ಲಕ್ನೋ: ಸಂಬಂಧಿ ಮೇಲೆ ನಿರಂತರ ಅತ್ಯಾಚಾರ ಎಸಗಿ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಪ್ರಕರಣ ಸಂಬಂಧ ಕಾಮುಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಲ್ಲಿಯಾ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಮಹಿಳೆ ಮೇಲೆ ಅದೇ ಊರಿನ 40 ವರ್ಷದ ವ್ಯಕ್ತಿ ನಿರಂತರ ಅತ್ಯಚಾರ ಎಸಗಿದ್ದಾನೆ. ಆಕೆಯ ಆಕ್ಷಾಪಾರ್ಹ ವೀಡಿಯೋಗಳನ್ನು ರೆಕಾರ್ಡ್ ಮಾಡಿ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದಾನೆ. ಅಲ್ಲದೇ ಆಕೆಯ ಕುಟುಂಬದ ವಿರುದ್ಧ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾಳೆ. ದೂರಿನ ಆಧಾರದಲ್ಲಿ ಜ.3 ರಂದು ಆರೋಪಿಯ ವಿರುದ್ಧ ಅತ್ಯಾಚಾರ, ಕ್ರಿಮಿನಲ್ ಬೆದರಿಕೆ ಮತ್ತು ಐಟಿ ಕಾಯ್ದೆಯ ಸೆಕ್ಷನ್ಗಳ
ಯಾವಾಗಲೂ ದೀಪ ಹಚ್ಚುವಾಗ ಕೆಲವೊಂದು ತಪ್ಪುಗಳನ್ನು ಗೊತ್ತಿಲ್ಲದೆ ಮಾಡುತ್ತೇವೆ. ಅದರಲ್ಲಿ ದೀಪ ಹಚ್ಚುವಾಗ ಎರಡು ಬತ್ತಿಗಳನ್ನು ಒಟ್ಟಿಗೆ ಸೇರಿಸಿ ಹಚ್ಚುವುದು ನಮ್ಮ ಸಂಪ್ರದಾಯದಲ್ಲಿ ಬಹಳ ಮಹತ್ವವನ್ನು ಹೊಂದಿದೆ. ಇದರ ಹಿಂದೆ ಧಾರ್ಮಿಕ ಮತ್ತು ಆಧ್ಯಾತ್ಮಿಕ ಕಾರಣಗಳಿವೆ.ಅದರ ಹಿಂದಿರುವ ಕೆಲ ಕಾರಣಗಳು ಇಲ್ಲಿದೆ: ದಾಂಪತ್ಯ ಮತ್ತು ಕುಟುಂಬದ ಸಂಕೇತ ಶಾಸ್ತ್ರದ ಪ್ರಕಾರ, ಎರಡು ಬತ್ತಿಗಳನ್ನು ಹಾಕಿ ಹಚ್ಚುವ ದೀಪವು ಗಂಡ ಮತ್ತು ಹೆಂಡತಿಯ (ಶಿವ-ಶಕ್ತಿ) ಸಂಕೇತವಾಗಿದೆ.
ಬೆಂಗಳೂರು: ಇನ್ನೇನು ಬಿಗ್ಬಾಸ್ ಸೀಸನ್ 12 ಮುಗಿಯಲು ದಿನಗಣನೆ ಶುರುವಾಗಿದ್ದು, ಸ್ಪರ್ಧಿಗಳಿಗೆ ಇದೇ ವಾರ ದೊಡ್ಮನೆಯಲ್ಲಿ ಕೊನೆಯ ವಾರವಾಗಲಿದೆ. ಇದೀಗ ಬಿಗ್ಬಾಸ್ ಮನೆಯಲ್ಲಿ ಎಲ್ಲ ಸ್ಪರ್ಧಿಗಳು ತಮ್ಮ ತಪ್ಪನ್ನು ಅರಿತು ಒಬ್ಬರಿಗೊಬ್ಬರು ಕ್ಷಮೆಯಾಚಿಸುವ ಮೂಲಕ ಮುನಿಸಿಗೆ ಅಂತ್ಯ ಹಾಡಿ, ಒಬ್ಬರಿಗೊಬ್ಬರು ಕ್ಷಮೆ ಕೇಳಿದ್ದಾರೆ.ಇದೀಗ ಕಲರ್ಸ್ ಕನ್ನಡ ವಾಹಿನಿ ಬಿಟ್ಟಿರುವ ಪ್ರೋಮೋದಲ್ಲಿ ಗಿಲ್ಲಿ ಯಾವಾಗಲೂ ಎದುರಾಳಿಯಾಗಿ ಮಾತನಾಡುತ್ತಿದ್ದ ಅಶ್ವಿನಿ ಅವರಲ್ಲಿ ಕ್ಷಮೆಯಾಚನೆ ಮಾಡಿದ್ದಾರೆ. ಸೀಸನ್ ಆರಂಭದಿಂದಲೂ ಗಿಲ್ಲಿ ಹಾಗೂ ಅಶ್ವಿನಿ ಗೌಡ ಅವರ ನಡುವೆ ಜಗಳ, ಮುನಿಸಿತ್ತು. ಆದರೆ ಇಬ್ಬರೂ ಸಮಯ ಹಾಗೂ
ನವದೆಹಲಿ: ಕರ್ನಾಟಕದ ಉಪಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅವರು ಮುಂಬರುವ ಅಸ್ಸಾಂ ವಿಧಾನಸಭಾ ಚುನಾವಣೆಯ ಯೋಜನೆಗಾಗಿ ಶುಕ್ರವಾರ ರಾಷ್ಟ್ರ ರಾಜಧಾನಿಯಲ್ಲಿದ್ದು, ಕೆಲವು ಹಿರಿಯ ನಾಯಕರನ್ನು ಭೇಟಿ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.ಛತ್ತೀಸ್ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಅವರೊಂದಿಗೆ ಅಸ್ಸಾಂ ವಿಧಾನಸಭಾ ಚುನಾವಣೆಯ ಹಿರಿಯ ವೀಕ್ಷಕರಾಗಿರುವ ಶಿವಕುಮಾರ್, ರಾಷ್ಟ್ರ ರಾಜಧಾನಿಗೆ ಭೇಟಿ ನೀಡುವ ಸಮಯದಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಬಹುದು.
ಬೆಂಗಳೂರು: ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದಲ್ಲಿ ನಡೆದ ಬಾಲಕ ಸುಮಂತ್ (15) ನಿಗೂಢ ಸಾವಿನ ಪ್ರಕರಣ ಇದೀಗ ಹೊಸ ತಿರುವು ಪಡೆದಿದೆ. ಇದೀಗ ಪ್ರಕರಣದ ತನಿಖೆಯಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಇದೊಂದು ಕೊಲೆ ಎಂದುಅನುಮಾನಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.ಇತ್ತೀಚೆಗೆ ಕೆರೆಯಲ್ಲಿ ಸಿಕ್ಕಿದ ಕತ್ತಿ ಮತ್ತು ಟಾರ್ಚ್ ಲೈಟ್ ತನಿಖೆಗೆ ತಿರುವು ನೀಡಿದೆ, ಹಾಗೂ ಈ ಪ್ರಕರಣದ ತನಿಖೆಗೆ ಡಿವೈಎಸ್ಪಿ ನೇತೃತ್ವದಲ್ಲಿ ತಂಡ ರಚಿಸಲಾಗಿದೆ. ಏನಿದು ಪ್ರಕರಣ: ಓಡಿಲ್ನಾಳ ಗ್ರಾಮದ ಸಂಬೋಳ್ಯದ ಸುಮಂತ್ ಎಂಬ ಬಾಲಕನ ಶವ ಕೆರೆಯಲ್ಲಿ ಪತ್ತೆಯಾಗಿದೆ. ಇದೀಗ
ದಾವಣಗೆರೆ: ಬಿಜೆಪಿಗೆ ಮರಳುವಂತೆ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ ಎನ್ನುವ ಮೂಲಕ ಬಿಜೆಪಿಗೆ ಮರಳುವ ಕುರಿತು ಎಂದು ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಕೆ.ಎಸ್ ಈಶ್ವರಪ್ಪ ಅವರು ಮನಬಿಚ್ಚಿ ಮಾತನಾಡಿದ್ದಾರೆ.ದಾವಣಗೆರೆಯ ಹರಿಹರದ ಪಂಚಮಸಾಲಿ ಪೀಠದಲ್ಲಿ ಪ್ರತಿಕ್ರಿಯಿಸಿದ ಅವರು, ಬಿಜೆಪಿಗೆ ಮರಳುವಂತೆ ಕಾರ್ಯಕರ್ತರಿಂದ ಒತ್ತಡ ಬರುತ್ತಿದ್ದು, ಪಕ್ಷದಲ್ಲಿ ಬದಲಾವಣೆ ಸಲುವಾಗಿ ನಾನು ಹೊರ ಬಂದಿರುವುದು. ಆ ಪರಿವರ್ತನೆ ಇವತ್ತಲ್ಲ ನಾಳೆ ಆಗುತ್ತೆ. ಬಿಜೆಪಿ ಕಾರ್ಯಕರ್ತರು ಪಕ್ಷದಲ್ಲಿ ಸಾಕಷ್ಟು ನೋವು ಅನುಭವಿಸುತ್ತಿದ್ದಾರೆ. ನನ್ನ ಮನಸ್ಸಲ್ಲೂ, ಯತ್ನಾಳ್ ಮನಸ್ಸಲ್ಲೂ ಇದೆ ವಿಚಾರ ಇದೆ ಎಂದು ಹೇಳಿದರು.
ಬೆಂಗಳೂರು: ನಾವು ಸಂಸ್ಕೃತಿಯನ್ನು ಬಿಜೆಪಿ ಕಲಿಯಬೇಕಾ, ಅವರೆಲ್ಲ ಸರ್ವಧರ್ಮ ಗ್ರಂಥಗಳ ಹೆಸರಿನಲ್ಲಿ ರಾಜಕೀಯ ಮಾಡುವ ಇವರಿಗೆ ಸಂಸ್ಕೃತಿ ಇಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು.ಈ ಪ್ರಕರಣದ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು ರಾಜೀವ್ ಗೌಡ ಆಗಲಿ, ಯಾರೇ ಆಗಲಿ ಕಾನೂನಿಗಿಂತ ದೊಡ್ಡವರಲ್ಲ. ಆದರೆ ಅವರು ಮಾತನಾಡಿರೋದು ಸರಿಯಲ್ಲ. ಅದನ್ನು ಸಮರ್ಥನೆ ಮಾಡಿಕೊಳ್ಳುವುದು ಕೂಡ ತಪ್ಪು ಆಗುತ್ತೆ ಯಾರಿಗೂ ಕೂಡ ಕಾನೂನು ಮತ್ತು ಸಂವಿಧಾನದಲ್ಲಿ ಬೇರೆ ಅವರನ್ನ ನಿಂದಿಸುವ ಮತ್ತು ಅವಾಚ್ಯ ಶಬ್ಧದಲ್ಲಿ ಮಾತನಾಡುವ ಹಕ್ಕು ಯಾರಿಗೂ ಇಲ್ಲ. ಏನೇ ಆಗಿರಲಿ ಅಧ್ಯಕ್ಷರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.
ಬೆಂಗಳೂರು: ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿ ಪ್ರಸ್ತುತ ಕೇಂದ್ರದಲ್ಲಿ ಸಚಿವರಾಗಿರುವ ಎಚ್.ಡಿ. ಕುಮಾರಸ್ವಾಮಿ ಅವರು ಮತ್ತೆ ರಾಜ್ಯ ರಾಜಕಾರಣ ಬರುವ ಕುರಿತು ಮಹತ್ವದ ಘೋಷಣೆ ಮಾಡಿದ್ದಾರೆ. ಮಕರ ಸಂಕ್ರಾಂತಿ ಹಬ್ಬದ ದಿನವೇ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಶೀಘ್ರದಲ್ಲೇ ರಾಜ್ಯ ರಾಜಕೀಯಕ್ಕೆ ನಾನು ಬರುತ್ತೇನೆ ಎಂದು ಹೇಳಿದ್ದಾರೆ.ಕೇಂದ್ರದಲ್ಲಿ ಪ್ರಧಾನಿಗಳು ಹುದ್ದೆ ಕೊಟ್ಟಿದ್ದಾರೆ. ಆ ಎರಡು ಇಲಾಖೆಯಲ್ಲಿ ಪ್ರಾಮಾಣಿಕವಾಗಿ ಉತ್ತಮ ಕೆಲಸ ಮಾಡೋಕೆ ಈಗಾಗಲೇ ಅಡಿಗಲ್ಲು ಹಾಕಿದ್ದೇನೆ. ರಾಜ್ಯ ರಾಜಕೀಯಕ್ಕೆ ಯಾವ ಸಮಯದಲ್ಲಿ ಬರಬೇಕು ಅಂತ ತೀರ್ಮಾನ ಮಾಡ್ತೀನಿ. ರಾಜ್ಯ ರಾಜಕೀಯಕ್ಕೆ ಬರಲೇಬೇಕಾಗುತ್ತದೆ. ಯಾವಾಗ ಅಂತ ತೀರ್ಮಾನ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
ನವದೆಹಲಿ: ಉತ್ತರ ದೆಹಲಿಯಲ್ಲಿ ನಡೆದ ಗುಂಡಿನ ಚಕಮಕಿಯ ನಂತರ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ಗೆ ಸಂಬಂಧಿಸಿದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಮೂಲಗಳು ಗುರುವಾರ ತಿಳಿಸಿವೆ.ಗುಂಡಿನ ಚಕಮಕಿಯ ಸಮಯದಲ್ಲಿ, ಶಾರ್ಪ್ಶೂಟರ್ಗಳಲ್ಲಿ ಒಬ್ಬನ ಕಾಲಿಗೆ ಗುಂಡು ತಗುಲಿದೆ ಎಂದು ಅವರು ಹೇಳಿದರು.ದೆಹಲಿಯ ಹೊರವಲಯದ ಜಿಮ್ನಲ್ಲಿ ಈಚೆಗೆ ನಡೆದ ಗುಂಡಿನ ದಾಳಿ ಘಟನೆಗಳಲ್ಲಿ ಮತ್ತು ಪೂರ್ವ ದೆಹಲಿಯ ವಿನೋದ್ ನಗರದಲ್ಲಿ ಉದ್ಯಮಿಯೊಬ್ಬರ ಮೇಲೆ ನಡೆದ ದಾಳಿಯಲ್ಲಿ ಈ ಇಬ್ಬರು ವ್ಯಕ್ತಿಗಳು ಭಾಗಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ, ಅಲ್ಲಿ ಹಣ ವಸೂಲಿ ಮಾಡಲು ಗುಂಡು ಹಾರಿಸಲಾಗಿತ್ತು.
ನಟಿ ಅಮೂಲ್ಯ ಅವರು ಮದುವೆ ಆದ ಮೇಲೆ ಮತ್ತೇ ತೆರೆ ಮೇಲೆ ಬರುತ್ತಿದ್ದು, ಇದೀಗ ಅವರಿಗೆ ಜೋಡಿಯಾಗಿ ಶ್ರೀರಾಮ್ ಅವರನ್ನು ಪರಿಚಯಿಸಿದೆ. ಸಂಕ್ರಾಂತಿ ವಿಶೇಷ ಸುಗ್ಗಿ ಸಂಭ್ರಮದಲ್ಲಿ ಇದೀಗ ಪೀಕಬೂ ತಂಡ ನಾಯಕ ನಟನನ್ನು ಪರಚಯಿಸಿದೆ. ಶ್ರಾವಣಿ ಸುಬ್ರಮಣ್ಯ ಹಿಟ್ ಕಾಂಬಿನೇಷನ್ ನಿರ್ದೇಶಕ ಮಂಜು ಸ್ವರಾಜ್ ಅವರು ಈ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ನಾಯಕನ ಪರಿಚಯಕ್ಕೆ ವಿಶೇಷ ಟೀಸರ್ ಮಾಡಿರೋ ಪೀಕಬೂ ನಿರ್ದೇಶಕ ಅವರು ನಟನನ್ನು ಪರಿಚಯಿಸಿದ್ದಾರೆ.
ಇನ್ನೇನು ಫಿನಾಲೆಗೆ ದಿನಗಣನೆ ಶುರುವಾಗುತ್ತಿರುವ ಬೆನ್ನಲ್ಲೇ ಬಿಗ್ಬಾಸ್ ಮನೆಯಿಂದ ಮಿಡ್ ವೀಕ್ ಎಲಿಮಿನೇಷನ್ನಲ್ಲಿ ಧ್ರುವಂತ್ ಅವರು ಹೊರಬಂದಿದ್ದಾರೆ. ಮಿಡ್ ವೀಕ್ ಎಲಿಮಿನೇಷನ್ನಲ್ಲಿ ಕೊನೆಯಲ್ಲಿ ಧ್ರುವಂತ್ ಮತ್ತು ಕಾವ್ಯಯಿದ್ದರು. ಧ್ರುವಂತ್ ಎಲಿಮಿನೇಟ್ ಆಗುವ ಮೂಲಕ ಕಾವ್ಯ ಅವರು ಸೇಫ್ ಆಗಿ, ದೊಡ್ಮನೆಯಲ್ಲಿ ಆಟ ಮುಂದುವರೆಸಿದ್ದಾರೆ. ಇನ್ನೂ ತನ್ನ ಆತ್ಮೀಯ ಬಳಗದಲ್ಲಿ ಗುರುತಿಸಿಕೊಂಡಿದ್ದ ಧ್ರುವಂತ್ ಎಲಿಮಿನೇಟ್ ಆಗಿರುವುದಕ್ಕೆ ಅಶ್ವಿನಿ ಗೌಡ ಭಾವುಕರಾಗಿದ್ದರು.ಇನ್ನೂ ಈ ಸೀಸನ್ನ ಅದ್ಭುತ ಫರ್ಪಾಮೆನ್ಸ್ಗೆ ಕಿಚ್ಚ ಸುದೀಪ್ ಅವರು ಧ್ರುವಂತ್ಗೆ ಈ ಸೀಸನ್ನ ಕಿಚ್ಚನ ಚಪ್ಪಾಳೆಯನ್ನು
ತಮಿಳುನಾಡು: ಜನ ನಾಯಗನ್ ಚಿತ್ರ ನಿರ್ಮಾಪಕರ ಸಿಬಿಎಫ್ಸಿ ಕ್ಲಿಯರೆನ್ಸ್ ಅರ್ಜಿಯನ್ನು ಪುರಸ್ಕರಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಹೈಕೋರ್ಟ್ ವಿಭಾಗೀಯ ಪೀಠವು ಈ ವಿಷಯವನ್ನು ಪರಿಗಣಿಸುತ್ತಿರುವಾಗ ತನ್ನ ಹಸ್ತಕ್ಷೇಪದ ಅಗತ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.ನಟ - ರಾಜಕಾರಣಿ ವಿಜಯ್ ನಟಿಸಿದ ತಮಿಳು ಚಲನಚಿತ್ರ "ಜನ ನಾಯಗನ್" ನಿರ್ಮಾಪಕರು ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯಿಂದ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ಜನವರಿ 15 ವಜಾಗೊಳಿಸಿದೆ.ನ್ಯಾಯಮೂರ್ತಿ ದೀಪಂಕರ್ ದತ್ತ ಮತ್ತು ನ್ಯಾಯಮೂರ್ತಿ ಆಗಸ್ಟೀನ್ ಜಾರ್ಜ್ ಮಸಿಹ್ ಅವರನ್ನೊಳಗೊಂಡ ಪೀಠವು ಜನವರಿ
ರಾಜ್ಯದ ವಿವಿಧ ಭಾಗಗಳಲ್ಲಿ ಚಳಿ ಪ್ರಮಾಣ ಸ್ವಲ್ಪ ಮಟ್ಟಿಗೆ ಇಂದು ಕಡಿಮೆಯಾಗಿದ್ದು, ಬಹುತೇಕ ಭಾಗಗಳಲ್ಲಿ ಒಣಹವೆ ಇಂದು ಮುಂದುವರಿದಿದೆ. ಇನ್ನೂ ರಾಜ್ಯದ ಹಲವೆಡೆ ಕಳೆದ 24 ಗಂಟೆಯ ಅವಧಿಯಲ್ಲಿ ವಿವಿಧ ಭಾಗಗಳಲ್ಲಿ ಸಾಧಾರಣ ಮಳೆ ಆಗಿದೆ. ರಾಜ್ಯದ ವಿವಿಧ ಭಾಗದಲ್ಲಿ ಕನಿಷ್ಠ ತಾಪಮಾನದಲ್ಲಿ ಹೆಚ್ಚಳವಾಗಿದೆಯಾದರೂ ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.ಹವಾಮಾನ ಇಲಾಖೆ ಮುನ್ಸೂಚನೆಯಂತೆ ರಾಜ್ಯದಲ್ಲಿ 5 ದಿನ ಮಹತ್ವದ ಬದಲಾವಣೆಯಿಲ್ಲ: ಗಳೂರು ಸೇರಿದಂತೆ ಕರ್ನಾಟಕದ
ರಾಯಚೂರು: ಸಾಹಿತ್ಯ, ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿದ್ದ ದೇವದುರ್ಗ ತಾಲ್ಲೂಕಿನ ತಿಂಥಣಿ ಬ್ರಿಜ್ಡ್ ಕಾಗಿನೆಲೆ ಕನಕ ಗುರುಪೀಠದ ಸಿದ್ದರಾಮನಂದ ಸ್ವಾಮೀಜಿ ಅವರು ಇಂದು ಬೆಳಿಗ್ಗೆ ಹೃದಯಘಾತದಿಂದಾಗಿ ನಿಧನರಾಗಿದ್ದಾರೆ.49 ವರ್ಷದ ಸ್ವಾಮಿಜಿ ಅವರಿಗೆ ಬೆಳಗಿನ ಜಾವ 3.40 ರ ಸುಮಾರಿಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಲಿಂಗಸೂಗೂರು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಷ್ಟರಲ್ಲಿ ಅವರು ಕೊನೆಯುಸಿರು ಎಳೆದಿದ್ದಾರೆ. ಹಾಲುಮತದ ಪದ್ಧತಿಯಂತೆ ತಿಂಥಣಿಯ ಕನಕ ಗುರು ಪೀಠದಲ್ಲಿಯೇ ಸ್ವಾಮೀಜಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಭಕ್ತರು ತಿಳಿಸಿದ್ದಾರೆಸಿದ್ದರಾಮಾನಂದ ಸ್ವಾಮೀಜಿ ಮೂಲತಃ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಕಲಮರಹಳ್ಳಿಯವರು. ಮಹದೇವಯ್ಯ ಮತ್ತು ಜಯಮ್ಮ ದಂಪತಿಯ 2ನೇ ಪುತ್ರರು. ಸಿದ್ದರಾಮನಂದ ಸ್ವಾಮೀಜಿಯ ಮೂಲ ಹೆಸರು ಮೋಹನ್ ಪ್ರದಾನ ಎಂಬುದಾಗಿತ್ತು.
ಬೆಂಗಳೂರು: ಕನ್ನಡದ ರಿಯಾಲಿಟಿ ಶೋ ಬಿಗ್ಬಾಸ್ ಮಾಜಿ ಸ್ಪರ್ಧಿ, ನಟಿ ಕಾರುಣ್ಯಾ ರಾಮ್ ಅವರು ತನ್ನ ಸ್ವಂತ ತಂಗಿ ಸಮೃದ್ಧಿ ರಾಮ್ ವಿರುದ್ಧವೇ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಈ ಹಿಂದೆ ಕಾರುಣ್ಯ ರಾಮ್ ಅವರು ಸಮೃದ್ಧಿ ವಿರುದ್ಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಗ ಎನ್ಸಿಆರ್ ದಾಖಲಾಗಿತ್ತು. ಈಗ ಕಾರುಣ್ಯ ರಾಮ್ ಸಹೋದರಿ ವಿರುದ್ಧ ಸಿಸಿಬಿಯಲ್ಲಿ ದೂರು ನೀಡಿದ್ದಾರೆ.ಕಾರುಣ್ಯಾ ಅವರು ತನ್ನ ತಂಗಿ ಸಮೃದ್ಧಿ ರಾಮ್, ಪ್ರತಿಭಾ, ಕಪಿಲ್, ಪ್ರಜ್ವಲ್, ರಕ್ಷಿತ್ ಮತ್ತು ಸಾಗರ್ ಎಂಬುವವರ ವಿರುದ್ಧ ಸಿಸಿಬಿ ಪೊಲೀಸ್ ಠಾಣೆಯಲ್ಲಿ ವಂಚನೆ ದೂರು ದಾಖಲಿಸಿದ್ದಾರೆ.ಮೇಕಪ್ ಆರ್ಟಿಸ್ಟ್ ಆಗಿರುವ ಸಹೋದರಿ ಸಮೃದ್ಧಿ ರಾಮ್ ಬೆಟ್ಟಿಂಗ್ ಆಡಿ ಸುಮಾರು ₹ 25 ಲಕ್ಷ ಸಾಲ ಮಾಡಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ವ್ಯವಹಾರದಲ್ಲೂ ಅಪಾರ ನಷ್ಟ ಅನುಭವಿಸಿದ್ದಾರೆ. ಖಾಸಗಿ ವ್ಯಕ್ತಿಗಳಿಂದ ಸಾಲ ಪಡೆದಿದ್ದಾರೆ. ಹೀಗಾಗಿ ಮನೆಯಲ್ಲಿದ್ದ ಚಿನ್ನ ಹಾಗೂ ಹಣವನ್ನು ಸಾಲ ತೀರಿಸಲು ಬಳಸಿಕೊಂಡು ವಂಚಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಮುಂಬೈ: ಭಾರತ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದ್ದಾರೆ. ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಅವರನ್ನು ಹಿಂದಿಕ್ಕಿ ಐಸಿಸಿ ಏಕದಿನ ರ್ಯಾಂಕಿಂಗ್ನಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.ರನ್ ಮಿಷಿನ್ ಖ್ಯಾತಿಯ ವಿರಾಟ್ ಅವರು 1,403 ದಿನಗಳ ಬಳಿಕ ಮತ್ತೆ ಅಗ್ರಸ್ಥಾನ ಪಡೆದಿದ್ದಾರೆ. ಅಗ್ರಸ್ಥಾನದಲ್ಲಿದ್ದ ರೋಹಿತ್ ಶರ್ಮಾ ಅವರು ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. 2027ರ ಏಕದಿನ ವಿಶ್ವಕಪ್ ಮೇಲೆ ಕಣ್ಣಿಟ್ಟಿರುವ ರನ್ ಮಿಷಿನ್ ಕೊಹ್ಲಿ ಹೊಸ ಮೈಲುಗಲ್ಲು ಸಾಧಿಸಿದ್ದಾರೆ. ವಿರಾಟ್ ಅವರು 37ನೇ ವಯಸ್ಸಿನಲ್ಲಿ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ನಂ.1 ಬ್ಯಾಟರ್ ಆಗಿ ಹೊರಹೊಮ್ಮಿದ್ದಾರೆ. ಬುಧವಾರ ಬಿಡುಗಡೆಯಾದ ನೂತನ ಏಕದಿನ ರ್ಯಾಂಕಿಗ್ ಪಟ್ಟಿಯಲ್ಲಿ 785 ಅಂಕ ಪಡೆಯುವ ಮೂಲಕ ಅಗ್ರಸ್ಥಾನಕ್ಕೆ ಜಿಗಿದಿದ್ದಾರೆ. ನ್ಯೂಜಿಲೆಂಡ್ನ ಡೇರಿಲ್ ಮಿಚೆಲ್ ಎರಡನೇ ಸ್ಥಾನದಲ್ಲಿದ್ದಾರೆ.
ರಾಜ್ ಕೋಟ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ದ್ವಿತೀಯ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಸೋತ ಬಳಿಕ ಈ ಒಬ್ಬ ಬೌಲರ್ ನ ಅನುಪಸ್ಥಿತಿ ಕಾಡುತ್ತಿದೆ. ದ್ವಿತೀಯ ಏಕದಿನ ಪಂದ್ಯವನ್ನು ಟೀಂ ಇಂಡಿಯಾ 7 ವಿಕೆಟ್ ಗಳಿಂದ ಸೋತಿದೆ. ಭಾರತ ನೀಡಿದ್ದ 285 ರನ್ ಗಳ ಗುರಿಯನ್ನು ನ್ಯೂಜಿಲೆಂಡ್ 47.3 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು ತಲುಪಿತು. ಡೆರಿಲ್ ಮಿಚೆಲ್ ಮತ್ತು ವಿಲ್ ಯಂಗ್ ಭರ್ಜರಿ ಜೊತೆಯಾಟ ಕಿವೀಸ್ ಗೆಲುವಿಗೆ ಕಾರಣವಾಯ್ತು.
ರಾಜ್ ಕೋಟ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ದ್ವಿತೀಯ ಏಕದಿನ ಪಂದ್ಯದಲ್ಲಿ ಒತ್ತಡದ ಸಂದರ್ಭದಲ್ಲಿ ಅದ್ಭುತ ಇನಿಂಗ್ಸ್ ಆಡಿದ ಕೆಎಲ್ ರಾಹುಲ್ ಗೆ ಫ್ಯಾನ್ಸ್ ಬಹುಪರಾಕ್ ಹೇಳಿದ್ದಾರೆ. ಇಂದು ಟಾಸ್ ಸೋತ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಬೇಕಾಯಿತು. ರೋಹಿತ್ ಶರ್ಮಾರಿಂದ ಎಂದಿನಂತೆ ಅಬ್ಬರದ ಆರಂಭ ಸಿಗಲಿಲ್ಲ. ಅವರು 24 ರನ್ ಗಳಿಗೆ ವಿಕೆಟ್ ಒಪ್ಪಿಸಿದರು. ಇನ್ನೊಂದೆಡೆ ಉತ್ತಮ ಆಟವಾಡಿದ ನಾಯಕ ಶುಭಮನ್ ಗಿಲ್ 56 ರನ್ ಗಳಿಸಿ ಔಟಾದರು. ಅವರ ಹಿಂದೆಯೇ ಕೊಹ್ಲಿ 23, ಶ್ರೇಯಸ್ ಅಯ್ಯರ್ 8 ರನ್ ಗಳಿಗೆ ವಿಕೆಟ್ ಒಪ್ಪಿಸಿದರು.
ಚಿತ್ರದುರ್ಗ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶಿಕಾರಿಪುರದಲ್ಲಿ ಪಾದಯಾತ್ರೆ ಮಾಡುವುದು ಬೇಡ. ಅವರೇ ಬಂದು ಸ್ಪರ್ಧಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಸವಾಲು ಹಾಕಿದ್ದಾರೆ. ಇಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಯೊಂದಕ್ಕೆ ಉತ್ತರ ಕೊಡುವಾಗ, ಜೆಡಿಎಸ್, ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ನರೇಂದ್ರ ಮೋದಿಯವರ ಕೈಯನ್ನು ಬಲಪಡಿಸಲು ಎನ್ಡಿಎ ಮೈತ್ರಿಕೂಟ ಸೇರಿದ್ದಾರೆ. ಹಾಗಾಗಿ, ಸ್ಥಳೀಯವಾಗಿ ಸ್ಪರ್ಧೆ ಕುರಿತು ರಾಷ್ಟ್ರೀಯ ನಾಯಕರು ನಮ್ಮ ಜೊತೆ, ಜೆಡಿಎಸ್ ಜೊತೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಸ್ಪಷ್ಟಪಡಿಸಿದರು.
ಬೆಂಗಳೂರು: ಬಳ್ಳಾರಿ ವಿಷಯ ರಾಜ್ಯದಲ್ಲಿ ದೊಡ್ಡ ಸದ್ದು ಮಾಡುವ ಸಂದರ್ಭದಲ್ಲೇ ಶಿಡ್ಲಘಟ್ಟದಲ್ಲೂ ಬ್ಯಾನರ್ ಹಾಕಿದ್ದಾರೆ. ಬ್ಯಾನರ್ ಹಾಕಲು ಅನುಮತಿ ಪಡೆದಿದ್ದೀರಾ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಪ್ರಶ್ನಿಸಿದ್ದಾರೆ. ಪತ್ರವನ್ನೂ ನೀಡಿಲ್ಲ ಹಣ ಕಟ್ಟಿಲ್ಲ; ಅನುಮತಿ ಪಡೆದಿಲ್ಲ ಎಂದು ಕಮೀಷನರ್ ಹೇಳಿದ್ದಾಗಿ ಗಮನ ಸೆಳೆದರು.ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಕಾಂಗ್ರೆಸ್ ನಾಯಕರ ಅಟ್ಟಹಾಸ ರಾಜ್ಯದಲ್ಲಿ ಹೆಚ್ಚಾಗಿದೆ. ದರ್ಪ ಹೆಚ್ಚಾಗಿದೆ. ಮುಖ್ಯಮಂತ್ರಿಗಳು ರಾಜೀವ್ ಗೌಡರನ್ನು ಬಂಧಿಸಬೇಕು. ಕಾನೂನು ಕೈಗೆತ್ತಿಕೊಳ್ಳುವ ಮಾತನಾಡಿದ ಇವರನ್ನು ಗೂಂಡಾ ಕಾಯ್ದೆ ಅಡಿಯಲ್ಲಿ ತಕ್ಷಣ ಬಂಧಿಸಬೇಕು. ಇಲ್ಲವಾದರೆ, ಇದನ್ನು ನಾವು ರಾಜ್ಯಮಟ್ಟದ ವರೆಗೆ ತೆಗೆದುಕೊಂಡು ಹೋಗುತ್ತೇವೆ ಎಂದು ಎಚ್ಚರಿಸಿದರು.
ಬೆಂಗಳೂರು: ನಿನ್ನೆ ಮೈಸೂರಿನಲ್ಲಿ ರಾಹುಲ್ ಗಾಂಧಿ ಜೊತೆ ಏರ್ ಪೋರ್ಟ್ ನಲ್ಲಿ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ರಹಸ್ಯ ಮಾತುಕತೆ ನಡೆಸಿದ್ದರು. ಈ ಮಾತುಕತೆ ಬಗ್ಗೆ ಇಂದು ಮಾಧ್ಯಮಗಳು ಡಿಕೆಶಿಯನ್ನು ಪ್ರಶ್ನೆ ಮಾಡಿದ್ದಾರೆ. ರಾಹುಲ್ ಗಾಂಧಿ ಜೊತೆ ರಹಸ್ಯವಾಗಿ ಏನು ಮಾತನಾಡಿದ್ರಿ? ಅಧಿಕಾರ ಹಂಚಿಕೆ ಬಗ್ಗೆ ಕೇಳಿದ್ದೀರಾ ಎಂದು ಮಾಧ್ಯಮಗಳು ನೇರವಾಗಿ ಪ್ರಶ್ನೆ ಮಾಡಿವೆ. ಇದಕ್ಕೆ ಉತ್ತರಿಸಿದ ಡಿಕೆಶಿ ‘ನಾನು ಕಾಂಗ್ರೆಸ್ ಅಧ್ಯಕ್ಷ. ಅವರು ನಮ್ಮ ರಾಷ್ಟ್ರೀಯ ನಾಯಕರು. ನಾವು ಭೇಟಿ ಮಾಡೋದು, ಗೌರವ ಕೊಡೋದು, ಔಪಚಾರಿಕವಾಗಿ ಸ್ವಾಗತ ಕೋರುವುದು ಮಾತನಾಡುವುದು ಎಲ್ಲಾ ಸಹಜ. ನಾವು ಏನೆಲ್ಲಾ ಮಾತನಾಡಿದ್ದೇವೆ ಎಂದು ಎಲ್ಲಾ ಪಬ್ಲಿಕ್ ನಲ್ಲಿ ಹೇಳಕ್ಕಾಗುತ್ತಾ?
ಮುಂಬೈ: ಟೀಂ ಇಂಡಿಯಾ ಕ್ರಿಕೆಟ್ ದಿಗ್ಗಜ ವಿರಾಟ್ ಕೊಹ್ಲಿ ಮತ್ತೆ ವಿಶ್ವ ಕ್ರಿಕೆಟ್ ನಲ್ಲಿ ನಂ1 ಶ್ರೇಯಾಂಕಕ್ಕೇರಿದ್ದಾರೆ. ಏಕದಿನ ಕ್ರಿಕೆಟ್ ನಲ್ಲಿ ಕೊಹ್ಲಿ ನಂ1 ಶ್ರೇಯಾಂಕಕ್ಕೆ ಬಡ್ತಿ ಪಡೆದಿದ್ದಾರೆ. ಕಳೆದ ದಕ್ಷಿಣ ಆಫ್ರಿಕಾ ಸರಣಿ ಬಳಿಕ ಈಗ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲೂ ಕೊಹ್ಲಿ ಅದ್ಭುತ ಫಾರ್ಮ್ ಮುಂದವರಿಸಿದ್ದಾರೆ. ಕಳೆದ ಪಂದ್ಯದಲ್ಲಿ ಅವರು 93 ರನ್ ಗಳ ಭರ್ಜರಿ ಇನಿಂಗ್ಸ್ ಆಡಿದ್ದರು. ಇದರ ಬೆನ್ನಲ್ಲೇ ಅವರಿಗೆ ಐಸಿಸಿ ಶ್ರೇಯಾಂಕದಲ್ಲಿ ಬಡ್ತಿ ಸಿಕ್ಕಿದೆ. ವಿರಾಟ್ ಕೊಹ್ಲಿ ನಂ1 ಆಗುತ್ತಿರುವುದು ಇದೇ ಮೊದಲಲ್ಲ. ಆದರೆ ಈಗ ಬಹಳ ದೀರ್ಘ ಸಮಯದ ನಂತರ 1 ನೇ ಶ್ರೇಯಾಂಕಕ್ಕೇರಿದ್ದಾರೆ.
ಕೆಲವೊಂದು ಆಹಾರ ವಸ್ತುಗಳನ್ನು ಸೇವಿಸಿದ ತಕ್ಷಣ ನೀರು ಸೇವಿಸಬಾರದು ಎನ್ನುತ್ತಾರೆ. ಅದರಲ್ಲಿ ಬಜ್ಜಿ ಕೂಡಾ ಒಂದು. ಬಜ್ಜಿ ತಿಂದ ತಕ್ಷಣ ನೀರು ಕುಡಿದ್ರೆ ಏನಾಗುತ್ತದೆ ಇಲ್ಲಿ ನೋಡಿ. ಬಜ್ಜಿ ಎಂದರೆ ಎಣ್ಣೆಯಲ್ಲಿ ಡೀಪ್ ಫ್ರೈ ಮಾಡಿ ಮಾಡುವಂತಹ ಆಹಾರ ವಸ್ತು. ಇದನ್ನು ಸೇವಿಸುವಾಗ ನೀರು ಅಥವಾ ನೀರಿನಂಶ ಏನಾದರೂ ಸೇವಿಸಬೇಕು ಅನಿಸುವುದು ಸಹಜ. ಇಲ್ಲದೇ ಹೋದರೆ ಗಂಟಲು ಕಟ್ಟಿದಂತಾಗುತ್ತದೆ. ಆದರೆ ಬಜ್ಜಿ ಸೇವಿಸಿದ ತಕ್ಷಣ ನೀರು ಸೇವನೆ ಮಾಡಬಾರದು. ಇದಕ್ಕೆ ಕಾರಣವೂ ಇದೆ. -ಬಜ್ಜಿ ಸೇವಿಸಿದ ತಕ್ಷಣ ನೀರು ಸೇವನೆ ಮಾಡುವುದರಿಂದ ಜೀರ್ಣ ಕ್ರಿಯೆಗೆ ಸಮಸ್ಯೆಯಾಗಬಹುದು.-ಹೊಟ್ಟೆಯಲ್ಲಿ ಗುಳು ಗುಳು ಆದಂತೆ ಅಥವಾ ಹೊಟ್ಟೆಯ ಕಿರಿ ಕಿರಿ ಆಗಬಹುದು.
ಚಿತ್ರದುರ್ಗ: ಕಾಂಗ್ರೆಸ್ಸಿಗರ ಕುರ್ಚಿ ಕಾದಾಟದಿಂದ ರಾಜ್ಯದ ಜನರು ತೊಂದರೆ ಅನುಭವಿಸುತ್ತಿದ್ದಾರೆ. ರಾಜ್ಯದಲ್ಲಿ ನಿಜವಾಗಿ ಏನೂ ಅಭಿವೃದ್ಧಿ ಆಗಿಲ್ಲ; ಕಾಂಗ್ರೆಸ್ಸಿನ ವಿರುದ್ಧ ಜನರು ಹಿಡಿಶಾಪ ಹಾಕುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರ ಕೊಟ್ಟರು. ನಿನ್ನೆ ಜರ್ಮನಿಯ ಚಾನ್ಸೆಲರ್ ಕರ್ನಾಟಕಕ್ಕೆ ಬಂದಿದ್ದರು. ಜರ್ಮನಿಯು ಉತ್ಪಾದನಾ ಹಬ್ ಆಗಿರುವ ತಂತ್ರಜ್ಞಾನದ ದೇಶ. ಅಂಥ ದೇಶದ ಚಾನ್ಸೆಲರ್ ಕರ್ನಾಟಕಕ್ಕೆ ಬಂದರೆ, ಇವರಲ್ಲಿ ಒಬ್ಬರು ಸಿಎಂ ಕುರ್ಚಿ ಉಳಿಸಿಕೊಳ್ಳಲು, ಇನ್ನೊಬ್ಬರು ಅದೇ ಕುರ್ಚಿ ಕಸಿದುಕೊಳ್ಳಲು ಹೋಗಿ ರಾಹುಲ್ ಗಾಂಧಿ ಜೊತೆ ನಿಂತುಕೊಂಡಿದ್ದಾರೆ. ಇದರಂದ ರಾಜ್ಯದ ಪರಿಸ್ಥಿತಿ ಏನಾಗಬೇಕು ಎಂದು ಕೇಳಿದರು.
ರಾಜ್ ಕೋಟ್: ನ್ಯೂಜಿಲೆಂಡ್ ವಿರುದ್ಧ ದ್ವಿತೀಯ ಏಕದಿನ ಪಂದ್ಯವಾಡಲು ರಾಜ್ ಕೋಟ್ ನಲ್ಲಿರುವ ಟೀಂ ಇಂಡಿಯಾ ಕ್ರಿಕೆಟ್ ದಿಗ್ಗಜ ವಿರಾಟ್ ಕೊಹ್ಲಿ ಚಿನ್ನದಿಂದ ಮಾಡಿದ ಮೊಬೈಲ್ ಕವರ್ ಕೊಡಲು ಅಭಿಮಾನಿಯೊಬ್ಬ ಬಂದಿದ್ದಾನೆ. ಇದರ ಬೆಲೆ ಕೇಳಿದ್ರೆ ನಿಜಕ್ಕೂ ಶಾಕ್ ಆಗ್ತೀರಿ. ನಾವೆಲ್ಲಾ ಮೊಬೈಲ್ ಕವರ್ ಎಂದರೆ ಐನೂರೋ, ಒಂದು ಸಾವಿರ ರೂ.ಗಳಿಗೋ ದುಬಾರಿ ಎಂದು ಚಿನ್ನದಂತೆ ನೋಡಿಕೊಳ್ಳುತ್ತೇವೆ. ಆದರೆ ಗುಜರಾತ್ ನ ಅಂಕಿತ್ ಪಟೇಲ್ ಎನ್ನುವ ಅಪ್ಪಟ ವಿರಾಟ್ ಕೊಹ್ಲಿ ಅಭಿಮಾನಿ ಚಿನ್ನದಿಂದಲೇ ಮಾಡಿದ ಮೊಬೈಲ್ ಕವರ್ ತಂದಿದ್ದಾರೆ.
ಬೆಂಗಳೂರು: ಶಬರಿಮಲೆಗೆ ಹೋಗುವ ಕರ್ನಾಟಕದ ವಾಹನಗಳನ್ನು ತಡೆದು ಕೇರಳ ಉದ್ಧಟತನ ಮೆರೆಯುತ್ತಿದೆ ಎಂದು ವರದಿಯಾಗಿದೆ. ಇದರ ಬಗ್ಗೆ ಜೆಡಿಎಸ್ ಘಟಕ ಆಕ್ರೋಶ ವ್ಯಕ್ತಪಡಿಸಿದೆ. ಮೊನ್ನೆಯಷ್ಟೇ ಕನ್ನಡ ಶಾಲೆಗಳಲ್ಲಿ ಮಲಯಾಳಂ ಹೇರಿಕೆ ಮಾಡಲು ಹೊರಟಿದ್ದು ಕೇರಳ ಮತ್ತು ಕರ್ನಾಟಕ ನಡುವಿನ ಸಂಘರ್ಷಕ್ಕೆ ಕಾರಣವಾಗಿತ್ತು. ಇದು ತಣ್ಣಗಾಗುತ್ತಿದ್ದಂತೇ ಈಗ ಕೇರಳ ಸರ್ಕಾರ ಮತ್ತೊಂದು ತಗಾದೆ ತೆಗೆದಿದೆ. ಹಿಂದೂಗಳ ಪವಿತ್ರ ಸ್ಥಳ ಶಬರಿಮಲೆಗೆ ತೆರಳುವ ಭಕ್ತರಿಗೆ ಕೇರಳ ಸರ್ಕಾರ ಕಾಟ ಕೊಡುತ್ತಿದೆ. ಕರ್ನಾಟಕದಿಂದ ತೆರಳುವ ವಾಹನಗಳನ್ನು ಅನತಿ ದೂರದಲ್ಲೇ ತಡೆದು ತೊಂದರೆ ಕೊಡುತ್ತಿದೆ.
ಬೆಂಗಳೂರು: ಚಿನ್ನದ ಬೆಲೆ ಮತ್ತೆ ಏರಿಕೆ ಮತ್ತು ಇಳಿಕೆಯಾಗುತ್ತಲೇ ಇದೆ. ಆದರೆ ಇಂದು ವಾರದ ಆರಂಭದಲ್ಲೇ ಪರಿಶುದ್ಧ ಚಿನ್ನದ ದರ ಇಳಿಕೆಯಾದರೆ ಮತ್ತು ಇತರೆ ಚಿನ್ನದ ದರ ಏರಿಕೆ ಕಂಡಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತ ಏರಿಕೆ ಮತ್ತು ಇಳಿಕೆ ಕಂಡಿತ್ತು. ಆದರೆ ಈ ವಾರದ ಆರಂಭದಲ್ಲೇ ಚಿನ್ನದ ದರ ಏರಿಕೆಯಾಗಿದೆ. ಇಂದು ಮತ್ತೆ ಪರಿಶುದ್ಧ ಚಿನ್ನದ ದರ ಕೊಂಚ ಇಳಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ಮೊನ್ನೆ 1,44,790.00 ರೂ.ಗಳಿತ್ತು. ಇಂದು 1,44,560.00 ರೂ.ಗಳಷ್ಟಾಗಿದೆ.
ಬೆಂಗಳೂರು: ಅಡಿಕೆ ಬೆಲೆ ಕಳೆದ ಕೆಲವು ದಿನಗಳಿಂದ ಏರಿಕೆಯಾಗುತ್ತಿತ್ತು. ಆದರೆ ಇಂದು ಮತ್ತೆ ಬೆಲೆ ಯಥಾಸ್ಥಿತಿಯಲ್ಲಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ. ಕಳೆದ ವಾರ ಅಡಿಕೆ ಬೆಲೆಯಲ್ಲಿ ಏರಿಕೆ ಆರಂಭವಾಗಿತ್ತು. ಸತತವಾಗಿ ನಾಲ್ಕು ದಿನಗಳ ಕಾಲ ಏರಿಕೆಯಾಗಿದ್ದು ರೈತರ ಸಂತಸಕ್ಕೆ ಕಾರಣವಾಗಿತ್ತು. ಆದರೆ ಇಂದು ಯಾವುದೇ ವ್ಯತ್ಯಾಸ ಕಂಡುಬರುತ್ತಿಲ್ಲ. ಇಂದು ಹೊಸ ಅಡಿಕೆ ಬೆಲೆ 460 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ ನಿನ್ನೆ ಯಥಾಸ್ಥಿತಿಯಲ್ಲಿದ್ದು 545 ರೂ. ಗಳಾಗಿತ್ತು. ಡಬಲ್ ಚೋಲ್ ಬೆಲೆಯೂ ಯಥಾಸ್ಥಿತಿಯಲ್ಲಿದ್ದು 545 ರೂ.ಗಳಷ್ಟಾಗಿದೆ.
ಬೆಂಗಳೂರು: ಏರ್ ಪೋರ್ಟ್ ನಲ್ಲಿ ಹೈಕಮಾಂಡ್ ಮುಂದೆ ಮಂಡಿಯೂರಿದ್ರೂ ಪ್ರಯತ್ನಗಳೆಲ್ಲಾ ವಿಫಲವಾಯ್ತು ಎಂದು ಡಿಕೆಶಿಯೇ ಒಪ್ಪಿಕೊಂಡ್ರು ಎಂದು ರಾಜ್ಯ ಬಿಜೆಪಿ ಟ್ವೀಟ್ ಮೂಲಕ ವ್ಯಂಗ್ಯ ಮಾಡಿದೆ. ಮೈಸೂರಿನಲ್ಲಿ ನಿನ್ನೆ ರಾಹುಲ್ ಗಾಂಧಿ ಜೊತೆ ಏರ್ ಪೋರ್ಟ್ ನಲ್ಲಿ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಗಹನವಾಗಿ ಮಾತುಕತೆ ನಡೆಸಿದ್ದರು. ಇದರ ಬೆನ್ನಲ್ಲೇ ಇಂದು ಡಿಕೆ ಶಿವಕುಮಾರ್ ಸೋಷಿಯಲ್ ಮೀಡಿಯಾದಲ್ಲಿ ಪ್ರಯತ್ನಗಳು ವಿಫಲವಾದರೂ ಪ್ರಾರ್ಥನೆ ವಿಫಲವಾಗಲ್ಲ ಎಂದು ಸಂದೇಶ ಹಂಚಿಕೊಂಡಿದ್ದಾರೆ. ಇದಕ್ಕೆ ಬಿಜೆಪಿ ವ್ಯಂಗ್ಯ ಮಾಡಿದೆ.
ರಾಜ್ ಕೋಟ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಇಂದು ಎರಡನೇ ಏಕದಿನ ಪಂದ್ಯ ನಡೆಯಲಿದೆ. ಮೊದಲ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಘರ್ಜಿಸಿದ್ರು, ಇದೀಗ ಎರಡನೇ ಪಂದ್ಯದಲ್ಲಿ ರೋಹಿತ್ ಶರ್ಮಾ ಸರದಿ ಎನ್ನುತ್ತಿದ್ದಾರೆ ಫ್ಯಾನ್ಸ್. ಮೊದಲ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ 93 ರನ್ ಗಳ ನೆರವಿನಿಂದ ಭಾರತ ರೋಚಕ ಗೆಲುವು ಸಾಧಿಸಿತ್ತು. ಇದರೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 1-0 ಅಂತರದಿಂದ ಮುನ್ನಡೆಯಲ್ಲಿದೆ. ಎರಡನೇ ಪಂದ್ಯ ಇಂದು ರಾಜ್ ಕೋಟ್ ನಲ್ಲಿ ನಡೆಯಲಿದೆ.
ಸೋಷಿಯಲ್ ಮೀಡಿಯಾಗಳಲ್ಲಿ ಹಲವು ಬಾರಿ ಹೆಂಡತಿಯ ಮೇಲೆ ಗಂಡ ಹಲ್ಲೆ ಮಾಡುವ ವಿಡಿಯೋಗಳನ್ನು ನೋಡುತ್ತೇವೆ. ಆದರೆ ಇಲ್ಲಿ ಪತ್ನಿಯೇ ನಡು ರಸ್ತೆಯಲ್ಲಿ ದ್ವಿಚಕ್ರವಾಹನ ಚಲಾಯಿಸುತ್ತಿರುವಾಗಲೇ ಹಿಗ್ಗಾ ಮುಗ್ಗಾ ಥಳಿಸುತ್ತಿರುವ ದೃಶ್ಯ ವೈರಲ್ ಆಗಿದೆ.ಗಂಡ ಮತ್ತು ಹೆಂಡತಿ ಜನ ನಿಬಿಡ ರಸ್ತೆಯಲ್ಲಿ ರಾತ್ರಿ ವೇಳೆ ಸ್ಕೂಟಿಯಲ್ಲಿ ಸಂಚಾರ ಮಾಡುತ್ತಿರುತ್ತಾರೆ. ಈ ವೇಳೆ ಹಿಂದೆ ಕೂತಿದ್ದ ಪತ್ನಿ ಯಾಕೋ ಗಂಡನ ಮೇಲೆ ಭಾರೀ ಸಿಟ್ಟಾಗಿರುತ್ತಾಳೆ. ಇದೇ ಕೋಪದಲ್ಲಿ ಆತನ ತಲೆಗೆ ಹಿಗ್ಗಾ ಮುಗ್ಗಾ ಹೊಡೆಯುತ್ತಿರುತ್ತಾಳೆ. ಈ ವಿಡಿಯೋವನ್ನು ಯಾರೋ ಹಿಂಬದಿಯಿಂದ ಬೇರೊಂದು ವಾಹನದಲ್ಲಿ ಸವಾರಿ ಮಾಡುತ್ತಿರುವವರು ವಿಡಿಯೋ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹರಿಯಬಿಟ್ಟಿದ್ದಾರೆ.
ಬೆಂಗಳೂರು: ನಿನ್ನೆ ಮೈಸೂರಿನಲ್ಲಿ ರಾಹುಲ್ ಗಾಂಧಿ ಭೇಟಿಯಾದ ಬೆನ್ನಲ್ಲೇ ಇಂದು ಡಿಸಿಎಂ ಡಿಕೆ ಶಿವಕುಮಾರ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಪೋಸ್ಟ್ ಒಂದು ಹಲ್ ಚಲ್ ಎಬ್ಬಿಸಿದೆ. ಮೈಸೂರಿನಲ್ಲಿ ರಾಹುಲ್ ಗಾಂಧಿ ಜೊತೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ರಹಸ್ಯ ಮಾತುಕತೆ ನಡೆಸಿದ್ದರು. ಈ ವೇಳೆ ರಾಹುಲ್ ಗಾಂಧಿ ಬಳಿ ಡಿಕೆ ಶಿವಕುಮಾರ್ ನಾಯಕತ್ವ ವಿಚಾರವಾಗಿ ಗೊಂದಲ ನಿವಾರಿಸಿ ಎಂದು ಕೇಳಿಕೊಂಡಿದ್ದಾರೆ ಎನ್ನಲಾಗಿದೆ. ಇದಕ್ಕೆ ರಾಹುಲ್ ಗಾಂಧಿ ಇಬ್ಬರೂ ದೆಹಲಿಗೆ ಬನ್ನಿ ಮಾತನಾಡೋಣ ಎಂದಿದ್ದಾರೆ ಎಂದು ಸುದ್ದಿ ಹಬ್ಬಿದೆ.
ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆ ಬಗ್ಗೆ ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದಾರೆ ಎನ್ನಲಾಗಿದ್ದು ಈ ಸಂಬಂಧ ನಿನ್ನೆ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಗೆ ಮಾಹಿತಿ ನೀಡಿದ್ದಾರೆ ಎನ್ನಲಾಗುತ್ತಿದೆ. ಮೈಸೂರಿಗೆ ಬಂದಿದ್ದ ರಾಹುಲ್ ಗಾಂಧಿ ನಿನ್ನೆ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಜೊತೆ ಗಹನವಾಗಿ ಮಾತನಾಡಿದ್ದರು. ಈ ಮಾತುಕತೆ ವೇಳೆ ನಾಯಕತ್ವ ವಿಚಾರ ಚರ್ಚೆಯಾಗಿದೆ ಎನ್ನಲಾಗಿದೆ. ಇಬ್ಬರನ್ನೂ ದೆಹಲಿಗೆ ಕರೆದಿದ್ದಾರೆ ಎಂದು ಹೇಳಲಾಗುತ್ತಿದೆ. ಮೂಲಗಳ ಪ್ರಕಾರ ಜನವರಿ 17 ಕ್ಕೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ರನ್ನು ರಾಹುಲ್ ಗಾಂಧಿ ದೆಹಲಿಗೆ ಕರೆದಿದ್ದಾರೆ.
ಮೈಸೂರು: ತಮಿಳುನಾಡಿಗೆ ಹೋಗುವ ಮಾರ್ಗದಲ್ಲಿ ಮೈಸೂರಿಗೆ ಬಂದಿದ್ದ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ರಹಸ್ಯ ಮಾತುಕತೆ ನಡೆದ ವಿಡಿಯೋ ವೈರಲ್ ಆಗಿದೆ. ಈ ಮಾತುಕತೆ ಬಗ್ಗೆ ಈಗ ಹೀಗೊಂದು ಸುದ್ದಿ ಕೇಳಿಬರುತ್ತಿದೆ. ರಾಹುಲ್ ಗಾಂಧಿ ಹೆಲಿಕಾಪ್ಟರ್ ಏರುವ ಮುನ್ನಇಬ್ಬರೂ ಮಾತುಕತೆ ನಡೆಸುತ್ತಿರುವ ವಿಡಿಯೋಗಳು ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿವೆ. ಒಮ್ಮೆ ಇಬ್ಬರೂ ನಾಯಕರೂ ಜೊತೆಯಾಗಿ ನಂತರ ಇಬ್ಬರನ್ನೂ ಪ್ರತ್ಯೇಕ ಪ್ರತ್ಯೇಕವಾಗಿ ಕರೆದು ರಾಹುಲ್ ಮಾತುಕತೆ ನಡೆಸುತ್ತಾರೆ.
ಬೆಂಗಳೂರು: ಸಂಕ್ರಾಂತಿ ಹಬ್ಬದ ಸಡಗರ ಎಲ್ಲೆಡೆ ಮನೆ ಮಾಡಿದೆ. ಸಂಕ್ರಾಂತಿ ಹಬ್ಬದ ದಿನ ಈ ಮೂರು ವಸ್ತುಗಳನ್ನು ದಾನ ಮಾಡಲು ಮರೆಯಬೇಡಿ. ಸಂಕ್ರಾಂತಿ ಎಂದರೆ ಸೂರ್ಯನು ಮಕರ ರಾಶಿಗೆ ಪ್ರವೇಶಿಸುವ ಕಾಲ. ದಕ್ಷಿಣಾಯನ ಮುಗಿದು ಉತ್ತರಾಯಣ ಕಾಲ ಶುರುವಾಗುತ್ತದೆ. ಈ ಸಂದರ್ಭದಲ್ಲಿ ಸಕಲ ದೋಷಗಳ ನಿವಾರಣೆಗೆ ಬಡವರಿಗೆ ದಾನ ಮಾಡುವುದು ಅತ್ಯಂತ ಶ್ರೇಷ್ಠವೆಂದು ಪರಿಗಣಿಸಲಾಗಿದೆ. ವಿಶೇಷವಾಗಿ ಇಂದು ಮೂರು ವಸ್ತುಗಳನ್ನು ದಾನ ಮಾಡಲು ಮರೆಯಬೇಡಿ ಎಳ್ಳು, ಬೆಲ್ಲ ಮತ್ತು ಮೊಸರು. ಇದಕ್ಕೆ ಕಾರಣವೂ ಇದೆ.ಎಳ್ಳು ದಾನ: ಕಪ್ಪು ಎಳ್ಳು ದಾನ ಮಾಡುವುದರಿಂದ ಪಾಪ ತೊಡೆದು ಹೋಗುವುದು. ಜೊತೆಗೆ ಸಂಪತ್ತು ವೃದ್ಧಿಯಾಗಿ ಹಿರಿಯರ ಆಶೀರ್ವಾದ ಸಿಗುವುದು.
ಬೆಂಗಳೂರು: ರಾಜ್ಯದಲ್ಲಿ ಕಳೆದ ನಾಲ್ಕೈದು ದಿನಗಳಿಂದ ತುಂತುರು ಮಳೆಯಾಗುತ್ತಿದೆ. ಇಂದೂ ಕೂಡಾ ಮಳೆಯಾಗುವ ಸಾಧ್ಯತೆಯಿದೆಯಾ ಇಲ್ಲಿದೆ ಹವಾಮಾನ ವರದಿ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಾಗುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ತುಂತುರು ಮಳೆಯಾಗಿತ್ತು. ಜೊತೆಗೆ ದಿನವಿಡೀ ದಟ್ಟ ಮೋಡ ಕವಿದ ವಾತಾವರಣ ಕಂಡುಬರುತ್ತಿದೆ. ಇಂದೂ ಕರಾವಳಿ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ. ಇಂದು ರಾಜ್ಯದ ಸರಾಸರಿ ಗರಿಷ್ಠ ತಾಪಮಾನ 27 ಡಿಗ್ರಿಯಷ್ಟಿರಲಿದೆ. ಕನಿಷ್ಠ ತಾಪಮಾನ 19 ಡಿಗ್ರಿಯಷ್ಟಿರಲಿದೆ ಎನ್ನಲಾಗಿದೆ.
ವಿದ್ಯೆಯ ಅಧಿದೇವತೆ ಸರಸ್ವತೀ ದೇವಿ. ವಿದ್ಯಾಭ್ಯಾಸದಲ್ಲಿ ಏಕಾಗ್ರತೆಯ ಕೊರತೆ, ಅಡ್ಡಿ ಎದುರಾಗುತ್ತಿದ್ದರೆ ತಪ್ಪದೇ ಈ ಪವರ್ ಫುಲ್ ಮಹಾ ಸರಸ್ವತಿ ಸ್ತವಂ ಸ್ತೋತ್ರವನ್ನು ಓದಿ.ಅಶ್ವತರ ಉವಾಚ ।ಜಗದ್ಧಾತ್ರೀಮಹಂ ದೇವೀಮಾರಿರಾಧಯಿಷುಃ ಶುಭಾಮ್ ।ಸ್ತೋಷ್ಯೇ ಪ್ರಣಮ್ಯ ಶಿರಸಾ ಬ್ರಹ್ಮಯೋನಿಂ ಸರಸ್ವತೀಮ್ ॥ 1 ॥ ಸದಸದ್ದೇವಿ ಯತ್ಕಿಂಚಿನ್ಮೋಕ್ಷವಚ್ಚಾರ್ಥವತ್ಪದಮ್ ।ತತ್ಸರ್ವಂ ತ್ವಯ್ಯಸಂಯೋಗಂ ಯೋಗವದ್ದೇವಿ ಸಂಸ್ಥಿತಮ್ ॥ 2 ॥ ತ್ವಮಕ್ಷರಂ ಪರಂ ದೇವಿ ಯತ್ರ ಸರ್ವಂ ಪ್ರತಿಷ್ಠಿತಮ್ ।ಅಕ್ಷರಂ ಪರಮಂ ದೇವಿ ಸಂಸ್ಥಿತಂ ಪರಮಾಣುವತ್ ॥ 3 ॥ ಅಕ್ಷರಂ ಪರಮಂ ಬ್ರಹ್ಮ ವಿಶ್ವಂಚೈತತ್ಕ್ಷರಾತ್ಮಕಮ್ ।ದಾರುಣ್ಯವಸ್ಥಿತೋ ವಹ್ನಿರ್ಭೌಮಾಶ್ಚ ಪರಮಾಣವಃ ॥ 4 ॥
ನಾವು ನಿದ್ರೆಗೆ ಜಾರುವ ಮುನ್ನಾ ಅನುಭವಿಸಿದ ಒತ್ತಡ, ಆತಂಕ ಮತ್ತು ನಕಾರಾತ್ಮಕ ಯೋಚನೆಗಳನ್ನು ಮರೆಯುವುದು ನಾಳಿನ ದಿನದ ಒಳಿತಿಗಾಗಿ ತುಂಬಾನೇ ಒಳ್ಳೆಯದು. *ದಿನದ ಕಹಿ ಘಟನೆಗಳನ್ನು ಮರೆತುಬಿಡುವುದು ಒಳಿತು:ಆ ದಿನದಲ್ಲಿ ಯಾರಿಂದ ಆದರೂ ಟೀಕಿಗೆ ಒಳಗಾಗಿದ್ದರೆ, ಕೆಲಸದಲ್ಲಿ ಸಣ್ಣ ತಪ್ಪುಗಳಾಗಿದ್ದರೆ ಅಥವಾ ಯಾರದೋ ಜೊತೆ ಮನಸ್ತಾಪವಾಗಿದ್ದರೆ ಅದನ್ನು ಅಲ್ಲೇ ಮರೆತು ಬಿಡಿ. *ನಾಳೆಯ ಬಗ್ಗೆ ಅತಿಯಾದ ಆತಂಕಇನ್ನೂ ನಾಳಿನ ಬಗ್ಗೆ ಯೋಚನೆ ಮಾಡುತ್ತಾ ಮಲಗಬೇಡಿ. ನಾಳೆಯ ಸವಾಲುಗಳನ್ನು ಎದುರಿಸಲು ಇಂದು ನಿಮಗೆ ಗಾಢವಾದ
ಬೆಂಗಳೂರು: ಗ್ರಾಮೀಣ ಭಾಗದ ಅಭಿವೃದ್ಧಿಗೆ ನೆರವಾಗಿದ್ದ ಮನರೇಗಾ ಯೋಜನೆಯನ್ನು ಕೇಂದ್ರ ಬಿಜೆಪಿ ಸರ್ಕಾರ ಕೊಂದಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದರು.ಅರಮನೆ ಮೈದಾನದಲ್ಲಿ ಮಂಗಳವಾರ ನಡೆದ “ಮನರೇಗಾ ಬಚಾವ್ ಸಂಗ್ರಾಮ” ಹೋರಾಟದ ಪೂರ್ವಸಿದ್ಧತಾ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಅವರು ಮಾತನಾಡಿದರು. ಶ್ರೀಮತಿ ಸೋನಿಯಾ ಗಾಂಧಿ ಅವರು ಮನಮೋಹನ್ ಸಿಂಗ್ ಅವರ ಸರ್ಕಾರದಲ್ಲಿ ಸಂವಿಧಾನದ ಮೂಲಕ ಬಡವರಿಗೆ ಉದ್ಯೋಗ ಖಾತರಿ ಹಕ್ಕನ್ನು ನೀಡಿದ್ದರು. ಇದರಿಂದ ನಮ್ಮ ರಾಜ್ಯದ ಪಂಚಾಯಿತಿ ಹಾಗೂ ಗ್ರಾಮಗಳ ಮಟ್ಟದಲ್ಲಿ ಪ್ರತಿ ವರ್ಷ 6
ಇರಾನ್ನಾದ್ಯಂತ ನಡೆದ ಪ್ರತಿಭಟನೆಗಳಲ್ಲಿ ಇಲ್ಲಿಯವರೆಗೆ ಸುಮಾರು 2,000 ಜನರು ಸಾವನ್ನಪ್ಪಿದ್ದಾರೆ ಎಂದು ಇರಾನ್ ಅಧಿಕಾರಿಯೊಬ್ಬರು ಮಂಗಳವಾರ (ಜನವರಿ 13, 2026) ತಿಳಿಸಿದ್ದಾರೆ. ಇದು ಅಧಿಕೃತವಾಗಿ ದೃಢಪಡಿಸಿದ ಅತಿ ಹೆಚ್ಚು ಸಾವಿನ ಸಂಖ್ಯೆಯಾಗಿದೆ.ಮೃತರಲ್ಲಿ ಭದ್ರತಾ ಸಿಬ್ಬಂದಿ ಮತ್ತು ನಾಗರಿಕರು ಸೇರಿದ್ದಾರೆ ಎಂದು ಹೆಸರು ಹೇಳಲು ನಿರಾಕರಿಸಿದ ಅಧಿಕಾರಿಯೊಬ್ಬರು, ಸಾವುಗಳು ಮತ್ತು ದೀರ್ಘಕಾಲದ ಪ್ರತಿಭಟನೆಗಳು ಎರಡನ್ನೂ "ಭಯೋತ್ಪಾದಕ ಚಟುವಟಿಕೆಗಳಿಗೆ" ಕಾರಣವೆಂದು ಹೇಳಿದರು.ನಾಗರಿಕರು ಮತ್ತು ಭದ್ರತಾ ಸಿಬ್ಬಂದಿಗಳ ಸಂಖ್ಯೆಯ ಕುರಿತು ಅಧಿಕಾರಿ ಯಾವುದೇ ಹೆಚ್ಚಿನ ವಿವರಗಳನ್ನು ನೀಡಿಲ್ಲ. ಎರಡು
ಮಥುರಾ: ತನಗೆ ಕಚ್ಚಿದ ನಾಗರ ಹಾಹಾವನ್ನು ಹಿಡಿದುಕೊಂಡೆ ರಿಕ್ಷಾ ಚಾಲಕನೊಬ್ಬ ಆಸ್ಪತ್ರೆಗೆ ಬಂದಿರುವ ಘಟನೆ ಮಥುರಾದಲ್ಲಿ ವರದಿಯಾಗಿದೆ. ತನ್ನ ಜೇಬಿನಲ್ಲಿ 1.5 ಅಡಿ ಉದ್ದದ ಹಾವನ್ನು ಹಿಡಿದುಕೊಂಡು ಜಿಲ್ಲಾ ಆಸ್ಪತ್ರೆಗೆ ನಡೆದು ಹೋಗಿದ್ದಾನೆ, ಆ ಹಾವು ಅವನಿಗೆ ಕಚ್ಚಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿಯೂ ಕಾಣಿಸಿಕೊಂಡಿದೆ.ಸ್ಥಳೀಯರಾದ ದೀಪಕ್ (39) ಅವರನ್ನು ಸೋಮವಾರ (ಜನವರಿ 12, 2026) ರಂದು ಹಾವು ಕಚ್ಚಿತು ಮತ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದಿದ್ದಾನೆ.
ಮೈಸೂರು: ಎಚ್.ಡಿ. ಕುಮಾರಸ್ವಾಮಿ ರಾಜ್ಯ ರಾಜಕಾರಣಕ್ಕೆ ಬರುವ ಬಗ್ಗೆ ಪ್ರತಿಕ್ರಿಯಿಸಿದ ಅವರು ‘ಅವರ ಆರೋಗ್ಯದಲ್ಲಿ ಚೇತರಿಕೆಯಾಗಿದ್ದು, ಇದೀಗ ರಾಜಕೀಯದಲ್ಲಿ ಕ್ರಿಯಾಶೀಲರಾಗಿದ್ದಾರೆ. ಇನ್ನೂ ಅವರು ರಾಜ್ಯ ರಾಜಕಾರಣಕ್ಕೆ ಬರುತ್ತಾರೋ, ಇಲ್ಲವೋ ನಮಗೆ ಗೊತ್ತಿಲ್ಲ. ಅದೆಲ್ಲವನ್ನೂ ಮಾಧ್ಯಮಗಳೇ ಹೇಳಬೇಕೆಂದು ಸಿಎಂ ಸಿದ್ದರಾಮಯ್ಯ ಹೇಳಿದರು.ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು ‘ ಗ್ರೇಟರ್ ಬೆಂಗಳೂರು ಜೊತೆಗೆ ಪಾಲಿಕೆ, ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳಿಗೆ ನಾವು ತಯಾರಾಗಿದ್ದಿ, ನಮ್ಮ ಮೇಲೆ ಜೆಡಿಎಸ್, ಬಿಜೆಪಿ ಮೈತ್ರಿ ಯಾವುದೇ ಪರಿಣಾಮ ಬೀರುವುದಿರಲ್ಲ ಎಂದರು.
ಬೆಂಗಳೂರು: ಮನರೇಗಾ ಬಚಾಶವ್ ಸಂಗ್ರಾಮ ಹೋರಾಟಕ್ಕೆ ಆಸಕ್ತಿ ತೋರದವರನ್ನು ಕಿತ್ತು ಹಾಕಲಾಗುವುದೆಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಅರಮನೆ ಮೈದಾನದಲ್ಲಿ ಮಂಗಳವಾರ ನಡೆದ “ಮನರೇಗಾ ಬಚಾವ್ ಸಂಗ್ರಾಮ” ಹೋರಾಟದ ಪೂರ್ವಸಿದ್ಧತಾ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಅವರು ಮಾತನಾಡಿದರು. ಎಐಸಿಸಿಯವರು ಕಾರ್ಯಕಾರಿ ಸಮಿತಿ ಸಭೆ ಮಾಡಿ, ಈ ವಿಚಾರವಾಗಿ ಪಕ್ಷದ ವತಿಯಿಂದ ಯಾವ ರೀತಿ ಹೋರಾಟ ಮಾಡಬೇಕು ಎಂದು ನಿರ್ದೇಶನ ನೀಡಿದ್ದಾರೆ. ಮೊದಲ ಹಂತದಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಉಸ್ತುವಾರಿ ಸಚಿವರುಗಳು ಬಂದು ಮಾಧ್ಯಮಗೋಷ್ಠಿ ನಡೆಸಿ ಮಾತನಾಡಲಿದ್ದಾರೆ. ತಾಲ್ಲೂಕು ಮಟ್ಟಗಳಲ್ಲಿ ನೀವುಗಳು ಮಾಧ್ಯಮಗೋಷ್ಠಿ ಮಾಡಬೇಕು. ಪರಿಷತ್
ಅಸ್ತಾನಾ [ಕಝಾಕಿಸ್ತಾನ್]: ಪೂರ್ವ ಕಝಾಕಿಸ್ತಾನ್ನ ಅಲ್ಟಾಯ್ ಪರ್ವತಗಳಿಗೆ ವಿಹಾರ ಪ್ರವಾಸದಿಂದ ಹಿಂತಿರುಗುತ್ತಿದ್ದಾಗ ಓಸ್ಕೆಮೆನ್ನಲ್ಲಿ ಸೆಮಿ ವೈದ್ಯಕೀಯ ವಿಶ್ವವಿದ್ಯಾಲಯದ 11 ಭಾರತೀಯ ವಿದ್ಯಾರ್ಥಿಗಳು ರಸ್ತೆ ಅಪಘಾತದಲ್ಲಿ ಸಿಲುಕಿದ್ದಾರೆ ಎಂದು ಕಝಾಕಿಸ್ತಾನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಮಂಗಳವಾರ ತಿಳಿಸಿದೆ.ಎಕ್ಸ್ನಲ್ಲಿನ ಪೋಸ್ಟ್ನಲ್ಲಿ ವಿವರಗಳನ್ನು ಹಂಚಿಕೊಂಡ ರಾಯಭಾರ ಕಚೇರಿ, "ಓಸ್ಕೆಮೆನ್ನಲ್ಲಿ ನಡೆದ ದುರಂತ ಅಪಘಾತದಲ್ಲಿ, ಅಲ್ಟಾಯ್ ಪರ್ವತಗಳಿಗೆ (ಪೂರ್ವ ಕಝಾಕಿಸ್ತಾನ್) ವಿಹಾರ ಪ್ರವಾಸದಲ್ಲಿದ್ದ ಸೆಮಿ ವೈದ್ಯಕೀಯ ವಿಶ್ವವಿದ್ಯಾಲಯದ 11 ಭಾರತೀಯ ವಿದ್ಯಾರ್ಥಿಗಳ ಗುಂಪು ಓಸ್ಕೆಮೆನ್ ನಗರಕ್ಕೆ ಹಿಂತಿರುಗುವಾಗ ಅಪಘಾತವನ್ನು ಎದುರಿಸಿತು" ಎಂದು ಹೇಳಿದೆ.
ಚಳಿಗಾಲದ ಸಮಯದಲ್ಲಿ ವಾರಕ್ಕೆ ಒಂದು ಬಾರಿ ಹುರುಳಿ ಕಾಳನ್ನು ಸೇವನೆ ಮಾಡುವುದರಿಂದ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನವನ್ನು ಪಡೆಯಬಹುದು. ಇನ್ನೂ ಹುರುಳಿ ಕಾಳನ್ನು "ಸೂಪರ್ ಫುಡ್" ಎಂದೇ ಪರಿಗಣಿಸಲಾಗುತ್ತದೆ. ವಿಶೇಷವಾಗಿ ಇದನ್ನು ಮೊಳಕೆ ಬರಿಸಿ ತಿನ್ನುವುದರಿಂದ ಅದರ ಶಕ್ತಿ ಮತ್ತು ಪೋಷಕಾಂಶಗಳು ಇನ್ನಷ್ಟು ಹೆಚ್ಚಾಗುತ್ತದೆ. ಹುರುಳಿ ಕಾಳು ಮೊಳಕೆ ಬರಿಸಿ ತಿನ್ನುವುದರಿಂದ ಆಗುವ ಪ್ರಯೋಜನ ಇಲ್ಲಿದೆ: ನಮ್ಮ ದೇಹದಲ್ಲಿನ ಅನಗತ್ಯ ಕೊಬ್ಬನ್ನು ಕರಗಿಸಲು ತುಂಬಾ ಸಹಕಾರಿಯಾಗಿದೆ. ಇದರಲ್ಲಿ ಪ್ರೋಟೀನ್ ಮತ್ತು ನಾರಿನಂಶ ಹೆಚ್ಚಾಗಿ ಇರುವುದರಿಂದ ಇದು ಹಸಿವನ್ನು ನಿಯಂತ್ರಿಸುತ್ತದೆ ಮತ್ತು ಮೆಟಬಾಲಿಸಂ ಹೆಚ್ಚಿಸಿ ತೂಕ ಇಳಿಸಲು ಸಹಾಯ ಮಾಡುತ್ತದೆ.
ಮೈಸೂರು: ತಮಿಳುನಾಡಿಗೆ ತೆರಳುವ ಮಾರ್ಗದಲ್ಲಿ ಮೈಸೂರಿಗೆ ಬಂದಿದ್ದ ರಾಹುಲ್ ಗಾಂಧಿ ಭೇಟಿ ಬಳಿಕ ಸಿಎಂ ಬದಲಾವಣೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ ನೀಡಿದ್ದಾರೆ. ಇಂದು ರಾಹುಲ್ ಗಾಂಧಿ ರಾಜ್ಯಕ್ಕೆ ಬರುತ್ತಿದ್ದಾರೆ ಎಂಬ ಸುದ್ದಿ ಬರುತ್ತಿದ್ದಂತೇ ನಾಯಕತ್ವ ಬದಲಾವಣೆ ಬಗ್ಗೆ ಏನು ತೀರ್ಮಾನವಾಗಬಹುದು ಎಂದು ಎಲ್ಲರೂ ಕುತೂಹಲದಿಂದ ಎದಿರು ನೋಡಿದ್ದರು. ಆದರೆ ರಾಹುಲ್ ಕೆಲವೇ ನಿಮಿಷ ಮೈಸೂರಿನಲ್ಲಿದ್ದು ವಾಪಸ್ ಆಗಿದ್ದರು. ಇದರ ನಡುವೆ ನಾಯಕತ್ವ ಬದಲಾವಣೆ ಬಗ್ಗೆ ಏನಾದರೂ ಚರ್ಚೆಯಾಗಿದೆಯೇ ಎಂದು ಮಾಧ್ಯಮಗಳು ಸಿಎಂ ಸಿದ್ದರಾಮಯ್ಯನವರನ್ನು ಪ್ರಶ್ನೆ ಮಾಡಿವೆ.
ನವದೆಹಲಿ: ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯ ಅವರು, ನಿರಂತರ ಮಧ್ಯಸ್ಥಿಕೆಗಳ ನಂತರ ಕ್ವಿಕ್, ಕಾಮರ್ಸ್ ಪ್ಲಾಟ್ಫಾರ್ಮ್ ಬ್ಲಿಂಕಿಟ್ನ ಕಡ್ಡಾಯವಾದ 10 ನಿಮಿಷಗಳ ವಿತರಣಾ ಗಡುವನ್ನು ತೆಗೆದುಹಾಕಲು ಪ್ರಮುಖ ವಿತರಣಾ ಸಂಗ್ರಾಹಕರನ್ನು ಮನವೊಲಿಸಿದ್ದಾರೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ.ವಿತರಣಾ ಸಮಯಕ್ಕೆ ಸಂಬಂಧಿಸಿದ ಕಳವಳಗಳನ್ನು ಪರಿಹರಿಸಲು ಬ್ಲಿಂಕಿಟ್, ಜೆಪ್ಟೊ, ಜೊಮಾಟೊ ಮತ್ತು ಸ್ವಿಗ್ಗಿ ಸೇರಿದಂತೆ ಪ್ರಮುಖ ವೇದಿಕೆಗಳೊಂದಿಗೆ ಸಭೆ ನಡೆಸಲಾಯಿತು. ಮೂಲಗಳ ಪ್ರಕಾರ, ಬ್ಲಿಂಕಿಟ್ ಈಗಾಗಲೇ ನಿರ್ದೇಶನದ ಮೇರೆಗೆ ಕಾರ್ಯನಿರ್ವಹಿಸಿದೆ ಮತ್ತು ತನ್ನ ಬ್ರ್ಯಾಂಡಿಂಗ್ನಿಂದ 10 ನಿಮಿಷಗಳ ವಿತರಣಾ ಭರವಸೆಯನ್ನು ತೆಗೆದುಹಾಕಿದೆ.
ಮೈಸೂರು: ಸಿಎಂ ಕುರ್ಚಿ ಬದಲಾವಣೆ ವಿಚಾರದಿಂದ ಡಿಕೆ ಶಿವಕುಮಾರ್ ಅವರು ರಾಹುಲ್ ಗಾಂಧಿಯಿಂದ ದೂರವಾಗಿದ್ದಾರೆಂಬ ಮಾತು ರಾಜ್ಯ ರಾಜಕಾರಣದಲ್ಲಿ ಹರಿದಾಡುತ್ತಿದೆ. ಇದಕ್ಕೆಲ್ಲ ಕಾರಣ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋ. ತಮಿಳುನಾಡಿನಲ್ಲಿ ವಿವಿಧ ಕಾರ್ಯಕ್ರಮಕ್ಕೆ ಭಾಗಿಯಾಗಲು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಮೈಸೂರಿಗೆ ಆಗಮಿಸಿದರು. ರಾಹುಲ್ ಗಾಂಧಿಯನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರು ಸ್ವಾಗತಿಸಿದರು. ಆದರೆ ಡಿಕೆ ಶಿವಕುಮಾರ್ ಅವರು ಈ ಸಂದರ್ಭದಲ್ಲಿ ರಾಹುಲ್ ಗಾಂಧಿಯಿಂದ ಅಂತವರನ್ನು ಕಾಯ್ದುಕೊಂಡಿದ್ದರು. ಸಿಎಂ ಕುರ್ಚಿ ಗುದ್ದಾಟದಿಂದಾಗಿ ಡಿಕೆ ಶಿವಕುಮಾರ್ ಅವರು ರಾಹುಲ್ ಗಾಂಧಿಯಿಂದ ದೂರವಾಗಿದ್ದಾರೆಂದು ಎಂದು
ಬೆಂಗಳೂರು: ಬಿಜೆಪಿ ಎಸ್ಐಆರ್ ಕಡೆ ಹೆಚ್ಚಿನ ಗಮನ ಕೊಡಲಿದೆ; ಅಲ್ಲದೇ ಮುಂದಿನ ದಿನಗಳಲ್ಲಿ ವಿಬಿ ಜಿ ರಾಮ್ ಜಿ ಕುರಿತು ಜಾಗೃತಿ ಮೂಡಿಸಲು ಮುಂದಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ 5ನೇ ತಾರೀಕಿನಿಂದ ಬೆಂಗಳೂರಿನಲ್ಲಿ ನಮ್ಮೆಲ್ಲ ವಿವಿಧ ಜಿಲ್ಲೆಗಳ ಸಭೆಗಳನ್ನು ಮಾಡುತ್ತಿದ್ದೇವೆ. ರಾಜ್ಯದ 39 ಸಂಘಟನಾತ್ಮಕ ಜಿಲ್ಲೆಗಳ ಸರಣಿ ಸಭೆ ನಡೆಸಲಾಗಿದೆ. ಇವತ್ತಿಗೆ ಬಹುತೇಕ 35 ಜಿಲ್ಲೆಗಳ ಸಭೆ ಪೂರ್ಣಗೊಳ್ಳುತ್ತಿದೆ ಎಂದು ವಿವರಿಸಿದರು.
ನವದೆಹಲಿ: ವಿಜಯ್ ಅಭಿನಯದ ಜನ ನಾಯಗನ್ ಚಿತ್ರವನ್ನು ಬೆಂಬಲಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (CBFC) ಚಿತ್ರದ ಪ್ರಮಾಣೀಕರಣವನ್ನು ತಡೆಹಿಡಿದ ನಂತರ ಕೇಂದ್ರದ ಮೇಲೆ ವಾಗ್ದಾಳಿ ನಡೆಸಿದರು.ಇದು ತಮಿಳು ಸಂಸ್ಕೃತಿಯ ಮೇಲಿನ ದಾಳಿ ಎಂದು ಕರೆದರು. ತಮಿಳು ಜನರ ಧ್ವನಿಯನ್ನು ಹತ್ತಿಕ್ಕುವಲ್ಲಿ ಪ್ರಧಾನಿ ಮೋದಿ ಯಶಸ್ವಿಯಾಗುವುದಿಲ್ಲ ಎಂದು ಕಿಡಿಕಾರಿದರು.‘ಜನ ನಾಯಗನ್’ ಚಿತ್ರವನ್ನು ನಿರ್ಬಂಧಿಸಲು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಪ್ರಯತ್ನವು ತಮಿಳು ಸಂಸ್ಕೃತಿಯ