Shorts

ಮುಂಬೈ: ಮಾಜಿ ಉಪಮುಖ್ಯಮಂತ್ರಿ ಅಜಿತ್‌ ಪವಾರ್‌ ಸಾವಿನಿಂದ ತೆರವಾದ ಬಾರಾಮತಿ ವಿಧಾನಸಭಾ ಉಪಚುನಾವಣೆಯಿಂದ ಕಾಂಗ್ರೆಸ್‌ ಹಿಂದೆ ಸರಿದಿದೆ. ಇದರಿಂದಾಗಿ ಸುನೇತ್ರಾ ಪವಾರ್ ಅವರ ಅವಿರೋಧ ಆಯ್ಕೆ ಬಹುತೇಕ ಖಚಿತವಾಗಿದೆ.ಎನ್‌ಸಿಪಿ ನಾಯಕ ಅಜಿತ್ ಪವಾರ್ ಅಕಾಲಿಕ ನಿಧನದ ಬಳಿಕ ತೆರವಾದ ಬಾರಾಮತಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಣದಿಂದ ಕೊನೆಗೂ ಕಾಂಗ್ರೆಸ್ ಹಿಂದೆ ಸರಿದಿದೆ. ಹೀಗಾಗಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸುನೇತ್ರಾ ಪವಾರ್ ಅವರು ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ.ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಇಂದು ಕಾಂಗ್ರೆಸ್, ಬಾರಾಮತಿ ವಿಧಾನಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದು, ಈ ಮೂಲಕ ಸುನೇತ್ರಾ ಪವಾರ್ ಅವರ ಅವಿರೋಧ ಆಯ್ಕೆಗೆ ದಾರಿ ಮಾಡಿಕೊಟ್ಟಿದೆ.

ಪಾಟ್ನಾ: ವೀಲ್ ಚೇರ್ ಸಿಗದೇ ನಡೆದಾಡಲೂ ಆಗದ ಸ್ಥಿತಿಯಲ್ಲಿದ್ದ ತನ್ನ ಅಜ್ಜಿಯನ್ನು ಮೊಮ್ಮಗ ಸ್ಕೂಟಿಯಲ್ಲಿ ತಳ್ಳಿಕೊಂಡೇ ಆಸ್ಪತ್ರೆಯೊಳಗೆ ಕರೆತಂದ ವಿಡಿಯೋವೊಂದು ವೈರಲ್ ಆಗಿದೆ. ಈ ಘಟನೆ ನಡೆದಿರುವುದು ಬಿಹಾರದ ಗಯಾದಲ್ಲಿ. ನಮ್ಮ ದೇಶದಲ್ಲಿ ಸೂಕ್ತ ಸಮಯದಲ್ಲಿ ಆಂಬ್ಯುಲೆನ್ಸ್ ಸಿಗದೇ ಎಷ್ಟೋ ಸಾವುಗಳು ಸಂಭವಿಸುತ್ತವೆ. ಕೆಲವರು ಬಡವರು ಆಂಬ್ಯುಲೆನ್ಸ್ ಗೆ ಹಣ ನೀಡಲಾಗದೇ ಹೆಗಲ ಮೇಲೆ, ದ್ವಿಚಕ್ರ ವಾಹನಗಳಲ್ಲಿ ಮೃತದೇಹವನ್ನು ಕರೆದೊಯ್ದ ಘಟನೆಗಳನ್ನೂ ನೋಡಿದ್ದೇವೆ. ಆದರೆ ಇಲ್ಲಿ ಆಸ್ಪತ್ರೆಯ ಆವರಣದಿಂದ ಕೊಠಡಿಯೊಳಗೆ ನಡೆದಾಡಲೂ ಕಷ್ಟಪಡುತ್ತಿದ್ದ ಮಹಿಳೆಯನ್ನು ಕರೆದೊಯ್ಯಲು ವೀಲ್ ಚೇರ್ ಸಿಕ್ಕಿರಲಿಲ್ಲ. ಹೀಗಾಗಿ ಮೊಮ್ಮಗ ಆಕೆಯನ್ನು ಸ್ಕೂಟಿಯ ಮೇಲೆ ಕೂರಿಸಿ ವೀಲ್ ಚೇರ್ ನಂತೆ ತಳ್ಳಿಕೊಂಡೇ ಕರೆದೊಯ್ದಿದ್ದಾನೆ.

ಇಂದು ಗುರುವಾರವಾಗಿದ್ದು ಮಹಾವಿಷ್ಣುವಿಗೆ ವಿಶೇಷವಾದ ದಿನವಾಗಿದೆ. ಮಾನಸಿಕ ನೆಮ್ಮದಿ, ದೈಹಿಕ ಆರೋಗ್ಯ ಚೆನ್ನಾಗಿರಬೇಕೆಂದರೆ ಶ್ರೀ ರಾಮ ರಕ್ಷಾ ಸ್ತೋತ್ರವನ್ನು ತಪ್ಪದೇ ಓದಿ. ಕನ್ನಡದಲ್ಲಿ ಇಲ್ಲಿದೆ.ಓಂ ಅಸ್ಯ ಶ್ರೀ ರಾಮರಕ್ಷಾ ಸ್ತೋತ್ರಮಂತ್ರಸ್ಯಬುಧಕೌಶಿಕ ಋಷಿಃಶ್ರೀ ಸೀತಾರಾಮ ಚಂದ್ರೋದೇವತಾಅನುಷ್ಟುಪ್ ಛಂದಃಸೀತಾ ಶಕ್ತಿಃಶ್ರೀಮದ್ ಹನುಮಾನ್ ಕೀಲಕಂಶ್ರೀರಾಮಚಂದ್ರ ಪ್ರೀತ್ಯರ್ಥೇ ರಾಮರಕ್ಷಾ ಸ್ತೋತ್ರಜಪೇ ವಿನಿಯೋಗಃ ॥ ಧ್ಯಾನಂಧ್ಯಾಯೇದಾಜಾನುಬಾಹುಂ ಧೃತಶರ ಧನುಷಂ ಬದ್ಧ ಪದ್ಮಾಸನಸ್ಥಂಪೀತಂ ವಾಸೋವಸಾನಂ ನವಕಮಲ ದಳಸ್ಪರ್ಥಿ ನೇತ್ರಂ ಪ್ರಸನ್ನಮ್ ।ವಾಮಾಂಕಾರೂಢ ಸೀತಾಮುಖ ಕಮಲಮಿಲಲ್ಲೋಚನಂ ನೀರದಾಭಂನಾನಾಲಂಕಾರ ದೀಪ್ತಂ ದಧತಮುರು ಜಟಾಮಂಡಲಂ ರಾಮಚಂದ್ರಮ್ ॥ ಸ್ತೋತ್ರಂಚರಿತಂ ರಘುನಾಥಸ್ಯ ಶತಕೋಟಿ ಪ್ರವಿಸ್ತರಮ್ ।ಏಕೈಕಮಕ್ಷರಂ ಪುಂಸಾಂ ಮಹಾಪಾತಕ ನಾಶನಮ್ ॥ 1 ॥

ನವದೆಹಲಿ: ಕೊನೆಯ ಎಸೆತದವರೆಗೆ ಕುತೂಹಲ ಮೂಡಿಸಿದ್ದ ಐಪಿಎಲ್‌ ಪಂದ್ಯದಲ್ಲಿ ಗುಜರಾತ್‌ ಟೈಟನ್ಸ್ ತಂಡವು 1 ರನ್‌ಗಳ ರೋಚಕ ಜಯ ದಾಖಲಿಸಿತು. ಕನ್ನಡಿಗ ಕೆ.ಎಲ್‌ ರಾಹುಲ್‌ ಹಾಗೂ ಡೇವಿಡ್‌ ಮಿಲ್ಲರ್‌ ಬ್ಯಾಟಿಂಗ್‌ ಸಾಹಸದ ಹೊರತಾಗಿಯೂ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ಸೋಲು ಅನುಭವಿಸಿತು.ರೋಚಕ ಗೆಲುವು ಸಾಧಿಸಿದ ಗುಜರಾತ್‌ ಟೈಟಾನ್ಸ್‌ ಹಾಲಿ ಆವೃತ್ತಿಯ ಐಪಿಎಲ್‌ ಟೂರ್ನಿಯಲ್ಲಿ ಗೆಲುವಿನ ಖಾತೆ ತೆರೆಯಿತು. ಹ್ಯಾಟ್ರಿಕ್‌ ಗೆಲುವಿನ ವಿಶ್ವಾಸದಲ್ಲಿದ್ದ ಡೆಲ್ಲಿ ಕ್ಯಾಪಿಟಲ್ಸ್‌ ಮೊದಲ ಸೋಲಿಗೆ ತುತ್ತಾಯಿತು.ಟಾಸ್‌ ಗೆದ್ದ ಡೆಲ್ಲಿ ಬೌಲಿಂಗ್‌ ಆಯ್ದುಕೊಂಡಿತು. ಮೊದಲು ಬ್ಯಾಟಿಂಗ್‌ ನಡೆಸಿದ ಗುಜರಾತ್‌ ಟೈಟಾನ್ಸ್‌, ಬಿರುಸಿನ ಬ್ಯಾಟಿಂಗ್‌ ನಡೆಸಿ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್‌ಗೆ 210 ರನ್‌ ಬಾರಿಸಿತು. ಡೆಲ್ಲಿ ತಂಡ ಕೊನೆಯ ಎಸೆತದ ತನಕ ಹೋರಾಡಿ 8 ವಿಕೆಟ್‌ಗೆ 209 ರನ್‌ ಗಳಿಸಿ ವಿರೋಚಿತ ಸೋಲು ಕಂಡಿತು.

ಬೆಂಗಳೂರು: ರಣವೀರ್ ಸಿಂಗ್ ಅವರ ಧುರಂಧರ ಸಿನಿಮಾ ಬಗ್ಗೆ ಮೌನವಾಗಿದ್ದಕ್ಕೆ ಟ್ರೋಲ್ ಮಾಡಿದವರಿಗೆ ಕೊನೆಗೂ ದೀಪಿಕಾ ಪಡುಕೋಣೆ ಪ್ರತಿಕ್ರಿಯೆ ನೀಡಿದ್ದಾರೆ. ರಣವೀರ್‌ ಸಿಂಗ್‌ ನಟನೆಯ ʻಧುರಂಧರ್‌ 2ʼ ಸಿನಿಮಾವು ಬಾಕ್ಸ್‌ ಆಫೀಸ್‌ನಲ್ಲಿ ದೊಡ್ಡ ದಾಖಲೆಗಳನ್ನು ಮಾಡಿದೆ. ಅನೇಕ ಸೆಲೆಬ್ರಿಟಿಗಳು, ರಾಜಕೀಯ ನಾಯಕರು ಈ ಸಿನಿಮಾವನ್ನು ಹೊಗಳಿದ್ದಾರೆ. ನೆಟ್ಟಿಗರೊಬ್ಬರು ಇನ್‌ಸ್ಟಾಗ್ರಾಮ್‌ನಲ್ಲಿ ಒಂದು ಪೋಸ್ಟ್‌ ಹಾಕಿದ್ದರು. ದೀಪಿಕಾ ಪಡುಕೋಣೆ 500 ಕೋಟಿ ಬಜೆಟ್‌ನ ಚಿತ್ರಕ್ಕೆ ಸೈಲೆಂಟ್ ಟ್ರೀಟ್ಮೆಂಟ್ ನೀಡಿದ್ದಾರೆ. ಧುರಂಧರ್: ದಿ ರಿವೆಂಜ್ ಜಾಗತಿಕ ದಾಖಲೆಗಳನ್ನು ಮುರಿಯುತ್ತಿದ್ದರೆ, ಚಿತ್ರದ ಪ್ರೀಮಿಯರ್ ಹೋಗುವುದು ಬಿಟ್ಟು, ದೀಪಿಕಾ ತಮ್ಮ ಅತ್ತೆ-ಮಾವಂದಿರ ಜೊತೆ ಸಿತಾರ್ ಕಚೇರಿಗೆ ಹೋಗಿದ್ದರು. ಯಾವುದೇ ಪೋಸ್ಟ್ ಇಲ್ಲ, ಹೊಗಳಿಕೆಯೂ ಇಲ್ಲ, ಕೇವಲ ಮೌನ..

ಬೆಂಗಳೂರು: ರಾಜ್ಯದಾದ್ಯಂತ ಸಂಚಲನ ಮೂಡಿಸಿದ್ದ ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡಕೊಲೆ ಪ್ರಕರಣದ ತೀರ್ಪನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಾಳೆ ಪ್ರಕಟಿಸಲಿದೆ.ರಾಜಕೀಯ ವೈಷಮ್ಯದಿಂದ ಧಾರವಾಡದಲ್ಲಿ 2016ರ ಜೂ.16ರಂದು ಯೋಗೇಶ್ ಗೌಡ ಅವರನ್ನು ಹತ್ಯೆ ಮಾಡಲಾಗಿತ್ತು. ಶಾಸಕ ವಿನಯ್ ಕುಲಕರ್ಣಿ ಮೇಲೆ ಅಪರಾಧಿಕ ಒಳಸಂಚು ಮಾಡಿದ ಆರೋಪವಿದೆ. 2019ರಲ್ಲಿ ರಾಜ್ಯ ಸರ್ಕಾರವು ಈ ಪ್ರಕರಣವನ್ನು ಸಿಬಿಐಗೆ ವರ್ಗಾವಣೆ ಮಾಡಿತ್ತು. ಈ ಬಗ್ಗೆ ತನಿಖೆ ಕೈಗೊಂಡ ಸಿಬಿಐ 2020ರಲ್ಲಿ ವಿನಯ್ ಕುಲಕರ್ಣಿ ಅವರನ್ನು ಬಂಧಿಸಿತ್ತು.2017ರಲ್ಲಿ ಶಾಸಕ ವಿನಯ್ ಕುಲಕರ್ಣಿ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದಿದ್ದರು. ನಂತರ ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಕಳೆದ ವರ್ಷ ಜೂನ್‌ನಲ್ಲಿ ಸುಪ್ರೀಂ ಕೋರ್ಟ್ ಅವರ ಜಾಮೀನು ರದ್ದು ಮಾಡಿತ್ತು.

ನವದೆಹಲಿ: ಅಮೆರಿಕ ಮತ್ತು ಇರಾನ್ ನಡುವೆ ಎರಡು ವಾರಗಳ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ, ಇರಾನ್‌ನಲ್ಲಿ ನೆಲೆಸಿರುವ ಭಾರತೀಯ ಪ್ರಜೆಗಳಿಗೆ ಭಾರತೀಯ ರಾಯಭಾರ ಕಚೇರಿಯು ಬುಧವಾರ ಮಹತ್ವದ ಸೂಚನೆ ನೀಡಲಾಗಿದೆ.ಇರಾನ್‌ನಲ್ಲಿರುವ ಎಲ್ಲ ಭಾರತೀಯರು ಕೂಡಲೇ ದೇಶವನ್ನು ತೊರೆಯುವಂತೆ ಈ ಮೂಲಕ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ತುರ್ತು ಸಂದರ್ಭಗಳಲ್ಲಿ ಸಮನ್ವಯ ಸಾಧಿಸಲು ರಾಯಭಾರ ಕಚೇರಿಯು ಕೆಲವು ಸಹಾಯವಾಣಿ ಸಂಖ್ಯೆಗಳನ್ನು ಸಹ ಪ್ರಕಟಿಸಿದೆ.ಏಪ್ರಿಲ್ 7ರಂದು ನೀಡಿದ್ದ ಸೂಚನೆಯ ಮುಂದುವರಿದ ಭಾಗವಾಗಿ, ಇತ್ತೀಚಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಇರಾನ್‌ನಲ್ಲಿರುವ ಭಾರತೀಯರು ರಾಯಭಾರ ಕಚೇರಿಯ ಮಾರ್ಗದರ್ಶನದೊಂದಿಗೆ ಶೀಘ್ರವಾಗಿ ದೇಶದಿಂದ ನಿರ್ಗಮಿಸಲು ಸೂಚಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಬೆಂಗಳೂರು: 2028ಕ್ಕೆ ಕಾಂಗ್ರೆಸ್‌ಗೆ ಸೋಲು ಕಟ್ಟಿಟ್ಟ ಬುತ್ತಿ. ಕಾಂಗ್ರೆಸ್ ಸೋಲು ತಪ್ಪಿಸೋಕೆ ಯಾರಿಂದಲೂ ಸಾಧ್ಯವಿಲ್ಲ ಎಂದು ವಿಧಾನ ಪರಿಷತ್‌ ಸದಸ್ಯ, ಬಿಜೆಪಿ ನಾಯಕ ಸಿಟಿ ರವಿ ಭವಿಷ್ಯ ನುಡಿದಿದ್ದಾರೆ.ಕೆಟ್ಟ ಆಡಳಿತದಿಂದಾಗಿ ಕಾಂಗ್ರೆಸ್ ಸೋಲಿಸಬೇಕು ಅಂತ ಜನ ತೀರ್ಮಾನ ಮಾಡಿದ್ದಾರೆ. ಉಪಚುನಾವಣೆಯಲ್ಲೇ ಪಲ್ಟಿ ಹೊಡೆಯುತ್ತಿದ್ದಾರೆ. ಉಪಚುನಾವಣೆಯಲ್ಲಿ ಕಾಂಗ್ರೆಸ್‌ನವರು ಶಿರ್ಷಾಸನ ಮಾಡ್ತಾ ಇದ್ದಾರೆ. ಉಪಚುನಾವಣೆಯಲ್ಲಿ ಹೀಗೆ ಮಾಡ್ತಾ ಇರೋರು ಜನರಲ್ ಎಲೆಕ್ಷನ್‌ನಲ್ಲಿ ಗೆಲ್ತಾರಾ? ಬೈ ಎಲೆಕ್ಷನ್‌ನಲ್ಲೂ ಸೋಲ್ತಾರೆ, ಜನರಲ್ ಎಲೆಕ್ಷನ್‌ನಲ್ಲಿಯೂ ಸೋಲ್ತಾರೆ ಎಂದು ಹೇಳಿದ್ದಾರೆ.2028ರವರೆಗೂ ಜನ ನಿಮಗೆ ಬಹುಮತ ಕೊಟ್ಟಿದ್ದಾರೆ. ಜನ ಪ್ರಜಾಪ್ರಭುತ್ವದಲ್ಲಿ ಅಧಿಕಾರ ಕೊಟ್ಟಿದ್ದಾರೆ. 2028ರ ನಂತರ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ. ಸೋಲುತ್ತೆ. ಇನ್ನೂ ಯಾವ ಪಾರ್ಟಿಯಲ್ಲಿ ಸಿದ್ದರಾಮಯ್ಯ ಸಿಎಂ ಆಗ್ತಾರೆ ಎಂದು ಪ್ರಶ್ನಿಸಿದ್ದಾರೆ.