ಬೆಂಗಳೂರು: ಮಾಜಿ ಸಚಿವ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಮಾಜಿ ಅಧ್ಯಕ್ಷ ಮತ್ತು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಭೀಮಣ್ಣ ಖಂಡ್ರೆ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.ಭಾಲ್ಕಿ ಪುರಸಭೆಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ಭಾಲ್ಕಿ ವಿಧಾನಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 1992 ರಲ್ಲಿ ಎಂ.ವೀರಪ್ಪ ಮೊಯ್ಲಿ ಅವರ ಸಂಪುಟದಲ್ಲಿ ಸಾರಿಗೆ ಸಚಿವರಾಗಿ ಸೇವೆ ಸಲ್ಲಿಸಿದ ಇವರು, ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದರು. ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು.
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಭಾರೀ ಸದ್ದು ಮಾಡುತ್ತಿರುವಾಗಲೇ ಡಿಕೆ ಶಿವಕುಮಾರ್ ಕೈಗೆ ಸಿಗದ ರಾಹುಲ್ ಗಾಂಧಿ ಬೇರೆ ನಾಯಕರನ್ನು ಭೇಟಿ ಮಾಡುತ್ತಿರುವುದು ಕುತೂಹಲ ಮೂಡಿಸಿದೆ. ನವಂಬರ್ ನಿಂದ ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಚರ್ಚೆ ಶುರುವಾದಾಗಿನಿಂದ ರಾಹುಲ್ ಗಾಂಧಿಯವರನ್ನು ಭೇಟಿಯಾಗಲು ಡಿಕೆ ಶಿವಕುಮಾರ್ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದ್ದಾರೆ. ಮೊನ್ನೆ ಕೊನೆಗೂ ಮೈಸೂರಿನಲ್ಲಿ ಏರ್ ಪೋರ್ಟ್ ನಲ್ಲಿ ಮುಖಾಮುಖಿಯಾಗಿದ್ದರು. ಆದರೆ ಈ ವೇಳೆ ನಾಯಕತ್ವ ಗೊಂದಲದ ಬಗ್ಗೆ ಕೇಳಿದಾಗ ರಾಹುಲ್ ಗಾಂಧಿಯವರು ದೆಹಲಿಗೆ ಬನ್ನಿ, ಅಲ್ಲಿ ಚರ್ಚೆ ಮಾಡೋಣ ಎಂದಿದ್ದಾರೆ ಎಂಬ ಸುದ್ದಿ ಕೇಳಿಬಂದಿತ್ತು.
ಬೆಂಗಳೂರು: ರಾಜ್ಯದಲ್ಲಿ ಈ ವಾರ ಚಳಿ ಮತ್ತು ಮಳೆ ಎರಡೂ ಕಂಡುಬಂದಿದೆ. ವಾರದ ಅಂತ್ಯಕ್ಕೆ ರಾಜ್ಯದ ಹವಾಮಾನ ಹೇಗಿರಲಿದೆ, ಮಳೆಯಿರುತ್ತಾ ಇಲ್ಲಿದೆ ಸಂಪೂರ್ಣ ವಿವರ. ಈ ವಾರದ ಆರಂಭದಲ್ಲಿ ವಾಯುಭಾರ ಕುಸಿತದಿಂದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿಯಲ್ಲಿ ಧಾರಾಕಾರ ಮಳೆಯಾಗಿತ್ತು. ಉಳಿದಂತೆ ಬೆಂಗಳೂರು ಸುತ್ತಮುತ್ತಲ ಜಿಲ್ಲೆಗಳಲ್ಲಿ ತುಂತುರು ಮಳೆಯಾಗಿತ್ತು. ಆದರೆ ಈಗ ವಾಯುಭಾರ ಕುಸಿತದ ಪರಿಣಾಮ ತಗ್ಗಿದೆ. ಆದರೆ ವಾರದ ಅಂತ್ಯಕ್ಕೆ ಚಳಿಯೂ ತಕ್ಕಮಟ್ಟಿಗೆ ಕಡಿಮೆಯಾಗಿದೆ. ಈ ವಾರದ ಅಂತ್ಯಕ್ಕೆ ಎಲ್ಲೂ ಮಳೆಯ ಸೂಚನೆಯಿಲ್ಲ. ಜೊತೆಗೆ ಕನಿಷ್ಠ ತಾಪಮಾನದಲ್ಲೂ ಕೊಂಚ ಸುಧಾರಣೆಯಾಗಲಿದೆ.
ಇಂದು ಶನಿವಾರವಾಗಿದ್ದು ಶನಿ ದೇವನಿಗೆ ವಿಶೇಷವಾದ ಪೂಜೆ. ಶನಿ ದೋಷ ಇರುವವರು ದೋಷ ನಿವಾರಣೆಗಾಗಿ ಇಂದು ಶನಿ ಅಷ್ಟೋತ್ತರ ಶತನಾಮಾವಳಿ ಸ್ತೋತ್ರವನ್ನು ಓದಿ.ಓಂ ಶನೈಶ್ಚರಾಯ ನಮಃ ।ಓಂ ಶಾಂತಾಯ ನಮಃ ।ಓಂ ಸರ್ವಾಭೀಷ್ಟಪ್ರದಾಯಿನೇ ನಮಃ ।ಓಂ ಶರಣ್ಯಾಯ ನಮಃ ।ಓಂ ವರೇಣ್ಯಾಯ ನಮಃ ।ಓಂ ಸರ್ವೇಶಾಯ ನಮಃ ।ಓಂ ಸೌಮ್ಯಾಯ ನಮಃ ।ಓಂ ಸುರವಂದ್ಯಾಯ ನಮಃ ।ಓಂ ಸುರಲೋಕವಿಹಾರಿಣೇ ನಮಃ ।ಓಂ ಸುಖಾಸನೋಪವಿಷ್ಟಾಯ ನಮಃ ॥ 10 ॥ ಓಂ ಸುಂದರಾಯ ನಮಃ ।ಓಂ ಘನಾಯ ನಮಃ ।ಓಂ ಘನರೂಪಾಯ ನಮಃ ।ಓಂ ಘನಾಭರಣಧಾರಿಣೇ ನಮಃ ।ಓಂ ಘನಸಾರವಿಲೇಪಾಯ ನಮಃ ।
ಬೀದರ್: ಕರ್ನಾಟಕದ ಮಾಜಿ ಸಚಿವ, ಬೀದರ್ನ ಧೀಮಂತ ರಾಜಕಾರಣಿ ಶತಾಯುಷಿ ಭೀಮಣ್ಣ ಖಂಡ್ರೆ (102) ಅವರು ಶುಕ್ರವಾರ ನಿಧನರಾದರು.ಭೀಮಣ್ಣ ಖಂಡ್ರೆ ಅವರಿಗೆ ಪರಿಸರ, ಅರಣ್ಯ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಬಿ. ಖಂಡ್ರೆ ಸೇರಿದಂತೆ ಇಬ್ಬರು ಪುತ್ರರು, ಐದು ಜನ ಪುತ್ರಿಯರು ಇದ್ದಾರೆ. ಪತ್ನಿ ಲಕ್ಷ್ಮೀಬಾಯಿ ಖಂಡ್ರೆ, ಗಂಡು ಮಕ್ಕಳ ಪೈಕಿ ಹಿರಿಯ ಮಗ, ಮಾಜಿ ಶಾಸಕ ವಿಜಯಕುಮಾರ್ ಖಂಡ್ರೆ ಆವರು ಅನಾರೋಗ್ಯದಿಂದ ಈ ಹಿಂದೆಯೇ ಮೃತಪಟ್ಟಿದ್ದಾರೆ.ಸಮಾಜವಾದಿ ಪಕ್ಷದ ಕಾರ್ಯಕರ್ತರಾಗಿ ರಾಜಕೀಯ ಜೀವನ ಆರಂಭಿಸಿದ ಅವರು, 1953ರಲ್ಲಿ ಭಾಲ್ಕಿ ಪುರಸಭೆ ಅಧ್ಯಕ್ಷರಾಗಿದ್ದರು. ಬಳಿಕ ನಾಲ್ಕು ಸಲ ಶಾಸಕರಾಗಿ, ಎರಡು ಸಲ ವಿಧಾನ ಪರಿಷತ್ ಸದಸ್ಯರಾಗಿದ್ದ ಭೀಮಣ್ಣ ಖಂಡ್ರೆ ಅವರು ಎಂ. ವೀರಪ್ಪ ಮೊಯ್ಲಿ ಅವರ ಸಂಪುಟದಲ್ಲಿ ಸಾರಿಗೆ ಸಚಿವರಾಗಿ ಕೆಲಸ ನಿರ್ವಹಿಸಿದ್ದರು.
ನವಿ ಮುಂಬೈ: ರಾಧಾ ಯಾದವ್ ಭರ್ಜರಿ ಅರ್ಧಶತಕ ಹಾಗೂ ಕನ್ನಡತಿ ಶ್ರೇಯಾಂಕ ಪಾಟೀಲ್ ಅವರ ಕೈಚಳಕದ ನೆರವಿನಿಂದ ಶುಕ್ರವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮಹಿಳಾ ಪ್ರೀಮಿಯರ್ ಲೀಗ್ನಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿತು.ಡಿ.ವೈ,. ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆರ್ಸಿಬಿ ತಂಡವು ತನ್ನ ಮೂರನೇ ಪಂದ್ಯದಲ್ಲಿ 32 ರನ್ಗಳಿಂದ ಗುಜರಾತ್ ಜೈಂಟ್ಸ್ ತಂಡವನ್ನು ಮಣಿಸಿತು. ಈ ಮೂಲಕ ಸ್ಮೃತಿ ಪಡೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಭದ್ರಪಡಿಸಿಕೊಂಡಿತು.183 ರನ್ಗಳ ಗುರಿಯನ್ನು ಬೆನ್ನಟ್ಟಿದ ಗುಜರಾತ್ ಜೈಂಟ್ಸ್ ತಂಡಕ್ಕೆ ಶ್ರೇಯಾಂಕ ಬಲವಾದ ಪೆಟ್ಟಿ ನೀಡಿದರು. ಐದು ವಿಕೆಟ್ ಪಡೆದ ಅವರು ಎದುರಾಳಿ ಬ್ಯಾಟರ್ಗಳಿಗೆ ಕಡಿವಾಣ ಹಾಕಿದರು. ಅಂತಿಮವಾಗಿ ಗುಜರಾತ್ ಜೈಂಟ್ಸ್ ತಂಡ 150 ರನ್ಗಳಿಗೆ ಆಲೌಟ್ ಆಯಿತು. ಶ್ರೇಯಾಂಕ 3.5 ಓವರ್ ಬೌಲಿಂಗ್ ನಡೆಸಿ 23 ರನ್ ನೀಡಿ 5 ವಿಕೆಟ್ ಪಡೆದರು.
ಮುಂಬೈ: ಡಬ್ಲ್ಯುಪಿಎಲ್ 2026 ರ ಇಂದಿನ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ ಆರ್ ಸಿಬಿ ರಾಧಾಯಾದವ್ ಮತ್ತು ರಿಚಾ ಘೋಷ್ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಮೊದಲು ಬ್ಯಾಟಿಂಗ್ ಮಾಡಿ 182 ರನ್ ಗಳಿಸಿದೆ. ಇಂದು ಆರ್ ಸಿಬಿಗೆ ಸ್ಮೃತಿ ಮಂಧಾನ, ಗ್ರೇಸ್ ಹ್ಯಾರಿಸ್ ಸೇರಿದಂತೆ ಟಾಪ್ ಆರ್ಡರ್ ಬ್ಯಾಟಿಗರು ಕೈ ಕೊಟ್ಟರು. ಒಂದು ಹಂತದಲ್ಲಿ 43 ರನ್ ಗೆ 4 ವಿಕೆಟ್ ಕಳೆದುಕೊಂಡು ಆರ್ ಸಿಬಿ ಸಂಕಷ್ಟದಲ್ಲಿತ್ತು. ಆದರೆ ರಾಧಾ ಯಾದವ್-ರಿಚಾ ಘೋಷ್ ಜೋಡಿ ಒತ್ತಡ ನಿಭಾಯಸಿದ್ದರ ಜೊತೆಗೆ ರನ್ ರೇಟ್ ಕೂಡಾ ಸುಧಾರಿಸುವಂತೆ ಮಾಡಿದರು.
ಮುಂಬೈ: ಗುಜರಾತ್ ಜೈಂಟ್ಸ್ ವಿರುದ್ಧ ಇಲ್ಲಿನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಸತತ ಮೂರನೇ ಗೆಲುವಿನ ನಿರೀಕ್ಷೆಯಲ್ಲಿರುವ ಆರ್ಸಿಬಿಗೆ ಇದೀಗ ಟಾಸ್ನಲ್ಲಿ ನಿರಾಸೆಯಾಗಿದೆ. ಟಾಸ್ ಗೆದ್ದ ಗುಜರಾತ್ ಮೊದಲು ಫೀಲ್ಡಿಂಗ್ ಆಯ್ದುಕೊಂಡು ಆರ್ಸಿಬಿಯನ್ನು ಬ್ಯಾಟಿಂಗ್ಗೆ ಆಹ್ವಾನಿಸಿತು. ಯುಪಿ ವಾರಿಯರ್ಸ್ ವಿರುದ್ಧದ ಭರ್ಜರಿ ಗೆಲುವಿನ ಬೆನ್ನಲ್ಲೇ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಗುಜರಾತ್ ಜೈಂಟ್ಸ್ ವಿರುದ್ಧ ಗ್ರೌಂಡ್ ಇಳಿದಿದೆ. ಮಹಿಳಾ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಎರಡು ತಂಡಗಳು ಮುಖಾಮುಖಿಯಾಗಲಿದ್ದು, ಈ ಪಂದ್ಯದಲ್ಲಿ ಗೆಲ್ಲುವ ನೆಚ್ಚಿನ ತಂಡವಾಗಿ ಆರಂಭವಾಗಲಿದೆ.
ನಾನು ಬಿಗ್ಬಾಸ್ ಸೀಸನ್ 12ನ್ನು ನಿರಂತರವಾಗಿ ನೋಡುತ್ತಿಲ್ಲ, ಆದರೆ ಗಿಲ್ಲಿ ಇಷ್ಟ, ಅವನ ನೇರ ಮಾತು ಆತನನ್ನು ಗೆಲ್ಲಿಸುತ್ತದೆ ಎಂದು ಡಾ.ಶಿವರಾಜ್ಕುಮಾರ್ ಹೇಳಿದರು. ಇಂದು ಬಿಗ್ಬಾಸ್ ಸೀಸನ್ ಫೈನಲ್ ಬಗ್ಗೆ ಮಾಧ್ಯಮದವರು ಪ್ರಶ್ನೆ ಮಾಡಿದಾಗ ಪ್ರತಿಕ್ರಿಯಿಸಿದ ಶಿವಣ್ಣ, ನನಗೆ ಪ್ರತಿದಿನಲೂ ಬಿಗ್ಬಾಸ್ ನೋಡಕ್ಕೆ ಆಗಲ್ಲ, ಸಮಯ ಸಿಕ್ಕಾಗೆಲ್ಲ ನೋಡುತ್ತಿರುತ್ತೇನೆ. ಗಿಲ್ಲಿ ಮನಸ್ಸುಪೂರ್ವಕವಾಗಿ ಆಟವಾಡುತ್ತಿದ್ದಾನೆ. ಆತನ ನಡೆ ನಾಟಕೀಯ ಅನ್ಸಲ್ಲ. ಉತ್ತಮ ಮನಸ್ಸಿನಿಂದ ಗಿಲ್ಲಿ ಆಟವಾಡುತ್ತಿದ್ದಾನೆ ಎಂದರು.
ನಿಫಾ ವೈರಸ್ ಸೋಂಕು ಪ್ರಾಣಿಗಳಿಂದ ಮನುಷ್ಯರಿಗೆ ಹರಡುವ ಒಂದು ಗಂಭೀರ ಕಾಯಿಲೆಯಾಗಿದೆ. ಇದರ ಲಕ್ಷಣಗಳು ಸಾಮಾನ್ಯವಾಗಿ ಸೋಂಕು ತಗುಲಿದ 5 ರಿಂದ 14 ದಿನಗಳ ನಂತರ ಕಾಣಿಸಿಕೊಳ್ಳುತ್ತವೆ.ನಿಫಾ ವೈರಸ್ನ ಪ್ರಮುಖ ಲಕ್ಷಣಗಳನ್ನು ಈ ಕೆಳಗಿನಂತೆ ಗುರುತಿಸಬಹುದು:1. ಆರಂಭಿಕ ಲಕ್ಷಣಗಳು (ಜ್ವರದಂತಹ ಲಕ್ಷಣಗಳು)ಸೋಂಕಿನ ಆರಂಭದಲ್ಲಿ ಸಾಮಾನ್ಯ ಜ್ವರದಂತೆ ಕಂಡುಬರುತ್ತದೆ: ತೀವ್ರ ಜ್ವರ (High Fever)
ಡೆಹ್ರಾಡೂನ್ (ಉತ್ತರಾಖಂಡ): ಶುಕ್ರವಾರ ರಾಷ್ಟ್ರೀಯ ಪ್ಯಾರಾಲಿಂಪಿಕ್ ಪವರ್ಲಿಫ್ಟಿಂಗ್ ಚಾಂಪಿಯನ್ಶಿಪ್ ಅನ್ನು ವರ್ಚುವಲ್ ರೀತಿಯಲ್ಲಿ ಉದ್ಘಾಟಿಸಿದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ಕಳೆದ ದಶಕವು ಭಾರತದ ಕ್ರೀಡಾ ಇತಿಹಾಸದಲ್ಲಿ ಅಭೂತಪೂರ್ವ ಪರಿವರ್ತನೆಗೆ ಸಾಕ್ಷಿಯಾಗಿದೆ.ಈ ಅವಧಿಯನ್ನು ಭಾರತೀಯ ಕ್ರೀಡೆಗಳಿಗೆ ಸುವರ್ಣ ಅಧ್ಯಾಯವನ್ನಾಗಿ ಮಾಡಿದೆ ಎಂದು ಹೇಳಿದರು. ರೂರ್ಕಿಯ ಸಿಒಇಆರ್ ವಿಶ್ವವಿದ್ಯಾಲಯದಿಂದ ವರ್ಚುವಲ್ ಪ್ಲಾಟ್ಫಾರ್ಮ್ ಮೂಲಕ ನಡೆದ ಚಾಂಪಿಯನ್ಶಿಪ್ನ ಉದ್ಘಾಟನಾ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಸಿಎಂ ಧಾಮಿ, ಈ ಚಾಂಪಿಯನ್ಶಿಪ್ ಕೇವಲ ಕ್ರೀಡಾಕೂಟವಲ್ಲ, ಬದಲಾಗಿ
ಗದಗ: ರಾಜ್ಯದಾದ್ಯಂತ ಭಾರೀ ಸುದ್ದಿಯಾಗಿದ್ದ ಗದಗ ಜಿಲ್ಲೆಯ ಲಕ್ಕುಂಡಿ ನಿಧಿ ಸಿಕ್ಕ ಪ್ರಕರಣದಲ್ಲಿ ಇದೀಗ ಮಹತ್ವದ ಬೆಳವಣಿಗೆಯಾಗಿದೆ. ನಿಧಿ ಸಿಕ್ಕ ಬಳಿಕ ರಾಜ್ಯ ಸರ್ಕಾರ ಶುಕ್ರವಾರ ನಿಧಿ ಹುಡುಕಾಟಕ್ಕೆ ಮುಂದಾಗಿದೆ. ಕೇಂದ್ರ ಪುರಾತತ್ವ ಇಲಾಖೆಯಿಂದ ಅನುಮತಿ ಸಿಕ್ಕ ಹಿನ್ನಲೆಯಲ್ಲಿ ಇಂದಿನಿಂದ ಉತ್ಖನನ ಪ್ರಕ್ರಿಯೆಗೆ ಅಧಿಕೃತವಾಗಿ ಚಾಲನೆ ನೀಡಲಾಗಿದೆ.ಸರ್ಕಾರವು ಶುಕ್ರವಾರದಿಂದ ಲಕ್ಕುಂಡಿಯಲ್ಲಿ ಉತ್ಖನನ ಕಾರ್ಯ ಪ್ರಾರಂಭಿಸಿದ್ದು, ಗದಗ ಜಿಲ್ಲಾಧಿಕಾರಿ ಸಿಎನ್ ಶ್ರೀಧರ್, ಗ್ರಾಮವನ್ನು ಸ್ಥಳಾಂತರಿಸುವ ನಿರ್ಧಾರವು ಉತ್ಖನನದ ಸಂಶೋಧನೆಗಳ ಮೇಲೆ ಅವಲಂಬಿತವಾಗಿದೆ ಎಂದು ಹೇಳಿದರು.
ಬೆಂಗಳೂರು: ಪೊಂಗಲ್ ಹಬ್ಬದ ವಿಶೇಷ ದಿನದ ಹಿನ್ನೆಲೆ ಪ್ರಯಾಣಿಕರಿಗೆ ಅನುಕೂಲವಾಗಲೆಂದು ಹಾಗೂ ಹೆಚ್ಚುವರಿ ದಟ್ಟಣೆಯನ್ನು ಕಡಿಮೆ ಮಾಡಲು ದಕ್ಷಿಣ ರೈಲ್ವೆಯು ಕೊಟ್ಟಾಯಂ ಮತ್ತು ಬೆಂಗಳೂರು ಕಂಟೋನ್ಮೆಂಟ್ ನಡುವೆ ಒಂದು ಟ್ರಿಪ್ ವಿಶೇಷ ರೈಲನ್ನು ಬಿಡಲಾಗಿದೆ. ರೈಲು ಸಂಖ್ಯೆ 06147 ಕೊಟ್ಟಾಯಂ – ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್ಪ್ರೆಸ್ ರೈಲು ಜನವರಿ 18, 2026 ರಂದು 12:30 ಗಂಟೆಗೆ ಕೊಟ್ಟಾಯಂನಿಂದ ಹೊರಟು, ಮರುದಿನ 03:30 ಗಂಟೆಗೆ ಬೆಂಗಳೂರು ಕಂಟೋನ್ಮೆಂಟ್ಗೆ ತಲುಪಲಿದೆ.ಮರು ಪ್ರಯಾಣದಲ್ಲಿ, ರೈಲು ಸಂಖ್ಯೆ 06148 ಬೆಂಗಳೂರು ಕಂಟೋನ್ಮೆಂಟ್ – ಕೊಟ್ಟಾಯಂ ವಿಶೇಷ ಎಕ್ಸ್ಪ್ರೆಸ್ ರೈಲು ಜನವರಿ
2017 ರಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಶುಕ್ರವಾರ ಮಹಾರಾಷ್ಟ್ರದ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ನಿಂದ ಕಾರ್ಪೊರೇಟರ್ ಆಗಿ ಗೆದ್ದರು.ಒಂದು ದಿನ ಮೊದಲು ಚುನಾವಣೆ ನಡೆದ ಮಹಾರಾಷ್ಟ್ರದ 29 ನಾಗರಿಕ ಸಂಸ್ಥೆಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಪ್ರಸ್ತುತ ನಡೆಯುತ್ತಿದೆ.ಶ್ರೀ ಪಂಗಾರ್ಕರ್ ಚುನಾವಣಾ ವಾರ್ಡ್ ಸಂಖ್ಯೆ 13 ರಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಅವರು ತಮ್ಮ ಹತ್ತಿರದ ಪ್ರತಿಸ್ಪರ್ಧಿ ಬಿಜೆಪಿಯ ರಾವ್ಸಾಹೇಬ್ ಧೋಬ್ಲೆ ಅವರನ್ನು ಸೋಲಿಸಿದರು.
ಬೈಲೂರು ಪರಶುರಾಮ ಥೀಮ್ ಪಾರ್ಕ್ನ ಕಟ್ಟಡದಿಂದ ಸೀಲಿಂಗ್ ಫ್ಯಾನ್ಗಳನ್ನು ಕದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಕಳ ಪಟ್ಟಣ ಪೊಲೀಸರು ಇಬ್ಬರು ಅಪ್ರಾಪ್ತರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.2025 ರ ಜನವರಿ ಮತ್ತು ಜೂನ್ ನಡುವಿನ ಅವಧಿಯಲ್ಲಿ ಥೀಮ್ ಪಾರ್ಕ್ನಿಂದ ಎರಡು ಫ್ಯಾನ್ಗಳನ್ನು ಕದ್ದ ಆರೋಪ ಈ ಅಪ್ರಾಪ್ತ ಮೇಲೆ ಹೊರಿಸಲಾಗಿದೆ. ಮಂಜುನಾಥ ಜೋಗಿ ಅವರು ನೀಡಿದ ದೂರಿನ ಮೇರೆಗೆ ಜನವರಿ 12 ರಂದು ಪ್ರಕರಣ ದಾಖಲಿಸಲಾಗಿದ್ದು, ಪ್ರಸ್ತುತ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಕನಿಷ್ಠ ಮೂರು ಜನರು, ಒಬ್ಬ ವೈದ್ಯರು, ಒಬ್ಬ ನರ್ಸ್ ಮತ್ತು ಆರೋಗ್ಯ ಸಿಬ್ಬಂದಿ ನಿಪಾ ವೈರಸ್ ಸೋಂಕಿಗೆ ಒಳಗಾಗಿದ್ದಾರೆ, ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ ಐದಕ್ಕೆ ತಲುಪಿದೆ.ಮೊದಲ ಇಬ್ಬರು ರೋಗಿಗಳು - ಪುರ್ಬಾ ಮೇದಿನಿಪುರ ಜಿಲ್ಲೆಯ ಪುರುಷ ನರ್ಸ್ ಮತ್ತು ಉತ್ತರ 24 ಪರಗಣ ಜಿಲ್ಲೆಯ ಬರಾಸತ್ನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಪುರ್ಬಾ ಬರ್ಧಮಾನ್ ಜಿಲ್ಲೆಯ ಮಂಗೋಲ್ಕೋಟ್ನ ಮಹಿಳಾ ನರ್ಸ್ ಇನ್ನೂ ಐಸಿಯುನಲ್ಲಿಯೇ ಇದ್ದಾರೆ.ಹೊಸ ಮೂರು ಪ್ರಕರಣಗಳಲ್ಲಿ, ಒಬ್ಬರು ಬರಾಸತ್ನಲ್ಲಿರುವ ಅದೇ ಖಾಸಗಿ ಆಸ್ಪತ್ರೆಯ ವೈದ್ಯರಾಗಿದ್ದಾರೆ, ಮತ್ತು ಉಳಿದ ಇಬ್ಬರು
ಬೆಂಗಳೂರು: ಸಿವಿಲ್ ಪ್ರಕರಣವೊಂದರಲ್ಲಿ ನ್ಯಾಯಾಲಯದ ಮಧ್ಯಂತರ ಆದೇಶ ಉಲ್ಲಂಘಿಸಿದ ಆರೋಪದಡಿ ಪವರ್ ಟಿವಿ ಮುಖ್ಯಸ್ಥ ರಾಕೇಶ್ ಶೆಟ್ಟಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಿವಿಲ್ ನ್ಯಾಯಾಲಯ ಇದೀಗ 3ತಿಂಗಳ ಜೈಲು ಶಿಕ್ಷೆಯನ್ನು ವಿಧಿಸಿ ಆದೇಶವನ್ನು ಹೊರಡಿಸಿದೆ. ಹಿರಿಯ ಐಪಿಎಸ್ ಅಧಿಕಾರಿ ಬಿಆರ್ ರವಿಕಾಂತೇಗೌಡ ದಾಖಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶ ಅಬ್ದುಲ್ ಸಲೀಂ, ‘ಪವರ್ ಸ್ಮಾರ್ಟ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿ’ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಸಂಜೀವ ಶೆಟ್ಟಿ ಅವರಿಗೆ ಜೈಲು ಶಿಕ್ಷೆಯಲ್ಲಿ ವಿಧಿಸಿದ್ದಾರೆ. ಈ ಪ್ರಕರಣದಲ್ಲಿ 2023ರ ಸೆಪ್ಟೆಂಬರ್ 8ರಂದು ನ್ಯಾಯಾಲಯ ನೀಡಿದ್ದ ಮಧ್ಯಂತರ ಆದೇಶವನ್ನು ಪ್ರತಿವಾದಿಯಾದ ರಾಕೇಶ್
ಕೇರಳ: ಶಾಲೆಗೆ ಮನೆಯಿಂದ ಹೊರಟು ನಾಪತ್ತೆಯಾಗಿದ್ದ 14 ವರ್ಷದ ಶಾಲಾ ಬಾಲಕಿ ಶುಕ್ರವಾರ ಮಲಪ್ಪುರಂ ಜಿಲ್ಲೆಯ ರೈಲ್ವೆ ಹಳಿಯ ಬಳಿ ಶವವಾಗಿ ಪತ್ತೆಯಾಗಿದ್ದಾಳೆ. ಪೊಲೀಸರು ಕೊಲೆ ಶಂಕೆ ವ್ಯಕ್ತಪಡಿಸಿದ್ದು, ತನಿಖೆ ಮುಂದುವರಿದಿದ್ದು, ಹದಿಹರೆಯದ ಬಾಲಕಿಯನ್ನು ವಶಕ್ಕೆ ಪಡೆದಿದ್ದಾರೆ.ನಿಲಂಬೂರು ಬಳಿಯ ಕರುವರಕುಂಡುವಿನ ಒಂಬತ್ತನೇ ತರಗತಿಯ ವಿದ್ಯಾರ್ಥಿನಿ ಗುರುವಾರ ಬೆಳಿಗ್ಗೆ ಶಾಲೆಗೆ ಮನೆಯಿಂದ ಹೊರಟಿದ್ದಳು ಆದರೆ ಸಂಜೆ ಹಿಂತಿರುಗಲಿಲ್ಲ. ಕುಟುಂಬದವರು ಅವಳನ್ನು ಹುಡುಕಲು ಮಾಡಿದ ಪ್ರಯತ್ನಗಳು ವಿಫಲವಾದಾಗ, ಆಕೆಯ ತಾಯಿ ಕರುವರಕುಂಡು ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದರು, ನಂತರ ಪ್ರಕರಣ ದಾಖಲಿಸಿಕೊಂಡು ಹುಡುಕಾಟ ಆರಂಭಿಸಲಾಯಿತು.
ಭಾರತೀಯ ಕ್ರಿಕೆಟ್ ತಾರೆ ವಿರಾಟ್ ಕೊಹ್ಲಿ ಮತ್ತು ನಟಿ ಅನುಷ್ಕಾ ಶರ್ಮಾ ಮುಂಬೈ ಬಳಿಯ ಕರಾವಳಿ ಪಟ್ಟಣವಾದ ಅಲಿಬಾಗ್ನಲ್ಲಿ ಸುಮಾರು 5.1 ಎಕರೆ ಭೂಮಿಯನ್ನು ₹37.86 ಕೋಟಿ ರೂ.ಗಳಿಗೆ ಖರೀದಿಸಿದ್ದಾರೆ ಎಂದು ವರದಿಯಾಗಿದೆ. ಈ ಮೂಲಕ ಮುಂದಿನ ನಿವೃತ್ತಿ ಜೀವನವನ್ನು ಕೊಹ್ಲಿ ಮುಂಬೈನಲ್ಲೇ ಕಳೆಯಲಿದ್ದಾರಾ ಎಂಬ ನುಮಾನ ಶುರುವಾಗಿದೆ. ಜಿರಾದ್ ಗ್ರಾಮದಲ್ಲಿರುವ ಈ ಜಮೀನು ಎರಡು ಪಕ್ಕದ ಪ್ಲಾಟ್ಗಳನ್ನು ಒಳಗೊಂಡಿದೆ ಮತ್ತು ಜನವರಿ 13 ರಂದು ನೋಂದಾಯಿಸಲಾಗಿದೆ. ವಹಿವಾಟಿಗೆ ಸುಮಾರು ₹2.27 ಕೋಟಿ ಸ್ಟಾಂಪ್ ಡ್ಯೂಟಿಯನ್ನು ಪಾವತಿಸಲಾಗಿದೆ. ಈ ಒಪ್ಪಂದವನ್ನು ಸಮಿರಾ ಲ್ಯಾಂಡ್ ಅಸೆಟ್ಸ್ ಪ್ರೈವೇಟ್ ಲಿಮಿಟೆಡ್ ಸುಗಮಗೊಳಿಸಿತು ಮತ್ತು ಕೊಹ್ಲಿಯ ಸಹೋದರ ವಿಕಾಸ್ ಕೊಹ್ಲಿ ಅವರ ಪರವಾಗಿ ವಹಿವಾಟಿನ ಔಪಚಾರಿಕತೆಗಳನ್ನು ಪೂರ್ಣಗೊಳಿಸಿದರು.
ಬೆಂಗಳೂರು: ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಮತ್ತು ಮಿತ್ರ ಪಕ್ಷಗಳ ಜಯಭೇರಿಯ ಹಿನ್ನೆಲೆಯಲ್ಲಿ ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿಯ ಬಳಿ ಇಂದು ಪಟಾಕಿ ಸಿಡಿಸಿ ಸಿಹಿ ಹಂಚಿ ವಿಜಯೋತ್ಸವ ಆಚರಿಸಲಾಯಿತು.ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಅವರು ಮಾಧ್ಯಮಗಳ ಜೊತೆ ಮಾತನಾಡಿ, ಮುಂಬೈಯಲ್ಲಿ ಅತಿ ದೊಡ್ಡ ಮಹಾನಗರಪಾಲಿಕೆಯಲ್ಲಿ ಬಿಜೆಪಿ ಮತ್ತು ಮಿತ್ರಪಕ್ಷವು ಭಾರೀ ಮುನ್ನಡೆ ಸಾಧಿಸಿದೆ. ಇದು ಸಂತಸದ ವಿಚಾರ ಎಂದರು. ಕಾಂಗ್ರೆಸ್ನವರು ಮತಪತ್ರದಲ್ಲಿ ಚುನಾವಣೆ ಮಾಡಿದರೆ ಗೆಲ್ಲುವುದಾಗಿ ಹೇಳುತ್ತಿದ್ದರು. ಅದರಲ್ಲೂ ನಮ್ಮ ರಾಜ್ಯದಲ್ಲಿ ಸೋತಿದ್ದಾರೆ. ಈಗ ಮತ್ತೆ ಇವಿಎಂ ಹ್ಯಾಕ್ ಆಗಿದೆ ಎನ್ನಲಿದ್ದಾರೆ ಎಂದು ವ್ಯಂಗ್ಯವಾಡಿದರು. 30 ವರ್ಷಗಳ ನಂತರ ಬಿಜೆಪಿ ಮೇಯರ್ ಚುಕ್ಕಾಣಿ ಹಿಡಿಯುವುದು ಅತ್ಯಂತ ಖುಷಿ ತಂದಿದೆ ಎಂದು ತಿಳಿಸಿದರು.
ನವದೆಹಲಿ: ಭಾರತೀಯ ಜನತಾ ಪಕ್ಷ (ಬಿಜೆಪಿ) ರಾಷ್ಟ್ರೀಯ ಅಧ್ಯಕ್ಷ ಹುದ್ದೆಗೆ ಚುನಾವಣಾ ದಿನಾಂಕವನ್ನು ಘೋಷಿಸಿದೆ. ನಿತಿನ್ ನಬಿನ್ ಅವರು ನೂತನ ಸಾರಥಿಯಾಗುವುದು ಪಕ್ಕಾ ಎನ್ನಲಾಗಿದೆ.ಜನವರಿ 19 ರಂದು ನಾಮಪತ್ರ ಸಲ್ಲಿಕೆ ನಡೆಯಲಿದೆ. ಜನವರಿ 20 ರಂದು ಹೊಸ ಅಧ್ಯಕ್ಷರ ಹೆಸರನ್ನು ಔಪಚಾರಿಕವಾಗಿ ಘೋಷಿಸಲಾಗುತ್ತಿದೆ. ನಿತಿನ್ ನಬಿನ್ ಅವರ ಅವಿರೋಧ ಆಯ್ಕೆ ಖಚಿತ ಎಂದು ಹೇಳಲಾಗಿದೆ. ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾದರೆ, ಅವರು ಬಿಜೆಪಿ ಇತಿಹಾಸದಲ್ಲಿ ಈ ಹುದ್ದೆಯನ್ನು ಅಲಂಕರಿಸಿದ ಅತ್ಯಂತ ಕಿರಿಯ ನಾಯಕರಾಗುತ್ತಾರೆ.ನಿತಿನ್ ನಬಿನ್ ಅವರು ಪಕ್ಷದ ಅತ್ಯಂತ ದೀರ್ಘಾವಧಿಯ ನಾಯಕರಾದ ಜೆಪಿ ನಡ್ಡಾ ಅವರ ಸ್ಥಾನಕ್ಕೆ ಬರಲಿದ್ದಾರೆ. ನಿತಿನ್ ನಬಿನ್ ಜನವರಿ 19 ರಂದು ನಾಮಪತ್ರ ಸಲ್ಲಿಸಲಿದ್ದಾರೆ.
ಬೆಳ್ತಂಗಡಿ: ಇಲ್ಲಿ ಓಡಿಲ್ನಾಳ ಗ್ರಾಮದ 15 ವರ್ಷದ ಬಾಲಕ ಸುಮಂತ್ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟುಂಬಸ್ಥರಿಗೆ ಅನುಮಾನ ಬರಲು ಪ್ರಮುಖ ಕಾರಣಗಳು ಇಲ್ಲಿವೆ. ಸುಮಂತ್ ತಂದೆಯ ಪ್ರಕಾರ ಅವರ ಕುಟುಂಬಸ್ಥರಿಗೆ ಯಾರೂ ಶತ್ರುಗಳಿಲ್ಲ. ಹಾಗಿದ್ದರೂ ಇದು ಸಹಜ ಸಾವಲ್ಲ, ಯಾರೋ ಕೊಲೆ ಮಾಡಿ ಬಾವಿಗೆ ಎಸೆದಿದ್ದಾರೆ ಎಂಬ ಅನುಮಾನ ಅವರಿಗಿದೆ. ಇದಕ್ಕೆ ಪ್ರಮುಖ ಕಾರಣವೆಂದರೆ ಆತ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರೆ ನೀರು ಕುಡಿಯುತ್ತಿದ್ದ. ಆದರೆ ನೀರು ಕುಡಿದಿಲ್ಲ. ಇನ್ನು ಬಾವಿಯವರೆಗೂ ರಕ್ತದ ಕಲೆಯಿತ್ತು. ಆದರೆ ಬಾವಿಯಲ್ಲಿ ಯಾವುದೇ ರಕ್ತದ ಅಂಶ ಕಂಡುಬಂದಿಲ್ಲ.
ಬೆಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮುಂದುವರಿಸುವ ಬಗ್ಗೆ ಕೇಂದ್ರ ಸಚಿವ, ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಮಹತ್ವದ ಹೇಳಿಕೆ ನೀಡಿದ್ದಾರೆ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಕೆಲವು ಸ್ಥಳೀಯ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಇದರ ಬಗ್ಗೆ ಇಂದು ಮಾಧ್ಯಮಗಳು ಎಚ್ ಡಿ ಕುಮಾರಸ್ವಾಮಿಯವರನ್ನು ಪ್ರಶ್ನೆ ಮಾಡಿದ್ದಾರೆ. ಇದರ ಜೊತೆ ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಗೆಲುವಿನ ಬಗ್ಗೆಯೂ ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಉತ್ತರಿಸಿದ ಅವರು ‘ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟಕ್ಕೆ ಬರುತ್ತದೆ ಎಂದು ನೀವೇ ಹೇಳಿದ್ದೀರಿ.
ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದನೆ ಮಾಡಿದ ಆರೋಪದಲ್ಲಿ ಕಾಂಗ್ರೆಸ್ ಮುಖಂಡನ ವಿರುದ್ಧ ಬೀದಿಗಿಳಿದು ಹೋರಾಟ ನಡೆಸಲು ಸಿದ್ಧತೆ ನಡೆಸಿದೆ. ಧಮ್ಕಿ ಹಾಕಿದ ಪ್ರಕರಣದಲ್ಲಿ ಶಿಡ್ಲಘಟ್ಟ ಕ್ಷೇತ್ರದ 2023ರ ಕಾಂಗ್ರೆಸ್ ಅಭ್ಯರ್ಥಿ ರಾಜೀವ್ ಗೌಡ ವಿರುದ್ಧ ಕ್ರಮ ತೆಗೆದುಕೊಳ್ಳದೇ ಹೋದ್ರೆ ಬೀದಿಗಳಿದು ಹೋರಾಟ ಮಾಡೋದಾಗಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ.ಶಿಡ್ಲಘಟ್ಟದಲ್ಲಿ ಪೌರಾಯುಕ್ತೆ ಮೇಲೆ ತುಚ್ಚವಾಗಿ ಕಾಂಗ್ರೆಸ್ ಮುಖಂಡ ಮಾತಾಡಿದ್ದಾರೆ. ರಾಜ್ಯ ಸರ್ಕಾರ ದ್ವೇಷ ಭಾಷಣ ಬಿಲ್ ತಂತು. ದ್ವೇಷ ಭಾಷಣ ಬಿಲ್ ಕಾಂಗ್ರೆಸ್ ನವರಿಗೆ ಅನ್ವಯ ಆಗೊಲ್ಲ. ವಿಪಕ್ಷಗಳು, ಮಾಧ್ಯಮಗಳಿಗೆ ಮಾತ್ರ ಅನ್ವಯ ಆಗುತ್ತದೆ. ಸರ್ಕಾರದ ವಿರುದ್ಧ ಮಾತಾಡೋರ ಧ್ವನಿ ಕಟ್ಟಿ ಹಾಕೋದಕ್ಕೆ ಮಾತ್ರ ಈ ಬಿಲ್ ತಂದಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದರು.
ಬೆಂಗಳೂರು: ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ನ 12ನೇ ಆವೃತ್ತಿಯು ಅಂತಿಮ ಘಟ್ಟಕ್ಕೆ ಬಂದಿದೆ. ಫೈನಲ್ ವಾರದಲ್ಲಿ ಆರು ಮಂದಿ ಸ್ಪರ್ಧಿಗಳು ಪ್ರಶಸ್ತಿಗೆ ಕಾದಾಟ ನಡೆಸುತ್ತಿದ್ದಾರೆ. ಈ ಮಧ್ಯೆ ವಾಹಿನಿಯ ಪ್ರೋಗ್ರಾಂ ಹೆಡ್ಗೆ ಶಾಕ್ ಎದುರಾಗಿದೆ. ರಣಹದ್ದು ಬಗ್ಗೆ ಬಿಗ್ಬಾಸ್ ಕಾರ್ಯಕ್ರಮದಲ್ಲಿ ತಪ್ಪಾದ ಮಾಹಿತಿ ಹರಡಿದ ಆರೋಪವಿದೆ. ರಣಹದ್ದು ಸಂರಕ್ಷಣಾ ಟ್ರಸ್ಟ್ ವತಿಯಿಂದ ದೂರು ನೀಡಿದ್ದ ಹಿನ್ನೆಲೆ, ಬಿಗ್ ಬಾಸ್ ಪ್ರೋಗ್ರಾಂ ಹೆಡ್ಗೆ ಅರಣ್ಯ ಇಲಾಖೆಯಿಂದ ತಿಳುವಳಿಕೆ ನೋಟಿಸ್ ಜಾರಿ ನೀಡಲಾಗಿದೆ.ವಾರದ ಕಥೆ ಕಿಚ್ಚನ ಜೊತೆ ಕಾರ್ಯಕ್ರಮದಲ್ಲಿ ರಣಹದ್ದು ಹೊಂಚು ಹಾಕಿ ಸಂಚು ಮಾಡಿ ಲಬಕ್ ಅಂತ ಹಿಡಿಯುವುದು ಎಂದು ತಪ್ಪು ಮಾಹಿತಿ ಹರಡಲಾಗಿದೆ ಎಂದು ಆರೋಪಿಸಲಾಗಿದೆ.
ಬೆಳಗಾವಿ: ಸಂವಿಧಾನ ಮತ್ತು ಒಕ್ಕೂಟ ವ್ಯವಸ್ಥೆ ಬಗ್ಗೆ ಪದೇಪದೇ ಮಾತನಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಒಕ್ಕೂಟ ವ್ಯವಸ್ಥೆ ಹಾಳು ಮಾಡುವ ಕುತಂತ್ರ ನಡೆಸುತ್ತಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಾಗ್ದಾಳಿ ನಡೆಸಿದ್ದಾರೆ.ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸುಧಾರಣೆಗಳ ಜೊತೆ ಮನ್ ರೇಗಾವನ್ನು ವಿಬಿ ಜಿ ರಾಮ್ ಜಿ ಯೋಜನೆ ಎಂದು ಪರಿವರ್ತಿಸಿ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಜೀ ಅವರು ಜಾರಿಗೊಳಿಸುತ್ತಿದ್ದಾರೆ. ದೇಶದ ಬಡವರು, ಕಾರ್ಮಿಕರಿಗೆ ಅನುಕೂಲ ಆಗಬೇಕೆಂದು ಈ ಕಾಯ್ದೆ ತಂದಿದ್ದಾರೆ.
ಬಾಳೆಹಣ್ಣಿಗೆ ಸ್ವಲ್ಪ ಕಾಳುಮೆಣಸಿನ ಪೌಡರ್ ಮಾಡಿ ಸೇವನೆ ಮಾಡಿ. ಇದರಿಂದ ಆಗುವ ಲಾಭ ತಿಳಿದರೆ ಖಂಡಿತಾ ನೀವು ಈ ಅಭ್ಯಾಸವನ್ನು ಬಿಡಲ್ಲ. ಬಾಳೆಹಣ್ಣಿನಲ್ಲಿ ಪೊಟ್ಯಾಶಿಯಂ ಅಂಶ, ವಿಟಮಿನ್ ಬಿ6, ಮ್ಯಾಗ್ನಿಶಿಯಂ ಹೇರಳವಾಗಿದೆ. ಇದು ಶಕ್ತಿವರ್ಧಕ ಕೂಡಾ. ಕಾಳುಮೆಣಸಿನಲ್ಲಿ ರೋಗ ನಿರೋಧಕ ಶಕ್ತಿಯೂ ಅಧಿಕವಾಗಿದೆ. ಬಾಳೆಹಣ್ಣಿನ ಜೊತೆಗೆ ಕಾಳುಮೆಣಸಿನ ಪೌಡರ್ ಹಾಕಿ ಸೇವನೆ ಮಾಡುವುದಕ್ಕೆ ಆಯುರ್ವೇದಲ್ಲಿ ಮಹತ್ವವಿದೆ. ಬಾಳೆಹಣ್ಣಿನ ಜೊತೆಗೆ ಪೆಪ್ಪರ್ ಪೌಡರ್ ಹಾಕಿ ಸೇವಿಸುವುದರಿಂದ ಯಕೃತ್ ವಿಷಮುಕ್ತಗೊಳಿಸಲು ಸಹಕರಿಸುತ್ತದೆ. ಅಲ್ಲದೆ ಇದು ಜೀರ್ಣಕ್ರಿಯೆಗೆ ಉತ್ತಮವಾಗಿದೆ. ಹೀಗಾಗಿ ಹೊಟ್ಟೆ ಉಬ್ಬರ, ಹೊಟ್ಟೆಯಲ್ಲಿ ಆಗುವ ಕಿರಿ ಕಿರಿಗಳನ್ನು ದೂರ ಮಾಡುತ್ತದೆ.
ಮುಂಬೈ: ವಾಣಿಜ್ಯ ನಗರಿ ಮುಂಬೈನ ನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಭರ್ಜರಿ ಮುನ್ನಡೆಯತ್ತ ಸಾಗುತ್ತಿದ್ದಂತೇ ಇತ್ತ ಶಿವಸೇನಾ ನಾಯಕ ಸಂಜಯ್ ರಾವತ್ ಅಕ್ರಮವಾಗಿದೆ ಎಂದು ಆರೋಪಿಸಿದ್ದಾರೆ.ಬೃಹನ್ ಮುಂಬೈನಗರಪಾಲಿಕೆ ಚುನಾವಣೆ ಮತ ಎಣಿಕೆ ಪ್ರಕ್ರಿಯೆ ಜಾರಿಯಲ್ಲಿದೆ. ಈಗಿನ ಟ್ರೆಂಡ್ ಪ್ರಕಾರ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿ ಭರ್ಜರಿ ಮುನ್ನಡೆಯಲ್ಲಿದೆ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಪ್ರಾಬಲ್ಯ ಸಾಧಿಸುವ ನಿರೀಕ್ಷೆಯಲ್ಲಿದ್ದ ಶಿವಸೇನೆ ಉದ್ಧವ್ ಬಣಕ್ಕೆ ತೀವ್ರ ಹಿನ್ನಡೆಯಾಗಿದೆ. ಮುಂಬೈನ ಒಟ್ಟು 227 ಸ್ಥಾನಗಳ ಪೈಕಿ 42 ಸ್ಥಾನಗಳಲ್ಲಿ ಬಿಜೆಪಿ, 13 ಸ್ಥಾನಗಳಲ್ಲಿ ಶಿವಸೇನೆ ಶಿಂಧೆ ಬಣ, 28 ಕ್ಷೇತ್ರಗಳಲ್ಲಿ ಉದ್ಧವ್ ಶಿವಸೇನೆ ಬಣ ಮುನ್ನಡೆಯಲ್ಲಿದೆ.
ಲಕ್ನೋ: ಆಡಳಿತದ ವಿಚಾರದಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಲು ಹಿಂದೆ ಮುಂದೆ ನೋಡಲ್ಲ. ಆದರೆ ಮಕ್ಕಳ ವಿಚಾರದಲ್ಲಿ ಅವರು ತಾವೇ ಮಗುವಾಗಿ ಬಿಡುತ್ತಾರೆ. ಇದೀಗ ಮಗುವೊಂದು ಸಿಎಂ ಯೋಗಿ ಬಳಿ ಚಿಪ್ಸ್ ಬೇಕೆಂದು ಬೇಡಿಕೆಯಿಟ್ಟ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂಕ್ರಾಂತಿ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದರು. ಗೋರಕ್ ಪುರದಲ್ಲಿ ನಡೆದ ಕಾರ್ಯಕ್ರಮ ಅದಾಗಿತ್ತು. ಸಾಕಷ್ಟು ಜನ ಮಕ್ಕಳೂ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ ಬಾಲಕನೊಬ್ಬನನ್ನು ಸಿಎಂ ಯೋಗಿ ಹತ್ತಿರ ಕರೆದು ಮಾತನಾಡಿಸಿದ್ದಾರೆ.
ಬೆಂಗಳೂರು: ಅಡಿಕೆ ಬೆಲೆ ನಿನ್ನೆ ಕೊಂಚ ಇಳಿಕೆಯಾಗಿತ್ತು. ಆದರೆ ಇಂದು ಮತ್ತೆ ಬೆಲೆ ಯಥಾಸ್ಥಿತಿಯಲ್ಲಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ. ಕಳೆದ ವಾರ ಅಡಿಕೆ ಬೆಲೆಯಲ್ಲಿ ಏರಿಕೆ ಆರಂಭವಾಗಿತ್ತು. ಸತತವಾಗಿ ನಾಲ್ಕು ದಿನಗಳ ಕಾಲ ಏರಿಕೆಯಾಗಿದ್ದು ರೈತರ ಸಂತಸಕ್ಕೆ ಕಾರಣವಾಗಿತ್ತು. ಆದರೆ ಇಂದು ಯಾವುದೇ ವ್ಯತ್ಯಾಸ ಕಂಡುಬರುತ್ತಿಲ್ಲ. ಇಂದು ಹೊಸ ಅಡಿಕೆ ಬೆಲೆ 460 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ ನಿನ್ನೆ ನಿನ್ನೆ 10 ಇಳಿಕೆಯಾಗಿ 535 ರೂ. ಗಳಾಗಿತ್ತು. ಇಂದೂ ಅಷ್ಟೇ ಇದೆ. ಡಬಲ್ ಚೋಲ್ ಬೆಲೆಯೂ 535 ರೂ.ಗಳಷ್ಟಾಗಿದೆ.
ಬೆಂಗಳೂರು: ಚಿನ್ನದ ಬೆಲೆ ಮತ್ತೆ ಏರಿಕೆ ಮತ್ತು ಇಳಿಕೆಯಾಗುತ್ತಲೇ ಇದೆ. ಆದರೆ ಇಂದು ವಾರದ ಆರಂಭದಲ್ಲೇ ಪರಿಶುದ್ಧ ಚಿನ್ನದ ದರ ಏರಿಕೆಯಾದರೆ ಮತ್ತು ಇತರೆ ಚಿನ್ನದ ದರ ಇಳಿಕೆ ಕಂಡಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತ ಏರಿಕೆ ಮತ್ತು ಇಳಿಕೆ ಕಂಡಿತ್ತು. ಆದರೆ ಈ ವಾರದ ಆರಂಭದಲ್ಲೇ ಚಿನ್ನದ ದರ ಏರಿಕೆಯಾಗಿದೆ. ಇಂದು ಮತ್ತೆ ಪರಿಶುದ್ಧ ಚಿನ್ನದ ದರ ಭಾರೀ ಏರಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ಮೊನ್ನೆ 1,44,560.00 ರೂ.ಗಳಿತ್ತು. ಇಂದು 1,46,510.00 ರೂ.ಗಳಷ್ಟಾಗಿದೆ.
ಬೆಳ್ತಂಗಡಿ: ಇಲ್ಲಿನ 9 ನೇ ತರಗತಿ ವಿದ್ಯಾರ್ಥಿ ಸುಮಂತ್ ನಿಗೂಢ ಸಾವು ಪ್ರಕರಣ ಈಗ ದಕ್ಷಿಣ ಕನ್ನಡ ಜಿಲ್ಲೆಯ ಜನರಲ್ಲಿ ಸಾಕಷ್ಟು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಸಾವಿನ ಹಿಂದಿನ ದಿನ ಬಾಲಕ ಸುಮಂತ್ ಏನು ಮಾಡಿದ್ದ ಎಂದು ಆತನ ತಂದೆ ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದಾರೆ. ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಸುಮಂತ್ ಪಕ್ಕದ ದೇವಸ್ಥಾನಕ್ಕೆ ಧನು ಪೂಜೆಗೆಂದು ವಾರಕ್ಕೊಮ್ಮೆ ಸ್ನೇಹಿತರ ಜೊತೆ ಹೋಗುತ್ತಿದ್ದ. ಈ ಬಾರಿಯೂ ಅದೇ ರೀತಿ ಬೆಳ್ಳಂ ಬೆಳಿಗ್ಗೆ ಮನೆಯಿಂದ ಹೊರಟಿದ್ದಾನೆ. ಆದರೆ ಅತ್ತ ದೇವಸ್ಥಾನಕ್ಕೂ ಬರಲಿಲ್ಲ, ಮನೆಗೂ ವಾಪಸಾಗಲಿಲ್ಲ. ಬಳಿಕ ಆತನ ಮೃತದೇಹ ಮನೆಯಿಂದ 500 ಮೀ ದೂರದಲ್ಲಿರುವ ಬಾವಿಯಲ್ಲಿ ಪತ್ತೆಯಾಗಿದೆ.
ಅಣ್ಣಾವ್ರು ಮತ್ತು ರೆಬಲ್ ಸ್ಟಾರ್ ಅಂಬರೀಶ್ ನಡುವಿನ ಬಾಂಧವ್ಯದ ಬಗ್ಗೆ ಎಲ್ಲರಿಗೂ ಗೊತ್ತೇ ಇದೆ. ಈ ಹಿಂದೆ ಖಾಸಗಿ ವಾಹಿನಿಗೆ ನೀಡಿದ್ದ ಸಂದರ್ಶನದಲ್ಲಿ ಅಂಬರೀಶ್, ಅಣ್ಣಾವ್ರ 35 ವರ್ಷಗಳ ಪದ್ಧತಿ ಮುರಿದಿದ್ದ ವಿಚಾರವನ್ನು ಸ್ವಾರಸ್ಯಕರವಾಗಿ ಹೇಳಿದ್ದರು. ಆ ಸಂದರ್ಶನದಲ್ಲಿ ಅವರು ಹೇಳಿದ್ದೇನು ಇಲ್ಲಿದೆ ನೋಡಿ ವಿವರ. ಕೆಆರ್ ಎಸ್ ನಲ್ಲಿ ಶೂಟಿಂಗ್ ಇತ್ತು. ಮಕ್ಕಳೆಲ್ಲಾ ಏನು ಮಾಮ ನಮಗೆಲ್ಲಾ ಊಟ ಕೊಡಿಸಲ್ವಾ ಎಂದ್ರು. ಆಯ್ತು ಮಾಡಿಸ್ತೀನಿ ಎಂದು ನಮ್ಮ ತಾಯಿಗೆ ಹೇಳಿ ಬಾಡೂಟ ಮಾಡಿಸಿದೆ. ನಮ್ಮ ತಾಯಿಗೆ ರಾಜಕುಮಾರ್ ಎಂದರೆ ಬಲೇ ಭಕ್ತಿ. ಹೀಗಾಗಿ ಸುಮಾರು 25-30 ಜನಕ್ಕೆ ಅವರೊಬ್ಬರೇ ನಾಲ್ಕೈದು ಥರಾ ಅಡಿಗೆ ಮಾಡಿದ್ರು.
ಮುಂಬೈ: ಡಬ್ಲ್ಯುಪಿಎಲ್ 2026 ರಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಗುಜರಾತ್ ಜೈಂಟ್ಸ್ ರೂಪದಲ್ಲಿ ಕಠಿಣ ಎದುರಾಳಿ ಮುಖಾಮುಖಿಯಾಗಲಿದೆ. ಗುಜರಾತ್ ಜೈಂಟ್ಸ್ ಈ ಬಾರಿ ಉತ್ತಮ ಪ್ರದರ್ಶನವನ್ನು ನೀಡುತ್ತಾ ಬಂದಿದೆ. ವಿಶೇಷವಾಗಿ ಆರ್ ಸಿಬಿಯಿಂದಲೇ ವಲಸೆ ಹೋಗಿರುವ ಸೋಫಿ ಡಿವೈನ್ ತಂಡಕ್ಕೆ ಪ್ರಬಲ ಶಕ್ತಿಯಾಗಿದ್ದಾರೆ. ಹೀಗಾಗಿ ಆರ್ ಸಿಬಿಗೆ ಇಂದು ಗೆಲುವು ಅಷ್ಟು ಸುಲಭವಲ್ಲ. ಹಾಗಿದ್ದರೂ ಕಳೆದ ಎರಡೂ ಪಂದ್ಯಗಳಲ್ಲಿ ಆರ್ ಸಿಬಿ ಪ್ರದರ್ಶನ ಅದ್ಭುತವಾಗಿತ್ತು. ಬೌಲಿಂಗ್ ಮತ್ತು ಬ್ಯಾಟಿಂಗ್, ಫೀಲ್ಡಿಂಗ್ ನಲ್ಲೂ ಒಬ್ಬರಲ್ಲಾ ಒಬ್ಬರು ತಂಡಕ್ಕೆ ಆಧಾರವಾಗುತ್ತಿರುವುದು ಸ್ಮೃತಿ ಪಡೆಗೆ ಪ್ಲಸ್ ಪಾಯಿಂಟ್.
ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಹಿರಿಯ ನಟಿ ಉಮಾಶ್ರೀ ಮುಖ್ಯ ಪಾತ್ರದಲ್ಲಿ ನಟಿಸುತ್ತಿರುವವ ಪುಟ್ಟಕ್ಕನ ಮಕ್ಕಳು ಧಾರವಾಹಿ ಕೊನೆಯ ದಿನದ ಚಿತ್ರೀಕರಣ ಮುಕ್ತಾಯವಾಗಿದೆ. ಪುಟ್ಟಕ್ಕನ ಮಕ್ಕಳು ಧಾರವಾಹಿ 1200 ಸಂಚಿಕೆಗಳನ್ನು ಪೂರ್ತಿ ಮಾಡಿ ಮುನ್ನುಗ್ಗುತ್ತಿದೆ. ಈ ಧಾರವಾಹಿಯಲ್ಲಿ ಏಕಾಂಗಿಯಾಗಿ ತನ್ನ ನಾಲ್ವರು ಹೆಣ್ಣು ಮಕ್ಕಳನ್ನು ಬೆಳೆಸಿ ಸ್ವಾವಲಂಬಿಯಾಗಿ ಬದುಕುವ ಪುಟ್ಟಕ್ಕ ಎಂಬ ಛಲಗಾತಿ ಮಹಿಳೆಯ ಕತೆಯಿದೆ. ಈ ಧಾರವಾಹಿ ಹಲವು-ಏಳು ಬೀಳುಗಳನ್ನು ಕಂಡು ಇದುವರೆಗೆ 1202 ಸಂಚಿಕೆಗಳನ್ನು ಕಂಡಿದೆ.
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆಗೆ ಜೀವ ಬೆದರಿಕೆ ಹಾಕಿದ್ದ ರಾಜೀವ್ ಗೌಡಗೆ ಕಾಂಗ್ರೆಸ್ ಶೋಕಾಸ್ ನೋಟಿಸ್ ನೀಡಿದೆ. ಆದರೆ ಈ ವಿಚಾರವಾಗಿ ಕಾಮೆಂಟ್ ಮಾಡಿರುವ ನೆಟ್ಟಿಗರು ಜೀವ ಬೆದರಿಕೆ ಹಾಕಿದ್ದಕ್ಕೆ ಬರೀ ನೋಟಿಸ್ ಅಷ್ಟೇನಾ ಎಂದಿದ್ದಾರೆ. ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರ ಜೈದ್ ಖಾನ್ ಅಭಿನಯದ ಕಲ್ಟ್ ಸಿನಿಮಾ ಬ್ಯಾನರ್ ತೆರವು ಮಾಡಿದ ಪ್ರಕರಣಕ್ಕೆ ಸಂಬಂದಿಸಿದಂತೆ ಪೌರಾಯುಕ್ತೆಗೆ ರಾಜೀವ್ ಗೌಡ ಕರೆ ಮಾಡಿ ಬೆಂಕಿ ಹಚ್ಚುವುದಾಗಿ ಜೀವ ಬೆದರಿಕೆ ಹಾಕಿದ್ದರು.
ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಚರ್ಚೆಯಲ್ಲಿರುವಾಗಲೇ ಡಿಸಿಎಂ ಡಿಕೆ ಶಿವಕುಮಾರ್ ಮಹತ್ವದ ಹೆಜ್ಜೆಯಿಟ್ಟಿದ್ದಾರೆ. ಇಂದಿನಿಂದ ಅವರು ದೆಹಲಿ ಪ್ರವಾಸ ಮಾಡುತ್ತಿದ್ದಾರೆ. ತಮಿಳುನಾಡಿಗೆ ತೆರಳುವ ಮಾರ್ಗದಲ್ಲಿ ಮೈಸೂರಿಗೆ ಬಂದಿದ್ದ ರಾಹುಲ್ ಗಾಂಧಿ ನಾಯಕತ್ವ ಬದಲಾವಣೆ ವಿಚಾರ ಇಲ್ಲಿ ಚರ್ಚೆ ಬೇಡ. ದೆಹಲಿಗೆ ಬನ್ನಿ ಎಂದು ಸಂದೇಶ ನೀಡಿದ್ದರು ಎನ್ನಲಾಗಿತ್ತು. ಅದರಂತೆ ಡಿಕೆಶಿ ಮತ್ತು ಸಿದ್ದರಾಮಯ್ಯ ಜನವರಿ 16 ಕ್ಕೆ ದೆಹಲಿ ಪ್ರವಾಸ ಮಾಡಲಿದ್ದಾರೆ ಎನ್ನಲಾಗಿತ್ತು. ಇದೀಗ ಇಂದಿನಿಂದ ಎರಡು ದಿನಗಳ ಕಾಲ ಡಿಕೆ ಶಿವಕುಮಾರ್ ದೆಹಲಿ ಪ್ರವಾಸ ಮಾಡುತ್ತಿದ್ದಾರೆ.
ನವದೆಹಲಿ: ರಾಮಜನ್ಮಭೂಮಿ ಅಯೋಧ್ಯೆಯ ರಾಮಮಂದಿರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ನೀಡಲು ಮುಂದಾಗಿರುವುದು ಈಗ ಕೆಲವು ಹಿಂದೂ ಪರ ಸಂಘಟನೆಗಳು, ಸಂತರ ವಿರೋಧಕ್ಕೆ ಕಾರಣವಾಗಿದೆ. ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಸದ್ಯದಲ್ಲೇ ರಾಮಮಂದಿರಕ್ಕೆ ಭೇಟಿ ನೀಡಲಿದ್ದಾರೆ ಎಂಬ ಸುದ್ದಿಯಿದೆ. ಆದರೆ ಈ ಬಗ್ಗೆ ಕಾಂಗ್ರೆಸ್ ಇನ್ನೂ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ. ಆದರೆ ಇದಕ್ಕೂ ಮೊದಲೇ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ರಾಹುಲ್ ಗಾಂಧಿ ರಾಮಮಂದಿರ ಭೇಟಿಗೆ ಅವಕಾಶ ಕೊಡಬಾರದು ಎಂದು ಜ್ಯೋತಿರ್ ಮಠದ ಶಂಕರಾಚಾರ್ಯ ಸ್ವಾಮೀಜಿ ಅವಿಮುಕ್ತೇಶ್ವರಾನಂದ ಅವರು ವಿರೋಧ ವ್ಯಕ್ತಪಡಿಸಿದದಾರೆ.
ಬೆಂಗಳೂರು: ಕೆಲವರಿಗೆ ವಾಹನವನ್ನು ರಸ್ತೆಯಲ್ಲಿ ಶೋಕಿ ಮಾಡೋ ಖಯಾಲಿ ಇರುತ್ತದೆ. ಕಾರು ಇದೆ ಅಂತ ಈ ರೀತಿ ಏನಾದ್ರೂ ಮಾಡಲು ಹೋದರೆ ದಂಡ ತೆರಬೇಕಾಗುತ್ತದೆ ಎಂದು ಬೆಂಗಳೂರು ಸಂಚಾರಿ ಪೊಲೀಸರು ವಿಡಿಯೋವೊಂದನ್ನು ಹಂಚಿಕೊಂಡು ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘಿಸುವ, ರಸ್ತೆಯಲ್ಲಿ ಸ್ಟಂಟ್ ಮಾಡುವ ಅನೇಕ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತವೆ. ಈ ಕಾರಣಕ್ಕೆ ಅನೇಕರು 1,11,500 ರೂ. ದಂಡ ತೆತ್ತಿದ್ದಾರೆ. ಹಾಗಿದ್ದರೂ ಜನ ಬುದ್ಧಿ ಕಲಿಯಲ್ಲ.
ಬೆಂಗಳೂರು: ರಾಜ್ಯದಲ್ಲಿ ಈ ವಾರದ ಆರಂಭದಲ್ಲಿ ಮಳೆಯಾಗಿತ್ತು. ಇಂದು ಮಳೆಯಾಗುವ ಸಾಧ್ಯತೆಯಿದೆಯಾ, ಇಲ್ಲಿದೆ ಇಂದಿನ ಹವಾಮಾನ ವರದಿ. ಈ ವಾರ ರಾಜ್ಯದಲ್ಲಿ ಮಳೆ ಮತ್ತು ಚಳಿ ಎರಡೂ ಕಂಡುಬಂದಿತ್ತು. ವಾಯು ಭಾರ ಕುಸಿತದಿಂದ ಈ ವಾರ ಹವಾಮಾನ ವೈಪರೀತ್ಯ ಕಂಡುಬಂದಿತ್ತು. ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿತ್ತು. ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣವಿತ್ತು. ಆದರೆ ಇಂದು ರಾಜ್ಯದಲ್ಲಿ ಸರಾಸರಿ ಗರಿಷ್ಠ ತಾಪಮಾನ 28 ಡಿಗ್ರಿಯಷ್ಟಿರಲಿದೆ. ಕನಿಷ್ಠ ತಾಪಮಾನ 17 ಡಿಗ್ರಿಯಷ್ಟು ಕಂಡುಬರಲಿದೆ. ಇಂದು ಹಗಲಿಡೀ ಬಿಸಿಲಿನ ವಾತಾವರಣವಿರಲಿದೆ.
ಬೆಂಗಳೂರು: ಶುಕ್ರವಾರ ಲಕ್ಷ್ಮೀ ದೇವಿಗೆ ಸಂಬಂಧಿಸಿದ ದಿನವಾಗಿದೆ. ಐಶ್ವರ್ಯ, ಸಮೃದ್ಧಿಯ ದಿನವಾದ ಇಂದು ಈ ವಸ್ತುಗಳನ್ನು ಮನೆಗೆ ತರಬೇಡಿ. ಶುಕ್ರವಾರ ಲಕ್ಷ್ಮೀ ದೇವಿ ಮನೆಗೆ ಬರುತ್ತಾಳೆ ಎಂಬ ನಂಬಿಕೆಯಿದೆ. ಈ ಕಾರಣಕ್ಕೆ ಇಂದು ದಾರಿದ್ರ್ಯ ಸೂಚಿಸುವಂತಹ ವಸ್ತುಗಳನ್ನು ಮನೆಗೆ ತರಬೇಡಿ. ಲಕ್ಷ್ಮೀ ದೇವಿಯು ಅದೃಷ್ಟ, ಸಮೃದ್ಧಿ, ಐಶ್ವರ್ಯ ಮನೆಗೆ ಹೊತ್ತು ತರುತ್ತಾಳೆ. ಹೀಗಾಗಿ ಈ ದಿನಗಳಂದು ಮಾಂಸಾಹಾರ, ಮದ್ಯ, ಹುಳಿ ಪದಾರ್ಥಗಳು, ಸಕ್ಕರೆ, ಪೂಜಾ ಸಾಮಗ್ರಿಗಳನ್ನು ತರಬೇಡಿ. ಅದೇ ರೀತಿ ಮನೆಯಲ್ಲಿರುವ ಮುರಿದ ಕನ್ನಡಿ, ಪೂಜಾ ಸಾಮಗ್ರಿ, ಬಟ್ಟೆ, ಕೊಳಕು ವಸ್ತ್ರಗಳು, ಕಸವಿಲ್ಲದಂತೆ ನೋಡಿಕೊಳ್ಳಿ.
ಲಕ್ನೋ: ಸಂಬಂಧಿ ಮೇಲೆ ನಿರಂತರ ಅತ್ಯಾಚಾರ ಎಸಗಿ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಪ್ರಕರಣ ಸಂಬಂಧ ಕಾಮುಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಲ್ಲಿಯಾ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಮಹಿಳೆ ಮೇಲೆ ಅದೇ ಊರಿನ 40 ವರ್ಷದ ವ್ಯಕ್ತಿ ನಿರಂತರ ಅತ್ಯಚಾರ ಎಸಗಿದ್ದಾನೆ. ಆಕೆಯ ಆಕ್ಷಾಪಾರ್ಹ ವೀಡಿಯೋಗಳನ್ನು ರೆಕಾರ್ಡ್ ಮಾಡಿ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದಾನೆ. ಅಲ್ಲದೇ ಆಕೆಯ ಕುಟುಂಬದ ವಿರುದ್ಧ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾಳೆ. ದೂರಿನ ಆಧಾರದಲ್ಲಿ ಜ.3 ರಂದು ಆರೋಪಿಯ ವಿರುದ್ಧ ಅತ್ಯಾಚಾರ, ಕ್ರಿಮಿನಲ್ ಬೆದರಿಕೆ ಮತ್ತು ಐಟಿ ಕಾಯ್ದೆಯ ಸೆಕ್ಷನ್ಗಳ
ಯಾವಾಗಲೂ ದೀಪ ಹಚ್ಚುವಾಗ ಕೆಲವೊಂದು ತಪ್ಪುಗಳನ್ನು ಗೊತ್ತಿಲ್ಲದೆ ಮಾಡುತ್ತೇವೆ. ಅದರಲ್ಲಿ ದೀಪ ಹಚ್ಚುವಾಗ ಎರಡು ಬತ್ತಿಗಳನ್ನು ಒಟ್ಟಿಗೆ ಸೇರಿಸಿ ಹಚ್ಚುವುದು ನಮ್ಮ ಸಂಪ್ರದಾಯದಲ್ಲಿ ಬಹಳ ಮಹತ್ವವನ್ನು ಹೊಂದಿದೆ. ಇದರ ಹಿಂದೆ ಧಾರ್ಮಿಕ ಮತ್ತು ಆಧ್ಯಾತ್ಮಿಕ ಕಾರಣಗಳಿವೆ.ಅದರ ಹಿಂದಿರುವ ಕೆಲ ಕಾರಣಗಳು ಇಲ್ಲಿದೆ: ದಾಂಪತ್ಯ ಮತ್ತು ಕುಟುಂಬದ ಸಂಕೇತ ಶಾಸ್ತ್ರದ ಪ್ರಕಾರ, ಎರಡು ಬತ್ತಿಗಳನ್ನು ಹಾಕಿ ಹಚ್ಚುವ ದೀಪವು ಗಂಡ ಮತ್ತು ಹೆಂಡತಿಯ (ಶಿವ-ಶಕ್ತಿ) ಸಂಕೇತವಾಗಿದೆ.
ಬೆಂಗಳೂರು: ಇನ್ನೇನು ಬಿಗ್ಬಾಸ್ ಸೀಸನ್ 12 ಮುಗಿಯಲು ದಿನಗಣನೆ ಶುರುವಾಗಿದ್ದು, ಸ್ಪರ್ಧಿಗಳಿಗೆ ಇದೇ ವಾರ ದೊಡ್ಮನೆಯಲ್ಲಿ ಕೊನೆಯ ವಾರವಾಗಲಿದೆ. ಇದೀಗ ಬಿಗ್ಬಾಸ್ ಮನೆಯಲ್ಲಿ ಎಲ್ಲ ಸ್ಪರ್ಧಿಗಳು ತಮ್ಮ ತಪ್ಪನ್ನು ಅರಿತು ಒಬ್ಬರಿಗೊಬ್ಬರು ಕ್ಷಮೆಯಾಚಿಸುವ ಮೂಲಕ ಮುನಿಸಿಗೆ ಅಂತ್ಯ ಹಾಡಿ, ಒಬ್ಬರಿಗೊಬ್ಬರು ಕ್ಷಮೆ ಕೇಳಿದ್ದಾರೆ.ಇದೀಗ ಕಲರ್ಸ್ ಕನ್ನಡ ವಾಹಿನಿ ಬಿಟ್ಟಿರುವ ಪ್ರೋಮೋದಲ್ಲಿ ಗಿಲ್ಲಿ ಯಾವಾಗಲೂ ಎದುರಾಳಿಯಾಗಿ ಮಾತನಾಡುತ್ತಿದ್ದ ಅಶ್ವಿನಿ ಅವರಲ್ಲಿ ಕ್ಷಮೆಯಾಚನೆ ಮಾಡಿದ್ದಾರೆ. ಸೀಸನ್ ಆರಂಭದಿಂದಲೂ ಗಿಲ್ಲಿ ಹಾಗೂ ಅಶ್ವಿನಿ ಗೌಡ ಅವರ ನಡುವೆ ಜಗಳ, ಮುನಿಸಿತ್ತು. ಆದರೆ ಇಬ್ಬರೂ ಸಮಯ ಹಾಗೂ
ನವದೆಹಲಿ: ಕರ್ನಾಟಕದ ಉಪಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅವರು ಮುಂಬರುವ ಅಸ್ಸಾಂ ವಿಧಾನಸಭಾ ಚುನಾವಣೆಯ ಯೋಜನೆಗಾಗಿ ಶುಕ್ರವಾರ ರಾಷ್ಟ್ರ ರಾಜಧಾನಿಯಲ್ಲಿದ್ದು, ಕೆಲವು ಹಿರಿಯ ನಾಯಕರನ್ನು ಭೇಟಿ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.ಛತ್ತೀಸ್ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಅವರೊಂದಿಗೆ ಅಸ್ಸಾಂ ವಿಧಾನಸಭಾ ಚುನಾವಣೆಯ ಹಿರಿಯ ವೀಕ್ಷಕರಾಗಿರುವ ಶಿವಕುಮಾರ್, ರಾಷ್ಟ್ರ ರಾಜಧಾನಿಗೆ ಭೇಟಿ ನೀಡುವ ಸಮಯದಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಬಹುದು.
ಬೆಂಗಳೂರು: ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದಲ್ಲಿ ನಡೆದ ಬಾಲಕ ಸುಮಂತ್ (15) ನಿಗೂಢ ಸಾವಿನ ಪ್ರಕರಣ ಇದೀಗ ಹೊಸ ತಿರುವು ಪಡೆದಿದೆ. ಇದೀಗ ಪ್ರಕರಣದ ತನಿಖೆಯಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಇದೊಂದು ಕೊಲೆ ಎಂದುಅನುಮಾನಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.ಇತ್ತೀಚೆಗೆ ಕೆರೆಯಲ್ಲಿ ಸಿಕ್ಕಿದ ಕತ್ತಿ ಮತ್ತು ಟಾರ್ಚ್ ಲೈಟ್ ತನಿಖೆಗೆ ತಿರುವು ನೀಡಿದೆ, ಹಾಗೂ ಈ ಪ್ರಕರಣದ ತನಿಖೆಗೆ ಡಿವೈಎಸ್ಪಿ ನೇತೃತ್ವದಲ್ಲಿ ತಂಡ ರಚಿಸಲಾಗಿದೆ. ಏನಿದು ಪ್ರಕರಣ: ಓಡಿಲ್ನಾಳ ಗ್ರಾಮದ ಸಂಬೋಳ್ಯದ ಸುಮಂತ್ ಎಂಬ ಬಾಲಕನ ಶವ ಕೆರೆಯಲ್ಲಿ ಪತ್ತೆಯಾಗಿದೆ. ಇದೀಗ
ದಾವಣಗೆರೆ: ಬಿಜೆಪಿಗೆ ಮರಳುವಂತೆ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ ಎನ್ನುವ ಮೂಲಕ ಬಿಜೆಪಿಗೆ ಮರಳುವ ಕುರಿತು ಎಂದು ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಕೆ.ಎಸ್ ಈಶ್ವರಪ್ಪ ಅವರು ಮನಬಿಚ್ಚಿ ಮಾತನಾಡಿದ್ದಾರೆ.ದಾವಣಗೆರೆಯ ಹರಿಹರದ ಪಂಚಮಸಾಲಿ ಪೀಠದಲ್ಲಿ ಪ್ರತಿಕ್ರಿಯಿಸಿದ ಅವರು, ಬಿಜೆಪಿಗೆ ಮರಳುವಂತೆ ಕಾರ್ಯಕರ್ತರಿಂದ ಒತ್ತಡ ಬರುತ್ತಿದ್ದು, ಪಕ್ಷದಲ್ಲಿ ಬದಲಾವಣೆ ಸಲುವಾಗಿ ನಾನು ಹೊರ ಬಂದಿರುವುದು. ಆ ಪರಿವರ್ತನೆ ಇವತ್ತಲ್ಲ ನಾಳೆ ಆಗುತ್ತೆ. ಬಿಜೆಪಿ ಕಾರ್ಯಕರ್ತರು ಪಕ್ಷದಲ್ಲಿ ಸಾಕಷ್ಟು ನೋವು ಅನುಭವಿಸುತ್ತಿದ್ದಾರೆ. ನನ್ನ ಮನಸ್ಸಲ್ಲೂ, ಯತ್ನಾಳ್ ಮನಸ್ಸಲ್ಲೂ ಇದೆ ವಿಚಾರ ಇದೆ ಎಂದು ಹೇಳಿದರು.
ಬೆಂಗಳೂರು: ನಾವು ಸಂಸ್ಕೃತಿಯನ್ನು ಬಿಜೆಪಿ ಕಲಿಯಬೇಕಾ, ಅವರೆಲ್ಲ ಸರ್ವಧರ್ಮ ಗ್ರಂಥಗಳ ಹೆಸರಿನಲ್ಲಿ ರಾಜಕೀಯ ಮಾಡುವ ಇವರಿಗೆ ಸಂಸ್ಕೃತಿ ಇಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು.ಈ ಪ್ರಕರಣದ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು ರಾಜೀವ್ ಗೌಡ ಆಗಲಿ, ಯಾರೇ ಆಗಲಿ ಕಾನೂನಿಗಿಂತ ದೊಡ್ಡವರಲ್ಲ. ಆದರೆ ಅವರು ಮಾತನಾಡಿರೋದು ಸರಿಯಲ್ಲ. ಅದನ್ನು ಸಮರ್ಥನೆ ಮಾಡಿಕೊಳ್ಳುವುದು ಕೂಡ ತಪ್ಪು ಆಗುತ್ತೆ ಯಾರಿಗೂ ಕೂಡ ಕಾನೂನು ಮತ್ತು ಸಂವಿಧಾನದಲ್ಲಿ ಬೇರೆ ಅವರನ್ನ ನಿಂದಿಸುವ ಮತ್ತು ಅವಾಚ್ಯ ಶಬ್ಧದಲ್ಲಿ ಮಾತನಾಡುವ ಹಕ್ಕು ಯಾರಿಗೂ ಇಲ್ಲ. ಏನೇ ಆಗಿರಲಿ ಅಧ್ಯಕ್ಷರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.
ಬೆಂಗಳೂರು: ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿ ಪ್ರಸ್ತುತ ಕೇಂದ್ರದಲ್ಲಿ ಸಚಿವರಾಗಿರುವ ಎಚ್.ಡಿ. ಕುಮಾರಸ್ವಾಮಿ ಅವರು ಮತ್ತೆ ರಾಜ್ಯ ರಾಜಕಾರಣ ಬರುವ ಕುರಿತು ಮಹತ್ವದ ಘೋಷಣೆ ಮಾಡಿದ್ದಾರೆ. ಮಕರ ಸಂಕ್ರಾಂತಿ ಹಬ್ಬದ ದಿನವೇ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಶೀಘ್ರದಲ್ಲೇ ರಾಜ್ಯ ರಾಜಕೀಯಕ್ಕೆ ನಾನು ಬರುತ್ತೇನೆ ಎಂದು ಹೇಳಿದ್ದಾರೆ.ಕೇಂದ್ರದಲ್ಲಿ ಪ್ರಧಾನಿಗಳು ಹುದ್ದೆ ಕೊಟ್ಟಿದ್ದಾರೆ. ಆ ಎರಡು ಇಲಾಖೆಯಲ್ಲಿ ಪ್ರಾಮಾಣಿಕವಾಗಿ ಉತ್ತಮ ಕೆಲಸ ಮಾಡೋಕೆ ಈಗಾಗಲೇ ಅಡಿಗಲ್ಲು ಹಾಕಿದ್ದೇನೆ. ರಾಜ್ಯ ರಾಜಕೀಯಕ್ಕೆ ಯಾವ ಸಮಯದಲ್ಲಿ ಬರಬೇಕು ಅಂತ ತೀರ್ಮಾನ ಮಾಡ್ತೀನಿ. ರಾಜ್ಯ ರಾಜಕೀಯಕ್ಕೆ ಬರಲೇಬೇಕಾಗುತ್ತದೆ. ಯಾವಾಗ ಅಂತ ತೀರ್ಮಾನ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
ನವದೆಹಲಿ: ಉತ್ತರ ದೆಹಲಿಯಲ್ಲಿ ನಡೆದ ಗುಂಡಿನ ಚಕಮಕಿಯ ನಂತರ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ಗೆ ಸಂಬಂಧಿಸಿದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಮೂಲಗಳು ಗುರುವಾರ ತಿಳಿಸಿವೆ.ಗುಂಡಿನ ಚಕಮಕಿಯ ಸಮಯದಲ್ಲಿ, ಶಾರ್ಪ್ಶೂಟರ್ಗಳಲ್ಲಿ ಒಬ್ಬನ ಕಾಲಿಗೆ ಗುಂಡು ತಗುಲಿದೆ ಎಂದು ಅವರು ಹೇಳಿದರು.ದೆಹಲಿಯ ಹೊರವಲಯದ ಜಿಮ್ನಲ್ಲಿ ಈಚೆಗೆ ನಡೆದ ಗುಂಡಿನ ದಾಳಿ ಘಟನೆಗಳಲ್ಲಿ ಮತ್ತು ಪೂರ್ವ ದೆಹಲಿಯ ವಿನೋದ್ ನಗರದಲ್ಲಿ ಉದ್ಯಮಿಯೊಬ್ಬರ ಮೇಲೆ ನಡೆದ ದಾಳಿಯಲ್ಲಿ ಈ ಇಬ್ಬರು ವ್ಯಕ್ತಿಗಳು ಭಾಗಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ, ಅಲ್ಲಿ ಹಣ ವಸೂಲಿ ಮಾಡಲು ಗುಂಡು ಹಾರಿಸಲಾಗಿತ್ತು.