂಜನಾ ಆನಂದ್ ಬ್ಯಾಂಗಲ್ ಬಂಗಾರಿ ಅಂತಾ ಕುಣಿದು ಕುಪ್ಪಳಿಸಿದ್ದರು.ನಾಗಾರ್ಜುನ್ ಶರ್ಮಾ ಸಾಹಿತ್ಯ ಬರೆದ ಪದಕ್ಕೆ ಆಂತೋನಿ ದಾಸ್ ಹಾಡಿದ್ದಾರೆ. ಚರಣ್ ರಾಜ್ ಸಂಗೀತ, ಯುವ-ಸಂಜನಾ ಕುಣಿದ ಬಂಗಾಲ್ ಬಂಗಾರಿ ಗೀತೆ ಸಖತ್ ಹಿಟ್ ಕಂಡಿದೆ. ಕೇವಲ 22 ದಿನಗಳಲ್ಲಿ ಬರೋಬ್ಬರಿ 10 ಮಿಲಿಯನ್ ವೀಕ್ಷಣೆ ಕಂಡಿರುವ ಹಾಡು, ಟಾಪ್ ಮ್ಯೂಸಿಕ್ ವಿಡಿಯೋ ಕೆಟಗರಿಯಲ್ಲಿ 29ನೇ ಸ್ಥಾನವನ್ನು ಪಡೆದುಕೊಂಡಿದೆ. ಅತಿ ಕಡಿಮೆ ಸಮಯದಲ್ಲಿ ಬ್ಯಾಂಗಲ್ ಬಂಗಾರಿ ದಾಖಲೆ ಬರೆದಿದ್ದು, ಸಿನಿಮಾ ಇದೀಗ ಭಾರೀ ನಿರೀಕ್ಷೆಯನ್ನು ಮೂಡಿಸಿದೆ.
ಬೆಂಗಳೂರು: ರಾಜ್ಯದಲ್ಲಿ ಹೃದಯಾಘಾತದಿಂದ ಸಂಭವಿಸುತ್ತಿರುವ ಸಾವಿನ ಪ್ರಕರಣಗಳನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಹೇಳಿದ್ದಾರೆ."ಹಾಸನ ಜಿಲ್ಲೆಯೊಂದರಲ್ಲೇ ಇಪ್ಪತ್ತಕ್ಕೂ ಹೆಚ್ಚು ಮಂದಿ ಹೃದಯಾಘಾತದಿಂದ ಸಾವನ್ನಪ್ಪಿರುವ ವಿಷಯವನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ. ಈ ಸರಣಿ ಸಾವುಗಳಿಗೆ ನಿಖರ ಕಾರಣವನ್ನು ಗುರುತಿಸಲು ಮತ್ತು ಪರಿಹಾರ ಕ್ರಮಗಳನ್ನು ಕಂಡುಹಿಡಿಯಲು ತಜ್ಞರ ಸಮಿತಿಯನ್ನು ರಚಿಸಲಾಗಿದೆ" ಎಂದು ಕರ್ನಾಟಕ ಮುಖ್ಯಮಂತ್ರಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.ಸಿಎಂ ಸಿದ್ದರಾಮಯ್ಯ ಪೋಸ್ಟ್ನಲ್ಲಿ ಹೀಗಿದೆ:
ಅಹಮಾದಾಬಾದ್: 241 ಜನ ಸಾವನ್ನಪ್ಪಿದ ಏರ್ ಇಂಡಿಯಾ ವಿಮಾನ ಪತನ ಸಂಬಂಧ ವಿಮಾನಯಾನ ಪ್ರಾಧಿಕಾರವು ತನ್ನ ಪ್ರಾಥಮಿಕ ಸಂಶೋಧನೆಗಳನ್ನು ಈ ವಾರದ ಕೊನೆಯಲ್ಲಿ ಅಥವಾ ಮುಂದಿನ ವಾರದ ಆರಂಭದಲ್ಲಿ ಪ್ರಕಟಿಸುವ ನಿರೀಕ್ಷೆಯಿದೆ.ಜೂನ್ 12 ರಂದು, ಲಂಡನ್ ಗ್ಯಾಟ್ವಿಕ್-ಬೌಂಡ್ ಬೋಯಿಂಗ್ 787-8 ವಿಮಾನವು ಅಹಮದಾಬಾದ್ ವಿಮಾನ ನಿಲ್ದಾಣದಿಂದ ಟೇಕಾಫ್ ಆದ ಕೂಡಲೇ ಪತನಗೊಂಡಿತು, ಅದರಲ್ಲಿದ್ದ ಕನಿಷ್ಠ 241 ಜನರು ಮತ್ತು ನೆಲದ ಮೇಲೆ ಹಲವಾರು ಜನರು ಸಾವನ್ನಪ್ಪಿದರು.
ನವದೆಹಲಿ: ಭಾರತ ಮತ್ತು ಪಾಕಿಸ್ತಾನ ಮಂಗಳವಾರ ರಾಜತಾಂತ್ರಿಕ ಮಾರ್ಗಗಳ ಮೂಲಕ ನವದೆಹಲಿ ಮತ್ತು ಇಸ್ಲಾಮಾಬಾದ್ನಲ್ಲಿ ಏಕಕಾಲದಲ್ಲಿ ಪರಸ್ಪರ ವಶದಲ್ಲಿರುವ ನಾಗರಿಕ ಕೈದಿಗಳು ಮತ್ತು ಮೀನುಗಾರರ ಪಟ್ಟಿಯನ್ನು ವಿನಿಮಯ ಮಾಡಿಕೊಂಡಿವೆ. ಕಾನ್ಸುಲರ್ ಪ್ರವೇಶ 2008 ರ ದ್ವಿಪಕ್ಷೀಯ ಒಪ್ಪಂದದ ನಿಬಂಧನೆಗಳ ಅಡಿಯಲ್ಲಿ, ಅಂತಹ ಪಟ್ಟಿಗಳನ್ನು ಪ್ರತಿ ವರ್ಷ ಜನವರಿ 1 ಮತ್ತು ಜುಲೈ 1 ರಂದು ವಿನಿಮಯ ಮಾಡಿಕೊಳ್ಳಲಾಗುತ್ತದೆ. ಎಲ್ಲಾ ನಾಗರಿಕ ಕೈದಿಗಳು ಮತ್ತು ಮೀನುಗಾರರ "ಸುರಕ್ಷತೆ, ಭದ್ರತೆ ಮತ್ತು ಕಲ್ಯಾಣ" ಖಾತ್ರಿಪಡಿಸಿಕೊಳ್ಳಲು ಪಾಕಿಸ್ತಾನವನ್ನು
ಬೆಂಗಳೂರು: ಅಮೃತಧಾರೆ ಧಾರವಾಹಿಯಲ್ಲಿ ಈಗ ಹೀರೋಯಿನ್ ಭೂಮಿಕಾ ತುಂಬು ಗರ್ಭಿಣಿ. ಬ್ಯುಸಿನೆಸ್ ಮ್ಯಾನ್ ಗೌತಮ್ ದಿವಾನ್ ಹೆಂಡತಿ ಭೂಮಿಕಾ ಡೆಲಿವರಿ ಮಾಡಿಸೋದು ಇದೇ ಡಾಕ್ಟರ್ ಅಂತಿದ್ದಾರೆ ಈಗ ವೀಕ್ಷಕರು. ಜೀ ಕನ್ನಡದಲ್ಲಿ ಪ್ರಸಾರವಾಗುವ ಜನಪ್ರಿಯ ಧಾರವಾಹಿ ಅಮೃತಧಾರೆ ಈಗ ಕುತೂಹಲಕಾರಿ ಘಟ್ಟಕ್ಕೆ ತಲುಪಿದೆ. ಗೌತಮ್ ತಮ್ಮ ಜೈದೇವ್ ಮೋಸ ಬಯಲಾಗಿದ್ದು, ಎರಡನೇ ಮದುವೆ ಮಾಡಿಕೊಂಡು ಮನೆ ಬಿಟ್ಟು ಹೋಗಿದ್ದಾನೆ. ಇತ್ತ ಮಲ್ಲಿ ಜೀವನ ಅತಂತ್ರವಾಗಿದೆ. ನನ್ನ ಕೈಯಾರೆ ಮಗಳ ಜೀವನ ಹಾಳು ಮಾಡಿದೆನಲ್ಲಾ ಎಂದು ಭೂಪತಿ ಆತ್ಮಹತ್ಯೆ ಮಾಡಿಕೊಳ್ಳುತ್ತಾನೆ.
ಬೆಂಗಳೂರು: ಯಾವ ಚಾನೆಲ್ ಗಳು ನನ್ನ ಬಗ್ಗೆ ಏನೇ ಸುಳ್ಳು ಸುದ್ದಿ ಹಾಕಿದ್ರೂ ಫೋನ್ ಮಾಡಿ ಕೇಳುವವನಲ್ಲ ನಾನು. ಪತ್ರಿಕಾ ರಂಗ ನಿರ್ಭೀತಿಯಿಂದ ಕೆಲಸ ಮಾಡಬೇಕು ಎಂಬುದೇ ನನ್ನ ಉದ್ದೇಶ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಪತ್ರಿಕಾ ದಿನಾಚರಣೆ ಅಂಗವಾಗಿ ಬೆಂಗಳೂರಿನಲ್ಲಿ ನಡೆದ "ಪತ್ರಿಕಾ ದಿನಾಚರಣೆ-2025" ಹಾಗೂ "ನಿಜ ಸುದ್ದಿಗಾಗಿ ಸಮರ" ಸಂವಾದದಲ್ಲಿ ಮಾತನಾಡಿದ ಅವರು ‘ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ ಎಂದರೆ, ಸುಳ್ಳು ಸುದ್ದಿಗಳು ಹೆಚ್ಚಾಗಿವೆ ಎಂದು ಅರ್ಥವಲ್ಲವೇ? ಊಹಾ ಪತ್ರಿಕೋದ್ಯಮವು ಪತ್ರಿಕೋದ್ಯಮ ಮತ್ತು ಸಮಾಜ ಎರಡಕ್ಕೂ ಅಪಾಯ. ಹೀಗಾಗಿ ಪತ್ರಿಕೋದ್ಯಮವು ಇದರಿಂದ ಹೊರಗೆ ಬರಬೇಕಿದೆ’ ಎಂದರು.
ಹೈದರಾಬಾದ್ (ತೆಲಂಗಾಣ): ತೆಲಂಗಾಣದಲ್ಲಿ ಪಕ್ಷದ ಸೈದ್ಧಾಂತಿಕ ಮತ್ತು ಸಂಘಟನಾತ್ಮಕ ನೆಲೆಯನ್ನು ಬಲಪಡಿಸುವ ಉದ್ದೇಶದಿಂದ ಮಹತ್ವದ ಕ್ರಮವಾಗಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಷ್ಟ್ರೀಯ ನಾಯಕತ್ವವು ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ಅವರ ಉತ್ತರಾಧಿಕಾರಿಯಾಗಿ ಎನ್ ರಾಮಚಂದರ್ ರಾವ್ ಅವರನ್ನು ತೆಲಂಗಾಣ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೇಮಿಸಿದೆ. ಈ ನೇಮಕಾತಿಯು ಪಕ್ಷದ ಮೂಲ ತತ್ವಗಳಿಗೆ ಮರಳುವ ಮತ್ತು ರಾಜ್ಯದಲ್ಲಿ ತನ್ನ ತಳಮಟ್ಟದ ಸಂಪರ್ಕವನ್ನು ಬಲಪಡಿಸುವ ಸ್ಪಷ್ಟ ಉದ್ದೇಶವನ್ನು ಸೂಚಿಸುತ್ತದೆ. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ (ಎಬಿವಿಪಿ) ಅನುಭವಿ ರಾಮಚಂದರ್ ರಾವ್ ಅವರು ಸೈದ್ಧಾಂತಿಕ ಸ್ಪಷ್ಟತೆ, ಕಾನೂನು ಚಾಣಾಕ್ಷತೆ ಮತ್ತು ದಶಕಗಳ ರಾಜಕೀಯ ಅನುಭವದ ಅಪರೂಪದ
ಕನ್ನಡದ ಕಿರಿಕ್ ಪಾರ್ಟಿ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿ ಇಂದು ತಮ್ಮ ಅಭಿನಯದ ಮೂಲಕ ನ್ಯಾಶನಲ್ ಕ್ರಶ್ ಆಗಿರುವ ರಶ್ಮಿಕಾ ಮಂದಣ್ಣಗೆ ಭಾರೀ ಬೇಡಿಕೆಯಲ್ಲಿದ್ದಾರೆ. ಆದರೆ ಯಾವುದೇ ಕಾರಣಕ್ಕು ಎಷ್ಟೇ ದುಟ್ಟು ಕೊಟ್ರೂ ಆ ಒಂದು ಕೆಲಸ ಮಾಡಲ್ಲ ಎಂದು ಕಂಡೀಷನ್ ವೊಂದನ್ನು ಹೇಳಿಕೊಂಡಿದ್ದಾರೆ.ಛಾವಾ, ಪುಪ್ಪಾ ಯಶಸ್ವಿ ಬಳಿಕ ತೆಲುಗು ಹಾಗೂ ಹಿಂದಿ ಸಿನಿಮಾಗಳಲ್ಲಿ ರಶ್ಮಿಕಾ ಫುಲ್ ಬ್ಯುಸಿಯಾಗಿದ್ದಾರೆ. ಸದ್ಯ ತೆಲಗು ಹಾಗೂ ಹಿಂದಿ ಸಿನಿಮಾ ರಂಗದಲ್ಲಿ ಬಹುಬೇಡಿಕೆಯ ನಟಿಯರಲ್ಲಿ ಒಬ್ಬರಾಗಿದ್ದಾರೆ.
ಬೆಂಗಳೂರು: ಹಾಸನದಲ್ಲಿ ಸರಣಿ ಹೃದಯಾಘಾತದ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು ಇದಕ್ಕೂ ಕೊವಿಡ್ ಲಸಿಕೆಗೂ ಸಂಬಂಧವಿದೆಯೇ ಎಂಬ ಬಗ್ಗೆ ಸ್ಪೋಟಕ ಹೇಳಿಕೆ ನೀಡಿದ್ದಾರೆ. ‘ಕಳೆದೊಂದು ತಿಂಗಳಿನಲ್ಲಿ ಹಾಸನ ಜಿಲ್ಲೆಯೊಂದರಲ್ಲೇ ಇಪ್ಪತ್ತಕ್ಕೂ ಅಧಿಕ ಮಂದಿ ಹೃದಯಾಘಾತಕ್ಕೆ ಒಳಗಾಗಿ ಸಾವಿಗೀಡಾದ ವಿಚಾರವನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಸರಣಿ ಸಾವುಗಳಿಗೆ ನಿಖರ ಕಾರಣವನ್ನು ಪತ್ತೆಹಚ್ಚಿ, ಅದಕ್ಕೆ ಪರಿಹಾರ ಮಾರ್ಗೋಪಾಯಗಳನ್ನು ಕಂಡುಕೊಳ್ಳಲು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾದ ಡಾ. ರವೀಂದ್ರನಾಥ್ ಅವರ ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸಿ, 10 ದಿನಗಳ ಒಳಗಾಗಿ ಅಧ್ಯಯನ ವರದಿ ನೀಡುವಂತೆ ಸೂಚಿಸಲಾಗಿದೆ’ ಎಂದು ಅವರು ಹೇಳಿದ್ದಾರೆ.
ಬೆಂಗಳೂರು: ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಯಿಂದಾಗಿ ಗ್ಯಾಸ್ ಸಿಲಿಂಡರ್ ಸೇರಿದಂತೆ ದಿನಬಳಕೆಯ ವಸ್ತುಗಳಿಗೆ ಕೆಲವೇ ದಿನಗಳಲ್ಲಿ ʼಝಡ್ ಪ್ಲಸ್ʼ ಸೆಕ್ಯೂರಿಟಿ ನೀಡಬೇಕಾದ ಪರಿಸ್ಥಿತಿ ಎದುರಾಗಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಟೀಕೆ ಮಾಡಿದ್ದಾರೆ. ಇಂದು ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ‘ಹೆದ್ದಾರಿಗಳ ಟೋಲ್ ನಿಂದ ರೈಲ್ವೇ ತನಕ, ಅಡುಗೆ ಸಿಲಿಂಡರ್ ನಿಂದ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಮಾಡಿ ದೇಶದ ಜನಸಾಮಾನ್ಯನ ಪರಿಸ್ಥಿತಿಯನ್ನು ಜರ್ಜರಿತಗೊಳಿಸಿದೆ. ಮೋದಿ ಹಾಗೂ ಬಿಜೆಪಿ ಜನಸಾಮಾನ್ಯರ ಜೇಬಿಗೆ ಕೈ ಹಾಕಿ ದಾಳಿ ಮಾಡಿದೆ. ಇದು ಒಂದು ರೀತಿಯ ಕ್ರೂರ ನೀತಿ’ ಎಂದಿದ್ದಾರೆ.
