Webdunia - Bharat's app for daily news and videos

Install App

ಮಧ್ಯಮ ಕ್ರಮಾಂಕ ಜವಾಬ್ದಾರಿ ಅರಿತು ಆಡಬೇಕು: ಧೋನಿ

Webdunia
ಶನಿವಾರ, 22 ಜನವರಿ 2011 (12:03 IST)
ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ನಾಲ್ಕನೇ ಏಕದಿನದಲ್ಲಿ ಎದುರಾದ ಸೋಲಿನ ನಂತರ ಪ್ರತಿಕ್ರಿಯಿಸಿರುವ ಭಾರತ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ, ಮಧ್ಯಮ ಕ್ರಮಾಂಕ ಹೆಚ್ಚು ಜವಾಬ್ದಾರಿಯುತವಾಗಿ ಆಡಬೇಕು ಎಂದು ಸಹ ಆಟಗಾರರಿಗೆ ಸಲಹೆ ಮಾಡಿದ್ದಾರೆ.

ಮಳೆ ಬಾಧಿತ ನಾಲ್ಕನೇ ಏಕದಿನವನ್ನು ಡಕ್ವರ್ತ್ ನಿಯಮದಡಿ 48 ರನ್ನುಗಳಿಂದ ಗೆದ್ದುಕೊಂಡಿದ್ದ ಹರಿಣಗಳು ಐದು ಪಂದ್ಯಗಳ ಏಕದಿನ ಸರಣಿಯನ್ನು 2-2ರಲ್ಲಿ ಸಮಬಲಗೊಳಿಸಿತ್ತು. ಇದರಿಂದಾಗಿ ಕಾಮನಬಿಲ್ಲಿನ ನಾಡಿನಲ್ಲಿ ಐತಿಹಾಸಿಕ ಏಕದಿನ ಸರಣಿ ದಾಖಲಿಸುವ ಭಾರತದ ಕನಸಿಗೆ ಹಿನ್ನೆಡೆಯುಂಟಾಗಿತ್ತು. ಹೀಗಿದ್ದರೂ ಕೊನೆಯ ಪಂದ್ಯವನ್ನು ಗೆಲ್ಲುವ ಮೂಲಕ ಸ್ಮರಣೀಯ ಸರಣಿ ವಶಪಡಿಸಿಕೊಳ್ಳುವ ಮತ್ತೊಂದು ಅವಕಾಶವಿದೆ.

ವಿರಾಟ್ ಕೊಹ್ಲಿ ಹೊರತಾಗಿ ಇತರೆಲ್ಲ ಬ್ಯಾಟ್ಸ್‌ಮನ್‌ಗಳು ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿದರು. ನಮ್ಮ ಪಾಲಿಗೆ ಕೊಹ್ಲಿ ಪಾಸಿಟಿಂವ್ ಅಂಶ. ಮೂರನೇ ಕ್ರಮಾಂಕದಲ್ಲಿ ಅತ್ಯುತ್ತಮ ಆಟವಾಡಿದ ಕೊಹ್ಲಿ ತಂಡವನ್ನು ಮುನ್ನಡೆಸಿದರು. ಆದರೆ ಇತರ ಬ್ಯಾಟ್ಸ್‌ಮನ್‌ಗಳು ನೆರವಾಗಬೇಕಾಗಿದೆ. ಆದರೆ ನಮ್ಮ ಮಧ್ಯಮ ಕ್ರಮಾಂಕ ಕ್ಲಿಕ್ ಆಗಲೇ ಇಲ್ಲ ಎಂದವರು ಸೇರಿಸಿದರು.

ನಾವು ಶ್ರೇಷ್ಠ ಪ್ರಯತ್ನ ಮಾಡಿದ್ದೇವೆ. ಆದರೆ ಪ್ರತಿ ಬಾರಿಯೂ ಎಲ್ಲವೂ ನಿಮ್ಮ ಪರವಾಗಿರುವುದಿಲ್ಲ ಎಂದವರು ಹೇಳಿದರು. ಒಂದು ಹಂತದಲ್ಲಿ 118 ರನ್ನುಗಳಿಗೆ ಐದು ವಿಕೆಟ್ ಕಳೆದುಕೊಂಡಿದ್ದ ದಕ್ಷಿಣ ಆಫ್ರಿಕಾಕ್ಕೆ ಜೆ.ಪಿ. ಡ್ಯುಮಿನಿ ನೆರವಾಗಿದ್ದರು.

ಅದೇ ಹೊತ್ತಿಗೆ ನಿರ್ಣಾಯಕ ಐದನೇ ಏಕದಿನದಲ್ಲಿ ಅತಿಯಾದ ಒತ್ತಡವನ್ನು ನಿಭಾಯಿಸಲು ಯಶ್ವಸಿಯಾಗುವ ತಂಡಕ್ಕೆ ಸರಣಿ ವಶಪಡಿಸಿಕೊಳ್ಳುವ ಅವಕಾಶ ಹೆಚ್ಚಿದೆ ಎಂದರು.

ಕ್ಷಣ ಕ್ಷಣದ ತಾಜಾ ಸುದ್ದಿಗಳಿಗೆ, ವಿಶೇಷ ಸುದ್ದಿಗಳಿಗೆ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments