ನವದೆಹಲಿ: ಅಮೆರಿಕ ಜೊತೆ ಉತ್ತಮ ಬಾಂಧವ್ಯ ಹೊಂದಿ ಭಾರತದ ವಿರುದ್ಧ ಸದಾ ಕತ್ತಿ ಮಸೆಯುತ್ತಿದ್ದ ಪಾಕ್ಗೆ ಬಿಗ್ಶಾಕ್ ಎದುರಾಗಿದೆ. ಅಮೆರಿಕಾ ಬಿಡುಗಡೆ ಮಾಡಿದ ನಕ್ಷೆಯನ್ನು ಕಂಡು ಪಾಕಿಸ್ತಾನ ಕಂಗಾಲಾಗಿದೆ.ಭಾರತ-ಅಮೆರಿಕ ನಡುವಣ ದ್ವಿಪಕ್ಷೀಯ ಮಧ್ಯಂತರ ವ್ಯಾಪಾರ ಒಪ್ಪಂದದ ಕುರಿತು ಅಮೆರಿಕಾ ಬಿಡುಗಡೆ ಮಾಡಿರುವ ನಕ್ಷೆ ಪಾಕಿಸ್ತಾನದ ಕೆಂಗಣ್ಣಿಗೆ ಗುರಿಯಾಗಿದೆ. ಇತ್ತೀಚೆಗಿನ ವರ್ಷಗಳಲ್ಲಿ ವಿಶೇಷವಾಗಿಯೂ ಪಾಕ್ ಮೇಲೆ ಭಾರತದ ಆಪರೇಷನ್ ಸಿಂಧೂರ ಮಿಲಿಟರಿ ಕಾರ್ಯಾಚರಣೆಯ ಬಳಿಕ ಅಮೆರಿಕದೊಂದಿಗೆ ಪಾಕಿಸ್ತಾನ ಉತ್ತಮ ಬಾಂಧವ್ಯ ಕಾಪಾಡಿಕೊಂಡಿತ್ತು. ವ್ಯಾಪಾರ ಒಪ್ಪಂದ ಸಂಬಂಧ ಯುನೈಟೆಡ್ ಸ್ಟೇಟ್ಸ್ ಆಫ್ ಟ್ರೇಡ್ ರೆಪ್ರೆಸೆಂಟೇಟಿವ್ ಬಿಡುಗಡೆ ಮಾಡಿರುವ ಭಾರತದ ಭೂಪಟದಲ್ಲಿ ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎಂದು ಬಿಂಬಿಸಿದೆ.
ಮುಂಬೈ: ಮುಂಬೈ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಚಾರಿತ್ರಿಕ ಗೆಲುವು ಸಾಧಿಸಿದ ಬೆನ್ನಲ್ಲೇ ಮೇಯರ್ ಗಿರಿಗೆ ಅಭ್ಯರ್ಥಿಯ ಆಯ್ಕೆ ನಡೆದಿದೆ. ರಿತು ತಾವಡೆ ಅವರನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ಅಭ್ಯರ್ಥಿಯಾಗಿ ಶನಿವಾರ ಆಯ್ಕೆ ಮಾಡಿದೆ. ಬಿಜೆಪಿ ಮೈತ್ರಿಪಕ್ಷ ಶಿವಸೇನೆ ಸಂಜಯ್ ಘಾಡಿ ಅವರನ್ನು ಉಪ ಮೇಯರ್ ಹುದ್ದೆಗೆ ತನ್ನ ಅಭ್ಯರ್ಥಿಯಾಗಿ ಘೋಷಿಸಿದೆ. ರಿತು ತಾವಡೆ ವಾರ್ಡ್ ಸಂಖ್ಯೆ 132ರ ಕಾರ್ಪೊರೇಟರ್ ಆಗಿದ್ದಾರೆ. ಸಂಜಯ್ ಘಾಡಿ ವಾರ್ಡ್ ಸಂಖ್ಯೆ 5ರಿಂದ ಆಯ್ಕೆಯಾಗಿದ್ದಾರೆ. ಸಂಜಯ್ ಈ ಹಿಂದೆ 15 ತಿಂಗಳ ಕಾಲ ಉಪಮೇಯರ್ ಆಗಿ ಕೆಲಸ ಮಾಡಿದ್ದರು.227 ಸದಸ್ಯ ಬಲದ ಪಾಲಿಕೆ ಚುನಾವಣೆ ಇತ್ತೀಚೆಗೆ ನಡೆದಿತ್ತು. ಬಿಜೆಪಿ 89 ಸ್ಥಾನಗಳೊಂದಿಗೆ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.
ಅಮರಾವತಿ: ತಿರುಮಲ ತಿರುಪತಿ ಶ್ರೀ ವೆಂಕಟೇಶ್ವರ ದೇವಸ್ಥಾನದ ಲಡ್ಡು ಪ್ರಸಾದ ಕಲಬೆರಕೆ ಪ್ರಕರಣ ಸ್ಫೋಟಕ ಟ್ವಿಸ್ಟ್ ಪಡೆದುಕೊಂಡಿದೆ. ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮಹತ್ವದ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ. ಹಿಂದಿನ ವೈಎಸ್ಆರ್ಸಿಪಿ ಸರ್ಕಾರದ ಅವಧಿಯಲ್ಲಿ ಲಡ್ಡುಗಳನ್ನು ತಯಾರಿಸಲು ಐದು ವರ್ಷ ಬಾತ್ರೂಮ್ ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕ ಬೆರೆತಿದ್ದ ಕಲಬೆರಕೆ ತುಪ್ಪ ಬಳಕೆ ಮಾಡಲಾಗಿತ್ತು ಎಂದು ಎನ್. ಚಂದ್ರಬಾಬು ನಾಯ್ಡು ಆರೋಪಿಸಿದ್ದಾರೆ.ಕಲಬೆರಕೆ ತುಪ್ಪ ಬಳಕೆ ಮಾಡಿದ ಪ್ರಸಾದದಿಂದ ತಿರುಪತಿಯ ದೇವಾಲಯದ ಪಾವಿತ್ರ್ಯತೆಗೆ ಧಕ್ಕೆ ಉಂಟಾಗಿದೆ. ಇದನ್ನು ಸರಿಪಡಿಸಲು ನಾವು ಪ್ರಯತ್ನಿಸುತ್ತಿದ್ದೇವೆ ಎಂದು ನಾಯ್ಡು ತಿಳಿಸಿದರು.
ಮುಂಬೈ: ಟಿ20 ವಿಶ್ವಕಪ್ ಇಂದು ಆರಂಭವಾಗಲಿದ್ದು ಮೊದಲ ಪಂದ್ಯ ಆರಂಭಕ್ಕೆ ಮುನ್ನವೇ ಟೀಂ ಇಂಡಿಯಾಗೆ ಶಾಕ್ ಎದುರಾಗಿದೆ. ಈ ಸ್ಟಾರ್ ಆಟಗಾರ ಇಂದು ಆಡುವುದು ಅನುಮಾನವಾಗಿದೆ. ನಿನ್ನೆಯಷ್ಟೇ ಅಭ್ಯಾಸದ ವೇಳೆ ಗಾಯಗೊಂಡಿದ್ದ ವೇಗಿ ಹರ್ಷಿತ್ ರಾಣಾ ಟೂರ್ನಿಯಿಂದಲೇ ಹೊರಬಿದ್ದಿದ್ದರು. ಅವರ ಸ್ಥಾನಕ್ಕೆ ಮೊಹಮ್ಮದ್ ಸಿರಾಜ್ ರನ್ನು ತಂಡಕ್ಕೆ ಕರೆಸಿಕೊಳ್ಳಲಾಗಿದೆ. ಇದರ ಬೆನ್ನಲ್ಲೇ ಈಗ ಬುಮ್ರಾ ಬಗ್ಗೆ ಅಹಿತ ಸುದ್ದಿಯೊಂದು ಕೇಳಿಬರುತ್ತಿದೆ. ಜಸ್ಪ್ರೀತ್ ಬುಮ್ರಾ ಅನಾರೋಗ್ಯಕ್ಕೊಳಗಾಗಿದ್ದು ಇಂದಿನ ಪಂದ್ಯದಲ್ಲಿ ಆಡುವುದು ಅನುಮಾನವೆನ್ನಲಾಗಿದೆ.
ಬೆಂಗಳೂರು: ಮೆಟ್ರೊ ದರ ಏರಿಕೆಯಲ್ಲಿ ರಾಜ್ಯ ಸರ್ಕಾರದ ಪಾತ್ರವಿಲ್ಲ. ದೆಹಲಿಯಲ್ಲಿ ಕರ್ನಾಟಕದ ಹಿತಾಸಕ್ತಿಗಳನ್ನು ರಕ್ಷಿಸುವಲ್ಲಿ ವಿಫಲರಾದ ಬಿಜೆಪಿ ನಾಯಕರು ಈಗ ಬೆಂಗಳೂರಿನಲ್ಲಿ ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.ನಮ್ಮ ಮೆಟ್ರೋ ಪ್ರಯಾಣ ದರ ಹೆಚ್ಚಳಕ್ಕೆ ಸಂಬಂಧಿಸಿದಂತೆ ಮತ್ತೆ ಆಡಳಿತರೂಢ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಆರೋಪ ಪ್ರತ್ಯಾರೋಪ ಜೋರಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿದ್ದಾರೆ.ಈ ವಿಚಾರದಲ್ಲಿ ಕರ್ನಾಟಕ ಸರ್ಕಾರವನ್ನು ದೂಷಿಸುವುದು ವಾಸ್ತವಿಕವಾಗಿ ತಪ್ಪು ಮತ್ತು ಉದ್ದೇಶಪೂರ್ವಕವಾಗಿ ದಾರಿತಪ್ಪಿಸಲಾಗುತ್ತಿದೆ ಎಂದು ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ. ಕಾನೂನು ಚೌಕಟ್ಟು ಏನೇ ಇದ್ದರೂ, ರಾಜ್ಯ ಸರ್ಕಾರವು ಜನರ ಪರವಾಗಿ ನಿಲ್ಲಲಿದೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಬೆಂಗಳೂರು: ಯತೀಂದ್ರ ಅವರೇ ನಮ್ಮ ಹೈಕಮಾಂಡ್ ಎಂದು ವ್ಯಂಗ್ಯ ಮಾಡಿದ್ದ ಡಿಕೆ ಶಿವಕುಮಾರ್ ಗೆ ಪ್ರತಿಕ್ರಿಯಿಸಿದ್ದಾರೆ. ಯಾವಾಗ್ಲೂ ಹೈಕಮಾಂಡ್ ಹೈಕಮಾಂಡೇ ಎಂದಿದ್ದಾರೆ. ಯತೀಂದ್ರ ನಿನ್ನೆ ಮಾಧ್ಯಮಗಳ ಮುಂದೆ ಸಿದ್ದರಾಮಯ್ಯನವರೇ ಐದು ವರ್ಷವೂ ಮುಂದುವರಿಯುತ್ತಾರೆ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಡಿಕೆ ಶಿವಕುಮಾರ್, ಯತೀಂದ್ರ ಅವರೇ ನಮ್ಮ ಹೈಕಮಾಂಡ್. ಅವರು ಹೇಳಿದ್ಮೇಲೆ ಮುಗೀತು ಎಂದು ವ್ಯಂಗ್ಯ ಮಾಡಿದ್ದರು. ಡಿಕೆಶಿ ಹೇಳಿಕೆಗೆ ಇಂದು ಪ್ರತಿಕ್ರಿಯಿಸಿರುವ ಯತೀಂದ್ರ, ‘ಯಾವತ್ತಿದ್ರೂ ಹೈಕಮಾಂಡ್ ಹೈಕಮಾಂಡೇ. ಹೈಕಮಾಂಡ್ ಅವರ ತೀರ್ಮಾನಕ್ಕೇ ಎಲ್ಲರೂ ಬದ್ಧರಾಗಿರುತ್ತಾರೆ.
ಕೆಲವರಿಗೆ ತಿಂಗಳಿಗೆ ಸರಿಯಾಗಿ ಮುಟ್ಟು ಬರಲ್ಲ. ಮುಟ್ಟು ತಡವಾಗುವುದಕ್ಕೆ ಕಾರಣಗಳು ಅನೇಕ. ಅವುಗಳು ಯಾವುವೆಲ್ಲಾ ಇಲ್ಲಿದೆ ನೋಡಿ ವಿವರ. ಮೂಡ್ ಬದಲಾವಣೆ: ಕೆಲವೊಮ್ಮೆ ಅತಿಯಾದ ದುಃಖ, ಖುಷಿ, ಒತ್ತಡ, ಆತಂಕ, ಭಯ ಮೊದಲಾದ ಮೂಡ್ ಬದಲಾವಣೆಗಳು ಮುಟ್ಟಿನ ಮೇಲೆ ಪರಿಣಾಮ ಬೀರಬಹುದು.ಆಹಾರ ಬದಲಾವಣೆ: ಅತಿಯಾದ ಕೆಫೈನ್ ಅಂಶದ ಆಹಾರ ಸೇವನೆ, ಅತಿಯಾದ ಖಾರದ ಆಹಾರ ಸೇವನೆ, ಹೈ ಪ್ರೊಟೀನ್ ಆಹಾರಗಳು ಮುಟ್ಟು ತಡವಾಗುವುದಕ್ಕೆ ಕಾರಣಗಳಾಗಬಹುದು.ಹಾರ್ಮೋನ್ ಬದಲಾವಣೆ: ವಯಸ್ಸು 30 ದಾಟಿದ ಮೇಲೆ ಮಹಿಳೆಯರಲ್ಲಿ ಹಾರ್ಮೋನ್ ಬದಲಾವಣೆಗಳಾಗುತ್ತವೆ. ಥೈರಾಯ್ಡ್ ಹೆಚ್ಚಳ, ಈಸ್ಟ್ರೋಜನ್ ಮತ್ತು ಪ್ರೊಜೆಸ್ಟಿರೋನ್ ಹಾರ್ಮೋನ್ ಸರಿಯಾಗಿ ಬಿಡುಗಡೆ ಆಗದೇ ಇರುವುದು ಕಾರಣವಾಗಬಹುದು.
ಬೆಂಗಳೂರು: ಜನರಿಗೆ ತೊಂದರೆ ಕೊಡಕ್ಕೆ ಬಿಡಲ್ಲ. ಮೆಟ್ರೋ ದರ ಪರಿಷ್ಕರಣೆ ಬಗ್ಗೆ ಮಾತನಾಡುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಫೆಬ್ರವರಿ 9 ರಿಂದ ಮೆಟ್ರೋ ದರ ಶೇ.5 ರಷ್ಟು ಹೆಚ್ಚಳವಾಗುವುದಾಗಿ ಈಗಾಗಲೇ ಘೋಷಣೆಯಾಗಿದೆ. ಆದರೆ ಕಳೆದ ವರ್ಷವಷ್ಟೇ ಹೆಚ್ಚಳವಾಗಿತ್ತು. ಈಗ ಮತ್ತೆ ಒಂದೇ ವರ್ಷದ ಅಂತರದಲ್ಲಿ ಮತ್ತೆ ಏರಿಕೆ ಮಾಡುತ್ತಿರುವುದಕ್ಕೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್ ‘ಮೆಟ್ರೋ ದರ ಪರಿಷ್ಕರಣೆ ವಿಚಾರವಾಗಿ ಯಾರೂ ನಮ್ಮ ಜೊತೆ ಚರ್ಚಿಸಿಲ್ಲ.
ಮನುಷ್ಯರ ತಂತ್ರಜ್ಞಾನಗಳು ಪ್ರಾಣಿಗಳಿಗೆ ತಲೆಬುಡ ಅರ್ಥವಾಗಲ್ಲ. ಇದೇ ರೀತಿ ಎಸ್ಕಲೇಟರ್ ಏರಲು ಹೋದ ಬೆಕ್ಕು ಫುಲ್ ಕನ್ ಫ್ಯೂಸ್ ಫನ್ನಿ ವಿಡಿಯೋ ವೈರಲ್ ಆಗಿದೆ. ಸಾಮಾನ್ಯವಾಗಿ ಬೆಕ್ಕುಗಳು ಸೂಕ್ಷ್ಮ ಸಂವೇದಿಗಳು. ಬಹುಬೇಗನೇ ಎಲ್ಲವನ್ನೂ ಅರ್ಥ ಮಾಡಿಕೊಳ್ಳುವ ಬುದ್ಧಿವಂತ ಜೀವಿಗಳು. ಆದರೆ ಇಲ್ಲೊಂದು ಬೆಕ್ಕು ಎಸ್ಕಲೇಟರ್ ಏರಲು ಹೋಗಿ ಇದೇನು ಆಗ್ತಿದೆ ಎಂದು ತಿಳಿಯದೇ ಕನ್ ಫ್ಯೂಸ್ ಆಗಿದೆ. ಕೆಳಗೆ ಇಳಿಯುವ ಎಸ್ಕಲೇಟರ್ ಗೆ ಬೆಕ್ಕು ಏರಿದೆ. ಆರಾಮವಾಗಿಯೇ ಎಸ್ಕಲೇಟರ್ ಏರಿದ್ದ ಬೆಕ್ಕು ಸ್ವಲ್ಪ ಮೇಲೆ ಸಾಮಾನ್ಯ ಮೆಟ್ಟಿಲು ಏರುವಂತೆ ಹತ್ತಿಕೊಂಡು ಹೋಗಿದೆ.
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಇಳಿಕೆಯಾದರೆ ಮತ್ತುಇತರೆ ಚಿನ್ನದ ದರ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತವಾಗಿ ದಾಖಲೆಯ ಏರಿಕೆ ಕಂಡಿತ್ತು. ಆದರೆ ಈ ವಾರದ ಆರಂಭದಲ್ಲೇ ಚಿನ್ನದ ದರ ಇಳಿಕೆಯಾಗಿತ್ತು. ಇಂದು ಪರಿಶುದ್ಧ ಚಿನ್ನದ ದರ ಇಂದು ಮತ್ತೆ ಇಳಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ನಿನ್ನೆ 1,57,025.00 ರೂ.ಗಳಿತ್ತು. ಇಂದೂ 1,56,380.00 ರೂ.ಗಳಷ್ಟಿದೆ.
ಬೆಂಗಳೂರು: ಅಡಿಕೆ ಬೆಲೆ ಕಳೆದ ವಾರ ಏರಿಕೆ-ಇಳಿಕೆಯಾಗಿತ್ತು. ಆದರೆ ಇದೀಗ ಅಡಿಕೆ ದರ ಯಥಾಸ್ಥಿತಿಯಲ್ಲಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ. ಕಳೆದ ವಾರ ಅಡಿಕೆ ಬೆಲೆಯಲ್ಲಿ ಏರಿಕೆ ಆರಂಭವಾಗಿತ್ತು. ಸತತವಾಗಿ ನಾಲ್ಕು ದಿನಗಳ ಕಾಲ ಏರಿಕೆಯಾಗಿದ್ದು ರೈತರ ಸಂತಸಕ್ಕೆ ಕಾರಣವಾಗಿತ್ತು. ಆದರೆ ಇಂದು ಯಾವುದೇ ವ್ಯತ್ಯಾಸ ಕಂಡುಬರುತ್ತಿಲ್ಲ. ಇಂದು ಹೊಸ ಅಡಿಕೆ ಬೆಲೆ 460 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ ಯಥಾಸ್ಥಿತಿಯಲ್ಲಿದ್ದು 535 ರೂ. ಗಳಾಗಿತ್ತು. ಇಂದೂ ಅಷ್ಟೇ ಇದೆ. ಡಬಲ್ ಚೋಲ್ ಬೆಲೆಯೂ 535 ರೂ.ಗಳಷ್ಟಾಗಿದೆ.
ಬೆಂಗಳೂರು: ಯಾವಾಗ ಕಿಂಗ್ ವಿರಾಟ್ ಕೊಹ್ಲಿ ಆ ಒಂದು ಮಾತು ಹೇಳಿದ್ರೋ ಆವತ್ತಿಂದ ಆರ್ ಸಿಬಿ ಮಹಿಳೆ ಮತ್ತು ಪುರುಷರ ತಂಡದ ಅದೃಷ್ಟವೇ ಬದಲಾಗಿದೆ. ಅಷ್ಟಕ್ಕೂ ವಿರಾಟ್ ಆವತ್ತು ಹೇಳಿದ್ದೇನು ಗೊತ್ತಾ? 2024 ರ ಐಪಿಎಲ್ ಗೆ ಮೊದಲು ವಿರಾಟ್ ಕೊಹ್ಲಿ ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಆರ್ ಸಿಬಿ ಅನ್ ಬಾಕ್ಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ್ದ ಕೊಹ್ಲಿ ಕನ್ನಡದಲ್ಲಿ ‘ಇದು ಆರ್ ಸಿಬಿಯ ಹೊಸ ಅಧ್ಯಾಯ’ ಎಂದಿದ್ದರು.
ಮಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಮತ್ತೆ ಚರ್ಚೆಯಾಗುತ್ತಿದೆ. ಬಜೆಟ್ ಬಳಿಕ ಸಿಎಂ ಆಗ್ತೀರಾ ಎಂಬ ಪ್ರಶ್ನೆಗೆ ಡಿಸಿಎಂ ಡಿಕೆ ಶಿವಕುಮಾರ್ ಶಾಕಿಂಗ್ ಉತ್ತರ ನೀಡಿದ್ದಾರೆ. ನಿನ್ನೆ ಮೈಸೂರಿನಲ್ಲಿ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಐದು ವರ್ಷದವರೆಗೂ ತಮ್ಮ ತಂದೆಯೇ ಸಿಎಂ ಆಗಿ ಮುಂದುವರಿಯುತ್ತಾರೆ. ಹೈಕಮಾಂಡ್ ಯಾರ ಒತ್ತಡಕ್ಕೂ ಮಣಿದಿಲ್ಲ. ಬದಲಾವಣೆ ಬಗ್ಗೆ ಹೇಳಿಲ್ಲ ಎಂದು ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಮತ್ತೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ದೊಡ್ಡ ಸುದ್ದಿಯಾಗುತ್ತಿದೆ. ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಬಣದ ನಾಯಕರು ಬಹಿರಂಗವಾಗಿಯೇ ಮತ್ತೆ ಹೇಳಿಕೆ ನೀಡಲು ಮುಂದಾಗಿದ್ದಾರೆ.
ಬೆಂಗಳೂರು: ನಮ್ಮ ಮೆಟ್ರೋ ದರ ಏರಿಕೆ ಮಾಡಿದ್ದಕ್ಕೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಒಂದು ಪತ್ರ ಬರೆಯಲಿ. ಉಳಿದಿದ್ದನ್ನು ನಾನು ನೋಡಿಕೊಳ್ತೇನೆ ಎಂದು ತೇಜಸ್ವಿ ಸೂರ್ಯ ಸವಾಲು ಹಾಕಿದ್ದಾರೆ. ನಾನು ಉಪ ಮುಖ್ಯಮಂತ್ರಿಗಳಿಗೆ ಒಂದು ಪ್ರಶ್ನೆ ಕೇಳ್ತೇನೆ. ನಾವಿವತ್ತು ರಾಜ್ಯದ ಪ್ರತಿನಿಧಿಗಳಾಗಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ. ನಿಮಗೂ ದರ ಕಡಿಮೆಯಾಗಬೇಕು ಎಂದಿದ್ದರೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಿರಿ. ಸಿಎಂ ಆಗಲೀ, ಡಿಸಿಎಂ ಆಗಲೀ ಒಂದು ಸಿಂಗಲ್ ಪತ್ರ ಬರೆಯಿರಿ. ಎಂಟು ತಿಂಗಳ ಹಿಂದಷ್ಟೇ ಹೆಚ್ಚು ಮಾಡಿದ್ದೀರಿ. ಮತ್ತೆ ದರ ಏರಿಕೆ ಮಾಡುತ್ತೀದ್ದೀರಿ. ಹೀಗಾಗಿ ದರ ಕಡಿಮೆ ಮಾಡಿ ಎಂದು ಪತ್ರ ಬರೆಯಲಿ.
ಮುಂಬೈ: ಟಿ20 ವಿಶ್ವಕಪ್ 2026 ಕ್ಕೆ ಇಂದು ಚಾಲನೆ ಸಿಗುತ್ತಿದೆ. ಇಂದಿನ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಟೀಂ ಇಂಡಿಯಾ, ಅಮೆರಿಕಾ ಮುಖಾಮುಖಿಯಾಗಲಿದೆ. ಈ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ, ಎಲ್ಲಿ ವೀಕ್ಷಿಸಬೇಕು ನೋಡಿ. ಟಿ20 ವಿಶ್ವಕಪ್ ನಲ್ಲಿ ಕಳೆದ ಬಾರಿ ಅಮೆರಿಕಾದಲ್ಲಿ ಟೀಂ ಇಂಡಿಯಾ ಚಾಂಪಿಯನ್ ಆಗಿತ್ತು. ಈ ಬಾರಿ ತವರಿನಲ್ಲಿ ವಿಶ್ವಕಪ್ ನಡೆಯುತ್ತಿರುವುದರಿಂದ ನಿರೀಕ್ಷೆ ಹೆಚ್ಚಾಗಿದೆ. ಸೂರ್ಯಕುಮಾರ್ ಯಾದವ್ ಬಳಗ ಈಗಷ್ಟೇ ನ್ಯೂಜಿಲೆಂಡ್ ವಿರುದ್ಧ ಟಿ20 ಸರಣಿ ಗೆದ್ದು ಭರ್ಜರಿ ಅತ್ಮವಿಶ್ವಾಸದಲ್ಲಿದೆ.
ಬೆಂಗಳೂರು: ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಒಣಹವೆಯಿದ್ದು ತಾಪಮಾನದಲ್ಲಿ ಏರಿಕೆ ಕಂಡುಬರುತ್ತಿದೆ. ವಾರಂತ್ಯಕ್ಕೆ ರಾಜ್ಯದ ಹವಾಮಾನ ಹೇಗಿರಲಿದೆ ಇಲ್ಲಿದೆ ವಿವರ. ರಾಜ್ಯದ ಹವಾಮಾನದಲ್ಲಿ ಈಗ ದಿನಕ್ಕೊಂದು ವಿಚಿತ್ರ ಹವಾಮಾನ ಬದಲಾವಣೆ ಕಂಡುಬರುತ್ತಿದೆ. ಒಮ್ಮೆ ವಿಪರೀತ ಚಳಿ, ಹಗಲು ವಿಪರೀತ ಬಿಸಿಲು ಇನ್ನು ಕೆಲವರು ಕಡೆ ಭಾಗಶಃ ಮೋಡ ಕವಿದ ವಾತಾವರಣವೂ ಕಂಡುಬರುತ್ತಿದೆ. ಈ ವಾರಂತ್ಯದಲ್ಲಿ ರಾಜ್ಯದದಲ್ಲಿ ಗರಿಷ್ಠ ತಾಪಮಾನದಲ್ಲಿ ಇನ್ನಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಇಂದು ಬಹುತೇಕ ಕಡೆ ಭಾಗಶಃ ಮೋಡ, ಬಿಸಿಲಿನ ವಾತಾವರಣವಿದ್ದರೆ ನಾಳೆ ಸಂಪೂರ್ಣ ಬಿಸಿಲಿರಲಿದೆ.
ಇಂದು ಶನಿವಾರವಾಗಿದ್ದು ಶನಿದೇವನಿಗೆ ವಿಶೇಷವಾದ ದಿನವಾಗಿದೆ. ಶನಿದೋಷದಿಂದ ನಾನಾ ಸಮಸ್ಯೆಗಳು ಎದುರಾಗುತ್ತಿದ್ದಲ್ಲಿ ಇಂದು ತಪ್ಪದೇ ಶನಿ ಅಷ್ಟೋತ್ತರ ಶತನಾಮ ಸ್ತೋತ್ರವನ್ನು ಓದಿ. ಕನ್ನಡದಲ್ಲಿ ಇಲ್ಲಿದೆ.ಶನೈಶ್ಚರಾಯ ಶಾಂತಾಯ ಸರ್ವಾಭೀಷ್ಟಪ್ರದಾಯಿನೇ ।ಶರಣ್ಯಾಯ ವರೇಣ್ಯಾಯ ಸರ್ವೇಶಾಯ ನಮೋ ನಮಃ ॥ 1 ॥ ಸೌಮ್ಯಾಯ ಸುರವಂದ್ಯಾಯ ಸುರಲೋಕವಿಹಾರಿಣೇ ।ಸುಖಾಸನೋಪವಿಷ್ಟಾಯ ಸುಂದರಾಯ ನಮೋ ನಮಃ ॥ 2 ॥ ಘನಾಯ ಘನರೂಪಾಯ ಘನಾಭರಣಧಾರಿಣೇ ।ಘನಸಾರವಿಲೇಪಾಯ ಖದ್ಯೋತಾಯ ನಮೋ ನಮಃ ॥ 3 ॥ ಮಂದಾಯ ಮಂದಚೇಷ್ಟಾಯ ಮಹನೀಯಗುಣಾತ್ಮನೇ ।ಮರ್ತ್ಯಪಾವನಪಾದಾಯ ಮಹೇಶಾಯ ನಮೋ ನಮಃ ॥ 4 ॥ ಛಾಯಾಪುತ್ರಾಯ ಶರ್ವಾಯ ಶರತೂಣೀರಧಾರಿಣೇ ।ಚರಸ್ಥಿರಸ್ವಭಾವಾಯ ಚಂಚಲಾಯ ನಮೋ ನಮಃ ॥ 5 ॥
ಹರಾರೆ: ಅಂಡರ್ 19 ವಿಶ್ವಕಪ್ ನಲ್ಲಿ ಇಂಗ್ಲೆಂಡ್ ತಂಡವನ್ನು 100 ರನ್ ಗಳಿಂದ ಸೋಲಿಸಿ ಭಾರತ ತಂಡ ಆರನೇ ಬಾರಿಗೆ ವಿಶ್ವ ಚಾಂಪಿಯನ್ ಆಗಿ ಬೀಗಿದೆ. ಇಂದು ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 411 ರನ್ ಗಳಿಸಿತ್ತು. ಇದು ವಿಶ್ವಕಪ್ ಫೈನಲ್ ನಲ್ಲಿ ದಾಖಲಾದ ಗರಿಷ್ಠ ಮೊತ್ತವಾಗಿತ್ತು. ವೈಭವ್ ಸೂರ್ಯವಂಶಿ 175 ರನ್ ಗಳ ಭರ್ಜರಿ ಇನಿಂಗ್ಸ್ ಆಡಿದ್ದರು. ಇದಕ್ಕೆ ಉತ್ತರವಾಗಿ ಇಂಗ್ಲೆಂಡ್ 40.2 ಓವರ್ ಗಳಲ್ಲಿ 311 ರನ್ ಗಳಿಸಿ ಆಲೌಟ್ ಆಗಿದೆ. ಇಂಗ್ಲೆಂಡ್ ಪರ ಫಾಲ್ಕನೂರ್ 67 ಎಸೆತಗಳಲ್ಲಿ 115 ರನ್ ಗಳಿಸಿ ದಿಟ್ಟ ಹೋರಾಟ ನೀಡಿದರು.
ಹರಾರೆ: ಅಂಡರ್ 19 ವಿಶ್ವಕಪ್ ಫೈನಲ್ ನಲ್ಲಿ ಅಂಡರ್ 19 ಭಾರತ ತಂಡ ಇತಿಹಾಸ ಸೃಷ್ಟಿಸಿದೆ. ಎಲ್ಲದಕ್ಕೂ ವೈಭವ್ ಸೂರ್ಯವಂಶಿ ಸ್ಪೋಟಕ ಶತಕ ಕಾರಣ ಎನ್ನಬಹುದು. ಇಂಗ್ಲೆಂಡ್ ವಿರುದ್ಧ ಇದೀಗ ನಡೆಯುತ್ತಿರುವ ಅಂಡರ್ 19 ವಿಶ್ವಕಪ್ ಪಂದ್ಯದಲ್ಲಿ ಭಾರತ ಮೊದಲು ಬ್ಯಾಟಿಂಗ್ ಮಾಡಿ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 411 ರನ್ ಗಳಿಸಿದೆ. ಇದು ವಿಶ್ವಕಪ್ ಫೈನಲ್ ಇತಿಹಾಸದಲ್ಲೇ ಗರಿಷ್ಠ ಮೊತ್ತವಾಗಿದೆ. ಒಂದು ವೇಳೆ ಇಂಗ್ಲೆಂಡ್ ಈ ಮೊತ್ತ ಬೆನ್ನತ್ತಲು ಸಫಲವಾದರೆ ವಿಶ್ವದಾಖಲೆ ಚೇಸಿಂಗ್ ಆಗಲಿದೆ. ಇತ್ತೀಚೆಗಿನ ವರದಿ ಬಂದಾಗ ಇಂಗ್ಲೆಂಡ್ ವಿಕೆಟ್ ನಷ್ಟವಿಲ್ಲದೇ 14 ರನ್ ಗಳಿಸಿತ್ತು.
ಮುಂಬೈ: ಟಿ 20 ವಿಶ್ವಕಪ್ ಆರಂಭಕ್ಕೆ ಒಂದು ದಿನ ಬಾಕಿಯಿರುವಾಗ ಟೀಂ ಇಂಡಿಯಾದ ಸ್ಟಾರ್ ಆಲ್ ರೌಂಡರ್ ಹರ್ಷಿತ್ ರಾಣಾ ಗಾಯದಿಂದಾಗಿ ಕೂಟದಿಂದಲೇ ಹೊರಬಿದ್ದಿದ್ದಾರೆ. ಆದರೆ ಫ್ಯಾನ್ಸ್ ಮಾತ್ರ ಗಂಭೀರ್ ಕುರಿತು ಟ್ರೋಲ್ ಮಾಡುತ್ತಿದ್ದಾರೆ. ಹರ್ಷಿತ್ ರಾಣಾ ಇಂದು ಅಭ್ಯಾಸದ ವೇಳೆ ಗಾಯಗೊಂಡಿದ್ದು ವಿಶ್ವಕಪ್ ನಿಂದಲೇ ಹೊರನಡೆಯುವ ಪರಿಸ್ಥಿತಿ ಎದುರಾಗಿದೆ. ಟಿ20 ಮಾದರಿಯಲ್ಲಿ ಬೌಲರ್ ಆಗಿ ಮಾತ್ರವಲ್ಲ, ಬ್ಯಾಟಿಗರಾಗಿಯೂ ಕೆಳ ಕ್ರಮಾಂಕದಲ್ಲಿ ಹರ್ಷಿತ್ ಉಪಯುಕ್ತ ಆಟಗಾರ. ಆದರೆ ಅವರು ಗೌತಮ್ ಗಂಭೀರ್ ನೆಚ್ಚಿನ ಆಟಗಾರ ಎಂಬ ಕಾರಣಕ್ಕೆ ಅವರನ್ನು ಫ್ಯಾನ್ಸ್ ಟ್ರೋಲ್ ಮಾಡುತ್ತಿದ್ದಾರೆ.
ಬೆಂಗಳೂರು: ನಾನು ಹೇಳಿದ್ದ ಎರಡು ಡೇಟ್ ಮಿಸ್ ಆಗಿದೆ. ಆದರೆ ಈ ಬಾರಿ ಮಿಸ್ ಆಗಲ್ಲ ಎಂದು ಡಿಕೆ ಶಿವಕುಮಾರ್ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಶಾಸಕ ಇಕ್ಬಾಲ್ ಹುಸೇನ್ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ್ದ ಸಿದ್ದರಾಮಯ್ಯ ಪುತ್ರ ಯತೀಂದ್ರ ನಮ್ಮ ತಂದೆಯವರಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದೆ. ಅವರೇ ಐದು ವರ್ಷ ಸಿಎಂ ಆಗಿ ಮುಂದುವರಿಯುತ್ತಾರೆ. ಹೈಕಮಾಂಡ್ ಯಾರ ಒತ್ತಡಕ್ಕೂ ಮಣಿದಿಲ್ಲ ಎಂದಿದ್ದಾರೆ. ಯತೀಂದ್ರ ಹೇಳಿಕೆ ಈಗ ಡಿಕೆಶಿ ಬಣದ ಶಾಸಕರನ್ನು ಕೆರಳಿಸಿದೆ. ಯತೀಂದ್ರ ಮಾತಿಗೆ ಕೌಂಟರ ಕೊಟ್ಟಿರುವ ಇಕ್ಬಾಲ್ ಹುಸೇನ್, ‘ನಾನು ಈ ಹಿಂದೆ ಹೇಳಿದ್ದ ಎರಡು ಡೇಟ್ ಮಿಸ್ ಆಗಿದೆ.
ಮಂಗಳೂರು: ಯತೀಂದ್ರನೇ ನಮ್ಮ ಹೈಕಮಾಂಡ್ ಅವರು ಏನು ಮಾತು ಹೇಳ್ತಾರೆ. ಅದನ್ನು ಗೌರವದಿಂದ ಸ್ವೀಕರಿಸೋಣ ಎಂದು ಡಿಕೆ ಶಿವಕುಮಾರ್ ಟಾಂಗ್ ಕೊಟ್ಟಿದ್ದಾರೆ. ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ್ದ ಸಿದ್ದರಾಮಯ್ಯ ಪುತ್ರ ಯತೀಂದ್ರ ನಮ್ಮ ತಂದೆಯವರಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದೆ. ಅವರೇ ಐದು ವರ್ಷ ಸಿಎಂ ಆಗಿ ಮುಂದುವರಿಯುತ್ತಾರೆ. ಹೈಕಮಾಂಡ್ ಯಾರ ಒತ್ತಡಕ್ಕೂ ಮಣಿದಿಲ್ಲ ಎಂದಿದ್ದಾರೆ. ಅವರ ಹೇಳಿಕೆಗೆ ಡಿಕೆಶಿ ಕೌಂಟರ್ ಕೊಟ್ಟಿದ್ದಾರೆ. ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಡಿಕೆ ಶಿವಕುಮಾರ್ ‘ಯತೀಂದ್ರ ಅವರೇ ನಮ್ಮ ಹೈಕಮಾಂಡ್. ಅವರು ಏನು ಹೇಳ್ತಾರೆ ಅದನ್ನು ನಾವು ಗೌರವದಿಂದ ಕೇಳೋಣ.
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಸಿಎಂ ಬದಲಾವಣೆ ವಿಚಾರ ಸದ್ದು ಮಾಡುತ್ತಿದೆ. ಇದೀಗ ಮತ್ತೊಮ್ಮೆ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಈ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ. ರಾಜ್ಯದ ಕೆಲವು ಕಾಂಗ್ರೆಸ್ ಶಾಸಕರು ನಾಯಕತ್ವ ಬದಲಾವಣೆ ವಿಚಾರವಾಗಿ ಮೌನವಾಗಿರುವ ಹೈಕಮಾಂಡ್ ಮೇಲೆ ಮುನಿಸಿಕೊಂಡಿದ್ದಾರೆ. ಸದ್ಯದಲ್ಲೇ ದೆಹಲಿಗೆ ಹೋಗಲು ಸಿದ್ಧತೆ ನಡೆಸಿದ್ದಾರೆ ಎಂದು ಸುದ್ದಿಯಾಗುತ್ತಿದೆ. ಇದರ ಬಗ್ಗೆ ಈಗ ಯತೀಂದ್ರ ಸಿದ್ದರಾಮಯ್ಯ, ‘ಯಾರೂ ಬದಲಾವಣೆ ಬಗ್ಗೆ ಚರ್ಚೆ ಮಾಡುತ್ತಿಲ್ಲ. ಬರೀ ಮಾಧ್ಯಮಗಳು ಮಾತ್ರ ಚರ್ಚೆ ಮಾಡುತ್ತಿವೆ. ರಾಜ್ಯದಲ್ಲಿ ಬೇರೆ ವಿಚಾರಗಳು ನಡೆಯುತ್ತಿದೆ.
ಪಾಟ್ನಾ: ಬಿಹಾರ ವಿಧಾನಸಭೆ ಕಲಾಪದಲ್ಲಿ ಆರ್ ಜೆಡಿ ಶಾಸಕ ತೇಜಸ್ವಿ ಯಾದವ್ ತೂರಾಡಿಕೊಂಡು ಭಾಷಣ ಮಾಡಲು ಎದ್ದು ನಿಂತಿರುವ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅವರು ಮದ್ಯಪಾನ ಮಾಡಿ ಬಂದಿದ್ದಾರೆಂದು ಬಿಜೆಪಿ ಆರೋಪಿಸಿದೆ. ಸದನಕ್ಕೆ ಅದರದ್ದೇ ಆದ ಗೌರವಗಳಿರುತ್ತವೆ. ಅದೊಂದು ಪವಿತ್ರ ಸ್ಥಳ ಎಂದೇ ನಂಬಲಾಗುತ್ತದೆ. ಆದರೆ ತೇಜಸ್ವಿ ಯಾದವ್ ತೂರಾಡಿಕೊಂಡು ಎದ್ದು ನಿಲ್ಲಲೂ ಕಷ್ಟಪಡುವುದನ್ನು ನೋಡಿದರೆ ಅವರು ಮದ್ಯ ಸೇವಿಸಿದ್ದರೇನೋ ಎಂದು ಅನುಮಾನ ಮೂಡಿಸುವಂತಿದೆ. ಎದ್ದು ನಿಲ್ಲಲೂ ಕಷ್ಟಪಡುತ್ತಿದ್ದಾಗ ಪಕ್ಕದಲ್ಲಿದ್ದ ಆರ್ ಜೆಡಿ ಶಾಸಕ ಅವರ ಸಹಾಯಕ್ಕೆ ಬರುತ್ತಾರೆ.
ಬೆಂಗಳೂರು: ಕೇಂದ್ರ ಬಜೆಟ್ ಗೆ ಮುನ್ನ ಚಿನ್ನದ ದರ ಭರ್ಜರಿ ಇಳಿಕೆ ಕಂಡಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತುಇತರೆ ಚಿನ್ನದ ದರ ಇಳಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತವಾಗಿ ದಾಖಲೆಯ ಏರಿಕೆ ಕಂಡಿತ್ತು. ಆದರೆ ಈ ವಾರದ ಆರಂಭದಲ್ಲೇ ಚಿನ್ನದ ದರ ಇಳಿಕೆಯಾಗಿತ್ತು. ಇಂದು ಪರಿಶುದ್ಧ ಚಿನ್ನದ ದರ ಇಂದು ಮತ್ತೆ ಇಳಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ನಿನ್ನೆ 1,63,535.00 ರೂ.ಗಳಿತ್ತು. ಇಂದೂ 1,57,025.00 ರೂ.ಗಳಷ್ಟಿದೆ.
ನವದೆಹಲಿ: 2004 ರಲ್ಲಿ ಅಂದಿನ ಪ್ರಧಾನಿ ಡಾ ಮನಮೋಹನ್ ಸಿಂಗ್ ಅನುಭವಿಸಿದ್ದ ಅದೇ ಪರಿಸ್ಥಿತಿಯನ್ನು ಇಂದು ಪ್ರಧಾನಿ ಮೋದಿ ಎದುರಿಸುವಂತಾಯಿತು.ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯ ಮಂಡಿಸುವಾಗ ಪ್ರಧಾನಿಗಳು ಭಾಷಣ ಮಾಡುವುದು ಪದ್ಧತಿ. ಆದರೆ ಈ ಬಾರಿ ಲೋಕಸಭೆಯಲ್ಲಿ ಪ್ರಧಾನಿ ಮೋದಿ ವಿಪಕ್ಷಗಳ ಗದ್ದಲದಿಂದಲಾಗಿ ಮಾತನಾಡಲು ಸಾಧ್ಯವಾಗಲೇ ಇಲ್ಲ. ಅವರ ಭಾಷಣ ಕೇವಲ ರಾಜ್ಯ ಸಭೆಗೆ ಸೀಮಿತವಾಯಿತು. ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಗೆ ಮಾತನಾಡಲು ಅವಕಾಶ ಕೊಡದೇ ಮೋದಿಗೂ ಮಾತನಾಡಲು ಅವಕಾಶ ಕೊಡಲ್ಲ ಎಂದು ವಿಪಕ್ಷಗಳು ಗದ್ದಲವೇರ್ಪಡಿಸಿದ್ದರು.
ಬೆಂಗಳೂರು: ರಾಜ್ಯದಲ್ಲಿ ಒಮ್ಮೆ ತಣ್ಣಗಾಗಿದ್ದ ಕುರ್ಚಿ ಕದನ ಮತ್ತೆ ಭುಗಿಲೇಳುವ ಲಕ್ಷಣ ಕಂಡುಬರುತ್ತಿದೆ. ಕಾಂಗ್ರೆಸ್ ಶಾಸಕರು ಈ ಬಗ್ಗೆ ಮಹತ್ವದ ತೀರ್ಮಾನಕ್ಕೆ ಬಂದಿದ್ದಾರೆ ಎನ್ನಲಾಗುತ್ತಿದೆ. ಕಳೆದ ವರ್ಷ ಡಿಸೆಂಬರ್ ನಲ್ಲಿ ರಾಜ್ಯದಲ್ಲಿ ಕುಸ್ತಿ ಕದನ ತಾರಕಕ್ಕೇರಿತ್ತು. ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಬಣ ಮೀಟಿಂಗ್ ಮೇಲೆ ಮೀಟಿಂಗ್ ನಡೆಸಿ ಹೈಕಮಾಂಡ್ ಮೇಲೆ ಒತ್ತಡ ಹೇರಲು ಯತ್ನಿಸಿದ್ದರು. ಆದರೆ ಹೈಕಮಾಂಡ್ ಕೆಲವು ದಿನ ಕಾಯಲು ಸೂಚನೆ ನೀಡಿತ್ತು. ಹೀಗಾಗಿ ಕೆಲವು ದಿನಗಳಿಂದ ಈ ವಿಚಾರ ತಣ್ಣಗಾಗಿತ್ತು.
ವಡೋದರಾ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಡಬ್ಲ್ಯುಪಿಎಲ್ 2026 ರ ಫೈನಲ್ ಗೆಲ್ಲುತ್ತಿದ್ದಂತೇ ವಿವಾದವೂ ಬೆನ್ನು ಹತ್ತಿದೆ. ಕೆಲವರು ಆರ್ ಸಿಬಿ ಗೆದ್ದಿದ್ದು ಮೋಸದಿಂದ ಎಂದು ಸೋಷಿಯಲ್ ಮೀಡಿಯಾದಲ್ಲಿ ಆರೋಪಿಸಿದ್ದಾರೆ. ಅಸಲಿ ಸತ್ಯವೇನು ಇಲ್ಲಿದೆ ವಿಡಿಯೋ. 19.4 ನೇ ಓವರ್ ನಲ್ಲಿ ರಾಧಾ ಯಾದವ್ ಬೌಂಡರಿ ಗಳಿಸಿದರು. ಇದರೊಂದಿಗೆ ಆರ್ ಸಿಬಿ ಗೆಲುವಿಗೆ ಬೇಕಾಗಿದ್ದ 204 ರನ್ ಗಳಿಸಿತು. ಆದರೆ ಇನ್ನೊಂದೆಡೆ ಸ್ಟಂಪ್ ಬೇಲ್ಸ್ ಎಗರಿದ್ದು ಕಂಡುಬಂತು. ಹೀಗಾಗಿ ರಾಧಾ ಯಾದವ್ ಹಿಟ್ ವಿಕೆಟ್ ಆಗಿದ್ದಾರೆಯೇ ಎನ್ನುವ ಅನುಮಾನ ಎಲ್ಲರದ್ದಾಗಿತ್ತು.
ನವದೆಹಲಿ: ಲೋಕಸಭೆಯಲ್ಲಿ ಪ್ರಧಾನಿ ಮೋದಿ ಮೇಲೆ ದೈಹಿಕ ದಾಳಿಗೆ ಕಾಂಗ್ರೆಸ್ ಮತ್ತು ಮಿತ್ರ ಪಕ್ಷಗಳು ದಾಳಿಗೆ ಪ್ಲ್ಯಾನ್ ಮಾಡಿದ್ದರು ಎಂದು ಸ್ವತಃ ಸ್ಪೀಕರ್ ಓಂ ಬಿರ್ಲಾ ಹೇಳಿಕೆ ನೀಡಿದ್ದರು. ಇದು ನಿಜಕ್ಕೂ ಶಾಕಿಂಗ್ ಸುದ್ದಿ ಎಂದಿರುವ ಪಬ್ಲಿಕ್ ನಾವು ಎಲ್ಲಿಗೆ ತಲುಪಿದ್ದೇವೆ ಎಂದಿದ್ದಾರೆ. ಸ್ಪೀಕರ್ ಸ್ಥಾನದಲ್ಲಿರುವ ವ್ಯಕ್ತಿ ನಿಷ್ಪಕ್ಷಪಾತಿಯಾಗಿರುತ್ತಾರೆ. ಹೀಗಾಗಿ ಅವರ ಹೇಳಿಕೆಗಳಿಗೆ ಅಷ್ಟೇ ಬೆಲೆಯಿದೆ. ಈ ಕಾರಣಕ್ಕಾಗಿಯೇ ನಿನ್ನೆ ಸ್ವತಃ ಸ್ಪೀಕರ್ ಓಂ ಬಿರ್ಲಾ ವಿಪಕ್ಷಗಳ ದಾಳಿ ಯೋಜನೆ ಬಗ್ಗೆ ನೀಡಿರುವ ಹೇಳಿಕೆ ನಿಜಕ್ಕೂ ಶಾಕಿಂಗ್ ಆಗಿದೆ.
ವಡೋದರಾ: ಡಬ್ಲ್ಯುಪಿಎಲ್ 2026 ರ ಫೈನಲ್ ಗೆಲುವಿನಲ್ಲಿ ಆರ್ ಸಿಬಿ ನಾಯಕಿ ಸ್ಮೃತಿ ಮಂಧಾನ ಭರ್ಜರಿ ಬ್ಯಾಟಿಂಗ್ ಪ್ರಮುಖ ಪಾತ್ರ ವಹಿಸಿತ್ತು. ಆದರೆ ಫೈನಲ್ ಪಂದ್ಯಕ್ಕೆ ಮುನ್ನ ಸ್ಮೃತಿ ಆರೋಗ್ಯ ಸ್ಥಿತಿ ಏನಾಗಿತ್ತು ಎಂಬ ಶಾಕಿಂಗ್ ವಿಚಾರ ಈಗ ಬಯಲಾಗಿದೆ. ಡಬ್ಲ್ಯು ಪಿಎಲ್ 2026 ಫೈನಲ್ ಪಂದ್ಯದಲ್ಲಿ ಆರ್ ಸಿಬಿ ಪುರುಷರ ತಂಡವೂ ಇದುವರೆಗೆ ಮಾಡದ ಸಾಧನೆ ಮಾಡಿದೆ. ಫೈನಲ್ ನಲ್ಲಿ ಗರಿಷ್ಠ ರನ್ ಚೇಸ್ ಮಾಡಿದ ದಾಖಲೆ ಮಾಡಿದೆ. ಆರ್ ಸಿಬಿಗೆ 204 ರನ್ ಗಳ ಬೃಹತ್ ಮೊತ್ತ ಚೇಸ್ ಮಾಡಲು ಸಾಧ್ಯವಾಗಿದ್ದು ಸ್ಮೃತಿ ಮಂಧಾನ ಮತ್ತು ಜಾರ್ಜಿಯಾ ವಾಲ್ ಭರ್ಜರಿ ಬ್ಯಾಟಿಂಗ್ ಕಾರಣ.
ವಡೋದರ: ಡಬ್ಲ್ಯುಪಿಎಲ್ 2026 ರ ಫೈನಲ್ ಗೆದ್ದು ಆರ್ ಸಿಬಿ ಎರಡನೇ ಬಾರಿಗೆ ಚಾಂಪಿಯನ್ ಆದ ಬಳಿಕ ನಾಯಕಿ ಸ್ಮೃತಿ ಮಂಧಾನ ಅಭಿಮಾನಿಗಳ ಬಗ್ಗೆ ಚಿನ್ನದಂಥಾ ಮಾತನಾಡಿದ್ದಾರೆ. ಆರ್ ಸಿಬಿಗೆ ಇರುವಷ್ಟು ಫ್ಯಾನ್ಸ್ ಬೇರೆ ಯಾವುದೇ ಫ್ರಾಂಚೈಸಿಗಿಲ್ಲ. ಸೋಲಲಿ, ಗೆಲ್ಲಲಿ ತಂಡದ ಜೊತೆಗೇ ಇರುವ ಅಪ್ಪಟ ಅಭಿಮಾನಿಗಳು. ಹೀಗಾಗಿ ಆರ್ ಸಿಬಿ ಕ್ರಿಕೆಟಿಗರೂ ಪ್ರತೀ ಬಾರಿಯೂ ಗೆಲುವು, ಸೋಲಿನ ಬಳಿಕ ಅಭಿಮಾನಿಗಳನ್ನು ನೆನೆಯಲು ಮರೆಯುವುದಿಲ್ಲ. ನಿನ್ನೆ ಗೆಲುವಿನ ಬಳಿಕವೂ ಸ್ಮೃತಿ ಸೇರಿದಂತೆ ಎಲ್ಲಾ ಆಟಗಾರರೂ ಅಭಿಮಾನಿಗಳಿಗೆ ಧನ್ಯವಾದ ಸಲ್ಲಿಸಿದ್ದಾರೆ.
ವಡೋದರಾ: ಡಬ್ಲ್ಯುಪಿಎಲ್ 2026 ಫೈನಲ್ ಪಂದ್ಯವನ್ನು ಆರ್ ಸಿಬಿ ಗೆದ್ದ ಬಳಿಕ ನಾಯಕಿ ಸ್ಮೃತಿ ಮಂಧಾನ ತಮ್ಮ ತಂದೆಯ ಜೊತೆ ಮೈದಾನದಲ್ಲಿ ಸಂಭ್ರಮಿಸಿದ್ದಾರೆ. ಇದನ್ನು ನೋಡಿ ಫ್ಯಾನ್ಸ್ ಡೈಮಂಡ್ ಕಳ್ಕೊಂಡೆ ಎಂದು ಮಾಜಿ ಗೆಳೆಯ ಪಾಲಾಶ್ ಮುಚ್ಚಲ್ ಗೆ ಚುಚ್ಚಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 6 ವಿಕೆಟ್ ಗಳಿಂದ ಸೋಲಿಸಿದ ಆರ್ ಸಿಬಿ ಎರಡನೇ ಬಾರಿಗೆ ಚಾಂಪಿಯನ್ ಆಗಿದೆ. ಎಲ್ಲಾ ಸರಿ ಹೋಗಿದ್ದರೆ ಸ್ಮೃತಿ ಇಂದು ಪತಿ ಜೊತೆ ಸೆಲೆಬ್ರೇಷನ್ ಮಾಡಬೇಕಿತ್ತು. ಕಳೆದ ಬಾರಿ 2024 ರಲ್ಲಿ ಆರ್ ಸಿಬಿ ಗೆದ್ದಾಗ ಸ್ಮೃತಿ ಜೊತೆ ಗೆಳೆಯ ಪಾಲಾಶ್ ಮೈದಾನಕ್ಕೆ ಬಂದಿದ್ದರು.
ವಡೋದರಾ: ಡಬ್ಲ್ಯುಪಿಎಲ್ 2026 ರಲ್ಲಿ ಆರ್ ಸಿಬಿ ಗೆಲುವಿನ ಬಳಿಕ ಸ್ಮೃತಿ ಮಂಧಾನ ಬ್ರೇಕ್ ಅಪ್ ವಿಚಾರವನ್ನು ಶ್ರೇಯಾಂಕ ಪಾಟೀಲ್ ಉಲ್ಲೇಖಿಸಿದ್ದಾರೆ. ಡಬ್ಲ್ಯುಪಿಎಲ್ 2026 ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 6 ವಿಕೆಟ್ ಗಳಿಂದ ಸೋಲಿಸಿದ ಆರ್ ಸಿಬಿ ಎರಡನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿತು. ಈ ಗೆಲುವಿಗೆ ಸ್ವತಃ ಜವಾಬ್ಧಾರಿ ಹೊತ್ತು ಆಡಿದ ನಾಯಕಿ ಸ್ಮೃತಿ ಮಂಧಾನ 87 ರನ್ ಸಿಡಿಸಿರು. ಗೆಲುವಿನ ಬಳಿಕ ಆರ್ ಸಿಬಿ ಆಟಗಾರ್ತಿಯರ ಸಂಭ್ರಮ ಮುಗಿಲು ಮುಟ್ಟಿತ್ತು. ಈ ವೇಳೆ ಶ್ರೇಯಾಂಕ ಪಾಟೀಲ್ ಪ್ರಸಾಕರಿಗೆ ಸಂದರ್ಶನ ನೀಡಿದ್ದು ಸ್ಮೃತಿಗೆ ಈ ಗೆಲುವಿನ ಅರ್ಪಣೆ ಎಂದಿದ್ದಾರೆ.
ಬೆಂಗಳೂರು: ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಒಣ ಹವೆ ಕಂಡುಬರುತ್ತಿದೆ. ಇಂದಿನಿಂದ ಹವಾಮಾನದಲ್ಲಿ ಸಣ್ಣ ಬದಲಾವಣೆ ಕಂಡುಬರಬಹುದು. ಇಂದಿನ ಹವಾಮಾನ ವರದಿ ಇಲ್ಲಿದೆ ನೋಡಿ. ರಾಜ್ಯದಲ್ಲಿ ಈಗ ಹಗಲು ಬಿಸಿಲು ರಾತ್ರಿ ಚಳಿ ಕಂಡುಬರುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕ ಕಡೆ ಶುಷ್ಕ ವಾತಾವರಣವಿದೆ. ಈ ವಾತಾವರಣ ಇಂದೂ ಮುಂದುವರಿಯಲಿದೆ. ಆದರೆ ಇಂದಿನಿಂದ ಚಳಿ ಮತ್ತಷ್ಟು ಕಡಿಮೆಯಾಗಲಿದೆ. ಈಗಾಗಲೇ ಹವಾಮಾನ ವರದಿಗಳು ಈ ವರ್ಷ ಫೆಬ್ರವರಿಯಿಂದಲೇ ಬಿಸಿಲಿನ ಝಳ ಹೆಚ್ಚಾಗಲಿದೆ ಎಂದು ಹೇಳಿತ್ತು. ಅದರಂತೆ ಇಂದು ಗರಿಷ್ಠ ತಾಪಮಾನದಲ್ಲಿ ಮತ್ತಷ್ಟು ಏರಿಕೆ ಕಂಡುಬರಲಿದ್ದು, ಬಿಸಿಲಿನ ಝಳ ಹೆಚ್ಚಾಗಲಿದೆ ಎಂದು ಹವಾಮಾನ ವರದಿಗಳು ಸೂಚಿಸುತ್ತಿವೆ.
ಇಂದು ಲಕ್ಷ್ಮೀ ದೇವಿಗೆ ವಿಶೇಷವಾದ ದಿನವಾಗಿದ್ದು, ಜೀವನದಲ್ಲಿ ಆರ್ಥಿಕ, ಐಶ್ವರ್ಯಾ, ನೆಮ್ಮದಿಯ ಕೊರತೆಯಾಗಿದ್ದರೆ ಲಕ್ಷ್ಮೀ ದೇವಿಯ ಕುರಿತಾದ ಮಹೇಂದ್ರ ಕೃತ ಶ್ರೀ ಮನಸಾ ದೇವಿ ಸ್ತೋತ್ರವನ್ನು ತಪ್ಪದೇ ಓದಿ.ದೇವಿ ತ್ವಾಂ ಸ್ತೋತುಮಿಚ್ಛಾಮಿ ಸಾಧ್ವೀನಾಂ ಪ್ರವರಾಂ ಪರಾಮ್ ।ಪರಾತ್ಪರಾಂ ಚ ಪರಮಾಂ ನ ಹಿ ಸ್ತೋತುಂ ಕ್ಷಮೋಽಧುನಾ ॥ 1 ॥ ಸ್ತೋತ್ರಾಣಾಂ ಲಕ್ಷಣಂ ವೇದೇ ಸ್ವಭಾವಾಖ್ಯಾನತಃ ಪರಮ್ ।ನ ಕ್ಷಮಃ ಪ್ರಕೃತಿಂ ವಕ್ತುಂ ಗುಣಾನಾಂ ತವ ಸುವ್ರತೇ ॥ 2 ॥
ವಡೋದರಾ: ಈ ಸಲ ಕಪ್ ನಮ್ದು ಎನ್ನುತ್ತಿದ್ದ ಅಭಿಮಾನಿಗಳಿಗೆ ಆರ್ ಸಿಬಿ ಮಹಿಳೆಯರು ಎರಡನೇ ಸಲ ಕಪ್ ನಮ್ದು ಎಂದಿದ್ದಾರೆ. ಡಬ್ಲ್ಯುಪಿಎಲ್ 2026 ಫೈನಲ್ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 6 ವಿಕೆಟ್ ಗಳಿಂದ ಸೋಲಿಸಿದ ಆರ್ ಸಿಬಿ ಎರಡನೇ ಬಾರಿಗೆ ಚಾಂಪಿಯನ್ ಆಗಿದೆ. ಮೊದಲು ಬ್ಯಾಟಿಂಗ್ ಮಾಡಿದ್ದ ಡೆಲ್ಲಿ 204 ರನ್ ಗಳ ಗುರಿ ನೀಡಿತ್ತು. ಈ ಮೊತ್ತ ಬೆನ್ನತ್ತಿದ ಆರ್ ಸಿಬಿ ಆರಂಭದಲ್ಲೇ ಗ್ರೇಸ್ ಹ್ಯಾರಿಸ್ ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿತ್ತು.
ವಡೋದರಾ: ಡಬ್ಲ್ಯುಪಿಎಲ್ 2026 ಫೈನಲ್ ಪಂದ್ಯವನ್ನು ಗೆಲ್ಲಲು ಆರ್ ಸಿಬಿಗೆ ಡೆಲ್ಲಿ ಕ್ಯಾಪಿಟಲ್ಸ್ 204 ರನ್ ಗಳ ಗುರಿ ನೀಡಿದೆ. ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 203 ರನ್ ಗಳಿಸಿದೆ. ಇಂದು ಟಾಸ್ ಗೆದ್ದ ಆರ್ ಸಿಬಿ ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು. ಡೆಲ್ಲಿ ಕ್ಯಾಪಿಟಲ್ಸ್ ಆರಂಭ ಉತ್ತಮವಾಗಿತ್ತು. ಆದರೆ 13 ಎಸೆತಗಳಲ್ಲಿ 20 ರನ್ ಗಳಿಸಿದ ಶಫಾಲಿ ವರ್ಮ ಔಟಾದರು. ಅವರ ಬೆನ್ನಲ್ಲೇ ಲಿಝಲ್ಲೆ ಲೀ 30 ರನ್ ಗಳಿಸಿ ಔಟಾದರು.
ಬೆಂಗಳೂರು, 5 ಫೆಬ್ರವರಿ, 2026: ಸೆಂಕೋ ಸಮೂಹದ ಸಮಕಾಲೀನ ಐಷಾರಾಮಿ ಜೀವನಶೈಲಿ ಬ್ರ್ಯಾಂಡ್ ಆದ 'ಸೆನೆಸ್', ಬೆಂಗಳೂರಿನ ಜನಪ್ರಿಯ ಫೀನಿಕ್ಸ್ ಮಾಲ್ನಲ್ಲಿ ತನ್ನ ಚೊಚ್ಚಲ ಮಳಿಗೆಯನ್ನು ಆರಂಭಿಸಿದೆ. ಈ ಉದ್ಘಾಟನೆಯೊಂದಿಗೆ, ಸೆನೆಸ್ ತನ್ನ ಅಖಿಲ ಭಾರತ ಉಪಸ್ಥಿತಿಯನ್ನು 10 ಮಳಿಗೆಗಳಿಗೆ ವಿಸ್ತರಿಸಿದೆ. ಕೋಲ್ಕತ್ತಾ, ನವದೆಹಲಿ, ಹೈದರಾಬಾದ್, ಭುವನೇಶ್ವರ, ಚಂಡೀಗಢ ಮತ್ತು ಪಾಟ್ನಾದಲ್ಲಿ ಈಗಾಗಲೇ ತನ್ನ ಹೆಜ್ಜೆಗುರುತು ಮೂಡಿಸಿರುವ ಈ ಬ್ರ್ಯಾಂಡ್, ಈಗ ಬೆಂಗಳೂರನ್ನು ತನ್ನ ಪಟ್ಟಿಗೆ ಸೇರಿಸಿಕೊಂಡಿದೆ.ಸೆಂಕೋ ಸಂಸ್ಥೆಯ ಸೆನೆಸ್ ಬ್ರ್ಯಾಂಡ್, ನೀವು ಬದುಕುವ ರೀತಿಗೆ ತಕ್ಕಂತೆ ವಿನ್ಯಾಸಗೊಳಿಸಲಾದ ಆಧುನಿಕ ಐಷಾರಾಮಿಯನ್ನು ಪ್ರತಿನಿಧಿಸುತ್ತದೆ.
ವಡೋದರಾ: ಮಹಿಳಾ ಪ್ರೀಮಿಯರ್ ಲೀಗ್ನ ಫೈನಲ್ ಪಂದ್ಯದಲ್ಲೂ ಮಾಜಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಟಾಸ್ ಗೆದ್ದಿದೆ. ಆರ್ಸಿಬಿ ನಾಯಕಿ ಸ್ಮೃತಿ ಮಂದಾನ ಅವರು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ. 2024ರಲ್ಲಿ ಚಾಂಪಿಯನ್ ಆಗಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡ ಒಂದು ಬಾರಿ ಟ್ರೋಫಿ ಗೆದ್ದಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡವು ಸತತ ನಾಲ್ಕನೇ ಬಾರಿ ಫೈನಲ್ ತಲುಪಿದೆ. ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡ ಒಮ್ಮೆ ಕೂಡ ಟ್ರೋಫಿ ಜಯಿಸಿಲ್ಲ. ದೆಹಲಿ ತನ್ನ ಚೋಕರ್ಸ್ ಟ್ಯಾಗ್ ಅನ್ನು ಕಳೆದುಕೊಂಡು ಮೊದಲ ಬಾರಿಗೆ ಟ್ರೋಫಿಯನ್ನು ಎತ್ತುತ್ತದೆಯೇ ಅಥವಾ ಬೆಂಗಳೂರು ತನ್ನ ಪ್ರಾಬಲ್ಯವನ್ನು ಮುಂದುವರಿಸುತ್ತದೆಯೇ ಎಂಬುದು ಕುತೂಹಲ ಕೆರಳಿಸಿದೆ.
ನವದೆಹಲಿ: ಮೆಟ್ರೋ ರೈಲು ಪ್ರಯಾಣಿಕರಿಗೆ ಸರ್ಕಾರ ಶಾಕ್ ನೀಡಿದ್ದು, ಮತ್ತೆ ಟಿಕೆಟ್ ದರ ಏರಿಕೆಗೆ ರಾಜ್ಯ ಸರ್ಕಾರ ಅಸ್ತು ಎಂದಿದೆ. ಅದರ ಬೆನ್ನಲ್ಲೇ ಸಂಸದ ತೇಜಸ್ವಿ ಸೂರ್ಯ ಅವರು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಮನೋಹರ್ ಲಾಲ್ ಖಟ್ಟರ್ ಅವರನ್ನು ಭೇಟಿ ಮಾಡಿ ವಿಶೇಷ ಮನವಿ ಮಾಡಿದ್ದಾರೆ. ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಯನ್ನು ವಿರೋಧಿಸಿರುವ ಸಂಸದ ತೇಜಸ್ವಿ ಸೂರ್ಯ, ಮೆಟ್ರೋ ಪ್ರಯಾಣ ದರ ಏರಿಕೆಯನ್ನು ಜಾರಿಗೆ ತಂದಿದ್ದು, ವ್ಯಾಪಕ ಸಾರ್ವಜನಿಕ ವಿರೋಧವನ್ನು ಕಡೆಗಣಿಸಿ ಪ್ರಯಾಣಿಕರ ಮೇಲೆ ಅನಗತ್ಯ ಹೊರೆಯನ್ನು ಹೇರಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ
ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಕ್ತಿಯೊಬ್ಬ ಬೃಹತ್ ನಾಗರಹಾವನ್ನು ಬಾಯಿಯಲ್ಲಿ ಹಿಡಿದು, ಹುಚ್ಚಾಟ ಮೆರೆದ ವಿಡಿಯೋವೊಂದು ವೈರಲ್ ಆಗಿದೆ. ಇದನ್ನು ನೋಡಿದ ವೀಕ್ಷಕರು ದಿಗ್ಬ್ರಮೆಗೊಂಡಿದ್ದಾರೆ. ಈ ವೀಡಿಯೊದಲ್ಲಿ ಭಾರತದ ಅತ್ಯಂತ ವಿಷಕಾರಿ ಹಾವುಗಳಲ್ಲಿ ಒಂದಾದ ನಾಗರ ಹಾವನ್ನು ಕೈಯ ಸಹಾಯವಿಲ್ಲದೆ, ಬಾಯಲ್ಲಿ ಹಿಡಿದು ಆಘಾತಕಾರಿ ಸಾಹಸವನ್ನು ಮಾಡಿದ್ದಾನೆ.ಈ ಘಟನೆ ಒಡಿಶಾದ ಬಾಲಸೋರ್ ಜಿಲ್ಲೆಯ ರೆಮುನಾ ಪ್ರದೇಶದಲ್ಲಿ ನಡೆದಿದೆ ಎಂದು ವರದಿಯಾಗಿದೆ. "ಖಾಗಾ" ಎಂದು ಗುರುತಿಸಲ್ಪಟ್ಟ ವ್ಯಕ್ತಿ, ಅಪಾಯಕಾರಿ ಸಹಾಯವನ್ನು ಮಾಡಿದ್ದಾನೆ. ಏನಾದರೂ ಹಾವು ಆತನಿಗೆ ಕಚ್ಚುತ್ತಿದ್ದರೆ ಅದು ಆತನ ಪ್ರಾಣಕ್ಕೆ ಅಪಾಯವಾಗುತ್ತಿತ್ತು.
ನವದೆಹಲಿ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ನಾಯಕರು ತಮ್ಮ ಮತ್ತು ಸರ್ಕಾರದ ಬಗ್ಗೆ ಮಾಡುತ್ತಿರುವ ಟೀಕೆಗಳಿಗೆ ಇಂದು ಪ್ರಧಾನಿ ಮೋದಿ ರಾಜ್ಯ ಸಭೆ ಭಾಷಣದಲ್ಲಿ ತಿರುಗೇಟು ನೀಡಿದ್ದಾರೆ. ಕೆಲವರು ತಮ್ಮನ್ನು ತಾವು ರಾಜರು ಎಂದು ಪರಿಗಣಿಸಿಕೊಳ್ಳುವವರು ಆರ್ಥಿಕ ಅಸಮಾನತೆ ಬಗ್ಗೆ ಮಾತನಾಡುತ್ತಾರೆ ಎಂದಿದ್ದಾರೆ. ರಾಜ್ಯಸಭೆಯಲ್ಲಿ ಇಂದು ಸುದೀರ್ಘ ಭಾಷಣ ಮಾಡಿದ ಪ್ರಧಾನಿ ಮೋದಿ ವಿಪಕ್ಷಗಳ ಆರೋಪಗಳಿಗೆ ತಿರುಗೇಟು ನೀಡಿದ್ದಲ್ಲದೆ ತಮ್ಮ ಸರ್ಕಾರದ ಸಾಧನೆಯನ್ನು ಒತ್ತಿ ಹೇಳಿದರು. ನುಸುಳುಕೋರರ ಪರವಾಗಿ ಇರುವ ಇವರನ್ನು ಯುವಕರು ಹೇಗೆ ಕ್ಷಮಿಸುತ್ತಾರೆ? ನುಸುಳುಕೋರರನ್ನು ಇವರು ಗುರಾಣಿಯಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದಿದ್ದಾರೆ.
ಮೈಸೂರು: ಕೆಲ ತಿಂಗಳ ಹಿಂದೆ ಮಚ್ಚು ಹಿಡಿದು ಶೋ ಮಾಡಿ, ಜೈಲು ಹಕ್ಕಿಯಾಗಿದ್ದ ಬಿಗ್ಬಾಸ್ ಖ್ಯಾತಿಯ ರಜತ್ ಬುಜ್ಜಿ ಇದೀಗ ಮತ್ತೇ ಟೀಕೆಗೆ ಗುರಿಯಾಗಿದ್ದಾರೆ. ಇದೀಗ ಸಾಂಸ್ಕೃತಿಕ ನಗರಿ ಮೈಸೂರಿನ ಪಾರಂಪರಿಕ ಕಟ್ಟಡದ ಎದುರು ಸಿಗರೇಟ್ ಸೇದುತ್ತಾ ಫೋಟೋಶೂಟ್ ಮಾಡಿಸಿಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಂಬಂಧ ಕನ್ನಡಪರ ಸಂಘಟನೆಗಳು ಪೋಲಿಸ್ ಠಾಣೆಯ ಮೆಟ್ಟಿಲೇರಿವೆ.ಇನ್ನೂ ಮೈಸೂರಿನ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಒಂದು ಪಾರಂಪರಿಕ ಕಟ್ಟಡವಾಗಿದ್ದು, ಇಂತಹ ಐತಿಹಾಸಿಕ ಮಹತ್ವವುಳ್ಳ ಕಟ್ಟಡದ ಆವರಣದಲ್ಲಿ ರಜತ್ ಅವರು ಕಾರಿನಿಂದ ಇಳಿಯುತ್ತಾ, ಕೈಯಲ್ಲಿ ಸಿಗರೇಟ್ ಹಿಡಿದು ಹೊಗೆ ಬಿಡುತ್ತಾ 'ವಿಲನ್ ಲುಕ್'ನಲ್ಲಿ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ಇದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧವಿದ್ದರೂ, ನಿಯಮಗಳನ್ನು ಗಾಳಿಗೆ ತೂರಿ ರಜತ್ ಅವರು
ನವದೆಹಲಿ: ಸದನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಬಂದು ಕಾಂಗ್ರೆಸ್ನವರು ಗಲಾಟೆ ಮಾಡಲು ಯೋಜನೆ ಹಾಕಿಕೊಂಡಿರುವ ಬಗ್ಗೆ ಸ್ಪೀಕರ್ ಓಂ ಬಿರ್ಲಾ ಅವರು ಸ್ಪೋಟಕ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಪ್ರಧಾನಿ ಮೋದಿ ಲೋಕಸಭೆ ಭಾಷಣವನ್ನು ಏಕೆ ತಪ್ಪಿಸಿಕೊಂಡರು ಎಂಬ ವಿಚಾರಕ್ಕೆ ಸ್ಪೀಕರ್ ಓಂ ಬಿರ್ಲಾ ಪ್ರತಿಕ್ರಿಯಿಸಿದ್ದಾರೆ. ರಾಷ್ಟ್ರಪತಿಯವರ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಪ್ರಧಾನಿ ಉತ್ತರಿಸಲು ನಿಗದಿಪಡಿಸಿದಾಗ ಈ ಗಲಾಟೆ ನಡೆಸಲು ತೀರ್ಮಾನಿಸಿರುವುದಾಗಿ ಬಿರ್ಲಾ ಹೇಳಿದರು.
ಉಡುಪಿ: ಒಂದು ಲಾಟರಿ ಟಿಕೆಟ್ನಿಂದ ಉಡುಪಿ ಜಿಲ್ಲೆಯ ಕಾಪು ತಾಲೂಕು ಕಟಪಾಡಿ ಮಟ್ಟು ಮೂಲದ ಶಾಂತನು ಶೆಟ್ಟಿಗಾರ್ ಅವರ ಜೀವನವೇ ಬದಲಾಗಿದೆ. 33 ವರ್ಷ ಯುವಕನಿಗೆ 20 ಮಿಲಿಯನ್ ದಿರಾಮ್ ಬಹುಮಾನ ಲಭಿಸಿದೆ. ಅಂದರೆ ಸುಮಾರು ₹49 ಕೋಟಿ ಬಹುಮಾನ ಜೇಬಿಗಿಸಿಕೊಂಡಿದ್ದಾರೆ. ದುಬೈನ ಪ್ರತಿಷ್ಠಿತ ಲಾಟರಿಯಾದ ಬಿಗ್ ಟಿಕೆಟ್ ನ ಲಕ್ಕಿ ಡ್ರಾದಲ್ಲಿ ಉಡುಪಿಯ ಶಾಂತನು ಅವರಿಗೆ ಭರ್ಜರಿ 49 ಕೋಟಿ ರೂ. ಬಹುಮಾನ ಸಿಕ್ಕಿದೆ. ಓಮನ್ನಲ್ಲಿ ಚಿಲ್ಲರೆ ವ್ಯಾಪಾರದ ಸೇಲ್ಸ್ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಉಡುಪಿಯ ಕಾಪು ತಾಲೂಕು ಕಟಪಾಡಿ ಮಟ್ಟು ಮೂಲದ ಶಾಂತನು ಶೆಟ್ಟಿಗಾರ್ ಅವರಿಗೆ ಲಾಟರಿ ಹೊಡೆದಿದೆ.33 ವರ್ಷದ ಶಾಂತನು ಅವರು ಓಮನ್ನಲ್ಲಿ ರಿಟೇಲ್ ವಲಯದ ಉದ್ಯೋಗದಲ್ಲಿದ್ದು, ಇದೇ ಜನವರಿ 20ರಂದು ಬಿಗ್ ಟಿಕೆಟ್ನಲ್ಲಿ 305810 ಸಂಖ್ಯೆ ಲಾಟರಿ ಖರೀದಿಸಿದ್ದರು.
ರಾಜ್ಯ ಸರ್ಕಾರ ಆಗಾಗ ಪೊಲೀಸ್ ಇಲಾಖೆಯಲ್ಲಿ ಉನ್ನತ ಹುದ್ದೆಯಲ್ಲಿರುವ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಆದೇಶವನ್ನು ಹೊರಡಿಸುತ್ತಲೇ ಇರುತ್ತದೆ. ಇದೀಗ ಹಿರಿಯ ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್ ಅವರನ್ನು ದಿಢೀರ್ ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದ್ದಾರೆ.ಇನ್ನೂ ರವಿ ಡಿ ಚನ್ನಣ್ಣನವರ್ ಅವರು ರಾಜ್ಯದ ಅತ್ಯಂತ ಜನಪ್ರಿಯ ಮತ್ತು ದಕ್ಷ ಅಧಿಕಾರಿಗಳಲ್ಲಿ ಒಬ್ಬರಾಗಿದ್ದಾರೆ. ತಮ್ಮ ಕಟ್ಟುನಿಟ್ಟಿನ ಕೆಲಸದ ವೈಖರಿ ಹಾಗೂ ಸಮಾಜಮುಖಿ ಕಾರ್ಯಗಳಿಂದಾಗಿ ಅವರು ಯುವಜನತೆಗೆ ಸ್ಪೂರ್ತಿಯಾಗಿದ್ದಾರೆ.ಗದಗ ಜಿಲ್ಲೆಯ ರೋಣ ತಾಲ್ಲೂಕಿನ ನೀಲಗುಂದ ಗ್ರಾಮದವರಾಗಿದ್ದು, ಇವರು ಅತ್ಯಂತ ಬಡತನದ
ಬೆಂಗಳೂರು: ಕಾರವಾರ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಅಕ್ರಮ ಅದಿರು ರಪ್ತು ಕೇಸಲ್ಲಿ ಜಾರಿ ನಿರ್ದೇಶನಾಲಯ ದಾಖಲಿಸಿದ್ದಂತ ಪ್ರಕರಣದಲ್ಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.ಶಾಸಕ ಸತೀಶ್ ಸೈಲ್ ಅವರಿಗೆ ಹೈಕೋರ್ಟ್ ವೈದ್ಯಕೀಯ ಜಾಮೀನು ಮಂಜೂರು ಮಾಡಿದೆ. ಲಿವರ್ ಕಸಿ ಮಾಡಿಸಬೇಕಿರುವುದರಿಂದ ಜಾಮಿನು ನೀಡಲಾಗುತ್ತಿದೆ ಎಂದು ಹೈಕೋರ್ಟ್ ತಿಳಿಸಿದೆ. ಅನಾರೋಗ್ಯದ ಕಾರಣ ನೀಡಿ ಶಾಸಕ ಸತೀಶ್ ಜಾಮೀನಿಗಾಗಿ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ನ್ಯಾಯಪೀಠವು, ಲಿವರ್ ಸಮಸ್ಯೆಯಿರುವ ಕಾರಣ ಚಿಕಿತ್ಸೆಗೆ ಅಗತ್ಯತೆಯ ಕಾರಣ ನೀಡಿ, ವೈದ್ಯಕೀಯ ಆಧಾರದ ಮೇಲೆ ಜಾಮೀನು ಮಂಜೂರು ಮಾಡಿದೆ.