Shorts

ನವದೆಹಲಿ: ಪ್ರಯಾಣಿಕರ ದಟ್ಟಣೆಯ ನಿರೀಕ್ಷಿತ ಉಲ್ಬಣವನ್ನು ನಿರ್ವಹಿಸಲು ಮತ್ತು ಹೆಚ್ಚಿನ ಬೇಡಿಕೆಯ ಮಾರ್ಗಗಳಲ್ಲಿ ಸುಗಮ ಸಂಪರ್ಕವನ್ನು ಖಚಿತಪಡಿಸಿಕೊಳ್ಳಲು ಭಾರತೀಯ ರೈಲ್ವೇಯು ಬೇಸಿಗೆಯ ಗರಿಷ್ಠ ಪ್ರಯಾಣದ ಅವಧಿಯಲ್ಲಿ 18,262 ವಿಶೇಷ ರೈಲು ಟ್ರಿಪ್‌ಗಳನ್ನು ನಿರ್ವಹಿಸಲು ಸಿದ್ಧವಾಗಿದೆ ಎಂದು ರೈಲ್ವೆ ಸಚಿವಾಲಯ ಶುಕ್ರವಾರ ತಿಳಿಸಿದೆ.ಎಂಆರ್ ಅಶ್ವಿನಿ ವೈಷ್ಣವ್ ಅವರು ನವದೆಹಲಿಯಲ್ಲಿ ಬೇಸಿಗೆ ವಿಶೇಷ ರೈಲುಗಳ ಕಾರ್ಯಾಚರಣೆಯನ್ನು ಪರಿಶೀಲಿಸಿದ್ದಾರೆ, ಏಕೆಂದರೆ ಭಾರತೀಯ ರೈಲ್ವೇಯು ಗರಿಷ್ಠ ಬೇಸಿಗೆ ಪ್ರಯಾಣದ ಅವಧಿಯಲ್ಲಿ ಪ್ರಯಾಣಿಕರ ಚಲನೆಯನ್ನು ಸರಾಗಗೊಳಿಸುವ ಮತ್ತು ಹೆಚ್ಚಿನ ಬೇಡಿಕೆಯ ಮಾರ್ಗಗಳಲ್ಲಿ ಸಂಪರ್ಕವನ್ನು ಬಲಪಡಿಸಲು 18,262 ವಿಶೇಷ ರೈಲು ಪ್ರಯಾಣಗಳನ್ನು ಯೋಜಿಸಿದೆ ಎಂದು ರೈಲ್ವೇ ಸಚಿವಾಲಯವು ಎಕ್ಸ್‌ನಲ್ಲಿ ಬರೆದಿದೆ.

ಬೆಂಗಳೂರು: ಪದವಿ ಮುಗಿಸಿ ಕೆಲಸಕ್ಕಾಗಿ ಕಾಯುತ್ತಿರುವ ಯುವ ಸಮೂಹಕ್ಕೆ ಆರ್ಥಿಕ ಶಕ್ತಿ ನೀಡುವ ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಯುವನಿಧಿ’ ಯೋಜನೆ ಯಶಸ್ವಿಯಾಗಿ ಮೂರು ವರ್ಷ ಪೂರೈಸಿದೆ. ಈ ಹಿನ್ನೆಲೆಯಲ್ಲಿ 2025-26ನೇ ಸಾಲಿನಲ್ಲಿ ತೇರ್ಗಡೆಯಾದ ಹೊಸ ಪದವೀಧರರು ತಡಮಾಡದೆ ಯೋಜನೆಯಡಿ ನೋಂದಾಯಿಸಿಕೊಂಡು ಭತ್ಯೆ ಪಡೆಯುವಂತೆ ಶಾಸಕ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ಅವರು ಕರೆ ನೀಡಿದ್ದಾರೆ.ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ದಿನೇಶ್ ಗೂಳಿಗೌಡ, ಕಾಂಗ್ರೆಸ್‌ ಪಕ್ಷವು ಸದಾ ಜನಪರ ಚಿಂತನೆಯುಳ್ಳದ್ದು ಎಂಬುದು ಪದೇ ಪದೆ ಸಾಬೀತಾಗುತ್ತಲೇ ಬಂದಿದೆ.

ಬೆಂಗಳೂರು: ಯಡಿಯೂರಪ್ಪನವರ ಅಭಿಮಾನೋತ್ಸವ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಏಪ್ರಿಲ್ 26ರಂದು ಬೆಳಿಗ್ಗೆ 10 ಗಂಟೆಗೆ ಭೂಮಿಪೂಜೆ ನೆರವೇರಿಸಲಾಗುವುದು ಎಂದು ಮಾಜಿ ಉಪ ಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ ಅವರು ತಿಳಿಸಿದ್ದಾರೆ. ಕಾರ್ಯಕ್ರಮದ ಸ್ಥಳಗಳಲ್ಲಿ ಪೆಂಡಾಲ್, ಸ್ಟೇಜ್ ಮುಂತಾದ ವ್ಯವಸ್ಥೆಗಳನ್ನು ಪ್ರಾರಂಭಿಸಲು ಭೂಮಿಪೂಜೆ ನಡೆಯಲಿದೆ ಎಂದರು.ಬಿಜೆಪಿ ರಾಜ್ಯ ಕಾರ್ಯಾಲಯ "ಜಗನ್ನಾಥ ಭವನ" ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭೂಮಿಪೂಜೆಗೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರನ್ನು ಆಹ್ವಾನಿಸಿದ್ದೇವೆ. ಅವರು, ಸಂಸದರು, ಮಾಜಿ ಸಂಸದರು, ಶಾಸಕರು, ಮಾಜಿ ಶಾಸಕರು, ವಿಧಾನಪರಿಷತ್ ಸದಸ್ಯರು, ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ ಸೇರಿ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.