Shorts

ಪಾಕ್‌ನಲ್ಲಿ ಪ್ರದರ್ಶನಗೊಳ್ಳದ ನಟ ರಣವೀರ್ ಸಿಂಗ್ ಅಭಿನಯದ ಸೂಪರ್ ಹಿಟ್ ಸಿನಿಮಾ ಧುರಂದರ್ ಸಿನಿಮಾ ನೆಟ್‌ಫ್ಲಿಕ್ಸ್‌ನಲ್ಲಿ ಅಗ್ರಸ್ಥಾನ ಪಡೆದುಕೊಂಡಿದೆ.ರಣವೀರ್ ಸಿಂಗ್, ಅಕ್ಷಯ್‌ ಖನ್ನಾ, ಸಂಜಯ್ ದತ್‌, ಸಾರಾ ಅರ್ಜುನ್‌ ನಟನೆಯ ಈ ಸಿನಿಮಾ 2025ರ ಡಿಸೆಂಬರ್ 25ರಂದು ಭಾರತ ಸೇರಿ ಜಗತ್ತಿನಾದ್ಯಂತ ಬಿಡುಗಡೆಯಾಗಿತ್ತು. ಆದರೆ ಈ ಸಿನಿಮಾಗೆ ಪಾಕಿಸ್ತಾನ ಸೇರಿದಂತೆ ಗಲ್ಫ್‌ ರಾಷ್ಟ್ರಗಳಲ್ಲಿ ಬಿಡುಗಡೆಗೊಂಡಿರಲಿಲ್ಲ. ಇದೀಗ ಒಟಿಟಿಗೆ ಬಿಡುಗಡೆಯಾದ ಸಿನಿಮಾಗೆ ಭಾರೀ ವೀಕ್ಷಣೆ ಕಂಡಿದೆ. ಜನವರಿ 30ರಂದು ನೆಟ್‌ಫ್ಲಿಕ್ಸ್‌ನಲ್ಲಿ ತೆರೆಕಂಡ ಧುರಂಧರ್‌ ನೋಡಿ ಪಾಕ್‌ ಸಿನಿ ಪ್ರಿಯರು ಮೆಚ್ಚಿಕೊಂಡಿದ್ದಾರೆ.ಈ ಚಿತ್ರವನ್ನು ವೀಕ್ಷಿಸಿದ ಪಾಕ್‌ ಪ್ರೇಕ್ಷಕರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ರೆಡ್ಡಿಟ್

ಬೆಂಗಳೂರು: ಸಿದ್ಧಾಪುರದಲ್ಲಿ ನಡೆದ ಕೊಲೆ ಪ್ರಕರಣ ಸಂಬಂಧ ಬಂಧಿಯಾಗಿರುವ ಜ್ಯೋತಿಷಿ ಕಮಲಾಕರ್ ಭಟ್‌ನನ್ನು ಬಿಜೆಪಿ ಶಾಸಕ ಸುರೇಶ್‌ ಕುಮಾರ್‌ ಪ್ರೋತ್ಸಾಹಿಸಿ ಬೆಳೆಸಿದ್ದು, ಇದರಲ್ಲಿ ಅವರ ಪಾತ್ರವು ಮುಖ್ಯವಾಗುತ್ತದೆಂಬ ಕೈ ನಾಯಕ ಬಿಕೆ ಹರಿಪ್ರಸಾದ್ ಆರೋಪಕ್ಕೆ ಬಿಜೆಪಿ ಮುಖಂಡ ಎಸ್. ಸುರೇಶ್ ಕುಮಾರ್ ಅವರು, ಫೇಸ್ಬುಕ್ ಪೋಸ್ಟ್ ಮೂಲಕ ತೀಕ್ಷ್ಣ ಪ್ರತಿಕ್ರಿಯಿಸಿದ್ದಾರೆ. ಬಿ.ಕೆ. ಹರಿಪ್ರಸಾದ್ ಅವರೇ, ನಿಮ್ಮ ಫೇಸ್ಬುಕ್ ಬರಹವನ್ನು ಗಮನಿಸಿದೆ. ಕಾರವಾರದ ಸಿದ್ದಾಪುರದಲ್ಲಿ ನಡೆದ ಹೇಯ ಕೃತ್ಯವೊಂದನ್ನು ಮುಂದಿಟ್ಟುಕೊಂಡು, ಅದಕ್ಕೆ ರಾಜಕೀಯ ಬಣ್ಣ ಬಳಿದು, ನನ್ನ ಹೆಸರನ್ನು ತಳುಕು ಹಾಕಲು ನೀವು ನಡೆಸಿರುವ ಪ್ರಯತ್ನ ನಿಮ್ಮ "ಬೌದ್ಧಿಕ ದಿವಾಳಿತನ"ವನ್ನು ಎತ್ತಿ ತೋರಿಸುವಂತಿದೆ ಎಂದು ಕಿಡಿಕಾರಿದ್ದಾರೆ.

ಬಹುತೇಕ ಹೆಚ್ಚಿನ ರೋಗಗಳನ್ನು ವೈದ್ಯರು ಮೂತ್ರ ಪರೀಕ್ಷೆ ಮೂಲಕ ತಿಳಿದುಕೊಳ್ಳುತ್ತಾರೆ. ನಿಮ್ಮ ಮೂತ್ರದ ಬಣ್ಣದಿಂದಲೂ ನಿಮ್ಮ ಆರೋಗ್ಯ ಹೇಗಿದೆ ಎಂದು ತಿಳಿದುಕೊಳ್ಳಬಹುದು ಗೊತ್ತಾ? ಮೂತ್ರದ ಬಣ್ಣದಲ್ಲಿ ಆಗುವ ಬದಲಾವಣೆಗಳು ನಿಮ್ಮ ಆರೋಗ್ಯ ಸರಿಯಾಗಿದೆಯಾ, ಏನಾದರೂ ಸಮಸ್ಯೆಯಾಗಿದೆಯಾ ಎಂದು ಸೂಚಿಸುತ್ತದೆ. ಯಾವ ಬಣ್ಣದಲ್ಲಿ ಮೂತ್ರವಿದ್ದರೆ ಏನು ಅರ್ಥ ಇಲ್ಲಿದೆ ನೋಡಿ ವಿವರ. ಬಣ್ಣದಲ್ಲಿ ವ್ಯತ್ಯಾಸ, ಉರಿ ಇನ್ನಿತರ ಲಕ್ಷಣ ಕಂಡುಬಂದರೆ ತಕ್ಷಣವೇ ತಜ್ಞ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆದುಕೊಳ್ಳುವುದು ಉತ್ತಮ. ತೆಳು ಹಳದಿ ಬಣ್ಣ: ನಿಮ್ಮ ದೇಹದಲ್ಲಿ ಸಾಕಷ್ಟು ನೀರಿನಂಶವಿದ್ದು ಆರೋಗ್ಯವಾಗಿದ್ದೀರಿ ಎಂದರ್ಥ.ತೆಳು ಕಿತ್ತಳೆ ಬಣ್ಣ: ನಿಮ್ಮ ದೇಹ ಸ್ವಲ್ಪ ಮಟ್ಟಿಗೆ ನಿರ್ಜಲೀಕರಣಕ್ಕೊಳಗಾಗಿದೆ, ಮತ್ತಷ್ಟು ನೀರು ಕುಡಿಯಬೇಕು ಎಂದರ್ಥ.

ಬೆಂಗಳೂರು: ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿರುವ ಕಾಂಗ್ರೆಸ್ ಸರಕಾರದ ಮುಖ್ಯಮಂತ್ರಿಗಳು ಅಬಕಾರಿ ವಿಚಾರದಲ್ಲಿ ಗಟ್ಟಿಯಾದ ನಿರ್ಧಾರವನ್ನು ತೆಗೆದುಕೊಳ್ಳಬೇಕೆಂಬುದು ಬಿಜೆಪಿ ಮತ್ತು ಜೆಡಿಎಸ್ ನಿಲುವು. ಅಬಕಾರಿ ಸಚಿವರ ರಾಜೀನಾಮೆ ಪಡೆದು ಆಮೇಲೆ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಒತ್ತಾಯಿಸಿದ್ದಾರೆ.ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸರಕಾರದ ಬ್ರಹ್ಮಾಂಡ ಭ್ರಷ್ಟಾಚಾರವು ಇವತ್ತು ಅಬಕಾರಿ ಇಲಾಖೆಗೂ ಬಂದು ತಲುಪಿದೆ. ರಾಜ್ಯ ಸರಕಾರವು ಒಂದು ಕಡೆ ತನ್ನ ಗ್ಯಾರಂಟಿಗಳಿಗೆ ಹಣ ಕ್ರೋಡೀಕರಿಸಲು ಸಾಧ್ಯವಾಗದೇ ಅಬಕಾರಿ ಇಲಾಖೆಯಲ್ಲಿ ಟಾರ್ಗೆಟ್ ಹೆಚ್ಚಿಸಿ ಕರ್ನಾಟಕವನ್ನು ಕುಡುಕರ ರಾಜ್ಯವಾಗಿ ಮಾಡುತ್ತಿದೆ. ಮನಸೋಇಚ್ಛೆ ಲಿಕ್ಕರ್ ಲೈಸನ್ಸ್‍ಗಳನ್ನು ನೀಡಲಾಗುತ್ತಿದೆ ಎಂದು ಆಕ್ಷೇಪಿಸಿದರು.

ಚೆನ್ನೈನ ಬೀದಿಯಲ್ಲಿ ಸಿಕ್ಕಿದ ₹45 ಲಕ್ಷದ ಚಿನ್ನವಿದ್ದ ಚೀಲವನ್ನು ಪೊಲೀಸರಿಗೆ ನೀಡಿ ಪ್ರಾಮಾಣಿಕತೆ ಮೆರೆದ ಪೌರ ಕಾರ್ಮಿಕ ಮಹಿಳೆ ಪದ್ಮಾಗೆ ಸೂಪರ್ ಸ್ಟಾರ್‌ ರಜನಿಕಾಂತ್‌ ಚಿನ್ನದ ಸರ ಉಡುಗೊರೆ ಗೌರವಿಸಿದ್ದಾರೆ. ಇದಕ್ಕೂ ಮೊದಲು, ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಪದ್ಮಾ ಅವರನ್ನು ಸನ್ಮಾನಿಸಿದ್ದರು.ರಜನಿಕಾಂತ್ ಮಂಗಳವಾರ ಚೆನ್ನೈನ ಅವರ ನಿವಾಸದಲ್ಲಿ ನೈರ್ಮಲ್ಯ ಕಾರ್ಯಕರ್ತೆ ಪದ್ಮಾ ಅವರನ್ನು ಭೇಟಿಯಾಗಿ ಅವರ ಪ್ರಾಮಾಣಿಕತೆಯನ್ನು ಶ್ಲಾಘಿಸಿದರು. ಟಿ ನಗರದಲ್ಲಿ ಕೆಲಸ ಮಾಡುವ ಪದ್ಮಾ ಅವರು ತಮ್ಮ ಪಾಳಿಯಲ್ಲಿ ಚಿನ್ನದ ಆಭರಣಗಳನ್ನು ಹೊಂದಿದ್ದ ಒಂದು ಹಕ್ಕುದಾರರಿಲ್ಲದ ಚೀಲವನ್ನು ಕಂಡುಕೊಂಡಿದ್ದರು. ಅವರು ತಕ್ಷಣ ತಮ್ಮ ಮೇಲ್ವಿಚಾರಕರಿಗೆ ಮಾಹಿತಿ ನೀಡಿ ಚೀಲವನ್ನು ಪಾಂಡಿ ಬಜಾರ್ ಪೊಲೀಸ್ ಠಾಣೆಗೆ ಹಸ್ತಾಂತರಿಸಿದರು. ನಂತರ, ಆಭರಣಗಳನ್ನು ಅದರ ನಿಜವಾದ

ಪುತ್ತೂರು: ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ನೆಲ್ಲಿಕಟ್ಟೆಯ ಖಾಸಗಿ ಬಸ್ ನಿಲ್ದಾಣದ ಬಳಿ 1 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ರಾಜ್ಯದ ಮೂರನೇ ಅತಿ ಎತ್ತರದ ರಾಷ್ಟ್ರೀಯ ಧ್ವಜಸ್ತಂಭದಲ್ಲಿ ಫೆಬ್ರವರಿ 1 ರ ಭಾನುವಾರ ಸಂಜೆ ತ್ರಿವರ್ಣ ಧ್ವಜವನ್ನು ಸ್ವಲ್ಪ ಸಮಯದವರೆಗೆ ಪ್ರಾಯೋಗಿಕವಾಗಿ ಹಾರಿಸಲಾಯಿತು.80 ಮೀಟರ್ ಎತ್ತರದ ಬೃಹತ್ ರಾಷ್ಟ್ರೀಯ ಧ್ವಜಸ್ತಂಭದ ಸ್ಥಾಪನೆಯು ಭಾನುವಾರ ಬೆಳಿಗ್ಗೆ ಪ್ರಾರಂಭವಾಯಿತು. ದೊಡ್ಡ ಕ್ರೇನ್ ಬಳಸಿ ಧ್ವಜಸ್ತಂಭವನ್ನು ಸ್ಥಾಪಿಸಲಾಯಿತು, ಮತ್ತು ಸಂಜೆಯ ಹೊತ್ತಿಗೆ, ರಾಷ್ಟ್ರೀಯ ತ್ರಿವರ್ಣ ಧ್ವಜವನ್ನು ಪ್ರಾಯೋಗಿಕವಾಗಿ ಸಂಕ್ಷಿಪ್ತವಾಗಿ ಹಾರಿಸಲಾಯಿತು ಮತ್ತು ನಂತರ ಕೆಳಗಿಳಿಸಲಾಯಿತು. ಶಾಸಕ ಅಶೋಕ್ ಕುಮಾರ್ ರೈ ಮತ್ತು ಇತರರು ಸ್ಥಾಪನೆಯ ಸಮಯದಲ್ಲಿ ಹಾಜರಿದ್ದರು. ನೂರಾರು ಜನರು ಸ್ಥಳದಲ್ಲಿ ಜಮಾಯಿಸಿ ತೀವ್ರ ಆಸಕ್ತಿಯಿಂದ ವೀಕ್ಷಿಸಿದರು.