ಬೆಳ್ತಂಗಡಿ: ಇಲ್ಲಿ ಓಡಿಲ್ನಾಳ ಗ್ರಾಮದ 15 ವರ್ಷದ ಬಾಲಕ ಸುಮಂತ್ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟುಂಬಸ್ಥರಿಗೆ ಅನುಮಾನ ಬರಲು ಪ್ರಮುಖ ಕಾರಣಗಳು ಇಲ್ಲಿವೆ. ಸುಮಂತ್ ತಂದೆಯ ಪ್ರಕಾರ ಅವರ ಕುಟುಂಬಸ್ಥರಿಗೆ ಯಾರೂ ಶತ್ರುಗಳಿಲ್ಲ. ಹಾಗಿದ್ದರೂ ಇದು ಸಹಜ ಸಾವಲ್ಲ, ಯಾರೋ ಕೊಲೆ ಮಾಡಿ ಬಾವಿಗೆ ಎಸೆದಿದ್ದಾರೆ ಎಂಬ ಅನುಮಾನ ಅವರಿಗಿದೆ. ಇದಕ್ಕೆ ಪ್ರಮುಖ ಕಾರಣವೆಂದರೆ ಆತ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರೆ ನೀರು ಕುಡಿಯುತ್ತಿದ್ದ. ಆದರೆ ನೀರು ಕುಡಿದಿಲ್ಲ. ಇನ್ನು ಬಾವಿಯವರೆಗೂ ರಕ್ತದ ಕಲೆಯಿತ್ತು. ಆದರೆ ಬಾವಿಯಲ್ಲಿ ಯಾವುದೇ ರಕ್ತದ ಅಂಶ ಕಂಡುಬಂದಿಲ್ಲ.
ಬೆಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮುಂದುವರಿಸುವ ಬಗ್ಗೆ ಕೇಂದ್ರ ಸಚಿವ, ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಮಹತ್ವದ ಹೇಳಿಕೆ ನೀಡಿದ್ದಾರೆ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಕೆಲವು ಸ್ಥಳೀಯ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಇದರ ಬಗ್ಗೆ ಇಂದು ಮಾಧ್ಯಮಗಳು ಎಚ್ ಡಿ ಕುಮಾರಸ್ವಾಮಿಯವರನ್ನು ಪ್ರಶ್ನೆ ಮಾಡಿದ್ದಾರೆ. ಇದರ ಜೊತೆ ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಗೆಲುವಿನ ಬಗ್ಗೆಯೂ ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಉತ್ತರಿಸಿದ ಅವರು ‘ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟಕ್ಕೆ ಬರುತ್ತದೆ ಎಂದು ನೀವೇ ಹೇಳಿದ್ದೀರಿ.
ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದನೆ ಮಾಡಿದ ಆರೋಪದಲ್ಲಿ ಕಾಂಗ್ರೆಸ್ ಮುಖಂಡನ ವಿರುದ್ಧ ಬೀದಿಗಿಳಿದು ಹೋರಾಟ ನಡೆಸಲು ಸಿದ್ಧತೆ ನಡೆಸಿದೆ. ಧಮ್ಕಿ ಹಾಕಿದ ಪ್ರಕರಣದಲ್ಲಿ ಶಿಡ್ಲಘಟ್ಟ ಕ್ಷೇತ್ರದ 2023ರ ಕಾಂಗ್ರೆಸ್ ಅಭ್ಯರ್ಥಿ ರಾಜೀವ್ ಗೌಡ ವಿರುದ್ಧ ಕ್ರಮ ತೆಗೆದುಕೊಳ್ಳದೇ ಹೋದ್ರೆ ಬೀದಿಗಳಿದು ಹೋರಾಟ ಮಾಡೋದಾಗಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ.ಶಿಡ್ಲಘಟ್ಟದಲ್ಲಿ ಪೌರಾಯುಕ್ತೆ ಮೇಲೆ ತುಚ್ಚವಾಗಿ ಕಾಂಗ್ರೆಸ್ ಮುಖಂಡ ಮಾತಾಡಿದ್ದಾರೆ. ರಾಜ್ಯ ಸರ್ಕಾರ ದ್ವೇಷ ಭಾಷಣ ಬಿಲ್ ತಂತು. ದ್ವೇಷ ಭಾಷಣ ಬಿಲ್ ಕಾಂಗ್ರೆಸ್ ನವರಿಗೆ ಅನ್ವಯ ಆಗೊಲ್ಲ. ವಿಪಕ್ಷಗಳು, ಮಾಧ್ಯಮಗಳಿಗೆ ಮಾತ್ರ ಅನ್ವಯ ಆಗುತ್ತದೆ. ಸರ್ಕಾರದ ವಿರುದ್ಧ ಮಾತಾಡೋರ ಧ್ವನಿ ಕಟ್ಟಿ ಹಾಕೋದಕ್ಕೆ ಮಾತ್ರ ಈ ಬಿಲ್ ತಂದಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದರು.
ಬೆಂಗಳೂರು: ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ನ 12ನೇ ಆವೃತ್ತಿಯು ಅಂತಿಮ ಘಟ್ಟಕ್ಕೆ ಬಂದಿದೆ. ಫೈನಲ್ ವಾರದಲ್ಲಿ ಆರು ಮಂದಿ ಸ್ಪರ್ಧಿಗಳು ಪ್ರಶಸ್ತಿಗೆ ಕಾದಾಟ ನಡೆಸುತ್ತಿದ್ದಾರೆ. ಈ ಮಧ್ಯೆ ವಾಹಿನಿಯ ಪ್ರೋಗ್ರಾಂ ಹೆಡ್ಗೆ ಶಾಕ್ ಎದುರಾಗಿದೆ. ರಣಹದ್ದು ಬಗ್ಗೆ ಬಿಗ್ಬಾಸ್ ಕಾರ್ಯಕ್ರಮದಲ್ಲಿ ತಪ್ಪಾದ ಮಾಹಿತಿ ಹರಡಿದ ಆರೋಪವಿದೆ. ರಣಹದ್ದು ಸಂರಕ್ಷಣಾ ಟ್ರಸ್ಟ್ ವತಿಯಿಂದ ದೂರು ನೀಡಿದ್ದ ಹಿನ್ನೆಲೆ, ಬಿಗ್ ಬಾಸ್ ಪ್ರೋಗ್ರಾಂ ಹೆಡ್ಗೆ ಅರಣ್ಯ ಇಲಾಖೆಯಿಂದ ತಿಳುವಳಿಕೆ ನೋಟಿಸ್ ಜಾರಿ ನೀಡಲಾಗಿದೆ.ವಾರದ ಕಥೆ ಕಿಚ್ಚನ ಜೊತೆ ಕಾರ್ಯಕ್ರಮದಲ್ಲಿ ರಣಹದ್ದು ಹೊಂಚು ಹಾಕಿ ಸಂಚು ಮಾಡಿ ಲಬಕ್ ಅಂತ ಹಿಡಿಯುವುದು ಎಂದು ತಪ್ಪು ಮಾಹಿತಿ ಹರಡಲಾಗಿದೆ ಎಂದು ಆರೋಪಿಸಲಾಗಿದೆ.
ಬೆಳಗಾವಿ: ಸಂವಿಧಾನ ಮತ್ತು ಒಕ್ಕೂಟ ವ್ಯವಸ್ಥೆ ಬಗ್ಗೆ ಪದೇಪದೇ ಮಾತನಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಒಕ್ಕೂಟ ವ್ಯವಸ್ಥೆ ಹಾಳು ಮಾಡುವ ಕುತಂತ್ರ ನಡೆಸುತ್ತಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಾಗ್ದಾಳಿ ನಡೆಸಿದ್ದಾರೆ.ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸುಧಾರಣೆಗಳ ಜೊತೆ ಮನ್ ರೇಗಾವನ್ನು ವಿಬಿ ಜಿ ರಾಮ್ ಜಿ ಯೋಜನೆ ಎಂದು ಪರಿವರ್ತಿಸಿ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಜೀ ಅವರು ಜಾರಿಗೊಳಿಸುತ್ತಿದ್ದಾರೆ. ದೇಶದ ಬಡವರು, ಕಾರ್ಮಿಕರಿಗೆ ಅನುಕೂಲ ಆಗಬೇಕೆಂದು ಈ ಕಾಯ್ದೆ ತಂದಿದ್ದಾರೆ.
ಬಾಳೆಹಣ್ಣಿಗೆ ಸ್ವಲ್ಪ ಕಾಳುಮೆಣಸಿನ ಪೌಡರ್ ಮಾಡಿ ಸೇವನೆ ಮಾಡಿ. ಇದರಿಂದ ಆಗುವ ಲಾಭ ತಿಳಿದರೆ ಖಂಡಿತಾ ನೀವು ಈ ಅಭ್ಯಾಸವನ್ನು ಬಿಡಲ್ಲ. ಬಾಳೆಹಣ್ಣಿನಲ್ಲಿ ಪೊಟ್ಯಾಶಿಯಂ ಅಂಶ, ವಿಟಮಿನ್ ಬಿ6, ಮ್ಯಾಗ್ನಿಶಿಯಂ ಹೇರಳವಾಗಿದೆ. ಇದು ಶಕ್ತಿವರ್ಧಕ ಕೂಡಾ. ಕಾಳುಮೆಣಸಿನಲ್ಲಿ ರೋಗ ನಿರೋಧಕ ಶಕ್ತಿಯೂ ಅಧಿಕವಾಗಿದೆ. ಬಾಳೆಹಣ್ಣಿನ ಜೊತೆಗೆ ಕಾಳುಮೆಣಸಿನ ಪೌಡರ್ ಹಾಕಿ ಸೇವನೆ ಮಾಡುವುದಕ್ಕೆ ಆಯುರ್ವೇದಲ್ಲಿ ಮಹತ್ವವಿದೆ. ಬಾಳೆಹಣ್ಣಿನ ಜೊತೆಗೆ ಪೆಪ್ಪರ್ ಪೌಡರ್ ಹಾಕಿ ಸೇವಿಸುವುದರಿಂದ ಯಕೃತ್ ವಿಷಮುಕ್ತಗೊಳಿಸಲು ಸಹಕರಿಸುತ್ತದೆ. ಅಲ್ಲದೆ ಇದು ಜೀರ್ಣಕ್ರಿಯೆಗೆ ಉತ್ತಮವಾಗಿದೆ. ಹೀಗಾಗಿ ಹೊಟ್ಟೆ ಉಬ್ಬರ, ಹೊಟ್ಟೆಯಲ್ಲಿ ಆಗುವ ಕಿರಿ ಕಿರಿಗಳನ್ನು ದೂರ ಮಾಡುತ್ತದೆ.
ಮುಂಬೈ: ವಾಣಿಜ್ಯ ನಗರಿ ಮುಂಬೈನ ನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಭರ್ಜರಿ ಮುನ್ನಡೆಯತ್ತ ಸಾಗುತ್ತಿದ್ದಂತೇ ಇತ್ತ ಶಿವಸೇನಾ ನಾಯಕ ಸಂಜಯ್ ರಾವತ್ ಅಕ್ರಮವಾಗಿದೆ ಎಂದು ಆರೋಪಿಸಿದ್ದಾರೆ.ಬೃಹನ್ ಮುಂಬೈನಗರಪಾಲಿಕೆ ಚುನಾವಣೆ ಮತ ಎಣಿಕೆ ಪ್ರಕ್ರಿಯೆ ಜಾರಿಯಲ್ಲಿದೆ. ಈಗಿನ ಟ್ರೆಂಡ್ ಪ್ರಕಾರ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿ ಭರ್ಜರಿ ಮುನ್ನಡೆಯಲ್ಲಿದೆ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಪ್ರಾಬಲ್ಯ ಸಾಧಿಸುವ ನಿರೀಕ್ಷೆಯಲ್ಲಿದ್ದ ಶಿವಸೇನೆ ಉದ್ಧವ್ ಬಣಕ್ಕೆ ತೀವ್ರ ಹಿನ್ನಡೆಯಾಗಿದೆ. ಮುಂಬೈನ ಒಟ್ಟು 227 ಸ್ಥಾನಗಳ ಪೈಕಿ 42 ಸ್ಥಾನಗಳಲ್ಲಿ ಬಿಜೆಪಿ, 13 ಸ್ಥಾನಗಳಲ್ಲಿ ಶಿವಸೇನೆ ಶಿಂಧೆ ಬಣ, 28 ಕ್ಷೇತ್ರಗಳಲ್ಲಿ ಉದ್ಧವ್ ಶಿವಸೇನೆ ಬಣ ಮುನ್ನಡೆಯಲ್ಲಿದೆ.
ಲಕ್ನೋ: ಆಡಳಿತದ ವಿಚಾರದಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಲು ಹಿಂದೆ ಮುಂದೆ ನೋಡಲ್ಲ. ಆದರೆ ಮಕ್ಕಳ ವಿಚಾರದಲ್ಲಿ ಅವರು ತಾವೇ ಮಗುವಾಗಿ ಬಿಡುತ್ತಾರೆ. ಇದೀಗ ಮಗುವೊಂದು ಸಿಎಂ ಯೋಗಿ ಬಳಿ ಚಿಪ್ಸ್ ಬೇಕೆಂದು ಬೇಡಿಕೆಯಿಟ್ಟ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂಕ್ರಾಂತಿ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದರು. ಗೋರಕ್ ಪುರದಲ್ಲಿ ನಡೆದ ಕಾರ್ಯಕ್ರಮ ಅದಾಗಿತ್ತು. ಸಾಕಷ್ಟು ಜನ ಮಕ್ಕಳೂ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ ಬಾಲಕನೊಬ್ಬನನ್ನು ಸಿಎಂ ಯೋಗಿ ಹತ್ತಿರ ಕರೆದು ಮಾತನಾಡಿಸಿದ್ದಾರೆ.
ಬೆಂಗಳೂರು: ಅಡಿಕೆ ಬೆಲೆ ನಿನ್ನೆ ಕೊಂಚ ಇಳಿಕೆಯಾಗಿತ್ತು. ಆದರೆ ಇಂದು ಮತ್ತೆ ಬೆಲೆ ಯಥಾಸ್ಥಿತಿಯಲ್ಲಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ. ಕಳೆದ ವಾರ ಅಡಿಕೆ ಬೆಲೆಯಲ್ಲಿ ಏರಿಕೆ ಆರಂಭವಾಗಿತ್ತು. ಸತತವಾಗಿ ನಾಲ್ಕು ದಿನಗಳ ಕಾಲ ಏರಿಕೆಯಾಗಿದ್ದು ರೈತರ ಸಂತಸಕ್ಕೆ ಕಾರಣವಾಗಿತ್ತು. ಆದರೆ ಇಂದು ಯಾವುದೇ ವ್ಯತ್ಯಾಸ ಕಂಡುಬರುತ್ತಿಲ್ಲ. ಇಂದು ಹೊಸ ಅಡಿಕೆ ಬೆಲೆ 460 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ ನಿನ್ನೆ ನಿನ್ನೆ 10 ಇಳಿಕೆಯಾಗಿ 535 ರೂ. ಗಳಾಗಿತ್ತು. ಇಂದೂ ಅಷ್ಟೇ ಇದೆ. ಡಬಲ್ ಚೋಲ್ ಬೆಲೆಯೂ 535 ರೂ.ಗಳಷ್ಟಾಗಿದೆ.
ಬೆಂಗಳೂರು: ಚಿನ್ನದ ಬೆಲೆ ಮತ್ತೆ ಏರಿಕೆ ಮತ್ತು ಇಳಿಕೆಯಾಗುತ್ತಲೇ ಇದೆ. ಆದರೆ ಇಂದು ವಾರದ ಆರಂಭದಲ್ಲೇ ಪರಿಶುದ್ಧ ಚಿನ್ನದ ದರ ಏರಿಕೆಯಾದರೆ ಮತ್ತು ಇತರೆ ಚಿನ್ನದ ದರ ಇಳಿಕೆ ಕಂಡಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತ ಏರಿಕೆ ಮತ್ತು ಇಳಿಕೆ ಕಂಡಿತ್ತು. ಆದರೆ ಈ ವಾರದ ಆರಂಭದಲ್ಲೇ ಚಿನ್ನದ ದರ ಏರಿಕೆಯಾಗಿದೆ. ಇಂದು ಮತ್ತೆ ಪರಿಶುದ್ಧ ಚಿನ್ನದ ದರ ಭಾರೀ ಏರಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ಮೊನ್ನೆ 1,44,560.00 ರೂ.ಗಳಿತ್ತು. ಇಂದು 1,46,510.00 ರೂ.ಗಳಷ್ಟಾಗಿದೆ.
ಬೆಳ್ತಂಗಡಿ: ಇಲ್ಲಿನ 9 ನೇ ತರಗತಿ ವಿದ್ಯಾರ್ಥಿ ಸುಮಂತ್ ನಿಗೂಢ ಸಾವು ಪ್ರಕರಣ ಈಗ ದಕ್ಷಿಣ ಕನ್ನಡ ಜಿಲ್ಲೆಯ ಜನರಲ್ಲಿ ಸಾಕಷ್ಟು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಸಾವಿನ ಹಿಂದಿನ ದಿನ ಬಾಲಕ ಸುಮಂತ್ ಏನು ಮಾಡಿದ್ದ ಎಂದು ಆತನ ತಂದೆ ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದಾರೆ. ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಸುಮಂತ್ ಪಕ್ಕದ ದೇವಸ್ಥಾನಕ್ಕೆ ಧನು ಪೂಜೆಗೆಂದು ವಾರಕ್ಕೊಮ್ಮೆ ಸ್ನೇಹಿತರ ಜೊತೆ ಹೋಗುತ್ತಿದ್ದ. ಈ ಬಾರಿಯೂ ಅದೇ ರೀತಿ ಬೆಳ್ಳಂ ಬೆಳಿಗ್ಗೆ ಮನೆಯಿಂದ ಹೊರಟಿದ್ದಾನೆ. ಆದರೆ ಅತ್ತ ದೇವಸ್ಥಾನಕ್ಕೂ ಬರಲಿಲ್ಲ, ಮನೆಗೂ ವಾಪಸಾಗಲಿಲ್ಲ. ಬಳಿಕ ಆತನ ಮೃತದೇಹ ಮನೆಯಿಂದ 500 ಮೀ ದೂರದಲ್ಲಿರುವ ಬಾವಿಯಲ್ಲಿ ಪತ್ತೆಯಾಗಿದೆ.
ಅಣ್ಣಾವ್ರು ಮತ್ತು ರೆಬಲ್ ಸ್ಟಾರ್ ಅಂಬರೀಶ್ ನಡುವಿನ ಬಾಂಧವ್ಯದ ಬಗ್ಗೆ ಎಲ್ಲರಿಗೂ ಗೊತ್ತೇ ಇದೆ. ಈ ಹಿಂದೆ ಖಾಸಗಿ ವಾಹಿನಿಗೆ ನೀಡಿದ್ದ ಸಂದರ್ಶನದಲ್ಲಿ ಅಂಬರೀಶ್, ಅಣ್ಣಾವ್ರ 35 ವರ್ಷಗಳ ಪದ್ಧತಿ ಮುರಿದಿದ್ದ ವಿಚಾರವನ್ನು ಸ್ವಾರಸ್ಯಕರವಾಗಿ ಹೇಳಿದ್ದರು. ಆ ಸಂದರ್ಶನದಲ್ಲಿ ಅವರು ಹೇಳಿದ್ದೇನು ಇಲ್ಲಿದೆ ನೋಡಿ ವಿವರ. ಕೆಆರ್ ಎಸ್ ನಲ್ಲಿ ಶೂಟಿಂಗ್ ಇತ್ತು. ಮಕ್ಕಳೆಲ್ಲಾ ಏನು ಮಾಮ ನಮಗೆಲ್ಲಾ ಊಟ ಕೊಡಿಸಲ್ವಾ ಎಂದ್ರು. ಆಯ್ತು ಮಾಡಿಸ್ತೀನಿ ಎಂದು ನಮ್ಮ ತಾಯಿಗೆ ಹೇಳಿ ಬಾಡೂಟ ಮಾಡಿಸಿದೆ. ನಮ್ಮ ತಾಯಿಗೆ ರಾಜಕುಮಾರ್ ಎಂದರೆ ಬಲೇ ಭಕ್ತಿ. ಹೀಗಾಗಿ ಸುಮಾರು 25-30 ಜನಕ್ಕೆ ಅವರೊಬ್ಬರೇ ನಾಲ್ಕೈದು ಥರಾ ಅಡಿಗೆ ಮಾಡಿದ್ರು.
ಮುಂಬೈ: ಡಬ್ಲ್ಯುಪಿಎಲ್ 2026 ರಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಗುಜರಾತ್ ಜೈಂಟ್ಸ್ ರೂಪದಲ್ಲಿ ಕಠಿಣ ಎದುರಾಳಿ ಮುಖಾಮುಖಿಯಾಗಲಿದೆ. ಗುಜರಾತ್ ಜೈಂಟ್ಸ್ ಈ ಬಾರಿ ಉತ್ತಮ ಪ್ರದರ್ಶನವನ್ನು ನೀಡುತ್ತಾ ಬಂದಿದೆ. ವಿಶೇಷವಾಗಿ ಆರ್ ಸಿಬಿಯಿಂದಲೇ ವಲಸೆ ಹೋಗಿರುವ ಸೋಫಿ ಡಿವೈನ್ ತಂಡಕ್ಕೆ ಪ್ರಬಲ ಶಕ್ತಿಯಾಗಿದ್ದಾರೆ. ಹೀಗಾಗಿ ಆರ್ ಸಿಬಿಗೆ ಇಂದು ಗೆಲುವು ಅಷ್ಟು ಸುಲಭವಲ್ಲ. ಹಾಗಿದ್ದರೂ ಕಳೆದ ಎರಡೂ ಪಂದ್ಯಗಳಲ್ಲಿ ಆರ್ ಸಿಬಿ ಪ್ರದರ್ಶನ ಅದ್ಭುತವಾಗಿತ್ತು. ಬೌಲಿಂಗ್ ಮತ್ತು ಬ್ಯಾಟಿಂಗ್, ಫೀಲ್ಡಿಂಗ್ ನಲ್ಲೂ ಒಬ್ಬರಲ್ಲಾ ಒಬ್ಬರು ತಂಡಕ್ಕೆ ಆಧಾರವಾಗುತ್ತಿರುವುದು ಸ್ಮೃತಿ ಪಡೆಗೆ ಪ್ಲಸ್ ಪಾಯಿಂಟ್.
ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಹಿರಿಯ ನಟಿ ಉಮಾಶ್ರೀ ಮುಖ್ಯ ಪಾತ್ರದಲ್ಲಿ ನಟಿಸುತ್ತಿರುವವ ಪುಟ್ಟಕ್ಕನ ಮಕ್ಕಳು ಧಾರವಾಹಿ ಕೊನೆಯ ದಿನದ ಚಿತ್ರೀಕರಣ ಮುಕ್ತಾಯವಾಗಿದೆ. ಪುಟ್ಟಕ್ಕನ ಮಕ್ಕಳು ಧಾರವಾಹಿ 1200 ಸಂಚಿಕೆಗಳನ್ನು ಪೂರ್ತಿ ಮಾಡಿ ಮುನ್ನುಗ್ಗುತ್ತಿದೆ. ಈ ಧಾರವಾಹಿಯಲ್ಲಿ ಏಕಾಂಗಿಯಾಗಿ ತನ್ನ ನಾಲ್ವರು ಹೆಣ್ಣು ಮಕ್ಕಳನ್ನು ಬೆಳೆಸಿ ಸ್ವಾವಲಂಬಿಯಾಗಿ ಬದುಕುವ ಪುಟ್ಟಕ್ಕ ಎಂಬ ಛಲಗಾತಿ ಮಹಿಳೆಯ ಕತೆಯಿದೆ. ಈ ಧಾರವಾಹಿ ಹಲವು-ಏಳು ಬೀಳುಗಳನ್ನು ಕಂಡು ಇದುವರೆಗೆ 1202 ಸಂಚಿಕೆಗಳನ್ನು ಕಂಡಿದೆ.
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆಗೆ ಜೀವ ಬೆದರಿಕೆ ಹಾಕಿದ್ದ ರಾಜೀವ್ ಗೌಡಗೆ ಕಾಂಗ್ರೆಸ್ ಶೋಕಾಸ್ ನೋಟಿಸ್ ನೀಡಿದೆ. ಆದರೆ ಈ ವಿಚಾರವಾಗಿ ಕಾಮೆಂಟ್ ಮಾಡಿರುವ ನೆಟ್ಟಿಗರು ಜೀವ ಬೆದರಿಕೆ ಹಾಕಿದ್ದಕ್ಕೆ ಬರೀ ನೋಟಿಸ್ ಅಷ್ಟೇನಾ ಎಂದಿದ್ದಾರೆ. ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರ ಜೈದ್ ಖಾನ್ ಅಭಿನಯದ ಕಲ್ಟ್ ಸಿನಿಮಾ ಬ್ಯಾನರ್ ತೆರವು ಮಾಡಿದ ಪ್ರಕರಣಕ್ಕೆ ಸಂಬಂದಿಸಿದಂತೆ ಪೌರಾಯುಕ್ತೆಗೆ ರಾಜೀವ್ ಗೌಡ ಕರೆ ಮಾಡಿ ಬೆಂಕಿ ಹಚ್ಚುವುದಾಗಿ ಜೀವ ಬೆದರಿಕೆ ಹಾಕಿದ್ದರು.
ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಚರ್ಚೆಯಲ್ಲಿರುವಾಗಲೇ ಡಿಸಿಎಂ ಡಿಕೆ ಶಿವಕುಮಾರ್ ಮಹತ್ವದ ಹೆಜ್ಜೆಯಿಟ್ಟಿದ್ದಾರೆ. ಇಂದಿನಿಂದ ಅವರು ದೆಹಲಿ ಪ್ರವಾಸ ಮಾಡುತ್ತಿದ್ದಾರೆ. ತಮಿಳುನಾಡಿಗೆ ತೆರಳುವ ಮಾರ್ಗದಲ್ಲಿ ಮೈಸೂರಿಗೆ ಬಂದಿದ್ದ ರಾಹುಲ್ ಗಾಂಧಿ ನಾಯಕತ್ವ ಬದಲಾವಣೆ ವಿಚಾರ ಇಲ್ಲಿ ಚರ್ಚೆ ಬೇಡ. ದೆಹಲಿಗೆ ಬನ್ನಿ ಎಂದು ಸಂದೇಶ ನೀಡಿದ್ದರು ಎನ್ನಲಾಗಿತ್ತು. ಅದರಂತೆ ಡಿಕೆಶಿ ಮತ್ತು ಸಿದ್ದರಾಮಯ್ಯ ಜನವರಿ 16 ಕ್ಕೆ ದೆಹಲಿ ಪ್ರವಾಸ ಮಾಡಲಿದ್ದಾರೆ ಎನ್ನಲಾಗಿತ್ತು. ಇದೀಗ ಇಂದಿನಿಂದ ಎರಡು ದಿನಗಳ ಕಾಲ ಡಿಕೆ ಶಿವಕುಮಾರ್ ದೆಹಲಿ ಪ್ರವಾಸ ಮಾಡುತ್ತಿದ್ದಾರೆ.
ನವದೆಹಲಿ: ರಾಮಜನ್ಮಭೂಮಿ ಅಯೋಧ್ಯೆಯ ರಾಮಮಂದಿರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ನೀಡಲು ಮುಂದಾಗಿರುವುದು ಈಗ ಕೆಲವು ಹಿಂದೂ ಪರ ಸಂಘಟನೆಗಳು, ಸಂತರ ವಿರೋಧಕ್ಕೆ ಕಾರಣವಾಗಿದೆ. ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಸದ್ಯದಲ್ಲೇ ರಾಮಮಂದಿರಕ್ಕೆ ಭೇಟಿ ನೀಡಲಿದ್ದಾರೆ ಎಂಬ ಸುದ್ದಿಯಿದೆ. ಆದರೆ ಈ ಬಗ್ಗೆ ಕಾಂಗ್ರೆಸ್ ಇನ್ನೂ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ. ಆದರೆ ಇದಕ್ಕೂ ಮೊದಲೇ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ರಾಹುಲ್ ಗಾಂಧಿ ರಾಮಮಂದಿರ ಭೇಟಿಗೆ ಅವಕಾಶ ಕೊಡಬಾರದು ಎಂದು ಜ್ಯೋತಿರ್ ಮಠದ ಶಂಕರಾಚಾರ್ಯ ಸ್ವಾಮೀಜಿ ಅವಿಮುಕ್ತೇಶ್ವರಾನಂದ ಅವರು ವಿರೋಧ ವ್ಯಕ್ತಪಡಿಸಿದದಾರೆ.
ಬೆಂಗಳೂರು: ಕೆಲವರಿಗೆ ವಾಹನವನ್ನು ರಸ್ತೆಯಲ್ಲಿ ಶೋಕಿ ಮಾಡೋ ಖಯಾಲಿ ಇರುತ್ತದೆ. ಕಾರು ಇದೆ ಅಂತ ಈ ರೀತಿ ಏನಾದ್ರೂ ಮಾಡಲು ಹೋದರೆ ದಂಡ ತೆರಬೇಕಾಗುತ್ತದೆ ಎಂದು ಬೆಂಗಳೂರು ಸಂಚಾರಿ ಪೊಲೀಸರು ವಿಡಿಯೋವೊಂದನ್ನು ಹಂಚಿಕೊಂಡು ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘಿಸುವ, ರಸ್ತೆಯಲ್ಲಿ ಸ್ಟಂಟ್ ಮಾಡುವ ಅನೇಕ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತವೆ. ಈ ಕಾರಣಕ್ಕೆ ಅನೇಕರು 1,11,500 ರೂ. ದಂಡ ತೆತ್ತಿದ್ದಾರೆ. ಹಾಗಿದ್ದರೂ ಜನ ಬುದ್ಧಿ ಕಲಿಯಲ್ಲ.
ಬೆಂಗಳೂರು: ರಾಜ್ಯದಲ್ಲಿ ಈ ವಾರದ ಆರಂಭದಲ್ಲಿ ಮಳೆಯಾಗಿತ್ತು. ಇಂದು ಮಳೆಯಾಗುವ ಸಾಧ್ಯತೆಯಿದೆಯಾ, ಇಲ್ಲಿದೆ ಇಂದಿನ ಹವಾಮಾನ ವರದಿ. ಈ ವಾರ ರಾಜ್ಯದಲ್ಲಿ ಮಳೆ ಮತ್ತು ಚಳಿ ಎರಡೂ ಕಂಡುಬಂದಿತ್ತು. ವಾಯು ಭಾರ ಕುಸಿತದಿಂದ ಈ ವಾರ ಹವಾಮಾನ ವೈಪರೀತ್ಯ ಕಂಡುಬಂದಿತ್ತು. ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿತ್ತು. ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣವಿತ್ತು. ಆದರೆ ಇಂದು ರಾಜ್ಯದಲ್ಲಿ ಸರಾಸರಿ ಗರಿಷ್ಠ ತಾಪಮಾನ 28 ಡಿಗ್ರಿಯಷ್ಟಿರಲಿದೆ. ಕನಿಷ್ಠ ತಾಪಮಾನ 17 ಡಿಗ್ರಿಯಷ್ಟು ಕಂಡುಬರಲಿದೆ. ಇಂದು ಹಗಲಿಡೀ ಬಿಸಿಲಿನ ವಾತಾವರಣವಿರಲಿದೆ.
ಬೆಂಗಳೂರು: ಶುಕ್ರವಾರ ಲಕ್ಷ್ಮೀ ದೇವಿಗೆ ಸಂಬಂಧಿಸಿದ ದಿನವಾಗಿದೆ. ಐಶ್ವರ್ಯ, ಸಮೃದ್ಧಿಯ ದಿನವಾದ ಇಂದು ಈ ವಸ್ತುಗಳನ್ನು ಮನೆಗೆ ತರಬೇಡಿ. ಶುಕ್ರವಾರ ಲಕ್ಷ್ಮೀ ದೇವಿ ಮನೆಗೆ ಬರುತ್ತಾಳೆ ಎಂಬ ನಂಬಿಕೆಯಿದೆ. ಈ ಕಾರಣಕ್ಕೆ ಇಂದು ದಾರಿದ್ರ್ಯ ಸೂಚಿಸುವಂತಹ ವಸ್ತುಗಳನ್ನು ಮನೆಗೆ ತರಬೇಡಿ. ಲಕ್ಷ್ಮೀ ದೇವಿಯು ಅದೃಷ್ಟ, ಸಮೃದ್ಧಿ, ಐಶ್ವರ್ಯ ಮನೆಗೆ ಹೊತ್ತು ತರುತ್ತಾಳೆ. ಹೀಗಾಗಿ ಈ ದಿನಗಳಂದು ಮಾಂಸಾಹಾರ, ಮದ್ಯ, ಹುಳಿ ಪದಾರ್ಥಗಳು, ಸಕ್ಕರೆ, ಪೂಜಾ ಸಾಮಗ್ರಿಗಳನ್ನು ತರಬೇಡಿ. ಅದೇ ರೀತಿ ಮನೆಯಲ್ಲಿರುವ ಮುರಿದ ಕನ್ನಡಿ, ಪೂಜಾ ಸಾಮಗ್ರಿ, ಬಟ್ಟೆ, ಕೊಳಕು ವಸ್ತ್ರಗಳು, ಕಸವಿಲ್ಲದಂತೆ ನೋಡಿಕೊಳ್ಳಿ.
ಲಕ್ನೋ: ಸಂಬಂಧಿ ಮೇಲೆ ನಿರಂತರ ಅತ್ಯಾಚಾರ ಎಸಗಿ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಪ್ರಕರಣ ಸಂಬಂಧ ಕಾಮುಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಲ್ಲಿಯಾ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಮಹಿಳೆ ಮೇಲೆ ಅದೇ ಊರಿನ 40 ವರ್ಷದ ವ್ಯಕ್ತಿ ನಿರಂತರ ಅತ್ಯಚಾರ ಎಸಗಿದ್ದಾನೆ. ಆಕೆಯ ಆಕ್ಷಾಪಾರ್ಹ ವೀಡಿಯೋಗಳನ್ನು ರೆಕಾರ್ಡ್ ಮಾಡಿ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದಾನೆ. ಅಲ್ಲದೇ ಆಕೆಯ ಕುಟುಂಬದ ವಿರುದ್ಧ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾಳೆ. ದೂರಿನ ಆಧಾರದಲ್ಲಿ ಜ.3 ರಂದು ಆರೋಪಿಯ ವಿರುದ್ಧ ಅತ್ಯಾಚಾರ, ಕ್ರಿಮಿನಲ್ ಬೆದರಿಕೆ ಮತ್ತು ಐಟಿ ಕಾಯ್ದೆಯ ಸೆಕ್ಷನ್ಗಳ
ಯಾವಾಗಲೂ ದೀಪ ಹಚ್ಚುವಾಗ ಕೆಲವೊಂದು ತಪ್ಪುಗಳನ್ನು ಗೊತ್ತಿಲ್ಲದೆ ಮಾಡುತ್ತೇವೆ. ಅದರಲ್ಲಿ ದೀಪ ಹಚ್ಚುವಾಗ ಎರಡು ಬತ್ತಿಗಳನ್ನು ಒಟ್ಟಿಗೆ ಸೇರಿಸಿ ಹಚ್ಚುವುದು ನಮ್ಮ ಸಂಪ್ರದಾಯದಲ್ಲಿ ಬಹಳ ಮಹತ್ವವನ್ನು ಹೊಂದಿದೆ. ಇದರ ಹಿಂದೆ ಧಾರ್ಮಿಕ ಮತ್ತು ಆಧ್ಯಾತ್ಮಿಕ ಕಾರಣಗಳಿವೆ.ಅದರ ಹಿಂದಿರುವ ಕೆಲ ಕಾರಣಗಳು ಇಲ್ಲಿದೆ: ದಾಂಪತ್ಯ ಮತ್ತು ಕುಟುಂಬದ ಸಂಕೇತ ಶಾಸ್ತ್ರದ ಪ್ರಕಾರ, ಎರಡು ಬತ್ತಿಗಳನ್ನು ಹಾಕಿ ಹಚ್ಚುವ ದೀಪವು ಗಂಡ ಮತ್ತು ಹೆಂಡತಿಯ (ಶಿವ-ಶಕ್ತಿ) ಸಂಕೇತವಾಗಿದೆ.
ಬೆಂಗಳೂರು: ಇನ್ನೇನು ಬಿಗ್ಬಾಸ್ ಸೀಸನ್ 12 ಮುಗಿಯಲು ದಿನಗಣನೆ ಶುರುವಾಗಿದ್ದು, ಸ್ಪರ್ಧಿಗಳಿಗೆ ಇದೇ ವಾರ ದೊಡ್ಮನೆಯಲ್ಲಿ ಕೊನೆಯ ವಾರವಾಗಲಿದೆ. ಇದೀಗ ಬಿಗ್ಬಾಸ್ ಮನೆಯಲ್ಲಿ ಎಲ್ಲ ಸ್ಪರ್ಧಿಗಳು ತಮ್ಮ ತಪ್ಪನ್ನು ಅರಿತು ಒಬ್ಬರಿಗೊಬ್ಬರು ಕ್ಷಮೆಯಾಚಿಸುವ ಮೂಲಕ ಮುನಿಸಿಗೆ ಅಂತ್ಯ ಹಾಡಿ, ಒಬ್ಬರಿಗೊಬ್ಬರು ಕ್ಷಮೆ ಕೇಳಿದ್ದಾರೆ.ಇದೀಗ ಕಲರ್ಸ್ ಕನ್ನಡ ವಾಹಿನಿ ಬಿಟ್ಟಿರುವ ಪ್ರೋಮೋದಲ್ಲಿ ಗಿಲ್ಲಿ ಯಾವಾಗಲೂ ಎದುರಾಳಿಯಾಗಿ ಮಾತನಾಡುತ್ತಿದ್ದ ಅಶ್ವಿನಿ ಅವರಲ್ಲಿ ಕ್ಷಮೆಯಾಚನೆ ಮಾಡಿದ್ದಾರೆ. ಸೀಸನ್ ಆರಂಭದಿಂದಲೂ ಗಿಲ್ಲಿ ಹಾಗೂ ಅಶ್ವಿನಿ ಗೌಡ ಅವರ ನಡುವೆ ಜಗಳ, ಮುನಿಸಿತ್ತು. ಆದರೆ ಇಬ್ಬರೂ ಸಮಯ ಹಾಗೂ
ನವದೆಹಲಿ: ಕರ್ನಾಟಕದ ಉಪಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅವರು ಮುಂಬರುವ ಅಸ್ಸಾಂ ವಿಧಾನಸಭಾ ಚುನಾವಣೆಯ ಯೋಜನೆಗಾಗಿ ಶುಕ್ರವಾರ ರಾಷ್ಟ್ರ ರಾಜಧಾನಿಯಲ್ಲಿದ್ದು, ಕೆಲವು ಹಿರಿಯ ನಾಯಕರನ್ನು ಭೇಟಿ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.ಛತ್ತೀಸ್ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಅವರೊಂದಿಗೆ ಅಸ್ಸಾಂ ವಿಧಾನಸಭಾ ಚುನಾವಣೆಯ ಹಿರಿಯ ವೀಕ್ಷಕರಾಗಿರುವ ಶಿವಕುಮಾರ್, ರಾಷ್ಟ್ರ ರಾಜಧಾನಿಗೆ ಭೇಟಿ ನೀಡುವ ಸಮಯದಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಬಹುದು.
ಬೆಂಗಳೂರು: ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದಲ್ಲಿ ನಡೆದ ಬಾಲಕ ಸುಮಂತ್ (15) ನಿಗೂಢ ಸಾವಿನ ಪ್ರಕರಣ ಇದೀಗ ಹೊಸ ತಿರುವು ಪಡೆದಿದೆ. ಇದೀಗ ಪ್ರಕರಣದ ತನಿಖೆಯಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಇದೊಂದು ಕೊಲೆ ಎಂದುಅನುಮಾನಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.ಇತ್ತೀಚೆಗೆ ಕೆರೆಯಲ್ಲಿ ಸಿಕ್ಕಿದ ಕತ್ತಿ ಮತ್ತು ಟಾರ್ಚ್ ಲೈಟ್ ತನಿಖೆಗೆ ತಿರುವು ನೀಡಿದೆ, ಹಾಗೂ ಈ ಪ್ರಕರಣದ ತನಿಖೆಗೆ ಡಿವೈಎಸ್ಪಿ ನೇತೃತ್ವದಲ್ಲಿ ತಂಡ ರಚಿಸಲಾಗಿದೆ. ಏನಿದು ಪ್ರಕರಣ: ಓಡಿಲ್ನಾಳ ಗ್ರಾಮದ ಸಂಬೋಳ್ಯದ ಸುಮಂತ್ ಎಂಬ ಬಾಲಕನ ಶವ ಕೆರೆಯಲ್ಲಿ ಪತ್ತೆಯಾಗಿದೆ. ಇದೀಗ
ದಾವಣಗೆರೆ: ಬಿಜೆಪಿಗೆ ಮರಳುವಂತೆ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ ಎನ್ನುವ ಮೂಲಕ ಬಿಜೆಪಿಗೆ ಮರಳುವ ಕುರಿತು ಎಂದು ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಕೆ.ಎಸ್ ಈಶ್ವರಪ್ಪ ಅವರು ಮನಬಿಚ್ಚಿ ಮಾತನಾಡಿದ್ದಾರೆ.ದಾವಣಗೆರೆಯ ಹರಿಹರದ ಪಂಚಮಸಾಲಿ ಪೀಠದಲ್ಲಿ ಪ್ರತಿಕ್ರಿಯಿಸಿದ ಅವರು, ಬಿಜೆಪಿಗೆ ಮರಳುವಂತೆ ಕಾರ್ಯಕರ್ತರಿಂದ ಒತ್ತಡ ಬರುತ್ತಿದ್ದು, ಪಕ್ಷದಲ್ಲಿ ಬದಲಾವಣೆ ಸಲುವಾಗಿ ನಾನು ಹೊರ ಬಂದಿರುವುದು. ಆ ಪರಿವರ್ತನೆ ಇವತ್ತಲ್ಲ ನಾಳೆ ಆಗುತ್ತೆ. ಬಿಜೆಪಿ ಕಾರ್ಯಕರ್ತರು ಪಕ್ಷದಲ್ಲಿ ಸಾಕಷ್ಟು ನೋವು ಅನುಭವಿಸುತ್ತಿದ್ದಾರೆ. ನನ್ನ ಮನಸ್ಸಲ್ಲೂ, ಯತ್ನಾಳ್ ಮನಸ್ಸಲ್ಲೂ ಇದೆ ವಿಚಾರ ಇದೆ ಎಂದು ಹೇಳಿದರು.
ಬೆಂಗಳೂರು: ನಾವು ಸಂಸ್ಕೃತಿಯನ್ನು ಬಿಜೆಪಿ ಕಲಿಯಬೇಕಾ, ಅವರೆಲ್ಲ ಸರ್ವಧರ್ಮ ಗ್ರಂಥಗಳ ಹೆಸರಿನಲ್ಲಿ ರಾಜಕೀಯ ಮಾಡುವ ಇವರಿಗೆ ಸಂಸ್ಕೃತಿ ಇಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು.ಈ ಪ್ರಕರಣದ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು ರಾಜೀವ್ ಗೌಡ ಆಗಲಿ, ಯಾರೇ ಆಗಲಿ ಕಾನೂನಿಗಿಂತ ದೊಡ್ಡವರಲ್ಲ. ಆದರೆ ಅವರು ಮಾತನಾಡಿರೋದು ಸರಿಯಲ್ಲ. ಅದನ್ನು ಸಮರ್ಥನೆ ಮಾಡಿಕೊಳ್ಳುವುದು ಕೂಡ ತಪ್ಪು ಆಗುತ್ತೆ ಯಾರಿಗೂ ಕೂಡ ಕಾನೂನು ಮತ್ತು ಸಂವಿಧಾನದಲ್ಲಿ ಬೇರೆ ಅವರನ್ನ ನಿಂದಿಸುವ ಮತ್ತು ಅವಾಚ್ಯ ಶಬ್ಧದಲ್ಲಿ ಮಾತನಾಡುವ ಹಕ್ಕು ಯಾರಿಗೂ ಇಲ್ಲ. ಏನೇ ಆಗಿರಲಿ ಅಧ್ಯಕ್ಷರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.
ಬೆಂಗಳೂರು: ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿ ಪ್ರಸ್ತುತ ಕೇಂದ್ರದಲ್ಲಿ ಸಚಿವರಾಗಿರುವ ಎಚ್.ಡಿ. ಕುಮಾರಸ್ವಾಮಿ ಅವರು ಮತ್ತೆ ರಾಜ್ಯ ರಾಜಕಾರಣ ಬರುವ ಕುರಿತು ಮಹತ್ವದ ಘೋಷಣೆ ಮಾಡಿದ್ದಾರೆ. ಮಕರ ಸಂಕ್ರಾಂತಿ ಹಬ್ಬದ ದಿನವೇ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಶೀಘ್ರದಲ್ಲೇ ರಾಜ್ಯ ರಾಜಕೀಯಕ್ಕೆ ನಾನು ಬರುತ್ತೇನೆ ಎಂದು ಹೇಳಿದ್ದಾರೆ.ಕೇಂದ್ರದಲ್ಲಿ ಪ್ರಧಾನಿಗಳು ಹುದ್ದೆ ಕೊಟ್ಟಿದ್ದಾರೆ. ಆ ಎರಡು ಇಲಾಖೆಯಲ್ಲಿ ಪ್ರಾಮಾಣಿಕವಾಗಿ ಉತ್ತಮ ಕೆಲಸ ಮಾಡೋಕೆ ಈಗಾಗಲೇ ಅಡಿಗಲ್ಲು ಹಾಕಿದ್ದೇನೆ. ರಾಜ್ಯ ರಾಜಕೀಯಕ್ಕೆ ಯಾವ ಸಮಯದಲ್ಲಿ ಬರಬೇಕು ಅಂತ ತೀರ್ಮಾನ ಮಾಡ್ತೀನಿ. ರಾಜ್ಯ ರಾಜಕೀಯಕ್ಕೆ ಬರಲೇಬೇಕಾಗುತ್ತದೆ. ಯಾವಾಗ ಅಂತ ತೀರ್ಮಾನ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
ನವದೆಹಲಿ: ಉತ್ತರ ದೆಹಲಿಯಲ್ಲಿ ನಡೆದ ಗುಂಡಿನ ಚಕಮಕಿಯ ನಂತರ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ಗೆ ಸಂಬಂಧಿಸಿದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಮೂಲಗಳು ಗುರುವಾರ ತಿಳಿಸಿವೆ.ಗುಂಡಿನ ಚಕಮಕಿಯ ಸಮಯದಲ್ಲಿ, ಶಾರ್ಪ್ಶೂಟರ್ಗಳಲ್ಲಿ ಒಬ್ಬನ ಕಾಲಿಗೆ ಗುಂಡು ತಗುಲಿದೆ ಎಂದು ಅವರು ಹೇಳಿದರು.ದೆಹಲಿಯ ಹೊರವಲಯದ ಜಿಮ್ನಲ್ಲಿ ಈಚೆಗೆ ನಡೆದ ಗುಂಡಿನ ದಾಳಿ ಘಟನೆಗಳಲ್ಲಿ ಮತ್ತು ಪೂರ್ವ ದೆಹಲಿಯ ವಿನೋದ್ ನಗರದಲ್ಲಿ ಉದ್ಯಮಿಯೊಬ್ಬರ ಮೇಲೆ ನಡೆದ ದಾಳಿಯಲ್ಲಿ ಈ ಇಬ್ಬರು ವ್ಯಕ್ತಿಗಳು ಭಾಗಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ, ಅಲ್ಲಿ ಹಣ ವಸೂಲಿ ಮಾಡಲು ಗುಂಡು ಹಾರಿಸಲಾಗಿತ್ತು.
ನಟಿ ಅಮೂಲ್ಯ ಅವರು ಮದುವೆ ಆದ ಮೇಲೆ ಮತ್ತೇ ತೆರೆ ಮೇಲೆ ಬರುತ್ತಿದ್ದು, ಇದೀಗ ಅವರಿಗೆ ಜೋಡಿಯಾಗಿ ಶ್ರೀರಾಮ್ ಅವರನ್ನು ಪರಿಚಯಿಸಿದೆ. ಸಂಕ್ರಾಂತಿ ವಿಶೇಷ ಸುಗ್ಗಿ ಸಂಭ್ರಮದಲ್ಲಿ ಇದೀಗ ಪೀಕಬೂ ತಂಡ ನಾಯಕ ನಟನನ್ನು ಪರಚಯಿಸಿದೆ. ಶ್ರಾವಣಿ ಸುಬ್ರಮಣ್ಯ ಹಿಟ್ ಕಾಂಬಿನೇಷನ್ ನಿರ್ದೇಶಕ ಮಂಜು ಸ್ವರಾಜ್ ಅವರು ಈ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ನಾಯಕನ ಪರಿಚಯಕ್ಕೆ ವಿಶೇಷ ಟೀಸರ್ ಮಾಡಿರೋ ಪೀಕಬೂ ನಿರ್ದೇಶಕ ಅವರು ನಟನನ್ನು ಪರಿಚಯಿಸಿದ್ದಾರೆ.
ಇನ್ನೇನು ಫಿನಾಲೆಗೆ ದಿನಗಣನೆ ಶುರುವಾಗುತ್ತಿರುವ ಬೆನ್ನಲ್ಲೇ ಬಿಗ್ಬಾಸ್ ಮನೆಯಿಂದ ಮಿಡ್ ವೀಕ್ ಎಲಿಮಿನೇಷನ್ನಲ್ಲಿ ಧ್ರುವಂತ್ ಅವರು ಹೊರಬಂದಿದ್ದಾರೆ. ಮಿಡ್ ವೀಕ್ ಎಲಿಮಿನೇಷನ್ನಲ್ಲಿ ಕೊನೆಯಲ್ಲಿ ಧ್ರುವಂತ್ ಮತ್ತು ಕಾವ್ಯಯಿದ್ದರು. ಧ್ರುವಂತ್ ಎಲಿಮಿನೇಟ್ ಆಗುವ ಮೂಲಕ ಕಾವ್ಯ ಅವರು ಸೇಫ್ ಆಗಿ, ದೊಡ್ಮನೆಯಲ್ಲಿ ಆಟ ಮುಂದುವರೆಸಿದ್ದಾರೆ. ಇನ್ನೂ ತನ್ನ ಆತ್ಮೀಯ ಬಳಗದಲ್ಲಿ ಗುರುತಿಸಿಕೊಂಡಿದ್ದ ಧ್ರುವಂತ್ ಎಲಿಮಿನೇಟ್ ಆಗಿರುವುದಕ್ಕೆ ಅಶ್ವಿನಿ ಗೌಡ ಭಾವುಕರಾಗಿದ್ದರು.ಇನ್ನೂ ಈ ಸೀಸನ್ನ ಅದ್ಭುತ ಫರ್ಪಾಮೆನ್ಸ್ಗೆ ಕಿಚ್ಚ ಸುದೀಪ್ ಅವರು ಧ್ರುವಂತ್ಗೆ ಈ ಸೀಸನ್ನ ಕಿಚ್ಚನ ಚಪ್ಪಾಳೆಯನ್ನು
ತಮಿಳುನಾಡು: ಜನ ನಾಯಗನ್ ಚಿತ್ರ ನಿರ್ಮಾಪಕರ ಸಿಬಿಎಫ್ಸಿ ಕ್ಲಿಯರೆನ್ಸ್ ಅರ್ಜಿಯನ್ನು ಪುರಸ್ಕರಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಹೈಕೋರ್ಟ್ ವಿಭಾಗೀಯ ಪೀಠವು ಈ ವಿಷಯವನ್ನು ಪರಿಗಣಿಸುತ್ತಿರುವಾಗ ತನ್ನ ಹಸ್ತಕ್ಷೇಪದ ಅಗತ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.ನಟ - ರಾಜಕಾರಣಿ ವಿಜಯ್ ನಟಿಸಿದ ತಮಿಳು ಚಲನಚಿತ್ರ "ಜನ ನಾಯಗನ್" ನಿರ್ಮಾಪಕರು ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯಿಂದ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ಜನವರಿ 15 ವಜಾಗೊಳಿಸಿದೆ.ನ್ಯಾಯಮೂರ್ತಿ ದೀಪಂಕರ್ ದತ್ತ ಮತ್ತು ನ್ಯಾಯಮೂರ್ತಿ ಆಗಸ್ಟೀನ್ ಜಾರ್ಜ್ ಮಸಿಹ್ ಅವರನ್ನೊಳಗೊಂಡ ಪೀಠವು ಜನವರಿ
ರಾಜ್ಯದ ವಿವಿಧ ಭಾಗಗಳಲ್ಲಿ ಚಳಿ ಪ್ರಮಾಣ ಸ್ವಲ್ಪ ಮಟ್ಟಿಗೆ ಇಂದು ಕಡಿಮೆಯಾಗಿದ್ದು, ಬಹುತೇಕ ಭಾಗಗಳಲ್ಲಿ ಒಣಹವೆ ಇಂದು ಮುಂದುವರಿದಿದೆ. ಇನ್ನೂ ರಾಜ್ಯದ ಹಲವೆಡೆ ಕಳೆದ 24 ಗಂಟೆಯ ಅವಧಿಯಲ್ಲಿ ವಿವಿಧ ಭಾಗಗಳಲ್ಲಿ ಸಾಧಾರಣ ಮಳೆ ಆಗಿದೆ. ರಾಜ್ಯದ ವಿವಿಧ ಭಾಗದಲ್ಲಿ ಕನಿಷ್ಠ ತಾಪಮಾನದಲ್ಲಿ ಹೆಚ್ಚಳವಾಗಿದೆಯಾದರೂ ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.ಹವಾಮಾನ ಇಲಾಖೆ ಮುನ್ಸೂಚನೆಯಂತೆ ರಾಜ್ಯದಲ್ಲಿ 5 ದಿನ ಮಹತ್ವದ ಬದಲಾವಣೆಯಿಲ್ಲ: ಗಳೂರು ಸೇರಿದಂತೆ ಕರ್ನಾಟಕದ
ರಾಯಚೂರು: ಸಾಹಿತ್ಯ, ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿದ್ದ ದೇವದುರ್ಗ ತಾಲ್ಲೂಕಿನ ತಿಂಥಣಿ ಬ್ರಿಜ್ಡ್ ಕಾಗಿನೆಲೆ ಕನಕ ಗುರುಪೀಠದ ಸಿದ್ದರಾಮನಂದ ಸ್ವಾಮೀಜಿ ಅವರು ಇಂದು ಬೆಳಿಗ್ಗೆ ಹೃದಯಘಾತದಿಂದಾಗಿ ನಿಧನರಾಗಿದ್ದಾರೆ.49 ವರ್ಷದ ಸ್ವಾಮಿಜಿ ಅವರಿಗೆ ಬೆಳಗಿನ ಜಾವ 3.40 ರ ಸುಮಾರಿಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಲಿಂಗಸೂಗೂರು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಷ್ಟರಲ್ಲಿ ಅವರು ಕೊನೆಯುಸಿರು ಎಳೆದಿದ್ದಾರೆ. ಹಾಲುಮತದ ಪದ್ಧತಿಯಂತೆ ತಿಂಥಣಿಯ ಕನಕ ಗುರು ಪೀಠದಲ್ಲಿಯೇ ಸ್ವಾಮೀಜಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಭಕ್ತರು ತಿಳಿಸಿದ್ದಾರೆಸಿದ್ದರಾಮಾನಂದ ಸ್ವಾಮೀಜಿ ಮೂಲತಃ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಕಲಮರಹಳ್ಳಿಯವರು. ಮಹದೇವಯ್ಯ ಮತ್ತು ಜಯಮ್ಮ ದಂಪತಿಯ 2ನೇ ಪುತ್ರರು. ಸಿದ್ದರಾಮನಂದ ಸ್ವಾಮೀಜಿಯ ಮೂಲ ಹೆಸರು ಮೋಹನ್ ಪ್ರದಾನ ಎಂಬುದಾಗಿತ್ತು.
ಬೆಂಗಳೂರು: ಕನ್ನಡದ ರಿಯಾಲಿಟಿ ಶೋ ಬಿಗ್ಬಾಸ್ ಮಾಜಿ ಸ್ಪರ್ಧಿ, ನಟಿ ಕಾರುಣ್ಯಾ ರಾಮ್ ಅವರು ತನ್ನ ಸ್ವಂತ ತಂಗಿ ಸಮೃದ್ಧಿ ರಾಮ್ ವಿರುದ್ಧವೇ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಈ ಹಿಂದೆ ಕಾರುಣ್ಯ ರಾಮ್ ಅವರು ಸಮೃದ್ಧಿ ವಿರುದ್ಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಗ ಎನ್ಸಿಆರ್ ದಾಖಲಾಗಿತ್ತು. ಈಗ ಕಾರುಣ್ಯ ರಾಮ್ ಸಹೋದರಿ ವಿರುದ್ಧ ಸಿಸಿಬಿಯಲ್ಲಿ ದೂರು ನೀಡಿದ್ದಾರೆ.ಕಾರುಣ್ಯಾ ಅವರು ತನ್ನ ತಂಗಿ ಸಮೃದ್ಧಿ ರಾಮ್, ಪ್ರತಿಭಾ, ಕಪಿಲ್, ಪ್ರಜ್ವಲ್, ರಕ್ಷಿತ್ ಮತ್ತು ಸಾಗರ್ ಎಂಬುವವರ ವಿರುದ್ಧ ಸಿಸಿಬಿ ಪೊಲೀಸ್ ಠಾಣೆಯಲ್ಲಿ ವಂಚನೆ ದೂರು ದಾಖಲಿಸಿದ್ದಾರೆ.ಮೇಕಪ್ ಆರ್ಟಿಸ್ಟ್ ಆಗಿರುವ ಸಹೋದರಿ ಸಮೃದ್ಧಿ ರಾಮ್ ಬೆಟ್ಟಿಂಗ್ ಆಡಿ ಸುಮಾರು ₹ 25 ಲಕ್ಷ ಸಾಲ ಮಾಡಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ವ್ಯವಹಾರದಲ್ಲೂ ಅಪಾರ ನಷ್ಟ ಅನುಭವಿಸಿದ್ದಾರೆ. ಖಾಸಗಿ ವ್ಯಕ್ತಿಗಳಿಂದ ಸಾಲ ಪಡೆದಿದ್ದಾರೆ. ಹೀಗಾಗಿ ಮನೆಯಲ್ಲಿದ್ದ ಚಿನ್ನ ಹಾಗೂ ಹಣವನ್ನು ಸಾಲ ತೀರಿಸಲು ಬಳಸಿಕೊಂಡು ವಂಚಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಮುಂಬೈ: ಭಾರತ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದ್ದಾರೆ. ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಅವರನ್ನು ಹಿಂದಿಕ್ಕಿ ಐಸಿಸಿ ಏಕದಿನ ರ್ಯಾಂಕಿಂಗ್ನಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.ರನ್ ಮಿಷಿನ್ ಖ್ಯಾತಿಯ ವಿರಾಟ್ ಅವರು 1,403 ದಿನಗಳ ಬಳಿಕ ಮತ್ತೆ ಅಗ್ರಸ್ಥಾನ ಪಡೆದಿದ್ದಾರೆ. ಅಗ್ರಸ್ಥಾನದಲ್ಲಿದ್ದ ರೋಹಿತ್ ಶರ್ಮಾ ಅವರು ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. 2027ರ ಏಕದಿನ ವಿಶ್ವಕಪ್ ಮೇಲೆ ಕಣ್ಣಿಟ್ಟಿರುವ ರನ್ ಮಿಷಿನ್ ಕೊಹ್ಲಿ ಹೊಸ ಮೈಲುಗಲ್ಲು ಸಾಧಿಸಿದ್ದಾರೆ. ವಿರಾಟ್ ಅವರು 37ನೇ ವಯಸ್ಸಿನಲ್ಲಿ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ನಂ.1 ಬ್ಯಾಟರ್ ಆಗಿ ಹೊರಹೊಮ್ಮಿದ್ದಾರೆ. ಬುಧವಾರ ಬಿಡುಗಡೆಯಾದ ನೂತನ ಏಕದಿನ ರ್ಯಾಂಕಿಗ್ ಪಟ್ಟಿಯಲ್ಲಿ 785 ಅಂಕ ಪಡೆಯುವ ಮೂಲಕ ಅಗ್ರಸ್ಥಾನಕ್ಕೆ ಜಿಗಿದಿದ್ದಾರೆ. ನ್ಯೂಜಿಲೆಂಡ್ನ ಡೇರಿಲ್ ಮಿಚೆಲ್ ಎರಡನೇ ಸ್ಥಾನದಲ್ಲಿದ್ದಾರೆ.
ರಾಜ್ ಕೋಟ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ದ್ವಿತೀಯ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಸೋತ ಬಳಿಕ ಈ ಒಬ್ಬ ಬೌಲರ್ ನ ಅನುಪಸ್ಥಿತಿ ಕಾಡುತ್ತಿದೆ. ದ್ವಿತೀಯ ಏಕದಿನ ಪಂದ್ಯವನ್ನು ಟೀಂ ಇಂಡಿಯಾ 7 ವಿಕೆಟ್ ಗಳಿಂದ ಸೋತಿದೆ. ಭಾರತ ನೀಡಿದ್ದ 285 ರನ್ ಗಳ ಗುರಿಯನ್ನು ನ್ಯೂಜಿಲೆಂಡ್ 47.3 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು ತಲುಪಿತು. ಡೆರಿಲ್ ಮಿಚೆಲ್ ಮತ್ತು ವಿಲ್ ಯಂಗ್ ಭರ್ಜರಿ ಜೊತೆಯಾಟ ಕಿವೀಸ್ ಗೆಲುವಿಗೆ ಕಾರಣವಾಯ್ತು.
ರಾಜ್ ಕೋಟ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ದ್ವಿತೀಯ ಏಕದಿನ ಪಂದ್ಯದಲ್ಲಿ ಒತ್ತಡದ ಸಂದರ್ಭದಲ್ಲಿ ಅದ್ಭುತ ಇನಿಂಗ್ಸ್ ಆಡಿದ ಕೆಎಲ್ ರಾಹುಲ್ ಗೆ ಫ್ಯಾನ್ಸ್ ಬಹುಪರಾಕ್ ಹೇಳಿದ್ದಾರೆ. ಇಂದು ಟಾಸ್ ಸೋತ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಬೇಕಾಯಿತು. ರೋಹಿತ್ ಶರ್ಮಾರಿಂದ ಎಂದಿನಂತೆ ಅಬ್ಬರದ ಆರಂಭ ಸಿಗಲಿಲ್ಲ. ಅವರು 24 ರನ್ ಗಳಿಗೆ ವಿಕೆಟ್ ಒಪ್ಪಿಸಿದರು. ಇನ್ನೊಂದೆಡೆ ಉತ್ತಮ ಆಟವಾಡಿದ ನಾಯಕ ಶುಭಮನ್ ಗಿಲ್ 56 ರನ್ ಗಳಿಸಿ ಔಟಾದರು. ಅವರ ಹಿಂದೆಯೇ ಕೊಹ್ಲಿ 23, ಶ್ರೇಯಸ್ ಅಯ್ಯರ್ 8 ರನ್ ಗಳಿಗೆ ವಿಕೆಟ್ ಒಪ್ಪಿಸಿದರು.
ಚಿತ್ರದುರ್ಗ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶಿಕಾರಿಪುರದಲ್ಲಿ ಪಾದಯಾತ್ರೆ ಮಾಡುವುದು ಬೇಡ. ಅವರೇ ಬಂದು ಸ್ಪರ್ಧಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಸವಾಲು ಹಾಕಿದ್ದಾರೆ. ಇಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಯೊಂದಕ್ಕೆ ಉತ್ತರ ಕೊಡುವಾಗ, ಜೆಡಿಎಸ್, ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ನರೇಂದ್ರ ಮೋದಿಯವರ ಕೈಯನ್ನು ಬಲಪಡಿಸಲು ಎನ್ಡಿಎ ಮೈತ್ರಿಕೂಟ ಸೇರಿದ್ದಾರೆ. ಹಾಗಾಗಿ, ಸ್ಥಳೀಯವಾಗಿ ಸ್ಪರ್ಧೆ ಕುರಿತು ರಾಷ್ಟ್ರೀಯ ನಾಯಕರು ನಮ್ಮ ಜೊತೆ, ಜೆಡಿಎಸ್ ಜೊತೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಸ್ಪಷ್ಟಪಡಿಸಿದರು.
ಬೆಂಗಳೂರು: ಬಳ್ಳಾರಿ ವಿಷಯ ರಾಜ್ಯದಲ್ಲಿ ದೊಡ್ಡ ಸದ್ದು ಮಾಡುವ ಸಂದರ್ಭದಲ್ಲೇ ಶಿಡ್ಲಘಟ್ಟದಲ್ಲೂ ಬ್ಯಾನರ್ ಹಾಕಿದ್ದಾರೆ. ಬ್ಯಾನರ್ ಹಾಕಲು ಅನುಮತಿ ಪಡೆದಿದ್ದೀರಾ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಪ್ರಶ್ನಿಸಿದ್ದಾರೆ. ಪತ್ರವನ್ನೂ ನೀಡಿಲ್ಲ ಹಣ ಕಟ್ಟಿಲ್ಲ; ಅನುಮತಿ ಪಡೆದಿಲ್ಲ ಎಂದು ಕಮೀಷನರ್ ಹೇಳಿದ್ದಾಗಿ ಗಮನ ಸೆಳೆದರು.ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಕಾಂಗ್ರೆಸ್ ನಾಯಕರ ಅಟ್ಟಹಾಸ ರಾಜ್ಯದಲ್ಲಿ ಹೆಚ್ಚಾಗಿದೆ. ದರ್ಪ ಹೆಚ್ಚಾಗಿದೆ. ಮುಖ್ಯಮಂತ್ರಿಗಳು ರಾಜೀವ್ ಗೌಡರನ್ನು ಬಂಧಿಸಬೇಕು. ಕಾನೂನು ಕೈಗೆತ್ತಿಕೊಳ್ಳುವ ಮಾತನಾಡಿದ ಇವರನ್ನು ಗೂಂಡಾ ಕಾಯ್ದೆ ಅಡಿಯಲ್ಲಿ ತಕ್ಷಣ ಬಂಧಿಸಬೇಕು. ಇಲ್ಲವಾದರೆ, ಇದನ್ನು ನಾವು ರಾಜ್ಯಮಟ್ಟದ ವರೆಗೆ ತೆಗೆದುಕೊಂಡು ಹೋಗುತ್ತೇವೆ ಎಂದು ಎಚ್ಚರಿಸಿದರು.
ಬೆಂಗಳೂರು: ನಿನ್ನೆ ಮೈಸೂರಿನಲ್ಲಿ ರಾಹುಲ್ ಗಾಂಧಿ ಜೊತೆ ಏರ್ ಪೋರ್ಟ್ ನಲ್ಲಿ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ರಹಸ್ಯ ಮಾತುಕತೆ ನಡೆಸಿದ್ದರು. ಈ ಮಾತುಕತೆ ಬಗ್ಗೆ ಇಂದು ಮಾಧ್ಯಮಗಳು ಡಿಕೆಶಿಯನ್ನು ಪ್ರಶ್ನೆ ಮಾಡಿದ್ದಾರೆ. ರಾಹುಲ್ ಗಾಂಧಿ ಜೊತೆ ರಹಸ್ಯವಾಗಿ ಏನು ಮಾತನಾಡಿದ್ರಿ? ಅಧಿಕಾರ ಹಂಚಿಕೆ ಬಗ್ಗೆ ಕೇಳಿದ್ದೀರಾ ಎಂದು ಮಾಧ್ಯಮಗಳು ನೇರವಾಗಿ ಪ್ರಶ್ನೆ ಮಾಡಿವೆ. ಇದಕ್ಕೆ ಉತ್ತರಿಸಿದ ಡಿಕೆಶಿ ‘ನಾನು ಕಾಂಗ್ರೆಸ್ ಅಧ್ಯಕ್ಷ. ಅವರು ನಮ್ಮ ರಾಷ್ಟ್ರೀಯ ನಾಯಕರು. ನಾವು ಭೇಟಿ ಮಾಡೋದು, ಗೌರವ ಕೊಡೋದು, ಔಪಚಾರಿಕವಾಗಿ ಸ್ವಾಗತ ಕೋರುವುದು ಮಾತನಾಡುವುದು ಎಲ್ಲಾ ಸಹಜ. ನಾವು ಏನೆಲ್ಲಾ ಮಾತನಾಡಿದ್ದೇವೆ ಎಂದು ಎಲ್ಲಾ ಪಬ್ಲಿಕ್ ನಲ್ಲಿ ಹೇಳಕ್ಕಾಗುತ್ತಾ?
ಮುಂಬೈ: ಟೀಂ ಇಂಡಿಯಾ ಕ್ರಿಕೆಟ್ ದಿಗ್ಗಜ ವಿರಾಟ್ ಕೊಹ್ಲಿ ಮತ್ತೆ ವಿಶ್ವ ಕ್ರಿಕೆಟ್ ನಲ್ಲಿ ನಂ1 ಶ್ರೇಯಾಂಕಕ್ಕೇರಿದ್ದಾರೆ. ಏಕದಿನ ಕ್ರಿಕೆಟ್ ನಲ್ಲಿ ಕೊಹ್ಲಿ ನಂ1 ಶ್ರೇಯಾಂಕಕ್ಕೆ ಬಡ್ತಿ ಪಡೆದಿದ್ದಾರೆ. ಕಳೆದ ದಕ್ಷಿಣ ಆಫ್ರಿಕಾ ಸರಣಿ ಬಳಿಕ ಈಗ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲೂ ಕೊಹ್ಲಿ ಅದ್ಭುತ ಫಾರ್ಮ್ ಮುಂದವರಿಸಿದ್ದಾರೆ. ಕಳೆದ ಪಂದ್ಯದಲ್ಲಿ ಅವರು 93 ರನ್ ಗಳ ಭರ್ಜರಿ ಇನಿಂಗ್ಸ್ ಆಡಿದ್ದರು. ಇದರ ಬೆನ್ನಲ್ಲೇ ಅವರಿಗೆ ಐಸಿಸಿ ಶ್ರೇಯಾಂಕದಲ್ಲಿ ಬಡ್ತಿ ಸಿಕ್ಕಿದೆ. ವಿರಾಟ್ ಕೊಹ್ಲಿ ನಂ1 ಆಗುತ್ತಿರುವುದು ಇದೇ ಮೊದಲಲ್ಲ. ಆದರೆ ಈಗ ಬಹಳ ದೀರ್ಘ ಸಮಯದ ನಂತರ 1 ನೇ ಶ್ರೇಯಾಂಕಕ್ಕೇರಿದ್ದಾರೆ.
ಕೆಲವೊಂದು ಆಹಾರ ವಸ್ತುಗಳನ್ನು ಸೇವಿಸಿದ ತಕ್ಷಣ ನೀರು ಸೇವಿಸಬಾರದು ಎನ್ನುತ್ತಾರೆ. ಅದರಲ್ಲಿ ಬಜ್ಜಿ ಕೂಡಾ ಒಂದು. ಬಜ್ಜಿ ತಿಂದ ತಕ್ಷಣ ನೀರು ಕುಡಿದ್ರೆ ಏನಾಗುತ್ತದೆ ಇಲ್ಲಿ ನೋಡಿ. ಬಜ್ಜಿ ಎಂದರೆ ಎಣ್ಣೆಯಲ್ಲಿ ಡೀಪ್ ಫ್ರೈ ಮಾಡಿ ಮಾಡುವಂತಹ ಆಹಾರ ವಸ್ತು. ಇದನ್ನು ಸೇವಿಸುವಾಗ ನೀರು ಅಥವಾ ನೀರಿನಂಶ ಏನಾದರೂ ಸೇವಿಸಬೇಕು ಅನಿಸುವುದು ಸಹಜ. ಇಲ್ಲದೇ ಹೋದರೆ ಗಂಟಲು ಕಟ್ಟಿದಂತಾಗುತ್ತದೆ. ಆದರೆ ಬಜ್ಜಿ ಸೇವಿಸಿದ ತಕ್ಷಣ ನೀರು ಸೇವನೆ ಮಾಡಬಾರದು. ಇದಕ್ಕೆ ಕಾರಣವೂ ಇದೆ. -ಬಜ್ಜಿ ಸೇವಿಸಿದ ತಕ್ಷಣ ನೀರು ಸೇವನೆ ಮಾಡುವುದರಿಂದ ಜೀರ್ಣ ಕ್ರಿಯೆಗೆ ಸಮಸ್ಯೆಯಾಗಬಹುದು.-ಹೊಟ್ಟೆಯಲ್ಲಿ ಗುಳು ಗುಳು ಆದಂತೆ ಅಥವಾ ಹೊಟ್ಟೆಯ ಕಿರಿ ಕಿರಿ ಆಗಬಹುದು.
ಚಿತ್ರದುರ್ಗ: ಕಾಂಗ್ರೆಸ್ಸಿಗರ ಕುರ್ಚಿ ಕಾದಾಟದಿಂದ ರಾಜ್ಯದ ಜನರು ತೊಂದರೆ ಅನುಭವಿಸುತ್ತಿದ್ದಾರೆ. ರಾಜ್ಯದಲ್ಲಿ ನಿಜವಾಗಿ ಏನೂ ಅಭಿವೃದ್ಧಿ ಆಗಿಲ್ಲ; ಕಾಂಗ್ರೆಸ್ಸಿನ ವಿರುದ್ಧ ಜನರು ಹಿಡಿಶಾಪ ಹಾಕುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರ ಕೊಟ್ಟರು. ನಿನ್ನೆ ಜರ್ಮನಿಯ ಚಾನ್ಸೆಲರ್ ಕರ್ನಾಟಕಕ್ಕೆ ಬಂದಿದ್ದರು. ಜರ್ಮನಿಯು ಉತ್ಪಾದನಾ ಹಬ್ ಆಗಿರುವ ತಂತ್ರಜ್ಞಾನದ ದೇಶ. ಅಂಥ ದೇಶದ ಚಾನ್ಸೆಲರ್ ಕರ್ನಾಟಕಕ್ಕೆ ಬಂದರೆ, ಇವರಲ್ಲಿ ಒಬ್ಬರು ಸಿಎಂ ಕುರ್ಚಿ ಉಳಿಸಿಕೊಳ್ಳಲು, ಇನ್ನೊಬ್ಬರು ಅದೇ ಕುರ್ಚಿ ಕಸಿದುಕೊಳ್ಳಲು ಹೋಗಿ ರಾಹುಲ್ ಗಾಂಧಿ ಜೊತೆ ನಿಂತುಕೊಂಡಿದ್ದಾರೆ. ಇದರಂದ ರಾಜ್ಯದ ಪರಿಸ್ಥಿತಿ ಏನಾಗಬೇಕು ಎಂದು ಕೇಳಿದರು.
ರಾಜ್ ಕೋಟ್: ನ್ಯೂಜಿಲೆಂಡ್ ವಿರುದ್ಧ ದ್ವಿತೀಯ ಏಕದಿನ ಪಂದ್ಯವಾಡಲು ರಾಜ್ ಕೋಟ್ ನಲ್ಲಿರುವ ಟೀಂ ಇಂಡಿಯಾ ಕ್ರಿಕೆಟ್ ದಿಗ್ಗಜ ವಿರಾಟ್ ಕೊಹ್ಲಿ ಚಿನ್ನದಿಂದ ಮಾಡಿದ ಮೊಬೈಲ್ ಕವರ್ ಕೊಡಲು ಅಭಿಮಾನಿಯೊಬ್ಬ ಬಂದಿದ್ದಾನೆ. ಇದರ ಬೆಲೆ ಕೇಳಿದ್ರೆ ನಿಜಕ್ಕೂ ಶಾಕ್ ಆಗ್ತೀರಿ. ನಾವೆಲ್ಲಾ ಮೊಬೈಲ್ ಕವರ್ ಎಂದರೆ ಐನೂರೋ, ಒಂದು ಸಾವಿರ ರೂ.ಗಳಿಗೋ ದುಬಾರಿ ಎಂದು ಚಿನ್ನದಂತೆ ನೋಡಿಕೊಳ್ಳುತ್ತೇವೆ. ಆದರೆ ಗುಜರಾತ್ ನ ಅಂಕಿತ್ ಪಟೇಲ್ ಎನ್ನುವ ಅಪ್ಪಟ ವಿರಾಟ್ ಕೊಹ್ಲಿ ಅಭಿಮಾನಿ ಚಿನ್ನದಿಂದಲೇ ಮಾಡಿದ ಮೊಬೈಲ್ ಕವರ್ ತಂದಿದ್ದಾರೆ.
ಬೆಂಗಳೂರು: ಶಬರಿಮಲೆಗೆ ಹೋಗುವ ಕರ್ನಾಟಕದ ವಾಹನಗಳನ್ನು ತಡೆದು ಕೇರಳ ಉದ್ಧಟತನ ಮೆರೆಯುತ್ತಿದೆ ಎಂದು ವರದಿಯಾಗಿದೆ. ಇದರ ಬಗ್ಗೆ ಜೆಡಿಎಸ್ ಘಟಕ ಆಕ್ರೋಶ ವ್ಯಕ್ತಪಡಿಸಿದೆ. ಮೊನ್ನೆಯಷ್ಟೇ ಕನ್ನಡ ಶಾಲೆಗಳಲ್ಲಿ ಮಲಯಾಳಂ ಹೇರಿಕೆ ಮಾಡಲು ಹೊರಟಿದ್ದು ಕೇರಳ ಮತ್ತು ಕರ್ನಾಟಕ ನಡುವಿನ ಸಂಘರ್ಷಕ್ಕೆ ಕಾರಣವಾಗಿತ್ತು. ಇದು ತಣ್ಣಗಾಗುತ್ತಿದ್ದಂತೇ ಈಗ ಕೇರಳ ಸರ್ಕಾರ ಮತ್ತೊಂದು ತಗಾದೆ ತೆಗೆದಿದೆ. ಹಿಂದೂಗಳ ಪವಿತ್ರ ಸ್ಥಳ ಶಬರಿಮಲೆಗೆ ತೆರಳುವ ಭಕ್ತರಿಗೆ ಕೇರಳ ಸರ್ಕಾರ ಕಾಟ ಕೊಡುತ್ತಿದೆ. ಕರ್ನಾಟಕದಿಂದ ತೆರಳುವ ವಾಹನಗಳನ್ನು ಅನತಿ ದೂರದಲ್ಲೇ ತಡೆದು ತೊಂದರೆ ಕೊಡುತ್ತಿದೆ.
ಬೆಂಗಳೂರು: ಚಿನ್ನದ ಬೆಲೆ ಮತ್ತೆ ಏರಿಕೆ ಮತ್ತು ಇಳಿಕೆಯಾಗುತ್ತಲೇ ಇದೆ. ಆದರೆ ಇಂದು ವಾರದ ಆರಂಭದಲ್ಲೇ ಪರಿಶುದ್ಧ ಚಿನ್ನದ ದರ ಇಳಿಕೆಯಾದರೆ ಮತ್ತು ಇತರೆ ಚಿನ್ನದ ದರ ಏರಿಕೆ ಕಂಡಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತ ಏರಿಕೆ ಮತ್ತು ಇಳಿಕೆ ಕಂಡಿತ್ತು. ಆದರೆ ಈ ವಾರದ ಆರಂಭದಲ್ಲೇ ಚಿನ್ನದ ದರ ಏರಿಕೆಯಾಗಿದೆ. ಇಂದು ಮತ್ತೆ ಪರಿಶುದ್ಧ ಚಿನ್ನದ ದರ ಕೊಂಚ ಇಳಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ಮೊನ್ನೆ 1,44,790.00 ರೂ.ಗಳಿತ್ತು. ಇಂದು 1,44,560.00 ರೂ.ಗಳಷ್ಟಾಗಿದೆ.
ಬೆಂಗಳೂರು: ಅಡಿಕೆ ಬೆಲೆ ಕಳೆದ ಕೆಲವು ದಿನಗಳಿಂದ ಏರಿಕೆಯಾಗುತ್ತಿತ್ತು. ಆದರೆ ಇಂದು ಮತ್ತೆ ಬೆಲೆ ಯಥಾಸ್ಥಿತಿಯಲ್ಲಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ. ಕಳೆದ ವಾರ ಅಡಿಕೆ ಬೆಲೆಯಲ್ಲಿ ಏರಿಕೆ ಆರಂಭವಾಗಿತ್ತು. ಸತತವಾಗಿ ನಾಲ್ಕು ದಿನಗಳ ಕಾಲ ಏರಿಕೆಯಾಗಿದ್ದು ರೈತರ ಸಂತಸಕ್ಕೆ ಕಾರಣವಾಗಿತ್ತು. ಆದರೆ ಇಂದು ಯಾವುದೇ ವ್ಯತ್ಯಾಸ ಕಂಡುಬರುತ್ತಿಲ್ಲ. ಇಂದು ಹೊಸ ಅಡಿಕೆ ಬೆಲೆ 460 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ ನಿನ್ನೆ ಯಥಾಸ್ಥಿತಿಯಲ್ಲಿದ್ದು 545 ರೂ. ಗಳಾಗಿತ್ತು. ಡಬಲ್ ಚೋಲ್ ಬೆಲೆಯೂ ಯಥಾಸ್ಥಿತಿಯಲ್ಲಿದ್ದು 545 ರೂ.ಗಳಷ್ಟಾಗಿದೆ.
ಬೆಂಗಳೂರು: ಏರ್ ಪೋರ್ಟ್ ನಲ್ಲಿ ಹೈಕಮಾಂಡ್ ಮುಂದೆ ಮಂಡಿಯೂರಿದ್ರೂ ಪ್ರಯತ್ನಗಳೆಲ್ಲಾ ವಿಫಲವಾಯ್ತು ಎಂದು ಡಿಕೆಶಿಯೇ ಒಪ್ಪಿಕೊಂಡ್ರು ಎಂದು ರಾಜ್ಯ ಬಿಜೆಪಿ ಟ್ವೀಟ್ ಮೂಲಕ ವ್ಯಂಗ್ಯ ಮಾಡಿದೆ. ಮೈಸೂರಿನಲ್ಲಿ ನಿನ್ನೆ ರಾಹುಲ್ ಗಾಂಧಿ ಜೊತೆ ಏರ್ ಪೋರ್ಟ್ ನಲ್ಲಿ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಗಹನವಾಗಿ ಮಾತುಕತೆ ನಡೆಸಿದ್ದರು. ಇದರ ಬೆನ್ನಲ್ಲೇ ಇಂದು ಡಿಕೆ ಶಿವಕುಮಾರ್ ಸೋಷಿಯಲ್ ಮೀಡಿಯಾದಲ್ಲಿ ಪ್ರಯತ್ನಗಳು ವಿಫಲವಾದರೂ ಪ್ರಾರ್ಥನೆ ವಿಫಲವಾಗಲ್ಲ ಎಂದು ಸಂದೇಶ ಹಂಚಿಕೊಂಡಿದ್ದಾರೆ. ಇದಕ್ಕೆ ಬಿಜೆಪಿ ವ್ಯಂಗ್ಯ ಮಾಡಿದೆ.
ರಾಜ್ ಕೋಟ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಇಂದು ಎರಡನೇ ಏಕದಿನ ಪಂದ್ಯ ನಡೆಯಲಿದೆ. ಮೊದಲ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಘರ್ಜಿಸಿದ್ರು, ಇದೀಗ ಎರಡನೇ ಪಂದ್ಯದಲ್ಲಿ ರೋಹಿತ್ ಶರ್ಮಾ ಸರದಿ ಎನ್ನುತ್ತಿದ್ದಾರೆ ಫ್ಯಾನ್ಸ್. ಮೊದಲ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ 93 ರನ್ ಗಳ ನೆರವಿನಿಂದ ಭಾರತ ರೋಚಕ ಗೆಲುವು ಸಾಧಿಸಿತ್ತು. ಇದರೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 1-0 ಅಂತರದಿಂದ ಮುನ್ನಡೆಯಲ್ಲಿದೆ. ಎರಡನೇ ಪಂದ್ಯ ಇಂದು ರಾಜ್ ಕೋಟ್ ನಲ್ಲಿ ನಡೆಯಲಿದೆ.