ಬೆಂಗಳೂರು: ಕಾಂಗ್ರೆಸ್ ಅಧಿಕಾರ ಮತ್ತು ಮಾನಸಿಕ ಅಸ್ವಸ್ಥರಿಗೂ ಏನಾದರೂ ಸಂಬಂಧ ಇದೆಯೇ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಪ್ರಶ್ನಿಸಿದ್ದಾರೆ.ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕತ್ತರಿಸಿದ ಭೀಭತ್ಸ ಕೃತ್ಯ ನಡೆದು ತಣ್ಣಗಾಗಿತ್ತು. ಆಗ ಕೃತ್ಯ ಎಸಗಿದಾತ ಮಾನಸಿಕ ಅಸ್ವಸ್ಥ ಎಂದಿದ್ದರು. ಅದರ ನಂತರ ಭಟ್ಕಳದಲ್ಲಿ ಪ್ರಕರಣ ಆಗಿದೆ. ಚಿಕ್ಕಮಗಳೂರು ಜಿಲ್ಲೆ ಕಡೂರು, ಹೊಸನಗರ, ಬೆಳಗಾವಿಯಲ್ಲಿ ಇಂಥ ಘಟನೆಗಳಾಗಿವೆ.
ಮಧ್ಯಪ್ರದೇಶದ ಆಸ್ಪತ್ರೆಯಲ್ಲಿ ಶುಕ್ರವಾರ ಯುವತಿಯೊಬ್ಬಳನ್ನು ಯುವಕನೊಬ್ಬ ಸಾರ್ವಜನಿಕರು ಇರುವಾಗಲೇ ಸಿನಿಮೀಯ ರೀತಿಯಲ್ಲಿ ಕತ್ತು ಸೀಳಿ ಕೊಲೆ ಮಾಡಿದ ಭಯಾನಕ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 23 ವರ್ಷದ ಟ್ರೈನಿ ನರ್ಸ್ ನರಸಿಂಗ್ಪುರ ಜಿಲ್ಲೆಯ ಆಸ್ಪತ್ರೆಯಲ್ಲಿ ಕೊಲೆಯಾಗಿದ್ದಾರೆ. ಆಸ್ಪತ್ರೆಯಲ್ಲಿ ನರ್ಸ್ ಸಂಧ್ಯಾ ಚೌಧರಿ ಅವರನ್ನು ಆರೋಪಿ ಚಾಕುವಿನಲ್ಲಿ ಕತ್ತು ಸೀಳಿ ಆಕೆಯನ್ನು ಕೊಲೆ ಮಾಡಿದ್ದಾನೆ. ಆಸ್ಪತ್ರೆಯ ಒಳಗೆ ಹತ್ತಾರು ಮಂದಿ ಸುತ್ತಮುತ್ತಾ ನಿಂತಿರುವಾಗಲೇ ಸಂಧ್ಯಾಳನ್ನು ಯುವಕ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಆದರೆ ಅಲ್ಲಿದ್ದವರು ಯಾರೊಬ್ಬರು ಆಕೆಯನ್ನು ರಕ್ಷಿಸಲು ಮುಂದಾಗಲಿಲ್ಲ.
ಮೇಘಾಲಯ: ಸುರಕ್ಷತೆಗಾಗಿ ಪೂರ್ವ ಖಾಸಿ ಹಿಲ್ಸ್ ಜಿಲ್ಲೆಯಲ್ಲಿ ಚಾರಣ ಮಾಡುವಾಗ ಪ್ರವಾಸಿಗರು ಅಧಿಕೃತ ಮತ್ತು ಮಾನ್ಯತೆ ಪಡೆದ ಮಾರ್ಗದರ್ಶಿಗಳನ್ನು ನೇಮಿಸಿಕೊಳ್ಳುವುದನ್ನು ಮೇಘಾಲಯವು ಕಡ್ಡಾಯಗೊಳಿಸಿದೆ ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪ್ರವಾಸೋದ್ಯಮ ಪ್ರಮೋಷನ್ ಸೊಸೈಟಿಯ ಅಧ್ಯಕ್ಷರು ತಿಳಿಸಿದ್ದಾರೆ.ಮಧ್ಯಪ್ರದೇಶದ ಇಂದೋರ್ನ ಉದ್ಯಮಿಯೊಬ್ಬರು ಮೇಘಾಲಯದಲ್ಲಿ ತಮ್ಮ ಹನಿಮೂನ್ ಸಂದರ್ಭದಲ್ಲಿ ಅವರ ಪತ್ನಿಯಿಂದ ಕೊಲ್ಲಲ್ಪಟ್ಟ ಬಳಿಕ ಈ ನಿರ್ಧಾವರನ್ನು ಕೈಗೊಳ್ಳಲಾಗಿದೆ.
ಬೆಂಗಳೂರು: ಹಾಸನದಲ್ಲಿ ಇತ್ತೀಚೆಗೆ ಸರಣಿ ಹೃದಯಾಘಾತವಾಗುತ್ತಿರುವುದು ಜನರಲ್ಲಿ ಭೀತಿ ಆವರಿಸಿದೆ. ಹೃದಯಾಘತದ ಲಕ್ಷಣಗಳು ಕಂಡುಬರುತ್ತಲೇ ವೈದ್ಯಕೀಯ ಚಿಕಿತ್ಸೆ ಪಡೆದರೆ ಬದುಕುಳಿಯುವ ಸಾಧ್ಯತೆಯೂ ಇದೆ. ಹೃದಯಾಘಾತವಾದಾಗ ಮುಖದಲ್ಲಿ ಯಾವೆಲ್ಲಾ ಬದಲಾವಣೆಯಾಗುತ್ತದೆ ನೋಡೋಣ. ಹೃದಯ ಎನ್ನುವುದು ನಮ್ಮ ದೇಹದ ಬಹುಮುಖ್ಯ ಅಂಗ. ಇದರ ಕಾರ್ಯನಿರ್ವಹಣೆಯಲ್ಲಿ ಕೊಂಚ ಏರುಪೇರಾದರೂ ಪ್ರಾಣಕ್ಕೇ ಕುತ್ತು. ಹೃದಯಾಘಾತಕ್ಕೆ ಒತ್ತಡದ ಜೀವನ ಶೈಲಿ, ಮಧುಮೇಹ, ರಕ್ತದೊತ್ತ, ಕೊಲೆಸ್ಟ್ರಾಲ್, ಧೂಮಪಾನ ಮತ್ತು ವಂಶವಾಹೀ ಕಾರಣಗಳಿರಬಹುದು. ಹೃದಯಾಘಾತಕ್ಕೆ ಮುನ್ನ ಮನುಷ್ಯನಲ್ಲಿ ಕೆಲವು ಲಕ್ಷಣಗಳು ಕಂಡುಬರುತ್ತವೆ.
