Shorts

ಲಕ್ನೋ: ಸತತ ಎರಡು ಪಂದ್ಯಗಳಲ್ಲಿ ಸೋತಿದ್ದ ರಾಜಸ್ಥಾನ ರಾಯಲ್ಸ್‌ ತಂಡವು ಗೆಲುವಿನ ಲಯಕ್ಕೆ ಮರಳಿದೆ. ಬೌಲಿಂಗ್‌, ಅತ್ಯುತ್ತಮ ಫೀಲ್ಡಿಂಗ್‌ ನೆರವಿನಿಂದ ಲಕ್ನೋ ಸೂಪರ್‌ ಜೈಂಟ್ಸ್‌ ವಿರುದ್ಧ ರಾಜಸ್ಥಾನ ತಂಡವು 40 ರನ್‌ಗಳ ಜಯ ಸಾಧಿಸಿದೆ.ಈ ಗೆಲುವಿನೊಂದಿಗೆ ರಾಯಲ್ಸ್‌ ತಂಡವು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಿಗಿದಿದೆ. ಟಾಸ್‌ ಸೋತು ಮೊದಲು ಬ್ಯಾಟ್‌ ಬೀಸಿದ ರಾಜಸ್ಥಾನ 6 ವಿಕೆಟ್‌ ನಷ್ಟನಕ್ಕೆ 159 ರನ್‌ ಹೊಡೆಯಿತು. ಸುಲಭದ ಸವಾಲನ್ನು ಬೆನ್ನಟ್ಟಿದ ಲಕ್ನೋ 17.6 ಓವರ್‌ಗಳಲ್ಲಿ 119 ರನ್‌ಗಳಿಗೆ ಎಲ್ಲಾ ವಿಕೆಟ್‌ ಕಳೆದುಕೊಂಡು ಸೋಲನ್ನು ಒಪ್ಪಿಕೊಂಡಿತು.7 ಪಂದ್ಯಗಳಿಂದ 10 ಅಂಕ, 0.790 ನೆಟ್‌ ರನ್‌ ರೇಟ್‌ನೊಂದಿಗೆ ರಾಜಸ್ಥಾನ ಎರಡನೇ ಸ್ಥಾನಕ್ಕೆ ಜಿಗಿಯಿತು. 6 ಪಂದ್ಯಗಳಿಂದ 8 ಅಂಕ 1.171 ನೆಟ್‌ ರನ್‌ ರೇಟ್‌ ಹೊಂದಿರುವ ಬೆಂಗಳೂರು ಮೂರನೇ ಸ್ಥಾನಕ್ಕೆ ಜಾರಿದೆ.

ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಏ.23 ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ತಿಳಿಸಿದೆ. ಹಿಂದಿ ಭಾಷೆಯ ಅಂಕಗಳ ವಿಚಾರದಲ್ಲಿ ಹೈಕೋರ್ಟ್‌ನಲ್ಲಿ ವಿಚಾರಣೆ ಬಾಕಿ ಇದ್ದ ಕಾರಣ ತಡೆಹಿಡಿಯಲಾಗಿದ್ದ SSLC ಪರೀಕ್ಷೆಯ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುವುದು. ಹೈಕೋರ್ಟ್ ತೀರ್ಪಿನ ನಂತರ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಗುರುವಾರ ಮಧ್ಯಾಹ್ನ 12 ಗಂಟೆಗೆ ಫಲಿತಾಂಶ ಪ್ರಕಟಿಸುವುದಾಗಿ ತಿಳಿಸಿದ್ದಾರೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದಲ್ಲಿ ನಡೆದ ಮಹತ್ವದ ಸಭೆಯ ಬಳಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಈ ವಿಷಯವನ್ನು ಖಚಿತಪಡಿಸಿದ್ದಾರೆ.ವಿದ್ಯಾರ್ಥಿಗಳು ಪರೀಕ್ಷಾ ಮಂಡಳಿಯ ವೆಬ್‌ಸೈಟ್‌ https://karresults.nic.in/ ಮತ್ತು ಕರ್ನಾಟಕ ಒನ್‌ ಆ್ಯಪ್‌ ಮೂಲಕ ಪಡೆಯಬಹುದಾಗಿದೆ.

ನವದೆಹಲಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನೀಡಿರುವ ಹೇಳಿಕೆಯನ್ನು ಬಿಜೆಪಿ ಚುನಾವಣಾ ಅಸ್ತ್ರವಾಗಿಸಿಕೊಂಡಿದೆ. ಖರ್ಗೆ ಹೇಳಿಕೆ ಖಂಡಿಸಿ ಬಿಜೆಪಿ ಚುನಾವಣಾ ಆಯೋಗದ ಮೆಟ್ಟಿಲೇರಿದೆ.ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಖರ್ಗೆ ವಿರುದ್ಧ ಬಿಜೆಪಿ ನಾಯಕರು ಕಿಡಿಕಾರುತ್ತಿದ್ದಾರೆ. ಖರ್ಗೆ ಹೇಳಿಕೆಗೆ ಅಧಿಕೃತವಾಗಿ ಆಕ್ಷೇಪಣೆ ವ್ಯಕ್ತಪಡಿಸಲು ಕೇಂದ್ರ ಸಚಿವ ಕಿರಣ್ ರಿಜಿಜು ನೇತೃತ್ವದ ಬಿಜೆಪಿ ನಿಯೋಗವು ಬುಧವಾರ ಕೇಂದ್ರ ಚುನಾವಣಾ ಆಯೋಗವನ್ನು ಭೇಟಿ ಮಾಡಿ ದೂರು ನೀಡಿದೆ.ಬಿಜೆಪಿ ಈಗಾಗಲೇ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದು, ಮಲ್ಲಿಕಾರ್ಜುನ ಖರ್ಗೆ ಹೇಳಿಕೆಯು ಮಾದರಿ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದ್ದು, ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 175 ರ ಅಡಿಯಲ್ಲಿ ಅಪರಾಧವಾಗಿದೆ,

ಮುಂಬೈ: ರಸ್ತೆ ಬ್ಲಾಕ್ ಮಾಡಿ ಮಹಾರಾಷ್ಟ್ರದ ಸಚಿವ ಗಿರೀಶ್ ಮಹಾಜನ್ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದಾಗ ಗೆಟ್ ಔಟ್ ಎಂದು ಮಹಿಳೆಯೊಬ್ಬರು ತರಾಟೆಗೆ ತೆಗೆದುಕೊಂಡ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮುಂಬೈನ ವರ್ಲಿಯಲ್ಲಿ ಮಹಿಳಾ ಮೀಸಲಾತಿ ವಿರೋಧಿಸಿದ್ದ ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸುತ್ತಿತ್ತು. ಈ ವೇಳೆ ರಸ್ತೆ ತಡೆ ಮಾಡಲಾಗಿತ್ತು. ಸಚಿವ ಗಿರೀಶ್ ಮಹಾಜನ್ ಮಹಿಳಾ ಮೀಸಲಾತಿ ಕುರಿತಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುತ್ತಿದ್ದರು. ಪ್ರತಿಭಟನೆಯಿಂದಾಗಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಇದರಿಂದ ರೊಚ್ಚಿಗೆದ್ದ ಮಹಿಳೆಯೊಬ್ಬರು ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದ ಸಚಿವರಿಗೆ ನೇರವಾಗಿ ರಸ್ತೆ ಬ್ಲಾಕ್ ಮಾಡಿರುವುದನ್ನು ಪ್ರಶ್ನೆ ಮಾಡಿದ್ದಾಳೆ. ತಕ್ಷಣವೇ ರಸ್ತೆ ಕ್ಲಿಯರ್ ಮಾಡಿ ಎಂದು ಆವಾಜ್ ಹಾಕಿದ್ದಾಳೆ.

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆ-2026ರ ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿದೆ. ಬುಧವಾರದಿಂದ ಮನೆ-ಮನೆ ಪ್ರಚಾರ ನಡೆಯಲಿದೆ. ಗುರುವಾರ ಒಂದೇ ಹಂತದಲ್ಲಿ 234 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಚುನಾವಣೆಯು ಡಿಎಂಕೆ ಮತ್ತು ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ಮತ್ತು ಎಐಎಡಿಎಂಕೆ ಮತ್ತು ಬಿಜೆಪಿ ನೇತೃತ್ವದ ಎನ್​ಡಿಎ ಒಕ್ಕೂಟದ ನಡುವೆ ನೇರ ಸ್ಪರ್ಧೆ ನಡೆಯಲಿದೆ. ಇದೇ ಮೊದಲ ಬಾರಿಗೆ ತಮಿಳು ಸೂಪರ್ ಸ್ಟಾರ್ ಟಿವಿಕೆ ಪಕ್ಷ ಕಟ್ಟಿ ಸ್ವತಂತ್ರವಾಗಿ ಸ್ಪರ್ಧಿಸಿ ಚುನಾವಣಾ ಕಣಕ್ಕೆ ಧುಮುಕಿದ್ದಾರೆ. ತಮಿಳುನಾಡಿನಲ್ಲಿ ಈ ಬಾರಿಯೂ ಆಡಳಿತಾರೂಢ ಡಿಎಂಕೆ, ಕಾಂಗ್ರೆಸ್‌, ಪ್ರತಿಸ್ಪರ್ಧಿ ಎನ್‌ ಡಿಎ ಮೈತ್ರಿಕೂಟದ ಎಐಎಡಿಎಂಕೆ ಹಾಗೂ ನಟ ವಿಜಯ್‌ ನೇತೃತ್ವದ ಟಿವಿಕೆ ಸೇರಿದಂತೆ ವಿವಿಧ ಪಕ್ಷಗಳು ಭರ್ಜರಿ ರೋಡ್‌ ಶೋ ನಡೆಸಿ ಚುನಾವಣ ಪ್ರಚಾರ ನಡೆಸಿದ್ದವು.

