ಬೆಂಗಳೂರು: ಚಿನ್ನಸ್ವಾಮಿಯಲ್ಲಿ ನಡೆದ ಕಾಲ್ತುಳಿತದ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸುವಾಗ ಕುಂಬಮೇಳದಲ್ಲೂ ಆಗಿರ್ಲಿಲ್ವಾಅ ಎಂದಿದ್ದರು. ಇದಕ್ಕೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ. ಆಗ ನೀವೂ ಟೀಕಿಸಿರಲಿಲ್ವಾ ಎಂದಿದ್ದಾರೆ. ನಿನ್ನೆ ಚಿನ್ನಸ್ವಾಮಿಯಲ್ಲಿ ಸಂಭ್ರಮಾಚರಣೆ ವೇಳೆ ಅವ್ಯವಸ್ಥೆಯಿಂದಾಗಿ ಕಾಲ್ತುಳಿತವಾಗಿ 11 ಮಂದಿ ಸಾವನ್ನಪ್ಪಿದ್ದರು. ಘಟನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮಗೋಷ್ಠಿ ನಡೆಸಿದ್ದರು. ಈ ವೇಳೆ ಕಾಲ್ತುಳಿತ ದುರಂತದ ಬಗ್ಗೆ ಕಾರಣ ವಿವರಿಸಿದ್ದಾರೆ. ಈ ವೇಳೆ ಇತ್ತೀಚೆಗೆ ಕುಂಬಮೇಳದಲ್ಲಿ ದುರಂತವಾಗಿಲ್ವಾ? ಕಾಲ್ತುಳಿತದಲ್ಲಿ ಜನ ಸಾವನ್ನಪ್ಪಿಲ್ವಾ? ಇದನ್ನು ನಾವು ಅಥವಾ ನಮ್ಮ ಪಕ್ಷದವರು ಏನಾದರೂ ಟೀಕೆ ಮಾಡಿದ್ವಾ ಎಂದು ಸಿದ್ದರಾಮಯ್ಯ ಪತ್ರಕರ್ತರಿಗೆ ತಿರುಗೇಟು ನೀಡಿದ್ದಾರೆ.

ಬೆಂಗಳೂರು: 18 ವರ್ಷಗಳ ಕಾಯುವಿಕೆಯ ಬಳಿಕ ಐಪಿಎಲ್‌ ಟ್ರೋಫಿಯನ್ನು ಆರ್‌ಸಿಬಿ ತಂಡವನ್ನು ಗೆದ್ದಿದೆ. ಅಭಿಮಾನಿಗಳ ಸಂಭ್ರಮ ಮೇರೆಮೀರಿದೆ. ಈ ಮಧ್ಯೆ ತಂಡದ ಮಾಜಿ ಮಾಲೀಕ, ಉದ್ಯಮಿ ವಿಜಯ್‌ ಮಲ್ಯ ಭಾವುಕ ಪೋಸ್ಟ್‌ ಹಂಚಿಕೊಂಡಿದ್ದಾರೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ 18ನೇ ಆವೃತ್ತಿಯ ಐಪಿಎಲ್‌ ಟೂರ್ನಿಯ ಫೈನಲ್‌ನಲ್ಲಿ ಪಂಜಾಬ್‌ ವಿರುದ್ಧ 6 ರನ್‌ಗಳ ಜಯ ಸಾಧಿಸಿರುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಚಾಂಪಿಯನ್‌ ಆಗಿದೆ. ನಾನು ಆರ್‌ಸಿಬಿಯನ್ನು ಸ್ಥಾಪಿಸಿದಾಗ ಬೆಂಗಳೂರಿಗೆ ಐಪಿಎಲ್ ಟ್ರೋಫಿ ಬರಬೇಕು ಎಂಬುದು ನನ್ನ ಕನಸಾಗಿತ್ತು. ಯುವಕನಾಗಿದ್ದ ಕಿಂಗ್ ಕೊಹ್ಲಿಯನ್ನು ಆಯ್ಕೆ ಮಾಡಿದ್ದೆ, ಅವರು 18 ವರ್ಷಗಳ ಕಾಲ ಆರ್‌ಸಿಬಿಯೊಂದಿಗೆ ಇದ್ದು ಚಾಂಪಿಯನ್‌ ಆಗಿದ್ದಾರೆ ಎಂದು ಆರ್‌ಸಿಬಿ ಗೆಲುವನ್ನು ಸಂಭ್ರಮಿಸಿರುವ ವಿಜಯ್‌ ಮಲ್ಯ ಬರೆದುಕೊಂಡಿದ್ದಾರೆ.

ಬೆಂಗಳೂರು: ಮುಂಜಾಗೃತ ಹಿನ್ನೆಲೆ ತೆರೆದ ಬಸ್‌ನಲ್ಲಿ ಆರ್‌ಸಿಬಿ ವಿಜಯೋತ್ಸವ ಇಲ್ಲ. ಆರ್‌ಸಿಬಿ ಆಟಗಾರರು ಬಸ್ಸಿನಲ್ಲಿ ಬಂದು ಬಸ್ಸಿನಲ್ಲಿ ಹೋಗುತ್ತಾರೆ ಎಂದು ಗೃಹಸಚಿವ ಜಿ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಮೂಲಕ ಕೊಹ್ಲಿ ಹಾಗೂ ಆರ್ಸಿಬಿ ಆಟಗಾರರನ್ನು ಹತ್ತಿರದಿಂದ ನೋಡಬೇಕೆಂದು ಕಾತುರದಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ನಿರಾಸೆಯಾಗಿದೆ. ವಿಧಾನಸೌಧದಲ್ಲಿ ಸಂಜೆ ಕಾರ್ಯಕ್ರಮ ನಡೆಯಲಿರುವ ಹಿನ್ನೆಲೆ ಗ್ರ‍್ಯಾಂಡ್ ಸ್ಟೆಪ್ ಬಳಿ ಸಿದ್ಧತೆ ವೀಕ್ಷಣೆ ಮಾಡಿದ ಬಳಿಕ ಪರಮೇಶ್ವರ್ ಮಾಧ್ಯಮಗಳೊಂದಿಗೆ ಮಾತನಾಡಿದರು. ಗೃಹ ಇಲಾಖೆ ಒಪ್ಪದ ಕಾರಣ ಪರೇಡ್‌ಗೆ ಬ್ರೇಕ್ ಹಾಕಲಾಗಿದೆ. ಪೊಲೀಸ್ ಕಮೀಷನರ್ ಪರೇಡ್‌ಗೆ ಒಪ್ಪಿಲ್ಲ. ವಿಧಾನಸೌಧ ಹಾಗೂ ಹೈಕೋರ್ಟ್ ಭದ್ರತೆ ದೃಷ್ಟಿಯಿಂದ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಅಹಮದಾಬಾದ್‌: ಆರ್‌ಸಿಬಿ ತಂಡದ ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ ಅವರ ಕನಸು ಕೊನೆಗೂ ನನಸಾಗಿದೆ. ಟಿ20 ವಿಶ್ವಕಪ್‌, ಏಕದಿನ ವಿಶ್ವಕಪ್‌ ಗೆದ್ದ ತಂಡದಲ್ಲಿದ್ದ ವಿರಾಟ್‌ಗೆ ಈತನಕ ಐಪಿಎಲ್‌ ಕಪ್‌ ಒಲಿದಿರಲಿಲ್ಲ. ಆದರೆ, ಈ ಬಾರಿ ಫೈನಲ್‌ನಲ್ಲಿ ಜಯಿಸುತ್ತಿದ್ದಂತೆ ವಿರಾಟ್‌ ಅವರು ಮೈದಾನದಲ್ಲೇ ಆನಂದಬಾಷ್ಪ ಸುರಿಸಿದರು. ಪಂದ್ಯ ಮುಗಿಯುವವರೆಗೆ ಭಾವನೆಗಳನ್ನು ಹಿಡಿದಿಟ್ಟುಕೊಂಡಿದ್ದ ವಿರಾಟ್‌ ಕೊಹ್ಲಿ ಅವರು ಗೆಲುವು ಸಾಧಿಸುತ್ತಿದ್ದಂತೆ ಮೈದಾನದಲ್ಲೇ ಕುಳಿತು ಕಣ್ಣೀರು ಹಾಕಿದರು. ಉಳಿದ ಆಟಗಾರರು ಅವರು ಅಭಿನಂದಿಸಿದರು. ಪತ್ನಿ ಅನುಷ್ಕಾ ಕೂಡಾ ವಿರಾಟ್‌ ಅವರನ್ನು ಅಭಿನಂದಿಸಿದರು. 18 ವರ್ಷಗಳಿಂದ ಆರ್‌ಸಿಬಿ ತಂಡಕ್ಕೆ ಆಡುತ್ತಿರುವ ವಿರಾಟ್‌ ಕೊನೆಗೂ ಐಪಿಎಲ್‌ ಕಪ್‌ ಅನ್ನು ಹಿಡಿದು ಸಂಭ್ರಮಿಸಿದರು.