ಬೆಳಗಾವಿ: ಪ್ರೇಮಿಗಳಿಬ್ಬರು ಆಟೋಟದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಯರಗಟ್ಟಿ ಸಮೀಪದಲ್ಲಿರುವ, ಗೋಕಾಕ ತಾಲ್ಲೂಕಿನ ಹಿರೇನಂದಿ ಗ್ರಾಮದ ಹೊರವಲಯದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ಶರಣಾದವರನ್ನು ಸವದತ್ತಿ ತಾಲ್ಲೂಕಿನ ಮುನವಳ್ಳಿ ಗ್ರಾಮದವರಾದ ರಾಘವೇಂದ್ರ ನಾರಾಯಣ ಜಾಧವ (28) ಹಾಗೂ ರಂಜಿತಾ ಅಡಿವೆಪ್ಪ ಚೌಬಾರಿ (25) ಎಂದು ಗುರುತಿಸಲಾಗಿದೆ.ರಾಘವೇಂದ್ರ ಹಾಗೂ ರಂಜಿತಾ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಈಚೆಗೆ ರಂಜಿತಾಗೆ ಬೇರೊಬ್ಬ ಯುವಕನ ಜತೆ
ಬೆಂಗಳೂರು: ಮಂಗಳವಾರ ನಸುಕಿನಲ್ಲಿ ಸರ್ಕಾರಿ ವಿಕ್ಟೋರಿಯಾ ಆಸ್ಪತ್ರೆಯ ಸೆಮಿನಾರ್ ಕೊಠಡಿಯಲ್ಲಿ ಸಣ್ಣ ಬೆಂಕಿ ಕಾಣಿಸಿಕೊಂಡಿದ್ದು, ನಂತರ 26 ರೋಗಿಗಳನ್ನು ಮತ್ತೊಂದು ವಾರ್ಡ್ಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳ ಬಗ್ಗೆ ವರದಿಯಾಗಿಲ್ಲ ಎಂದು ಅವರು ತಿಳಿಸಿದ್ದಾರೆ.ಆಸ್ಪತ್ರೆಯ ಅಧಿಕಾರಿಗಳ ಪ್ರಕಾರ, ಮುಂಜಾನೆ 3 ಗಂಟೆಗೆ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡದ ಮೊದಲ ಮಹಡಿಯಲ್ಲಿರುವ ವಾರ್ಡ್ಗೆ ಹೊಂದಿಕೊಂಡಿರುವ ಸೆಮಿನಾರ್ ಕೊಠಡಿಯಲ್ಲಿ ಸ್ವಿಚ್ ಬೋರ್ಡ್ನ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಸಂಭವಿಸಿದೆ ಎಂದು ಶಂಕಿಸಲಾಗಿದೆ.
ಹಾಸನ: ಜಿಲ್ಲೆಯಲ್ಲಿ ಹೃದಯಾಘಾತದ ಸರಣಿ ಮತ್ತೆ ಮುಂದುವರಿದಿದೆ. ಎರಡೂವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ 27 ವರ್ಷದ ಯುವಕನೊಬ್ಬ ಈಗ ಹೃದಯಾಘಾತದಿಂದ ಸಾವನ್ನಪ್ಪಿರುವ ವರದಿಯಾಗಿದೆ. ಇದರೊಂದಿಗೆ ಹಾಸನ ಜಿಲ್ಲೆಯಲ್ಲಿ ಕಳೆದ ಒಂದೂವರೆ ತಿಂಗಳ ಅವಧಿಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದವರ ಸಂಖ್ಯೆ 24 ಕ್ಕೆ ಏರಿಕೆಯಾಗಿದೆ. ಸೋಮನಹಳ್ಳಿಯ ಸಂಜಯ್ ಎಂಬ 27 ವರ್ಷದ ಯುವಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ನಿನ್ನೆ ಸಂಜೆ ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಈತ ಸೋಮನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಪಾಸಣೆಗೊಳಗಾಗಿದ್ದ. ಆದರೆ ಈ ವೇಳೆ ಆತನ ಪರಿಸ್ಥಿತಿ ಗಂಭೀರವಾಗಿದ್ದರಿಂದ ತಕ್ಷಣವೇ ಬೇರೆ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ತಮಿಳುನಾಡು: ತಮಿಳುನಾಡಿನ ಶಿವಗಂಗಾ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರ ಲಾಕಪ್ ಡೆತ್ ಪ್ರರಕಣ ಸಂಬಂಧ ಐವರು ಪೊಲೀಸ್ ಸಿಬ್ಬಂದಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ಖಚಿತಪಡಿಸಿದ್ದಾರೆ.ಅಧಿಕೃತ ಪ್ರಕಟಣೆಯ ಪ್ರಕಾರ, ಘಟನೆಯ ನಂತರ ಆರು ಪೊಲೀಸ್ ಅಧಿಕಾರಿಗಳನ್ನು ಆರಂಭದಲ್ಲಿ ಜೂನ್ 28 ರಂದು ಅಮಾನತುಗೊಳಿಸಲಾಯಿತು. ವಿವರವಾದ ತನಿಖೆಯನ್ನು ಪ್ರಾರಂಭಿಸಲಾಯಿತು ಮತ್ತು ಭಾನುವಾರ ರಾತ್ರಿ ಮರಣೋತ್ತರ ಪರೀಕ್ಷೆಯ ವರದಿಯನ್ನು ಸ್ವೀಕರಿಸಿದ ನಂತರ ಮುಂದಿನ ಕ್ರಮವನ್ನು ಕೈಗೊಳ್ಳಲಾಯಿತು."ಯಾವುದೇ ವಿಳಂಬವಿಲ್ಲದೆ, ಕೊಲೆಯ ಆರೋಪಗಳನ್ನು ಅನ್ವಯಿಸಲಾಯಿತು ಮತ್ತು ಈ ವಿಷಯದಲ್ಲಿ ಭಾಗಿಯಾಗಿರುವ ಐದು
ಮುಂಬೈ: ನಾವು ಏನೋ ಬೇಜಾರು ಎಂದರೆ ಒಂದೋ ಎರಡೋ ದಿನ ಮನೆಯೊಳಗೇ ಕಾಲ ಕಳೆಯಬಹುದು. ಆದರೆ ಈ ವ್ಯಕ್ತಿ ಮೂರು ವರ್ಷಗಳಿಂದ ತನ್ನ ಫ್ಲ್ಯಾಟ್ ಒಳಗೆ ಲಾಕ್ ಮಾಅಡಿಕೊಂಡು ಕೂತಿದ್ದ! ಮುಂಬೈನಲ್ಲಿ ಇಂತಹದ್ದೊಂದು ಘಟನೆ ನಡೆದಿದ್ದು, ಸಾಮಾಜಿಕ ಕಾರ್ಯಕರ್ತರು ಈತನನ್ನು ರಕ್ಷಿಸಿದ್ದಾರೆ. 55 ವರ್ಷದ ಅನೂಪ್ ಕುಮಾರ್ ನಾಯರ್ ಎಂಬಾತ ಈ ರೀತಿ ತನ್ನನ್ನು ತಾನು ಮೂರು ವರ್ಷ ಮನೆಯೊಳಗೆ ಲಾಕ್ ಮಾಡಿಕೊಂಡಿದ್ದ. ಮೂರು ವರ್ಷದ ಹಿಂದೆ ತನ್ನ ತಂದೆ-ತಾಯಿಯನ್ನು ಈತ ಬೆನ್ನು ಬೆನ್ನಿಗೇ ಕಳೆದುಕೊಂಡಿದ್ದನಂತೆ. ಇದಾದ ಬಳಿಕ ಖಿನ್ನತೆಗೊಳಗಾದ ಈತ ಮನೆಯಿಂದಲೇ ಹೊರಬರುತ್ತಿಲಿಲ್ಲ.
ಬೆಂಗಳೂರು: ಬಿಗ್ ಬಾಸ್ ನಿರೂಪಣೆ ಮಾಡಲ್ಲ ಎಂದಿದ್ದ ಕಿಚ್ಚ ಸುದೀಪ್ ಇದೀಗ ಮತ್ತೆ ನಾಲ್ಕು ಸೀಸನ್ ಗೆ ಸಹಿ ಹಾಕಿದ ಬೆನ್ನಲ್ಲೇ ನೆಟ್ಟಿಗರು ಟ್ರೋಲ್ ಮಾಡಿದ್ದಾರೆ. ಸುದೀಪ್ ಬಿಗ್ ಬಾಸ್ ಬಿಡೋದೂ ಒಂದೇ ಧೋನಿ ಸಿಎಸ್ ಕೆ ಪರ ಆಡುವುದು ನಿಲ್ಲಿಸುವುದೂ ಒಂದೇ ಎಂದು ಟ್ರೋಲ್ ಮಾಡಿದ್ದಾರೆ. ಧೋನಿ ಕೂಡಾ ವಯಸ್ಸು 42 ದಾಟಿದರೂ ಇನ್ನೂ ಸಿಎಸ್ ಕೆ ಪರ ಐಪಿಎಲ್ ಆಡುವುದು ಮಾತ್ರ ಬಿಟ್ಟಿಲ್ಲ. ಪ್ರತೀ ಬಾರಿ ಐಪಿಎಲ್ ಆರಂಭವಾದಾಗಲೂ ಇದೇ ಧೋನಿಯ ಕೊನೆಯ ಐಪಿಎಲ್ ಆಗಿರಬಹುದು ಎಂದು ಜನ ಮಾತನಾಡಿಕೊಳ್ಳುತ್ತಾರೆ.
ಮುಂಬೈ: ಹುಡುಗರು ಸಿನಿಮಾ ಹಾಡಿನ ಖ್ಯಾತಿಯ ನಟಿ ಶೆಫಾಲಿ ಜರಿವಾಲಾ ಕೊನೆಯ ದಿನ ಮಾಡಿದ ಈ ಒಂದು ತಪ್ಪೇ ಅವರ ಜೀವಕ್ಕೆ ಕುತ್ತಾಯ್ತು ಎನ್ನಲಾಗುತ್ತಿದೆ. ಅಷ್ಟಕ್ಕೂ ಆಕೆಯ ಕೊನೆಯ ದಿನ ಹೇಗಿತ್ತು ಇಲ್ಲಿದೆ ನೋಡಿ ವಿವರ. ಜೂನ್ 27 ರಂದು ತಡರಾತ್ರಿ 42 ವರ್ಷದ ನಟಿ ಶೆಫಾಲಿ ಜರಿವಾಲಾ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಅರೋಗ್ಯವಾಗಿದ್ದ ನಟಿಗೆ ಇದ್ದಕ್ಕಿದ್ದಂತೆ ಏನಾಯ್ತು ಎಂದು ಎಲ್ಲರಿಗೂ ಆಘಾತವಾಗಿತ್ತು. ಇದೀಗ ಆಕೆಯ ಆರೋಗ್ಯದ ಬಗ್ಗೆ ನಾನಾ ಸುದ್ದಿಗಳು ಕೇಳಿಬರುತ್ತಿವೆ.
ಬೆಂಗಳೂರು: ಈ ವಾರ ಆರಂಭದಲ್ಲೇ ಅಡಿಕೆ ಬೆಲೆ ಇಳಿಕೆಯಾಗಿದ್ದು ರೈತರು ನಿರಾಸೆ ಪಡುವಂತಾಗಿದೆ. ಆದರೆ ಕೊಬ್ಬರಿ ಬೆಳೆಗಾರರಿಗೆ ಇಂದು ಬಂಪರ್ ಬೆಲೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ. ಮೊನ್ನೆಯಷ್ಟೇ ಏರಿಕೆಯಾಗಿದ್ದ ಅಡಿಕೆ ಬೆಲೆ ಮತ್ತಷ್ಟು ಏರಿಕೆಯಾಗಬಹುದು ಎಂಬ ನಿರೀಕ್ಷೆಯಲ್ಲಿ ರೈತರಿದ್ದರು. ಆದರೆ ವಾರದ ಆರಂಭದಲ್ಲೇ ಇಳಿಕೆಯಾಗಿದ್ದು ರೈತರಿಗೆ ನಿರಾಸೆಯಾಗಿದೆ. ಹೊಸ ಅಡಿಕೆ ಬೆಲೆ ಕಳೆದ ಕೆಲವು ದಿನಗಳಿಂದ 485 ರೂ.ಗಳಷ್ಟಿತ್ತು. ಇಂದೂ ಬೆಲೆ ಅಷ್ಟೇ ಇದೆ. ಹಳೆ ಅಡಿಕೆ ಬೆಲೆ ಏರಿಕೆ-ಇಳಿಕೆಯಾಗದೇ ಗರಿಷ್ಠ 525 ರೂ.ಗಳಷ್ಟಿದೆ.
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಪರಿಶುದ್ಧ ಚಿನ್ನದ ದರ ಇಳಿಕೆಯತ್ತ ಸಾಗಿತ್ತು. ಆದರೆ ಇಂದು ಮತ್ತೆ ಎಲ್ಲಾ ರೀತಿಯ ಚಿನ್ನದ ದರದಲ್ಲಿ ಭಾರೀ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ಇಳಿಕೆಯಾಗುತ್ತಿದೆ ಎನ್ನುವಷ್ಟರಲ್ಲೇ ಮತ್ತೆ ಲಕ್ಷದ ಗಡಿ ಸಮೀಪ ಬಂದು ನಿಂತಿದೆ. ವಾರಂತ್ಯದಲ್ಲಿ ಚಿನ್ನದ ದರ ಭರ್ಜರಿ ಇಳಿಕೆಯಾಗಿತ್ತು. ಇದು ಗ್ರಾಹಕರಿಗೆ ನೆಮ್ಮದಿ ನೀಡಿತ್ತು. ಆದರೆ ಈಗ ಮತ್ತೆ ಅದೇ ಕತೆ ಎನ್ನುವಂತಾಗಿದೆ. ನಿನ್ನೆ ಪರಿಶುದ್ಧ ಚಿನ್ನದ ದರ ಮೊನ್ನೆ 98, 670.00 ರೂ.ಗಳಷ್ಟಿತ್ತು.
ಮುಂಬೈ: ಟಾಕ್ಸಿಕ್, ರಾಮಾಯಣ ಸಿನಿಮಾದ ಒಂದು ಹಂತದ ಶೂಟಿಂಗ್ ಮುಗಿಸಿಕೊಂಡು ನಟ ರಾಕಿಂಗ್ ಸ್ಟಾರ್ ಯಶ್ ಕುಟುಂಬ ಸಮೇತ ಅಮೆರಿಕಾಗೆ ಪ್ರಯಾಣ ಬೆಳೆಸಿದ್ದಾರೆ. ಕೆಜಿಎಫ್ ಸಿನಿಮಾ ಬಳಿಕ ಯಶ್ ನ್ಯಾಷನಲ್ ಸ್ಟಾರ್ ಆಗಿಬಿಟ್ಟಿದ್ದಾರೆ. ಇದೀಗ ಅವರು ಬಾಲಿವುಡ್ ನಲ್ಲೂ ಬೇಡಿಕೆ ಸೃಷ್ಟಿಸಿಕೊಂಡಿರುವ ನಟ. ಏಕಕಾಲಕ್ಕೆ ಎರಡು ಬಿಗ್ ಬಜೆಟ್ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. ಬಾಲಿವುಡ್ ನ ರಾಮಾಯಣ ಸಿನಿಮಾಗೆ ಅವರೂ ಬಂಡವಾಳ ಹೂಡಿದ್ದಾರೆ. ಇದೀಗ ಸತತ ಶೂಟಿಂಗ್ ನಲ್ಲಿ ಯಶ್ ಬ್ರೇಕ್ ತೆಗೆದುಕೊಂಡಿದ್ದಾರೆ. ಇದೀಗ ಕುಟುಂಬ ಸಮೇತ ಅಮೆರಿಕಾಗೆ ಪ್ರಯಾಣ ಬೆಳೆಸಿದ್ದಾರೆ. ಇಲ್ಲಿ ಕೆಲವು ದಿನ ಕಾಲ ಕಳೆದು ವಾಪಸ್ ಆಗಲಿದ್ದಾರೆ.
ಬೆಂಗಳೂರು: ನಾವು ಮತ್ತೆ ಅಧಿಕಾರಕ್ಕೆ ಬಂದರೆ ಆರ್ ಎಸ್ಎಸ್ ನಿಷೇಧ ಮಾಡುವುದಾಗಿ ಹೇಳಿಕೆ ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆಗೆ ಹಿಂದೂ ಸಂಘಟನೆಗಳು, ಬೆಂಬಲಿಗರು ಮೊದಲು ಗೆಲ್ಲಿ ಆಮೇಲೆ ಬ್ಯಾನ್ ಮಾಡಿ ಎಂದು ಸವಾಲು ಹಾಕಿದ್ದಾರೆ. ಈ ಹಿಂದೆ ನಾವು ಅಧಿಕಾರದಲ್ಲಿದ್ದಾಗ ಆರ್ ಎಸ್ಎಸ್ ನ್ನು ಬ್ಯಾನ್ ಮಾಡಲು ಮುಂದಾಗಿದ್ದೆವು. ಆಗ ಅವರು ಕೈ ಕಾಲು ಹಿಡ್ಕೊಂಡ್ರು ಅಂತ ಹಿಂತೆಗೆದುಕೊಂಡೆವು. ಆದರೆ ಆಗ ನಾವು ಹಾಗೆ ಮಾಡಿದ್ದೇ ತಪ್ಪಾಯ್ತು. ಇನ್ನೊಂದು ಸಲ ನಾವು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಗ ಆರ್ ಎಸ್ಎಸ್ ನಿಷೇಧ ಮಾಡುತ್ತೇವೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದರು.
