ಚಂಡೀಗಢ (ಹರಿಯಾಣ): ಮುಂದಿನ ಸೂಚನೆ ಬರುವವರೆಗೂ ಇಲಾಖೆಗಳು, ಮಂಡಳಿಗಳು, ನಿಗಮಗಳು, ಉದ್ಯಮಗಳು ಮತ್ತು ವಿಶ್ವವಿದ್ಯಾಲಯಗಳ ಎಲ್ಲಾ ಅಧಿಕಾರಿಗಳು ಮತ್ತು ನೌಕರರು ತಮ್ಮ ಪ್ರಧಾನ ಕಚೇರಿ ಅಥವಾ ನಿಲ್ದಾಣಗಳಲ್ಲಿ ಇರುವಂತೆ ಹರಿಯಾಣ ಸರ್ಕಾರವು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದೆ.ಮುಖ್ಯ ಕಾರ್ಯದರ್ಶಿ ಕಚೇರಿಯಿಂದ ಹೊರಡಿಸಲಾದ ನಿರ್ದೇಶನವು ಹೆಚ್ಚುವರಿ ಆದೇಶಗಳನ್ನು ನೀಡುವವರೆಗೆ ಯಾವುದೇ ಅಧಿಕಾರಿಯು ತಮ್ಮ ಠಾಣೆಯಿಂದ ಹೊರಬರಲು ಅನುಮತಿಸುವುದಿಲ್ಲ ಎಂದು ಸ್ಪಷ್ಟವಾಗಿ ಹೇಳುತ್ತದೆ.
ಬೆಂಗಳೂರು: ಸುಹಾಸ್ ಹತ್ಯೆ ಪ್ರಕರಣದ ಎನ್ಐಎ ತನಿಖೆ ಆಗಬೇಕು; ಈ ವಿಷಯದಲ್ಲಿ ಮಾನ್ಯ ರಾಜ್ಯಪಾಲರು ರಾಜ್ಯ ಸರಕಾರಕ್ಕೆ ಆಗ್ರಹಿಸಿ ಆದೇಶ ಮಾಡಿಸಲು ವಿನಂತಿಸಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.ಗೌರವಾನ್ವಿತ ರಾಜ್ಯಪಾಲರ ಭೇಟಿ ಬಳಿಕ ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ಸುಹಾಸ್ ಹತ್ಯೆ ವಿಷಯದಲ್ಲಿ ನಿಷ್ಪಕ್ಷಪಾತ ತನಿಖೆಯ ನಮ್ಮ ನಿರೀಕ್ಷೆ ಹುಸಿಯಾಗಿದೆ. ಆದ್ದರಿಂದ ನಮ್ಮೆಲ್ಲ ಜನಪ್ರತಿನಿಧಿಗಳು, ಸುಹಾಸ್ ಮನೆಯವರು, ಗೌರವಾನ್ವಿತ ರಾಜ್ಯಪಾಲರನ್ನು ಭೇಟಿ ಮಾಡಿದ್ದೇವೆ ಎಂದು ತಿಳಿಸಿದರು. ಪ್ರಕರಣದಲ್ಲಿ ವಿದೇಶಿ ಹಣದ ಹರಿವಿನ ಚರ್ಚೆ ನಡೆಯುತ್ತಿದೆ. ಪಿಎಫ್ಐ ನಂಟು ಕೂಡ ಕಾಣುತ್ತಿದೆ ಎಂದರು.
ಮುಂಬೈ: ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧದ ವಾತಾವರಣವಿರುವಾಗ ಟೀಂ ಇಂಡಿಯಾ ಕ್ರಿಕೆಟ್ ದಿಗ್ಗಜ ವಿರಾಟ್ ಕೊಹ್ಲಿ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಕೊನೆಗೂ ಪ್ರತಿಕ್ರಿಯಿಸಿದ್ದಾರೆ. ಪಾಕಿಸ್ತಾನ ವಿರುದ್ಧ ಆಪರೇಷನ್ ಸಿಂಧೂರ್ ನಡೆಸಿದಾಗ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾರಂತಹ ಹಿರಿಯ ಕ್ರಿಕೆಟಿಗರು ಯಾವುದೇ ಪೋಸ್ಟ್ ಮಾಡಿರಲಿಲ್ಲ. ಇದರ ಬಗ್ಗೆ ಕೆಲವರು ಸೋಷಿಯಲ್ ಮೀಡಿಯಾದಲ್ಲಿ ಟೀಕೆ ಮಾಡಿದ್ದೂ ಇದೆ. ಆದರೆ ಈಗ ಕೊನೆಗೂ ವಿರಾಟ್ ಕೊಹ್ಲಿ ಮತ್ತು ಪತ್ನಿ ಅನುಷ್ಕಾ ಶರ್ಮಾ ಒಂದೇ ಸಮಯಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಭಾರತೀಯ ಸೇನೆ ಬೆಂಬಲಿಸಿ ಪೋಸ್ಟ್ ಮಾಡಿದ್ದಾರೆ.
ಹೈದರಾಬಾದ್: ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಿದ್ದಕ್ಕೆ ಭಾರತದ ವಿರುದ್ಧವೇ ದಾಳಿಗೆ ಮುಂದಾಗಿರುವ ಪಾಕಿಸ್ತಾನದ ವಿರುದ್ಧ ಕಿಡಿ ಕಾರಿರುವ ನಟಿ ರಶ್ಮಿಕಾ ಮಂದಣ್ಣ ಪೋಸ್ಟ್ ನಿಜಕ್ಕೂ ಗ್ರೇಟ್. ಭಾರತೀಯ ಸೇನೆ ಪಾಕಿಸ್ತಾನದ ಮೇಲೆ ಮುಗಿಬೀಳುತ್ತಿರುವಾಗ ಕೆಲವು ಸೆಲೆಬ್ರಿಟಿಗಳು ಶಾಂತಿ ಶಾಂತಿ ಎನ್ನುತ್ತಿದ್ದರೆ ರಶ್ಮಿಕಾ ಮಂದಣ್ಣ ಮಾತ್ರ ಅಪ್ಪಟ ಕೊಡಗಿನ ವೀರ ನಾರಿಯಂತೆ ಸಂದೇಶವೊಂದನ್ನು ಬರೆದುಕೊಂಡಿದ್ದಾರೆ. ಇನ್ ಸ್ಟಾಗ್ರಾಂನಲ್ಲಿ ಭಾರತೀಯ ಸೇನೆ ಬೆಂಬಲಿಸಿ ಪೋಸ್ಟ್ ಶೇರ್ ಮಾಡಿರುವ ರಶ್ಮಿಕಾ ಮಂದಣ್ಣ ಭಾರತೀಯ ಸೇನೆಗೆ ಜೈ ಎಂದಿದ್ದಾರೆ.
ಮುಂಬೈ: ದೇಶ ವಿಪತ್ತಿನಲ್ಲಿರುವಾಗ ಯಾವುದೂ ದೊಡ್ಡದಲ್ಲ. ಈ ಕಾರಣಕ್ಕೇ ಈಗ ಬಿಸಿಸಿಐ ಶ್ರೀಮಂತ ಕ್ರಿಕೆಟ್ ಲೀಗ್ ಐಪಿಎಲ್ ರದ್ದುಗೊಳಿಸಲು ತೀರ್ಮಾನಿಸಿದೆ. ಈ ಬಗ್ಗೆ ಅಧಿಕೃತ ಪ್ರಕಟಣೆಯೊಂದೇ ಬಾಕಿಯಿದೆ. ನಿನ್ನೆ ಪಾಕ್ ಪಡೆಗಳ ದಾಳಿ ಹಿನ್ನಲೆಯಲ್ಲಿ ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಡೆಲ್ಲಿ ಮತ್ತು ಪಂಜಾಬ್ ನಡುವಿನ ಐಪಿಎಲ್ ಪಂದ್ಯ ಅರ್ಧಕ್ಕೇ ಸ್ಥಗಿತಗೊಳಿಸಲಾಯಿತು. ಬಳಿಕ ತಕ್ಷಣವೇ ಅಭಿಮಾನಿಗಳನ್ನು ಮೈದಾನದಿಂದ ತೆರವುಗೊಳಿಸಲಾಯಿತು. ಇದೀಗ ಸುರಕ್ಷತಾ ದೃಷ್ಟಿಯಿಂದ ಐಪಿಎಲ್ 2025 ರ ಮುಂದಿನ ಪಂದ್ಯಗಳನ್ನೇ ಬಿಸಿಸಿಐ ರದ್ದುಗೊಳಿಸಲು ತೀರ್ಮಾನಿಸಿದೆ.
ಬೆಂಗಳೂರು: ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕುಂದಾಪುರ ಇಂದು ಶ್ರೀಕಾಂತ್ ಕಶ್ಯಪ್ ಎಂಬವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮದುವೆ ವೇಳೆ ಅಳುತ್ತಾ, ಮಂತ್ರ ಹೇಳುತ್ತಲೇ ಪತಿ ಕೈಯಲ್ಲಿ ಚೈತ್ರಾ ತಾಳಿ ಕಟ್ಟಿಸಿಕೊಂಡಿದ್ದಾರೆ. ಚೈತ್ರಾ ಕುಂದಾಪುರ ಹಿಂದೂ ಕಾರ್ಯಕರ್ತೆಯಾಗಿ ಹೆಸರು ಪಡೆದವರು. ಬಳಿಕ ಬಿಜೆಪಿ ಟಿಕೆಟ್ ಕೊಡಿಸೋದಾಗಿ 5 ಕೋಟಿ ರೂ. ವಂಚನೆ ಮಾಡಿದ ಆರೋಪದಲ್ಲಿ ಜೈಲಿಗೂ ಹೋಗಿ ಬಂದವರು. ನೇರಾನೇರ ಮಾತುಗಳಿಂದಲೇ ಜನರ ಗಮನಸೆಳೆದವರು. ಇಂದು ಚೈತ್ರಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಬೆಂಗಳೂರು: ನಿನ್ನೆ ಹೊಸ ಅಡಿಕೆ ಬೆಲೆ ಇಳಿಕೆಯಾಗಿದ್ದರೆ ಉಳಿದ ವರ್ಗದ ಅಡಿಕೆ ಯಥಾಸ್ಥಿತಿಯಲ್ಲಿದೆ. ಆದರೆ ಇಂದು ಎಲ್ಲವೂ ಯಥಾಸ್ಥಿತಿಯಲ್ಲಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು ದರ ಹೇಗಿದೆ ಇಲ್ಲಿದೆ ವಿವರ. ಕಳೆದ ಎರಡು ದಿನಗಳಿಂದ ಅಡಿಕೆ ಬೆಲೆಯಲ್ಲಿ ಕೊಂಚ ಏರಿಕೆಯಾಗಿತ್ತು. ಆದರೆ ನಿನ್ನೆ ಅಡಿಕೆ ಬೆಲೆಯಲ್ಲಿ ಕೊಂಚ ಇಳಿಕೆಯಾಗಿ ರೈತರಿಗೆ ನಿರಾಸೆಯಾಗಿತ್ತು. ಆದರೆ ಇಂದು ಹೊಸ ಅಡಿಕೆ ಮತ್ತು ಹಳೆ ಅಡಿಕೆ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಹೊಸ ಅಡಿಕೆ ಬೆಲೆ 460 ರೂ.ಗಳಷ್ಟಿದ್ದರೆ ಹಳೆ ಅಡಿಕೆ ಬೆಲೆ ಗರಿಷ್ಠ 500 ರೂ.ಗಳಷ್ಟಿದೆ. ಇಂದು ಡಬಲ್ ಚೋಲ್ ಬೆಲೆ ಗರಿಷ್ಠ 510 ರೂ.ಗಳಷ್ಟಿದೆ.
ಜಮ್ಮು ಕಾಶ್ಮೀರ: ಪಾಕಿಸ್ತಾನವನ್ನು ಉಡೀಸ್ ಮಾಡಲು ಸೇನಾ ವಾಹನಗಳು ರಸ್ತೆಯಲ್ಲಿ ಶಸ್ತ್ರಾಸ್ತ್ರಗಳನ್ನು ಹೊತ್ತು ಸಾಗುತ್ತಿದ್ದರೆ ಇತ್ತ ಭಾರತೀಯರು ರಸ್ತೆ ಬದಿಯಲ್ಲಿ ನಿಂತು ಜೈಕಾರ ಹಾಕಿದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ನಿನ್ನೆ ಪಾಕಿಸ್ತಾನ ಭಾರತ ನಾನಾ ನಗರಗಳನ್ನು ಟಾರ್ಗೆಟ್ ಮಾಡಿ ದಾಳಿಗೆ ಮುಂದಾಗಿತ್ತು. ಇದನ್ನು ಭಾರತೀಯ ಸೇನೆ ಯಶಸ್ವಿಯಾಗಿ ಬೆನ್ನಟ್ಟಿತ್ತು. ಪಾಕಿಸ್ತಾನವನ್ನು ಹಿಮ್ಮೆಟ್ಟಿಸಲು ನಮ್ಮ ವೀರ ಯೋಧರು ಹಗಲು-ರಾತ್ರಿಯೆನ್ನದೇ ಕಣ್ಣಲ್ಲಿ ಕಣ್ಣಿಟ್ಟು ದೇಶ ಕಾಯುತ್ತಿದ್ದಾರೆ. ಈ ನಡುವೆ ಭಾರತೀಯ ಸೇನಾ ವಾಹನದಲ್ಲಿ ಸೈನಿಕರು ಯುದ್ಧ ಪರಿಕರಗಳನ್ನು ಹೊತ್ತು ಓಡಾಡುವ ದೃಶ್ಯವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಜಮ್ಮು ಕಾಶ್ಮೀರ: ಭಾರತ ನಿರಂತರವಾಗಿ ದಾಳಿ ಮಾಡುತ್ತಿದ್ದರೆ ಇತ್ತ ದೇಶ ರಕ್ಷಿಸುವ ಬದಲು ಹೇಳಿಕೆ ನೀಡುವುದರಲ್ಲೇ ಮಗ್ನರಾಗಿರುವ ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ರನ್ನು ಜನರೇ ತರಾಟೆಗೆ ತೆಗೆದುಕೊಂಡಿದ್ದಾರೆ. ನಿಮ್ಮ ಭಾಷಣ ಯಾರಿಗೆ ಬೇಕಾಗಿದೆ ಎಂದಿದ್ದಾರೆ. ಭಾರತ ಆಪರೇಷನ್ ಸಿಂಧೂರ್ ನಡೆಸಿದ ಬೆನ್ನಲ್ಲೇ ಪಾಕ್ ಪ್ರಧಾನಿ ನಮ್ಮ ಪ್ರತೀ ರಕ್ತದ ಹನಿಗೂ ಪ್ರತೀಕಾರ ಸ್ವೀಕರಿಸುತ್ತೇವೆ ಎಂದು ಭಾಷಣ ಬಿಗಿದಿದ್ದರು. ಆದರೆ ಭಾರತದ ಕ್ಷಿಪಣಿ ದಾಳಿಗಳನ್ನು ತಡೆಯುವಲ್ಲಿ ಪಾಕಿಸ್ತಾನ ಸಂಪೂರ್ಣ ವಿಫಲವಾಗಿದೆ.
ಚಂಢೀಘಡ: ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧದ ಕಾರ್ಮೋಡವಿದ್ದು, ಇದೀಗ ಪಾಕಿಸ್ತಾನ ಚಂಢೀಘಡಕ್ಕೆ ದಾಳಿ ಮಾಡುವ ಸೂಚನೆ ಸಿಕ್ಕಿದ್ದು ನಗರಕ್ಕೆ ಎಚ್ಚರಿಕೆಯ ಸೈರನ್ ಮೊಳಗಿಸಲಾಗಿದೆ. ಚಂಢೀಘಡದಲ್ಲಿ ಪೊಲೀಸರು ನಾಗರಿಕರ ಸುರಕ್ಷತೆಗೆ ಘೋಷಣೆಗಳನ್ನು ಮಾಡುತ್ತಿದ್ದಾರೆ. ಮನೆಯೊಳಗೇ ಇರುವಂತೆ ಸೂಚನೆ ನೀಡುತ್ತಿದ್ದಾರೆ. ಒಂದು ವೇಳೆ ಮನೆ ಸಮೀಪದಲ್ಲಿ ಇಲ್ಲದೇ ಇದ್ದರೆ ಹತ್ತಿರ ಕಟ್ಟಡಗಳ ಒಳಗೆ ಇರುವಂತೆ ಸೂಚನೆ ನೀಡುತ್ತಿದ್ದಾರೆ. ಬಾಲ್ಕನಿಗೆ ಬಾರದಂತೆ ಪೊಲೀಸರು ಎಚ್ಚರಿಕೆ ನೀಡುತ್ತಿದ್ದಾರೆ. ಈಗಾಗಲೇ ನಗರದಲ್ಲಿ ಎಚ್ಚರಿಕೆ ಸೈರನ್ ಮೊಳಗಿಸಲಾಗಿದ್ದು ಪಾಕಿಸ್ತಾನ ಈ ನಗರದ ಮೇಲೆ ದಾಳಿ ನಡೆಸಿದರೆ ಅದನ್ನು ಎದುರಿಸಲು ಭಾರತೀಯ ಸೇನೆ ಸಜ್ಜಾಗಿದೆ.
ನವದೆಹಲಿ: ಭಾರತದ ಮೇಲೆ ದಾಳಿ ನಡೆಸಲು ಬಂದ ಪಾಕಿಸ್ತಾನ ಈಗ ಸೋಷಿಯಲ್ ಮೀಡಿಯಾದಲ್ಲಿ ಇನ್ನಿಲ್ಲದಂತೆ ಟ್ರೋಲ್ ಆಗುತ್ತಿದೆ. ಭಾರತವೆಂಬ ಮಾಸ್ಟರ್ ಬೆಡ್ ರೂಂಗೆ ಅಟ್ಯಾಚ್ಡ್ ಟಾಯ್ಲೆಟ್ ಎಂದು ನೆಟ್ಟಿಗರು ಟ್ರೋಲ್ ಮಾಡಿದ್ದಾರೆ. ಪಹಲ್ಗಾಮ್ ನಲ್ಲಿ ಉಗ್ರ ದಾಳಿಗೆ ಪ್ರತೀಕಾರವಾಗಿ ಭಾರತ ಆಪರೇಷನ್ ಸಿಂಧೂರ್ ಮೂಲಕ ಉಗ್ರರ ಅಡಗುದಾಣಗಳನ್ನು ಉಡೀಸ್ ಮಾಡಿತ್ತು. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನ ಭಾರತದ ಮೇಲೆ ದಾಳಿ ನಡೆಸಲು ಮುಂದಾಗಿತ್ತು. ಇದನ್ನು ಭಾರತೀಯ ಪಡೆಗಳು ಯಶಸ್ವಿಯಾಗಿ ಹಿಮ್ಮೆಟ್ಟಿಸಿವೆ. ಇದರ ಬೆನ್ನಲ್ಲೇ ಸೋಷಿಯಲ್ ಮೀಡಿಯಾದಲ್ಲಿ ಪಾಕಿಸ್ತಾನ ಸಾಕಷ್ಟು ಟ್ರೋಲ್ ಆಗುತ್ತಿದೆ.
ನವದೆಹಲಿ: ನಮ್ಮ ದೇಶದ ಮೇಲೆ ದಾಳಿ ಮಾಡಲು ಬಂದ ಪಾಕಿಸ್ತಾನವನ್ನು ಯಶಸ್ವಿಯಾಗಿ ಹಿಮ್ಮೆಟ್ಟಿಸಿರುವ ಭಾರತೀಯ ಸೇನೆ ಎದುರಾಳಿಯ ಸೇನಾ ಪೋಸ್ಟ್ ಉಡೀಸ್ ಮಾಡಿರುವ ವಿಡಿಯೋವೊಂದನ್ನು ಅಧಿಕೃತವಾಗಿ ಸೋಷಿಯಲ್ ಮೀಡಿಯಾದಲ್ಲಿ ಬಿಡುಗಡೆ ಮಾಡಿದೆ. ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ಆಪರೇಷನ್ ಸಿಂಧೂರ್ ಆರಂಭಿಸಿದ್ದು ಇದೀಗ 2 ನೇ ಭಾಗ ಜಾರಿಯಲ್ಲಿದೆ. ನಿನ್ನೆ ಭಾರತದ ಮೇಲೆ ದಾಳಿಗೆ ಮುಂದಾಗಿದ್ದಕ್ಕೆ ಭಾರತೀಯ ಸೇನೆ ಪಾಕಿಸ್ತಾನಕ್ಕೆ ತಕ್ಕ ತಿರುಗೇಟು ನೀಡಿದೆ. ಪಾಕಿಸ್ತಾನದ ಸೇನಾ ನೆಲೆಯನ್ನೇ ಉಡಾಯಿಸಿದೆ ಎಂದು ಸುದ್ದಿಯಾಗಿತ್ತು.
ಬೆಂಗಳೂರು: ಲಕ್ಷದ ಗಡಿ ದಾಟಿದ್ದ ಪರಿಶುದ್ಧ ಚಿನ್ನದ ಬೆಲೆ ಇಂದು ಮತ್ತಷ್ಟು ಏರಿಕೆಯಾಗಿ ಗ್ರಾಹಕರಿಗೆ ಶಾಕ್ ನೀಡುವಂತಿದೆ. ಇಂದು ಪರಿಶುದ್ಧ ಚಿನ್ನದ ದರ ಕೊಂಚ ಇಳಿಕೆಯಾದರೂ ಈಗಲೂ ಲಕ್ಷದಲ್ಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ಎರಡು ದಿನಗಳಿಂದ ಪರಿಶುದ್ಧ ಚಿನ್ನದ ಬೆಲೆ ಲಕ್ಷದ ಮೇಲೆಯೇ ಇದೆ. ನಿನ್ನೆ 99.9 ಪರಿಶದ್ಧತೆಯ ಚಿನ್ನದ ಬೆಲೆ 1,00,730 ರೂ.ಗಳಷ್ಟಿತ್ತು. ಇಂದು ಇದು ಕೊಂಚ ಇಳಿಕೆಯಾಗಿದ್ದರೂ ಗ್ರಾಹಕರು ನೆಮ್ಮದಿಪಡುವಷ್ಟು ಇಲ್ಲ. ಇಂದು ಚಿನ್ನದ ದರ 1,00,210.00 ರೂ.ಗೆ ಬಂದು ನಿಂತಿದೆ.
ನವದೆಹಲಿ: ಪಾಕಿಸ್ತಾನದ ರಾವಲ್ಪಿಂಡಿ ಮೇಲೆ ಭಾರತ ದಾಳಿ ಮಾಡಿದೆ ಎಂಬ ಸುದ್ದಿ ಬೆನ್ನಲ್ಲೇ ಸೋಷಿಯಲ್ ಮೀಡಿಯಾದಲ್ಲಿ ಕೆಲವರು ಐಸಿಸಿ ಅಧ್ಯಕ್ಷ, ಗೃಹಸಚಿವ ಅಮಿತ್ ಶಾ ಪುತ್ರ ಜಯ್ ಶಾ ವಿಡಿಯೋ ಮಾಡಿ ಟ್ರೋಲ್ ಮಾಡಿದ್ದಾರೆ. ಕೇಂದ್ರ ಗೃಹಸಚಿವ ಅಮಿತ್ ಶಾ ಪುತ್ರರೂ ಆಗಿರುವ ಜಯ್ ಶಾ ಐಸಿಸಿಯ ಹಾಲಿ ಅಧ್ಯಕ್ಷ, ಬಿಸಿಸಿಐನ ಮಾಜಿ ಕಾರ್ಯದರ್ಶಿ. ಭಾರತೀಯ ಕ್ರಿಕೆಟ್ ರಂಗದ ಪವರ್ ಫುಲ್ ವ್ಯಕ್ತಿ ಜಯ್ ಶಾ. ಅವರಿಂದಾಗಿಯೇ ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಕಿಸ್ತಾನ ಆತಿಥ್ಯ ವಹಿಸಿದ್ದರೂ ಭಾರತ ಆಡುವ ಎಲ್ಲಾ ಪಂದ್ಯಗಳನ್ನೂ ದುಬೈನಲ್ಲಿ ಆಯೋಜಿಸಲಾಗಿತ್ತು. ಇದೀಗ ರಾವಲ್ಪಿಂಡಿಯಲ್ಲಿ ನಿನ್ನೆ ಭಾರತ ಕ್ಷಿಪಣಿ ದಾಳಿ ಮಾಡಿದ ಬಗ್ಗೆ ನೆಟ್ಟಿಗರು ಟ್ರೋಲ್ ಮಾಡಿದ್ದಾರೆ.
ನವದೆಹಲಿ: ಪಾಕಿಸ್ತಾನಕ್ಕೆ ಭಾರತ ಎಷ್ಟು ಹೊಡೆತ ನೀಡಿದೆ, ಎಲ್ಲೆಲ್ಲಿ ದಾಳಿ ಮಾಡಿದೆ ಎಂಬುದಕ್ಕೆ ನಿಖರವಾದ ವಿವರ ಇನ್ನು ಕೆಲವೇ ಕ್ಷಣಗಳಲ್ಲಿ ಸಿಗಲಿದೆ. ಭಾರತದ ರಕ್ಷಣಾ ಇಲಾಖೆ ಅಧಿಕೃತ ಮಾಹಿತಿ ನೀಡಲಿದೆ. ಪಾಕಿಸ್ತಾನದ ಮೇಲೆ ಭಾರತ ದಾಳಿ ಮಾಡಿರುವ ಬಗ್ಗೆ ಹಲವು ವರದಿಗಳು ಕೇಳಿಬರುತ್ತಿವೆ. ಇದರಲ್ಲಿ ಸತ್ಯ ಯಾವುದು ಸುಳ್ಳು ಯಾವುದು ಎಂದು ಗೊತ್ತಾಗುತ್ತಿಲ್ಲ. ಭಾರತ ಎಲ್ಲೆಲ್ಲಿ ದಾಳಿ ಮಾಡಿದೆ ಎಂಬ ನಿಖರ ಸುದ್ದಿ ತಿಳಿಯಲು ಈಗ ಎಲ್ಲರೂ ರಕ್ಷಣಾ ಇಲಾಖೆಯ ಅಧಿಕೃತ ಪ್ರಕಟಣೆಗಾಗಿ ಎದಿರು ನೋಡುತ್ತಿದ್ದಾರೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ರಕ್ಷಣಾ ಇಲಾಖೆ ಸುದ್ದಿಗೋಷ್ಠಿ ನಡೆಸಿ ಅಧಿಕೃತ ಮಾಹಿತಿ ಪ್ರಕಟಿಸಲಿದೆ.
ನವದೆಹಲಿ: ನೇರವಾಗಿ ಹೋರಾಡಿ ಗೆಲ್ಲಲಾಗದ ರಣಹೇಡಿ ಪಾಕಿಸ್ತಾನ, ಭಾರತದ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳಿನ ಕಂತೆಯನ್ನೇ ಹರಡುತ್ತಿದೆ. ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಭಾರತ ಉಗ್ರರ ಅಡುಗುದಾಣಗಳ ಮೇಲೆ ದಾಳಿ ಮಾಡಿದ ಬಳಿಕ ಪಾಕಿಸ್ತಾನ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡುತ್ತಿದೆ. ಮೊದಲು ಭಾರತೀಯ ಸೇನೆ ಬಿಳಿ ಬಾವುಟ ಹಾರಿಸಿ ನಮಗೆ ಶರಣಾಗಿದೆ ಎಂದಿತ್ತು. ನಿನ್ನೆ ಭಾರತದ ಮೇಲೆ ಕ್ಷಿಪಣಿ ದಾಳಿ ಮಾಡಿ ವಿಫಲವಾದ ಬಳಿಕ ಪಾಕಿಸ್ತಾನ ಸುಳ್ಳಿನ ಕಂತೆಯನ್ನೇ ಹರಡುತ್ತಿದೆ.
ನವದೆಹಲಿ: ಭಾರತದ 15 ನಗರಗಳನ್ನು ಗುರಿಯಾಗಿರಿಸಿ ಪಾಕಿಸ್ತಾನ ದಾಳಿ ಮಾಡುತ್ತಿದ್ದರೆ ಇತ್ತ ಭಾರತವನ್ನು ರಕ್ಷಿಸಿದ್ದು ಎಸ್-400 ಎಂಬ ಸುದರ್ಶನ ಚಕ್ರ. ಅಷ್ಟಕ್ಕೂ ಈ ಎಸ್-40 ನಮ್ಮ ಸೇನೆ ಸೇರಿದ್ದು ಹೇಗೆ, ಇದು ನಮ್ಮನ್ನು ರಕ್ಷಿಸಿದ್ದು ಹೇಗೆ ಇಲ್ಲಿದೆ ನೋಡಿ ವಿವರ. ಈ ಹಿಂದೆ ಮೋದಿ ಸರ್ಕಾರದಲ್ಲಿ ಮನೋಹರ್ ಪರಿಕ್ಕರ್ ರಕ್ಷಣಾ ಮಂತ್ರಿಯಾಗಿದ್ದಾಗ ರಷ್ಯಾ ಜೊತೆಗೆ ಒಪ್ಪಂದ ಮಾಡಿಕೊಂಡು ಈ ಏರ್ ಡಿಫೆನ್ಸ್ ವ್ಯವಸ್ಥೆಯನ್ನು ಭಾರತಕ್ಕೆ ಸೇರ್ಪಡೆಗೊಳಿಸಿದ್ದರು. ಇದುವೇ ಈಗ ಭಾರತವನ್ನು ಕಾಪಾಡುತ್ತಿದೆ.
ಬೆಂಗಳೂರು: ಕರ್ನಾಟಕದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಬೇಸಿಗೆ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದೆ. ಇಂದು ಮಳೆಯ ಸಾಧ್ಯತೆಯಿರುತ್ತಾ? ಇಲ್ಲಿದೆ ಲೇಟೆಸ್ಟ್ ಹವಾಮಾನ ವರದಿ. ಈ ವಾರ ಕಳೆದ ವಾರಕ್ಕೆ ಹೋಲಿಸಿದರೆ ಅಷ್ಟೊಂದು ಮಳೆಯಾಗಿಲ್ಲ. ಕೆಲವು ಕಡೆ ಮಾತ್ರ ಸಣ್ಣ ಮಟ್ಟಿಗೆ ಮಳೆಯಾಗಿದ್ದು ಬಿಟ್ಟರೆ ಬಹುತೇಕ ಬಿಸಿಲಿನ ವಾತಾವರಣವಿತ್ತು. ಹಾಗಿದ್ದರೂ ಕಳೆದ ಎರಡು ವಾರಗಳಲ್ಲಿ ವಾರಂತ್ಯಗಳಲ್ಲಿ ಮಳೆಯಿತ್ತು. ಆದರೆ ಇಂದು ರಾಜ್ಯದ ಒಟ್ಟಾರೆ ಹವಾಮಾನ ನೋಡುವುದಾದರೆ ಮಳೆಯಿಲ್ಲ. ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಉಡುಪಿ, ಹಾಸನ, ಮೈಸೂರು, ಬೆಂಗಳೂರು, ಮಂಡ್ಯ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಇಂದು ಬಿಸಿಲು ಮತ್ತು ಮೋಡ ಕವಿದ ವಾತಾವರಣವಿರಲಿದೆ.
ಲಕ್ನೋ: ಐಪಿಎಲ್ 2025 ರಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಪಂದ್ಯವಾಡಲಿದ್ದು, ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧದ ಪರಿಸ್ಥಿತಿ ಇರುವಾಗ ಪಂದ್ಯ ನಡೆಯುತ್ತಾ ಎನ್ನುವ ಅನುಮಾನವಿದೆ. ಇದಕ್ಕೆ ಇಲ್ಲಿದೆ ಉತ್ತರ. ನಿನ್ನೆ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯ ಅರ್ಧದಲ್ಲೇ ಸ್ಥಗಿತಗೊಳಿಸಿ ಪ್ರೇಕ್ಷಕರನ್ನು ಮೈದಾನದಿಂದ ತೆರವುಗೊಳಿಸಲಾಗಿತ್ತು. ಹೀಗಾಗಿ ಇಂದು ಐಪಿಎಲ್ ಪಂದ್ಯ ನಡೆಯುವುದೇ ಎಂಬ ಅನುಮಾನ ಪ್ರೇಕ್ಷಕರಲ್ಲಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಐಪಿಎಲ್ ಅಧ್ಯಕ್ಷ ಅರುಣ್ ಧುಮಾಲ್ ಸರ್ಕಾರದಿಂದ ಯಾವುದೇ ಸೂಚನೆ ಬಂದರೂ ನಾವು ಪಾಲಿಸುತ್ತೇವೆ. ಸದ್ಯಕ್ಕೆ ಸೂಚನೆಗಾಗಿ ಕಾಯುತ್ತಿದ್ದೇವೆ ಎಂದಿದ್ದಾರೆ.
ಶುಕ್ರವಾರ ಲಕ್ಷ್ಮೀ ದೇವಿಯ ದಿನವಾಗಿದ್ದು, ಹಣಕಾಸಿನ ಸಮಸ್ಯೆ, ದಾರಿದ್ರ್ಯ ನಿವಾರಣೆಗಾಗಿ ಲಕ್ಷ್ಮೀ ಕವಚ ಸ್ತೋತ್ರವನ್ನು ತಪ್ಪದೇ ಓದಿ. ಕನ್ನಡದಲ್ಲಿ ಇಲ್ಲಿದೆ ನೋಡಿ.ಶುಕಂ ಪ್ರತಿ ಬ್ರಹ್ಮೋವಾಚಮಹಾಲಕ್ಷ್ಮ್ಯಾಃ ಪ್ರವಕ್ಷ್ಯಾಮಿ ಕವಚಂ ಸರ್ವಕಾಮದಮ್ |ಸರ್ವಪಾಪಪ್ರಶಮನಂ ದುಷ್ಟವ್ಯಾಧಿವಿನಾಶನಮ್ || ೧ ||ಗ್ರಹಪೀಡಾಪ್ರಶಮನಂ ಗ್ರಹಾರಿಷ್ಟಪ್ರಭಞ್ಜನಮ್ |ದುಷ್ಟಮೃತ್ಯುಪ್ರಶಮನಂ ದುಷ್ಟದಾರಿದ್ರ್ಯನಾಶನಮ್ || ೨ ||ಪುತ್ರಪೌತ್ರಪ್ರಜನನಂ ವಿವಾಹಪ್ರದಮಿಷ್ಟದಮ್ |ಚೋರಾರಿಹಾರಿ ಜಪತಾಮಖಿಲೇಪ್ಸಿತದಾಯಕಮ್ || ೩ ||ಸಾವಧಾನಮನಾ ಭೂತ್ವಾ ಶೃಣು ತ್ವಂ ಶುಕ ಸತ್ತಮ |ಅನೇಕಜನ್ಮಸಂಸಿದ್ಧಿಲಭ್ಯಂ ಮುಕ್ತಿಫಲಪ್ರದಮ್ || ೪ ||ಧನಧಾನ್ಯಮಹಾರಾಜ್ಯ-ಸರ್ವಸೌಭಾಗ್ಯಕಲ್ಪಕಮ್ |ಸಕೃತ್ಸ್ಮರಣಮಾತ್ರೇಣ ಮಹಾಲಕ್ಷ್ಮೀಃ ಪ್ರಸೀದತಿ || ೫ ||ಕ್ಷೀರಾಬ್ಧಿಮಧ್ಯೇ ಪದ್ಮಾನಾಂ ಕಾನನೇ ಮಣಿಮಣ್ಟಪೇ |ತನ್ಮಧ್ಯೇ ಸುಸ್ಥಿತಾಂ ದೇವೀಂ ಮನೀಷಿಜನಸೇವಿತಾಮ್ || ೬ ||ಸುಸ್ನಾತಾಂ ಪುಷ್ಪಸುರಭಿಕುಟಿಲಾಲಕಬನ್ಧನಾಮ್ |ಪೂರ್ಣೇನ್ದುಬಿಮ್ಬವದನಾ-ಮರ್ಧಚನ್ದ್ರಲಲಾಟಿಕಾಮ್ || ೭ ||
ನವದೆಹಲಿ: ತನ್ನ ಮೇಲೆ ದಾಳಿ ಮಾಡಲು ಬಂದ ಪಾಕಿಸ್ತಾನವನ್ನು ಸಮರ್ಥವಾಗಿ ಹಿಮ್ಮೆಟ್ಟಿಸುವಲ್ಲಿ ಭಾರತ ಯಶಸ್ವಿಯಾಗಿದೆ. ಭಾರತದ ನೌಕಾ ಸೇನೆಯ ದೈತ್ಯ ಐಎನ್ಎಸ್ ವಿಕ್ರಾಂತ್ ಕರಾಚಿ ಬಂದರನ್ನು ಪುಡಿಗಟ್ಟಿದ ವಿಡಿಯೋ ವೈರಲ್ ಆಗಿದೆ. 1971 ರ ಯುದ್ಧದ ಬಳಿಕ ಇದೇ ಮೊದಲ ಬಾರಿಗೆ ನೌಕಾಸೇನೆಯ ವಾರ್ ಶಿಪ್ ಕರಾಚಿ ಬಂದರಿನ ಮೇಲೆ ದಾಳಿ ಮಾಡಿದೆ. ಅಂದೂ ಕರಾಚಿ ಬಂದರನ್ನು ಭಾರತದ ಯುದ್ಧ ನೌಕೆ ಸಂಪೂರ್ಣ ಪುಡಿಗಟ್ಟಿತ್ತು. ಎಷ್ಟರಮಟ್ಟಿಗೆ ಎಂದರೆ ಅಂದು ಕರಾಚಿ ಬಂದರು ಬೆಂಕಿ ಆರಲು ವಾರ ಬೇಕಾಗಿತ್ತಂತೆ. ಇಂದು ಮತ್ತೆ ಕರಾಚಿ ಬಂದರಿನ ಮೇಲೆ ದಾಳಿ ಮಾಡಿದೆ.
ಜಮ್ಮು ಕಾಶ್ಮೀರ: ಜಮ್ಮು ಕಾಶ್ಮೀರವನ್ನು ಟಾರ್ಗೆಟ್ ಮಾಡಿ ದಾಳಿ ಮಾಡಲು ಯತ್ನಿಸಿದ ಪಾಕಿಸ್ತಾನಕ್ಕೆ ಭಾರತೀಯ ಸೇನೆ ಮುಗಿಬಿದ್ದು ದಾಳಿ ನಡೆಸುತ್ತಿದೆ. ಇದೀಗ ನೇರವಾಗಿ ಪಾಕಿಸ್ತಾನ ರಾಜಧಾನಿ ಇಸ್ಲಾಮಾಬಾದ್ ಮೇಲೆಯೇ ಕ್ಷಿಪಣಿ ದಾಳಿ ನಡೆಸಿದೆ. ಜಮ್ಮು ಕಾಶ್ಮೀರವನ್ನು ಟಾರ್ಗೆಟ್ ಮಾಡಿ ದಾಳಿ ಮಾಡಲು ಯತ್ನಿಸಿದ ಪಾಕಿಸ್ತಾನದ ಕ್ಷಿಪಣಿಗಳನ್ನು ಭಾರತದ ಏರ್ ಡಿಫೆನ್ಸ್ ಹೊಡೆದುರುಳಿಸಿದ್ದು, ಯಾವುದೇ ನಷ್ಟವಾಗಿಲ್ಲ ಎಂಬ ಪ್ರಕಟಣೆಯನ್ನು ಸ್ವತಃ ರಕ್ಷಣಾ ಇಲಾಖೆ ಪ್ರಕಟಣೆ ನೀಡಿದೆ.ಇದೀಗ ಪಾಕಿಸ್ತಾನದ ಮೇಲೆ ಭಾರತೀಯ ಸೇನೆ ಮುಗಿಬಿದ್ದಿದೆ.
ಜಮ್ಮು ಕಾಶ್ಮೀರ: ಜಮ್ಮು ಕಾಶ್ಮೀರ ಸೇರಿದಂತೆ ಭಾರತದ ಮೂರು ರಾಜ್ಯಗಳನ್ನು ಟಾರ್ಗೆಟ್ ಮಾಡಿ ಪಾಕಿಸ್ತಾನ ಕ್ಷಿಪಣಿ ದಾಳಿ ನಡೆಸುತ್ತಿದ್ದರೆ ಇತ್ತ ಭಾರತದ ಏರ್ ಡಿಫೆನ್ಸ್ ಸಿಸ್ಟಂ ಅದನ್ನು ಯಶಸ್ವಿಯಾಗಿ ತಡೆಹಿಡಿದಿದೆ. ರಜೌರಿಯನ್ನು ಗುರಿಯಾಗಿರಿಸಿ ಪಾಕಿಸ್ತಾನ ಕ್ಷಿಪಣಿ ದಾಳಿ ನಡೆಸಿದ್ದು ಇದನ್ನು ಭಾರತದ ಏರ್ ಡಿಫೆನ್ಸ್ ಸಿಸ್ಟಂ ಅಗಸದಲ್ಲಿಯೇ ತಡೆಹಿಡಿದಿದೆ. ಮಿಂಚಿನ ವೇಗದಲ್ಲಿ ಕ್ಷಿಪಣಿಗಳು ಅಪ್ಪಳಿಸುವ ಮತ್ತು ಅದನ್ನು ಅಷ್ಟೇ ಪ್ರಬಲವಾಗಿ ಭಾರತ ಹೊಡೆದುರುಳಿಸುವ ವಿಡಿಯೋಗಳು ಭಯಾನಕವಾಗಿದೆ. ಕ್ಷಿಪಣಿ ದಾಳಿಯಾಗುತ್ತಿದ್ದಂತೇ ಜಮ್ಮು ಕಾಶ್ಮೀರದಲ್ಲಿ ಜನ ಭಯಭೀತರಾದರು.
ಧರ್ಮಶಾಲಾ: ಪಾಕಿಸ್ತಾನ ಜಮ್ಮು ಕಾಶ್ಮೀರ ಸೇರಿದಂತೆ ಮೂರು ರಾಜ್ಯಗಳನ್ನು ಟಾರ್ಗೆಟ್ ಮಾಡಿ ದಾಳಿ ಮಾಡಲು ಯತ್ನಿಸಿದ ಬೆನ್ನಲ್ಲೇ ಧರ್ಮಶಾಲಾ ಮೈದಾನದಲ್ಲಿ ನಡೆಯುತ್ತಿರುವ ಐಪಿಎಲ್ ಪಂದ್ಯವನ್ನು ಅರ್ಧಕ್ಕೇ ಸ್ಥಗಿತಗೊಳಿಸಿ ಮನೆಗೆ ಹೋಗಿ ಎಂದು ಪ್ರೇಕ್ಷಕರಿಗೆ ಸೂಚಿಸಲಾಯಿತು. ಜಮ್ಮು ಕಾಶ್ಮೀರವನ್ನು ಟಾರ್ಗೆಟ್ ಮಾಡಿ ಪಾಕಿಸ್ತಾನ ವಿಮಾನ ದಾಳಿ ನಡೆಸಲು ಯತ್ನಿಸುತ್ತಿದ್ದಂತೇ ಇತ್ತ ಧರ್ಮಶಾಲಾದಲ್ಲಿ ನಡೆಯುತ್ತಿರುವ ಐಪಿಎಲ್ ಪಂದ್ಯವನ್ನು ಅರ್ಧದಲ್ಲಿಯೇ ನಿಲ್ಲಿಸಲಾಯಿತು. ಬಳಿಕ ಮೈದಾನದ ಸಿಬ್ಬಂದಿಗಳು, ಆಯೋಜಕರು ಘೋಷಣೆ ಮಾಡಿ ಪ್ರೇಕ್ಷಕರನ್ನು ಮನೆಗೆ ತೆರಳುವಂತೆ ಸೂಚನೆ ನೀಡಿದೆ. ಆಟಗಾರರು, ಸಿಬ್ಬಂದಿಗಳನ್ನು ತಕ್ಷಣವೇ ಮೈದಾನದಿಂದ ಹೊರಗೆ ಕರೆದೊಯ್ಯಲಾಯಿತು. ಸುರಕ್ಷತಾ ದೃಷ್ಟಿಯಿಂದ ಪಂದ್ಯ ಸ್ಥಗಿತಗೊಳಿಸಲಾಗಿದೆ.
ಜಮ್ಮು ಕಾಶ್ಮೀರ: ಆಪರೇಷನ್ ಸಿಂಧೂರ್ ಗೆ ಪ್ರತೀಕಾರ ತೀರಿಸಲು ಜಮ್ಮು ಕಾಶ್ಮೀರವನ್ನು ಗುರಿಯಾಗಿಸಿ ದಾಳಿ ನಡೆಸಲು ಪಾಕಿಸ್ತಾನ ಯತ್ನಿಸಿದೆ. ಇತ್ತ ಲಾಹೋರ್ ನನ್ನೇ ಗುರಿಯಾಗಿಸಿ ಭಾರತ ಕ್ಷಿಪಣಿ ದಾಳಿ ನಡೆಸಿ ಪಾಕ್ ಸಂಚನ್ನು ವಿಫಲಗೊಳಿಸಿದೆ. ಪಾಕಿಸ್ತಾನ ದಾಳಿ ಹಿನ್ನಲೆಯಲ್ಲಿ ಜಮ್ಮು ಕಾಶ್ಮೀರದಲ್ಲಿ ಕಂಪ್ಲೀಟ್ ಬ್ಲ್ಯಾಕ್ ಔಟ್ ಮಾಡಲಾಗಿದೆ. ರಾತ್ರಿಯಿಡೀ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿದೆ. ಉರಿ ಸೆಕ್ಟರ್ ನಲ್ಲಿ ಪಾಕ್ ಸೈನಿಕರು ಶೆಲ್ ದಾಳಿ ನಡೆಸಿದ್ದು ಇದಕ್ಕೆ ಭಾರತ ತಕ್ಕ ಪ್ರತ್ಯುತ್ತರ ನೀಡಿದೆ. ಪಾಕಿಸ್ತಾನ ವಾಯುದಾಳಿ ಯತ್ನ ವಿಫಲಗೊಳಿಸಿರುವ ಭಾರತ ಈಗ ಉಗ್ರ ಹಫೀಜ್ ಸಯೀದ್ ಬೆಚ್ಚಗೆ ಕೂತಿರುವ ಲಾಹೋರ್ ನನ್ನೇ ಗುರಿಯಾಗಿಸಿ ದಾಳಿ ನಡೆಸಿದೆ.
ಹಿಮಾಚಲ ಪ್ರದೇಶ: ಧರ್ಮಶಾಲಾದಲ್ಲಿ ನಡೆಯಲಿರುವ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯಾಟಕ್ಕೆ ಮಳೆ ಅಡ್ಡಿಯಾಗಿದೆ. 7ಗಂಟೆಗೆ ನಡೆಯಬೇಕಿದ್ದ ಟಾಸ್ ಇದೀಗ ಮಳೆಯಿಂದಾಗಿ ವಿಳಂಭವಾಗಿದೆ.ಸದ್ಯಕ್ಕೆ ಪಂದ್ಯವನ್ನು ನಿಲ್ಲಿಸಲಾಗಿದ್ದು, ಶೀಘ್ರದಲ್ಲೇ ಟಾಸ್ ನಡೆಯಲಿದೆ. ಮೈದಾನದ ಸಿಬ್ಬಂದಿ ಕಾರ್ಯಾಚರಣೆಯಲ್ಲಿರುವಾಗ ಆಟಗಾರರು ಪಂದ್ಯಾಟಕ್ಕೆ ರೆಡಿಯಾಗುತ್ತಿದ್ದಾರೆ. ಸ್ಥಳವನ್ನು ಪಂದ್ಯಕ್ಕೆ ಸಿದ್ಧಗೊಳಿಸಿದ್ದಾರೆ.PBKS ಪ್ಲೇಆಫ್ಗೆ ಪ್ರವೇಶಿಸುವ ಅಂಚಿನಲ್ಲಿದ್ದು, DC ಈ ಗೆಲುವಿನ ಮೂಲಕ ಮತ್ತೇ ಪ್ಲೇ ಆಫ್ಗೆ ಹತ್ತಿರವಾಗುವ ಪ್ರಯತ್ನದಲ್ಲಿದ್ದಾರೆ.
ಪಾಕಿಸ್ತಾನದ ಹಲವು ಕಡೆ ಭಾರತೀಯ ಸಶಸ್ತ್ರ ಪಡಗಳು ನಡೆಸಿದ ದಾಳಿ ಬಳಿ ರಾವಲ್ಪಿಂಡಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಗುರುವಾರ ಸಂಜೆ ನಿಗದಿಯಾಗಿದ್ದ ಪಾಕಿಸ್ತಾನ್ ಸೂಪರ್ ಲೀಗ್ (PSL) ಪೇಶಾವರ್ ಝಲ್ಮಿ ಮತ್ತು ಕರಾಚಿ ಕಿಂಗ್ಸ್ ನಡುವಿನ ಪಂದ್ಯವನ್ನು ರದ್ದುಗೊಳಿಸಲಾಗಿದೆ.ಪಾಕಿಸ್ತಾನ್ ಸೂಪರ್ ಲೀಗ್ನ ಉಳಿದ ಎಲ್ಲ ಪಂದ್ಯಗಳನ್ನು ಕರಾಚಿ, ದೋಹಾ ಮತ್ತು ದುಬೈ ಎಂಬ ಮೂರು ಸ್ಥಳಗಳಿಗೆ ಸ್ಥಳಾಂತರಿಸಲು ಪಿಸಿಬಿ ಅಧಿಕಾರಿಗಳು ಸೂಚಿಸಿದ್ದಾರೆ.ಭಾರತದ ದಾಳಿ ಮತ್ತು ಉಭಯ ರಾಷ್ಟ್ರಗಳ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಹೊರತಾಗಿಯೂ ಪಿಎಸ್ಎಲ್ ಯೋಜಿಸಿದಂತೆ
ನವದೆಹಲಿ: ತನ್ನ ಪ್ರೀತಿಗಾಗಿ ಕಳೆದ ವರ್ಷ ತನ್ನ ಮೂವರು ಮಕ್ಕಳೊಂದಿಗೆ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿದ್ದ ಪಾಕಿಸ್ತಾನಿ ಮಹಿಳೆ ಸೀಮಾ ಹೈದರ್ ಅವರು ಆಪರೇಷನ್ ಸಿಂಧೂರ್ಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ."ಜೈ ಹಿಂದ್, ಹಿಂದೂಸ್ತಾನ್ ಜಿಂದಾಬಾದ್": ಸೀಮಾ ಆನ್ಲೈನ್ನಲ್ಲಿ ಪ್ರತಿಕ್ರಿಯಿಸಿದ್ದಾರೆತನ್ನ Instagram ಹ್ಯಾಂಡಲ್ @Seema_Sachin10 ನಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ, ಸೀಮಾ ಹೈದರ್ ಭಾರತದ ಮಿಲಿಟರಿ ದಾಳಿಯನ್ನು ಮುಕ್ತವಾಗಿ ಶ್ಲಾಘಿಸಿದರು, “ಹಿಂದುಸ್ತಾನ್ ಜಿಂದಾಬಾದ್” ಮತ್ತು “ಜೈ ಹಿಂದ್, ಜೈ ಭಾರತ್” ಎಂಬ
ನವದೆಹಲಿ: ಮೇ 7-8 ರ ರಾತ್ರಿ ಉತ್ತರ ಮತ್ತು ಪಶ್ಚಿಮ ಭಾರತದಾದ್ಯಂತ ಅನೇಕ ಭಾರತೀಯ ಸೇನಾ ನೆಲೆಗಳ ಮೇಲೆ ದೊಡ್ಡ ಪ್ರಮಾಣದ ಡ್ರೋನ್ ಮತ್ತು ಕ್ಷಿಪಣಿ ದಾಳಿಯ ಪಾಕಿಸ್ತಾನ ಸೇನೆಯ ಪ್ರಯತ್ನಗಳನ್ನು ಭಾರತೀಯ ಸಶಸ್ತ್ರ ಪಡೆಗಳು ಯಶಸ್ವಿಯಾಗಿ ತಟಸ್ಥಗೊಳಿಸಿದವು ಮತ್ತು ಲಾಹೋರ್ನಲ್ಲಿ ವಾಯು ರಕ್ಷಣಾ ವ್ಯವಸ್ಥೆಯನ್ನು ತಟಸ್ಥಗೊಳಿಸಲಾಗಿದೆ.ಗುರುವಾರ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕರ್ನಲ್ ಸೋಫಿಯಾ ಖುರೇಷಿ, ಭಾರತದ ಇಂಟಿಗ್ರೇಟೆಡ್ ಕೌಂಟರ್-ಯುಎಎಸ್ ಗ್ರಿಡ್ ಮತ್ತು ಏರ್ ಡಿಫೆನ್ಸ್ ಸಿಸ್ಟಮ್ಗಳು ಬೆದರಿಕೆಗಳನ್ನು ಯಶಸ್ವಿಯಾಗಿ ತಟಸ್ಥಗೊಳಿಸಿವೆ ಎಂದು ಹೇಳಿದರು.
ಕೇರಳ: ಎಪ್ರಿಲ್ 22 ರಂದು ಕಾಶ್ಮೀರದ ಪಹಲ್ಗಾಮ್ ನಲ್ಲಿ 26 ನಾಗರಿಕರನ್ನು ಕೊಂದ ಭಯೋತ್ಪಾದಕ ದಾಳಿಗೆ ಪರಿಹಾರ ಹುಡುಕುತ್ತಿರುವ ದೇಶಕ್ಕೆ "ನಾಚಿಕೆಯಾಗುತ್ತಿದೆ" ಎಂದು ಹೇಳುವ ಮೂಲಕ ಕೇರಳದ ನಟಿ ಅಮಿನಾ ನಿಜಮ್ ವಿವಾದವನ್ನು ಹುಟ್ಟುಹಾಕಿದ್ದಾರೆ.ತನ್ನ ಸಾಮಾಜಿಕ ಮಾಧ್ಯಮ ಖಾತೆಯಲ್ಲಿನ ಪೋಸ್ಟ್ನಲ್ಲಿ, ಪಹಲ್ಗಾಮ್ ದಾಳಿಯನ್ನು "ಕುಶಲತೆಯಿಂದ" ಮಾಡಲಾಗಿದೆ ಮತ್ತು ಯುದ್ಧವು ಶಾಂತಿಯನ್ನು ತರುವುದಿಲ್ಲ ಎಂದು ಅಮಿನಾ ನಿಜಮ್ ಹೇಳಿದ್ದಾರೆ.ಅಮಿನ್ ನಿಜಮ್ ಪೋಸ್ಟ್ನಲ್ಲಿ ಹೀಗಿದೆ; "ಹೌದು, ನಮ್ಮ ದೇಶವು ಇನ್ನೂ ಹಲವು ಪ್ರಶ್ನೆಗಳಿಗೆ ಉತ್ತರವಿಲ್ಲದಿರುವಾಗ ಮತ್ತು
ನವದೆಹಲಿ: ಆಪರೇಷನ್ ಸಿಂಧೂರ್ ಅಡಿಯಲ್ಲಿ ಪಾಕಿಸ್ತಾನ ಮತ್ತು ಪಿಒಕೆಯಲ್ಲಿನ ಭಯೋತ್ಪಾದಕ ಶಿಬಿರಗಳನ್ನು ಯಶಸ್ವಿಯಾಗಿ ಗುರಿಯಾಗಿಸಿ ನಾಶಪಡಿಸಿದ ಭಾರತದ ಸಶಸ್ತ್ರ ಪಡೆಗಳನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರ ಶ್ಲಾಘಿಸಿದ್ದಾರೆ. ಇದು ನಮಗೆ ಹೆಮ್ಮೆಯ ಸಂಗತಿ ಎಂದರು.DRDO ನಲ್ಲಿ ನಡೆದ ರಾಷ್ಟ್ರೀಯ ಗುಣಮಟ್ಟದ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಸಿಂಗ್, ಕಾರ್ಯಾಚರಣೆಯಲ್ಲಿ ಒಂಬತ್ತು ಭಯೋತ್ಪಾದಕ ಶಿಬಿರಗಳನ್ನು ಧ್ವಂಸಗೊಳಿಸಲಾಯಿತು ಮತ್ತು "ಗಣನೀಯ ಸಂಖ್ಯೆಯ ಭಯೋತ್ಪಾದಕರು" ಕೊಲ್ಲಲ್ಪಟ್ಟರು ಎಂದು ಹೇಳಿದರು.
ಬೆಂಗಳೂರು: ಪಹಲ್ಗಾಮ್ನಲ್ಲಿ ನಡೆದ ನರಮೇಧಕ್ಕೆ ಪ್ರತೀಕಾರವಾಗಿ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಯೋಧರಿಗೆ ಬೆಂಬಲ ಸೂಚಿಸಲುರಾಜ್ಯ ಸರ್ಕಾರ ತಿರಂಗಾ ಯಾತ್ರೆಯನ್ನು ಹಮ್ಮಿಕೊಂಡಿದೆ.ಶುಕ್ರವಾರ ಬೆಳಗ್ಗೆ 9.30 ರಿಂದ 10.30 ರವರೆಗೆ ಬೆಂಗಳೂರಿನ ಕೆ.ಆರ್. ವೃತ್ತದಿಂದ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂ ಬಳಿ ಇರುವ ಮಿನ್ಸ್ಕ್ ಸ್ಕ್ವೇರ್ ವರೆಗೆ 'ತಿರಂಗಾ ಯಾತ್ರೆ'ಯನ್ನು ಹಮ್ಮಿಕೊಳ್ಳಲಾಗಿದೆ.ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆಯುವ ಈ ಯಾತ್ರೆಯಲ್ಲಿ ಎಲ್ಲ ರಾಜಕೀಯ ಪಕ್ಷಗಳ ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರು, ಸರಕಾರಿ, ಖಾಸಗಿ ಉದ್ದಿಮೆಗಳ ನೌಕರರು, ಸಾಹಿತಿಗಳು, ಚಿಂತಕರು, ಚಿತ್ರರಂಗದವರು,
ಲಾಹೋರ್ [ಪಾಕಿಸ್ತಾನ]: "ಡ್ರೋನ್ ಸ್ಫೋಟಗಳು ಉರುಳಿದ ನಂತರ, ಮುಂದಿನ ದಿನಗಳಲ್ಲಿ ದಾಳಿಯಾಗುವ ಭಯದಲ್ಲಿ ಕೂಡಡೇ ಯುಎಸ್ ತನ್ನ ನಾಗರಿಕರನ್ನು ಲಾಹೋರ್ನಿಂದ ತೊರೆಯುವಂತೆ ಕೇಳಿಕೊಂಡಿದೆ.US ದೂತಾವಾಸವು ಹೇಳಿಕೆಯಲ್ಲಿ ತನ್ನ ನಾಗರಿಕರಿಗೆ US ಸರ್ಕಾರದ ಸಹಾಯವನ್ನು ಅವಲಂಬಿಸದ ಸ್ಥಳಾಂತರಿಸುವ ಯೋಜನೆಗಳನ್ನು ಹೊಂದಲು ಸಲಹೆ ನೀಡಿದೆ.ನವೀಕೃತ ಮತ್ತು ಸುಲಭವಾಗಿ ಪ್ರವೇಶಿಸಬಹುದಾದ ಪ್ರಯಾಣ ದಾಖಲೆಗಳನ್ನು ಕೊಂಡೊಯ್ಯುತ್ತದೆ, ನವೀಕರಣಗಳಿಗಾಗಿ ಸ್ಥಳೀಯ ಮಾಧ್ಯಮವನ್ನು ಮೇಲ್ವಿಚಾರಣೆ ಮಾಡಿ, ಸರಿಯಾದ ಗುರುತನ್ನು ಕೊಂಡೊಯ್ಯಿರಿ ಮತ್ತು ಅಧಿಕಾರಿಗಳೊಂದಿಗೆ ಸಹಕರಿಸುತ್ತದೆ.
ಗುರುದಾಸ್ಪುರ(ಪಂಜಾಬ್): ಭಾರತ ಸರ್ಕಾರ ಮತ್ತು ಪಂಜಾಬ್ ಸರ್ಕಾರವು 1968 ರ ನಾಗರಿಕ ರಕ್ಷಣಾ ಕಾಯಿದೆಯಡಿಯಲ್ಲಿ ಗುರುದಾಸ್ಪುರ ಜಿಲ್ಲೆಯಲ್ಲಿ ರಾತ್ರಿ 9:00 ರಿಂದ 5:00 AM ವರೆಗೆ ಸಂಪೂರ್ಣ ಕತ್ತಲನ್ನು ಜಾರಿಗೊಳಿಸಲು ನಿರ್ದೇಶನಗಳನ್ನು ಹೊರಡಿಸಿದೆ. ಇಂದಿನಿಂದ ಅದು ಜಾರಿಗೆ ಬರಲಿದೆ.ಭಾರತ-ಪಾಕ್ ಗಡಿಯಲ್ಲಿನ ಸೂಕ್ಷ್ಮ ವಾತಾವರಣದಿಂದಾಗಿ ಭಾರತ ಸರ್ಕಾರ ಮತ್ತು ಪಂಜಾಬ್ ಸರ್ಕಾರದ ಮಾರ್ಗಸೂಚಿಗಳು. ಇದರ ಪ್ರಕಾರ, ನಾಗರಿಕ ರಕ್ಷಣಾ ಕಾಯಿದೆ 1968 ರ ಅಡಿಯಲ್ಲಿ ತುರ್ತು ಪರಿಸ್ಥಿತಿಯನ್ನು ಎದುರಿಸಲು 08.05.2025 ರಿಂದ ಹೆಚ್ಚಿನ ಆದೇಶಗಳನ್ನು ಹೊರಡಿಸಲಾಗುವುದು. ರಾತ್ರಿ 9.00 ರಿಂದ ಮರುದಿನ ಬೆಳಿಗ್ಗೆ 5.00 ರವರೆಗೆ ಜಿಲ್ಲೆಯಲ್ಲಿ ಪೂರ್ಣಗೊಳ್ಳಲಿದೆ.
ನವದೆಹಲಿ: ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಇತ್ತೀಚಿನ ಬೆಳವಣಿಗೆಗಳ ಬೆಳಕಿನಲ್ಲಿ ರಾಷ್ಟ್ರೀಯ ಸನ್ನದ್ಧತೆ ಮತ್ತು ಅಂತರ ಸಚಿವಾಲಯದ ಸಮನ್ವಯವನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ಸರ್ಕಾರದ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳ ಕಾರ್ಯದರ್ಶಿಗಳೊಂದಿಗೆ ಗುರುವಾರ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು.ಕಾರ್ಯಾಚರಣೆಯ ನಿರಂತರತೆ ಮತ್ತು ಸಾಂಸ್ಥಿಕ ಸ್ಥಿತಿಸ್ಥಾಪಕತ್ವವನ್ನು ಎತ್ತಿಹಿಡಿಯಲು ಸಚಿವಾಲಯಗಳು ಮತ್ತು ಏಜೆನ್ಸಿಗಳ ನಡುವೆ ತಡೆರಹಿತ ಸಮನ್ವಯದ ಅಗತ್ಯವನ್ನು ಪ್ರಧಾನಿ ಮೋದಿ ಒತ್ತಿ ಹೇಳಿದರು.ಪ್ರಸ್ತುತ ಪರಿಸ್ಥಿತಿಗಾಗಿ ಸಚಿವಾಲಯಗಳ ಯೋಜನೆ ಮತ್ತು ಸಿದ್ಧತೆಯನ್ನು ಪ್ರಧಾನಮಂತ್ರಿ ಪರಿಶೀಲಿಸಿದರು.
ನವದೆಹಲಿ: 2025ರ ಐಪಿಎಲ್ ಮುಗಿಯುತ್ತಿದ್ದ ಹಾಗೇ ಎಂಎಸ್ ಧೋನಿಯಿಂದ ಫಾಫ್ ಡು ಪ್ಲೆಸಿಸ್ ವರೆಗೆ, ಅಜಿಂಕ್ಯ ರಹಾನೆ, ಮೊಯಿನ್ ಅಲಿ, ಇಶಾಂತ್ ಶರ್ಮಾ ಮತ್ತು ರವಿಚಂದ್ರನ್ ಅಶ್ವಿನ್ ಒಳಗೊಂಡ 6 ಐಪಿಎಲ್ ಅನುಭವಿಗಳು ನಿವೃತ್ತಿಯಾಗಲಿದ್ದಾರೆಂಬ ಸುದ್ದಿಯಿದೆ.1. ಎಂಎಸ್ ಧೋನಿ (CSK)ಕಳೆದ ಐಪಿಎಲ್ನಲ್ಲೇ ಎಂಎಸ್ ಧೋನಿ ಐಪಿಎಲ್ಗೆ ನಿವೃತ್ತಿಘೋಷಿಸುತ್ತಾರೆ ಎನ್ನಲಾಗಿತ್ತು. ಆದರೆ 2025ರ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ನ ಪ್ರಮುಖ ಆಟಗಾರ MS ಧೋನಿ ನಿವೃತ್ತಿ ಘೋಷಿಸುವುದು ಖಚಿತ ಎನ್ನಲಾಗಿದೆ.
ನವದೆಹಲಿ: ಪಹಲ್ಗಾಮ್ ದಾಳಿಗೆ ಭಾರತ ಪ್ರತೀಕಾರ ತೀರಿಸಲು ಮುಂದಾಗಿದ್ದ ವೇಳೆ ಅತ್ತ ಪಾಕಿಸ್ತಾನವೂ ಭಾರತ 15 ನಗರಗಳನ್ನು ಟಾರ್ಗೆಟ್ ಮಾಡಿ ದಾಳಿ ನಡೆಸಲು ಮುಂದಾಗಿತ್ತು. ಆದರೆ ಭಾರತೀಯ ಸೇನೆ ಪಾಕಿಸ್ತಾನದ ರಕ್ಷಣಾ ಘಟಕವನ್ನೇ ಹೊಡೆದುರಳಿಸಿತು ಎಂದು ಇದೀಗ ರಕ್ಷಣಾ ಸಚಿವಾಲಯ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದೆ. ಪಹಲ್ಗಾಮ್ ನಲ್ಲಿ ಉಗ್ರ ದಾಳಿಯಾದ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧದ ಕಾರ್ಮೋಡವಿತ್ತು. ಇತ್ತ ಭಾರತ ಸರ್ಕಾರ ದೇಶದಲ್ಲಿ ಮಾಕ್ ಡ್ರಿಲ್ ಗೆ ತಯಾರಿ ನಡೆಸಿತ್ತು. ಇದರೊಂದಿಗೆ ಪಾಕಿಸ್ತಾನಕ್ಕೆ ಯುದ್ಧದ ಸೂಚನೆ ಸಿಕ್ಕಿತ್ತು.
ಬೆಂಗಳೂರು: ದೇಶಕ್ಕಾಗಿ ಪ್ರಾಣ ಕೊಡಲು ಸಿದ್ದ ಎಂದು ಸುದ್ದಿಯಾಗಿದ್ದ ಸಚಿವ ಜಮೀರ್ ಅಹ್ಮದ್ ಇದೀಗ ಆಪರೇಷನ್ ಸಿಂಧೂರ ಕಾರ್ಯಚರಣೆ ಹಿನ್ನೆಲೆ ಸೇನೆಯ ಹೆಸರಿನಲ್ಲಿ ಶುಕ್ರವಾರದಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ಹೇಳಿದ್ದಾರೆ. ರಾಜ್ಯದ ಎಲ್ಲ ಕರ್ನಾಟಕದ ಮುಜರಾಯಿ ಇಲಾಖಾ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಆದೇಶ ಹೊರಡಿಸಿದ ಬೆನ್ನಲ್ಲೇ ಜಮೀರ್ ಅಹ್ಮದ್ ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ಆಪರೇಷನ್ ಸಿಂಧೂರದ ಭಾಗವಾಗಿ ಎಲ್ಲಾ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಸಲು ಸೂಚನೆ ನೀಡಿದ್ದಾರೆ. ಭಾರತೀಯ
ಲಾಹೋರ್: 1999 ರಲ್ಲಿ ಏರ್ ಇಂಡಿಯಾ ವಿಮಾನ ಅಪಹರಿಸಿ ಉಗ್ರ ಮಸೂದ್ ಅಜರ್ ಬಿಡುಗಡೆಗೆ ಕಾರಣವಾಗಿದ್ದ ಉಗ್ರ ಅಬ್ದುಲ್ ರೌಫ್ ಮಸೂದ್ ಇದೀಗ ಆಪರೇಷನ್ ಸಿಂಧೂರ್ ನಲ್ಲಿ ಫಿನಿಶ್ ಆಗಿದ್ದಾನೆ ಎಂಬ ಸುದ್ದಿ ಬಂದಿದೆ. ಆ ಮೂಲಕ ಹಳೆಯ ಸೇಡಿಗೆ ಅಜಿತ್ ದೋವಲ್ ಸೇಡು ತೀರಿಸಿಕೊಂಡಂತಾಗಿದೆ. 1999 ರಲ್ಲಿ ಅಟಲ್ ಬಿಹಾರಿ ವಾಜಪೇಯಿ ಪ್ರಧಾನಿಯಾಗಿದ್ದಾಗ ಏರ್ ಇಂಡಿಯಾ ವಿಮಾನ ಅಪಹರಣವಾಗಿತ್ತು. ವಿಮಾನದಲ್ಲಿದ್ದ ಪ್ರಯಾಣಿಕರನ್ನು ಒತ್ತೆಯಾಳುಗಳನ್ನಾಗಿಸಿದ್ದ ಉಗ್ರರು ಭಾರತದ ವಶದಲ್ಲಿದ್ದ ಪ್ರಮುಖ ಉಗ್ರ ಮಸೂದ್ ಅಜರ್ ಬಿಡುಗಡೆಗೆ ಬೇಡಿಕೆಯಿಟ್ಟಿದ್ದರು. ಆಗ ಹಾಲಿ ಭದ್ರತಾ ಸಲಹೆಗಾರ ಅಜಿತ್ ದೋವಲ್ ಗುಪ್ತಚರ ಇಲಾಖೆ ಮುಖ್ಯಸ್ಥರಾಗಿದ್ದರು.
ಪಂಜಾಬ್: ಆಪರೇಷನ್ ಸಿಂಧೂರ್ ಬಳಿಕ ಭಾರತ-ಪಾಕ್ ಗಡಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಈ ನಡುವೆ ಪಂಜಾಬ್ನ ಆರು ಗಡಿ ಜಿಲ್ಲೆಗಳ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.ಪಾಕಿಸ್ತಾನವು ಭಾರತದ ಮೇಲೆ ಪ್ರತಿಕಾರದ ದಾಳಿ ನಡೆಯುವ ಸಾಧ್ಯತೆ ಇರುವುದರಿಂದ ಅಮೃತಸರ, ಫಿರೋಜ್ಪುರ, ಪಠಾಣ್ಕೋಟ್, ಫಜಿಲ್ಕಾ, ಗುರುದಾಸಪುರ ಮತ್ತು ತರಣ್ ತರಣ್ ಜಿಲ್ಲೆಗಳಲ್ಲಿ ಶಾಲೆಗಳಿಗೆ ಮೇ 11ರವರೆಗೆ ರಜೆ ಘೋಷಣೆ ಮಾಡಲಾಗಿದೆ.ಏಪ್ರಿಲ್ 22ರಂದು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸಶಸ್ತ್ರ ಪಡೆಗಳು ಬುಧವಾರ ಮುಂಜಾನೆ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ (ಪಿಒಕೆ) ಉಗ್ರರ ನೆಲೆಗಳ ಗುರಿಯಾಗಿಸಿ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿದೆ. ಇದರಿಂದಾಗಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ.
ಬೆಂಗಳೂರು: ಕೆಪಿಎಸ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ತಮಗೆ ಆಗಿರುವ ಅನ್ಯಾಯವನ್ನು ಪ್ರತಿಭಟಿಸಿ ಯಾವುದೇ ಹೋರಾಟ ಮಾಡಿದರೂ ಬಿಜೆಪಿ ಅವರ ಜೊತೆಯಲ್ಲಿ ಇರಲಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರಕಟಿಸಿದರು.ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ” ದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ, ನಾನು ಮತ್ತು ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್ ಅªರ ಉಪಸ್ಥಿತಿಯಲ್ಲಿ ಪರೀಕ್ಷಾರ್ಥಿಗಳ ಜೊತೆ ಸಭೆ ನಡೆಸಲಾಗಿದೆ ಎಂದು ವಿವರಿಸಿದರು. ಅವರಿಗೆ ಆಗಿರುವ ಅನ್ಯಾಯವನ್ನು ವಿವರವಾಗಿ ನಮಗೂ ತಿಳಿಸಿದ್ದಾರೆ ಎಂದು ಹೇಳಿದರು.
ಮುಂಬೈ: ಹಿಟ್ಮ್ಯಾಟ್ ರೋಹಿತ್ ಶರ್ಮಾ ಅವರು ಬುಧವಾರ ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಅವರು ಭಾರತ ಟೆಸ್ಟ್ ತಂಡದ ನಾಯಕ ಕೂಡ ಆಗಿದ್ದರಿಂದ ಅವರಿಂದ ತೆರವಾದ ಸ್ಥಾನಕ್ಕೆ ಯಾರು ತುಂಬುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.ಸದ್ಯ ತಂಡದ ನಾಯಕತ್ವಕ್ಕಾಗಿ ವೇಗದ ಬೌಲರ್ ಜಸ್ಪ್ರೀತ್ ಬೂಮ್ರಾ ಮತ್ತು ಯುವ ಆಟಗಾರ ಶುಭಮನ್ ಗಿಲ್ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಬೂಮ್ರಾ, ಗಿಲ್ ಜೊತೆಗೆ, ಕನ್ನಡಿಗ ಕೆ.ಎಲ್. ರಾಹುಲ್ ಮತ್ತು ರಿಷಭ್ ಪಂತ್ ಅವರ ಹೆಸರುಗಳೂ ಕೇಳಿ ಬರುತ್ತಿವೆ.ದೀರ್ಘ ಸಮಯದಿಂದ ಲಯದಲ್ಲಿ ವಿಫಲರಾಗುತ್ತಿದ್ದ 38 ವರ್ಷದ ರೋಹಿತ್ ಟೆಸ್ಸ್ ಮಾದರಿಗೆ ದಿಢೀರ್ ವಿದಾಯ ಹೇಳಿದ್ದಾರೆ.
ಕೊಚ್ಚಿ: ಪಹಲ್ಗಾಮ್ ಉಗ್ರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ನಿನ್ನೆ ನಡೆಸಿದ ಆಪರೇಷನ್ ಸಿಂಧೂರ್ ನನಗೆ ಭಾರತೀಯಳಾಗಿ ನಾಚಿಕೆಯಾಗ್ತಿದೆ ಎಂದು ಮಲಯಾಳಂ ನಟಿ ಅಮಿನಾ ಹೇಳಿಕೊಂಡಿದ್ದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಪಹಲ್ಗಾಮ್ ನಲ್ಲಿ ಪಾಕ್ ಬೆಂಬಲಿತ ಉಗ್ರರು ಅಮಾಯಕ 26 ಪ್ರವಾಸಿಗರನ್ನು ಕೊಂದು ಹೆಣ್ಣು ಮಕ್ಕಳ ಕುಂಕುಮ ಅಳಿಯುವಂತೆ ಮಾಡಿದ್ದರು. ಇದಕ್ಕೆ ಇಡೀ ದೇಶವೇ ಪಾಕಿಸ್ತಾನವನ್ನು ಮುಗಿಸಿಬಿಡುವಷ್ಟು ಆಕ್ರೋಶದಲ್ಲಿತ್ತು. ಆದರೆ ಭಾರತೀಯ ಸೇನೆ ಸಾಕಷ್ಟು ಯೋಜನೆ ರೂಪಿಸಿ ಉಗ್ರರ ಅಡಗುದಾಣಗಳನ್ನು ಗುರಿಯಾಗಿರಿಸಿ ದಾಳಿ ಮಾಡಿತ್ತು. ಇದರಲ್ಲಿ 100 ಕ್ಕೂ ಹೆಚ್ಚು ಉಗ್ರರು ಸಾವನ್ನಪ್ಪಿದ್ದರು.
ನವದೆಹಲಿ: ಪಹಲ್ಗಾಮ್ ನರಹತ್ಯೆಗೆ ಪ್ರತಿಕಾರವಾಗಿ ಭಾರತೀಯ ಸೇನೆ ನಡೆಸಿದಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ 100 ಉಗ್ರರ ಹತ್ಯೆಯಾಗಿದೆ ಎಂದು ಕೇಂದ್ರ ಸರ್ಕಾರ ಪ್ರತಿಪಕ್ಷಗಳಿಗೆ ಮಾಹಿತಿ ನೀಡಿದೆ.ಸಂಸತ್ ಭವನದಲ್ಲಿ ಇಂದು ನಡೆದ ಸರ್ವಪಕ್ಷಗಳ ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಈ ಮಾಹಿತಿ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಅನುಪಸ್ಥಿತಿಯಲ್ಲಿ ರಾಜನಾಥ್ ಸಿಂಗ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕಾಂಗ್ರೆಸ್ ಸೇರಿದಂತೆ ಬಹುತೇಕ ಪಕ್ಷಗಳ ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು.ಭಾರತೀಯ ಸೇನಾ ಕಾರ್ಯಾಚರಣೆಯಲ್ಲಿ ಎಷ್ಟು ಮಂದಿ ಉಗ್ರರು ಹತರಾಗಿದ್ದಾರೆ ಎಂದು ನಿಖರವಾಗಿ ಹೇಳುವುದು ಅಸಾಧ್ಯ. ಆದರೆ, ವಾಯುದಾಳಿಯಲ್ಲಿ ಪಾಕ್ ಪೋಷಿತ ಕನಿಷ್ಠ 100 ಉಗ್ರರ ಹತ್ಯೆಯಾಗಿದೆ.
ಬೆಂಗಳೂರು: ಪಾಕಿಸ್ತಾನದ ಉಗ್ರರಿಗೆ ತಕ್ಕ ಪಾಠ ಕಲಿಸಲು ಭಾರತೀಯ ಸೇನೆ ಆರಂಭಿಸಿರುವ ಆಪರೇಷನ್ ಸಿಂಧೂರ್ ಯಶಸ್ವಿಯಾಗಲೆಂದು ಇಂದು ರಾಜ್ಯ ಬಿಜೆಪಿ ನಾಯಕರು ಪೂಜೆ ನೆರವೇರಿಸಿದ್ದಾರೆ.ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಅವರ ದಿಟ್ಟ ನಿರ್ಧಾರದಿಂದ ಭಯೋತ್ಪಾದಕರನ್ನು ಮಟ್ಟ ಹಾಕುವ ಆಪರೇಷನ್ ಸಿಂಧೂರ್ ಪ್ರಾರಂಭವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ನಾವು, ನಮ್ಮ ಪಕ್ಷದ ಮುಖಂಡರು ಮಲ್ಲೇಶ್ವರದ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿಯಲ್ಲಿ ಬಹಳ ಭಕ್ತಿಯಿಂದ ಪ್ರಾರ್ಥನೆ ಸಲ್ಲಿಸಿದ್ದೇವೆ.
ನವದೆಹಲಿ: ಆಪರೇಷನ್ ಸಿಂದೂರ ನಡೆಸಿ ಭಾರತೀಯ ಸೇನೆ ಉಗ್ರರ ಮಾರಣಹೋಮ ನಡೆಸಿದ ಬಳಿಕ ಮಾಧ್ಯಮಗಳ ಮುಂದೆ ಬಂದಿರುವ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಹೆಚ್ಚು ಮಾತನಾಡದೇ ಗಂಭೀರತೆ ಕಾಪಾಡಿದ್ದಾರೆ. ಇದನ್ನು ನೆಟ್ಟಿಗರು ಪ್ರಶ್ನಿಸಿದ್ದಾರೆ. ನಿನ್ನೆ ಸರ್ವಪಕ್ಷಗಳ ಸಭೆ ಕರೆದಿರುವ ಬಗ್ಗೆ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್ ನಾಯಕರು ಮಾಧ್ಯಮಗಳ ಮುಂದೆ ಬಂದಿದ್ದರು. ಆಗ ಎಲ್ಲಾ ಕಾಂಗ್ರೆಸ್ ನಾಯಕರು ಗಂಭೀರವಾಗಿದ್ದರು. ಮಾಧ್ಯಮಗಳ ಮುಂದೆಯೂ ರಾಹುಲ್ ಅಥವಾ ಕಾಂಗ್ರೆಸ್ ನಾಯಕರು ಹೆಚ್ಚಿನ ಪ್ರತಿಕ್ರಿಯೆ ನೀಡಿರಲಿಲ್ಲ. ನಮ್ಮ ಸೇನೆಯ ಬಗ್ಗೆ ಹೆಮ್ಮೆಯಿದೆ ಎಂದಷ್ಟೇ ಹೇಳಿದ್ದರು.
ನವದೆಹಲಿ: ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಆಪರೇಷನ್ ಸಿಂದೂರ ನಡೆಸಿದ ಬಳಿಕ ಇಂದು ಕೇಂದ್ರ ಸರ್ಕಾರ ಸರ್ವಪಕ್ಷಗಳ ಸಭೆ ಕರೆದಿತ್ತು. ಆದರೆ ಈ ಸರ್ವಪಕ್ಷ ಸಭೆಗೆ ಪ್ರಧಾನಿ ಮೋದಿ ಮತ್ತೆ ಗೈರಾಗಿದ್ದು ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ. ಪಹಲ್ಗಾಮ್ ದಾಳಿ ಬೆನ್ನಲ್ಲೇ ಕೇಂದ್ರ ಸರ್ಕಾರ ವಿಪಕ್ಷಗಳ ಜೊತೆ ಸರ್ವಪಕ್ಷ ಸಭೆ ನಡೆಸಿತ್ತು. ಈ ಸಭೆಗೆ ಪ್ರಧಾನಿ ಮೋದಿ ಗೈರಾಗಿದ್ದರು. ಈ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್ ನಾಯಕರು ಆಕ್ಷೇಪವೆತ್ತಿದ್ದರು. ಇಂದು ಆಪರೇಷನ್ ಸಿಂದೂರ ಬಳಿಕ ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ಕರೆಯಲಾಗಿತ್ತು.
ಬೆಂಗಳೂರು: ಕಳೆದ ಎರಡು ದಿನಗಳಿಂದ ಅಡಿಕೆ ಬೆಲೆ ಏರಿಕೆಯಾಗಿ ಬೆಳೆಗಾರರು ಖುಷಿಯಾಗಿದ್ದರು. ಆದರೆ ಇಂದು ಹೊಸ ಅಡಿಕೆ ಬೆಲೆ ಇಳಿಕೆಯಾಗಿದ್ದರೆ ಉಳಿದ ವರ್ಗದ ಅಡಿಕೆ ಯಥಾಸ್ಥಿತಿಯಲ್ಲಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು ದರ ಹೇಗಿದೆ ಇಲ್ಲಿದೆ ವಿವರ. ಕಳೆದ ಎರಡು ದಿನಗಳಿಂದ ಅಡಿಕೆ ಬೆಲೆಯಲ್ಲಿ ಕೊಂಚ ಏರಿಕೆಯಾಗಿತ್ತು. ಆದರೆ ಇಂದು ಅಡಿಕೆ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ. ಹೊಸ ಅಡಿಕೆ ಬೆಲೆ ಇಳಿಕೆಯಾಗಿದ್ದರೆ ಮತ್ತು ಹಳೆ ಅಡಿಕೆ ಬೆಲೆಯಲ್ಲಿ ವ್ಯತ್ಯಾಸವಾಗಿಲ್ಲ. ಹೊಸ ಅಡಿಕೆ ಬೆಲೆ 460 ರೂ.ಗಳಿಗೆ ಇಳಿಕೆಯಾಗಿದೆ. ಹಳೆ ಅಡಿಕೆ ಬೆಲೆ ಗರಿಷ್ಠ 500 ರೂ.ಗಳಷ್ಟಿದೆ. ಇಂದು ಡಬಲ್ ಚೋಲ್ ಬೆಲೆ ಗರಿಷ್ಠ 510 ರೂ.ಗಳಷ್ಟಿದೆ.
ಹೈದರಾಬಾದ್: ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಉಗ್ರರ ಅಡಗುದಾಣಗಳ ಮೇಲೆ ಭಾರತೀಯ ಸೇನೆ ದಾಳಿ ನಡೆಸಿದ ಘಟನೆ ಬಗ್ಗೆ ಪಾಕಿಸ್ತಾನದ ಮಾಜಿ ಸೊಸೆ ಸಾನಿಯಾ ಮಿರ್ಜಾ ಪ್ರತಿಕ್ರಿಯೆ ಏನಿತ್ತು ಗೊತ್ತಾ? ಭಾರತದ ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಈ ಹಿಂದೆ ಪಾಕಿಸ್ತಾನ ಮೂಲದ ಕ್ರಿಕೆಟಿಗ ಶೊಯೇಬ್ ಮಲಿಕ್ ಪತ್ನಿಯಾಗಿದ್ದರು. ಆದರೆ ದಂಪತಿ ಈಗ ವಿಚ್ಛೇದನ ಪಡೆದಿದ್ದಾರೆ. ಇದೀಗ ಆಪರೇಷನ್ ಸಿಂದೂರ ಬಗ್ಗೆ ಸಾನಿಯಾ ಮಿರ್ಜಾ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಆಪರೇಷನ್ ಸಿಂದೂರ ಬಳಿಕ ಭಾರತೀಯ ಸೇನೆ ಇಬ್ಬರು ಮಹಿಳಾ ಅಧಿಕಾರಿಗಳನ್ನು ಕೂರಿಸಿಕೊಂಡು ದಾಳಿ ಬಗ್ಗೆ ಮಾಹಿತಿ ನೀಡಲು ಪತ್ರಿಕಾಗೋಷ್ಠಿ ಕರೆದಿತ್ತು.
ಮುಂಬೈ: ದುಪ್ಪಟ್ಟ ದರ ವಸೂಲಿ ಮಾಡುತ್ತಿರುವುದು ಯಾಕೆ ಎಂದು ನಿರ್ವಹಣಾ ಸಿಬ್ಬಂದಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ವಿಡಿಯೋ ವೈರಲ್ ಆಗಿದೆ. ರಿಷಿಕೇಶದಿಂದ ವೈಷ್ಣೋದೇವಿವರೆಗೆ ತೆರಳುವ ಹೇಮಕುಂಟ್ ಎಕ್ಸ್ ಪ್ರೆಸ್ ರೈಲು ಸಂಖ್ಯೆ 14609 ರಲ್ಲಿ ಈ ಘಟನೆ ನಡೆದಿದೆ. ಎಸಿ ಕೋಚ್ ನಲ್ಲಿ ನಿರ್ವಹಣಾ ಸಿಬ್ಬಂದಿಯೊಬ್ಬ ತನ್ನ ಸಹ ಸಿಬ್ಬಂದಿಗಳೊಂದಿಗೆ ಸೇರಿಕೊಂಡು ಹಲ್ಲೆ ನಡೆಸಿದ್ದಾನೆ. ಪ್ರಯಾಣಿಕ ಊಟಕ್ಕೆ ಆರ್ಡರ್ ಮಾಡಿದ್ದ. ಆದರೆ ಊಟದ ದರ ನಿಗದಿತ ದರಕ್ಕಿಂತ ದುಪ್ಪಟ್ಟು ವಸೂಲಿ ಮಾಡಲಾಗಿತ್ತು. ಇದನ್ನು ಆತ ಪ್ರಶ್ನೆ ಮಾಡಿದ್ದ. ಅಲ್ಲದೆ ಪ್ರಯಾಣಿಕ ವಿಡಿಯೋ ಮಾಡುತ್ತಿರುವುದನ್ನು ಗಮನಿಸಿದ ರೈಲ್ವೇ ಸಿಬ್ಬಂದಿ ರೊಚ್ಚಿಗೆದ್ದಿದ್ದ.