ತ್ರಿಶೂರ್‌: ಕೇರಳದ ಸುಪ್ರಸಿದ್ಧ ತ್ರಿಶೂರ್ ಪೂರಂ ಹಬ್ಬಕ್ಕಾಗಿ ಪಟಾಕಿಗಳನ್ನು ತಯಾರಿಸುತ್ತಿದ್ದ ಘಟಕದಲ್ಲಿ ಭೀಕರ ಸ್ಫೋಟ ಸಂಭವಿಸಿದೆ. ಮಂಗಳವಾರ ಮಧ್ಯಾಹ್ನ ಭೀಕರ ಸ್ಫೋಟ ಸಂಭವಿಸಿ ಸುಮಾರು 13 ಜನರು ಮೃತಪಟ್ಟು, 40ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.ಸ್ಫೋಟದ ತೀವ್ರತೆಗೆ ಪಟಾಕಿ ಸಂಗ್ರಹಣಾ ಕೇಂದ್ರ ಸಂಪೂರ್ಣವಾಗಿ ಧ್ವಂಸಗೊಂಡಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳ ಮತ್ತು ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.‌ಘಟನೆಯಲ್ಲಿ 13 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಐವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಾಟ್ನಾ: ಸಂಸದ ಪಪ್ಪು ಯಾದವ್ ಅಲಿಯಾಸ್ ರಾಜೇಶ್ ರಂಜನ್ ನಾಲಗೆ ಹರಿಬಿಟ್ಟಿದ್ದಾರೆ. ಬಿಹಾರದ ಪೂರ್ಣಿಯದ ಸ್ವತಂತ್ರ ಸಂಸದ ಪಪ್ಪು ಯಾದವ್ ಮಹಿಳಾ ರಾಜಕಾರಣದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.ಭಾರತೀಯ ಸಮಾಜದಲ್ಲಿ ಮಹಿಳೆಯರನ್ನು ದೇವತೆಗಳೆಂದು ಪರಿಗಣಿಸಲಾಗಿದ್ದರೂ, ವಾಸ್ತವವು ಇದಕ್ಕೆ ವಿರುದ್ಧವಾಗಿದೆ. ರಾಜಕೀಯದಲ್ಲಿ ಹೆಚ್ಚಿನ ಮಹಿಳೆಯರು ಪ್ರಭಾವಿ ಜನರ ವೈಯಕ್ತಿಕ ಕ್ಷೇತ್ರದಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸುತ್ತಾರೆ ಎನ್ನುತ್ತಾ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.ಮಹಿಳೆಯರ ಶೋಷಣೆ ಅಧಿಕಾರದ ಕಾರಿಡಾರ್‌ನಲ್ಲಿ ಆಳವಾಗಿ ಬೇರೂರಿದೆ ಎಂದು ಆರೋಪಿಸಿದರು. ಕಟು ಸತ್ಯವೆಂದರೆ ಶೇಕಡ 90ರಷ್ಟು ಮಹಿಳಾ ರಾಜಕೀಯ ವೃತ್ತಿಜೀವನವು ರಾಜಕಾರಣಿಗಳ ಹಾಸಿಗೆಯಲ್ಲಿ ಪ್ರಾರಂಭವಾಗುತ್ತದೆ ಎಂದು ಪಪ್ಪು ಯಾದವ್ ಹೇಳಿದ್ದಾರೆ.

ಚೆನ್ನೈ: ಹಾಲಿ ಐಪಿಎಲ್‌ ಟೂರ್ನಿಯಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡಕ್ಕೆ ಮತ್ತೊಂದು ಬಿಗ್‌ ಶಾಕ್‌ ಎದುರಾಗಿದೆ. ಸತತ ಸೋಲುಗಳ ಬಳಿಕ ಎರಡು ಗೆಲುವುಗಳ ಮೂಲಕ ಹಳಿಗೆ ಮರಳಿದ್ದ ತಂಡಕ್ಕೆ ಇದೀಗ ಟೂರ್ನಿಯ ಮಧ್ಯದಲ್ಲೇ ಮತ್ತೆ ಸಂಕಷ್ಟ ಎದುರಾಗಿದೆ. ಸಿಎಸ್‌ಕೆ ಪರ ಅಧಿಕ ರನ್ ಕಲೆಹಾಕಿದ್ದ ಯುವ ಬ್ಯಾಟಿಂಗ್ ಸೆನ್ಸೇಷನ್ ಆಯುಷ್ ಮ್ಹಾತ್ರೆ ಇದೀಗ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. ಏಪ್ರಿಲ್ 18 ರಂದು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಸಿಎಸ್‌ಕೆ ಪಂದ್ಯದಲ್ಲಿ ಬ್ಯಾಟಿಂಗ್ ಮಾಡುವಾಗ 18 ವರ್ಷದ ಆರಂಭಿಕ ಆಟಗಾರ ಗಾಯಗೊಂಡರು. ಸೋಮವಾರ ಬಿಡುಗಡೆಯಾದ ಅಧಿಕೃತ ಹೇಳಿಕೆಯಲ್ಲಿ, ಫ್ರಾಂಚೈಸಿಯು ಮ್ಹಾತ್ರೆ ಅವರ ಗಾಯವು 6 ರಿಂದ 12 ವಾರಗಳ ಪುನರ್ವಸತಿ ಅವಧಿಯ ಅಗತ್ಯವಿರುವಷ್ಟು ತೀವ್ರವಾಗಿದೆ ಎಂದು ದೃಢಪಡಿಸಿದೆ.

ಇಸ್ಲಾಮಾಬಾದ್: ಇರಾನ್‌ ಮತ್ತು ಅಮೆರಿಕಾ ನಡುವಿನ ಮೊದಲ ಸುತ್ತಿನ ಮಾತುಕತೆ ಮುರಿದುಬಿದ್ದಿದೆ. ಇದೀಗ ಎರಡನೇ ಸುತ್ತಿನ ಮಾತುಕತೆಗೆ ಸಿದ್ಧತೆ ನಡೆಸಯುತ್ತಿದೆ. ಈ ಮಾತುಕತೆಗೆ ಖುದ್ದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹಾಜರಾಗಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.ಅಮೆರಿಕ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್‌ ಅವರು ಮಂಗಳವಾರ (ಏಪ್ರಿಲ್‌ 21ರಂದು) ಪಾಕಿಸ್ತಾನಕ್ಕೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಅಮೆರಿಕದ ಮೂಲಗಳು ತಿಳಿಸಿವೆ. ಈ ಬಗ್ಗೆ ಖಚಿತವಾಗಿಲ್ಲ.ಯುರೇನಿಯಂ ವಿಚಾರ, ಅಮೆರಿಕದಿಂದ ಕದನ ವಿರಾಮ ಉಲ್ಲಂಘನೆ ಸೇರಿದಂತೆ ಹಲವು ಕಾರಣಗಳಿಂದಾಗಿ ಮಾತುಕತೆಯಲ್ಲಿ ಪಾಲ್ಗೊಳ್ಳಲು ಇರಾನ್‌ ನಿರಾಕರಿಸಿರುವ ಹೊತ್ತಲ್ಲಿ ಈ ರೀತಿಯ ವರದಿಗಳು ಪ್ರಕಟವಾಗಿವೆ. ಮಾತುಕತೆಯು ಬುಧವಾರ ಪುನರಾರಂಭಗೊಳ್ಳುವ ಸಾಧ್ಯತೆ ಇದೆ. ಹಾಗೇನಾದರೂ ಆದರೆ, ಟ್ರಂಪ್‌ ಅವರೇ ಭಾಗವಹಿಸಲಿದ್ದಾರೆ.

ಹೈದರಾಬಾದ್‌: ಇಂಡಿಯನ್‌ ಸೂಪರ್‌ ಲೀಗ್‌ನ ಇಂದಿನ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ ತಂಡವು ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನು ಎದುರಿಸಲಿದೆ. ಸನ್‌ರೈಸರ್ಸ್‌ ತಂಡವು ಹ್ಯಾಟ್ರಿಕ್‌ ಗೆಲುವಿನ ನಿರೀಕ್ಷೆಯಲ್ಲಿದೆ.ಸನ್‌ರೈಸರ್ಸ್‌ ಮತ್ತು ಕ್ಯಾಪಿಟಲ್ಸ್‌ ತಂಡಗಳು ತಂಡಗಳು ತಲಾ ಆರು ಪಾಯಿಂಟ್ಸ್ ಪಡೆದಿವೆ. ಒಂದು ಪಂದ್ಯ ಹೆಚ್ಚು ಆಡಿರುವ ಡೆಲ್ಲಿ ತಂಡವು ಉತ್ತಮ ನೆಟ್‌ ರನ್‌ ರೇಟ್‌ ಆಧಾರದಲ್ಲಿ ಚೂರು ಮುಂದಿದೆ.ಸನ್‌ರೈಸರ್ಸ್‌ ತಂಡದ ನಾಯಕ ಪ್ಯಾಟ್ ಕಮಿನ್ಸ್ ಅನುಪಸ್ಥಿತಿಯಲ್ಲಿ ತಂಡದ ಬೌಲಿಂಗ್ ಆರಂಭದಲ್ಲಿ ಪರಿಣಾಮಕಾರಿ ಎನಿಸಿರಲಿಲ್ಲ. ಆಸ್ಟ್ರೇಲಿಯಾದ ವೇಗಿ ತಂಡವನ್ನು ಸೇರಿಕೊಂಡಿದ್ದರೂ ಮಂಗಳವಾರದ ಪಂದ್ಯಕ್ಕೂ ಲಭ್ಯರಿಲ್ಲ. ಆದರೆ, ಪ್ರಫುಲ್ ಹಿಂಗೆ, ಸಾಕಿಬ್ ಹುಸೇನ್, ಶಿವಾಂಗ್ ಕುಮಾರ್ ಅವರು ಹುರುಪಿನಿಂದ ಬೌಲಿಂಗ್ ಮಾಡಿದ್ದಾರೆ.

ಚೆನ್ನೈ: ಹಲವು ಸೂಪರ್ ಹಿಟ್‌ ಸಿನಿಮಾ ನೀಡಿರುವ ಭಾರತೀಯ ಚಿತ್ರರಂಗದ ಖ್ಯಾತ ನಿರ್ದೇಶಕ ಅಟ್ಲಿ ಹಾಗೂ ಅವರ ಪತ್ನಿ ಪ್ರಿಯಾ ಅವರ ಮನೆಯಲ್ಲಿ ಸಂಭ್ರಮದ ವಾತಾವರಣ ನಿರ್ಮಾಣ ಆಗಿದೆ. ನಿರ್ದೇಶಕ, ನಿರ್ಮಾಪಕ ಅಟ್ಲೀ ಅವರ ಪತ್ನಿ ಪ್ರಿಯಾ ಅವರು ಸೋಮವಾರ ಎರಡನೇ ಮಗುವಿಗೆ ಜನ್ಮ ನೀಡಿದ್ದು, ದಂಪತಿ ಹೆಣ್ಣು ಮಗುವನ್ನು ಬರಮಾಡಿಕೊಂಡಿದ್ದಾರೆ.ಈ ಕುರಿತು ಅಟ್ಲೀ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈಗಾಗಲೇ ದಂಪತಿಗೆ 3 ವರ್ಷದ ಮೀರ್ ಎಂಬ ಮಗನಿದ್ದು, ವಿಭಿನ್ನವಾಗಿ ಕಾರ್ಟೂನ್ ಮೂಲಕ ಸಿಹಿ ಸುದ್ದಿಯನ್ನು ತಿಳಿಸಿದ್ದಾರೆ. ಅಟ್ಲಿ ನಿರ್ದೇಶನದ ರಾಕಾ ಚಿತ್ರದ ನಾಯಕಿ ದೀಪಿಕಾ ಪಡುಕೋಣೆ ಅವರು ತಮ್ಮ ಎರಡನೇ ಪ್ರೆಗ್ನೆನ್ಸಿ ಸುದ್ದಿಯನ್ನು ಹಂಚಿಕೊಂಡ ಮರುದಿನವೇ ಸಿಹಿ ಸುದ್ದಿಯನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.

ಲಖನೌ: ಇಂಡಿಯನ್‌ ಪ್ರೀಮಿಯರ್ ಲೀಗ್‌ನಲ್ಲಿ ಆಡುವ ಲಕ್ನೋ ಸೂಪರ್ ಜೈಂಟ್ಸ್ ತಂಡದ ಆಟಗಾರ ಜೋಶ್ ಇಂಗ್ಲಿಸ್ ತಮ್ಮ ದೀರ್ಘಕಾಲದ ಗೆಳತಿ ಮೇಗನ್ ಕಿನ್ಕಾರ್ಟ್ ಅವರನ್ನು ವರಿಸುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಆಸ್ಟ್ರೇಲಿಯಾದ ಈ ಸ್ಪೋಟಕ ಬ್ಯಾಟರ್ ಇದೇ 18ರಂದು ಪಶ್ಚಿಮ ಆಸ್ಟ್ರೇಲಿಯಾದ ಮಾರ್ಗರೆಟ್ ರಿವರ್‌ನಲ್ಲಿರುವ ಐಷಾರಾಮಿ ರೆಸಾರ್ಟ್‌ನಲ್ಲಿ ಕುಟುಂಬಸ್ಥರು ಮತ್ತು ಆಪ್ತರ ಸಮ್ಮುಖದಲ್ಲಿ ವಿವಾಹವಾಗಿದ್ದಾರೆ.ಸದ್ಯ 2026ರ ಐಪಿಎಲ್‌ ಟೂರ್ನಿಯಲ್ಲಿ ಜೋಶ್ ಇಂಗ್ಲಿಸ್ ಲಖನೌ ಸೂಪರ್ ಜೈಂಟ್ಸ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಮದುವೆಯ ಕಾರಣಕ್ಕಾಗಿ ಆರಂಭಿಕ ಪಂದ್ಯಗಳಲ್ಲಿ ಇಂಗ್ಲಿಸ್ ಅಲಭ್ಯರಾಗಿದ್ದರು. ಈ ಆವೃತಿಗೂ ಮುನ್ನ ಲಖನೌ ತಂಡವು ₹8.60 ಕೋಟಿಗೆ ಜೋಶ್ ಇಂಗ್ಲಿಸ್ ಅವರನ್ನು ಖರೀದಿಸಿತ್ತು.

ಬೆಂಗಳೂರು: ಬಿಜೆಪಿಯು ರಾಜಕೀಯ ಲಾಭ ಪಡೆಯುವ ಉದ್ದೇಶದಿಂದ ಸಂಸತ್ತಿನಲ್ಲಿ ಡಿಲಿಮಿಟೇಷನ್ ಮಸೂದೆಯ ಜೊತೆಗೆ ಮಹಿಳಾ ಮೀಸಲಾತಿ ಮಸೂದೆಯನ್ನು ಒಟ್ಟುಗೂಡಿಸಿ ಮಂಡಿಸಲು ಮುಂದಾಗಿದ್ದರಿಂದ ಕಾಂಗ್ರೆಸ್ ಪಕ್ಷ ವಿರೋಧ ವ್ಯಕ್ತಪಡಿಸಿತು. ಮಹಿಳಾ ಮೀಸಲಾತಿ ಮಸೂದೆಗೆ ಕಾಂಗ್ರೆಸ್ ಎಂದೂ ವಿರೋಧ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಚಾಮರಾನಗರದಲ್ಲಿ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಲು ಸಂವಿಧಾನದ 73, 74 ನೇ ಕಲಂಗೆ ತಿದ್ದುಪಡಿ ತಂದು ರಾಜ್ಯಸಭೆಯಲ್ಲಿ ಜಾರಿಗೊಳಿಸಲು ಮುಂದಾದಾಗ ಎನ್‌ಡಿಎ ಮೈತ್ರಿಕೂಟ ಅಡ್ಡಿಪಡಿಸಿತ್ತು. ಬಿಜೆಪಿ ನಿಜವಾದ ಮಹಿಳಾ ಮೀಸಲಾತಿಯ ವಿರೋಧಿ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿಕೊಂಡು ಕೇಂದ್ರ ಸರ್ಕಾರ ಇ.ಡಿ ದಾಳಿ ನಡೆಸುತ್ತಿದೆ. ಬಿಜೆಪಿ ನಾಯಕರ ನಾಯಕರ ಮೇಲೆ ಇಡಿ ದಾಳಿ ನಡೆಸುವುದಿಲ್ಲ ಏಕೆ ಎಂದು ಪ್ರಶ್ನಿಸಿದರು.