Shorts

ದೇವಿಯ ಅನುಗ್ರಹವಿದ್ದರೆ ಜೀವನದಲ್ಲಿ ಶತ್ರುಭಯ ನಾಶ, ಜೀವನದಲ್ಲಿ ಆತ್ಮವಿಶ್ವಾಸ, ಯಶಸ್ಸು ಸಮೃದ್ಧಿಯಾಗುತ್ತದೆ. ದೇವಿಯ ಅನುಗ್ರಹಕ್ಕಾಗಿ ಅಂಬಾ ಪಂಚರತ್ನ ಸ್ತೋತ್ರವನ್ನು ಓದಿ. ಕನ್ನಡದಲ್ಲಿ ಇಲ್ಲಿದೆ.ಅಂಬಾಶಂಬರವೈರಿತಾತಭಗಿನೀ ಶ್ರೀಚಂದ್ರಬಿಂಬಾನನಾಬಿಂಬೋಷ್ಠೀ ಸ್ಮಿತಭಾಷಿಣೀ ಶುಭಕರೀ ಕಾದಂಬವಾಟ್ಯಾಶ್ರಿತಾ ।ಹ್ರೀಂಕಾರಾಕ್ಷರಮಂತ್ರಮಧ್ಯಸುಭಗಾ ಶ್ರೋಣೀನಿತಂಬಾಂಕಿತಾಮಾಮಂಬಾಪುರವಾಸಿನೀ ಭಗವತೀ ಹೇರಂಬಮಾತಾವತು ॥ 1 ॥ ಕಲ್ಯಾಣೀ ಕಮನೀಯಸುಂದರವಪುಃ ಕಾತ್ಯಾಯನೀ ಕಾಲಿಕಾಕಾಲಾ ಶ್ಯಾಮಲಮೇಚಕದ್ಯುತಿಮತೀ ಕಾದಿತ್ರಿಪಂಚಾಕ್ಷರೀ ।ಕಾಮಾಕ್ಷೀ ಕರುಣಾನಿಧಿಃ ಕಲಿಮಲಾರಣ್ಯಾತಿದಾವಾನಲಾಮಾಮಂಬಾಪುರವಾಸಿನೀ ಭಗವತೀ ಹೇರಂಬಮಾತಾವತು ॥ 2 ॥ ಕಾಂಚೀಕಂಕಣಹಾರಕುಂಡಲವತೀ ಕೋಟೀಕಿರೀಟಾನ್ವಿತಾಕಂದರ್ಪದ್ಯುತಿಕೋಟಿಕೋಟಿಸದನಾ ಪೀಯೂಷಕುಂಭಸ್ತನಾ ।ಕೌಸುಂಭಾರುಣಕಾಂಚನಾಂಬರವೃತಾ ಕೈಲಾಸವಾಸಪ್ರಿಯಾಮಾಮಂಬಾಪುರವಾಸಿನೀ ಭಗವತೀ ಹೇರಂಬಮಾತಾವತು ॥ 3 ॥

ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಗೆಲ್ಲಲೇ ಬೇಕೆಂಬ ಪಣ ತೊಟ್ಟು ನಾವೆಲ್ಲ ಹೊರಟಿದ್ದೇವೆ. ಈ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿಗೆ ಪ್ರಯತ್ನವನ್ನು ನಾವು ನಿಶ್ಚಿತವಾಗಿ ಮಾಡಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.ಇಂದು ಇಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರ ನೀಡಿದರು. ಏನೇ ವ್ಯತ್ಯಾಸಗಳಿದ್ದರೂ ಅದನ್ನು ಸರಿಪಡಿಸುವ ಶಕ್ತಿ ನಮ್ಮೆಲ್ಲರಲ್ಲೂ ಇದೆ. ಹಾಗಾಗಿ ನಾನು ಇಲ್ಲಿಗೆ ಬಂದಿದ್ದೇನೆ. ನಮ್ಮ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯದ ಉಸ್ತುವಾರಿಗಳಾದ ರಾಧಾಮೋಹನ್ ದಾಸ್ ಅಗ್ರವಾಲ್ ಅವರೂ ಬಂದಿದ್ದಾರೆ. ಎಲ್ಲರೂ ಕುಳಿತು ಸಮಸ್ಯೆ ಬಗೆಹರಿಸುತ್ತೇವೆ. ಇದನ್ನು ಮುಂದುವರೆಯಲು ಬಿಡುವುದಿಲ್ಲ ಎಂದು ತಿಳಿಸಿದರು.

ಬೆಂಗಳೂರು: ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದಿಂದ ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ಬಂದಿಳಿದಿದ್ದಾರೆ.ಪ್ರವಾಸಕ್ಕೆ, ಉದ್ಯೋಗಕ್ಕೆ, ಬೇರೆ ಬೇರೆ ಕಾರಣಗಳಿಂದ ದುಬೈಗೆ ತೆರಳಿರುವ ಸಾವಿರಾರು ಭಾರತೀಯರು ಅಲ್ಲಿ ಸಿಲುಕಿದ್ದರು. ದುಬೈನಲ್ಲಿ ಸಿಲುಕಿದ್ದ ಬಳ್ಳಾರಿ, ಚಿತ್ರದುರ್ಗದ ಪ್ರವಾಸಿಗರು ನಾಲ್ಕು ದಿನದ ಬಳಿಕ ಇಂದು ಬೆಳಗ್ಗೆ ಬೆಂಗಳೂರಿಗೆ ಸುರಕ್ಷಿತವಾಗಿ ವಾಪಸಾಗಿದ್ದಾರೆ.ಬಳ್ಳಾರಿಯ 35 ಮಂದಿ ಹಾಗೂ ಚಿತ್ರದುರ್ಗ 15 ಮಂದಿ ಸೇರಿ 246 ಕನ್ನಡಿಗರು ಮಾ.4 ರಂದು ಶಾರ್ಜಾ ದಿಂದ ಕೊಚ್ಚಿನ್‍ಗೆ ಬಂದಿಳಿದಿದ್ದರು. 50 ಮಂದಿಗೆ ಅಲ್ಲಿಂದ ಬೆಂಗಳೂರಿಗೆ ಶಾಸಕ ಬಿ ನಾಗೇಂದ್ರ ಅವರು ವಿಮಾನದ ವ್ಯವಸ್ಥೆ ಮಾಡಿದ್ದರು. ಇಂದು ಬೆಳಗ್ಗೆ ಅವರೆಲ್ಲ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದರು.

ಪಟ್ನಾ: ಬಿಹಾರ ರಾಜಕಾರಣದಲ್ಲಿ ಮಿಂಚಿನ ಸಂಚಲನ ಉಂಟಾಗಿದೆ. ಕಳೆದ ಎರಡು ದಶಕಗಳಿಂದ ರಾಜ್ಯವನ್ನು ಮುನ್ನಡೆಸಿದ್ದ ನಿತೀಶ್‌ ಕುಮಾರ್‌ ಅವರು ಅಚ್ಚರಿಯ ಬೆಳವಣಿಗೆಯಲ್ಲಿ ರಾಷ್ಟ್ರ ರಾಜಕಾರಣದತ್ತ ಮುಖಮಾಡಿದ್ದಾರೆ.ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು 20 ವರ್ಷಕ್ಕಿಂತ ಹೆಚ್ಚು ಕಾಲ ವಹಿಸಿಕೊಂಡಿದ್ದ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿ ರಾಜ್ಯಸಭೆಗೆ ಸೇರುವುದಾಗಿ ಗುರುವಾರ ದೃಢಪಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿಅವರೇ ಖಚಿತಪಡಿಸಿದ್ದಾರೆ.ನನ್ನ ರಾಜಕೀಯ ಜೀವನದ ಆರಂಭದಿಂದಲೇ ಬಿಹಾರ ವಿಧಾನಮಂಡಲದ ಎರಡೂ ಸದನಗಳಲ್ಲೂ ಹಾಗೂ ಭಾರತದ ಸಂಸತ್ತಿನ ಎರಡೂ ಸದನಗಳಲ್ಲೂ ಸದಸ್ಯನಾಗಬೇಕೆಂಬ ಆಸೆ ನನ್ನ ಮನಸ್ಸಿನಲ್ಲಿ ಇತ್ತು. ನನ್ನ ಆಸೆಯಂತೆ ಈ ಬಾರಿ ನಡೆಯುತ್ತಿರುವ ಚುನಾವಣೆಯಲ್ಲಿ ರಾಜ್ಯಸಭೆ ಸದಸ್ಯನಾಗಲು ಬಯಸುತ್ತಿದ್ದೇನೆ ಎಂದು ನಿತೀಶ್‌ ಕುಮಾರ್‌ ತಿಳಿಸಿದ್ದಾರೆ.

ಬೆಂಗಳೂರು: ಕರ್ನಾಟಕ ತಂಡದ ವೇಗಿ ವೈಶಾಕ್ ವಿಜಯ್‌ಕುಮಾರ್ ಹೊಸ ಇನಿಂಗ್ಸ್‌ ಆರಂಭಿಸಿದ್ದಾರೆ. ವೈಶಾಕ್ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.ವೈಶಾಖ್‌ ಅವರು ಗುರುವಾರದಂದು ಬೆಂಗಳೂರಿನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ತಮ್ಮ ಬಹುಕಾಲದ ಗೆಳತಿ ಸಾಗರಿಕ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದರು. ನಟ ಕಿಚ್ಚ ಸುದೀಪ್ ಸೇರಿದಂತೆ ಹಲವು ಗಣ್ಯರು ಶುಭ ಕೋರಿದ್ದಾರೆ.ನಗರದ ಮೈನ್ ಪ್ಯಾಲೇಸ್​ನಲ್ಲಿ ನಡೆದ ಈ ಅದ್ಧೂರಿ ವಿವಾಹದಲ್ಲಿ ಕುಟುಂಬಸ್ಥರು, ಆಪ್ತರು ಹಾಗೂ ಕ್ರಿಕೆಟ್ ಲೋಕದ ಗಣ್ಯರು ಸಾಕ್ಷಿಯಾಗಿದ್ದರು. ಸ್ಯಾಂಡಲ್‌ವುಡ್ ಬಾದ್‌ಶಾ ಕಿಚ್ಚ ಸುದೀಪ್ ಅವರು ನವಜೋಡಿಗೆ ಶುಭ ಹಾರೈಸಿದರು.29 ವರ್ಷದ ವೈಶಾಕ್ ಆರಂಭದಲ್ಲಿ ಬ್ಯಾಟರ್ ಆಗಿ ಕರ್ನಾಟಕದ ಅಂಡರ್-16 ತಂಡವನ್ನು ಮುನ್ನಡೆಸಿದ್ದ ಇವರು, ನಂತರ ವೇಗದ ಬೌಲರ್ ಆಗಿ ರೂಪಾಂತರಗೊಂಡರು.