ಎಜ್ ಬಾಸ್ಟನ್: ಭಾರತ ಮತ್ತು ಇಂಗ್ಲೆಂಡ್ ನಡುವೆ ನಾಳೆಯಿಂದ ಆರಂಭವಾಗಲಿರುವ ಎರಡನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ ಒಂದು ಬದಲಾವಣೆಯಂತೂ ಖಚಿತವೆನ್ನಲಾಗಿದೆ. ಮೊದಲ ಟೆಸ್ಟ್ ಪಂದ್ಯವನ್ನು ಗೆಲ್ಲುವ ಎಲ್ಲಾ ಅವಕಾಶವಿದ್ದೂ ಸೋತ ಭಾರತ ಈಗ ಎರಡನೇ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಒಟ್ಟು ಐದು ಪಂದ್ಯಗಳ ಸರಣಿಯಲ್ಲಿ ಟೀಂ ಇಂಡಿಯಾ ಈಗಾಗಲೇ 0-1 ರಿಂದ ಹಿನ್ನಡೆ ಅನುಭವಿಸಿದೆ. ಮೊದಲ ಪಂದ್ಯದಲ್ಲಿ ತಂಡದ ಅಗ್ರ ಕ್ರಮಾಂಕದ ಬ್ಯಾಟಿಗರ ಬಗ್ಗೆ ಸೊಲ್ಲೆತ್ತುವಂತಿರಲಿಲ್ಲ. ಆದರೆ ಕೆಳ ಕ್ರಮಾಂಕದ ಬ್ಯಾಟಿಗರು ಕೈ ಕೊಟ್ಟರು.
ಬೆಂಗಳೂರು: ಇತ್ತೀಚೆಗಿನ ದಿನಗಳಲ್ಲಿ ಚಿಕ್ಕವಯಸ್ಸಿನವರಲ್ಲೂ ಹೃದಯಾಘಾತದ ಪ್ರಕರಣಗಳು ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ ಹೃದ್ರೋಗ ತಜ್ಞರೂ ಆಗಿರುವ ಸಂಸದ ಡಾ ಮಂಜುನಾಥ್ ನಮ್ಮ ಹೃದಯ ಕಾಪಾಡಿಕೊಳ್ಳಲು ಯಾವತ್ತೂ ಹೇಳುವ ಈ ಟಿಪ್ಸ್ ತಪ್ಪದೇ ಪಾಲಿಸಬೇಕು. ಹೃದಯ ರೋಗ ತಜ್ಞರೆಂದರೆ ಮೊದಲು ನೆನಪಿಗೆ ಬರುವವರೇ ಡಾ ಸಿ ಮಂಜುನಾಥ್. ಜಯದೇವ ಆಸ್ಪತ್ರೆಯ ಆಡಳಿತಾಧಿಕಾರಿಯಾಗಿ ಅವರು ಮಾಡಿರುವ ಸಾಧನೆಗಳೇ ಅಂತಹದ್ದು. ಇದೀಗ ಸಂಸದರಾಗಿದ್ದರೂ ವೈದ್ಯ ವೃತ್ತಿಯನ್ನು ಸಂಪೂರ್ಣವಾಗಿ ಬಿಟ್ಟಿಲ್ಲ. ಇತ್ತೀಚೆಗೆ ಯುವಜನಾಂಗದಲ್ಲೂ ಕಾಡುತ್ತಿರುವ ಹೃದಯಾಘಾತದ ಬಗ್ಗೆ ಅವರು ಅಮೂಲ್ಯ ಸಲಹೆಗಳನ್ನು ಹಿಂದಿನಿಂದಲೂ ನೀಡುತ್ತಾ ಬಂದಿದ್ದಾರೆ. -ರಕ್ತದೊತ್ತಡ ಬಾರದಂತೆ ನಮ್ಮ ಜೀವನ ಶೈಲಿಯಿರಬೇಕು. ರಕ್ತದೊತ್ತಡವೇ ಹೃದಯಾಘಾತಕ್ಕೆ ಪ್ರಮುಖ ಕಾರಣವಾಗಬಹುದು.
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 12 ಕ್ಕೂ ಕಿಚ್ಚ ಸುದೀಪ್ ಅವರೇ ನಿರೂಪಣೆ ಮಾಡುವುದು ಕನ್ ಫರ್ಮ್ ಆಗಿದೆ. ಈ ಸೀಸನ್ ನಲ್ಲಿ ಅವರು ಪಡೆಯಲಿರುವ ಸಂಭಾವನೆ ಬಗ್ಗೆ ಅವರು ನಿನ್ನೆಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ. ಬಿಗ್ ಬಾಸ್ ಕನ್ನಡ 1 ರಿಂದ 11 ನೇ ಸೀಸನ್ ವರೆಗೂ ಸುದೀಪ್ ಅವರೇ ನಿರೂಪಣೆ ಮಾಡಿದ್ದಾರೆ. ಆದರೆ ಕಳೆದ ಸೀಸನ್ ಬಳಿಕ ಅವರು ಇನ್ನು ಬಿಗ್ ಬಾಸ್ ನಿರೂಪಣೆ ಮಾಡಿಲ್ಲ ಎಂದು ಘೋಷಿಸಿದ್ದರು. ಆದರೆ ಈಗ ಮತ್ತೆ ಅವರ ಮನವೊಲಿಸಿ ಕರೆತರಲಾಗಿದೆ. ಇನ್ನು ನಾಲ್ಕು ಸೀಸನ್ ಗೆ ಸಹಿ ಕೂಡಾ ಹಾಕಲಾಗಿದೆ ಎಂದು ಸುದೀಪ್ ಅವರೇ ಹೇಳಿದ್ದಾರೆ.
ಬೆಂಗಳೂರು: ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ ಕಾಣಿಸಿಕೊಂಡಿದ್ದು ಡ್ಯೂಟಿ ಡಾಕ್ಟರ್ ಸಮಯಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ. ಸುಟ್ಟ ಗಾಯಗಳ ವಿಭಾಗದಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ. ಫ್ರಿಡ್ಜ್, ರಿಜಿಸ್ಟರ್ ಬುಕ್ ಸೇರಿದಂತೆ ಆಸ್ಪತ್ರೆಯ ಪರಿಕರಗಳಿಗೆ ಹಾನಿಯಾಗಿದೆ. ಈ ವೇಳೆ ಕರ್ತವ್ಯದಲ್ಲಿದ್ದ ಡಾ. ದಿವ್ಯ ಸಮಯ ಪ್ರಜ್ಞೆಯಿಂದ ರೋಗಿಗಳ ಜೀವ ಉಳಿದಿದೆ. 26 ರೋಗಿಗಳನ್ನು ಬೇರೆಡೆ ಶಿಫ್ಟ್ ಮಾಡಲಾಗಿದೆ. ವಾರ್ಡ್ ನಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ 26 ಮಂದಿಯನ್ನು ತಕ್ಷಣವೇ ಶಿಫ್ಟ್ ಮಾಡಲಾಗಿದೆ. ಮುಂಜಾನೆ ಸುಮಾರು 3.30 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ.
ಬೆಂಗಳೂರು: ರಾಜ್ಯದಲ್ಲಿ ಈ ವಾರವಿಡೀ ಮಳೆಯ ಅಬ್ಬರ ಕೊಂಚ ಕಡಿಮೆಯೇ ಎನ್ನಬಹುದು. ಹಾಗಿದ್ದರೂ ಕೆಲವು ಜಿಲ್ಲೆಗಳಿಗೆ ಇಂದೂ ಮಳೆಯಾಗಲಿದೆ. ಮಳೆಗಾಗಿ ಕಾಯುತ್ತಿದ್ದರೆ ಇಂದಿನ ಹವಾಮಾನ ವರದಿಯನ್ನು ತಪ್ಪದೇ ಗಮನಿಸಿ. ರಾಜ್ಯದಲ್ಲಿ ಕಳೆದ ವಾರ ಇದ್ದಷ್ಟು ಮಳೆ ಈ ವಾರ ಕಂಡುಬರುತ್ತಿಲ್ಲ. ನಿನ್ನೆಯೂ ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿದರೆ ಉಳಿದ ಜಿಲ್ಲೆಗಳಲ್ಲಿ ಅಷ್ಟಾಗಿ ಮಳೆಯಿರಲಿಲ್ಲ. ಇಂದೂ ಬಹುತೇಕ ಅದೇ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿಗೆ ಈ ಬಾರಿ ಮಳೆ ಕಡಿಮೆ. ಬದಲಾಗಿ ಮೋಡ ಕವಿದ ವಾತಾವರಣ ಅಥವಾ ತುಂತುರು ಮಳೆಯಿರುತ್ತದೆ.
ಕೆಲವರು ನಾಗದೋಷದಿಂದಾಗಿ ನಾನಾ ಸಮಸ್ಯೆಗಳನ್ನು ಎದುರಿಸುತ್ತಾರೆ. ನಾಗ ದೇವರ ಪೂಜೆ, ಸುಬ್ರಹ್ಮಣ್ಯ ದೇವರ ಪೂಜೆ ಜೊತೆಗೆ ಪ್ರತಿನಿತ್ಯ ನಾಗ ಕವಚಂ ಸ್ತೋತ್ರ ಓದುವುದರಿಂದ ದೋಷ ಪರಿಹಾರ ಕಂಡುಕೊಳ್ಳಬಹುದು.ಧ್ಯಾನಂನಾಗರಾಜಸ್ಯ ದೇವಸ್ಯ ಕವಚಂ ಸರ್ವಕಾಮದ೦ಜಷಿರಸ್ಕ್ಯ ಮಹಾದೇವೋ ಗಾಯತ್ರೀ ಛ೦ದ ಈರಿತ೦ತಾರಾಬೀಜ೦ ಶಿವಾಶಕ್ತಿ: ಕ್ರೋಧಬೀಜಸ್ತು ಕೀಲಕ:ದೇವತಾ ನಾಗರಾಜಸ್ತು ಫಣಾಮಣಿ ವಿರಾಜಿತ:ಸರ್ವಕಾಮಾರ್ಥ ಸಿದ್ಧ್ಯರ್ಥ್ಕೇ ವಿನಿಯೋಗ: ಪ್ರಕೀರ್ತಿತ:ನಾಗ ಕವಚಂಅನ೦ತೋಮೇ ಶಿರ: ಪಾತು ಕ೦ಠ೦ ಸ೦ರಕ್ಷಣ ಸ್ತಥಾಕರ್ಕೋಟಕೋ ನೇತ್ರ ಯುಗ್ಗೂ ಕಪಿಲಂ ಕರ್ಣಯುಗ್ನಹ೦ವಕ್ಷಸ್ಥಲಂ೦ ನಾಗಯಕ್ಷ: ಬಾಹೂ ಕಾಲ ಭುಜ೦ಗಮ:
ಉಡುಪಿ: ರಾಜ್ಯಕ್ಕೆ ಆಗಮಿಸಿರುವ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಜನರ ಕಷ್ಟ ಕೇಳಲು ಬಂದಿರುವುದಲ್ಲ, ಕಪ್ಪ ಕೇಳಲು ಬಂದಿರುವುದಾಗಿ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊಗಲರ ಆಳ್ವಿಕೆಯ ಹಾಗೇ ಕಾಂಗ್ರೆಸ್ನಲ್ಲೂ ಕಪ್ಪ ಕೊಡುವ ವಾಡಿಕೆಯಿದೆ. ರಾಜ್ಯ ಕಾಂಗ್ರೆಸ್ನವರು ಕೇಂದ್ರದ ಕಾಂಗ್ರೆಸ್ಗೆ ಕಪ್ಪ ಕೊಡಬೇಕು. ಕೊಡದಿದ್ದರೆ ಅವರು ಪದಚ್ಯುತಿಗೊಳ್ಳುತ್ತಾರೆ. ಹಿಂದೆ ಕಪ್ಪ ಕೊಡದ ಕಾರಣಕ್ಕೆ ವೀರೇಂದ್ರ ಪಾಟೀಲ ಅವರನ್ನು ಪಕ್ಷದಿಂದ ಪದಚ್ಯುತಿಗೊಳಿಸಲಾಗಿತ್ತು. ಯಾರು ಅಧಿಕಾರದಲ್ಲಿ
ದಳಪತಿ ವಿಜಯ್ ನಟನೆಯ ಬಹುನಿರೀಕ್ಷಿತ ‘ಜನ ನಾಯಗನ್’ ಚಿತ್ರದ ಫಸ್ಟ್ಲುಕ್ ಬಿಡುಗಡೆಯಾಗಿದ್ದು, 24 ಗಂಟೆಗಳಲ್ಲಿ 3.2 ಕೋಟಿಗೂ ಅಧಿಕ ವೀಕ್ಷಣೆ ಪಡೆದಿದೆ.ಕೆ.ವಿ.ಎನ್ ಸಂಸ್ಥೆ ಬಂಡವಾಳ ಹೂಡಿದ ಈ ಚಿತ್ರವನ್ನು ವಿದೇಶದಲ್ಲೂ ಬಿಡುಗಡೆ ಮಾಡಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. 2026ರ ಜನವರಿ 9ರಂದು ಚಿತ್ರ ತೆರೆಗೆ ಬರಲಿದೆ.ಈ ಸಿನಿಮಾ ದಳಪತಿ ವಿಜಯ್ ನಟನೆಯ 69ನೇ ಚಿತ್ರವಾಗಿದ್ದು, ವಿಜಯ್ ಅವರ 51ನೇ ಹುಟ್ಟುಹಬ್ಬ ಹಿನ್ನೆಲೆ ಚಿತ್ರದ ಫಸ್ಟ್ಲುಕ್
ಹೈದರಾಬಾದ್: ತೆಲಂಗಾಣದ ಎಲ್ಲಾ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿಮೀ ವೇಗದಲ್ಲಿ ಮಿಂಚು ಮತ್ತು ಬಲವಾದ ಮೇಲ್ಮೈ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.ಮುಂದಿನ 24 ರಿಂದ 48 ಗಂಟೆಗಳಲ್ಲಿ ಜಯಶಂಕರ್ ಭೂಪಾಲಪಲ್ಲಿ, ಮುಳುಗು ಮತ್ತು ಭದ್ರಾದ್ರಿ ಕೊತ್ತಗುಡೆಂ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹೈದರಾಬಾದ್ ಹವಾಮಾನ ಇಲಾಖೆ ತಿಳಿಸಿದೆ. ತೆಲಂಗಾಣದ ಎಲ್ಲಾ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಲವಾದ ಗಾಳಿಯ ಎಚ್ಚರಿಕೆಯನ್ನು ನೀಡಲಾಗಿದೆ.
ಬೆಂಗಳೂರು: ಕರ್ನಾಟಕದಲ್ಲಿನ ಸಿಎಂ ಬದಲಾವಣೆ ಸಂಬಂಧದ ಊಹಾಪೋಹಕ್ಕೆ ಕರ್ನಾಟಕ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ತೆರೆ ಎಳೆದಿದ್ದಾರೆ. ಕರ್ನಾಟಕ ನಾಯಕತ್ವ ಬದಲಾವಣೆಯ ಕುರಿತು ಮಾಧ್ಯಮಗಳಲ್ಲಿ ಪ್ರಸಾರವಾಗುವ ಸುದ್ದಿ ಕೇವಲ ಕಪೋಲ ಕಲ್ಪಿತ ಎಂದರು. ಪಕ್ಷದ ಮೂಲಗಳ ಪ್ರಕಾರ, ತಮ್ಮ ಮೂರು ದಿನಗಳ ಪ್ರವಾಸದ ಮೊದಲ ಹಂತದ ಭಾಗವಾಗಿ, ಸುರ್ಜೇವಾಲಾ ಸೋಮವಾರ ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ಶಾಸಕರೊಂದಿಗೆ ಏಕಪಕ್ಷೀಯ ಸಭೆ ನಡೆಸಿದರು.
