Webdunia - Bharat's app for daily news and videos

Install App

ದ್ರಾವಿಡ್ ಕಪ್ತಾನ ಎಂದು ಇನ್ನೂ ನಿರ್ಧರಿಸಿಲ್ಲ: ಮಲ್ಯ

Webdunia
ಸೋಮವಾರ, 12 ಜನವರಿ 2009 (12:04 IST)
ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡಕ್ಕೆ ರಾಹುಲ್ ದ್ರಾವಿಡ್ ಕಪ್ತಾನ ಎಂಬುದನ್ನು ಇನ್ನೂ ನಿರ್ಧರಿಸಿಲ್ಲ ಎಂದು ಇಂಡಿಯನ್ ಪ್ರೀಮಿಯರ್ ಲೀಗ್‌ನ ಫ್ರಾಂಚೈಸಿಯ ಮಾಲಕ ವಿಜಯ್ ಮಲ್ಯ ಸ್ಪಷ್ಟಪಡಿಸಿದ್ದಾರೆ.

ಕಪ್ತಾನನಾಗಿ ರಾಹುಲ್ ದ್ರಾವಿಡ್‌ರನ್ನೇ ಮುಂದುವರಿಸುತ್ತೀರಾ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ, "ಹಾಗಂತ ಯಾರು ಹೇಳಿದರು? ಅಷ್ಟಕ್ಕೂ ತಂಡದ ಮಾಲಕ ನಾನು. ಯಾರು ನಾಯಕನಾಗಬೇಕೆಂದು ನಾನು ನಿರ್ಧರಿಸಬೇಕು" ಎಂದುತ್ತರಿಸಿ ಬಾಯ್ಮುಚ್ಚಿಸಿದ್ದರು.

ರಾಹುಲ್ ದ್ರಾವಿಡ್‌ರನ್ನೇ ಈ ಅವಧಿಯಲ್ಲೂ ಕಪ್ತಾನನಾಗಿ ಮುಂದುವರಿಸಲು ಮಲ್ಯ ನಿರ್ಧರಿಸಿದ್ದಾರೆ ಎಂಬ ವರದಿಗಳನ್ನು ತಳ್ಳಿ ಹಾಕಿದ ಅವರು, "ಅಂತಿಮ ನಿರ್ಧಾರಕ್ಕೆ ಮೊದಲು ದ್ರಾವಿಡ್ ಜತೆ ಸಮಾಲೋಚನೆ ನಡೆಸುತ್ತೇನೆ. ಅವರು ಅನುಭವಿ, ವಿದ್ಯಾವಂತ ಮತ್ತು ಚಾಣಾಕ್ಷರಾಗಿರುವುದರಿಂದ ಹೆಚ್ಚಿನ ಚರ್ಚೆಗಳ ಅಗತ್ಯವಿಲ್ಲ" ಎಂದು ತಿಳಿಸಿದರು.

" ತಂಡದಲ್ಲಿ ಹೆಚ್ಚಿನ ಬದಲಾವಣೆಗಳನ್ನು ನೀವು ನಿರೀಕ್ಷಿಸಿದರೆ ತಪ್ಪಾದೀತು. ಆದರೆ ಅಗತ್ಯಕ್ಕೆ ತಕ್ಕಂತೆ ಕ್ರಮ ಕೈಗೊಳ್ಳುತ್ತೇನೆ. ಈ ಹಿಂದಿಗಿಂತ ಪ್ರಬಲ ತಂಡವನ್ನಾಗಿಸುವುದೇ ನನ್ನ ಉದ್ದೇಶ" ಎಂದು ತಂಡದ ಸದಸ್ಯರ ಬದಲಾವಣೆ ಬಗೆಗಿದ್ದ ಊಹಾಪೋಹಗಳಿಗೆ ಗೋಡೆ ಮೇಲೆ ದೀಪವಿಟ್ಟಂತೆ ಉತ್ತರಿಸಿ ಮಲ್ಯ ತನ್ನ ಪಾಡಿಗೆ ಹೊರಟು ಹೋದರು.
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments