ಬೆಂಗಳೂರು: ಕಲಬುರಗಿ ತಲಾ ಆದಾಯ ಇಳಿಕೆಯಾಗಿದೆ ಎಂಬ ವರದಿಗಳ ಬೆನ್ನಲ್ಲೇ ಬಿಜೆಪಿ ನಾಯಕ ಸಿಟಿ ರವಿ ಸಚಿವ ಪ್ರಿಯಾಂಕ್ ಖರ್ಗೆಗೆ ಟಾಂಗ್ ಕೊಟ್ಟಿದ್ದು, ದಕ್ಷಿಣ ಕನ್ನಡ ಜಿಲ್ಲೆ ಬಗ್ಗೆ ಮಾತನಾಡಿದವರು ಎಲ್ಲೋದ್ರು ಎಂದು ಕೇಳಿದ್ದಾರೆ. ಕೆಲವು ದಿನಗಳ ಹಿಂದೆ ಪ್ರಿಯಾಂಕ್ ಖರ್ಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಐಟಿ ಬಿಟಿ ಕಂಪನಿಗಳು ಹೂಡಿಕೆ ಮಾಡಲು ಹಿಂದೇಟು ಹಾಕುತ್ತಿರುವುದು ಕೋಮುವಾದಿ ಸಂಘಟನೆಗಳಿಂದ ಎಂದು ಟೀಕಿಸಿದ್ದರು. ಅವರ ಹೇಳಿಕೆ ಭಾರೀ ಟ್ರೋಲ್ ಗೊಳಗಾಗಿತ್ತು. ಇದೀಗ ಪ್ರಸಕ್ತ ಸಾಲಿನ ಆರ್ಥಿಕ ಸಮೀಕ್ಷೆಯಲ್ಲಿ ಕಲಬುರಗಿ ತಲಾ ಆದಾಯದಲ್ಲಿ ಇಳಿಕೆಯಾಗಿದೆ ಎಂದು ತಿಳಿದುಬಂದಿದೆ.
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತುಇತರೆ ಚಿನ್ನದ ದರ ಇಳಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತವಾಗಿ ಬೆಲೆ ಏರಿಳಿಕೆಯಾಗುತ್ತಲೇ ಇತ್ತು. ಆದರೆ ಈ ವಾರದ ಆರಂಭದಲ್ಲೇ ಪರಿಶುದ್ಧ ಚಿನ್ನದ ದರ ಸತತವಾಗಿ ಇಳಿಕೆಯಾಗುತ್ತಿದೆ. ಪರಿಶುದ್ಧ ಚಿನ್ನದ ದರ ನಿನ್ನೆ 1,65,745.00 ರೂ.ಗಳಿತ್ತು. ಆದರೆ ಇಂದು ಇಳಿಕೆಯಾಗಿದ್ದು 1,64,795.00 ರೂ.ಗಳಷ್ಟಿದೆ.
ಗರ್ಭಿಣಿ ನಾಯಿಯನ್ನು ರಸ್ತೆಯಲ್ಲಿ ಎಳೆದುಕೊಂಡು ತಾವು ಬೈಕ್ ನಲ್ಲಿ ಸವಾರಿ ಮಾಡಿದ ದಂಪತಿಯ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಆಕ್ರೋಶ ವ್ಯಕ್ತವಾಗಿದೆ. ಕೆಲವು ಸಮಯದ ಹಿಂದೆ ಕರ್ನಾಟಕದಲ್ಲೂ ಇಂತಹ ಘಟನೆಯಾಗಿತ್ತು. ಬೈಕ್ ಗೆ ನಾಯಿಯನ್ನು ಕಟ್ಟಿ ಮಾಲಿಕ ಎಳೆದೊಯ್ದ ಘಟನೆ ವೈರಲ್ ಆಗಿತ್ತು. ಮನುಷ್ಯ ತನ್ನ ಸಾಕು ಪ್ರಾಣಿಯ ಮೇಲೆ ಇಷ್ಟು ಕ್ರೌರ್ಯತೆ ತೋರುವುದು ಯಾಕೆ ಎಂದು ಜನ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಅಂತಹದ್ದೇ ಘಟನೆ ಪಶ್ಚಿಮ ಬಂಗಾಲದ ಕಲ್ಯಾಣಿ ಎಕ್ಸ್ ಪ್ರೆಸ್ ವೇನಲ್ಲಿ ನಡೆದಿದೆ. ದಂಪತಿ ಬೈಕ್ ನಲ್ಲಿ ತೆರಳುತ್ತಾರೆ. ನಾಯಿಯನ್ನು ಸಂಕೋಲೆಯಲ್ಲಿ ಹಿಡಿದು ರಸ್ತೆಯಲ್ಲಿ ಎಳೆದೊಯ್ಯುತ್ತಾರೆ.
ಅಭಿಮಾನಿಗಳಿಂದ ಅಣ್ಣಾವ್ರು ಎಂದು ಕರೆಯಿಸಿಕೊಳ್ಳುವ ಡಾ ರಾಜ್ ಕುಮಾರ್ ಕೇವಲ ನಟನಾಗಿ ಮಾತ್ರವಲ್ಲ, ನಿಜ ಜೀವನದಲ್ಲೂ ತಮ್ಮ ಆದರ್ಶಗಳಿಂದ ಜನರಿಗೆ ಅನುಕರಣೀಯರಾಗಿದ್ದರು. ಸಮಸ್ಯೆಗಳನ್ನು ಎದುರಿಸುವಾಗ ಅಣ್ಣಾವ್ರ ಈ ಮಾತು ನಮಗೆ ಪಾಠವಾಗಬೇಕು. ಅಣ್ಣಾವ್ರು ತೆರೆ ಮೇಲೆ ಮೆರೆದು ಸಾಕಷ್ಟು ಜನರ ಪ್ರೀತಿ ಸಂಪಾದಿಸಿರಬಹುದು. ಹಾಗಂತ ಅವರಿಗೆ ಕಷ್ಟಗಳೇ ಇರಲಿಲ್ಲ ಎಂದಲ್ಲ. ಜೀವನದಲ್ಲಿ ಅವರೂ ಸಾಮಾನ್ಯರಂತೇ ಹಲವು ಏಳು-ಬೀಳುಗಳನ್ನು ಎದುರಿಸಿದ್ದಾರೆ. ಆದರೆ ಅದನ್ನೆಲ್ಲವನ್ನೂ ಅವರು ಎದುರಿಸಿ ಯಶಸ್ವೀ ಜೀವನ ನಡೆಸಿದವರು. ಅಣ್ಣಾವ್ರಿಗೆ ಕೊನೆ ಕೊನೆಯಲ್ಲಿ ಮೊಣಕಾಲಿನ ಸಮಸ್ಯೆಯಾಗಿತ್ತು.
ವಿವಾಹ ಮಂಟಪದಲ್ಲೇ ಹಾಲಿವುಡ್ ಸ್ಟೈಲ್ ನಲ್ಲಿ ವಧು, ವರ ಲಿಪ್ ಲಾಕ್ ಮಾಡುತ್ತಿರುವ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರೀ ಟೀಕೆ ವ್ಯಕ್ತವಾಗಿದೆ. ಭಾರತೀಯ ಪದ್ಧತಿ ಪ್ರಕಾರ ಅದರಲ್ಲೂ ಹಿಂದೂ ಸಂಸ್ಕೃತಿ ಪ್ರಕಾರ ಮದುವೆ ಕಾರ್ಯಕ್ರಮ ನಡೆದಿರುತ್ತದೆ. ಹಿಂದೂ ಮದುವೆಗಳಲ್ಲಿ ಅದರಲ್ಲೂ ವಿಶೇಷವಾಗಿ ಭಾರತೀಯ ಸಂಪ್ರದಾಯದ ಮದುವೆಗೆ ಅದರದ್ದೇ ಆದ ಗೌರವವಿದೆ. ವಿದೇಶೀಯರೂ ಕೆಲವೊಮ್ಮೆ ಇಲ್ಲಿನ ಸಂಸ್ಕೃತಿಗೆ ಮಾರು ಹೋಗಿ ಮದುವೆಯಾಗುವುದಿದೆ. ಆದರೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಈ ವಿಡಿಯೋದಲ್ಲಿ ವಧು ವರರು ಮದುವೆ ಬಳಿಕ ಮದುವೆ ಮಂಟಪದಲ್ಲೇ ಫೋಟೋ, ವಿಡಿಯೋಗಾಗಿ ಲಿಪ್ ಲಾಕ್ ಮಾಡುತ್ತಾರೆ.
ನವದೆಹಲಿ: ಅದಾನಿ ಜೀ ಕಂಪನಿಗೆ ಹೋಗಿ ನೋಡಿ. ಅಲ್ಲಿ ಯಾರೊಬ್ಬರೂ ದಲಿತರು ಮೇಲ್ದರ್ಜೆಯ ಅಧಿಕಾರದಲ್ಲಿ ಇಲ್ಲ ಎಂದು ರಾಹುಲ್ ಗಾಂಧಿ ನೀಡಿರುವ ಹೇಳಿಕೆ ಈಗ ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಗೊಳಗಾಗಿದೆ. ಖಾನ್ಸಿ ರಾಮ್ ಜಯಂತಿ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ ಮೀಸಲಾತಿ ಬಗ್ಗೆ ಮಾತನಾಡಿದ್ದರು. ಈ ವೇಳೆ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿಯನ್ನೂ ನಡೆಸಿದ್ದಾರೆ. ಕೆಲವೇ ಮೇಲ್ವರ್ಗದ ಜನರ ಕೈಯಲ್ಲಿ ದೇಶದ ಆಡಳಿತವಿದೆ ಎಂದಿದ್ದಾರೆ. ‘ಅದಾನಿ ಕಂಪನಿಯನ್ನೇ ತೆಗೆದುಕೊಳ್ಳಿ. ಅಲ್ಲಿ ಯಾರಾದರೂ ದಲಿತರು, ಆದಿವಾಸಿಗಳು, ಹಿಂದುಳಿದ ವರ್ಗದವರು ಸಿಇಒ ಅಥವಾ ಮೇಲ್ದರ್ಜೆಯ ಅಧಿಕಾರಿಗಳು ಸಿಗುತ್ತಾರಾ?’ ಎಂದು ಪ್ರಶ್ನೆ ಮಾಡಿದ್ದಾರೆ.
ಚೆನ್ನೈ: ಅಮ್ಮ ಬೇಡ ಎಂದು ದೂರವಾಗಿರುವ ಅಪ್ಪನ ಹೆಸರೂ ನನ್ನ ಜೊತೆಗೆ ಬೇಡ ಎಂದು ದಳಪತಿ ವಿಜಯ್ ಪುತ್ರ ಜೇಸನ್ ನಿರ್ಧರಿಸಿದ್ದಾರೆ. ತಮ್ಮ ಹೆಸರಿನ ಜೊತೆಗಿದ್ದ ತಂದೆಯ ಸರ್ ನೇಮ್ ಕೈ ಬಿಡಲು ತೀರ್ಮಾನಿಸಿದ್ದಾರೆ. ದಳಪತಿ ವಿಜಯ್ ಮತ್ತು ಪತ್ನಿ ಸಂಗೀತಾ ವಿಜಯ್ ವಿಚ್ಛೇದನತ್ತ ಮುಖ ಮಾಡಿದ್ದಾರೆ. ಪತಿ ಬೇರೊಬ್ಬ ನಟಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿ ಪತ್ನಿ ಸಂಗೀತಾ ವಿಚ್ಛೇದನಕ್ಕೆ ಕೋರ್ಟ್ ಮೆಟ್ಟಿಲೇರಿದ್ದಾರೆ. ಇದರ ಬೆನ್ನಲ್ಲೇ ವಿಜಯ್ ಪುತ್ರ ಜೇಸನ್ ಇನ್ ಸ್ಟಾಗ್ರಾಂನಲ್ಲಿ ತಂದೆಯ ಖಾತೆಯನ್ನು ಅನ್ ಫಾಲೋ ಮಾಡಿಕೊಂಡಿದ್ದರು.
ಟೆಹ್ರಾನ್: ಇರಾನ್ ನ ತೈಲ ವ್ಯವಹಾರದ ಹೃದಯ ಭಾಗ ಖಾರ್ಗ್ ದ್ವೀಪದ ಮೇಲೆ ಅಮೆರಿಕಾ ಭೀಕರ ಬಾಂಬ್ ದಾಳಿ ನಡೆಸಿದೆ. ಸ್ವತಃ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ವಿಚಾರವನ್ನು ಖಚಿತಪಡಿಸಿದ್ದಾರೆ. ಇದು ಮಧ್ಯಪ್ರಾಚ್ಯ ಇತಿಹಾಸದಲ್ಲೇ ಭೀಕರ ದಾಳಿ ಎನ್ನಲಾಗಿದೆ. ಅಮೆರಿಕಾದ ಸೆಂಟ್ರಲ್ ಕಮಾಂಡ್ ಇರಾನ್ ನ ತೈಲ ಹೃದಯ ಭಾಗವಾದ ಖಾರ್ಗ್ ದ್ವೀಪದ ಮೇಲೆ ದಾಳಿ ನಡೆಸಿದ್ದು ಅಲ್ಲಿನ ಪ್ರತಿಯೊಂದು ಮಿಲಿಟರಿ ಗುರಿಯನ್ನು ಸಂಪೂರ್ಣವಾಗಿ ನಾಶ ಮಾಡಿದ್ದೇವೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಈ ವಾರವಿಡೀ ಬಿಸಿಲಿನ ವಾತಾವರಣವಿತ್ತು. ವಾರಂತ್ಯಕ್ಕೆ ತಾಪಮಾನದಲ್ಲಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ. ಈ ವಾರ ರಾಯಚೂರು, ಬೀದರ್, ಕಲಬುರಗಿ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ವಿಪರೀತ ಬಿಸಿಲಿನ ಝಳ ಕಂಡುಬಂದಿತ್ತು. ಈ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಗಣನೀಯವಾಗಿ ಏರಿಕೆಯಾಗುತ್ತಲೇ ಇತ್ತು. ವಾರಂತ್ಯಕ್ಕೆ ಮತ್ತಷ್ಟು ಬಿಸಿಲು ಹೆಚ್ಚಾಗಲಿದೆ. ರಾಜ್ಯದಲ್ಲಿ ಇಂದು ಮತ್ತು ನಾಳೆ ಗರಿಷ್ಠ ತಾಪಮಾನ 33 ಡಿಗ್ರಿಯಷ್ಟಾಗಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿಯಷ್ಟು ಕಂಡುಬರಲಿದೆ. ಈ ಎರಡೂ ದಿನಗಳಲ್ಲಿ ಶುಭ್ರ ಆಕಾಶವಿರಲಿದ್ದು ಹಗಲಿಡೀ ಬಿಸಿಲಿನ ವಾತಾವರಣವಿರಲಿದೆ. ಮಳೆಯ ಸಂಭವವಿಲ್ಲ.
ಇಂದು ಶನಿವಾರವಾಗಿದ್ದು ಶನಿದೇವನಿಗೆ ವಿಶೇಷವಾದ ದಿನವಾಗಿದೆ. ಜಾತಕದಲ್ಲಿ ಶನಿ ದೋಷವಿದ್ದರೆ ಅಂತಹವರು ಇಂದು ಶನಿ ದೇವನ ಶನಿ ಗ್ರಹ ಪಂಚರತ್ನ ಸ್ತೋತ್ರವನ್ನು ಓದಿ. ಇದುಂ ತುಂಬಾ ಸರಳ ಮತ್ತು ಕನ್ನಡದಲ್ಲಿ ಇಲ್ಲಿದೆ.ನೀಲಾಂಜನ ಸಮಾಭಾಸಂ ರವಿಪುತ್ರಂ ಯಮಾಗ್ರಜಮ್ ।ಛಾಯಾ ಮಾರ್ತಾಂಡ ಸಂಭೂತಂ ತಂ ನಮಾಮಿ ಶನೈಶ್ಚರಮ್ ॥ 1 ॥ ಶನೈಶ್ಚರಾಯ ಶಾಂತಾಯ ಸರ್ವಾಭೀಷ್ಟ ಪ್ರದಾಯಿನೇ ।ಶರಣ್ಯಾಯ ವರೇಣ್ಯಾಯ ಸರ್ವೇಶಾಯ ನಮೋನಮಃ ॥ 2 ॥ ಸ್ತುತ್ಯಾಯ ಸ್ತೋತ್ರ ಗಮ್ಯಾಯ ಭಕ್ತಿ ವಶ್ಯಾಯ ಭಾನವೇ ।ಭಾನುಪುತ್ರಾಯ ಭವ್ಯಾಯ ಪಾವನಾಯ ನಮೋನಮಃ ॥ 3 ॥
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ ಬೈರತಿ ಬಸವರಾಜ್ ಇದೀಗ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಬಸವರಾಜ್ ಅವರಿಗೆ ಷರತ್ತುಬದ್ಧ ಜಾಮೀನು ನೀಡಿದ ಬೆನ್ನಲ್ಲೇ ಇದೀಗ ರಿಲೀಸ್ ಆಗಿದ್ದಾರೆ. ನಗರದ ಪರಪ್ಪನ ಅಗ್ರಹಾರ ಜೈಲಿನಿಂದ ಇಂದು ಬೈರತಿ ಬಸವರಾಜ್ ರಿಲೀಸ್ ಆಗಿದ್ದಾರೆ. ನಿನ್ನೆಯಷ್ಟೇ ಜನಪ್ರತಿನಿಧಿಗಳ
ಮಡಿಕೇರಿ: ಸಿದ್ದಾಪುರ ಗ್ರಾಮದಲ್ಲಿ ಹಲವರನ್ನು ಬಲಿ ಪಡೆದಿದ್ದ ಕಾಡಾನೆಯನ್ನು ಕೊನೆಗೂ ಅರಣ್ಯ ಇಲಾಖೆ ಸಿಬ್ಬಂದಿ ಸೆರೆಹಿಡಿದಿದ್ದಾರೆ. 35 ವರ್ಷದ ಕಾಡಾನೆ ಕಾಫಿ ತೋಟಗಳಲ್ಲಿ ಬೀಡು ಬಿಟ್ಟು ಉಪಟಳ ನೀಡುತ್ತಿತ್ತು. ಸಿದ್ದಾಪುರ ಸಮೀಪ ಕಾಫಿ ಬೆಳೆಗಾರರೊಬ್ಬರನ್ನು ಇತ್ತೀಚೆಗೆ ಬಲಿ ತೆಗೆದುಕೊಂಡಿತ್ತು. ಗ್ರಾಮಸ್ಥರು ಕಾಡಾನೆ ಸೆರೆಹಿಡಿಯುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು.
ಶುಕ್ರವಾರ ಶೇರ್-ಎ-ಬಾಂಗ್ಲಾ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಬಾಂಗ್ಲಾದೇಶ ಮತ್ತು ಪಾಕಿಸ್ತಾನ ನಡುವಿನ ಎರಡನೇ ಏಕದಿನ ಪಂದ್ಯಾಟದ ವೇಳೆ ನಡೆದ ರನ್ ಔಟ್ ದೊಡ್ಡ ಚರ್ಚೆಯನ್ನು ಹುಟ್ಟುಹಾಕಿತು. ಪಾಕಿಸ್ತಾನದ ಇನಿಂಗ್ಸ್ನ 39ನೇ ಓವರ್ನಲ್ಲಿ ಈ ಘಟನೆ ನಡೆದಿದೆ. ಪಾಕಿಸ್ತಾನ ಬ್ಯಾಟರ್ ಸಲ್ಮಾನ್ ಅಲಿ ಆಘಾ ಅವರು ಮಿರಾಜ್ ಎಸೆತಕ್ಕೆ ಚೆಂಡನ್ನು ಬಾರಿಸಲಾಗಲಿಲ್ಲ. ಅಲ್ಲೇ ಚೆಂಡು ಆಘಾ ಅವರ ಕಾಲು ಬುಡದಲ್ಲಿ ಬಿದ್ದಿದೆ. ಅವರು ತಮ್ಮ ಕ್ರೀಸ್ಗೆ ಮರಳಲು ಪ್ರಯತ್ನಿಸುತ್ತಿದ್ದಾಗ ಚೆಂಡು ಅಘಾ ಅವರ ಬ್ಯಾಟ್ಗೆ ಮುಟ್ಟಿತು. ಆಟ ಮುಗಿದಿದೆ ಎಂದು ಅಘಾ ನಂಬಿದ್ದರು.
ಭಾರತದ ಸೂಪರ್ ಸ್ಟಾರ್ ಕುಲದೀಪ್ ಯಾದವ್ ಅವರ ವಿವಾಹ ಮಹೋತ್ಸವ ಮಸ್ಸೂರಿಯಲ್ಲಿ ಭರದಿಂದ ಸಾಗಿದೆ. ದೀರ್ಘಕಾಲದ ತಂಡದ ಸಹ ಆಟಗಾರ ಯುಜ್ವೇಂದ್ರ ಚಾಹಲ್ ಹಲ್ದಿ ಸಮಾರಂಭದ ಗ್ಲಿಂಪ್ಗಳನ್ನು ಹಂಚಿಕೊಂಡಿದ್ದಾರೆ, ಅಲ್ಲಿ ಚಹಾಲ್ ಕುಲದೀಪ್ ಅವರ ಮುಖಕ್ಕೆ ಹಳದಿ ಹಚ್ಚುತ್ತಿರುವುದನ್ನು ಕಾಣಬಹುದು. ಇನ್ಸ್ಟಾಗ್ರಾಮ್ ವೀಡಿಯೊದಲ್ಲಿ, ಚಾಹಲ್, "ಮೇರೆ ಯಾರ್ ಕಿ ಶಾದಿ ಹೈಐಐಐಐ" ಎಂದು ಶೀರ್ಷಿಕೆ ನೀಡಿದ್ದಾರೆ.ಇದಕ್ಕೂ ಮೊದಲು, ಚಾಹಲ್ ಅವರು ಹಬ್ಬಗಳ ಉತ್ಸಾಹವನ್ನು ಮತ್ತು ಕುಲದೀಪ್ ಅವರೊಂದಿಗಿನ ನಿಕಟ ಬಾಂಧವ್ಯವನ್ನು ಹಂಚಿಕೊಂಡರು.
ಅಮರಾವತಿ: ಕಣ್ಣೆದುರಲ್ಲೇ ಪತ್ನಿ ಆತ್ಮಹತ್ಯೆಗೆ ಶರಣಾಗುತ್ತಿದ್ದರು ಪತಿ ಅದನ್ನು ತಡೆಯುವ ಬದಲು ವಿಡಿಯೋ ಮಾಡಲು ಹೋಗಿ ಇದೀಗ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಈ ಘಟನೆ ಆಂಧ್ರಪ್ರದೇಶದ ಕಡಪ ಜಿಲ್ಲೆಯ ಬೋಯಿನಪಲ್ಲಿ ಗ್ರಾಮದಲ್ಲಿ ನಡೆದಿದೆ. ನೇಣಿಗೆ ಶರಣಾದ ಮಹಿಳೆಯನ್ನು ಕೃಷ್ಣವೇಣಿ ಎಂದು ಗುರುತಿಸಲಾಗಿದೆ.ಕೌಟುಂಬಿಕ ಕಲಹದ ಬಳಿಕ ಪತ್ನಿ ಕೃಷ್ಣವೇಣಿ ನೇಣಿಗೆ ಶರಣಾಗಿದ್ದಾಳೆ. ಈ ವೇಳೆ ಪತಿ ಶ್ರೀರಾಮ್ ಶ್ರೀನಿವಾಸ್ ತಡೆಯಲು
ಪಶ್ಚಿಮ ಬಂಗಾಳ: ಅಧ್ಯಕ್ಷೆ ದ್ರೌಪದಿ ಮುರ್ಮು ಅವರ ಇತ್ತೀಚಿನ ಹೇಳಿಕೆಗಳ ನಂತರ ಅವರು ಮತ್ತು ಅವರ ಪಕ್ಷವು ಹೊಡೆತವನ್ನು ಎದುರಿಸುತ್ತಿರುವ ಸಮಯದಲ್ಲಿ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಶುಕ್ರವಾರ ರಾಜ್ಯ ಸರ್ಕಾರವು ವಿವಿಧ ಆದಿವಾಸಿಗಳು, ಹಿಂದುಳಿದ ವರ್ಗಗಳು ಮತ್ತು ದಲಿತ ಸಮುದಾಯಗಳಿಗಾಗಿ ಐದು ಹೊಸ ಸಾಂಸ್ಕೃತಿಕ ಮತ್ತು ಅಭಿವೃದ್ಧಿ ಮಂಡಳಿಗಳನ್ನು ಸ್ಥಾಪಿಸಲು ಉದ್ದೇಶಿಸಿದೆ ಎಂದು ಘೋಷಿಸಿದರು.ಮುಂಡಾ (ಪರಿಶಿಷ್ಟ ಪಂಗಡ), ಕೋರಾ (ಎಸ್ಟಿ), ಡೊಮ್ (ಪರಿಶಿಷ್ಟ ಜಾತಿ), ಕುಂಭಕರ್ (ಇತರ ಹಿಂದುಳಿದ ವರ್ಗ), ಮತ್ತು ಸದ್ಗೋಪೆ (ಒಬಿಸಿ) ಸಮುದಾಯಗಳ ಜನರಿಗೆ ಮಂಡಳಿಗಳನ್ನು ಸ್ಥಾಪಿಸಲಾಗುವುದು. ಇವುಗಳು ರಾಜ್ಯದ ವಿವಿಧ ಸಮುದಾಯಗಳಿಗಾಗಿ ಸ್ಥಾಪಿಸಲಾದ 20 ಕ್ಕೂ ಹೆಚ್ಚು ಮಂಡಳಿಗಳನ್ನು ಸೇರುತ್ತವೆ.
ಪ್ರಯಾಗ್ರಾಜ್ ಕುಂಭಮೇಳದ ಸಮಯದಲ್ಲಿ ಇಂಟರ್ನೆಟ್ ಸೆನ್ಸೇಷನ್ ಆದ ಇಂದೋರ್ ಮಹಿಳೆ ಮೊನಾಲಿಸಾ ಭೋಸ್ಲೆ ಅವರು ಫರ್ಮಾನ್ ಖಾನ್ ಎಂಬ ವ್ಯಕ್ತಿಯನ್ನು ಮದುವೆಯಾದರು. ಇವರ ಮದುವೆ ವಿಡಿಯೋ ವೈರಲ್ ಬೆನ್ನಲ್ಲೇ ಲವ್ ಜಿಹಾದ ಆರೋಪ ಕೇಳಿಬಂದಿದೆ. ಇದೀಗ ಈ ಸಂಬಂಧ ಮೊನಲಿಸಾ ಪತಿ ಫರ್ಮಾನ್ ಖಾನ್ ಅವರು ಪ್ರತಿಕ್ರಿಯಿಸಿ, "ಲವ್ ಜಿಹಾದ್" ಮತ್ತು ತಮ್ಮ ಅಂತರ್ಧರ್ಮೀಯ ವಿವಾಹದ ಸುತ್ತಲಿನ ಧಾರ್ಮಿಕ ಮತಾಂತರದ ಆರೋಪಗಳನ್ನು ತಳ್ಳಿಹಾಕಿದರು.ನವವಿವಾಹಿತರು ವದಂತಿಗಳು ಆಧಾರರಹಿತವೆಂದು ಹೇಳಿದರು ಮತ್ತು ಮದುವೆಯ ನಂತರ ಇಬ್ಬರೂ ಧರ್ಮವನ್ನು
ಬೆಂಗಳೂರು: ಅಡುಗೆ ಹಾಗೂ ವಾಣಿಜ್ಯ ಸಿಲಿಂಡರ್ಗೆ ದೇಶದಲ್ಲಿ ಯಾವುದೇ ಕೊರತೆ ಇಲ್ಲ. ಆದರೆ ಸಿಲಿಂಡರ್ ಪೂರೈಕೆ ವಿಷಯದಲ್ಲಿ ಕಾಂಗ್ರೆಸ್, ಜನರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನ ಮಾಡುತ್ತಾ ಇದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗ್ಯಾಸ್ ಸಿಲಿಂಡರ್ ಸಂಬಂಧ ಜನರನ್ನು ಗೊಂದಲಕ್ಕೀಡು ಮಾಡುವ ಪ್ರಯತ್ನವನ್ನು ಕಾಂಗ್ರೆಸ್ ಮಾಡುತ್ತಾ ಇದೆ. ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಸಹ ಆಗುತ್ತದೆ ಎಂದು ರಾಹುಲ್ ಗಾಂಧಿ ಅವರು ನಿನ್ನೆ ಹೇಳಿದ್ದಾರೆ. ಇದು ಸುಳ್ಳು. ಇಡೀ ದೇಶದಲ್ಲಿ ಈಗಲೂ ಮತ್ತು ಮುಂದೆಯೂ ಪೆಟ್ರೋಲಿಯಂ ಉತ್ಪನ್ನಗಳ ಕೊರತೆ ಆಗುವುದಿಲ್ಲ. ಕೊರತೆ ಆಗದಂತೆ ಪ್ರಧಾನಿ
ಗುವಾಹಟಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ 4,570 ಕೋಟಿ ರೂಪಾಯಿಗಳ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಅನಾವರಣಗೊಳಿಸಿದರು ಮತ್ತು ಅಸ್ಸಾಂನ ಕೊಕ್ರಜಾರ್ ಮತ್ತು ಈಶಾನ್ಯ ಪ್ರದೇಶದಲ್ಲಿ ಸಂಪರ್ಕವನ್ನು ಸುಧಾರಿಸುವ ಉದ್ದೇಶದಿಂದ ಮೂರು ಹೊಸ ರೈಲು ಸೇವೆಗಳಿಗೆ ಚಾಲನೆ ನೀಡಿದರು. ಮೂರು ರೈಲುಗಳು ಕಾಮಾಖ್ಯ-ಚರ್ಲಪಲ್ಲಿ ಅಮೃತ್ ಭಾರತ್ ಎಕ್ಸ್ಪ್ರೆಸ್, ಗುವಾಹಟಿ-ನ್ಯೂ ಜಲ್ಪೈಗುರಿ ಎಕ್ಸ್ಪ್ರೆಸ್ ಮತ್ತು ನಾರಂಗಿ-ಅಗರ್ತಲಾ ಎಕ್ಸ್ಪ್ರೆಸ್. ವಿಧಾನಸಭೆ ಚುನಾವಣೆಗೆ ಮುನ್ನ ಪ್ರಧಾನಿ ಅಸ್ಸಾಂಗೆ 2 ದಿನಗಳ ಭೇಟಿಯಲ್ಲಿದ್ದಾರೆ.ಪ್ರತಿಕೂಲ ಹವಾಮಾನದ ಕಾರಣ ಕೊಕ್ರಜಾರ್ಗೆ ಹೋಗಲು ಸಾಧ್ಯವಾಗದ ಕಾರಣ ಗುವಾಹಟಿಯಿಂದ ವಿಡಿಯೋ ಕಾನ್ಫರೆನ್ಸಿಂಗ್
ಫ್ಲೋರಿಡಾ: ಪಶ್ಚಿಮ ಇರಾಕ್ನಲ್ಲಿ ಗುರುವಾರ ಯುಎಸ್ ಇಂಧನ ತುಂಬುವ ವಿಮಾನವೊಂದು ಪತನಗೊಂಡ ನಂತರ ನಾಲ್ವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಯುನೈಟೆಡ್ ಸ್ಟೇಟ್ಸ್ ಸೆಂಟ್ರಲ್ ಕಮಾಂಡ್ (ಯುಎಸ್ ಸೆಂಟ್ಕಾಮ್) ಶುಕ್ರವಾರ ದೃಢಪಡಿಸಿದೆ. ಬೋಯಿಂಗ್ ಕೆಸಿ -135 ಸ್ಟ್ರಾಟೊಟ್ಯಾಂಕರ್ ಮಾರ್ಚ್ 21 ರ ಸಮಯಕ್ಕೆ ಪೂರ್ವ ವಿಮಾನದಲ್ಲಿ ಸುಮಾರು 21 ಗಂಟೆಗೆ ವಿಮಾನದಲ್ಲಿ ಪತನಗೊಂಡಿತು ಎಂದು ಯುಎಸ್ ಸೆಂಟ್ಕಾಮ್ ತಿಳಿಸಿದೆ. ಪ್ರಸ್ತುತ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ ಎಂದು ಅದು ಹೇಳಿದೆ.
ತಿರುಮಲ ಲಡ್ಡು ತಯಾರಿಕೆಗೆ ಬಳಸುವ ತುಪ್ಪದ ಕಲಬೆರಕೆ ಕುರಿತ ವಿವಾದಕ್ಕೆ ಸಂಬಂಧಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದ್ದು, ಕೇಂದ್ರೀಯ ತನಿಖಾ ದಳದ (ಸಿಬಿಐ) ತನಿಖೆ ಇನ್ನೂ ನಡೆಯುತ್ತಿರುವಾಗ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಹೇಳಿದೆ.ಸಾಂವಿಧಾನಿಕ ಸ್ಥಾನದಲ್ಲಿರುವ ವ್ಯಕ್ತಿಗಳು ಲಡ್ಡು ವಿವಾದದ ಕುರಿತು ಹೇಳಿಕೆ ನೀಡದಂತೆ ತಡೆಯಲು ನಿರ್ದೇಶನ ನೀಡುವಂತೆ ಕೋರಿ ಮಣೂರು ಶ್ರೀನಿವಾಸ್ ಅವರು ಅರ್ಜಿ ಸಲ್ಲಿಸಿದ್ದರು.ಪ್ರಾಣಿಗಳ ಕೊಬ್ಬಿನೊಂದಿಗೆ ತುಪ್ಪವನ್ನು ಕಲಬೆರಕೆ ಮಾಡುವ ಕುರಿತು ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಮತ್ತು ಇತರರು
ಪ.ಬಂಗಾಳ: ಸಾಮಾಜಿಕ ಜಾಲತಾಣದಲ್ಲಿ ಹಿರಿಯ ಮಹಿಳೆಯೊಬ್ಬರು ಪ್ರಧಾನಿ ನರೇಂದ್ರ ಮೋದಿಯ ಚಿತ್ರದ ಪೋಸ್ಟರ್ ಅನ್ನು ಹಿಡಿದುಕೊಂಡು ಮುಗ್ಧವಾಗಿ ಮಾತನಾಡುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. ಪ್ರಧಾನಿ ಮೋದಿಗೆ ಜತೆಗೆ ಮಾತನಾಡುತ್ತಿರುವಂತೆ ಪೋಸ್ಟರ್ ಅನ್ನು ಹಿಡಿದು ಹಿರಿ ಜೀವದ ಮುಗ್ಧತೆ ಸಾಮಾಜಿಕ ಜಾಲತಾಣದಲ್ಲಿ ಮನ ಗೆದ್ದಿದೆ.ಈ ವಿಡಿಯೋದಲ್ಲಿ ಮಹಿಳೆ ‘ಜೈ ಶ್ರೀ ರಾಮ್... ನಾನು ನಿಮಗೆ ಸಾವಿರಾರು ಆಶೀರ್ವಾದಗಳನ್ನು ನೀಡುತ್ತೇನೆ. ನನ್ನ ಮಗ ಬೇರೆ
ನವದೆಹಲಿ: ಸ್ಟೆಪ್ಸ್ ನಲ್ಲಿ ಕೂತುಕೊಳ್ಳೋದು, ಚಹಾ ಸೇವಿಸಿಕೊಂಡು ಎಲ್ ಪಿಜಿ ಬಗ್ಗೆ ಮಾತನಾಡೋದು.. ಹೀಗೆಂದು ಇಂದು ಲೋಕಸಭೆಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ವಿಪಕ್ಷ ನಾಯಕ ರಾಹುಲ್ ಗಾಂಧಿಯನ್ನು ಟ್ರೋಲ್ ಮಾಡಿದ್ದಾರೆ. ಎಲ್ ಪಿಜಿ ಅಭಾವದ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ನಿನ್ನೆ ರಾಹುಲ್ ಗಾಂಧಿ ನೇತೃತ್ವದಲ್ಲಿ ವಿಪಕ್ಷ ನಾಯಕರು ಸಂಸತ್ ಭವನದ ಮೆಟ್ಟಿಲ ಮೇಲೆ ಕುಳಿತು ಪ್ರತಿಭಟನೆ ನಡೆಸಿದ್ದರು. ಈ ವೇಳೆ ರಾಹುಲ್ ಮತ್ತು ಇತರೆ ಸಂಸದರು ಚಹಾ, ಬಿಸ್ಕತ್ ಸೇವಿಸುತ್ತಾ ಕೂತಿದ್ದ ವಿಡಿಯೋ ವೈರಲ್ ಆಗಿತ್ತು. ಇಂದು ಲೋಕಸಭೆಯಲ್ಲಿ ಎಲ್ ಪಿಜಿ ಅಭಾವದ ಬಗ್ಗೆ ಚರ್ಚೆ ನಡೆಯುತ್ತಿತ್ತು. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಾತನಾಡುತ್ತಿದ್ದರು.
ಈಚೆಗೆ ಸಾಮಾಜಿಕ ಜಾಲತಾಣದಲ್ಲಿ ಬಾಲಿವುಡ್ನ ಹಿರಿಯ ನಟಿ ನೀನಾ ಗುಪ್ತಾ ಅವರು 66ನೇ ವಯಸ್ಸಿನಲ್ಲಿ ಮಗುವಿನ ನಿರೀಕ್ಷೆಯಲ್ಲಿದ್ದಾರೆಂಬ ಸುದ್ದಿ ಹರಿದಾಡಿತ್ತು. ಆದರೆ ಈ ಎಲ್ಲ ಟ್ರೋಲ್ಗೆ ನೀನಾ ಅವರು ತಮ್ಮ ಟ್ರೇಡ್ಮಾರ್ಕ್ ಹಾಸ್ಯದೊಂದಿಗೆ ವದಂತಿಗಳಿಗೆ ಪ್ರತಿಕ್ರಿಯಿಸಿ, ವದಂತಿಯನ್ನು ತಳ್ಳಿಹಾಕಿದರು.ನೀನಾ ಗುಪ್ತಾ ಮತ್ತು ಪತಿ ವಿವೇಕ್ ಮೆಹ್ರಾ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ವಿವಾಹದ ಆರತಕ್ಷತೆಯಲ್ಲಿ
ಮೈಸೂರು: ಕೊನೆಯ ಉಸಿರು ಇರುವವರೆಗೂ ರಾಜಕೀಯ ಜೀವನದಲ್ಲಿರುತ್ತೇನೆಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇಲ್ಲಿನ ಮರಕೋಡು ಗ್ರರಾಮದಲ್ಲಿ ಶುಕ್ರವಾರ ಬೀರೇಶ್ವರ ದೇವರ ದೇವಸ್ಥಾನವನ್ನು ಉದ್ಘಾಟಿಸಿ ಅವರು ಮಾತನಾಡಿದರು.ರಾಜಕೀಯ ಬದುಕಿನಲ್ಲಿ ಸೋಲು ಹಾಗೂ ಗೆಲುವು ಎರಡನ್ನೂ ನೋಡಿರುವ ನಾನು, ಜನರ ಸೇವೆ ಮಾಡುವುದನ್ನು ಮಾತ್ರ ಮರೆತಿಲ್ಲ. ಕೈಲಾದಷ್ಟು ಜನ ಸೇವೆ ಮಾಡಿಕೊಂಡು ಬರುತ್ತಿದ್ದೇನೆ ಎಂದರು.ನಾನು ಕ್ಷೇತ್ರಕ್ಕೆ ಈಗ ಜಾಸ್ತಿ ಬರಲು ಆಗುತ್ತಿಲ್ಲ. ಯತೀಂದ್ರ ಸಿದ್ದರಾಮಯ್ಯ ಕ್ಷೇತ್ರವನ್ನು ನೋಡಿಕೊಳ್ಳುತ್ತಾನೆ. ಅಭಿವೃದ್ಧಿ
ಬೆಂಗಳೂರು: ಸರಕಾರವು ಕೂಡಲೇ ಒಳ ಮೀಸಲಾತಿಯ ಗೊಂದಲ ಸರಿಪಡಿಸಬೇಕೆಂದು ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಬಸವರಾಜ ಬೊಮ್ಮಾಯಿ ಅವರು ಆಗ್ರಹಿಸಿದ್ದಾರೆ.ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಮಾರ್ಗದರ್ಶಿ ಸೂಚನೆಯಡಿ ಶೇ 56 ಒಳ ಮೀಸಲಾತಿ ನೀಡುವಂತೆ ನಾವು ಒತ್ತಾಯಿಸುತ್ತೇವೆ. ಇದಕ್ಕೆ ಎಲ್ಲ ರೀತಿಯ ಜನಜಾಗೃತಿಗೆ ನಾವು ಸಿದ್ಧರಿದ್ದೇವೆ. ನಿನ್ನೆ ಮುನಿಯಪ್ಪನವರು 27ರಂದು ವಿಶೇಷ ಸಂಪುಟ ಸಭೆ ಮಾಡುವುದಾಗಿ ಹೇಳಿದ್ದಾರೆ. ಅದನ್ನು ಕಾದು ನೋಡುತ್ತೇವೆ. ಇಲ್ಲವಾದರೆ, ಈ ಜನಾಂಗವೇ ಎದ್ದು ನಿಂತು ಹೋರಾಟ ಮಾಡಲಿದೆ. ಈಗಾಗಲೇ ಒಂದು ದೊಡ್ಡ ಹೋರಾಟ ನಿನ್ನೆ ನಡೆದಿದೆ ಎಂದು ತಿಳಿಸಿದರು.
ಕಾಠ್ಮಂಡು: ನೇಪಾಳ ಚುನಾವಣೆಯಲ್ಲಿ ಬಾಲೇಂದ್ರ ಶಾ ಅವರು ಝಾಪಾ-5 ಕ್ಷೇತ್ರದಿಂದ ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ. ಈಗ ಅವರು ಪ್ರಧಾನಿ ಹುದ್ದೆಯ ರೇಸ್ನಲ್ಲಿದ್ದಾರೆ.ನೇಪಾಳದಲ್ಲಿ ವಿದ್ಯಾರ್ಥಿಗಳ ದಂಗೆಯ ಬಳಿಕ ಪ್ರಧಾನಿಯಾಗಿದ್ದ ಕೆ.ಪಿ. ಓಲಿ ಅವರು ರಾಜೀನಾಮೆ ಸಲ್ಲಿಸಿ ಕೆಳಗಿಳಿದರು. ಬಳಿಕ ನಡೆದ ಚುನಾವಣೆಯಲ್ಲಿ ಬಾಲೇಂದ್ರ ಶಾ ಪ್ರತಿನಿಧಿಸುತ್ತಿರುವ ಪಕ್ಷವು ಬಹುಮತ ಪಡೆದಿದೆ. ಈಗ ಬಾಲೇಂದ್ರ ಅವರೇ ಪ್ರಧಾನಿಯಾಗುತ್ತಾರೆ ಎನ್ನಲಾಗುತ್ತಿದೆ. ವಿಶೇಷವೆಂದರೆ ಬಾಲೇಂದ್ರ ಅವರು ಪುನೀತ್ರಾಜ್ ಕುಮಾರ್ ಅವರ ಅಪ್ಪಟ ಅಭಿಮಾನಿ. 35 ವರ್ಷದ ಅವರು 2016 ರಿಂದ 2018ರ ಅವಧಿಯಲ್ಲಿ ಬೆಂಗಳೂರಿನಲ್ಲಿ ವಾಸಿಸುತ್ತಿದ್ದರು. ನಿಟ್ಟೆ ಮೀನಾಕ್ಷಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಸ್ಟ್ರಕ್ಚರಲ್ ಎಂಜಿನಿಯರಿಂಗ್ನಲ್ಲಿ ಸ್ನಾತಕೋತ್ತರ ಪದವಿ ಪಡೆದುಕೊಂಡಿದ್ದಾರೆ.
ಲಖನೌ: ಭಾರತ ತಂಡದ ಅನುಭವಿ ಸ್ಪಿನ್ನರ್ ಕುಲದೀಪ್ ಯಾದವ್ ಇದೇ ಶನಿವಾರ ಹೊಸ ಇನಿಂಗ್ಸ್ ಆರಂಭಿಸಲಿದ್ದಾರೆ. ಮಾರ್ಚ್ 14 ರಂದು ಮಸ್ಸೂರಿಯ ರೆಸಾರ್ಟ್ನಲ್ಲಿ ತಮ್ಮ ಬಾಲ್ಯದ ಗೆಳತಿ ವಂಶಿಕಾ ಅವರೊಂದಿಗೆ ವಿವಾಹವಾಗಲಿದ್ದಾರೆ. ಟಿ20 ವಿಶ್ವಕಪ್ ಗೆದ್ದ ತಂಡದಲ್ಲಿದ್ದ ಕುಲದೀಪ್ ಅವರ ಮದುವೆಗೆ ಭರ್ಜರಿ ಸಿದ್ಧತೆಗಳು ನಡೆಯುತ್ತಿದೆ. ಈ ವಿವಾಹ ಕಾರ್ಯಕ್ರಮಕ್ಕೆ ಗಣ್ಯರನ್ನು ಆಹ್ವಾನಿಸಲಾಗಿದೆ. ಭಾರತದ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಭಾಗವಹಿಸುವ ಸಾಧ್ಯತೆಯಿದೆ. ಕೊಹ್ಲಿ, ರೋಹಿತ್ ಮತ್ತು ವೇಗಿ ಜಸ್ಪ್ರೀತ್ ಬುಮ್ರಾ ಸೇರಿದಂತೆ ಹಲವಾರು ಕ್ರಿಕೆಟಿಗರು ದಂಪತಿ ಸಮೇತವಾಗಿ ನಿರೀಕ್ಷೆಯಿದೆ. ಕುಲದೀಪ್ ಮದುವೆಗಾಗಿ ಇಡೀ ಹೋಟೆಲ್ ಅನ್ನು ಬುಕ್ ಮಾಡಲಾಗಿದೆ. ದಿ ಸವೊಯ್ನಲ್ಲಿ ಸುಮಾರು 80 ಕೊಠಡಿಗಳನ್ನು ಕಾಯ್ದಿರಿಸಲಾಗಿದೆ ಎಂದು ಹೋಟೆಲ್ ಆಡಳಿತ ಮಂಡಳಿ ದೃಢಪಡಿಸಿದೆ.
ಬೆಂಗಳೂರು: ರಕ್ಷಿತ್ ಶೆಟ್ಟಿ ಜೊತೆಗೆ ಬ್ರೇಕಪ್ ಆಗಲು ಕಾರಣವೇನು ಎಂದು ರಶ್ಮಿಕಾ ಮಂದಣ್ಣ ತಾಯಿ ಮಾತನಾಡಿದ್ದಾರೆ ಎನ್ನಲಾದ ಅಡಿಯೋವೊಂದನ್ನು ವೈರಲ್ ಮಾಡಿದವರ ವಿರುದ್ಧ ನಟಿ ರಶ್ಮಿಕಾ ಮಂದಣ್ಣ ಸಿಡಿದೆದ್ದಿದ್ದು ಕನ್ನಡದಲ್ಲೇ ತಿರುಗೇಟು ಕೊಟ್ಟಿದ್ದಾರೆ. 8 ವರ್ಷಗಳ ಹಿಂದಿನ ಕತೆಯನ್ನು ಈಗ ಎಳೆದು ತಂದು ನನ್ನ ಬಗ್ಗೆ ಮತ್ತು ನನ್ನ ಕುಟುಂಬದ ಬಗ್ಗೆ ಕೆಟ್ಟದಾಗಿ ಮಾತನಾಡಿದರೆ ಸಹಿಸಿಕೊಂಡು ಕೂರಲು ಸಾಧ್ಯವಿಲ್ಲ. ಈಗಾಗಲೇ ಅಡಿಯೋ ಹರಿಬಿಟ್ಟವರು 24 ಗಂಟೆಯೊಳಗೆ ಅದನ್ನು ಡಿಲೀಟ್ ಮಾಡಬೇಕು ಎಂದು ರಶ್ಮಿಕಾ ಎಚ್ಚರಿಕೆ ಕೊಟ್ಟಿದ್ದಾರೆ.
ನವದೆಹಲಿ: ನಮ್ಮ ಸರ್ಕಾರವಿದ್ದರೂ ಕೆಲಸವಾಗ್ತಿಲ್ಲ ಎಂದು ಕೈ ಶಾಸಕ ನಾರಾಯಣಸ್ವಾಮಿ ನೀಡಿರುವ ಹೇಳಿಕೆ ಉಲ್ಲೇಖಿಸಿ ವಿಪಕ್ಷ ನಾಯಕ ಆರ್ ಅಶೋಕ್ ದಲಿತ ಸಿಎಂ ಎನ್ನುವುದೆಲ್ಲಾ ನಾಟಕ ಎನ್ನುವುದಕ್ಕೆ ಇದೇ ಸಾಕ್ಷಿ ಎಂದು ವ್ಯಂಗ್ಯ ಮಾಡಿದ್ದಾರೆ. ಕ್ಷೇತ್ರದ ಕೆಲಸಗಳಿಗೆ ನಾವೇ ಅಧಿಕಾರಿಗಳನ್ನು ಭೇಟಿ ಮಾಡಿದರೂ ಕೆಲಸವಾಗುತ್ತಿಲ್ಲ. ಸಮಸ್ಯೆ ಹೇಳಲು ಹೋದರೆ ಸಚಿವರೂ ಸಿಗುತ್ತಿಲ್ಲ ಎಂದು ಶಾಸಕ ನಾರಾಯಣಸ್ವಾಮಿ ಬಹಿರಂಗವಾಗಿ ಅಳಲು ತೋಡಿಕೊಂಡಿದ್ದರು. ಇದಕ್ಕೆ ಟಾಂಗ್ ಕೊಟ್ಟಿರುವ ಆರ್ ಅಶೋಕ್ ‘ದಲಿತ ಮುಖ್ಯಮಂತ್ರಿ" ಎಂಬುದು ತಮ್ಮ ಕುರ್ಚಿಗೆ ಕಂಟಕ ಬಂದಾಗಲೆಲ್ಲ ಸಿದ್ದರಾಮಯ್ಯ ಅವರು ಉರುಳಿಸುವ ದಾಳ ಎನ್ನುವುದಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ?
ಮುಂಬೈ: ಒಂದು ಕಡೆ ಪಾಕಿಸ್ತಾನವೇ ನಮ್ಮ ಜೊತೆ ಕ್ರಿಕೆಟ್ ಆಡಲ್ಲ ಎಂದು ಡ್ರಾಮಾ ಮಾಡುತ್ತಿರುವಾಗ ಸನ್ ರೈಸರ್ಸ್ ಹೈದರಾಬಾದ್ ತಂಡದ ಮಾಲಕಿಯಾಗಿರುವ ಕಾವ್ಯಾ ಮಾರನ್ ಗೆ ಇದೆಲ್ಲಾ ಬೇಕಿತ್ತಾ ಎಂದು ಫ್ಯಾನ್ಸ್ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಹಂಡ್ರೆಡ್ಸ್ ಹರಾಜು 2026 ರಲ್ಲಿ ಸನ್ ರೈಸರ್ಸ್ ಲೀಡ್ಸ್ ತಂಡವಿದೆ. ಐಪಿಎಲ್ ನ ಸನ್ ರೈಸರ್ಸ್ ಹೈದರಾಬಾದ್ ತಂಡದ ಮಾಲಕಿ ಕಾವ್ಯಾ ಮಾರನ್ ಒಡೆತನದ ತಂಡವಿದು. ಈ ಲೀಗ್ ಹರಾಜು ಪ್ರಕ್ರಿಯೆಯಲ್ಲಿ ಸನ್ ರೈಸರ್ಸ್ ಗೆ ಕಾವ್ಯಾ ಪಾಕಿಸ್ತಾನದ ಆಟಗಾರನನ್ನು ಖರೀದಿಸಿದ್ದಾರೆ.
ಬೆಂಗಳೂರು: ಅಡಿಕೆ ಬೆಲೆ ಕಳೆದ ವಾರ ಏರಿಕೆ-ಇಳಿಕೆಯಾಗಿತ್ತು. ವಾರದ ಆರಂಭದಲ್ಲೇ ಅಡಿಕೆ ಬೆಲೆ ಕೊಂಚ ಇಳಿಕೆಯಾಗಿತ್ತು. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ. ಕಳೆದ ವಾರ ಅಡಿಕೆ ಬೆಲೆಯಲ್ಲಿ ಕೊಂಚ ಏರಿಕೆಯಾಗಿತ್ತು. ಇದು ಬೆಳೆಗಾರರಿಗೆ ಸಮಾಧಾನ ತಂದಿತ್ತು. ಆದರೆ ಕಳೆದ ಕೆಲವು ದಿನಗಳಿಂದ ಸತತವಾಗಿ ಬೆಲೆ ಇಳಿಕೆ ಕಂಡುಬರುತ್ತಿದೆ. ಕೆಲವು ವರ್ಗದ ಅಡಿಕೆ ಬೆಲೆಯಲ್ಲಿ ಇಂದು ಮತ್ತೆ ಇಳಿಕೆ ಕಂಡುಬರುತ್ತಿದೆ. ಇಂದು ಹೊಸ ಅಡಿಕೆ ಬೆಲೆ 460 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ ಯಥಾಸ್ಥಿತಿಯಲ್ಲಿದ್ದು 530 ರೂ. ಗಳಾಗಿದೆ.
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತುಇತರೆ ಚಿನ್ನದ ದರ ಇಳಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತವಾಗಿ ಬೆಲೆ ಏರಿಳಿಕೆಯಾಗುತ್ತಲೇ ಇತ್ತು. ಆದರೆ ಈ ವಾರದ ಆರಂಭದಲ್ಲೇ ಪರಿಶುದ್ಧ ಚಿನ್ನದ ದರ ಭಾರೀ ಏರಿಕೆಯಾಗಿತ್ತು. ಪರಿಶುದ್ಧ ಚಿನ್ನದ ದರ ನಿನ್ನೆ 1,66,060.00 ರೂ.ಗಳಿತ್ತು. ಆದರೆ ಇಂದು ಇಳಿಕೆಯಾಗಿದ್ದು 1,65,745.00 ರೂ.ಗಳಷ್ಟಿದೆ.
ಆಂದ್ರಪ್ರದೇಶ: ಹೆದ್ದಾರಿಯಲ್ಲಿ ಗೋ ಸಾಗಣೆ ಮಾಡುತ್ತಿದ್ದವರಿಂದ ಪೊಲೀಸ್ ಅಧಿಕಾರಿಯೊಬ್ಬರು ಬಿಂದಾಸ್ ಆಗಿ ಲಂಚ ಪಡೆಯುತ್ತಿರುವ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆಂಧ್ರಪ್ರದೇಶ ಕೃಷ್ಣ ಜಿಲ್ಲೆಯಲ್ಲಿ ನಡೆದ ಘಟನೆ ಇದು ಎನ್ನಲಾಗಿದೆ. ಪೊಲೀಸರು ರಕ್ಷಣೆ ಮಾಡಬೇಕಾದವರು. ಕಳ್ಳತನ ತಡೆಯಬೇಕಾದವರು. ಆದರೆ ಇತ್ತೀಚೆಗೆ ನಮ್ಮ ದೇಶದಲ್ಲಿ ದಕ್ಷ ಪೊಲೀಸರ ನಡುವೆ ಒಬ್ಬೊಬ್ಬ ಇಂತಹ ಭ್ರಷ್ಟರೂ ಇರುತ್ತಾರೆ. ತೆಲಂಗಾಣದ ಕೃಷ್ಣ ಜಿಲ್ಲೆಯ ಹೆದ್ದಾರಿಯೊಂದರಲ್ಲಿ ಒಂದು ಟ್ರಕ್ ನಲ್ಲಿ ಗೋವುಗಳನ್ನು ಸಾಗಿಸಲಾಗುತ್ತಿತ್ತು. ಈ ಲಾರಿಯನ್ನು ಪೊಲೀಸ್ ಅಧಿಕಾರಿಯೊಬ್ಬ ಅಡ್ಡಗಟ್ಟುತ್ತಾರೆ.
ಬೆಂಗಳೂರು: ಕನ್ನಡ ಕಿರುತೆರೆಯ ಖ್ಯಾತ ನಟಿ ಸಂಜನಾ ಬುರ್ಲಿ ಈಗ ಕಲರ್ಸ್ ಕನ್ನಡ ವಾಹಿನಿ ಧಾರವಾಹಿಯಲ್ಲಿ ಪ್ರಸಾರವಾಗುತ್ತಿರುವ ಶ್ರೀಗಂಧದ ಗುಡಿ ಧಾರವಾಹಿಯಿಂದಲೂ ಹೊರಬಂದಿದ್ದಾರೆ. ಈ ಹಿಂದೆ ಪುಟ್ಟಕ್ಕನ ಮಕ್ಕಳು ಧಾರವಾಹಿಯಲ್ಲಿ ಸ್ನೇಹ ಪಾತ್ರ ಮಾಡುತ್ತಿದ್ದ ಸಂಜನಾ ಸಾಕಷ್ಟು ಅಭಿಮಾನಿಗಳನ್ನು ಸಂಪಾದಿಸಿದ್ದರು. ಆದರೆ ಧಾರವಾಹಿ ರೋಚಕ ಘಟ್ಟದಲ್ಲಿದ್ದಾಗ ತಮ್ಮ ವಿದ್ಯಾಭ್ಯಾಸದ ಕಾರಣಕ್ಕೆ ಧಾರವಾಹಿಯಿಂದ ಹೊರಬಂದಿದ್ದರು. ಈ ಧಾರವಾಹಿಯಿಂದ ಹೊರಬಂದ ಕೆಲವು ಸಮಯದ ನಂತರ ಸಂಜನಾ ಕಲರ್ಸ್ ವಾಹಿನಿಯ ಶ್ರೀಗಂಧದ ಗುಡಿ ಧಾರವಾಹಿಗೆ ನಾಯಕಿಯಾಗಿದ್ದರು.
ರೈಲಿನಲ್ಲಿ ಸೀಟ್ ವಿಚಾರದಲ್ಲಿ ಓರ್ವ ಮಹಿಳೆ ಮತ್ತು ಪುರುಷನ ನಡುವೆ ಕಿತ್ತಾಟ ನಡೆದಿದ್ದು ಹೊಡೆದಾಡುವ ಹಂತಕ್ಕೆ ಹೋಗಿದೆ. ಈ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ರೈಲಿನಲ್ಲಿ ಪ್ರಯಾಣಿಸುವಾಗ ಅದರಲ್ಲೂ ಜನರಲ್ ಭೋಗಿಯಲ್ಲಿ ಪ್ರಯಾಣ ಮಾಡುವಾಗ ಸೀಟ್ ಗಾಗಿ ಕಿತ್ತಾಡುವ ಅನೇಕ ಘಟನೆಗಳು ನಮ್ಮ ಕಣ್ಣ ಮುಂದೆ ಕಾಣುತ್ತದೆ. ಇಂತಹದ್ದೇ ಒಂದು ಘಟನೆ ಇಲ್ಲಿ ಅತಿರೇಕಕ್ಕೆ ಹೋಗಿದೆ. ಸೀಟ್ ವಿಚಾರಕ್ಕೆ ಓರ್ವ ಮಹಿಳೆ ಮತ್ತೊಬ್ಬ ಯುವಕನ ಜೊತೆ ವಾಗ್ವಾದ ನಡೆಸುತ್ತಿರುತ್ತಾಳೆ. ಆ ಮಹಿಳೆ ಎಷ್ಟು ರೊಚ್ಚಿಗೆದ್ದಿದ್ದಳು ಎಂದರೆ ಕೈಯಲ್ಲಿ ಚಪ್ಪಲಿ ತೆಗೆದುಕೊಂಡು ಹೊಡೆಯುವುದಾಗಿ ಯುವಕನಿಗೆ ಬೈಗುಳ ಸುರಿಮಳೆಗೈಯುತ್ತಲೇ ಇದ್ದಳು.
ಬೆಂಗಳೂರು: ಕರ್ನಾಟಕದಲ್ಲಿ ರೆಸಾರ್ಟ್ ರಾಜಕೀಯ ಶುರುವಾಗಿದೆ. ಡಿಕೆ ಶಿವಕುಮಾರ್ ಅವರೇ ನೇತೃತ್ವ ವಹಿಸಿದ್ದಾರೆ. ಆದರೆ ರೆಸಾರ್ಟ್ ಗೆ ಶಿಫ್ಟ್ ಆಗಿರುವವರು ಕರ್ನಾಟಕ ಕಾಂಗ್ರೆಸ್ ಶಾಸಕರಲ್ಲ. ಅಸ್ಸಾಂ ಶಾಸಕರು. ಅಸ್ಸಾಂನಲ್ಲಿ ಚುನಾವಣೆಗೆ ಮೊದಲೇ ಕಾಂಗ್ರೆಸ್ ಶಾಸಕರಿಗೆ ಆಪರೇಷನ್ ಕಮಲದ ಭೀತಿ ಎದುರಾಗಿದೆ. ಕಾಂಗ್ರೆಸ್ ಶಾಸಕರನ್ನು ತನ್ನತ್ತ ಸೆಳೆಯಲು ಬಿಜೆಪಿ ಪ್ರಯತ್ನ ಮಾಡಿದೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಅಸ್ಸಾಂನ 14 ಶಾಸಕರನ್ನು ಕರ್ನಾಟಕಕ್ಕೆ ಕರೆ ತರಲಾಗಿದೆ. ನಿನ್ನೆ ರಾತ್ರಿ ಭುವನೇಶ್ವರದಿಂದ ವಿಮಾನದಲ್ಲಿ ಬೆಂಗಳೂರಿಗೆ ಬಂದಿಳಿದಿರುವ ಶಾಸಕರನ್ನು ಬಿಗಿ ಬಂದೋಬಸ್ತ್ ನಲ್ಲಿ ಬಿಡದಿಯ ವಂಡರ್ ಲಾ ರೆಸಾರ್ಟ್ ಗೆ ಕರೆದೊಯ್ಯಲಾಗಿದೆ.
ನ್ಯೂಯಾರ್ಕ್: ತೈಲ ಬೆಲೆ ಹೆಚ್ಚಾದಷ್ಟು ಅಮೆರಿಕಾಗೆ ಹೆಚ್ಚು ಹಣ ಬರುತ್ತದೆ ಎನ್ನುವ ಮೂಲಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಅಸಲಿ ಬಣ್ಣ ಬಯಲು ಮಾಡಿದ್ದಾರೆ. ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಯುದ್ಧದ ಸನ್ನಿವೇಶದಿಂದ ಜಾಗತಿಕವಾಗಿ ತೈಲ ಪೂರೈಕೆ ಸರಿಯಾಗಿ ಆಗುತ್ತಿಲ್ಲ. ಇದರಿಂದಾಗಿ ಬಹುತೇಕ ರಾಷ್ಟ್ರಗಳಲ್ಲಿ ತೈಲ ಬೆಲೆ ಭಾರೀ ಹೆಚ್ಚಾಗಿದೆ. ಭಾರತಕ್ಕೂ ತೈಲ ಬೆಲೆಯ ಬಿಸಿ ತಾಕಿದೆ. ಇದರ ನಡುವೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತೈಲ ಬೆಲೆ ಹೆಚ್ಚಾದರೆ ನಮಗೇ ಲಾಭ ಎಂದಿದ್ದಾರೆ. ತೈಲ ಬೆಲೆ ಹೆಚ್ಚಾದಾಗ ಅಮೆರಿಕಾ ಸಹಜವಾಗಿಯೇ ಹೆಚ್ಚು ಹಣ ಗಳಿಸುತ್ತದೆ.
ಮಂಗನೊಂದು ಆಹಾರ ಅರಸಿಕೊಂಡು ಅಡುಗೆ ಮನೆಗೇ ನುಗ್ಗಿತ್ತು. ಬಾಳೆಹಣ್ಣಿಗಾಗಿ ಹುಡುಕಾಡಿದ ಮಂಗನ ಫನ್ನಿ ವಿಡಿಯೋ ಇಲ್ಲಿದೆ ನೋಡಿ. ಮಂಗಗಳು ಆಹಾರ ಅರಸಿಕೊಂಡು ಕೆಲವೊಮ್ಮೆ ಮನೆಯೊಳಗೇ ನುಗ್ಗಿಬಿಡುತ್ತವೆ. ಮಂಗಗಳಿಗೆ ಬಾಳೆಹಣ್ಣು ಎಂದರೆ ಪ್ರಾಣ. ಅಷ್ಟೊಂದು ಇಷ್ಟಪಟ್ಟು ತಿನ್ನುತ್ತವೆ. ಅದೇ ರೀತಿ ಇಲ್ಲೊಂದು ಮಂಗ ಬಾಳೆಹಣ್ಣು ಅರಸಿಕೊಂಡು ಅಡುಗೆ ಮನೆಯೊಳಗೇ ಬಂದಿದೆ.ಅಡುಗೆ ಮನೆಯೊಳಗೆ ಮಂಗ ಎಲ್ಲಾ ವಸ್ತುಗಳನ್ನು ತಡಕಾಡಿ ಬಾಳೆಹಣ್ಣಿಗಾಗಿ ಹುಡುಕಾಡಿದೆ. ಆದರೆ ಸಿಕ್ಕಿಲ್ಲ. ಈ ವೇಳೆ ಮನೆ ಮಾಲಿಕನೂ ಮಂಗನಿಗೆ ಜೊತೆಯಾಗಿದ್ದಾರೆ. ಪ್ರತಿಯೊಂದು ವಸ್ತುವನ್ನೂ ತೆರೆದು ತೋರಿಸಿದ್ದಾರೆ.
ತಿರುವನಂತಪುರಂ: ಇತ್ತೀಚೆಗೆ ನಡೆದ ಟಿ20 ವಿಶ್ವಕಪ್ 2026 ರಲ್ಲಿ ಟೀಂ ಇಂಡಿಯಾ ಕಪ್ ಗೆಲ್ಲಲು ಪ್ರಮುಖ ಕಾರಣವಾಗಿದ್ದ ಹೀರೋ ಸಂಜು ಸ್ಯಾಮ್ಸನ್. ಇದೀಗ ಅವರು ಲೋಕಲ್ ಟೀ ಅಂಗಡಿಯೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ವಿಶ್ವಕಪ್ ಗೆದ್ದ ಬಳಿಕ ಎಲ್ಲಾ ಆಟಗಾರರೂ ತಮ್ಮ ತವರಿಗೆ ಹೋಗಿದ್ದು ಅದ್ಧೂರಿ ಸ್ವಾಗತ ಸಿಕ್ಕಿದೆ. ಸಂಜು ಸ್ಯಾಮ್ಸನ್ ಕೂಡಾ ಇದಕ್ಕೆ ಹೊರತಲ್ಲ. ಬಹುತೇಕ ಕ್ರಿಕೆಟಿಗರು ವಿಶ್ವಕಪ್ ಮುಗಿದ ಬೆನ್ನಲ್ಲೇ ವಿದೇಶ ಪ್ರವಾಸ ಹೋಗಿದ್ದಾರೆ. ಆದರೆ ಸಂಜು ಸ್ಯಾಮ್ಸನ್ ತಮ್ಮ ಕುಟುಂಬದವರ ಜೊತೆ ಕೇರಳದ ಮನೆಯಲ್ಲಿ ಕಾಲ ಕಳೆಯುತ್ತಿದ್ದಾರೆ.
ಬೆಂಗಳೂರು: ಕರ್ನಾಟಕದಲ್ಲಿ ಬಿಸಿಲಿನ ತಾಪ ದಿನೇ ದಿನೇ ಹೆಚ್ಚಾಗುತ್ತಿದೆ. ಇಂದು ಕೆಲವು ಜಿಲ್ಲೆಗಳಲ್ಲಿ ತಾಪಮಾನ ಮತ್ತಷ್ಟು ಹೆಚ್ಚಾಗಲಿದ್ದು ಜನರಿಗೆ ಎಚ್ಚರಿಕೆಯಿಂದಿರುವುದು ಅಗತ್ಯ. ಇಂದಿನ ಹವಾಮಾನ ವರದಿ ಇಲ್ಲಿದೆ ನೋಡಿ. ರಾಜ್ಯದಲ್ಲಿ ಕಳೆದ ಒಂದು ವಾರದಿಂದ ವಿಪರೀತ ಬಿಸಿಲು, ತಾಪಮಾನದಲ್ಲಿ ಗಣನೀಯ ಏರಿಕೆ ಕಂಡುಬರುತ್ತಿದೆ. ಮುಂದಿನ ಮೂರು ದಿನಗಳಿಗೆ ತಾಪಮಾನದಲ್ಲಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ. ಮಾರ್ಚ್ 12 ರಿಂದ 15 ರೊಳಗೆ ಬಿಸಿಲು ಮತ್ತಷ್ಟು ಹೆಚ್ಚಾಗಲಿದೆ. ಅದರಲ್ಲೂ ವಿಶೇಷವಾಗಿ ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 37 ಡಿಗ್ರಿ ತಲುಪುವ ಸಾಧ್ಯತೆಯಿದೆ.
ಶುಕ್ರವಾರ ಮಹಾಲಕ್ಷ್ಮೀ ದೇವಿಗೆ ವಿಶೇಷವಾದ ದಿನವಾಗಿದೆ. ಜೀವನದಲ್ಲಿ ಸುಖ, ಸೌಖ್ಯ, ಐಶ್ವರ್ಯ, ಸಮೃದ್ಧಿಯಾಗಬೇಕೆಂದರೆ ಲಕ್ಷ್ಮೀ ದೇವಿಯ ಪೂಜೆ ಮಾಡಿ. ಇಂದು ಲಕ್ಷ್ಮೀ ದೇವಿಯ ಕಲ್ಯಾಣವೃಷ್ಟಿ ಸ್ತವಃ ಸ್ತೋತ್ರವನ್ನು ಓದಿ.ಕಲ್ಯಾಣವೃಷ್ಟಿಭಿರಿವಾಮೃತಪೂರಿತಾಭಿ--ರ್ಲಕ್ಷ್ಮೀಸ್ವಯಂವರಣಮಂಗಲದೀಪಿಕಾಭಿಃ ।ಸೇವಾಭಿರಂಬ ತವ ಪಾದಸರೋಜಮೂಲೇನಾಕಾರಿ ಕಿಂ ಮನಸಿ ಭಾಗ್ಯವತಾಂ ಜನಾನಾಮ್ ॥ 1 ॥ ಏತಾವದೇವ ಜನನಿ ಸ್ಪೃಹಣೀಯಮಾಸ್ತೇತ್ವದ್ವಂದನೇಷು ಸಲಿಲಸ್ಥಗಿತೇ ಚ ನೇತ್ರೇ ।ಸಾಂನಿಧ್ಯಮುದ್ಯದರುಣಾಯುತಸೋದರಸ್ಯತ್ವದ್ವಿಗ್ರಹಸ್ಯ ಪರಯಾ ಸುಧಯಾಪ್ಲುತಸ್ಯ ॥ 2 ॥ ಈಶತ್ವನಾಮಕಲುಷಾಃ ಕತಿ ವಾ ನ ಸಂತಿಬ್ರಹ್ಮಾದಯಃ ಪ್ರತಿಭವಂ ಪ್ರಲಯಾಭಿಭೂತಾಃ ।ಏಕಃ ಸ ಏವ ಜನನಿ ಸ್ಥಿರಸಿದ್ಧಿರಾಸ್ತೇಯಃ ಪಾದಯೋಸ್ತವ ಸಕೃತ್ಪ್ರಣತಿಂ ಕರೋತಿ ॥ 3 ॥
ಬೆಂಗಳೂರು: ಕಳೆದ ನವೆಂಬರ್ನಲ್ಲಿ ಬಂಡೀಪುರ ಮತ್ತು ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ ಸಫಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಂಡಿರುವ ಬಗ್ಗೆ ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ಅವರು ಸಮರ್ಥಿಸಿಕೊಂಡಿದ್ದಾರೆ. ಇಂದು ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ ಖಂಡ್ರೆ, ರಾಜ್ಯ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿ, ವನ್ಯಜೀವಿಗಳ ಸರಣಿ ದಾಳಿಯ ನಂತರ ಮಾನವ ಜೀವಗಳನ್ನು ರಕ್ಷಿಸಲು ಈ ಕ್ರಮ ತೆಗೆದುಕೊಳ್ಳಲಾಗಿತ್ತು ಎಂದರು.ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು, ಸಫಾರಿಗಳ ಅಮಾನತುಗೊಳಿಸುವಿಕೆಯಿಂದ 4,000ಕ್ಕೂ ಹೆಚ್ಚು ಜನ ತಮ್ಮ
ಬೆಂಗಳೂರು: ಸನ್ನಡತೆ ಆಧಾರದ ಮೇಲೆ ರಾಜ್ಯದ ವಿವಿಧ ಜೈಲಿನಿಂದ 31 ಕೈದಿಗಳನ್ನು ಬಿಡುಗಡೆ ಮಾಡಿ ಆದೇಶ ಹೊರಡಿಸಲಾಗಿದೆ.ಅದರಂತೆ ಶುಕ್ರವಾರ ಪರಪ್ಪನ ಅಗ್ರಹಾರ ಜೈಲಿನಿಂದ 14 ಮಂದಿ, ಮೈಸೂರು 2, ಬೆಳಗಾವಿ 2, ಕಲಬುರಗಿ 2, ಶಿವಮೊಗ್ಗ 1, ವಿಜಯಪುರ 5, ಬಳ್ಳಾರಿ 3, ಧಾರವಾಡ 1, ಶಿವಮೊಗ್ಗ ಮಹಿಳಾ ಬ್ಯಾರೆಕ್ನಿಂದ ಒಬ್ಬರನ್ನು ಬಿಡುಗಡೆಗೆ ಆದೇಶ ಮಾಡಲಾಗಿದೆ. 54 ಜೀವಾವಧಿ ಶಿಕ್ಷಾ ಬಂಧಿಗಳ ವ್ಯಕ್ತಿತ್ವ & ನಡತೆ ಪರಿಶೀಲಿಸಿ 31 ಜನ ಕೈದಿಗಳ ಬಿಡುಗಡೆಗೆ ಆದೇಶಿಸಲಾಗಿದೆ.
ಬೆಂಗಳೂರು: ಎಲ್ಪಿಜಿ ಸಿಲಿಂಡರ್ ಕೊರತೆ ಸಂಬಂದ ರಾಜ್ಯದ ಸಂಸದರು ನ್ಯಾಯ ಒದಗಿಸಲಿ ಎಂದು ಡಿಕೆ ಶಿವಕುಮಾರ್ ಹೇಳಿದರು. ಈ ಸಂಬಂಧ ಸುದ್ದಿಗಾರರ ಜತೆ ಮಾತನಾಡಿದ ಅವರು, ಎಲ್ಪಿಜಿ ಸಿಲಿಂಡರ್ ಕೊರತೆಯಿಂದ ಸಾರ್ವಜನಿಕರು ತೊಂದರೆ ಎದುರಿಸುತ್ತಿದ್ದಾರೆ. ಈ ವಿಚಾರವಾಗಿ ಬಿಜೆಪಿಯ ಯಾವುದೇ ಸಂಸದರು ಬಾಯಿ ಬಿಡುತ್ತಿಲ್ಲ ಎಂದರು.ಇಂಧನ ಬೆಲೆ ಏರಿಕೆಯಿಂದ ಜನರು ಪರದಾಡುತ್ತಿದ್ದಾರೆ. ಈ ವಿಚಾರದಲ್ಲಿ ರಾಜ್ಯ ಸರ್ಕಾರ ಏನೂ ಮಾಡಲು ಆಗುವುದಿಲ್ಲ. ಕೇಂದ್
ಕನ್ನಡದ ಹಿರಿಯ ಪತ್ರಕರ್ತ ಕೆ.ಜೆ.ಕುಮಾರ್ ನಿಧನಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಅವರು ಭಾವುಕ ಸಂದೇಶವನ್ನು ಬರೆದುಕೊಂಡು ಹಂಚಿಕೊಂಡಿದ್ದಾರೆ. ತಮ್ಮ ಬಣ್ಣದ ಬದುಕಿನ ಆರಂಭಿಕ ಪ್ರಯಾಣದದಲ್ಲಿ ಕುಮಾರ್ ಅವರ ಬೆಂಬಲವನ್ನು ನೆನಪಿಸಿಕೊಂಡು ರಜನಿಕಾಂತ್ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ನಲ್ಲಿ ಕನ್ನಡದಲ್ಲಿ ತಮ್ಮ ಗೌರವವನ್ನು ಪೋಸ್ಟ್ ಮಾಡಿದ್ದಾರೆ.ಕುಮಾರ್ ಅವರು 74 ನೇ ವಯಸ್ಸಿನಲ್ಲಿ ತೀವ್ರ ಹೃದಯಾಘಾತದಿಂದ ಬುಧವಾರ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರ
ಡಿಸೆಂಬರ್ 4, 2022 ರಂದು ಉದ್ಯಮಿ ಸೊಹೈಲ್ರನ್ನು ಕೈಹಿಡಿದ ನಟಿ ಹನ್ಸಿಕಾ ಮೋಟ್ವಾನಿ ಅವರು ದಾಂಪತ್ಯ ಜೀವನದಲ್ಲಿ ಬಿರುಕು ಹಿನ್ನೆಲೆ ಇದೀಗ ಅಧಿಕೃತವಾಗಿ ವಿಚ್ಛೇದನ ಪಡೆದಿದ್ದಾರೆ.ಕಳೆದ ವರ್ಷ ಆಗಸ್ಟ್ನಲ್ಲಿ ಹನ್ಸಿಕಾ ತನ್ನ ಇನ್ಸ್ಟಾಗ್ರಾಮ್ ಖಾತೆಯಿಂದ ತನ್ನ ಮದುವೆಯ ಫೋಟೋಗಳನ್ನು ಅಳಿಸಿಹಾಕಿದ್ದರು. ಇದು ಅವರ ಮದುವೆಯಲ್ಲಿ ತೊಂದರೆಯ ಬಗ್ಗೆ ವದಂತಿಗಳನ್ನು ಹುಟ್ಟುಹಾಕಿತು. ದಂಪತಿಗಳು ಸ್ವಲ್ಪ ಸಮಯದಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ ಎಂದು ವರದಿಗಳು ಸೂಚಿಸಿವೆ.
ಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣ ಆರೋಪಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರಿಗೆ 82ನೇ ಜನಪ್ರತಿನಿಧಿಗಳ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ. ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬೈರತಿ ಬಸವರಾಜ್ ಅವರಿಗೆ ಸುಪ್ರೀಂ ಕೋರ್ಟ್ನಲ್ಲಿ ನಿರೀಕ್ಷಣಾ ಜಾಮೀನು ವಜಾ ಬಳಿಕ ಅವರನ್ನು ಬಂಧಿಸಲಾಗಿತ್ತು. ಫೆ.12 ರಂದು ಅಹಮದಾಬಾದ್ನಿಂದ ಬೆಂಗಳೂರಿಗೆ ಆಗಮಿಸಿದ್ದ ಬೈರತಿ ಬಸವರಾಜ್ ಅವರನ್ನು ಪೊಲೀಸರು ಬಂಧಿಸಿದ್ದರು.
ನವದೆಹಲಿ: ಹಾರ್ದಿಕ್ ಪಾಂಡ್ಯ ಅವರಿಗೆ ಭಾರತ ಧ್ವಜಕ್ಕೆ ಅವಮಾನ ಮಾಡಿದ್ದಾರೆಂದು ಪುಣೆಯ ವಕೀಲ ವಾಜಿದ್ ಖಾನ್ ಅವರು ಆರೋಪ ಮಾಡಿದ್ದಾರೆ. ಧ್ವಜವನ್ನು ಹೆಗಲ ಮೇಲೆ ಇಟ್ಟುಕೊಂಡು ಗೆಳತಿ ಜತೆಗೆ ಅನುಚಿತ ಸನ್ನೆಗಳನ್ನು ಮಾಡುವ ಮೂಲಕ ಅಗೌರವ ತೋರಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಪುಣೆಯ ವಕೀಲ ವಾಜಿದ್ ಖಾನ್ ಆರೋಪ ಮಾಡಿದ್ದಾರೆ.T20 ವಿಶ್ವಕಪ್ ಫೈನಲ್ನಲ್ಲಿ ನ್ಯೂಜಿಲೆಂಡ್ ರಾಷ್ಟ್ರೀಯ ಕ್ರಿಕೆಟ್ ತಂಡದ ವಿರುದ್ಧ ಐತಿಹಾಸಿಕ ವಿಜಯದ ನಂತರ, ವಿಶ್ವದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಹಾಜರಿದ್ದ ಆಟಗಾರರ ಕುಟುಂಬಗಳು ಸಹ ಮೈದಾನಕ್ಕೆ ಬಂದವು.
ಬೆಂಗಳೂರು: ರಕ್ಷಿತ್ ಶೆಟ್ಟಿ ಜತೆಗಿನ ಮದುವೆ ಮುರಿದು ಬೀಳಲು ಕಾರಣ ಹೇಳಿರುವ ಬಗ್ಗೆ ರಶ್ಮಿಕಾ ಮಂದಣ್ಣರ ತಾಯಿ ಮಾತನಾಡಿದ್ದು ಎನ್ನಲಾದ ಆಡಿಯೋ ಬಗ್ಗೆ ನಟಿ ಗರಂ ಆಗಿದ್ದಾರೆ. ಮಾನಹಾನಿಕರ ಅಥವಾ ಗೌಪ್ಯತೆಯನ್ನು ಉಲ್ಲಂಘಿಸುವ ವಿಷಯವನ್ನು ಪ್ರಸಾರ ಮಾಡಿದ್ದಕ್ಕಾಗಿ "ವ್ಯಕ್ತಿಗಳು, ಪ್ರಭಾವಿಗಳು ಮತ್ತು ವೇದಿಕೆಗಳ" ಮೇಲೆ ರಶ್ಮಿಕಾ ಮಂದಣ್ಣ ವಾಗ್ದಾಳಿ ನಡೆಸಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ಈ ಸಂಬಂಧ ಆಕ್ರೋಶ ಹೊರಹಾಕಿ ಬರೆದುಕೊಂಡಿದ್ದಾರೆ.