Shorts

ಮಂಗಳೂರು: ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರವು ಚುನಾವಣಾ ಬಾಂಡ್‌ ಹಾಗೂ ಪಿಎಂ ಕೇರ್ಸ್ ನಿಧಿಯ ಮೇಲಿನ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದೆಯೆಂದು ಸರ್ಕಾರ ಚುನಾವಣಾ ಬಾಂಡ್‌ಗಳು ಮತ್ತು ಪಿಎಂ ಕೇರ್ಸ್ ನಿಧಿಯ ಮೇಲಿನ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಪ ಮಾಡಿದರು. ನ್ಯಾಷನಲ್ ಹೆರಾಲ್ಡ್‌ ಪತ್ರಿಕೆಗೆ ಜಾಹೀರಾರತು ನೀಡಿರುವ ಪ್ರಕರಣ ಸಂಬಂಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು, ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾವಿರಾರು ಕೋಟಿ ರೂಪಾಯಿಗಳನ್ನು ಒಳಗೊಂಡಿರುವ ಚುನಾವಣಾ ಬಾಂಡ್ ಯೋಜನೆಗೆ ಹಣವನ್ನು ಯಾರು ದಾನ ಮಾಡಿದರು ಅಥವಾ ಅದರಿಂದ ಯಾರು ಲಾಭ ಪಡೆದರು ಎಂಬುದರ ಕುರಿತು ಇನ್ನೂ ಸ್ಪಷ್ಟತೆಯಿಲ್ಲ ಎಂದು ಹೇಳಿದರು.

ಪುಣೆ (ಮಹಾರಾಷ್ಟ್ರ): ಪುಣೆ ಮಹಾನಗರ ಪಾಲಿಕೆ ಚುನಾವಣೆಗೆ ಮುನ್ನ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಮತ್ತು ಶಿವಸೇನಾ ಮುಖ್ಯಸ್ಥ ಏಕನಾಥ್ ಶಿಂಧೆ ಶುಕ್ರವಾರ ಪುಣೆಯಲ್ಲಿ ಪ್ರಚಾರ ನಡೆಸಿದ್ದು, ಮಹಾಯುತಿ ಮೈತ್ರಿಕೂಟವು ಅಭಿವೃದ್ಧಿಯ ನೆಲೆಯಲ್ಲಿ ನಾಗರಿಕ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದೆ ಮತ್ತು ಮುಂಬೈ ಮತ್ತು ಪುಣೆ ಎರಡರಲ್ಲೂ ವಿಜಯಶಾಲಿಯಾಗಲಿದೆ ಎಂದು ಪ್ರತಿಪಾದಿಸಿದರು. ಕತ್ರಾಜ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಿಂಧೆ, ಯಾವುದೇ ವೈಯಕ್ತಿಕ ಪಕ್ಷದ ಕಾರ್ಯಕರ್ತರು ನೀಡಿದ ಹೇಳಿಕೆಗಳ ಬಗ್ಗೆ ತನಗೆ ತಿಳಿದಿಲ್ಲ ಎಂದು ಹೇಳಿದರು, ಆದರೆ ಶಿವಸೇನೆ ಮತ್ತು ಭಾರತೀಯ ಜನತಾ ಪಕ್ಷವು ಪೂರ್ಣ ಶಕ್ತಿಯಿಂದ ಚುನಾವಣೆಯಲ್ಲಿ ಸ್ಪರ್ಧಿಸುತ್ತಿವೆ ಎಂದು ಒತ್ತಿ ಹೇಳಿದರು.

ಇಂದು ಶುಕ್ರವಾರವಾಗಿದ್ದು ಮಹಾಲಕ್ಷ್ಮಿಗೆ ವಿಶೇಷವಾದ ದಿನವಾಗಿದೆ. ಮನೆಯಲ್ಲಿ ಅಭಿವೃದ್ಧಿ, ನೆಮ್ಮದಿ, ಐಶ್ವರ್ಯ ನೆಲೆಸಬೇಕೆಂದರೆ ಲಕ್ಷ್ಮೀ ದೇವಿಯ ಕುರಿತಾದ ಕಲ್ಯಾಣವೃಷ್ಟಿ ಸ್ತವಃ ಸ್ತೋತ್ರವನ್ನು ಓದಿ.ಕಲ್ಯಾಣವೃಷ್ಟಿಭಿರಿವಾಮೃತಪೂರಿತಾಭಿ--ರ್ಲಕ್ಷ್ಮೀಸ್ವಯಂವರಣಮಂಗಲದೀಪಿಕಾಭಿಃ ।ಸೇವಾಭಿರಂಬ ತವ ಪಾದಸರೋಜಮೂಲೇನಾಕಾರಿ ಕಿಂ ಮನಸಿ ಭಾಗ್ಯವತಾಂ ಜನಾನಾಮ್ ॥ 1 ॥ ಏತಾವದೇವ ಜನನಿ ಸ್ಪೃಹಣೀಯಮಾಸ್ತೇತ್ವದ್ವಂದನೇಷು ಸಲಿಲಸ್ಥಗಿತೇ ಚ ನೇತ್ರೇ ।ಸಾಂನಿಧ್ಯಮುದ್ಯದರುಣಾಯುತಸೋದರಸ್ಯತ್ವದ್ವಿಗ್ರಹಸ್ಯ ಪರಯಾ ಸುಧಯಾಪ್ಲುತಸ್ಯ ॥ 2 ॥ ಈಶತ್ವನಾಮಕಲುಷಾಃ ಕತಿ ವಾ ನ ಸಂತಿಬ್ರಹ್ಮಾದಯಃ ಪ್ರತಿಭವಂ ಪ್ರಲಯಾಭಿಭೂತಾಃ ।ಏಕಃ ಸ ಏವ ಜನನಿ ಸ್ಥಿರಸಿದ್ಧಿರಾಸ್ತೇಯಃ ಪಾದಯೋಸ್ತವ ಸಕೃತ್ಪ್ರಣತಿಂ ಕರೋತಿ ॥ 3 ॥ ಲಬ್ಧ್ವಾ ಸಕೃತ್ತ್ರಿಪುರಸುಂದರಿ ತಾವಕೀನಂಕಾರುಣ್ಯಕಂದಲಿತಕಾಂತಿಭರಂ ಕಟಾಕ್ಷಮ್ ।ಕಂದರ್ಪಕೋಟಿಸುಭಗಾಸ್ತ್ವಯಿ ಭಕ್ತಿಭಾಜಃಸಂಮೋಹಯಂತಿ ತರುಣೀರ್ಭುವನತ್ರಯೇಽಪಿ ॥ 4 ॥

ಬೆಳಗಾವಿ: ಇಲ್ಲಿನ ಬೈಲಹೊಂಗಲ ತಾಲೂಕಿನ ಮರಕುಂಬಿ ಗ್ರಾಮದ ಬಳಿಯ ಇನಾಮ್​ದಾರ್ ಸಕ್ಕರೆ ಕಾರ್ಖಾನೆಯಲ್ಲಿ ಸಂಭವಿಸಿದ ಬಾಯ್ಲರ್ ಸ್ಫೋಟ ಪ್ರಕರಣದಲ್ಲಿ ಗಾಯಗೊಂಡಿದ್ದ ನಾಲ್ವರು ಕಾರ್ಮಿಕರು ಇಂದು ಸಾವನ್ನಪ್ಪಿದ್ದು, ಮೃತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಈ ಸಂಬಂದ ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.ಮೃತ ದುರ್ದೈವಿಗಳನ್ನು ಅಕ್ಷಯ ತೋಪಡೆ, ದೀಪಕ್ ಮುನವಳ್ಳಿ, ಸುದರ್ಶನ ಬನೋಶಿ, ಬೈಲಹೊಂಗಲ ತಾಲೂಕಿನ ಅರವಳ್ಳಿ ನಿವಾಸಿ ಮಂಜುನಾಥ ಮಡಿವಾಳಪ್ಪ ಕಾಜಗಾರ್, ಗೋಕಾಕ್ ತಾಲೂಕಿನ ಗೊಡಚಿನಮಲ್ಕಿ ಗ್ರಾಮದ ನಿವಾಸಿ ಭರತೇಶ ಸಾರವಾಡಿ, ತೇರದಾಳ ಅಥಣಿ ಪಟ್ಟಣದ ನಿವಾಸಿ ಮಂಜುನಾಥ್ ತೇರದಾಳ, ಬಾಗಲಕೋಟ ಜಿಲ್ಲೆಯ ಮರೆಗುದ್ದಿ ಗ್ರಾಮದ ಗುರುಪಾದಪ್ಪ ತಮ್ಮನ್ನವರ್​​ ಎಂದು ಗುರುತಿಸಲಾಗಿದೆ.

ಮಡಿಕೇರಿ: ದೀರ್ಘಾವಧಿ ಸಿಎಂ ಎಂಬ ಹೆಗ್ಗಳಿಕೆಗೆ ಪಾತ್ರವಾದ ಸಿದ್ದರಾಮಯ್ಯ ಬಗ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ್ ಅವರು ಸಿದ್ದರಾಮಯ್ಯ ಅವರು ದೇವರಾಜ ಅರಸು ಆಗಲು ಸಾಧ್ಯವಿಲ್ಲ. ದೇವರಾಜ ಅರಸು ಅವರ ಹತ್ತಿರ ಬರಲು ಕೂಡ ಆಗೋದಿಲ್ಲ ಎಂದು ಟೀಕಿಸಿದರು.ಮಡಿಕೇರಿಯಲ್ಲಿ ಮಾತಾನಾಡಿದ ಅವರು, ದೇವರಾಜು ಅರಸು ಅವರು ನಮ್ಮನ್ನು ಅಗಲಿ ನಾಲ್ಕು ದಶಕಗಳು ಕಳೆದು ಹೋಗಿವೆ. ಅವರಿಲ್ಲದೆ ನಾಲ್ಕು ದಶಕ ಕಳೆದರೂ ಇಂದಿಗೂ ಅವರನ್ನು ಪೂಜ್ಯನೀಯ ಭಾವನೆಯಿಂದ ನೋಡುತ್ತಾರೆ. ಅವರ ವ್ಯಕ್ತಿತ್ವ ಆ ರೀತಿ ಇದೆ. ಸುಮ್ಮನೆ ಇದ್ರೂ ವಯಸ್ಸು ಆಗುತ್ತದೆ. ಸಿದ್ದರಾಮಯ್ಯ ಅವರು ಸಿಎಂ ಕುರ್ಚಿಯಲ್ಲಿ ಕುಳಿತು ಕಾಲ ತಳ್ಳುತ್ತಿದ್ದಾರೆ ಅಷ್ಟೆ. ಹೊಸ ದಾಖಲೆ ಬರೆದಿದ್ದಾರೆ ಎಂದು ಹೇಳುತ್ತಾರೆ. ಆದರೆ, ಸಿದ್ದರಾಮಯ್ಯ ಅವರು ದೇವರಾಜ ಅರಸು ಆಗಲೂ ಸಾಧ್ಯವಿಲ್ಲ ಎಂದು ಟೀಕೆ ಮಾಡಿದರು.

ಚಿತ್ರದುರ್ಗಾ: ತಂದೆ ಸರಿಯಾದ ಸಮಯಕ್ಕೆ ಮದುವೆ ಮಾಡಿಲ್ಲವೆಂದು ಆಕ್ರೋಶಗೊಂಡ ಪಾಪಿ ಪುತ್ರನೋರ್ವ ತಂದೆಯನ್ನೇ ಕೊಂದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಅತಿಘಟ್ಟ ಗ್ರಾಮದಲ್ಲಿ ನಡೆದಿದೆ. ಮಗನಿಂದ ಕೊಲೆಯಾದ ತಂದೆಯನ್ನು ಗ್ರಾಮದ ಸಣ್ಣನಿಂಗಪ್ಪ ಎಂದು ಗುರುತಿಸಲಾಗಿದೆ. ಈತನ ಪುತ್ರ ನಿಂಗರಾಜ್‌ ತನ್ನೊಟ್ಟಿಗೆ ಬೆಳೆದ ಸ್ನೇಹಿತರೆಲ್ಲರೂ ಮದುವೆಯಾಗಿದೆ. ಆದರೆ ತನಗೆ ಮದುವೆಯಾಗಿಲ್ಲವೆಂದು ಆಗಾಗ ತಂದೆಯ ಜಗಳ ಮಾಡುತ್ತಿದ್ದ. ಈ ವಿಚಾರವಾಗಿ ಅಣ್ಣ, ಅಕ್ಕ, ತಾಯಿ, ಕುಟುಂಬಸ್ಥರು ಎಷ್ಟೇ ಬುದ್ಧಿವಾದ ಹೇಳಿದರೂ ಜಗಳ ಮಾತ್ರ ನಿಲ್ಲಿಸಿರಲಿಲ್ಲ. ಇದೇ ವಿಚಾರಕ್ಕೆ ಸಿಟ್ಟಾಗಿದ್ದ ನಿಂಗರಾಜ್ (36) ಬುಧವಾರ ರಾತ್ರಿ ತಂದೆ ಸಣ್ಣನಿಂಗಪ್ಪ (65) ಮಲಗಿದ್ದ ವೇಳೆ ಕಬ್ಬಿಣದ ರಾಡ್‌ನಿಂದ ತಲೆಗೆ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ.