Shorts

ಬೆಳಗಾವಿ: ಇಲ್ಲಿನ ಮಚ್ಚೆ ಗ್ರಾಮದಲ್ಲಿ ಅಖಂಡ ಹಿಂದೂ ಸಮ್ಮೇಳನದ ಅಂಗವಾಗಿ ಬೆಆಯೋಜಿಸಿದ್ದ ಶೋಭಾ ಯಾತ್ರೆ‌ ವೇಳೆ ಅನ್ಯಕೋಮಿನ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದಡಿ ಮಹಾರಾಷ್ಟ್ರದ ಹಿಂದೂ ನಾಯಕಿ ಹರ್ಷಿತಾ ಠಾಕೂರ ಸೇರಿ ಏಳು ಜನರ ಮೇಲೆ ಪ್ರಕರಣ ದಾಖಲಾಗಿದೆ.ಭಾನುವಾರ ನಡೆದ ಹಿಂದೂ ಸಮ್ಮೇಳನಕ್ಕೂ ಮುನ್ನ ಶೋಭಾ ಯಾತ್ರೆ ಮಾಡಲಾಯಿತು. ವಾಹನದ ಮೇಲೆ ನಿಂತ ಹರ್ಷಿತಾ ಅವರು ಅನ್ಸಾರಿ ದರ್ಗಾದ ಬಳಿ ಬಂದಾಗ ವಾಹನ ನಿಲ್ಲಿಸಿ ದರ್ಗಾದ ಕಡೆಗೆ ಬಾಣ ಬಿಟ್ಟಂತೆ ಕೈ ಮಾಡಿ ತೋರಿಸಿದ್ದಾರೆ. ಇದರಿಂದ ಧಾರ್ಮಿಕ ಭಾವನೆಗೆ ಧಕ್ಕೆಯನ್ನು ತಂದಿದ್ದಾರೆ, ಅದಲ್ಲದೆ ಸಮಾವೇಶದಲ್ಲಿಯೂ ಧಾರ್ಮಿಕ ಭಾವನೆ ಕೆರಳಿಸುವ ಭಾಷಣ ಮಾಡಿದ್ದಾರೆ ಎಂದು ಅಬ್ದುಲ್ ಖಾದರ್ ಮುಜಾವರ ಎನ್ನುವವರು ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ.

ಚೆನ್ನೈ: ಕನ್ನಡದ ಬಿಗ್‌ಬಾಸ್‌ನಲ್ಲಿ ಗಿಲ್ಲಿ ನಟ ಟ್ರೋಫಿ ಗೆದ್ದರೆ, ಭಾನುವಾರವೇ ನಡೆದ ತಮಿಳು ಬಿಗ್‌ಬಾಸ್‌ನಲ್ಲಿ ವೈಲ್ಡ್‌ ಕಾರ್ಡ್‌ ಸ್ಪರ್ಧಿಯಾಗಿದ್ದ ನಟಿ ದಿವ್ಯಾ ಗಣೇಶ್ ವಿನ್ನರ್‌ ಆಗಿದ್ದಾರೆ.ಸೂಪರ್‌ಸ್ಟಾರ್ ವಿಜಯ್ ಸೇತುಪತಿ ಬಿಗ್ ಬಾಸ್ ತಮಿಳು ಸೀಸನ್ 9 ರ ಗ್ರ್ಯಾಂಡ್ ಫಿನಾಲೆ ಅದ್ಧೂರಿಯಾಗಿ ನಡೆಯಿತು. ಸೀಸನ್‌ನ ವಿಜೇತರನ್ನು ಅಂತಿಮವಾಗಿ ಅನೌನ್ಸ್‌ ಮಾಡಲಾಗಿದೆ. 2025ರ ಅಕ್ಟೋಬರ್ 5ರಂದು ತಮಿಳು ಬಿಗ್‌ಬಾಸ್ ಸೀಸನ್-9 ಆರಂಭವಾಗಿತ್ತು.ಆರಂಭದಲ್ಲಿ 20 ಸ್ಪರ್ಧಿಗಳು ಮನೆ ಒಳಗೆ ಪ್ರವೇಶಿಸಿದ್ದರು. ದಿವ್ಯಾ ಅವರು ವೈಲ್ಡ್‌ಕಾರ್ಡ್‌ ಸ್ಪರ್ಧಿಯಾಗಿ ಮನೆಯೊಳಗೆ ಹೋಗಿದ್ದರೂ ಉಳಿದ ಸ್ಪರ್ಧಿಗಳನ್ನು ಹಿಂದಿಕ್ಕಿ, ಅನೇಕ ಸವಾಲುಗಳನ್ನು ಸ್ವೀಕರಿಸಿ ವಿನ್ನರ್ ಟ್ರೋಫಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ದಾವಣಗೆರೆ: ಜನರ ತಮ್ಮ ಅಭಿಮಾನ ಪ್ರದರ್ಶಿಸಲು ಮುಂದಿನ ಸಿಎಂ ಅಂತಾ ಘೋಷಣೆ ಕೂಗ್ತಾರೆ, ಆದರೆ ಅದು ಈ ಅವಧಿಗೆ ಅಲ್ಲ, ಮುಂದಿನ 2028ಕ್ಕೆ ನಾನು ಸಿಎಂ ಸ್ಥಾನದ ಆಕಾಂಕ್ಷಿ ಎಂದು ಸಚಿವ ಸತೀಶ್ ಜಾರಕಿಹೊಳಿ ವರು ಸ್ಪಷ್ಟನೆ ನೀಡಿದ್ದಾರೆ. ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಭಿಮಾನಿಗಳು ಮುಂದಿನ ಸಿಎಂ ಸತೀಶ್ ಜಾರಕಿಹೊಳಿ ಅಂತಾ ಘೋಷಣೆ ಕೂಗ್ತಾರೆ. ಅದು ಈ ಅವಧಿಗೆ ಅಲ್ಲ, ಮುಂದಿನ 2028ಕ್ಕೆ ಅಂತಾ ಹೇಳಿದ್ದೇವೆ. ಜನ ನಮ್ಮ ಮೇಲಿನ ಅಭಿಮಾನಕ್ಕೆ ಈ ರೀತಿ ಘೋಷಣೆ ಕೂಗ್ತಾರೆ. ಈಗೀನ ಅವಧಿಗೆ ಣಾನು ಸಿಎಂ ಅಂತ ಹೇಳಿಲ್ಲ, ಈಗ ಯಾರಾಗುತ್ತಾರೆ ಆಗಲಿ, ನಾನು ಮುಂದಿನ ಚುನಾವಣೆಗೆ ಸಿಎಂ ಸ್ಥಾನದ ಆಕಾಂಕ್ಷಿ ಎಂದು ಹೇಳಿದರು.ದಾವಣಗೆರೆಯ ಚನ್ನಗಿರಿ ತಾಲೂಕಿನ ಪಾಂಡೋಮಟ್ಟಿಯ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಈ ವೇಳೆ ಮತ್ತೆ ಮುಂದಿನ ಸಿಎಂ

ಬೆಂಗಳೂರು: ಕನ್ನಡತಿ, ಆಫ್ ಸ್ಪಿನ್ನರ್ ಶ್ರೇಯಾಂಕ ಪಾಟೀಲ ಅವರು ಮಹಿಳಾ ಪ್ರೀಮಿಯರ್‌ ಲೀಗ್‌ನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಪರ ಮಿಂಚುತ್ತಿದ್ದಾರೆ. ಗಾಯದಿಂದ ಚೇತರಿಸಿಕೊಂಡಿರುವ ಅವರು ಮತ್ತೆ ಸ್ಪರ್ಧಾ ಕಣಕ್ಕೆ ಮರಳಿದ್ದಾರೆ. ಆರ್‌ಸಿಬಿಗೆ ಆಡುತ್ತಿರುವ ಶ್ರೇಯಾಂಕ ಕಳೆದ ನಾಲ್ಕು ಪಂದ್ಯಗಳಲ್ಲಿ ಎಂಟು ವಿಕೆಟ್ ಕಬಳಿಸಿದ್ದಾರೆ. ಅದರಲ್ಲೂ ಗುಜರಾತ್‌ ಜೈಂಟ್ಸ್‌ ವಿರುದ್ಧ ಐದು ವಿಕೆಟ್‌ ಗೊಂಚಲು ಪಡೆದು, ವೈಯಕ್ತಿಕ ಶ್ರೇಷ್ಠ ಸಾಧನೆ ಮೆರೆದಿದ್ದಾರೆ. ಅದರ ಬೆನ್ನಲ್ಲೇ ಅವರಿಗೆ ಭಾರತ ಟಿ20 ತಂಡಕ್ಕೆ ಪ್ರವೇಶ ಪಡೆದಿದ್ದಾರೆ. 23 ವರ್ಷದ ಶ್ರೇಯಾಂಕ ಅವರು 2024ರಲ್ಲಿ ಡಬ್ಲ್ಯುಪಿಎಲ್‌ನಲ್ಲಿ ಗರಿಷ್ಠ ವಿಕೆಟ್‌ ಪಡೆದ ಬೌಲರ್‌ ಎನಿಸಿದ್ದರು. ನಂತರದಲ್ಲಿ ಅವರು ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದರು. ಕಳೆದ ಒಂದು ವರ್ಷದಿಂದ ಗಾಯದಿಂದ ಬಳಲುತ್ತಿದ್ದ ಅವರು ಚೇತರಿಸಿಕೊಂಡು, ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ನವದೆಹಲಿ: ಕಳೆದ ತಿಂಗಳು ವಿಮಾನಯಾನ ಸೇವೆಯಲ್ಲಿ ಆಗಿರುವ ಭಾರಿ ವ್ಯತ್ಯಯಕ್ಕೆ ಸಂಬಂಧಿಸಿದಂತೆ ನಾಗರಿಕ ವಿಮಾನಯಾನಗಳ ಮಹಾನಿರ್ದೇಶನಾಲಯ‌ವು ಇಂಡಿಗೋ ವಿಮಾನಯಾನ ಸಂಸ್ಥೆಯ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ. ಬರೋಬ್ಬರಿ ₹ 22.2 ಕೋಟಿ ದಂಡ ವಿಧಿಸಿದೆ.ಡಿಸೆಂಬ‌ರ್ 3 ರಿಂದ 5 ರ ವರೆಗೆ ಇಂಡಿಗೋ ವಿಮಾನಗಳ ಕಾರ್ಯಾಚರಣೆಯಲ್ಲಿ ಭಾರೀ ವ್ಯತ್ಯಯ ಉಂಟಾಗಿತ್ತು. 2,507 ವಿಮಾನಗಳ ಹಾರಾಟ ರದ್ದುಗೊಳಿಸಲಾಗಿತ್ತು, ಜೊತೆಗೆ 1,852 ವಿಮಾನಗಳ ಹಾರಾಟದಲ್ಲಿ ವಿಳಂಬವಾಗಿತ್ತು. ಇದರಿಂದ 3 ಲಕ್ಷಕ್ಕೂ ಅಧಿಕ ಪ್ರಯಾಣಿಕರು ವಿವಿಧ ವಿಮಾನ ನಿಲ್ದಾಣಗಳಲ್ಲಿ ಸಿಲುಕಿದ್ದರು. ಕಳೆದ ತಿಂಗಳು ಇಂಡಿಗೋ ವಿಮಾನಗಳ ವೇಳಾಪಟ್ಟಿಯಲ್ಲಿ ಭಾರಿ ವ್ಯತ್ಯಯವಾದ ಹಿನ್ನೆಲೆಯಲ್ಲಿ ರಚಿಸಲಾಗಿದ್ದ ನಾಲ್ವರು ಸದಸ್ಯರ ಸಮಿತಿ ನೀಡಿದ ವರದಿಯನ್ನು ಶನಿವಾರ ರಾತ್ರಿ ನಿಯಂತ್ರಕ ಸಂಸ್ಥೆ ಬಿಡುಗಡೆ ಮಾಡಿದೆ.

ಮುಂಬೈ: ಮಹಿಳಾ ಪ್ರೀಮಿಯರ್‌ ಲೀಗ್‌ನ ಹಾಲಿ ಆವೃತ್ತಿಯಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಗೆಲುವಿನ ಓಟ ಮುಂದುವರಿದಿದೆ.ಸ್ಮೃತಿ ಮಂದಾನ ನಾಯಕತ್ವದ ಆರ್‌ಸಿಬಿ ತಂಡವು ಶನಿವಾರ ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನು ಎಂಟು ವಿಕೆಟ್‌ಗಳಿಂದ ಮಣಿಸಿತು. ಇದರೊಂದಿಗೆ ಸತತ ನಾಲ್ಕನೇ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಭದ್ರಪಡಿಸಿಕೊಂಡಿದೆ.ನಾಯಕಿ ಸ್ಮೃತಿ ಮಂದಾನ (96;61ಎ) , ಜಾರ್ಜಿಯಾ ವೋಲ್ (54;42ಎ) ಅರ್ಧಶತಕಗಳ‌ ಬ್ಯಾಟಿಂಗ್‌ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಎಂಟು ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ.ಮುಂಬೈನ ಡಿವೈ ಪಾಟೀಲ ಕ್ರೀಡಾಂಗಣದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್‌ ತಂಡವು ಶಫಾಲಿ ವರ್ಮಾ ಅವರ ಅರ್ಧಶತಕದ ನೆರವಿನಿಂದ 20 ಓವರ್‌ಗಳಲ್ಲಿ 166 ರನ್‌ಗಳಿಗೆ ಆಲೌಟ್‌ ಆಯಿತು. ಗುರಿ ಬೆನ್ನಟ್ಟಿದ ಆರ್‌ಸಿಬಿ 18.2 ಓವರ್‌ಗಳಲ್ಲೇ 2 ವಿಕೆಟ್‌ ನಷ್ಟಕ್ಕೆ 169 ರನ್‌ ಬಾರಿಸಿ ಗೆಲುವು ಸಾಧಿಸಿತು.