Shorts

ಬೆಂಗಳೂರು: ಮಧ್ಯಪ್ರಾಚ್ಯದ ಕೆಲವು ಭಾಗಗಳಲ್ಲಿ ಭೌಗೋಳಿಕ ರಾಜಕೀಯ ಉದ್ವಿಗ್ನತೆ ಹೆಚ್ಚುತ್ತಿರುವ ಮಧ್ಯೆ ಕನ್ನಡಿಗರು ಮತ್ತು ಇತರ ಭಾರತೀಯರನ್ನು ರಕ್ಷಿಸಲು ತೆರವು ಸಿದ್ಧತೆಯನ್ನು ಪ್ರಾರಂಭಿಸಬೇಕು, ರಾಜತಾಂತ್ರಿಕ ಪ್ರಭಾವವನ್ನು ಹೆಚ್ಚಿಸಬೇಕು ಮತ್ತು ಅಂತರ ಸಚಿವಾಲಯದ ಕಾರ್ಯವಿಧಾನವನ್ನು ಸ್ಥಾಪಿಸಬೇಕು ಎಂದು ಕರ್ನಾಟಕ ಸಿಎಂ ಸಿದ್ದರಾಮಯ್ಯ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಪ್ರಧಾನಿ ಮೋದಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ, ಈ ಪ್ರದೇಶದಲ್ಲಿ ವೇಗವಾಗಿ ವಿಕಸನಗೊಳ್ಳುತ್ತಿರುವ ಭದ್ರತಾ ಪರಿಸ್ಥಿತಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ, ಇದು ವಿಮಾನ ರದ್ದತಿಗೆ ಕಾರಣವಾಗಿದೆ ಮತ್ತು ಕರ್ನಾಟಕ ಮತ್ತು ಭಾರತದಾದ್ಯಂತದ ನಿವಾಸಿಗಳು, ಕಾರ್ಮಿಕರು, ವಿದ್ಯಾರ್ಥಿಗಳು ಮತ್ತು ಪ್ರಯಾಣಿಕರಿಗೆ ವ್ಯಾಪಕ ಅನಿಶ್ಚಿತತೆಗೆ ಕಾರಣವಾಗಿದೆ ಎಂದರು.

ಮಂಗಳೂರು: ಗಲ್ಫ್ ವಲಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಾರ್ಚ್ 3 ರಂದು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈ, ದೋಹಾ, ದಮಾಮ್, ಕತಾರ್ ಮತ್ತು ಅಬುಧಾಬಿಗೆ ತೆರಳಬೇಕಿದ್ದ ವಿಮಾನ ಸೇವೆಗಳನ್ನು ರದ್ದುಗೊಳಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.ಇಸ್ರೇಲ್ ಮತ್ತು ಯುನೈಟೆಡ್ ಸ್ಟೇಟ್ಸ್‌ನ ದಾಳಿಗಳಿಗೆ ಪ್ರತಿಕ್ರಿಯೆಯಾಗಿ ಗಲ್ಫ್ ರಾಷ್ಟ್ರಗಳಾದ್ಯಂತ ಅಮೇರಿಕನ್ ಮಿಲಿಟರಿ ನೆಲೆಗಳು ಸೇರಿದಂತೆ ಪ್ರಮುಖ ಸ್ಥಾಪನೆಗಳ ಮೇಲೆ ಇರಾನ್ ನಡೆಸಿದ ಪ್ರತೀಕಾರದ ದಾಳಿಗಳನ್ನು ಅನುಸರಿಸಿ ಈ ಅಡ್ಡಿಯುಂಟಾಗಿದೆ. ಕ್ಷಿಪ್ರವಾಗಿ ಹದಗೆಡುತ್ತಿರುವ ಭದ್ರತಾ ಪರಿಸ್ಥಿತಿಯು ಮುಂಜಾಗ್ರತಾ ಕ್ರಮವಾಗಿ ಗಲ್ಫ್ ಸ್ಥಳಗಳಿಗೆ ವಿಮಾನಗಳನ್ನು ಸ್ಥಗಿತಗೊಳಿಸಲು ಅಧಿಕಾರಿಗಳನ್ನು ಪ್ರೇರೇಪಿಸಿದೆ.

ಇಂದು ಸೋಮವಾರವಾಗಿದ್ದು ಶಿವನಿಗೆ ವಿಶೇಷವಾದ ದಿನವಾಗಿದೆ. ಶಿವನನ್ನು ಪೂಜೆ ಮಾಡುವುದರಿಂದ ಆಯಸ್ಸು, ಆರೋಗ್ಯ ವೃದ್ಧಿಯಾಗುತ್ತದೆ. ಇಂದು ತಪ್ಪದೇ ರುದ್ರಾಷ್ಟಕಂ ಸ್ತೋತ್ರವನ್ನು ಓದಿ. ಕನ್ನಡದಲ್ಲಿ ಇಲ್ಲಿದೆ.ನಮಾಮೀಶಮೀಶಾನ ನಿರ್ವಾಣರೂಪಂವಿಭುಂ ವ್ಯಾಪಕಂ ಬ್ರಹ್ಮವೇದ-ಸ್ವರೂಪಮ್ ।ನಿಜಂ ನಿರ್ಗುಣಂ ನಿರ್ವಿಕಲ್ಪಂ ನಿರೀಹಂಚಿದಾಕಾಶ-ಮಾಕಾಶವಾಸಂ ಭಜೇಽಹಮ್ ॥ 1 ॥ ನಿರಾಕಾರಮೋಂಕಾರಮೂಲಂ ತುರೀಯಂಗಿರಾಜ್ಞಾನಗೋತೀತಮೀಶಂ ಗಿರೀಶಮ್ ।ಕರಾಲಂ ಮಹಾಕಾಲಕಾಲಂ ಕೃಪಾಲುಂಗುಣಾಗಾರ-ಸಂಸಾರಪಾರಂ ನತೋಽಹಮ್ ॥ 2 ॥ ತುಷಾರಾದ್ರಿ-ಸಂಕಾಶಗೌರಂ ಗಭೀರಂಮನೋಭೂತಕೋಟಿ-ಪ್ರಭಾಸೀ ಶರೀರಮ್ ।ಸ್ಫುರನ್ಮೌಲಿಕಲ್ಲೋಲಿನೀ ಚಾರುಗಂಗಾಲಸದ್ಭಾಲ-ಬಾಲೇಂದು ಕಂಠೇ ಭುಜಂಗಮ್ ॥ 3 ॥ಚಲತ್ಕುಂಡಲಂ ಶುಭ್ರನೇತ್ರಂ ವಿಶಾಲಂ [ಭೄಸುನೇತ್ರಂ ವಿಶಾಲಂ]ಪ್ರಸನ್ನಾನನಂ ನೀಲಕಂಠಂ ದಯಾಲುಮ್ ।ಮೃಗಾಧೀಶ-ಚರ್ಮಾಂಬರಂ ಮುಂಡಮಾಲಂಪ್ರಿಯಂ ಶಂಕರಂ ಸರ್ವನಾಥಂ ಭಜಾಮಿ ॥ 4 ॥ಚಲತ್ಕುಂಡಲಂ ಶುಭ್ರನೇತ್ರಂ ವಿಶಾಲಂ [ಭೄಸುನೇತ್ರಂ ವಿಶಾಲಂ]ಪ್ರಸನ್ನಾನನಂ ನೀಲಕಂಠಂ ದಯಾಲುಮ್ ।

ಮುಂಬೈ: ಆಂಧ್ರಪ್ರದೇಶದಲ್ಲಿ ಕಾರ್ಖಾನೆ ಸ್ಫೋಟಗೊಂಡ ಬೆನ್ನಲ್ಲೆ ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕಟೋಲ್‌ನ ರೌಲ್‌ಗಾಂವ್‌ನಲ್ಲಿರುವ ಕಾರ್ಖಾನೆಯೊಂದರಲ್ಲಿ ಭಾರೀ ಸ್ಫೋಟ ಸಂಭವಿಸಿದೆ. ಇದರ ಪರಿಣಾಮ 17 ಮಂದಿ ಸಾವನ್ನಪ್ಪಿದ್ದು, 18ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.ಗಣಿಗಾರಿಕೆ ಮತ್ತು ಕೈಗಾರಿಕಾ ಸ್ಫೋಟಕ ತಯಾರಿಕಾ ಕಂಪನಿಯಾದ ಎಸ್‌ಬಿಎಲ್ ಎನರ್ಜಿ ಲಿಮಿಟೆಡ್‌ನಲ್ಲಿ ಇಂದು ಬೆಳಗಿನ ಜಾವ ಈ ಭೀಕರ ಸ್ಫೋಟ ಸಂಭವಿಸಿದೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆ ಹಾಗೂ ನಾಗ್ಪುರದ ಆರೆಂಜ್ ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರಿಂದ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ತನಿಖೆ ಆರಂಭಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಭಾನುವಾರ ಮುಂಜಾನೆ 6-7 ಗಂಟೆಯ ನಡುವೆ ದುರಂತ ಸಂಭವಿಸಿದೆ.

ಕೋಲ್ಕತ್ತಾ: ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಇಂದು ಹೈವೋಲ್ಟೇಜ್‌ ಪಂದ್ಯ ನಡೆಯಲಿದೆ. ಸೂ‍ಪರ್‌ ಎಂಟರ ಹಂತದ ಪಂದ್ಯದಲ್ಲಿ ಭಾರತ ಮತ್ತು ವೆಸ್ಟ್‌ ಇಂಡೀಸ್ ತಂಡಗಳು ಮುಖಾಮುಖಿಯಾಗುತ್ತಿದ್ದು, ಇದರಲ್ಲಿ ಗೆದ್ದ ತಂಡ ಸೆಮಿಫೈನಲ್‌ಗೇರಲಿದೆ. ಸೋತ ತಂಡ ಅಭಿಯಾನ ಮುಗಿಸಲಿದೆ.ದಕ್ಷಿಣ ಆಫ್ರಿಕಾ ವಿರುದ್ಧ ಸೋತು, ಜಿಂಬಾಬ್ವೆ ವಿರುದ್ಧ ಗೆದ್ದಿರುವ ಹಾಲಿ ಚಾಂಪಿಯನ್‌ ಭಾರತ ತಂಡಕ್ಕೆ ಇಂದು ಎಂಟರ ಹಣಾಹಣಿ ಮಾಡು ಇಲ್ಲವೇ ಮಡಿ ಸ್ಪರ್ಧೆಯಾಗಿ ಮಾರ್ಪಪಟ್ಟಿದೆ. ದಕ್ಷಿಣಾ ಆಫ್ರಿಕಾ ತಂಡ ಈಗಾಗಲೇ ಸೆಮಿಫೈನಲ್ ತಲುಪಿದ್ದರೆ. ಜಿಂಬಾಬ್ವೆ ಟೂರ್ನಿಯಿಂದಲೇ ಹೊರಬಿದ್ದಿದೆ. ಉಳಿದಿರುವ ಒಂದು ಸ್ಥಾನಕ್ಕೆ ಭಾರತ ಮತ್ತು ವಿಂಡೀಸ್‌ ನಡುವೆ ಪೈಪೋಟಿಯಿದೆ.ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿರುವ ಪಂದ್ಯಕ್ಕೆ ಭಾರತ ಸಜ್ಜಾಗಿದ್ದು, ವೆಸ್ಟ್ ಇಂಡೀಸ್ ವಿರುದ್ಧದ ಈ ಮುಖಾಮುಖಿ ಕ್ರಿಕೆಟ್ ವಲಯದಲ್ಲಿ ಭಾರೀ ಕುತೂಹಲ ಮೂಡಿಸಿದೆ.