ಭಾರತೀಯ ಕ್ರಿಕೆಟಿಗ, ಆರ್ಸಿಬಿ ಆಟಗಾರ ಯಶ್ ದಯಾಳ್ ವಿರುದ್ಧ ಇದೀಗ ಗಂಭೀರ ಆರೋಪವೊಂದು ಕೇಳಿಬಂದಿದೆ. ಉತ್ತರ ಪ್ರದೇಶದ ಗಾಜಿಯಾಬಾದ್ನ ಮಹಿಳೆಯೊಬ್ಬರಲ್ಲಿ ಮದುವೆಯಾಗುವುದಾಗಿ ನಂಬಿಸಿ ಶೋಷಣೆ ಮಾಡಿರುವುದಾಗಿ ಮಹಿಳೆ ದೂರು ನೀಡಿದ್ದಾರೆ. ಮುಖ್ಯಮಂತ್ರಿಯವರ ಆನ್ಲೈನ್ ಕುಂದುಕೊರತೆ ಪೋರ್ಟಲ್ (ಐಜಿಆರ್ಎಸ್) ಮೂಲಕ ಸಲ್ಲಿಸಿದ ಔಪಚಾರಿಕ ದೂರಿನಲ್ಲಿ, ಅವರು ಐದು ವರ್ಷಗಳ ಕಾಲ ಸಂಬಂಧದಲ್ಲಿದ್ದು, ಆ ಸಮಯದಲ್ಲಿ ಅವರು ಭಾವನಾತ್ಮಕ, ಮಾನಸಿಕ ಮತ್ತು ದೈಹಿಕ ಕಿರುಕುಳವನ್ನು ನೀಡಿರುವುದಾಗಿ ಯಶ್ ದಯಾಳ್ ವಿರುದ್ಧ ದೂರು ನೀಡಿದ್ದಾರೆ.
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಗೌತಮಪುರ ಗ್ರಾಮದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಮನೆಯ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ ಕ್ಷುಲ್ಲಕ ಕಾರಣಕ್ಕೆ 67 ವರ್ಷದ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಥಳಿಸಲಾಗಿದೆ.ವೃದ್ಧೆಯನ್ನು ಆಕೆಯ ಮನೆಯಿಂದ ಹೊರಗೆ ಎಳೆದುಕೊಂಡು ಹೋಗಿ, ಕಂಬಕ್ಕೆ ಕಟ್ಟಿ ನೆರೆಹೊರೆಯವರು ಕ್ರೂರವಾಗಿ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ.ಜೂನ್ 24 ರ ಬೆಳಗ್ಗೆ ಈ ಘಟನೆ ನಡೆದಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಘಟನೆಯ ಮರುದಿನ ಪೊಲೀಸರು ತಕ್ಷಣ ಕ್ರಮ ಕೈಗೊಂಡು ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಬೆಂಗಳೂರು: ಸಹಕಲಾವಿದೆ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಬಂಧಿಯಾಗಿದ್ದ ನಟ ಮಡೆನೂರು ಮನುಗೆ ಇದೀಗ ಬಿಗ್ ರಿಲೀಫ್ ಸಿಕ್ಕಿದೆ. ಕನ್ನಡ ಚಿತ್ರರಂಗದ ಖ್ಯಾತ ನಟರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿ, ನಟನಿಗೆ ಕನ್ನಡ ಚಿತ್ರರಂಗದಿಂದ ವಿಧಿಸಿದ್ದ ನಿಷೇಧವನ್ನು ಫಿಲ್ಮ್ ಚೇಂಬರ್ ತೆರವು ಮಾಡಿದೆ.ಮನು ಅವರದ್ದು ಎನ್ನಲಾದ ವೈರಲ್ ಆದ ಆಡಿಯೋದಲ್ಲಿ ನಟರಾದ ಶಿವರಾಜ್ಕುಮಾರ್, ಧ್ರುವ ಸರ್ಜಾ ಮತ್ತು ದರ್ಶನ್ ಬಗ್ಗೆ ಕೆಟ್ಟದಾಗಿ ಮಾತನಾಡಲಾಗಿತ್ತು. ಆ ಹಿನ್ನೆಲೆಯಲ್ಲಿ ಮನು ಅವರನ್ನು ಚಿತ್ರರಂಗದಿಂದ ಬ್ಯಾನ್ ಮಾಡಲಾಗಿತ್ತು. ಆದರೆ ಮನು ಮೇಲೆ ಹೇರಿದ್ದ ನಿಷೇಧವನ್ನು ತೆರೆವುಗೊಳಿಸಲು ತೀರ್ಮಾನಿಸಲಾಗಿದೆ.
ನವದೆಹಲಿ: ಬಿಹಾರದ ಗಯಾ ಜಿಲ್ಲೆಯ ಲಾಂಗುರಿಯಾ ಬೆಟ್ಟದ ಜಲಪಾತದಲ್ಲಿ ಹಠಾತ್ ನೀರಿನ ರಭಸಕ್ಕೆ ಸಿಲುಕಿ ಆರು ಮಹಿಳೆಯರು ಪ್ರಾಣಾಪಾಯದಿಂದ ಪವಾಡ ಸದೃಶ್ಯ ಪಾರಾಗಿದ್ದಾರೆ. ಈ ದುರ್ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಏಕಾಏಕಿ ಜಲಪಾತದಲ್ಲಿ ನೀರು ಹರಿದಿದ್ದು ಇದರಿಂದ ಸಿಲುಕಿಕೊಂಡಿದ್ದ ಮಹಿಳೆಯರು ಬದುಕುಳಿಯಲು ಪ್ರಯತ್ನಿಸಿದ್ದು, ಗ್ರಾಮಸ್ಥರು ಸಹಾಯಕ್ಕೆ ಧಾವಿಸಿದ್ದಾರೆ.
ಬೆಂಗಳೂರು: ಕಾಂಗ್ರೆಸ್ ಸರಕಾರವು ದಿನದಿಂದ ದಿನಕ್ಕೆ ಹೇಗೆ ಬರ್ಬಾದ್ ಆಗುತ್ತಿದೆ, ಹೇಗೆ ಅಭಿವೃದ್ಧಿ ಶೂನ್ಯವಾಗುತ್ತಿದೆ, ಹೇಗೆ ಕಾಂಗ್ರೆಸ್ ಸರಕಾರದಲ್ಲಿ ಅಸಮಾಧಾನಿತÀ ಶಾಸಕರ ಸಂಖ್ಯೆ ಉಲ್ಬಣವಾಗುತ್ತಿದೆ ಎಂಬುದಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲಾ ಅವರೇ ಬೆಂಗಳೂರಿಗೆ ಧಾವಿಸಿ ಬಂದುದು ಸಾಕ್ಷೀಕರಿಸುತ್ತದೆ ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರು ತಿಳಿಸಿದ್ದಾರೆ.ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಶಾಸಕರಾದ ಬಿ.ಆರ್.ಪಾಟೀಲ್, ರಾಜು ಕಾಗೆ, ಬೇಳೂರು ಗೋಪಾಲಕೃಷ್ಣ- ಹೀಗೆ ಅನೇಕರನ್ನು ಕರೆದಿದ್ದಾರೆ.
ಪುತ್ತೂರು: ಬಿಜೆಪಿ ಮುಖಂಡನ ಪುತ್ರನೊಬ್ಬ ಮದುವೆಯಾಗಲು ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಗರ್ಭವತಿ ಮಾಡಿ ಬಳಿಕ ಮದುವೆಯಾಗಲು ನಿರಾಕರಿಸಿದ ಪ್ರಕರಣ ಸಂಬಂಧ ಸಂತ್ರಸ್ತೆ ಶುಕ್ರವಾರ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಈ ಮೂಲಕ ಈ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ನಾಪತ್ತೆಯಾದ ಆರೋಪಿಯ ಪತ್ತೆಗೆ ಪೊಲೀಸರು ಶೋಧ ನಡೆಸುತ್ತಿರುವ ನಡುವೆಯೇ, ಸಂಕೀರ್ಣ ಪ್ರಕರಣದ ರಹಸ್ಯ ಬಯಲಿಗೆಳೆಯಲು ಪೊಲೀಸರು ಮಗುವಿನ ಡಿಎನ್ಎ ಪರೀಕ್ಷೆಯ ಮೊರೆ ಹೋಗಲಿದ್ದಾರೆ.ಎಂಜಿನಿಯರಿಂಗ್ ಓದುತ್ತಿರುವ ಕೃಷ್ಣ ಜೆ.ರಾವ್ ವಿರುದ್ಧ ಸಂತ್ರಸ್ತೆ ಯುವತಿ ಪುತ್ತೂರು ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದು,