Webdunia - Bharat's app for daily news and videos

Install App

ವಿಶ್ವಕಪ್‌ ಗೆಲ್ಲಲು ಅಸಾಧಾರಣ ಸ್ಫೂರ್ತಿ, ಫಾರ್ಮ್ ಅಗತ್ಯ: ಗೌತಿ

Webdunia
ಶುಕ್ರವಾರ, 28 ಜನವರಿ 2011 (11:16 IST)
ಇತ್ತೀಚೆಗಷ್ಟೇ ದಕ್ಷಿಣ ಆಫ್ರಿಕಾ ಸರಣಿಯಲ್ಲಿ ತೋರಿರುವ ಅಸಾಮಾನ್ಯ ಉತ್ಸಾಹ ಹಾಗೂ ಫಾರ್ಮ್ ಇದ್ದಲ್ಲಿ ಮಾತ್ರ ತವರಿನಲ್ಲಿ ನಡೆಯಲಿರುವ ಮುಂಬರುವ ಪ್ರತಿಷ್ಠಿತ ವಿಶ್ವಕಪ್ ಗೆಲ್ಲಲು ಸಾಧ್ಯ ಎಂದು ಭಾರತದ ಎಡಗೈ ಆರಂಭಿಕ ಬ್ಯಾಟ್ಸ್‌ಮನ್ ಗೌತಮ್ ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.

ದಕ್ಷಿಣ ಆಫ್ರಿಕಾದಂತಹ ಕಠಿಣ ಪರಿಸ್ಥಿತಿಯಲ್ಲಿಯೂ ಭಾರತ ಉತ್ತಮ ನಿರ್ವಹಣೆ ನೀಡಿತ್ತು. ಈ ವರೆಗೆ ನಾವು ಹರಿಣಗಳ ನಾಡಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿರಲಿಲ್ಲ. ಆದರೆ ಇದೇ ಮೊದಲ ಬಾರಿಗೆ ಪರಿಣಾಮಕಾರಿ ಆಟವಾಡಲು ಯಶಸ್ವಿಯಾಗಿದ್ದೆವು ಎಂದರು.

ಅಲ್ಲಿ ನಡೆದ ಟೆಸ್ಟ್ ಹಾಗೂ ಏಕದಿನದಲ್ಲಿ ಉತ್ತಮ ಪ್ರದರ್ಶನ ನೀಡಿದ್ದೇವೆ. ಟೆಸ್ಟ್ ಸರಣಿ ಸಮಬಲ ಮಾಡಲು ಯಶಸ್ವಿಯಾಗಿದ್ದೆವು. ಏಕದಿನ ಸರಣಿ ಗೆಲ್ಲಲಾಗದ ಹೊರತಾಗಿಯೂ ಪ್ರಬಲ ಪೈಪೋಟಿ ನೀಡಿದ್ದು, ಹಾಗೆಯೇ ಏಕೈಕ ಟ್ವೆಂಟಿ-20 ನಮ್ಮ ಪಾಲಾಗಿತ್ತು ಎಂದರು.

ತಂಡ ಇದೇ ಹುಮ್ಮಸ್ಸು ಹಾಗೂ ಫಾರ್ಮ್‌ ಕಂಡುಕೊಳ್ಳುವಲ್ಲಿ ಯಶಸ್ವಿಯಾದಲ್ಲಿ ವಿಶ್ವಕಪ್ ಖಂಡಿತವಾಗಿಯೂ ಗೆಲ್ಲಲಿದ್ದೆವೆ ಎಂದು ಗಾಯದಿಂದ ಚೇತರಿಕೆ ಪಡೆಯುತ್ತಿರುವ ಗೌತಿ ಆತ್ಮವಿಶ್ವಾಸ ವ್ಯಕ್ತಪಡಿಸಿದರು.

ನಾನು ಉತ್ತಮ ರೀತಿಯಲ್ಲಿ ಚೇತರಿಕೆ ಪಡೆಯುತ್ತಿದ್ದು, ನಾಲ್ಕು ವರ್ಷಗಳಿಗೊಮ್ಮೆ ನಡೆಯುವ ಈ ಮಹತ್ತರ ಕೂಟದ ಬಗ್ಗೆ ಅತೀವ ಉತ್ಸುಕಗೊಂಡಿದ್ದೇನೆ ಎಂದರು.

ಕ್ಷಣ ಕ್ಷಣದ ತಾಜಾ ಸುದ್ದಿಗಳಿಗೆ, ವಿಶೇಷ ಸುದ್ದಿಗಳಿಗೆ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments