ಬೆಂಗಳೂರು: ಕೇಂದ್ರ ಸರ್ಕಾರವು ಲೋಕಸಭೆ ಕ್ಷೇತ್ರಗಳ ಮರು ವಿಂಗಡನೆ ಮಾಡುವ ಹೊಸ ಮಸೂದೆ ಜಾರಿ ಮಾಡಲು ಮುಂದಾಗಿದೆ. ಇದು ಜಾರಿಯಾದರೆ ಕರ್ನಾಟಕಕ್ಕೆ ಎಷ್ಟು ಲೋಕಸಭೆ ಕ್ಷೇತ್ರಗಳು ಸಿಗಲಿವೆ ನೋಡಿ. ಲೋಕಸಭೆ ಕ್ಷೇತ್ರ ಈಗ 540 ಇದ್ದು ಹೊಸ ಮಸೂದೆ ಜಾರಿ ಮಾಡುವ ಮೂಲಕ ಇದನ್ನು 850 ಕ್ಕೆ ಏರಿಕೆ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಮಸೂದೆ ಸಂಸತ್ ನಲ್ಲಿ ಪ್ರಸ್ತಾಪನೆಯಾಗಲಿದ್ದು ಬಿಲ್ ಪಾಸಾದ ಬಳಿಕ ರಾಷ್ಟ್ರಪತಿಗಳ ಅಂಕಿತಕ್ಕೆ ಹೋಗಲಿದೆ. ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನಗಳ ಹಂಚಿಕೆಯನ್ನು ಶೇ.50 ಕ್ಕೆ ಹೆಚ್ಚಿಸಲಾಗುತ್ತದೆ ಎಂದು ಕೇಂದ್ರ ಸರ್ಕಾರ ಹೇಳಿದೆ. 2011 ರ ಜನಗಣತಿಯನ್ನು ಆಧರಿಸಿ ಮರುವಿಂಗಡಣೆ ಮಾಡಲಾಗುತ್ತದೆ ಎನ್ನಲಾಗಿದೆ.
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತುಇತರೆ ಚಿನ್ನದ ದರ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತವಾಗಿ ಬೆಲೆ ಏರಿಳಿಕೆಯಾಗುತ್ತಲೇ ಇತ್ತು. ಆದರೆ ವಾರಂತ್ಯಕ್ಕೆ ಪರಿಶುದ್ಧ ಚಿನ್ನದ ದರದಲ್ಲಿ ಕೊಂಚ ಇಳಿಕೆಯಾಗಿತ್ತು. ಪರಿಶುದ್ಧ ಚಿನ್ನದ ದರ ವಾರಂತ್ಯಕ್ಕೆ 1,54,770.00 ರೂ.ಗಳಿತ್ತು. ಆದರೆ ಇಂದು ಏರಿಕೆಯಾಗಿದ್ದು 1,57,945.00 ರೂ.ಗಳಷ್ಟಿದೆ.
ಬೆಂಗಳೂರು: ಅಡಿಕೆ ಬೆಲೆ ಕಳೆದ ವಾರ ಏರಿಕೆ-ಇಳಿಕೆಯಾಗಿತ್ತು. ಕಳೆದ ವಾರದಂತೆ ಈ ವಾರವೂ ಅದೇ ಟ್ರೆಂಡ್ ಮುಂದುವರಿದಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ. ಕಳೆದ ವಾರ ಅಡಿಕೆ ಬೆಲೆಯಲ್ಲಿ ಕೊಂಚ ಏರಿಳಿಕೆಯಾಗುತ್ತಲೇ ಇತ್ತು. ಕಳೆದ ವಾರ ಎರಡು ದಿನ ಸತತವಾಗಿ ಬೆಲೆ ಏರಿಕೆ ಕಂಡುಬರುತ್ತಿತ್ತು. ಅಡಿಕೆ ಬೆಲೆಯಲ್ಲಿ ಇಂದು ಕೊಂಚ ಇಳಿಕೆಯಾಗಿದೆ. ಹೊಸ ಅಡಿಕೆ ಬೆಲೆ 5 ರೂ. ಇಳಿಕೆಯಾಗಿ 485 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ 555 ರೂ. ಗಳಾಗಿದೆ. ಡಬಲ್ ಚೋಲ್ ಬೆಲೆಯೂ 555 ರೂ.ಗಳಷ್ಟಾಗಿದೆ.
ಮೈಸೂರು: ಕುಟುಂಬ ರಾಜಕಾರಣ ಮಾಡುತ್ತಿಲ್ಲ, ತಂದೆಯ ಲೆಗೆಸಿ ಮುಂದುವರಿಸಲು ರಾಜಕಾರಣಕ್ಕೆ ಬಂದೆ ಅಷ್ಟೇ ಎಂದು ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು ಟ್ರೋಲ್ ಗೊಳಗಾಗಿದೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಯತೀಂದ್ರ ಸಿದ್ದರಾಮಯ್ಯ ಜೆಡಿಎಸ್ ನಾಯಕ, ಕೇಂದ್ರ ಸಚಿವ ಕುಮಾರಸ್ವಾಮಿಯವರನ್ನು ಟೀಕೆ ಮಾಡಿದ್ದರು. ಈ ವೇಳೆ ನಮ್ಮದು ಕುಮಾರಸ್ವಾಮಿಯವರಂತೆ ಕುಟುಂಬ ರಾಜಕಾರಣ ಅಲ್ಲ ಎಂದಿದ್ದಾರೆ. ನಾನು ಎಂಎಲ್ ಸಿ ಆಗಿರುವುದು ಕುಟಂಬ ರಾಜಕಾರಣಕ್ಕಾಗಿ ಅಲ್ಲ. ನಮ್ಮ ತಂದೆಯ ರಾಜಕೀಯ ಜೀವನ ಮುಂದುವರಿಸಲು ಎಂಎಲ್ ಸಿಯಾಗಿದ್ದೇನೆ.
ಬೆಂಗಳೂರು: ಹೈಕಮಾಂಡ್ ನಿಂದ ಪದಚ್ಯುತಿಗೆ ಸೂಚನೆ ಬಂದಿದೆ ಎಂಬ ವದಂತಿಗಳ ಬೆನ್ನಲ್ಲೇ ಸಚಿವ ಜಮೀರ್ ಅಹ್ಮದ್ ಮಾಧ್ಯಮಗಳ ಮುಂದೆ ಶಾಕಿಂಗ್ ರಿಯಾಕ್ಷನ್ ಕೊಟ್ಟಿದ್ದಾರೆ. ದಾವಣಗೆರೆ ಬೈ ಎಲೆಕ್ಷನ್ ಬಂಡಾಯದ ದಳ್ಳುರಿ ಈಗ ಕಾಂಗ್ರೆಸ್ ನಲ್ಲಿ ಜೋರಾಗುತ್ತಿದೆ. ದಾವಣಗೆರೆಯಲ್ಲಿ ಪಕ್ಷ ಬೆಂಬಲಿಸದ ಅಲ್ಪಸಂಖ್ಯಾತ ಸಮುದಾಯದ ನಾಯಕರ ತಲೆದಂಡವಾಗುತ್ತಿದೆ. ಈಗಾಗಲೇ ಎಂಎಲ್ ಸಿ ನಸೀರ್ ಅಹ್ಮದ್, ಜಬ್ಬಾರ್ ತಲೆದಂಡವಾಗಿದೆ. ಇದೀಗ ಸಚಿವ ಜಮೀರ್ ಅಹ್ಮದ್ ಗೂ ಕೊಕ್ ಕೊಡಲು ಹೈಕಮಾಂಡ್ ನಿಂದ ಒತ್ತಡವಿದೆ ಎಂಬ ಮಾತು ಕೇಳಿಬರುತ್ತಿದೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ಕೂಡಾ ಜಮೀರ್ ರನ್ನು ಕರೆಸಿ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ.
ಇಂಧೋರ್: ಮಂಗನನ್ನು ಓಡಿಸಲು ಹೋಗಿ ಹೋಟೆಲ್ ರೂಂ ಬಾಯ್ ಒಬ್ಬ ಅಕಸ್ಮಾತ್ತಾಗಿ ಲೈವ್ ವಿದ್ಯುತ್ ತಂತಿ ಸ್ಪರ್ಶಿಸಿದ್ದು ನಿಂತಲ್ಲಿಯೇ ಸುಟ್ಟು ಕರಕಲಾದ ಭಯಾನಕ ವಿಡಿಯೋವೊಂದು ಇಲ್ಲಿದೆ. ಈ ಘಟನೆ ನಡೆದಿರುವುದು ಮಧ್ಯಪ್ರದೇಶದ ಛತ್ತಾರ್ ಪುರದಲ್ಲಿ. ಮೃತನನ್ನು ಪ್ರದೀಪ್ ರಾಯ್ಕವಾರ್ ಎಂದು ಗುರುತಿಸಲಾಗಿದೆ. ಸಾವು ಎನ್ನುವುದು ಅನಿರೀಕ್ಷಿತವಾಗಿ ಬರುತ್ತದೆ. ಇದೇ ರೀತಿ ಈತ ಕೂಡಾ ಯಾರೂ ಊಹಿಸಲಾಗದ ಸ್ಥಿತಿಯಲ್ಲಿ ಪ್ರಾಣ ಕಳೆದುಕೊಂಡಿದ್ದಾನೆ. ಹೋಟೆಲ್ ನ ಆವರಣದಲ್ಲಿ ಮಂಗಗಳು ಕಾಣಿಸಿಕೊಂಡಿದ್ದವು. ಅವುಗಳನ್ನು ಓಡಿಸಲು ಈತ ಕಬ್ಬಿಣದ ಪೈಪ್ ನ್ನು ಹಿಡಿದು ಓಡಿಸುವ ಪ್ರಯತ್ನ ಮಾಡಿದ್ದಾನೆ.
ಬೆಂಗಳೂರು: ಐಪಿಎಲ್ 2026 ರಲ್ಲಿ ನಿನ್ನೆ ಲಕ್ನೋ ಸೂಪರ್ ಜೈಂಟ್ಸ್ ಪಂದ್ಯದ ಬಳಿಕ ವಿರಾಟ್ ಕೊಹ್ಲಿ ಮಾತನಾಡುತ್ತಿದ್ದಾಗಲೇ ಎದುರಾಳಿ ಆಟಗಾರ ನಮನ್ ತಿವಾರಿ ಸೀದಾ ಕಾಲಿಗೆ ಬಿದ್ದು ನಮಸ್ಕರಿಸಿದ್ದಾರೆ. ಕೊಹ್ಲಿ ರಿಯಾಕ್ಷನ್ ವಿಡಿಯೋ ಇಲ್ಲಿದೆ. ಐಪಿಎಲ್ 2026 ರಲ್ಲಿ ನಿನ್ನೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಪಂದ್ಯದಲ್ಲಿ ಆರ್ ಸಿಬಿ 5 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿತ್ತು. 147 ರನ್ ಗಳ ಗುರಿಯನ್ನು ಕೇವಲ 15 ಓವರ್ ನಲ್ಲೇ ಸಾಧಿಸಿತ್ತು. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಆಡಿ 49 ರನ್ ಗಳಿಸಿ ಔಟಾಗಿದ್ದಾರೆ.
ಬೆಂಗಳೂರು: ಕ್ರಿಕೆಟ್ ಕಿಂಗ್ ವಿರಾಟ್ ಕೊಹ್ಲಿಯನ್ನು ತೀರಾ ಹತ್ತಿರದಿಂದ ನೀಡಿ ಗಾಯಕಿ ಪೃಥ್ವಿ ಭಟ್ ಗಳ ಗಳನೆ ಕಣ್ಣೀರು ಹಾಕಿರುವ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವಿರಾಟ್ ಕೊಹ್ಲಿಯನ್ನು ಒಮ್ಮೆ ನೋಡಲು ಎಷ್ಟೋ ಅಭಿಮಾನಿಗಳು ಮೈದಾನಕ್ಕೆ ಪಂದ್ಯ ವೀಕ್ಷಿಸಲು ಹೋಗುತ್ತಾರೆ. ಅದೇ ರೀತಿ ನಿನ್ನೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಐಪಿಎಲ್ ಪಂದ್ಯ ನೋಡಲು ಪೃಥ್ವಿ ಭಟ್ ತಮ್ಮ ಪತಿ ಜೊತೆಗೆ ಚಿನ್ನಸ್ವಾಮಿ ಮೈದಾನಕ್ಕೆ ಹೋಗಿದ್ದರು. ಈ ವೇಳೆ ವಿರಾಟ್ ಕೊಹ್ಲಿ ಪಂದ್ಯಕ್ಕೆ ಮುನ್ನ ಬೌಂಡರಿ ಗೆರೆ ಬಳಿ ನಿಂತು ಬ್ಯಾಟಿಂಗ್ ಪ್ರಾಕ್ಟೀಸ್ ಮಾಡುತ್ತಿದ್ದರು.
ಬೆಂಗಳೂರು: ಮನೆ ಕೆಲಸದಾಕೆಗೆ ಬೇಸಿಗೆಯ ಬೇಗೆ ತಡೆಯಲು ಒಡತಿ ಕೂಲರ್ ಖರೀದಿಸಿ ಕೊಟ್ಟು ಸರ್ಪೈಸ್ ಕೊಟ್ಟ ಗಳಿಗೆಯ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದು ನಡೆದಿರುವುದು ನಮ್ಮ ಬೆಂಗಳೂರಿನಲ್ಲೇ. ಕಳೆದ ಕೆಲವು ದಿನಗಳಿಂದ ರಾಜ್ಯದ ಎಲ್ಲಾ ಭಾಗಗಳಲ್ಲೂ ತಡೆಯಲಾಗದಷ್ಟು ಉರಿಬಿಸಿಲು, ಸೆಖೆ. ಮನೆ ಒಳಗೆ ಸದಾ ಕೂಲರ್, ಫ್ಯಾನ್ ಆನ್ ಆಗಿರಲೇಬೇಕು ಎನ್ನುವ ಪರಿಸ್ಥಿತಿ. ಆದರೆ ಬಡವರಿಗೆ ಕೂಲರ್ ಎನ್ನುವುದೆಲ್ಲಾ ಕೈಗುಟುಕದ ವಸ್ತು. ಆದರೆ ಇಲ್ಲೊಬ್ಬ ಮನೆ ಒಡತಿ ತನ್ನ ಕೆಲಸದಾಕೆಗೆ ಕೂಲರ್ ತೆಗೆದುಕೊಟ್ಟು ಹೃದಯವಂತಿಕೆ ಮೆರೆದಿದ್ದಾರೆ.
ಬೆಂಗಳೂರು: ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ ಎಂದು ಕೋರ್ಟ್ ನಿನ್ನೆ ತೀರ್ಪಿತ್ತಿದೆ. ಆದರೆ ಶಾಸಕರ ಶಿಕ್ಷೆ ಪ್ರಮಾಣ ಇಂದು ಪ್ರಕಟವಾಗಲಿದ್ದು ಅವರ ಮುಂದಿನ ನಡೆಯೇನು ಎಂಬ ಬಗ್ಗೆ ಇಲ್ಲಿದೆ ವಿಸ್ತೃತ ಮಾಹಿತಿ. ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ಈಗ ಅಪರಾಧಿ. ಜನಪ್ರತಿನಿಧಿಗಳ ಕೋರ್ಟ್ ಇಂದು ಶಿಕ್ಷೆಯ ಪ್ರಮಾಣ ಪ್ರಕಟ ಮಾಡುವ ಮುನ್ನ ವಾದ ವಿವಾದ ಆಲಿಸಿ ತೀರ್ಪು ಪ್ರಕಟಿಸಲಿದೆ. ಅವರು ಅಪರಾಧಿ ಎಂದು ಘೋಷಣೆಯಾಗುತ್ತಿದ್ದಂತೇ ಸಿಬಿಐ ಅಧಿಕಾರಿಗಳು ಕೋರ್ಟ್ ನಲ್ಲೇ ಶಾಸಕರನ್ನು ವಶಕ್ಕೆ ಪಡೆದು ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ದಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಈ ವಾರವಂತೂ ತಾಪಮಾನದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿದೆ. ಇಂದು ರಾಜ್ಯದ ಈ ಕೆಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ದಾಖಲೆಯ ಮಟ್ಟಕ್ಕೆ ಏರಿಕೆಯಾಗಲಿದೆ. ಹವಾಮಾನ ತಜ್ಞರ ಪ್ರಕಾರ ಈ ತಿಂಗಳಲ್ಲೇ ದೇಶದ ನಾನಾ ಭಾಗಗಳಲ್ಲಿ ದಾಖಲೆಯ ಮಟ್ಟಕ್ಕೆ ತಾಪಮಾನ ಏರಿಕೆಯಾಗಲಿದೆ. ಅದರ ಮುನ್ಸೂಚನೆ ಎಂಬಂತೆ ಈ ವಾರವೇ ದಿನದಿಂದ ದಿನಕ್ಕೆ ತಾಪಮಾನದಲ್ಲಿ ಏರಿಕೆ ಕಂಡುಬರುತ್ತಲೇ ಇದೆ. ನಿನ್ನೆಯಂತೇ ಇಂದೂ ವಿಪರೀತ ಬಿಸಿಲು ಕಂಡುಬರಲಿದೆ. ಇಂದು ರಾಯಚೂರು, ವಿಜಯಪುರ, ಕಲಬುರಗಿ ಜಿಲ್ಲೆಗಳಲ್ಲಿ ಇಂದು ಗರಿಷ್ಠ ತಾಪಮಾನ 41 ಡಿಗ್ರಿಗೆ ಏರಿಕೆಯಾಗಲಿದೆ.
ಇಂದು ಗುರುವಾರವಾಗಿದ್ದು ಮಹಾವಿಷ್ಣುವಿಗೆ ವಿಶೇಷವಾದ ದಿನವಾಗಿದೆ. ಇಂದು ಮಹಾವಿಷ್ಣುವಿನ ಅವತಾರವಾದ ವೆಂಕಟೇಶ್ವರ ಸ್ವಾಮಿಯ ಕುರಿತಾದ ವೆಂಕಟೇಶ್ವರ ಮಂಗಳಾಷ್ಟಕಂ ಸ್ತೋತ್ರವನ್ನು ತಪ್ಪದೇ ಓದಿ.ಶ್ರೀಕ್ಷೋಣ್ಯೌ ರಮಣೀಯುಗಂ ಸುರಮಣೀಪುತ್ರೋಽಪಿ ವಾಣೀಪತಿಃಪೌತ್ರಶ್ಚಂದ್ರಶಿರೋಮಣಿಃ ಫಣಿಪತಿಃ ಶಯ್ಯಾ ಸುರಾಃ ಸೇವಕಾಃ ।ತಾರ್ಕ್ಷ್ಯೋ ಯಸ್ಯ ರಥೋ ಮಹಶ್ಚ ಭವನಂ ಬ್ರಹ್ಮಾಂಡಮಾದ್ಯಃ ಪುಮಾನ್ಶ್ರೀಮದ್ವೇಂಕಟಭೂಧರೇಂದ್ರರಮಣಃ ಕುರ್ಯಾದ್ಧರಿರ್ಮಂಗಳಮ್ ॥ 1 ॥ ಯತ್ತೇಜೋ ರವಿಕೋಟಿಕೋಟಿಕಿರಣಾನ್ ಧಿಕ್ಕೃತ್ಯ ಜೇಜೀಯತೇಯಸ್ಯ ಶ್ರೀವದನಾಂಬುಜಸ್ಯ ಸುಷಮಾ ರಾಕೇಂದುಕೋಟೀರಪಿ ।ಸೌಂದರ್ಯಂ ಚ ಮನೋಭವಾನಪಿ ಬಹೂನ್ ಕಾಂತಿಶ್ಚ ಕಾದಂಬಿನೀಂಶ್ರೀಮದ್ವೇಂಕಟಭೂಧರೇಂದ್ರರಮಣಃ ಕುರ್ಯಾದ್ಧರಿರ್ಮಂಗಳಮ್ ॥ 2 ॥
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹ್ಯಾಟ್ರಿಕ್ ಗೆಲುವು ದಾಖಲಿಸಿದೆ. ಅಲ್ಲದೆ, ಅಂಕಪಟ್ಟಿಯಲ್ಲೂ ಅಗ್ರಸ್ಥಾನಕ್ಕೆ ಬಡ್ತಿ ಪಡೆದಿದೆ.ಐಪಿಎಲ್ನ 23ನೇ ಪಂದ್ಯದಲ್ಲಿ 5 ವಿಕೆಟ್ಗಳಿಂದ ಲಕ್ನೋ ಸೂಪರ್ ಜೈಂಟ್ಸ್ (ಎಲ್ಎಸ್ಜಿ) ತಂಡವನ್ನು ಮಣಿಸಿ ತವರಿನಲ್ಲಿ ಹ್ಯಾಟ್ರಿಕ್ ಗೆಲುವಿನ ನಗೆ ಬೀರಿದೆ. ಇದಕ್ಕೂ ಮೊದಲು ಬೆಂಗಳೂರಿನ ಎಂ ಚಿನ್ನಸ್ವಾಮಿ ಮೈದಾನದಲ್ಲಿ ಆರ್ಸಿಬಿ, ಸನ್ರೈಸರ್ಸ್ ಹೈದರಾಬಾದ್, ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮಣಿಸಿತ್ತು. ಈಗ ಎಲ್ಎಸ್ಜಿ ತಂಡವನ್ನು ಮಣಿಸಿ ಅಬ್ಬರಿಸಿದೆ. ಎಲ್ಎಸ್ಜಿ ನೀಡಿದ್ದ 146 ರನ್ಗಳ ಗುರಿಯನ್ನು ಹಿಂಬಾಲಿಸಿದ ಆರ್ಸಿಬಿ ತಂಡದ ಆರಂಭ ಕಳಪೆಯಾಗಿತ್ತು. ಆರಂಭಿಕರಾದ ಫಿಲ್ ಸಾಲ್ಟ್ (7) ರನ್ ಕಲೆ ಹಾಕುವಲ್ಲಿ ವಿಫಲರಾದರು.
ಬೆಂಗಳೂರು: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಇಂದಿನ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ವಿರಾಟ್ ಕೊಹ್ಲಿ ಹೊಸ ಪಾತ್ರ ನಿರ್ವಹಿಸಲಿದ್ದಾರೆ. ಕಳೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅರ್ಧಶತಕ ಸಿಡಿಸಿದ್ದರೂ ನಿಧಾನಗತಿಯ ಇನಿಂಗ್ಸ್ ಆಡಿದ್ದರು ಎಂದು ಟೀಕೆಗೊಳಗಾಗಿದ್ದರು. ಆದರೆ ಕಳೆದ ಪಂದ್ಯದಲ್ಲಿ ಅವರು ಗಾಯಗೊಂಡಿದ್ದರು. ಹೀಗಾಗಿ ಫೀಲ್ಡಿಂಗ್ ಮಾಡಲು ಮೈದಾನಕ್ಕಿಳಿದಿರಲಿಲ್ಲ. ಈ ಪಂದ್ಯದಲ್ಲಿ ಅವರು ಆಡುತ್ತಾರೋ ಇಲ್ಲವೋ ಎಂಬ ಅನುಮಾನ ಅಭಿಮಾನಿಗಳಿಗಿತ್ತು. ಆದರೆ ಇಂದು ವಿರಾಟ್ ಕೊಹ್ಲಿ ಆರ್ ಸಿಬಿ ಪರ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿಯುತ್ತಿದ್ದಾರೆ.
ಮಂಡ್ಯ: ಜಲ ಸಂರಕ್ಷಣೆ, ನೈಸರ್ಗಿಕ ಕೃಷಿ, ಫಿಟ್ನೆಸ್ ಮತ್ತು ಸೇವೆ ಸೇರಿದಂತೆ ಒಂಬತ್ತು ಸಾಮೂಹಿಕ ಪ್ರತಿಜ್ಞೆಗಳನ್ನು ಕೈಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಜನರಿಗೆ ಮನವಿ ಮಾಡಿದರು.ಮಂಡ್ಯದ ಆದಿಚುಂಚನಗಿರಿ ಮಹಾಸಂಸ್ಥಾನದಲ್ಲಿಅವರು ಮಾತನಾಡಿದರು. ನೀರಿನ ಸಂರಕ್ಷಣೆ ಮತ್ತು ನೀರಿನ ಉತ್ತಮ ನಿರ್ವಹಣೆ, ತಾಯಿಯ ಹೆಸರಿನಲ್ಲಿ ಒಂದು ಸಸಿ ಮರ ನೆಡುವುದು, ಸಾರ್ವಜನಿಕ ಮತ್ತು ಧಾರ್ಮಿಕ ಸ್ಥಳಗಳಲ್ಲಿ ಸ್ವಚ್ಛತೆ, ಸ್ಥಳೀಯ ಉತ್ಪನ್ನಗಳನ್ನು ಬಲಪಡಿಸುವುದು, ದೇಶೀಯ ಪ್ರವಾಸೋದ್ಯಮವನ್ನು ಉತ್ತೇಜಿಸುವುದು, ರಾಸಾಯನಿಕಮುಕ್ತ ನೈಸರ್ಗಿಕ ಕೃಷಿಯನ್ನು ಅಳವಡಿಸಿಕೊಳ್ಳುವುದು, ರಾಗಿಯೊಂದಿಗೆ ಆರೋಗ್ಯಕರ ಆಹಾರವನ್ನು ಪ್ರೋತ್ಸಾಹಿಸುವುದು ಮತ್ತು ತೈಲ ಬಳಕೆಯನ್ನು ಕಡಿಮೆ ಮಾಡುವುದು ನಿಮ್ಮ ಆದ್ಯತೆಯಾಗಲಿ ಎಂದು ಕರೆ ನೀಡಿದರು.
ನವದೆಹಲಿ: ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಾಮ್ರಾಟ್ ಚೌಧರಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದ್ದಾರೆ.ಚೌಧರಿ ಅವರ ಶ್ರೇಷ್ಠತೆ, ಉತ್ಸಾಹ ಮತ್ತು ಅನುಭವವು ರಾಜ್ಯಕ್ಕೆ ಪ್ರಯೋಜನವನ್ನು ನೀಡುತ್ತದೆ ಮತ್ತು ಅಭಿವೃದ್ಧಿಯತ್ತ ಕೊಂಡೊಯ್ಯುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಸಂಬಂಧ ಅವರು ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ. ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಾಮ್ರಾಟ್ ಚೌಧರಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು
ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿಯ ಗೆಲುವಿನ ಬಗ್ಗೆ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಬುಧವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಜನರು ರಾಜ್ಯ ಸರ್ಕಾರವನ್ನು ಬದಲಾಯಿಸಲು ಅವರು ಬಹಿರಂಗವಾಗಿ ಒತ್ತಾಯಿಸುತ್ತಿದ್ದಾರೆ.ಎಎನ್ಐ ಜೊತೆ ಮಾತನಾಡಿದ ನಿರ್ಮಲಾ ಸೀತಾರಾಮನ್, ಪಶ್ಚಿಮ ಬಂಗಾಳದಲ್ಲಿ ಜನರು ಉತ್ತಮ ಸ್ಥಿತಿಯಲ್ಲಿಲ್ಲ ಮತ್ತು ಉತ್ತಮ ಆಡಳಿತವನ್ನು ಬಯಸುತ್ತಿದ್ದಾರೆ ಎಂದು ಹೇಳಿದರು.
ಗೆಳತಿಯ ಲವ್ಬೈಟ್ಗೆ ಯುವಕನೊಬ್ಬ ಸಾವನ್ನಪ್ಪಿದ ಆಘಾತಕಾರಿ ಘಟನೆ ಮೆಕ್ಸಿಕೋ ನಗರದಲ್ಲಿ ವರದಿಯಾಗಿದೆ. ಲವ್ಬೈಟ್ನಿಂದಾಗಿ ಮೆದುಳಿಗೆ ಚಲಿಸುವ ನರದಲ್ಲಿ ರಕ್ತ ಹೆಪ್ಪುಗಟ್ಟಿದೆ. ಇದರಿಂದ ಯುವಕ ಪಾರ್ಶ್ವವಾಯುವಿಗೆ ಒಳಗಾಗಿದ್ದಾರೆ. ಮೆಕ್ಸಿಕೋ ಸಿಟಿಯಿಂದ ವರದಿಯಾದ ಆಘಾತಕಾರಿ ಘಟನೆ ಇಡೀ ವಿಶ್ವವೇ ಬೆಚ್ಚಿಬಿದ್ದಿದೆ. ಪಾರ್ಶ್ವವಾಯುವಿಗೆ ಒಳಗಾದ ಯುವಕ "ಪ್ರೀತಿ ಕಡಿತ" ಪಡೆದ ನಂತರ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ, ಇದು ಮಾರಣಾಂತಿಕ ಪಾರ್ಶ್ವವಾಯುವಿಗೆ ಕಾರಣವಾಯಿತು.
ನವದೆಹಲಿ: ಹರಿಯಾಣದ ಶಿಕೋಹ್ಪುರದಲ್ಲಿನ ವಿವಾದಾತ್ಮಕ ಭೂ ವ್ಯವಹಾರಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿರುವ ಆರೋಪಪಟ್ಟಿಯನ್ನು ದೆಹಲಿ ನ್ಯಾಯಾಲಯವು ಬುಧವಾರ ವಿಚಾರಣೆಗೆ ತೆಗೆದುಕೊಂಡಿದೆ. ವಿಶೇಷ ನ್ಯಾಯಾಧೀಶ ಸುಶಾಂತ್ ಚಂಗೋತ್ರಾ ಅವರು ವಾದ್ರಾ ಮತ್ತು ಇತರ ಆರೋಪಿಗಳನ್ನು ಮೇ 16 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಆದೇಶಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ವಿವರವಾದ ಆದೇಶಕ್ಕಾಗಿ ಕಾಯಲಾಗುತ್ತಿದೆ.
ಮಂಗಳೂರು: ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದಾಗ ವಿದ್ಯುತ್ ಸ್ಪರ್ಶದಿಂದ 15 ವರ್ಷದ ಬಾಲಕ ಮೃತಪಟ್ಟ ಘಟನೆ ಮಹಾಕಾಳಿಪಡ್ಪು ಬಳಿ ನಡೆದಿದೆ. ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಮೃತ ವರುಣ್ (15) ಮಹಾಕಾಳಿಪಡ್ಪು ನಿರ್ಮಲನಗರ ನಿವಾಸಿ ಕಣ್ಣನಗೌಡ ಎಂಬುವರ ಪುತ್ರ. ಈ ಕುಟುಂಬ ಮೂಲತಃ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಬನ್ನಿಹಟ್ಟಿ ಗ್ರಾಮದವರಾಗಿದ್ದು, ಕಳೆದ 25 ವರ್ಷಗಳಿಂದ ಮಂಗಳೂರಿನಲ್ಲಿ ನೆಲೆಸಿದೆ.ಮೂಲಗಳ ಪ್ರಕಾರ, ವರುಣ್ ತನ್ನ ಸ್ನೇಹಿತರೊಂದಿಗೆ ಮಹಾಕಾಳಿಪಡ್ಪು ಅಂಡರ್ಪಾಸ್ ಬಳಿ ಇರುವ ಭಜನಾ ಮಂದಿರದ ಬಳಿ
ಮೈಸೂರು: ಸಿದ್ದರಾಮಯ್ಯನವರೇ ಮುಂದಿನ ಐದು ವರ್ಷ ಸಿಎಂ ಆಗಲಿದ್ದಾರೆ ಎಂದು ಪುತ್ರ, ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.ಇಲ್ಲಿ ಬುಧವಾರ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ಈ ವಿಚಾರವನ್ನು ಖುದ್ದು ಮುಖ್ಯಮಂತ್ರಿಯವರೇ ವಿಧಾನಮಂಡಲ ಅಧಿವೇಶನದಲ್ಲಿ ಸ್ಪಷ್ಟಪಡಿಸಿದ್ದಾರೆ. ಅವರೇ ಹೇಳಿರುವುದರಿಂದ ಬೇರೆ ಚರ್ಚೆಯೇ ಇಲ್ಲ ಎಂದರು.ಸಚಿವ ಸಂಪುಟ ಪುನರ್ರಚನೆ ಮಾಡುವಂತೆ ಕೇಳಲೆಂದು ಶಾಸಕರು ನವದೆಹಲಿಗೆ ಹೋಗಿದ್ದಾರೆ. ಇನ್ನೂ ಶಾಸಕರು ಅಲ್ಲಿಗೆ
ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಅವರು ಆದಿಚುಂಚನಗಿರಿ ಮಠದಲ್ಲಿ ಶ್ರೀಗುರು ಭೈರವೈಕ್ಯ ಮಂದಿರ ಉದ್ಘಾಟಿಸಿದರು. ಬಳಿಕ ಕರ್ನಾಟಕದ ಎಲ್ಲಾ ಸಹೋದರ, ಸಹೋದರಿಯರಿಗೆ ನನ್ನ ನಮಸ್ಕಾರಗಳು ಎಂದು ಕನ್ನಡದಲ್ಲೇ ಮಾತು ಆರಂಭಿಸಿ ಕನ್ನಡಿಗರ ಮನಗೆದ್ದರು. ಆದಿಚುಂಚನಗಿರಿ ಮಠ ಆಧ್ಯಾತ್ಮಿಕ ಪರಂಪರೆ ಹೊಂದಿದೆ. ಮಠವು ನೈತಿಕ ಮೌಲ್ಯಗಳಿಂದ ದಾರಿದೀಪವಾಗಿದೆ. ಕಾಲಭೈರನ ದರ್ಶನ ಪಡೆದುಕೊಂಡಿದ್ದೇನೆ. ಭೈರವೈಕ್ಯ ಮಂದಿರವನ್ನು ಉದ್ಘಾಟಿಸಿದ್ದೇನೆ. ನಿಮ್ಮೆಲ್ಲರ ದರ್ಶನ ಪಡೆದುಕೊಂಡಿದ್ದೇನೆ. ಶಬ್ದದಲ್ಲಿ ಈ ಭಾವವನ್ನು ಹೇಳಲು ಸಾಧ್ಯವಿಲ್ಲ. ಪ್ರತಿ ಸಲ ಕರ್ನಾಟಕಕ್ಕೆ ಬಂದಾಗ ಪ್ರೇರಣೆ ಸಿಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದರು.ಆದಿಚುಂಚನಗಿರಿ ಮಠದಂತಹ ಆಧ್ಯಾತ್ಮಿಕ ಕೇಂದ್ರ ಈ ರಾಜ್ಯದಲ್ಲಿದೆ. ಇವೆಲ್ಲವೂ ಸಮಾಜಕ್ಕೆ ದಾರಿಯನ್ನು ತೋರಿಸುತ್ತಿದೆ. ಜಗತ್ತಿನಲ್ಲಿ ಎಲ್ಲೂ ನಮ್ಮ ತರಹದ ದೊಡ್ಡ ಪರಂಪರೆ ಇಲ್ಲ
ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣದಲ್ಲಿ ಬಂದಿಳಿದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರೀತಿಯಿಂದ ಸ್ವಾಗತಿಸಿದರು. ಪ್ರಧಾನಿ ಮೋದಿ ಅವರು ಮಂಡ್ಯದ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಲಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಮಾನ ನಿಲ್ದಾಣದಲ್ಲಿ ರಾಜ್ಯದ ಸಮಸ್ಯೆಗಳು ಹಾಗೂ ಅಭಿವೃದ್ಧಿ ಯೋಜನೆಗಳ ಕುರಿತಾದ 18 ಪ್ರಮುಖ ಬೇಡಿಕೆಗಳ 5 ಪುಟಗಳ ಮನವಿ ಪತ್ರವನ್ನು ಪ್ರಧಾನ ಮಂತ್ರಿಯವರಿಗೆ ಸಿಎಂ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಐದು ಪುಟಗಳ ವಿವರವಾದ ಮನವಿಯನ್ನು ಸಲ್ಲಿಸಿ, ಪ್ರಮುಖ ಅಭಿವೃದ್ಧಿ ವಿಷಯಗಳಲ್ಲಿ ಕೇಂದ್ರ ಸರ್ಕಾರದ ತುರ್ತು ಹಸ್ತಕ್ಷೇಪವನ್ನು ಕೋರಿದರು.
ಬೆಂಗಳೂರು: ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇಂದು ಐಪಿಎಲ್ನ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯಕ್ಕೆ ವಿರಾಟ್ ಕೊಹ್ಲಿ ಲಭ್ಯವಿದ್ದರಾ ಎಂಬ ಅನುಮಾನ ಹೆಚ್ಚಿದೆ.ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಗಾಯಗೊಂಡಿದ್ದ ವಿರಾಟ್ ಕೊಹ್ಲಿ ಬ್ಯಾಟಿಂಗ್ ಬಳಿಕ ವಿಶ್ರಾಂತಿ ಮೊರೆ ಹೋಗಿದ್ದರು. ಹೀಗಾಗಿ, ಲಖನೌ ಸೂಪರ್ ಜೈಂಟ್ಸ್ ವಿರುದ್ಧದ ಇಂದಿನ ಪಂದ್ಯಕ್ಕೆ ಅಲಭ್ಯರಾಗುವ ಸಾಧ್ಯತೆಯಿದೆ. ಅಭ್ಯಾಸದ ವೇಳೆ ಕಾಲಿಗೆ ಪಟ್ಟಿ ಕಟ್ಟಿಕೊಂಡು ಕಾಣಿಸಿಕೊಂಡಿದ್ದು, ಅವರು ಸಂಪೂರ್ಣ ಫಿಟ್ ಆಗದಿದ್ದರೆ ತಂಡದಿಂದ ಹೊರಗುಳಿಯುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಇದೀಗ ವಿರಾಟ್ ಕೊಹ್ಲಿಯ ಗಾಯದ ಸಮಸ್ಯೆಯೇ ಹಾಲಿ ಚಾಂಪಿಯನ್ ಆರ್ಸಿಬಿ ತಂಡಕ್ಕೆ ದೊಡ್ಡ ಹಿನ್ನಡೆಯಾಗಿ ಪರಿಣಮಿಸುವ ಸಾಧ್ಯತೆಯಿದೆ.
ವಿಶ್ವದ ಅತ್ಯಂತ ಹಿರಿಯ 69 ವರ್ಷದ ಗೊರಿಲ್ಲಾಗೆ ಅದ್ಧೂರಿಯಾಗಿ ಬರ್ತಡೇ ಆಚರಿಸಲಾಗಿದೆ. ಬರ್ಲಿನ್ ಮೃಗಾಲಯದಲ್ಲಿರುವ ಗೊರಿಲ್ಲಾಗೆ ಚೆರ್ರಿ ಟೊಮ್ಯಾಟೊ, ಸೇರಿದಂತೆ ಹಣ್ಣು, ತರಕಾರಿಗಳನ್ನು ಬಡಿಸಿ 69ನೇ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಆದರೆ ಹುಟ್ಟುಹಬ್ಬದ ಕೇಕ್ ಇಲ್ಲ, ಏಕೆಂದರೆ ವಯಸ್ಸಾದ ಪ್ರೈಮೇಟ್ಗೆ ಸಕ್ಕರೆ ಆರೋಗ್ಯಕರವಲ್ಲ.ಫಾಟೌ ಎಂಬ ಹೆಸರಿನ ಗೊರಿಲ್ಲವನ್ನು ಪಾಶ್ಚಿಮಾತ್ಯ ತಗ್ಗು ಪ್ರದೇಶದಿಂದ 1959 ರಲ್ಲಿ ಆಗಿನ ಪಶ್ಚಿಮ ಬರ್ಲಿನ್ಗೆ ಆಗಮಿಸಿತು. ಆ ಸಮಯದಲ್ಲಿ ಆಕೆಗೆ ಸುಮಾರು 2 ವರ್ಷ ವಯಸ್ಸಾಗಿತ್ತು ಎಂದು ನಂಬಲಾಗಿತ್ತು, ಆದರೂ ಆಕೆಯ ನಿಖರವಾದ ಜನ್ಮ ದಿನಾಂಕ
ಫತೇಘರ್ ಸಾಹಿಬ್: ಮಂಗಳವಾರ ತಡರಾತ್ರಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ 22ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಫತೇಘರ್ ಸಾಹಿಬ್ ಜಿಲ್ಲೆಯ ಬಸ್ಸಿ ಪಠಾನಾ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚಾಲಕ ಸೇರಿದಂತೆ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಬಲಿಪಶುಗಳು ಮುಖ್ಯ ಮಜ್ರಾ ಗ್ರಾಮದ ನಿವಾಸಿಗಳಾಗಿದ್ದು, ಶ್ರೀ ಆನಂದಪುರ ಸಾಹಿಬ್ನಲ್ಲಿ ಬೈಸಾಖಿ ಆಚರಣೆಯಿಂದ ಹಿಂದಿರುಗುತ್ತಿದ್ದಾಗ ಅವರ ಗಮ್ಯಸ್ಥಾನದಿಂದ ಕೆಲವೇ ಕಿಲೋಮೀಟರ್ ದೂರದಲ್ಲಿರುವ ಮೊರಿಂಡಾ-ಚುನ್ನಿ ರಸ್ತೆಯ ಹಿಮ್ಮತ್ಪುರ ಗ್ರಾಮದ ಬಳಿ ಅಪಘಾತ ಸಂಭವಿಸಿದೆ.
ಮುಂಬೈ: ತೀವ್ರವಾದ ಶಾಖದ ಸಮಯದಲ್ಲಿ ಪ್ರಯಾಣಿಕರಿಗೆ ಪರಿಹಾರವನ್ನು ಒದಗಿಸಲು ಮತ್ತು ಸುರಕ್ಷತೆಯನ್ನು ಸುಧಾರಿಸಲು ಮುಂಬೈ ಭಾರತದ ಮೊದಲ ಮುಚ್ಚಿದ ಬಾಗಿಲು, ನಾನ್-ಎಸಿ ಸ್ಥಳೀಯ ರೈಲನ್ನು ಪರಿಚಯಿಸಲು ಸಿದ್ಧವಾಗಿದೆ.ಈ ರೈಲನ್ನು ಸ್ವಯಂಚಾಲಿತ ಬಾಗಿಲು ಮುಚ್ಚುವ ಕಾರ್ಯವಿಧಾನದೊಂದಿಗೆ ವಿನ್ಯಾಸಗೊಳಿಸಲಾಗಿದೆ, ಇದು ಹಿಂದೆ ದುಬಾರಿ ಹವಾನಿಯಂತ್ರಿತ ಸ್ಥಳೀಯ ರೈಲುಗಳಿಗೆ ವಿಶೇಷವಾದ ವೈಶಿಷ್ಟ್ಯವಾಗಿದೆ.ಬಲವಂತದ ವಾತಾಯನ ಘಟಕಗಳನ್ನು ಪ್ರಮಾಣಿತ ಸ್ಥಳೀಯ ರೈಲುಗಳಿಗಿಂತ ಹೆಚ್ಚಿನ ಗಾಳಿ-ಬದಲಾವಣೆ ದರವನ್ನು ಒದಗಿಸಲು
ನವದೆಹಲಿ: ಬಿಹಾರದ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ್ದು, ಭಾರತೀಯ ಜನತಾ ಪಕ್ಷದಿಂದ ರಾಜ್ಯದಲ್ಲಿ ಉನ್ನತ ಹುದ್ದೆಯನ್ನು ಅಲಂಕರಿಸಿದ ಮೊದಲ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ರಾಜ್ಯಸಭೆಗೆ ನಾಮನಿರ್ದೇಶನಗೊಂಡ ನಂತರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ಅವರ ರಾಜೀನಾಮೆ ನೀಡಿದ್ದರು. 57 ವರ್ಷದ ಸಾಮ್ರಾಟ್ ಚೌಧರಿ ಅವರು ಮಂಗಳವಾರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದು, ಅವರ ನೇಮಕಕ್ಕೆ ದಾರಿ ಮಾಡಿಕೊಟ್ಟಿದ್ದಾರೆ. "ಎನ್ಡಿಎ ಶಾಸಕಾಂಗ ಪಕ್ಷದ ಸಭೆ ಶೀಘ್ರದಲ್ಲೇ ನಡೆಯಲಿದೆ. ಈ ಸಭೆಯಲ್ಲಿ ಸಾಮ್ರಾಟ್
ಚೆನ್ನೈ: 2026ರ ಐಪಿಎಲ್ ಆವೃತ್ತಿಯಲ್ಲಿ ಮೂರು ಬಾರಿಯ ಚಾಂಪಿಯನ್ ಕೋಲ್ಕತ್ತ ನೈಟ್ ರೈಡರ್ಸ್ ತಂಡವು ಇನ್ನೂ ಗೆಲುವಿನ ಖಾತೆಯನ್ನು ತೆರೆದಿಲ್ಲ. ಈ ಮಧ್ಯೆ ತಂಡದ ನಾಯಕ ಅಜಿಂಕ್ಯ ರಹಾನೆಗೆ ಮತ್ತೊಂದು ಶಾಕ್ ಎದುರಾಗಿದೆ. ಮಂಗಳವಾರ ಚೆಪಾಕ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಅಗತ್ಯವಾದ ಓವರ್ ರೇಟ್ ಕಾಯ್ದುಕೊಳ್ಳಲು ವಿಫಲವಾಗಿದೆ. ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.22ರ ಅಡಿಯಲ್ಲಿ ಕನಿಷ್ಠ ಓವರ್ ರೇಟ್ಗೆ ಸಂಬಂಧಿಸಿದ್ದು, ಮೊದಲ ಬಾರಿ ಉಲ್ಲಂಘಿಸಿದ್ದಕ್ಕಾಗಿ 12 ಲಕ್ಷ ರೂ. ದಂಡ ವಿಧಿಸಲಾಗಿದೆ ಎಂದು ಬಿಸಿಸಿಐ ತಿಳಿಸಿದೆ.ಈ ಆವೃತ್ತಿಯಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಈವರೆಗೂ 5 ಪಂದ್ಯಗಳನ್ನಾಡಿದ್ದು, ಒಂದು ಪಂದ್ಯದಲ್ಲಿಯೂ ಗೆಲುವು ಸಾಧಿಸಿಲ್ಲ. ಶುಕ್ರವಾರ ಗುಜರಾತ್ ಟೈಟನ್ಸ್ ಜೊತೆ ಕೆಕೆಆರ್ ತನ್ನ 6ನೇ ಪಂದ್ಯವನ್ನು ಆಡಲಿದೆ.
ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಹೆಚ್ಚಿನ ಪ್ರಮಾಣದಲ್ಲಿ ಒಣ ಹವಾಮಾನ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ, ಆದರೆ ಹಲವಾರು ಜಿಲ್ಲೆಗಳಲ್ಲಿ ತಾಪಮಾನ ಏರಿಕೆ ಮತ್ತು ಸಂಭವನೀಯ ಶಾಖದ ಅಲೆಯ ಪರಿಸ್ಥಿತಿಗಳ ಬಗ್ಗೆ ಎಚ್ಚರಿಕೆ ನೀಡಲಾಗಿದೆ.ಹವಾಮಾನ ಇಲಾಖೆಯ ಪ್ರಕಾರ, ಕರಾವಳಿ ಪ್ರದೇಶಗಳಲ್ಲಿ ಇಂದು ತಾಪಮಾನದಲ್ಲಿ ಗಮನಾರ್ಹ ಏರಿಕೆಯಾಗುವ ಸಾಧ್ಯತೆಯಿದೆ, ಇದು ಶಾಖದ ಅಲೆಯ ಎಚ್ಚರಿಕೆಯನ್ನು ಪ್ರೇರೇಪಿಸುತ್ತದೆ. ಅದೇ ಸಮಯದಲ್ಲಿ, ಕರ್ನಾಟಕದ ಉತ್ತರ ಮತ್ತು ದಕ್ಷಿಣ ಒಳಭಾಗದ ಕೆಲವು ಭಾಗಗಳು ಶುಷ್ಕ ಪರಿಸ್ಥಿತಿಗಳಿಗೆ ಸಾಕ್ಷಿಯಾಗಬಹುದು, ಪ್ರತ್ಯೇಕ ಪ್ರದೇಶಗಳಲ್ಲಿ ಸ್ವಲ್ಪ ಮಳೆಯಾಗುವ ನಿರೀಕ್ಷೆಯಿದೆ.
ನ್ಯೂಯಾರ್ಕ್: ಕದನ ವಿರಾಮಕ್ಕೆ ಸಂಬಂಧಿಸಿದಂತೆ ಇನ್ನೆರಡು ದಿನಗಳಲ್ಲಿ ಇರಾನ್ ಜೊತೆ ಮಾತುಕತೆ ನಡೆಸುವುದಾಗಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಈ ಮಾತುಕತೆಯೂ ಪಾಕಿಸ್ತಾನದಲ್ಲಿ ನಡೆಯಲಿದೆ. ಎರಡನೇ ಹಂತದ ಮಾತುಕತೆಗಳು ಬಹುಶಃ ಯುರೋಪ್ನ ಯಾವುದಾದರೂ ಭಾಗದಲ್ಲಿ ನಡೆಯಬಹುದು ಎಂದು ವರದಿಗಾರನಿಗೆ ಟ್ರಂಪ್ ಫೋನ್ ಕರೆಯಲ್ಲಿ ತಿಳಿಸಿದ್ದರು. ಅರ್ಧ ತಾಸು ಕಳೆದ ಬಳಿಕ ಮತ್ತೆ ಕರೆ ಮಾಡಿದ ಅವರು ಇಸ್ಲಾಮಾಬಾದ್ನಲ್ಲಿಯೇ ಉಳಿಯುವಂತೆ ವರದಿಗಾರನಿಗೆ ಸೂಚಿಸಿದ್ದಾರೆ.ಮುಂದಿನ ಎರಡು ದಿನಗಳಲ್ಲಿ ಅಲ್ಲಿ ಏನಾದರೂ ಸಂಭವಿಸಬಹುದು, ನಾವು ಅಲ್ಲಿಗೇ ಹೋಗಲು ಹೆಚ್ಚು ಒಲವು ಹೊಂದಿದ್ದೇವ ಎಂದು ಹೇಳಿದ್ದಾಗಿ ಪತ್ರಿಕೆ ವರದಿ ಮಾಡಿದೆ.
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಲ್ಕು ವರ್ಷಗಳ ಹಿಂದೆ ಸಂಭವಿಸಿದ ಸ್ಫೋಟ ಪ್ರಕರಣದ ಆರೋಪಿ ಮಹಮ್ಮದ್ ಶಾರಿಕ್ಗೆ ಶಿಕ್ಷೆಯ ಪ್ರಮಾಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ವಿಶೇಷ ನ್ಯಾಯಾಲಯವು ಏಪ್ರಿಲ್ 17 ರಂದು ಪ್ರಕಟಿಸಲಿದೆ.ಮೂರು ತಿಂಗಳ ಹಿಂದೆ ಮೊಹಮ್ಮದ್ ಶಾರಿಕ್ ಸಲ್ಲಿಸಿದ್ದ ತಪ್ಪೊಪ್ಪಿಗೆ ಅರ್ಜಿಯನ್ನು ನ್ಯಾಯಾಲಯ ಇತ್ತೀಚೆಗೆ ಸ್ವೀಕರಿಸಿದೆ. ಶುಕ್ರವಾರವೂ ಪ್ರಕರಣದ ಹೆಚ್ಚಿನ ವಿಚಾರಣೆ ನಡೆದಿದ್ದು, ಈ ಸಂದರ್ಭದಲ್ಲಿ ಆರೋಪಿಗೆ ವಿಧಿಸಲಾಗುವ ಶಿಕ್ಷೆಯನ್ನು ಏಪ್ರಿಲ್ 17 ರಂದು ಪ್ರಕಟಿಸುವುದಾಗಿ ನ್ಯಾಯಾಧೀಶರು ಸೂಚಿಸಿದ್ದಾರೆ.
ಮಂಡ್ಯ ಜಿಲ್ಲೆ: ಮಂಗಳವಾರ ಪಟ್ಟಣದಲ್ಲಿ ಮುತ್ತು ಮಾರಮ್ಮ ದೇವಿಯ ಕರಗದ ನಿಮಿತ್ತ ನಡೆದ ಕೊಂಡೋತ್ಸವದ ವೇಳೆ ದೇವರ ಗುಡ್ಡಪ್ಪ ಬೆಂಕಿ ಕೆಂಡದ ಮೇಲೆ ಬಿದ್ದು ಮೂವರು ಗಾಯಗೊಂಡಿದ್ದಾರೆ. ಇನ್ನೂ ಅವರನ್ನು ರಕ್ಷಿಸಲು ಮುಂದಾದ ಮೂವರು ಸಹೋದರಿ ಕೂಡ ಗಾಯಗೊಂಡರು.ಬೆಂಕಿಯ ಕೊಂಡ ಹಾಯಲು ಮುಂದಾದ ಮುತ್ತು ಮಾರಮ್ಮನ ಗುಡ್ಡಪ್ಪ ಬಿ. ಕುಮಾರ್ ಆಯತಪ್ಪಿ ಬಿದ್ದರು. ಕರಗ ಹೊತ್ತು ಏಳೆಂಟು ಹೆಜ್ಜೆ ಹಾಕಿದ್ದ ಬಿ. ಕುಮಾರ್ ಅವರ ಕಾಲಿಗೆ ಪಂಚೆ ಸಿಕ್ಕಿಕೊಂಡು ಮುಗ್ಗರಿಸಿ ಮಕಾಡೆ ಬಿದ್ದರು. ಮುತ್ತು ಮಾರಮ್ಮನ ಕರಗ ಅವರ ತಲೆಯ ಮೇಲಿಂದ ಕಳಚಿ ಕೆಂಡದ ಮೇಲೆ ಬಿತ್ತು.
ಬೆಂಗಳೂರು: ಬೆಳೆದು ನಿಂತ ಮಗಳನ್ನು ಕೊಂದು ತಾಯಿಯು ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆ ವೈಟ್ಫೀಲ್ಟ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ. 17 ವರ್ಷದ ಮಗಳನ್ನು ಕೊಂದು 40ವರ್ಷದ ತಾಯಿ ಕೂಡಾ ಆತ್ಮಹತ್ಯೆಗೆ ಶರಣಾಗಿದ್ದಾರೆ. 40 ವರ್ಷದ ಸುವರ್ಣ ಮಗಳನ್ನ ಕೊಲೆ ಮಾಡಿ ಆತ್ಮಹತ್ಯೆ ಶರಣಾಗಿರುವ ತಾಯಿ.
ಸಿಂಘಿತರಾಯ್ ಗ್ರಾಮದ ವೇದಾಂತ ಲಿಮಿಟೆಡ್ ಪವರ್ ಪ್ಲಾಂಟ್ನಲ್ಲಿ ಬಾಯ್ಲರ್ ಟ್ಯೂಬ್ನಲ್ಲಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದೆ ಎಂದು ಹೇಳಲಾಗಿದೆ. ಛತ್ತೀಸ್ಗಢದ ಸಕ್ತಿ ಜಿಲ್ಲೆಯಲ್ಲಿ ಮಂಗಳವಾರ ಮಧ್ಯಾಹ್ನ ವಿದ್ಯುತ್ ಸ್ಥಾವರದ ಬಾಯ್ಲರ್ ಘಟಕದಲ್ಲಿ ಸ್ಫೋಟ ಸಂಭವಿಸಿದ ನಂತರ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.ಸಿಂಘಿತರಾಯ್ ಗ್ರಾಮದ ವೇದಾಂತ ಲಿಮಿಟೆಡ್ ಪವರ್ ಪ್ಲಾಂಟ್ನಲ್ಲಿ ಬಾಯ್ಲರ್ ಟ್ಯೂಬ್ನಲ್ಲಿ ಮಧ್ಯಾಹ್ನ 2 ಗಂಟೆ ಸುಮಾರಿಗೆ
ಬೆಂಗಳೂರು: ಅಂಪೈರ್ಗಳ ನಿರ್ದೇಶನಕ್ಕೆ ಅಗೌರವ ತೋರಿದ ಕಾರಣ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಲ್ರೌಂಡರ್ ಟಿಮ್ ಡೇವಿಡ್ ಅವರಿಗೆ ಬಿಸಿಸಿಐ ಶಾಕ್ ನೀಡಿದೆ.ಮುಂಬೈ ಇಂಡಿಯನ್ಸ್ ವಿರುದ್ಧ ಐಪಿಎಲ್ ಪಂದ್ಯದ ವೇಳೆ ಅಂಪೈರ್ಗಳ ನಿರ್ದೇಶನಕ್ಕೆ ಅಗೌರವ ತೋರಿದ ಕಾರಣ ಟಿಮ್ ಡೇವಿಡ್ ಅವರಿಗೆ ಪಂದ್ಯ ಸಂಭಾವನೆಯ ಶೇ 25ರಷ್ಟು ದಂಡವನ್ನಾಗಿ ವಿಧಿಸಲಾಗಿದೆ. ಅವರ ಶಿಸ್ತಿನ ಖಾತೆಗೆ ಒಂದು ಡಿಮೆರಿಟ್ ಪಾಯಿಂಟ್ ಸಹ ಸೇರ್ಪಡೆಯಾಗಿದೆ.ಡೇವಿಡ್ ಅವರು ಐಪಿಎಲ್ ನೀತಿಸಂಹಿತೆಯ ವಿಧಿ 2.4 ಉಲ್ಲಂಘಿಸಿದ್ದಾರೆ ಎಂದು ಐಪಿಎಲ್ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಶಿವಮೊಗ್ಗ: ಇಲ್ಲಿನ ತ್ಯಾವರೆಕೊಪ್ಪ ಹುಲಿ ಸಿಂಹ ಧಾಮದಲ್ಲಿ ತರಬೇತಿ ನಿರತ ಪಶು ವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಅವರ ಸಾವಿಗೆ ಕಾರಣವಾಗಿದ್ದ ನೀರಾನೆ ಹಂಸಿಣಿ ಅನಾರೋಗ್ಯದಿಂದ ಇಂದು ಸಾವನ್ನಪ್ಪಿದೆ. ಎಂಟು ತಿಂಗಳ ಗರ್ಭಧಾರಣೆಯ ಅವಧಿಯು ಮಾರ್ಚ್ ಮಧ್ಯಭಾಗದಲ್ಲೇ ಪೂರ್ಣಗೊಂಡಿದ್ದರೂ, ಅದರಲ್ಲಿ ಪ್ರಸವದ ಯಾವುದೇ ಲಕ್ಷಣಗಳು ಕಂಡುಬಂದಿರಲಿಲ್ಲ. ಇನ್ನೂ ಭ್ರೂನ ಹೊಟ್ಟೆಯಲ್ಲಿಯೇ ಸಾವನ್ನಪ್ಪಿತ್ತು. ಇನ್ನೂ ಕಳೆದ ಕೆಲ ದಿನಗಳಿಂದ ಹಂಸಿಣಿ ಆಹಾರವನ್ನು ಕಡಿಮೆ ಸೇವನೆ ಮಾಡುತ್ತಿತ್ತು.
ಬೆಂಗಳೂರು: ಪಕ್ಷಕ್ಕೆ ಶಿಸ್ತು ತುಂಬಾನೇ ಮುಖ್ಯವಾಗಿದ್ದು, ಆದರೆ ಜಮೀರ್ ಅಹ್ಮದ್ ಮಾತ್ರ ಶಿಸ್ತನ್ನು ಪಾಲನೆ ಮಾಡಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅಸಮಾಧಾನ ಹೊರಹಾಕಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾವುದೇ ಪಕ್ಷಕ್ಕೂ ಶಿಸ್ತು ತುಂಬಾನೇ ಮುಖ್ಯವಾಗಿದ್ದು, ಎಲ್ಲರನ್ನು ವಿಶ್ವಾಸಕ್ಕೆ ಪಡೆದೆ ಅಭ್ಯರ್ಥಿಯನ್ನಾ ಆಯ್ಕೆ ಮಾಡಿದ್ದೇವೆ ಎಂದರು. ನಂತರ ನಾವು ಎಲ್ಲಾ ನಾಯಕರೊಂದಿಗೆ ನಿತ್ಯ ಸಂಪರ್ಕದಲ್ಲಿದ್ದೆವು. ನಮ್ಮ ನಾಯಕರ ವರದಿಗಳ ಆಧಾರದ ಮೇಲೆ, ತಮ್ಮದೇ
ವಿಜಯಪುರ: ಮಗ ನೋಡಲು ತನ್ನ ಹಾಗೇ ಇಲ್ಲವೆಂದು ಪಾಪಿ ತಂದೆಯೊಬ್ಬ ಮಗನನ್ನೇ ಕೊಂದ ಆಘಾತಕಾರಿ ಘಟನೆ ವಿಜಯಪುರಲ್ಲಿ ವರದಿಯಾಗಿದೆ. ವಿಜಯಪುರ ಜಿಲ್ಲೆಯ ನಾಗಠಾಣ ಗ್ರಾಮದ ಸಿದ್ದಾರ್ಥ ಮಲ್ಲಿಕಾರ್ಜುನ ಅರಕೇರಿ (6) ತಂದೆಯಿಂದಲೇ ಹತ್ಯೆಯಾದ ಬಾಲಕ. ಮಲ್ಲಿಕಾರ್ಜುನ ಅರಕೇರಿ ಮಗನನ್ನೇ ಹತ್ಯೆ ಮಾಡಿದ ತಂದೆ. ಕಳೆದ ಮಾರ್ಚ್ 16ರಂದು ಪುತ್ರನನ್ನು ಕೃಷ್ಣಾ ನದಿಗೆ ತಳ್ಳಿ ಹತ್ಯೆ ಮಾಡಿದ್ದಾನೆ ಮಲ್ಲಿಕಾರ್ಜುನ. 6 ವರ್ಷದ ಪುತ್ರ ಸಿದ್ದಾರ್ಥ ನೋಡಲು ತನ್ನ ಹಾಗೇ ಇಲ್ಲವೆಂದು ಮಲ್ಲಿಕಾರ್ಜುನ್ಗೆ ಕೆಲವರು
ನವದೆಹಲಿ: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಆಯ್ಕೆಯಾಗಿದ್ದು, ನಿತೀಶ್ ಕುಮಾರ್ ಅವರು ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದ ಬಳಿಕ ರಾಜ್ಯದಲ್ಲಿ ಸಿಎಂ ಹುದ್ದೆಯನ್ನು ಅಲಂಕರಿಸಿದ ಮೊದಲ ಬಿಜೆಪಿ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ನಿತೀಶ್ ಕುಮಾರ್ ಅವರು ಎರಡು ದಶಕಗಳಿಗೂ ಹೆಚ್ಚು ಕಾಲ ಆಡಳಿತದಲ್ಲಿ ಸಿಎಂ ಆಗಿದ್ದರು. ಚೌಧರಿ ಅವರು ಮಂಗಳವಾರ ಬಿಹಾರದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದರು, ಅವರ ಉನ್ನತಿಗೆ ದಾರಿ ಮಾಡಿಕೊಟ್ಟರು.ಎನ್ಡಿಎ ಶಾಸಕಾಂಗ ಪಕ್ಷದ ಸಭೆ ಶೀಘ್ರದಲ್ಲೇ ನಡೆಯಲಿದೆ. ಈ ಸಭೆಯಲ್ಲಿ ಸಾಮ್ರಾಟ್ ಚೌಧರಿ ಅವರನ್ನು ಔಪಚಾರಿಕವಾಗಿ
ಉಜ್ಜಯಿನಿ: ದೆಹಲಿ ಕ್ಯಾಪಿಟಲ್ಸ್ (DC) ಬ್ಯಾಟರ್ ನಿತೀಶ್ ರಾಣಾ ಮಂಗಳವಾರ ಉಜ್ಜಯಿನಿಯ ಶ್ರೀ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು ಮತ್ತು ಭಸ್ಮ ಆರತಿಯಲ್ಲಿ ಪಾಲ್ಗೊಂಡರು.ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026 ರ ಋತುವಿನಲ್ಲಿ ನಿತೀಶ್ ರಾಣಾ ಅವರ ಕಳಪೆ ಫಾರ್ಮ್ ನಡುವೆ ದೇವಸ್ಥಾನಕ್ಕೆ ಭೇಟಿ ನೀಡಲಾಗಿದೆ. ಪ್ರಸಕ್ತ ಐಪಿಎಲ್ ಋತುವಿನಲ್ಲಿ ರಾಣಾ ಡಿಸಿ ಪರ ಬ್ಯಾಟ್ ಮಾಡಿದ ಮೂರು ಪಂದ್ಯಗಳಲ್ಲಿ, ಅವರು ಡಕ್ ಸೇರಿದಂತೆ ಕೇವಲ 20 ರನ್ ಗಳಿಸಿದ್ದಾರೆ.ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಡಿಸಿ ಸೀಸನ್ ಆರಂಭಿಕ ಪಂದ್ಯದಲ್ಲಿ ರಾಣಾ 17 ಎಸೆತಗಳಲ್ಲಿ 15 ರನ್ ಗಳಿಸಿದರು. ನಂತರ
ಬೆಂಗಳೂರು: ಕಾಂಗ್ರೆಸ್ಸಿನವರು, ಸಿದ್ದರಾಮಯ್ಯನವರು ಎಷ್ಟೇ ಪುಂಗಿ ಬಾರಿಸಿದರೂ ಉಪ ಚುನಾವಣೆ ನಡೆದ ರಾಜ್ಯದ ಎರಡೂ ಕ್ಷೇತ್ರಗಳಲ್ಲಿ ಅವರು ಗೆಲುವು ಸಾಧಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು ಪ್ರಶ್ನೆಗೆ ಉತ್ತರಿಸಿದರು. ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದೇ ಗೆಲ್ಲಲಿದೆ ಎಂದರು. ಕಾಂಗ್ರೆಸ್ ಸರಕಾರದ ಬಗ್ಗೆ ಜನರು ಇವತ್ತು ಬೇಸತ್ತಿದ್ದಾರೆ. ಆಡಳಿತ ಯಂತ್ರ ಕುಸಿದಿದೆ. ಮುಖ್ಯಮಂತ್ರಿ ಕುರ್ಚಿಗೆ ಬೀದಿಕಾಳಗ ನಡೆಯುತ್ತಿದೆ. ಅಭಿವೃದ್ಧಿ ಇಲ್ಲವಾಗಿದೆ ಎಂದು ಟೀಕಿಸಿದರು.
ತಿರುವನಂತಪುರಂ: ಅಭಿಮಾನಿಯೊಬ್ಬರು ತನ್ನ ಜೊತೆ ಒಡೆದ ಫೋನ್ ನಲ್ಲಿ ಫೋಟೋ ತೆಗೆಯುತ್ತಿರುವುದನ್ನು ಗಮನಿಸಿ ಕ್ರಿಕೆಟಿಗ ಸಂಜು ಸ್ಯಾಮ್ಸನ್ ತನ್ನ ಬಳಿಯಿದ್ದ 40 ಸಾವಿರ ಮೌಲ್ಯದ ಫೋನ್ ಗಿಫ್ಟ್ ಕೊಟ್ಟ ಘಟನೆ ನಡೆದಿದೆ. ಸಂಜು ಸ್ಯಾಮ್ಸನ್ ಗೆ ಅಭಿಮಾನಿಗಳ ಬಳಗ ದೊಡ್ಡದು. ಎಲ್ಲೇ ಹೋದರೂ ಅವರನ್ನು ಚೇಟ ಎಂದು ಜನ ಪ್ರೀತಿಯಿಂದ ಕರೆಯುತ್ತಾರೆ. ಅಭಿಮಾನಿಗಳ ಪ್ರೀತಿಗೆ ಸಂಜು ಕೂಡಾ ಅಷ್ಟೇ ಪ್ರೀತಿಯಿಂದ ಪ್ರತಿಕ್ರಿಯಿಸುತ್ತಾರೆ. ಆದರೆ ಇಲ್ಲಿ ಅವರು ಅಭಿಮಾನಿಯೊಬ್ಬರಿಗೆ ಮಾಡಿದ ಸಹಾಯ ನೋಡಿ ನೆಟ್ಟಿಗರು ಅಚ್ಚರಿಪಟ್ಟಿದ್ದಾರೆ.
ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) "ದ್ವೇಷ ತುಂಬಿದ ಚಿಂತನೆ" ಯನ್ನು ಉತ್ತೇಜಿಸುತ್ತಿದೆ ಮತ್ತು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ತಮ್ಮ ಪಕ್ಷದ ಪ್ರಚಾರವನ್ನು ಪ್ರಾರಂಭಿಸಿದಾಗ ಸಂವಿಧಾನವನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಗಂಭೀರ ಆರೋಪ ಮಾಡಿದರು.ಉತ್ತರ ದಿನಾಜ್ಪುರದ ರಾಯ್ಗಂಜ್ನಲ್ಲಿ ಚುನಾವಣೆ ಎದುರಿಸುತ್ತಿರುವ ರಾಜ್ಯದಲ್ಲಿ ತಮ್ಮ ಮೊದಲ ಪ್ರಚಾರದ ಸಂದರ್ಭದಲ್ಲಿ, ಬಿಜೆಪಿ ಮತ ಕಳ್ಳತನದಲ್ಲಿ ತೊಡಗಿದೆ ಎಂದು ಗಾಂಧಿ ಆರೋಪಿಸಿದರು.
ಐಪಿಎಲ್ನಲ್ಲಿ ಕ್ರಿಕೆಟಿಗ ಸಂಜು ಸ್ಯಾಮ್ಸನ್ ತಮ್ಮ ಲಯವನ್ನು ಕಂಡುಕೊಳ್ಳಲು ವಿಫಲವಾಗಿದ್ದರು, ಆದರೆ ಅವರು ಇದೀಗ ತಮ್ಮ ಉದಾರ ಮನಸ್ಸಿನ ಬಗ್ಗೆ ಸುದ್ದಿಯಾಗಿದ್ದಾರೆ. ಕೇರಳದಲ್ಲಿ ರಸ್ತೆಬದಿಯ ವಿರಾಮದ ಸಮಯದಲ್ಲಿ, ಚೆನ್ನೈ ಸೂಪರ್ ಕಿಂಗ್ಸ್ ಆಟಗಾರನು ಬೆಂಬಲಿಗರಿಗೆ ಹೊಚ್ಚಹೊಸ ಸ್ಮಾರ್ಟ್ಫೋನ್ ಅನ್ನು ಉಡುಗೊರೆಯಾಗಿ ನೀಡಿದ್ದಾನೆ. ತನ್ನ ಆರಂಭಿಕ ಮೂರು ಪಂದ್ಯಗಳಲ್ಲಿ 6, 7, ಮತ್ತು 9 ಸ್ಕೋರ್ಗಳನ್ನು ದಾಖಲಿಸಿದ ಅವರು IPL ಋತುವಿಗೆ ಸವಾಲಿನ ಆರಂಭವನ್ನು ಎದುರಿಸುತ್ತಿರುವಾಗ ಈ ನಡೆ ಕಂಡುಬಂದಿದೆ. ಕ್ವಿಕ್ ಸ್ಟಾಪ್ ಸಮಯದಲ್ಲಿ ಸಂಜು ಸ್ಯಾಮ್ಸನ್ ಅವರಿಗೆ ಹೊಸ ಸಾಧನವನ್ನು ಪ್ರಸ್ತುತಪಡಿಸಿದಾಗ ಸ್ಥಳೀಯ ಅಭಿಮಾನಿಗಳಿಗೆ
ಬೆಂಗಳೂರು: ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು ಕಾಲಾತೀತ ನಾಯಕ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಬಸವರಾಜ ಬೊಮ್ಮಾಯಿ ಅವರು ಅಭಿಪ್ರಾಯಪಟ್ಟರು.ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಸಂವಿಧಾನ ಕರ್ತೃ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಜಯಂತ್ಯುತ್ಸವವನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೆಲವರು ಕಾಲಕ್ಕೆ ಸೀಮಿತವಾದ ನಾಯಕರಿರುತ್ತಾರೆ. ಆದರೆ, ಅಂಬೇಡ್ಕರ್ ಅವರು ಹಾಗಲ್ಲ ಎಂದು ನುಡಿದರು.ಮಹಾನ್ ಚಿಂತಕರು ಸದಾ ಜೀವಂತರಾಗಿರುತ್ತಾರೆ. ಅಂಥವರಲ್ಲಿ ಡಾ.ಅಂಬೇಡ್ಕರ್ ಅವರೂ ಒಬ್ಬರು ಎಂದು ತಿಳಿಸಿದರು. ಬುದ್ಧನ ಪ್ರೇರಣೆ, ಬಸವಣ್ಣನ ಸಮಾನತೆ ಇವೆರಡನ್ನೂ ಪಡೆದವರು ಡಾ. ಅಂಬೇಡ್ಕರ್ ಅವರು ಎಂದು ವಿಶ್ಲೇಷಿಸಿದರು.
ಬೆಂಗಳೂರು: ಐಪಿಎಲ್ನಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿರುವ 15 ವರ್ಷದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಅವರು ಶೀಘ್ರದಲ್ಲೇ ಭಾರತ ತಂಡಕ್ಕೆ ಪದಾರ್ಪಣೆ ಮಾಡಲಿದ್ದಾರೆ.ವೈಭವ್ ಅವರು ತಮ್ಮ ಅಮೋಘ ಆಟದ ಮೂಲಕವೇ ಗಮನಸೆಳೆಯುತ್ತಿರುವ ಅವರು ತಾರಾ ಬೌಲರ್ಗಳ ವಿರುದ್ಧ ಮೇಲುಗೈ ಸಾಧಿಸಿದ್ದಾರೆ. ಐಪಿಎಲ್ ಪಂದ್ಯಗಳಲ್ಲಿ ಪ್ರಮುಖ ಬೌಲರ್ಗಳನ್ನು ಅವರು ದಂಡಿಸಿ ಗಮನ ಸೆಳೆದಿದ್ದಾರೆ.ಇತ್ತೀಚೆಗೆ ಮುಕ್ತಾಯಗೊಂಡ 19 ವರ್ಷದೊಳಗಿನವರ ಏಕದಿನ ವಿಶ್ವಕಪ್ ಹಾಗೂ ಈಗ ನಡೆಯುತ್ತಿರುವ ಐಪಿಎಲ್ನಲ್ಲಿ ಅಮೋಘ ಪ್ರದರ್ಶನ ನೀಡುತ್ತಿರುವ ಅವರನ್ನು ಇದೇ ವರ್ಷದ ಜೂನ್ನಲ್ಲಿ ನಡೆಯಲಿರುವ ಐರ್ಲೆಂಡ್ ಪ್ರವಾಸದಲ್ಲಿ ಭಾರತ ತಂಡಕ್ಕೆ ಆಯ್ಕೆಯಾಗುವ ಸಾಧ್ಯತೆ ಇದೆ
ಪಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ರಾಜ್ಯಪಾಲ ಸೈಯದ್ ಅತಾ ಹಸ್ನೈನ್ ಅವರನ್ನು ಇಂದು ಭೇಟಿ ಮಾಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ನಿತೀಶ್ ಕುಮಾರ್ ಅವರು ಈಚೆಗೆ ರಾಜ್ಯಸಭೆ ಸದಸ್ಯರಾಗಿದ್ದರು.ಮಧ್ಯಾಹ್ನ 3.15ನಿಮಿಷದ ಸುಮಾರಿಗೆ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ನಿರ್ಧಾರ ತಿಳಿಸಿ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ. ಅದಕ್ಕೂ ಮುನ್ನ ಇಂದು ಬೆಳಗ್ಗೆ ತಮ್ಮ ಕೊನೆಯ ಸಚಿವ ಸಂಪುಟ ಸಭೆ ನಡೆಸಿರುವ ನಿತೀಶ್ ಕುಮಾರ್, ತಮ್ಮ ಸ್ಥಾನದ ರಾಜೀನಾಮೆ ಮತ್ತು ಸಂಪುಟ ವಿಸರ್ಜನೆಯ ಬಗ್ಗೆ ಸಹೋದ್ಯೋಗಿಗಳಿಗೆ ತಿಳಿಸಿದ್ದಾರೆ.ಬಿಹಾರದ ಸುದೀರ್ಘ ಕಾಲದ ಮುಖ್ಯಮಂತ್ರಿಯಾಗಿರುವ ನಿತೀಶ್ ಕುಮಾರ್ ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸುವ ಮುನ್ನ ಅನುಸರಿಸಬೇಕಾದ ಸಾಂವಿಧಾನಿಕ ವಿಧಾನಗಳ ಭಾಗವಾಗಿ ಸಚಿವ ಸಂಪುಟ ವಿಸರ್ಜಿಸುವ ನಿರ್ಧಾರವನ್ನು ಸಹೋದ್ಯೋಗಿಗಳಿಗೆ ತಿಳಿಸಿದ್ದಾರೆ.
ಬೆಂಗಳೂರು: ಪ್ರತಿಭಟನಾನಿರತ ಯುವಜನರನ್ನು ಬಂಧಿಸಿ ಜೈಲಿಗೆ ಕಳಿಸಿದ್ದು ನೀಚಕೃತ್ಯ; ಇದು ಖಂಡನೀಯ ಎಂದು ಮಾಜಿ ಉಪ ಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ ಅವರು ತಿಳಿಸಿದ್ದಾರೆ. ಇಂದು ಇಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಸರಕಾರ ನಿರುದ್ಯೋಗಿ ಯುವಜನರಿಗೆ ನಿರುದ್ಯೋಗ ಭತ್ಯೆಯನ್ನೂ ನೀಡಿಲ್ಲ ಎಂದು ಟೀಕಿಸಿದರು. ಸುಮಾರು 3 ಲಕ್ಷ ಹುದ್ದೆಗಳು ಖಾಲಿ ಇದ್ದರೂ ಅವನ್ನು ಭರ್ತಿ ಮಾಡಿಲ್ಲ; ಪ್ರತಿಭಟನೆಯ ಅವಕಾಶವನ್ನೂ ಕೊಡದೇ ಬಂಧಿಸಿದ್ದನ್ನು ಖಂಡಿಸುವುದಾಗಿ ಹೇಳಿದರು.ಧಾರವಾಡದಲ್ಲಿ ರೂಂ ಮಾಡಿ ಕೋಚಿಂಗ್ ಪಡೆದು ಅವರೆಲ್ಲರೂ ಮೂರು ವರ್ಷ ಕಾದಿದ್ದಾರೆ.